Author: admin

ಕ್ಯೂಬಾದ ರಾಜಧಾನಿ ಹವಾನಾದ ಹೃದಯಭಾಗ ಸರಟೋಗಾದ ಐಷಾರಾಮಿ ಹೋಟೆಲ್‍ನಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಸ್ಫೋಟ ದುರಂತದಲ್ಲಿ ಗರ್ಭಿಣಿ ಮಹಿಳೆ ಮತ್ತು ಮಗು ಸೇರಿದಂತೆ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ನವೀಕರಣಗೊಳ್ಳುತ್ತಿದ್ದ ಹವಾನಾದ 96 ಕೊಠಡಿಗಳ ಹೋಟೆಲ್ ಯಾವುದೇ ಪ್ರವಾಸಿಗರು ಇರಲಿಲ್ಲ ಎಂದು ಹವಾನಾ ಗವರ್ನರ್ ರೆನಾಲ್ಡೊ ಗಾರ್ಸಿಯಾ ಜಪಾಟಾ ತಿಳಿಸಿದರು.ಹೋಟೆಲ್‍ನ ಕೆಲ ಗೋಡೆ ಕುಸಿದಿದ್ದು ಅದರಡಿ ಸಿಲುಕಿ ಕೆಲವರು ಸಾವನ್ನಪ್ಪಿದ್ದಾರೆ. ಭಾರಿ ಶಬ್ಧ ಉಂಟಾದ ಕಾರಣ ಜನರು ಆತಂಕಗೊಂಡರು ಕೆಲವೇ ಕ್ಷಣದಲ್ಲಿ ಇದು ಬಾಂಬ್ ಅಥವಾ ಉಗ್ರದಾಳಿಯಲ್ಲ. ಇದು ದುರಂತ ಅಪಘಾತ ಎಂದು ಸ್ಥಳಕ್ಕೆ ಭೇಟಿ ನೀಡಿದ ಅಧ್ಯಕ್ಷ ಮಿಗುಯೆಲ್ ಡಿಯಾಜï-ಕನೆಲ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಹೋಟೆಲ್‍ಗೆ ನೈಸರ್ಗಿಕ ಅನಿಲವನ್ನು ಪೂರೈಸುತ್ತಿದ್ದ ಟ್ರಕ್‍ನಿಂದ ಸ್ಫೋಟ ಸಂಭವಿಸಿದೆ ಎಂದು ಕ್ಯೂಬಾದ ಸ್ಟೇಟ್ ಟಿವಿ ವರದಿ ಮಾಡಿದೆ, ಆದರೆ ಅನಿಲವು ಹೇಗೆ ಹೊತ್ತಿಕೊಂಡಿತು ಎಂಬುದರ ಕುರಿತು ವಿವರಗಳನ್ನು ನೀಡಿಲ್ಲ. ಸ್ಫೋಟ ವು ಹೋಟಲ್‍ನ ಸುತ್ತ ಬಿಂಕಿ ದಟ್ಟ ಹೊಗೆ ಆವರಿಸಿತು…

Read More

ಅಪ್ಲಿಕೇಶನ್ ಇಲ್ಲದೆ ಕರೆ ರೆಕಾರ್ಡಿಂಗ್ ಮಾಡುವುದು ಹೇಗೆ: ತನ್ನ ಬಳಕೆದಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಗೂಗಲ್ ತನ್ನ ನೀತಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಿದೆ. ಈ ಬದಲಾವಣೆಗಳು ಮೇ 11 ರಿಂದ ಜಾರಿಗೆ ಬರಲಿವೆ. ಥರ್ಡ್ ಪಾರ್ಟಿ ಅಪ್ಲಿಕೇಶನ್‌ ಗಳಿಂದ ಕರೆ ರೆಕಾರ್ಡಿಂಗ್ ಅನ್ನು ನಿಲ್ಲಿಸುವುದು ಇದರಲ್ಲಿ ಪ್ರಮುಖವಾಗಿದೆ. ಅಂದರೆ, ಈಗ ನೀವು ಯಾವುದೇ ಥರ್ಡ್ ಪಾರ್ಟಿ ಅಪ್ಲಿಕೇಶನ್‌ನಿಂದ ಕರೆಗಳನ್ನು ರೆಕಾರ್ಡ್ ಮಾಡಲು ಸಾಧ್ಯವಾಗುವುದಿಲ್ಲ ಅಥವಾ ಯಾವುದೇ ಅಪ್ಲಿಕೇಶನ್ ತನ್ನದೇ ಆದ ಕರೆಯನ್ನು ರೆಕಾರ್ಡ್ ಮಾಡಲು ಸಾಧ್ಯವಾಗುವುದಿಲ್ಲ. ಈ ವೈಶಿಷ್ಟ್ಯವು ಆಪಲ್‌ ನಂತೆಯೇ ಇರುತ್ತದೆ. ಆಪಲ್ ತನ್ನ ಫೋನ್‌ನಲ್ಲಿ ಕರೆ ರೆಕಾರ್ಡಿಂಗ್ ಸೌಲಭ್ಯವನ್ನು ಒದಗಿಸುವುದಿಲ್ಲ. ಈಗ ಯಾರಿಗೆ ಕಾಲ್ ರೆಕಾರ್ಡಿಂಗ್ ಅವಶ್ಯವೋ ಅಂತಹವರು ಈಗ ಕಾಲ್ ರೆಕಾರ್ಡಿಂಗ್ ಹೇಗೆ ಮಾಡುತ್ತಾರೆ ಎಂಬ ಪ್ರಶ್ನೆ ನಿಮ್ಮ ಮನದಲ್ಲಿ ಸಹಜವಾಗಿಯೇ ಮೂಡಲಿದೆ. ನಿಮಗೂ ಈ ಪ್ರಶ್ನೆ ಕಾಡುತ್ತಿದ್ದರೆ ಈ ಲೇಖನದಲ್ಲಿ ನಾವು ಉತ್ತರವನ್ನು ನೀಡುತ್ತೇವೆ. ಕರೆ ರೆಕಾರ್ಡ್ ಮಾಡಲು ನಿಮ್ಮ ಆಯ್ಕೆಗಳು ಯಾವುವು ಎಂದು ತಿಳಿಯೋಣ. ಇದು…

Read More

ಬೆಂಗಳೂರು: ಯತ್ನಾಳ್ ಅವರ ಹೇಳಿಕೆಗೆ ನಾನು ಏನೂ ರಿಯಾಕ್ಟ್ ಮಾಡೋದಕ್ಕೆ ಆಗಲ್ಲ, ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ ಅವರು ಸಿಕ್ಕಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಸಿಎಂ ಹುದ್ದೆ ಬೇಕಾದರೆ 2,500 ಕೋಟಿ ರೂಪಾಯಿ ನೀಡಿ ಎಂದು ದೆಹಲಿಯಿಂದ ಬಂದವರು ಬೇಡಿಕೆ ಇಟ್ಟಿದ್ದರು ಎನ್ನುವ ಯತ್ನಾಳ್ ಹೇಳಿಕೆ ಸಂಬಂಧ ಪತ್ರಕರ್ತರ ಪ್ರಶ್ನೆಗಳಿಗೆ ತುಮಕೂರಿನಲ್ಲಿ ಉತ್ತರಿಸಿದ ಗೃಹ ಸಚಿವರು,  ರಾಜಕಾರಣದಲ್ಲಿ ಇಂತಹ ಹೇಳಿಕೆಗಳೆಲ್ಲವೂ ಸಹಜ. ಇಂತಹದ್ದೆಲ್ಲ ರಾಜಕಾರಣದಲ್ಲಿರುತ್ತದೆ ಎಂದು ಅವರು ಹೇಳಿರಬಹುದು. ನಿರ್ದಿಷ್ಟವಾಗಿ ಇದೇ ಪಕ್ಷ ಎಂದು ಅವರು ಹೇಳಿಲ್ಲ ಎಂದರು. ಒಂದು ವೇಳೆ ಪಕ್ಷದ ವಿರುದ್ಧವೇ ಅವರು ಹೇಳಿಕೆ ನೀಡಿದ್ದಾದರೆ, ಪಕ್ಷಕ್ಕೆ ಮುಜುಗರ ಉಂಟಾಗುವ ವಿಚಾರವಾಗುತ್ತದೆ. ಪಕ್ಷದ, ಸಂಘಟನೆಯ ನೇತಾರರು ಅವರನ್ನು ಕರೆದು ಮಾತನಾಡಿಸುತ್ತಾರೆ ಎಂದು ಇದೇ ವೇಳೆ ಅರಗ ಜ್ಞಾನೇಂದ್ರ ಹೇಳಿದರು. ಇನ್ನೂ ಪಿಎಸ್ ಐ ಅಕ್ರಮಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ಸಚಿವರು, ಯಾವುದೋ ಒಂದು ಕೇಂದ್ರದಲ್ಲಿ ಅಕ್ರಮ ನಡೆದಿದ್ದರೆ, ಆ…

Read More

ಮಧುಗಿರಿ: ಸ್ನೇಹಿತರ ಜೊತೆಗೆ ಸಿದ್ದಾಪುರ ಕೆರೆಯಲ್ಲಿ ಈಜಲು ಬಂದಿದ್ದ  ಯುವಕನೋರ್ವ ಕೆರೆಯಲ್ಲಿ ಮುಳುಗಿ ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. ರಂಜಾನ್ ಹಿನ್ನೆಲೆಯಲ್ಲಿ ತುಮಕೂರು  ಗುಬ್ಬಿ ಗೇಟ್ ನಿಂದ ಮಧುಗಿರಿ  ಮಸೀದಿಗೆ ಕುಟುಂಬಸ್ಥರೊಂದಿಗೆ ಆಗಮಿಸಿದ್ದ ಯುವಕ, ಸ್ನೇಹಿತರ ಜೊತೆಗೆ ಕೆರೆಗೆ ಈಜಲು ತೆರಳಿದ್ದು, ಈ ವೇಳೆ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇನ್ನೂ ಘಟನಾ ಸ್ಥಳಕ್ಕೆ ಇನ್ಸ್ ಪೆಕ್ಟರ್ ಸರ್ದಾರ್ ಖಾನ್ ಹಾಗೂ ಅಗ್ನಿಶಾಮಕದಳದ ಇನ್ಸ್ ಪೆಕ್ಡರ್ ಅಣ್ಣಪ್ಪ ಸ್ಥಳಕ್ಕೆ ಆಗಮಿಸಿ ತಂಡ ರಚಿಸಿ ಯುವಕನ ಮೃತದೇಹವನ್ನು ಕೆರೆಯಿಂದ ಮೇಲೆತ್ತುವ ಕಾರ್ಯಾಚರಣೆ ನಡೆಸಿದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯ ನಟ ಮೋಹನ್ ಜುನೇಜ ಅವರು ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮೋಹನ್ ಅವರ ನಿಧನಕ್ಕೆ ಅವರ ಆಪ್ತರು, ಅಭಿಮಾನಿಗಳು ಕಣ್ಣೀರು ಮಿಡಿದಿದ್ದಾರೆ.  ನೂರಾರು ಚಿತ್ರಗಳಲ್ಲಿ ವಿವಿಧ ರೀತಿಯ ಪಾತ್ರ ಮಾಡಿರುವ ಮೋಹನ್ ಅವರು ಹಾಸ್ಯ ಪಾತ್ರದಲ್ಲಿ ಹೆಚ್ಚು ಮಿಂಚಿದ್ದರು. ಕೆಜಿಎಫ್ ಚಿತ್ರದಲ್ಲಿ ಕೂಡ ಪಾತ್ರ ಮಾಡಿದ್ದ ಮೋಹನ್ ಅವರು ಜನರ ಮನಸ್ಸನ್ನು ಗೆದ್ದಿದ್ದರು.  ನಿನ್ನೆ ರಾತ್ರಿ ಮೋಹನ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರನ್ನು ತಕ್ಷಣವೇ ಚಿಕ್ಕಬಾಣಾವರ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ಕುಣಿಗಲ್ ರಸ್ತೆಯ ಸುಲದ ಅನುಮಂತ ರಾಯಿ ದೇವಸ್ಥಾನದ ಸಮೀಪದಲ್ಲಿ ನಡೆದ ಭೀಕರ ಅಪಘಾತದಲ್ಲಿ ಪಾದಚಾರಿ ಹಾಗೂ ಬೈಕ್ ಸವಾರನೊಬ್ಬ ಗಾಯಗೊಂಡಿರುವ ಘಟನೆ ನಡೆದಿದೆ. ಟೆಂಪೋ ಟ್ರಾವೆಲ್ಲರ್  ಈ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು,   ರಸ್ತೆಯಲ್ಲಿ ಯೂಟರ್ನ್ ಮಾಡುತ್ತಿದ್ದ ಟೆಂಪೋ ಟ್ರಾವೆಲ್ಲರ್ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ಇದೇ ವೇಳೆ ಈ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ  ಬೈಕ್ ಸವಾರ ಹಾಗೂ ಪಾದಚಾರಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಸರಗೂರು: ತಾಲೂಕು ಪಂಚಾಯಿತಿ ಯಲ್ಲಿ  ವಿಕಲಚೇತನರಿಗೆ ಸಾಧನಸಲಕರಣೆ ವಿತರಣೆ ಕಾರ್ಯಕ್ರಮದಲ್ಲಿ    ಟೈಲರಿಂಗ್ ಮೇಷನ್, ಸೊಲರ್ ಲೈಟ್, ವೀಲ್ ಚೇರ್  ತ್ರೀವಿಲ್ ಸೈಕಲ್ , ವಾಟರ್ ಬೇಡ್,  MRಕೀಟ್ ನ್ನು ಶಾಸಕರಾದ ಅನಿಲ್ ಚಿಕ್ಕಮಾಧು ಅವರು ಫಲಾನುಭವಿಗಳಿಗೆ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸರಗೂರು ತಾಲೂಕು ಸಂಯೋಜಕರಾದ ಜವರಾಜು ಮಾತನಾಡಿ,   ಶಾಸಕರಿಗೆ ಸ್ವಾಗತ ಕೋರಿ ಶೇಕಡಾ 5ರ ಅನುದಾನದಲ್ಲಿ ತಾಲೂಕು ಪಂಚಾಯಿತಿ ಯಿಂದ  ವಿಕಲಚೇತನರಿಗೆ ಸಾಧನ ಸಲಕರಣೆ ಇಂದು ವಿತರಣೆ ಮಾಡಲಾಗಿದೆ ಹಾಗೂ UDID    ಕಾರ್ಡ್ ಸರಗೂರು ತಾಲೂಕು ಸಾರ್ವಜನಿಕ ಆಸ್ಪತ್ರೆ ಯಲ್ಲಿ ಅಪ್ಲೋಡ್ ಮಾಡುತ್ತಿಲ್ಲ ಇದರಿಂದ ವಿಕಲಚೇತನರ ಗೆ ತೊಂದರೆ ಆಗುತ್ತಿದೆ ತಕ್ಷಣವೇ ಶಾಸಕರು ಇದನ್ನು ಬಗೆಹರಿಸಬೇಕು ಎಂದರು. ಶಾಸಕ ಅನೀಲ್ ಚಿಕ್ಕಮಾದು ಮಾತನಾಡಿ, ವಿಕಲಚೇತನರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಹಾಗೂ ತಾಲ್ಲೂಕು ಪಂಚಾಯಿತಿ ಅನುದಾನ ದಲ್ಲಿ ಮುಂದಿನ ದಿನಗಳಲ್ಲಿ ವಿಕಲಚೇತನರಿಗೆ 5 ಬೈಕ್ ಗಳನ್ನು ವಿತರಣೆ ಮಾಡುತ್ತಿವಿ ಎಂದರು ಈ ಸಂದರ್ಭದಲ್ಲಿ ಸರಗೂರು ತಾಲೂಕು ಪಂಚಾಯಿತಿ ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್…

Read More

ಚಿತ್ರದುರ್ಗ: ಮದುವೆ ಕರೆಯೋಲೆಯಲ್ಲಿ “ಆಶೀರ್ವಾದವೇ ಉಡುಗೊರೆ” ಎಂದು ಬರೆಯುವುದನ್ನು ನೀವು ನೋಡಿರ ಬಹುದು ಆದರೆ, ಇಲ್ಲೊಂದು ವಿವಾಹ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕುಮಾರಣ್ಣನಿಗೆ ಮತ ನೀಡುವುದೇ ನೀವು ಕೊಡುವ ಉಡುಗೊರೆ ಎಂದು ಪತ್ರಿಕೆಯಲ್ಲಿ ಬರೆಸಲಾಗಿದೆ. ಹೌದು…!  ಅಭಿಮಾನಕ್ಕೆ ಎಲ್ಲೆ ಇಲ್ಲ ಅಂತಾರೆ. ಹಲವು ಘಟನೆಗಳು ಸಾಕ್ಷಿಯೂ ಆಗಿದೆ. ಅಂತಹ ಒಂದು ವಿಶೇಷ ಅಭಿಮಾನ ಚಿತ್ರದುರ್ಗದ ಚೆಳ್ಳಕೆರೆಯ ಸ್ನಾತ್ತಕೋತ್ತರ ಪದವಿ ಪಡೆದ ಯುವಕನೊಬ್ಬ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ. ತನ್ನ ಮದುವೆ ಆಮಂತ್ರಣ ಪತ್ರಿಕೆಯಲ್ಲಿ 2023 ರ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ರವರಿಗೆ ನೀಡುವ ಮತವೇ ನೀವು ನೀಡುವ ಉಡುಗೊರೆ ಎಂಬ ಸಂದೇಶ ಮುದ್ರಿಸಿ ಆಹ್ವಾನಿಸುತ್ತಿದ್ದಾರೆ. ಸದ್ಯ ಈ ವಿಶೇಷ ಮದುವೆಯ ಆಮಂತ್ರಣ ಪತ್ರಿಕೆ ಇದೀಗ ಸದ್ದು ಸೋಶಿಯಲ್ ಮೀಡಿಯಾದಲ್ಲಿ ಮಾಡುತ್ತಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪಿ.ಗೌರೀಪುರ ಗ್ರಾಮದ ಪುಟ್ಟಮ್ಮ ನಾಗರಾಜಪ್ಪ ದಂಪತಿಗಳ ಪುತ್ರ ಜಯಕುಮಾರ್ ಇಂತಹದ್ದೊಂದು ವಿಶೇಷ ಮದುವೆ ಆಮಂತ್ರಣ ಹಂಚುತ್ತಿದ್ದಾರೆ. ಮೇ 18 ರಂದು ಮದುವೆ ನಿಶ್ಚಯವಾಗಿದೆ. ಜಯಕುಮಾರ್…

Read More

ಆಧಾರ ರಹಿತ ಸಂತೆ ಭಾಷಣ ಮಾಡುವುದನ್ನು ಬಿಟ್ಟು ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ದಾಖಲೆ ಇದ್ದರೆ ಕಾಂಗ್ರೆಸ್ ನೀಡಲಿ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಹಗರಣವನ್ನು ಬೆಳಕಿಗೆ ತಂದಿದ್ದು ಗೃಹ ಸಚಿವರು, ಅವರನ್ನು ಅಭಿನಂದಿಸಬೇಕಾಗಿದ್ದ ಕಾಂಗ್ರೆಸ್ ಆರೋಪಿಸುತ್ತಿರುವುದು ಸರಿಯಲ್ಲ. ಈ ಹಿಂದೆ ಬಿಟ್ಕಾಯಿನ್ ವಿಚಾರದಲ್ಲಿ ಇದೇ ರೀತಿ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಕೊನೆಗೆ ಅದು ಶೂನ್ಯ ಆಯಿತು ಎಂದು ಟೀಕಿಸಿದರು. ಚುನಾವಣೆ ಗಿಮಿಕ್ ಮಾಡಲು ಇನ್ನೂ ಸಮಯಾವಕಾಶವಿದೆ. ನಿಮ್ಮ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿರುವಾಗ ಬಿಜೆಪಿ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಹೇಳಲು ಬರಬೇಡಿ. ಡಬಲ್ ಎಂಜಿನ್ ಸರ್ಕಾರದ ಭಯದಿಂದ ಕಾಂಗ್ರೆಸ್ ಈ ರೀತಿ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ ಎಂದು ಆರೋಪಿಸಿದರು. ಸಚಿವ ಅಶ್ವಥನಾರಾಯಣ ಅವರು ಎಲ್ಲಿಯೂ ಕೂಡ ಮುಖ್ಯಮಂತ್ರಿಯಾಗುವುದಾಗಿ ಹೇಳಲಿಲ್ಲ. ಆದರೂ ಕಾಂಗ್ರೆಸ್ ನಾಯಕರು ಅವರ ಹೆಸರನ್ನು ಉಲ್ಲೇಖಿಸುವುದು ಸರಿಯಲ್ಲ. ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದ್ದು,…

Read More

ಉಕ್ರೇನ್ನಲ್ಲಿ ನಡೆಯುತ್ತಿರುವ ಸಂಘರ್ಷ, ಇಂಡೋ- ಪೆಸಿಫಿಕ್ನಲ್ಲಿನ ಪರಿಸ್ಥಿತಿ ಮತ್ತು ಭಯೋತ್ಪಾದನೆ ಸೇರಿದಂತೆ ವಿವಿಧ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ವ್ಯಾಪಕ ಚರ್ಚೆ ನಡೆಸಿದರು. ಮೂರು ರಾಷ್ಟ್ರಗಳ ಯುರೋಪಿಯನ್ ಪ್ರವಾಸದ ಅಂತಿಮ ಹಂತದಲ್ಲಿ ಡೆನ್ಮಾರ್ಕ್ ನಿಂದ ಇಲ್ಲಿಗೆ ಆಗಮಿಸಿದ ಪ್ರಧಾನಿ ಮೋದಿ, ಒಂದು ವಾರದ ಹಿಂದೆ ಪ್ರಾನ್ಸ್ ಅಧ್ಯಕ್ಷರಾಗಿ ಪುನರಾಯ್ಕೆಯಾದ ಅವರೊಂದಿಗೆ ಸಮಾಲೋಚನೆ ನಡೆಸಿ, ಭಾರತ-ಫ್ರಾನ್ಸ್ ನಡುವೆ ಮುಂದಿನ ಹಂತದ ಮಹತ್ವಾಕಾಂಕ್ಷೆಯ ಕಾರ್ಯತಾಂತ್ರಿಕ ಪಾಲುದಾರಿಕೆಯ ಕಾರ್ಯಸೂಚಿಗಳನ್ನು ನಿರ್ಧರಿಸಿದ್ದರು. ರಕ್ಷಣೆ, ಬಾಹ್ಯಾಕಾಶ, ನೀಲಿ ಆರ್ಥಿಕತೆ, ನಾಗರಿಕ ಪರಮಾಣು ಮತ್ತು ಜನರ ನಡುವಿನ ಸಂಬಂಧ ಸೇರಿದಂತೆ ದ್ವಿಪಕ್ಷೀಯ ವಿಷಯಗಳ ಸಂಪೂರ್ಣ ಶ್ರೇಣಿಯ ಕುರಿತು ಮೋದಿ ಮತ್ತು ಮ್ಯಾಕ್ರನ್ ಚರ್ಚೆ ನಡೆಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನನ್ನ ಸ್ನೇಹಿತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ರನ್ನು ಭೇಟಿಯಾಗಿದ್ದು ಸಂತೋಷವಾಗಿದೆ. ನಾವು ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದೇವೆ.…

Read More