Author: admin

ಪಾವಗಡ: ಸಿ.ಕೆ.ಪುರ ಗ್ರಾಮದಲ್ಲಿ ಶ್ರೀ ಚನ್ನಕೇಶವ ಕ್ರಿಕೆಟರ್ಸ್ ವತಿಯಿಂದ ಏರ್ಪಡಿಸಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ಹಾಗೂ ಸಮಾಜಸೇವಕರಾದ ನೆರಳು ಕುಂಟೆ ನಾಗೇಂದ್ರಪ್ಪ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಾಯಿಸುಮನ ಹನುಮಂತರಾಯಪ್ಪ ಅವರು ಮಾತನಾಡಿದರು ಹಾಗೂ ಶ್ರೀಸಾಯಿ ಲಾ ಛೇಂಬರ್ಸ್ ವತಿಯಿಂದ ಟ್ರೋಫಿಗಳನ್ನು ಹಾಗೂ ಕ್ರೀಡಾಪಟುಗಳಿಗೆ ಮೆಡಲ್ ಗಳನ್ನು ವಿತರಿಸಿದರು. ಟೂರ್ನಿಯ ಅಧ್ಯಕ್ಷತೆಯನ್ನು ಅಜಯ್ ನಾಗೇಶ್ ರಾವ್ ಅವರು ವಹಿಸಿಕೊಂಡಿದ್ದರು. ಬಿಂದುಮಾಧವ ರಾವ್ ಅವರು ಕ್ರೀಡಾಪಟುಗಳಿಗೆ ಕ್ರೀಡಾಸ್ಫೂರ್ತಿಯ ಕುರಿತು ತಿಳಿಸಿದರು. ಟೂರ್ನಿಯ ಅತಿಥಿಗಳಾಗಿ ಸಿ.ಕೆ.ಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲಕ್ಷ್ಮಮ್ಮ ಈರಣ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಮಮತಾ ನಾಗರಾಜ್ ಕೊತ್ತೂರು ನಾಗೇಂದ್ರಕುಮಾರ್, ಪಾಳೆಗಾರ ಲೋಕೇಶ್, ದೇವಲಕೆರೆ ಅಜಯ್ ಉಪಸ್ಥಿತರಿದ್ದರು. ವರದಿ: ನಂದೀಶ್, ಕೊತ್ತೂರು ನಿಡಗಲ್ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ವಾಣಿವಿಲಾಸಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಭರಂಗಿರಿ ಮಜರೆ ತಳವಾರಹಟ್ಟಿಯಲ್ಲಿ ಸುಮಾರು 300ಕ್ಕಿಂತಲೂ ಅಧಿಕ ಮನೆಗಳಿದ್ದು, ಇಲ್ಲಿ ಕುಡಿಯುವ ನೀರಿನ  ತೀವ್ರ ಸಮಸ್ಯೆ ತಲೆದೋರಿದೆ. ಇಲ್ಲಿನ  ತಳವಾರಹಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪನೆಗೊಂಡು ನಾಲ್ಕು ವರ್ಷಗಳೇ ಕಳೆದರೂ, ಬಿಲ್ ಪಾಸ್ ಆಗಿದ್ದರೂ, ಕುಡಿಯುವ ನೀರಿನ ಸರಿಯಾದ ವ್ಯವಸ್ಥೆಯೇ ಆಗುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀರಿನ ಸಮಸ್ಯೆ ಬಗ್ಗೆ  ತಳವಾರಹಟ್ಟಿ ಗ್ರಾಮಸ್ಥರು ನಿರ್ಮಿತ ಕೇಂದ್ರದಲ್ಲಿ ವಿಚಾರಿಸಿದರೆ, ಅಧಿಕಾರಿಯಾದ ಪ್ರಕಾಶ್ ರವರು ಬೇಜಾವ್ದಾರಿತನದಿಂದ ಉತ್ತರಿಸಿದ್ದು, ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಇನ್ನೂ ಇಲ್ಲಿನ ವಾಟರ್ ಸಪ್ಲೆ ಇಂಜನಿಯರ್ ಆದ ರಾಮಚಂದ್ರಪ್ಪ ನವರನ್ನು ವಿಚಾರಿಸಿದರೆ ಅವರು ಕೂಡ ಸರಿಯಾದ ಉತ್ತರವನ್ನು ನೀಡದೇ ಬೇಜವಾಬ್ದಾರಿಯಿಂದ ಉತ್ತರಿಸುತ್ತಿದ್ದಾರೆ ಎಂದು ಜನರು ಬೇಸರ ವ್ಯಕ್ತಪಡಿಸಿದ್ದಾರೆ. ‘ದೀಪದ ಕೆಳಗಡೆ ಕತ್ತಲೆ’ ಎನ್ನುವಂತೆ ಕರ್ನಾಟಕದಾದ್ಯಂತ ಪ್ರಖ್ಯಾತವಾದ ವಾಣಿವಿಲಾಸಸಾಗರ ಜಲಾಶಯದಲ್ಲಿ  ನೀರು ಹರಿಯುತ್ತಿದ್ದರೂ, ಇಲ್ಲಿನ ಗ್ರಾಮಸ್ಥರಿಗೆ ನೀರಿನ ಸಮಸ್ಯೆ ಉಂಟಾಗಿದೆ. …

Read More

ಮಧುಗಿರಿ: ಮಧುಗಿರಿ ತಾಲ್ಲೂಕು ಕಂದಾಯ ಇಲಾಖೆ, ವತಿಯಿಂದ ದೊಡ್ಡೇರಿ ಹೋಬಳಿಯ ಸಿಂಗಾರವತನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ” ಕಾರ್ಯಕ್ರಮವನ್ನು ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ವಿ.ವೀರಭದ್ರಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರದ ಸವಲತ್ತು ಹಾಗೂ ಸೌಲಭ್ಯಗಳನ್ನು ಗ್ರಾಮದ ಸಾರ್ವಜನಿಕರು ಪಡೆಯುವ ಕಾರ್ಯಕ್ರಮವಾಗಿದೆ. ವೃದ್ದಾಪ್ಯಾ ವೇತನ, ವಿಶೇಷ ಚೇತನ ವೇತನ, ಮನಸ್ವಿನಿ, ವಿಧವಾ ವೇತನಗಳನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸುವ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರಿಂದ ಗ್ರಾಮದ ರೈತರ, ಸಾರ್ವಜನಿಕರ ,ಸಾರಿಗೆ, ಶಾಲೆಗಳ ನಿರ್ಮಾಣ ಹಾಗೂ ID ಹಳ್ಳಿಯಲ್ಲಿ ನೂತನ ಪೊಲೀಸ್ ಠಾಣೆ ನಿರ್ಮಾಣ ಸೇರಿದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ಕಾರ್ಯ ಕ್ರಮವಾಗಿದೆ. ID ಹಳ್ಳಿ ಹೋಬಳಿ ಅಭಿವೃದ್ದಿಗೆ 46 ಕೋಟಿ ಅನುದಾನ ಸೇರಿದಂತೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ರೂಪು ರೇಷೆ ಸಿದ್ದಪಡಿಸಲಾಗಿದೆ. ಸರ್ಕಾರದ ಎಲ್ಲಾ ಸವಲತ್ತುಗಳನ್ನು “ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಈ ಕಾರ್ಯಕ್ರಮ ಹೊಂದಿದೆ ಎಂದು ತಿಳಿಸಿದರು. ಇದೇ…

Read More

ಜನಪ್ರಿಯ ಪ್ರವಾಸಿ ತಾಣ ನಂದಿ ಗಿರಿಧಾಮವನ್ನು ಪ್ರವಾಸೋದ್ಯಮ ತಾಣವಾಗಿ ಬೆಳೆಸುವ ಉದ್ದೇಶದೊಂದಿಗೆ ರೂಪಿಸಿರುವ ರೋಪ್-ವೇ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.ನಂದಿ ಬೆಟ್ಟ ಕೆಲವೇ ವರ್ಷಗಳಲ್ಲಿ ಅತ್ಯಂತ ಆಕರ್ಷಣೀಯ ಪ್ರವಾಸಿ ಸ್ಥಳವಾಗಿ ಅಭಿವೃದ್ಧಿಯಾಗಲಿದೆ. ಇದು ಜಿಲ್ಲೆಯ ಆರ್ಥಿಕಾಭಿವೃದ್ಧಿಯಲ್ಲಿ ಮಹತ್ವದ ಮೈಲುಗಲ್ಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಿಂದ 60 ಕಿ.ಮೀ. ದೂರದಲ್ಲಿರುವ ನಂದಿ ಗಿರಿಧಾಮ ಆಕರ್ಷಣೀಯ ಪ್ರವಾಸಿ ತಾಣವಾಗಿದ್ದು, ಪ್ರವಾಸಿಗರಿಗೆ ವಾರಾಂತ್ಯದಲ್ಲಿ ಭೇಟಿ ನೀಡಲು ಸೂಕ್ತ ಸ್ಥಳವಾಗಿದೆ. ಪಾರಂಪರಿಕ ಸ್ಮಾರಕ, ಕೋಟೆ, ಮನಸ್ಸಿಗೆ ಮುದ ನೀಡುವ ಪರಿಸರದಿಂದಾಗಿ ಇದು ಪ್ರವಾಸಿಗರ ಆಕರ್ಷಣೆ ಕೇಂದ್ರಬಿಂದುವಾಗಿದೆ. ಈ ಭಾಗದಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಿದರೆ ಬೇರೆ ದೇಶಗಳಿಂದಲೂ ಪ್ರವಾಸಿಗರನ್ನು ಸೆಳೆಯಬಹುದು ಎಂಬ ಅಂಶ ಗಮನಕ್ಕೆ ಬಂದಿತ್ತು. ಈ ನಿಟ್ಟಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ DBFOT ಮಾದರಿಯಲ್ಲಿ ರೋಪ್-ವೇ ನಿರ್ಮಿಸುವ ಯೋಜನೆಯನ್ನು ರೂಪಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 93.40 ಕೋಟಿ ರೂ. ವೆಚ್ಚದ ಪ್ರವಾಸೋದ್ಯಮ…

Read More

ವಿದೇಶದಿಂದ ಕೊರಿಯರ್ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪಾರ್ಸಲ್ ತಪಾಸಣೆ ನಡೆಸಿದ ಕಸ್ಟಮ್ಸ್‍ನ ಕೇಂದ್ರೀಯ ಗುಪ್ತಚರ ಘಟಕದ ಅಧಿಕಾರಿಗಳು ಬರೋಬ್ಬರಿ 9.82 ಕೋಟಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ಮತ್ತು ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ತೀವ್ರ ವಿಚಾರ ಣೆಗೊಳಪಡಿಸಲಾಗಿದೆ. ವಿದೇಶದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೊರಿಯಲ್ ಮೂಲಕ ಎರಡು ಪಾರ್ಸಲ್ ಬಂದಿದೆ. ಕಸ್ಟಮ್ಸ್ ಅಧಿಕಾರಿಗಳಿಗೆ ಈ ಬಗ್ಗೆ ಅನುಮಾನ ಬಂದಿದೆ. ತಕ್ಷಣ ಪಾರ್ಸಲ್ ತೆಗೆದು ತಪಾಸಣೆ ನಡೆಸಿದಾಗ 7 ಕೋಟಿ ಮೌಲ್ಯದ ಮಾದಕ ವಸ್ತು ಹೆರಾಯಿನ್ ಮತ್ತು 2.82 ಕೋಟಿ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಈ ಪಾರ್ಸಲ್‍ಗಳು ಬೆಲ್ಜಿಯಂ ಮತ್ತು ಜಾಂಬಿಯಾದಿಂದ ದುಬೈಗೆ ಬಂದು ಅಲ್ಲಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿರುವ ಮಾಹಿತಿ ಲಭ್ಯವಾಗಿದ್ದು, ತನಿಖೆ ಮುಂದುವರೆದಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು ರಸ್ತೆ ಫ್ಲೈ ಓವರ್ ಕಳಪೆ ಕಾಮಗಾರಿಯಿಂದ ಶಿಥಿಲಗೊಂಡು ದುರಸ್ತಿಯಾಗುತ್ತಿರುವ ಬೆನ್ನಲ್ಲೇ ಗೊರಗುಂಟೆಪಾಳ್ಯ ಬಳಿಯ ಎಂಇಎಸ್ ಫ್ಲೈ ಓವರ್‍ನಲ್ಲಿ ಬೇರಿಂಗ್ ಬಿರುಕು ಕಾಣಿಸಿಕೊಂಡಿದೆ. ಕಳೆದ ಐದು ವರ್ಷಗಳ ಹಿಂದಷ್ಟೇ ನಿರ್ಮಿಸಿರುವ ಈ ಮೇಲ್ಸೇತುವೆ ಬೇರಿಂಗ್‍ನಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರಲ್ಲಿ ಆತಂಕ ಎದುರಾಗಿದೆ. 2017ರಲ್ಲಿ ರೈಲ್ವೆ ಇಲಾಖೆಯಿಂದ ಎಂಇಎಸ್ ಫ್ಲೈ ಓವರ್ ನಿರ್ಮಿಸಲಾಗಿತ್ತು. 2020ರಲ್ಲಿ ನಿರ್ವಹಣೆಗೆಂದು ಸೇತುವೆಯನ್ನು ಬಿಬಿಎಂಪಿಗೆ ರೈಲ್ವೆ ಇಲಾಖೆ ಹಸ್ತಾಂತರಿಸಿತ್ತು. 2021ರಲ್ಲಿ ಬೇರಿಂಗ್‍ನಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿತ್ತು. ಬೇರಿಂಗ್ ಸವೆದಿರುವುದು ಮತ್ತು ಕಾಂಕ್ರಿಟ್ ಎಕ್ಸ್‍ಪೆನ್ಷನ್ ಜೋಡಣೆಯಲ್ಲಿ ಬಿರುಕು ಉಂಟಾಗಿರುವುದು ಕಂಡುಬಂದಿದೆ. ಕೂಡಲೇ ಈ ಎರಡೂ ದೋಷಗಳನ್ನು ಸರಿಪಡಿಸದಿದ್ದರೆ ಅಪಾರ ಪ್ರಮಾಣದ ಹಾನಿ ಎದುರಿಸಬೇಕಾಗುತ್ತದೆ ಎಂದು ವರದಿ ನೀಡಲಾಗಿದೆ.ಬಿಬಿಎಂಪಿ ನಡೆಸಿದ ಗುಣಮಟ್ಟದ ಮೌಲ್ಯಮಾಪನದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಗುಣಮಟ್ಟ ಮೌಲ್ಯಮಾಪನದಲ್ಲಿ ವಾಹನಗಳ ಓಡಾಟಕ್ಕೆ ಈ ಫ್ಲೈ ಓವರ್ ಯೋಗ್ಯವಿಲ್ಲ ಎಂದು ತಿಳಿದುಬಂದಿದೆ. ತಕ್ಷಣವೇ ವರದಿ ತಯಾರಿಸಿ ದುರಸ್ತಿ ನಡೆಸುವಂತೆ ರೈಲ್ವೆ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿದೆ.…

Read More

ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂಬ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು, ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು ಆದೇಶಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ಸಮಿತಿಗೆ ನಿರ್ದೇಶನ ನೀಡಲಾಗಿದೆ. ಸಮಿತಿಯಲ್ಲಿ ಗೃಹ ಸಚಿವಾಲಯದ ಕಾರ್ಯದರ್ಶಿಗಳು, ಡಿ.ಪಿ.ಎ.ಆರ್. ಕಾರ್ಯದರ್ಶಿ ಹಾಗೂ ಡಿ.ಜಿ.ಪಿ ಅವರು ಸಹ ಇರಲಿದ್ದಾರೆ ಎಂದರು. ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸ್ವಚ್ಛತೆ ಮತ್ತು ಶೌಚಾಲಯ ನಿರ್ವಹಣೆಗೆ ಗುತ್ತಿಗೆ ಅಧಾರದ ಮೇಲೆ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.ಹಿಜಾಬ್ ಪ್ರಕರಣ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ಕುರಿತು ರಾಜ್ಯದ ಉಚ್ಛ ನ್ಯಾಯಾಲಯವು ನೀಡಿರುವ ಮಧ್ಯಂತರ ಆದೇಶವನ್ನು ಪಾಲನೆ ಮಾಡಲಾಗುತ್ತಿದೆ. ಮಕ್ಕಳ ನಡುವೆ ವಿಷ…

Read More

ಕೊಪ್ಪಳ: ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಪ್ರಧಾನಮಂತ್ರಿ ಕೌಶಲ್ಯ ವಿಕಾಸ್ ಯೋಜನೆ (3.0) ಅಡಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ವತಿಯಿಂದ ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಶಾಲೆ ಬಿಟ್ಟ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಉಚಿತ ಕೌಶಲ್ಯ ತರಬೇತಿಗಳನ್ನು ನೀಡಲು ಸ್ಕಿಲ್ ಹಬ್ ಸೆಂಟರ್ ತೆರೆಯಲಾಗುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು. ಐಟಿ/ಐಟಿಇಎಸ್ ಹಾಗೂ ಆಟೋಮೊಬೈಲ್ಸ್ ಸೆಕ್ಟರ್‌ಗಳಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸರಕಾರಿ ಪದವಿ ಪೂರ್ವ ಕಾಲೇಜು, ಯಲಬುರ್ಗಾದಲ್ಲಿ ಹಾಗೂ ಬ್ಯೂಟಿ ಮತ್ತು ವೆಲ್‌ನೆಸ್ ಹಾಗೂ ಐಟಿ/ಐಟಿಇಎಸ್ ಸೆಕ್ಟರ್‌ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕೊಪ್ಪಳದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ಯಲಬುರ್ಗಾ ಮೊ.ಸಂ: 9964221446, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕೊಪ್ಪಳ, ಮೊ.ಸಂ: 8548016504. ಜಿಲ್ಲಾ ಕೌಶಲ್ಯ…

Read More

ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಯಸಂದ್ರ ಗ್ರಾಮದಲ್ಲಿ “ಗ್ರಾಮಒನ್” ನೂತನ ನಾಗರಿಕ ಸೇವಾ ಕೇಂದ್ರಕ್ಕೆ, ಗ್ರಾಮ ಪಂಚಾಯಿತಿ ‌ಅಧ್ಯಕ್ಷರಾದ ಶ್ರೀಮತಿ ಮಂಗಳಗೌರಮ್ಮಹೊನ್ನಪ್ಪನವರ, ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಸತೀಶ್ ಕುಮಾರ್, ನಾಡಕಚೇರಿ ಉಪತಹಶೀಲ್ದಾರ್ ಗಿರೀಶ್ ರವರ ಅಮೃತಹಸ್ತದಿಂದ ಚಾಲನೆ ನೀಡಲಾಯಿತು. ಈ ವೇಳೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್ ಮಾತನಾಡಿ, ದೇಶದಲ್ಲಿ ಯಾವುದೇ ಪಕ್ಷದ ಸರ್ಕಾರಗಳು ಇರಲಿ, ಜನಪರ ಯೋಜನೆಗಳನ್ನು ಜಾರಿಗೆ ತರುತ್ತೀವೆ. ಎಲ್ಲಾ ಸರ್ಕಾರಗಳು ಸಹ ದೇಶದ ಕ್ರಿಯಾಶೀಲತೆ ಸರ್ಕಾರಗಳಾಗಿದ್ದು, ಗ್ರಾಮೀಣ ಪ್ರದೇಶಗಳಿಗೆ ಹಲವು ರೀತಿಯ ಅಭಿವೃದ್ಧಿ ಯೋಜನೆಗಳನ್ನು ರೂಪಿಸುತ್ತೀವೆ. ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ ತೆರೆದು, ಇದೀಗ ಕಂದಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಗ್ರಾಮ ಒನ್ ನಾಗರೀಕ ಸೇವಾ ಕೇಂದ್ರವನ್ನು ಪ್ರಾರಂಭಿಸಿದೆ. ಈಗಾಗಲೇ ನೆಮ್ಮದಿ ಕೇಂದ್ರವನ್ನು ಸ್ಥಾಪಿಸಿ 35 ಸರ್ಕಾರಿ ಸೇವೆಗಳನ್ನು ನೀಡುತ್ತಿದ್ದು, ಇದೀಗ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ‌ಒನ್ ಕೇಂದ್ರಗಳನ್ನು ನೀಡುವುದರ 56 ಇಲಾಖೆಯ 750ಕ್ಕೂ ಹೆಚ್ಚಿನ ಸರ್ಕಾರಿ  ಸೇವೆಗಳನ್ನು ನೀಡುವುದರ ಮೂಲಕ…

Read More

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ಮಾರುಕಟ್ಟೆಗಳಲ್ಲಿ ರಾಶಿ ಅಡಿಕೆ ಧಾರಣೆಯಲ್ಲಿ ಭಾನುವಾರ ಭಾರೀ ಕುಸಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 51,509 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(19-04-2022)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ. ಅಡಿಕೆ ಗರಿಷ್ಠ ಬೆಲೆ (ಫೆಬ್ರವರಿ 19, 2022) ಕೊಪ್ಪ (ಚಿಕ್ಕಮಗಳೂರು ಜಿಲ್ಲೆ) ರಾಶಿ ಅಡಿಕೆ 45,899 ರೂ. ಚನ್ನಗಿರಿ (ದಾವಣಗೆರೆ ಜಿಲ್ಲೆ) ರಾಶಿ ಅಡಿಕೆ 46,299 ರೂ. ದಾವಣಗೆರೆ (ದಾವಣಗೆರೆ ಜಿಲ್ಲೆ) ರಾಶಿ ಅಡಿಕೆ 46,033…

Read More