Subscribe to Updates
Get the latest creative news from FooBar about art, design and business.
- ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
- ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
- ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
- ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
- ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
- ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
- ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
- ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್.ಕೃಷ್ಣಮೂರ್ತಿ
Author: admin
ಚಾಮರಾಜಪೇಟೆ: ಈದ್ಗಾ ಮೈದಾನದಲ್ಲಿ ಪೊಲೀಸರು ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆಯಿತು. ಮೈದಾನದ ಸುತ್ತಮುತ್ತ ಮುಂಜಾಗ್ರತಾ ಕ್ರಮವಾಗಿ ಸಿಸಿಟಿವಿ ಅಳವಡಿಕೆಗೆ ಪೊಲೀಸರು ಮುಂದಾದಾಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಸಿಸಿಟಿವಿ ಅಳವಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿ ಹೇಳಿದರೂ ಕ್ಯಾಮೆರಾ ಅಳವಡಿಕೆಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಇಷ್ಟು ದಿನ ಇಲ್ಲದ ಕ್ಯಾಮೆರಾವನ್ನು ಈಗೇಕೆ ಹಾಕಬೇಕು. ಜನಪ್ರತಿನಿಧಿಗಳು ಮುಸ್ಲಿಮರ ರಕ್ಷಣೆಗೆ ನಿಂತಿದ್ದಾರೆ ಎಂದು ಹಿಂದೂ ಸಂಘಟನೆಯವರು ವಿರೋಧ ವ್ಯಕ್ತಪಡಿಸಿದರು. ಬಿಬಿಎಂಪಿ ಕಾಮಗಾರಿಯಲ್ಲ. ಇದು ರಕ್ಷಣೆ ಸಂಬಂಧ ಸಿಸಿಟಿವಿ ಅಳವಡಿಸುತ್ತಿದ್ದೇವೆ ಎಂದು ಇನ್ಸ್ಪೆಕ್ಟರ್ ಸಮಜಾಯಿಷಿ ನೀಡಿದರು. ಆದರೂ ಸ್ಥಳೀಯರು ಇಲ್ಲಿ ಹಿಂದೂಗಳ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಮಕ್ಕಳು ಆಟವಾಡಲು ಭಯಪಡುತ್ತಾರೆ. ಮೈದಾನದಲ್ಲಿ ಯಾವುದೇ ಒಂದು ವಾಹನವನ್ನು ಪಾರ್ಕ್ ಮಾಡಿಲಿಕ್ಕೆ ಆಗುವುದಿಲ್ಲ ಎಂದು ಹರಿಹಾಯ್ದರು. ಇದು ಜಯಚಾಮರಾಜೇಂದ್ರ ಒಡೆಯರ್ ನಿರ್ಮಿಸಿದ ಮೈದಾನ. ಐತಿಹಾಸಿಕ ಆಟದ ಮೈದಾನ. ವಕ್ ಬೋರ್ಡ್ನಿಂದ ಈದ್ಗಾ ಎಂದಾಗಿದೆ. ಕೂಡಲೇ ಕಾಮಗಾರಿಯನ್ನು ನಿಲ್ಲಿಸಿ…
ಒಂದು ಸಮುದಾಯದವರು ನಿನ್ನೆಯಿಂದ ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ ಸಮುದಾಯದ ನಾಯಕರ ಸಭೆ ಕರೆಯಲು ಸೂಚನೆ ನೀಡಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್ಆರ್ಪಿಯ ಬೆಟಾಲಿಯನ್ಗಳನ್ನು ನಿಯೋಜಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ನಾಡಿನ ಜನರು ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ. ಅನುಮತಿ ಪಡೆದು ನಿರ್ದಿಷ್ಟ ಸ್ಥಳದಲ್ಲಿ ಶಾಂತಿಯುತ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಆದರೆ, ನಿನ್ನೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ನಿನ್ನೆ ರಾಜ್ಯದ ಕೆಲವೆಡೆ ಒಂದು ಸಮುದಾಯದವರು ಪ್ರತಿಭಟನೆ ಮಾಡಿದ್ದಾರೆ. ಈತನಕ ರಾಜ್ಯದಲ್ಲಿ ಯಾವುದೇ ತೊಂದರೆಯಾಗಿಲ್ಲ. ಒಂದು ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಈಗಾಗಲೇ ಕ್ಷಮೆ ಕೇಳಿ ಮುಗಿದುಹೋಗಿರುವ ವಿಚಾರಕ್ಕೆ ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ ಕೇಂಬ್ರಿಡ್ಜ್ ಶಾಲೆ ಹಿಂಭಾಗದ ಶೆಡ್ವೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡುತ್ತಿರುವ ಹಿನ್ನಲೆ ನಗರಸಭೆ ಅಧ್ಯಕ್ಷರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಿದೆ. ಯುಜಿಡಿ, ಅಮೃತ್ ಕಾಮಗಾರಿ ಪರಿಶೀಲನೆಗೆಂದು ತೆರಳಿದಾಗ ಅನುಮಾನಗೊಂಡು ಕೇಂಬ್ರಿಡ್ಜ್ ಶಾಲೆ ಹಿಂಭಾಗದ ಶೆಡ್ಗೆ ತೆರಳಿ ಪರಿಶೀಲಿಸಿದಾಗ ಅಕ್ರಮವಾಗಿ ದನವನ್ನು ಕಡಿದಿರುವುದು ಬೆಳಕಿಗೆ ಬಂದಿದೆ ಎಂದು ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ತಿಳಿಸಿದ್ದಾರೆ. ನಗರದ 22 ನೇ ವಾರ್ಡ್ನಲ್ಲಿ ಎಂದಿನಿಂದ ನಗರಸಭೆಯಿಂದ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗಿತ್ತು. ಗೋಹತ್ಯೆ ನಡೆದಿರುವುದು ಗೊತ್ತಾಗುತ್ತಿದ್ದಂತೆ ಆರೋಪಿತರು ತಪ್ಪಿಸಿಕೊಂಡು ಓಡಿಹೋಗಿದ್ದಾರೆ. ಸುಮಾರು 500 ಕೆ.ಜಿ ದನದ ಮಾಂಸ ಪತ್ತೆಯಾಗಿದೆ. ವಿರುದ್ದ ಗೋಹತ್ಯೆ ನಿಷೇಧ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಗೋಹತ್ಯೆ ಸಂಬಂಧವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ನಗರದಲ್ಲಿ ಯಾವುದೇ ಅನಧಿಕೃತ ಶೆಡ್ಗಳು ನಿರ್ಮಿಸಿಕೊಂಡಲ್ಲಿ ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಗರಸಭೆಯಿಂದ ತೆರವು ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.…
ಪ್ರವಾದಿ ಮೊಹಮ್ಮದ್ ವಿರುದ್ಧ ಬಿಜೆಪಿಯ ಅಮಾನತುಗೊಂಡ ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಪ್ರಯಾಗ್ರಾಜ್ ಮತ್ತು ಸಹರಾನ್ಪುರದಲ್ಲಿ ಜನರು ಪೊಲೀಸ್್ಮ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಉತ್ತರ ಪ್ರದೇಶದ ನಾಲ್ಕು ನಗರಗಳಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಪ್ರತಿಭಟನೆಗಳು ಭುಗಿಲೆದ್ದಿವೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಪೊಲೀಸರು 130ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಪ್ರಯಾಗ್ರಾಜ್ನಲ್ಲಿ ನಡೆದ ಗಲಭೆಯಲ್ಲಿ ಕೆಲವು ದ್ವಿಚಕ್ರ ವಾಹನ ಮತ್ತು ಬಂಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಪೊಲೀಸ್ ವಾಹನವೊಂದನ್ನು ಬೆಂಕಿಗೆ ಆಹುತಿ ನೀಡಲು ಪ್ರಯತ್ನಿಸಲಾಗಿದೆ. ಪೊಲೀಸರು ಅಶ್ರುವಾಯು ಮತ್ತು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ನಿಯಂತ್ರಿಸಿದರು. ಪ್ರದೇಶದಲ್ಲಿನ ಗಲಭೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. “ಶುಕ್ರವಾರ ರಾತ್ರಿ 9.45ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಗಲಭೆಯಲ್ಲಿ ಪ್ರತಿಭಟಿಸುತ್ತಿದ್ದ ಸುಮಾರು 136 ದುಷ್ಕರ್ಮಿಗಳನ್ನು ಬಂಧಿಸಲಾಗಿದೆ” ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಶಾಂತಿ ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿದರು. ಸಹರಾನ್ಪುರದಲ್ಲಿ 45, ಪ್ರಯಾಗ್ರಾಜ್ 37, ಅಂಬೇಡ್ಕರ್ ನಗರ 23, ಹತ್ರಾಸ್ನಲ್ಲಿ 20, ಮೊರಾದಾಬಾದ್ 7 ಮತ್ತು…
ಕಲ್ಪತರು ನಾಡಿನಲ್ಲಿ ವಿದ್ಯಾ ರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಾಗುತ್ತಿದ್ದು ಕಳೆದ ಒಂದು ವಾರದಿಂದ ಮೂವರು ನೇಣಿಗೆ ಕೊರಳೊಡ್ಡಿದ್ದು ಪೋಷಕರಲ್ಲಿ ಆತಂಕ ಎದುರಾಗಿದೆ. ಕಳೆದ ಸೋಮವಾರ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 6ನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದ ಮಹಾರಾಷ್ಟ್ರ ಮೂಲದ ಸೋಹನ್ನಾಥ್ ಬಾಲಂಕರ್, ಮತ್ತೊಂದು ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಮೈಸೂರು ಮೂಲದ ವಿದ್ಯಾರ್ಥಿನಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡರೆ, ಹಿರಿಯೂರು ಮೂಲದ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾರದಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ. ದ್ವಿತೀಯ ಪಿಯುಸಿ ಆಂತರಿಕ ಪಠ್ಯದಲ್ಲಿ ಕಡಿಮೆ ಅಂಕ ಬಂದಿತೆಂದು ಮನನೊಂದು ಪ್ರಮೋದ್ ನೇಣಿಗೆ ಶರಣಾಗಿದ್ದರೆ, ಉಳಿದ ಇಬ್ಬರು ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದುಬಂದಿಲ್ಲ. ಈ ಘಟನೆಯಿಂದ ಇಡೀ ನಗರವೇ ಬೆಚ್ಚಿಬಿದ್ದಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೋಲೀಸರು ವಿದ್ಯಾರ್ಥಿಗಳ ಆತ್ಮಹತ್ಯೆಗೆ ನಿಖರ ಕಾರಣದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.…
ತಿಪಟೂರು: ವಾಹನ ಕಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರೂ ಸಾರ್ವಜನಿಕರು ಎಚ್ಚೆತ್ತುಕೊಳ್ಳುತ್ತಿಲ್ಲ. ಬಹುತೇಕ ದ್ವಿಚಕ್ರ ಸವಾರರು ಹ್ಯಾಂಡ್ ಲಾಕ್ ಮಾಡದೇ ಹಾಗೆಯೇ ಬೈಕ್ ನ್ನು ಬಿಟ್ಟು ಹೋಗುತ್ತಿರುವುದು ಬೈಕ್ ಕಳ್ಳರಿಗೆ ವರದಾನವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಬಿಸಿ ಮುಟ್ಟಿಸಲು ಪೊಲೀಸರೇ ಕಾರ್ಯಾಚರಣೆಗಿಳಿದ ಘಟನೆ ತಿಪಟೂರಿನಲ್ಲಿ ನಡೆದಿದೆ. ತಿಪಟೂರು ನಗರ ಠಾಣೆ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಹ್ಯಾಂಡ್ ಲಾಕ್ ಮಾಡದೆ ವಾಹನ ಸವಾರರು ಜಾಗರೂಕತೆಯಿಂದ ಬಿಟ್ಟು ಹೋದ ವಾಹನಗಳು ಹಾಗೂ ವಾಹನದಲ್ಲೇ ಕೀ ಬಿಟ್ಟು ಹೋದ ನೂರಾರು ವಾಹನಗಳನ್ನ ವಶಕ್ಕೆ ಪಡೆದರು. ನಗರಠಾಣೆ ವೃತ್ತನಿರೀಕ್ಷಕರಾದ ಶ್ರೀಶೈಲಕುಮಾರ್, ನಗರಠಾಣಾ ಸಬ್ ಇನ್ಸ್ ಪೆಕ್ಟರ್ ದ್ರಾಕ್ಷಣಮ್ಮ, ಶಿವಣ್ಣ, ಕೃಷ್ಣಕುಮಾರ್, .ಎಎಸ್ ಐ ನಿಸಾರ್, ರಾಮಣ್ಣ ಸೇರಿದಂತೆ ಸಿಬ್ಬಂದಿ ಭಾಗವಹಿಸಿದರು . ನಗರದ ಬಿ.ಹೆಚ್.ರಸ್ತೆ, ಕೆ.ಎಸ್ ಆರ್.ಟಿ ಸಿ ಬಸ್ ಸ್ಯಾಂಡ್ ರಸ್ತೆ ಹಾಗೂ ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್ ರಸ್ತೆ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಲಾಯಿತು ವರದಿ: ಆನಂದ ತಿಪಟೂರು…
ಬೆಂಗಳೂರು, ಜೂ. ೧೦- ರಾಜ್ಯದಲ್ಲಿ ಬಿಜೆಪಿಯ ಬಿ ಟೀಮ್ ಸಿದ್ದರಾಮಯ್ಯ ಎಂಬುದು ರಾಜ್ಯಸಭಾ ಚುನಾವಣೆಯಿಂದ ಜಗಜ್ಜಾಹೀರಾಗಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇನ್ನು ಮುಂದೆ ಕಾಂಗ್ರೆಸ್ ಜತೆ ಯಾವತ್ತೂ ಮೈತ್ರಿ ಇಲ್ಲ. ಡೋರ್ ಕ್ಲೋಸ್ ಎಂದಿದ್ದಾರೆ.ರಾಜ್ಯಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂಬ ಮನವಿಗೆ ಕಾಂಗ್ರೆಸ್ ಸ್ಪಂದಿಸಿಲ್ಲ. ಈ ಚುನಾವಣೆಯ ಮೂಲಕ ರಾಜ್ಯದಲ್ಲಿ ಬಿಜೆಪಿಯ ಬಿ ಟೀಮ್ ಸಿದ್ದರಾಮಯ್ಯ ಎನ್ನುವುದು ಜಗಜ್ಜಾಹೀರಾಗಿದೆ ಎಂದರು.ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಜೆಡಿಎಸ್ಗೆ ೨ನೇ ಪ್ರಾಶಸ್ತ್ಯ ಮತ ನೀಡಿದ್ದರೂ ಸಾಕಾಗಿತ್ತು. ಆದರೆ ಅವರು ಬಿಜೆಪಿಯನ್ನು ಗೆಲ್ಲಿಸಲು ನಮಗೆ ಬೆಂಬಲ ನೀಡಿಲ್ಲ. ಜನ ಎಲ್ಲವನ್ನು ತೀರ್ಮಾನ ಮಾಡುತ್ತಾರೆ ಎಂದರು. ಇನ್ನು ಮುಂದೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜತೆ ಮೈತ್ರಿಗೆ ಹೋಗಲ್ಲ. ಮೈತ್ರಿ ಎಂಬುದು ಮುಗಿದ ಅಧ್ಯಾಯ. ನಾಳೆಯಿಂದ ರಾಜ್ಯದಲ್ಲಿ ಹೊಸ ಇತಿಹಾಸ ಆರಂಭವಾಗಲಿದೆ ಎಂದರು.ಜೆಡಿಎಸ್ನ ೩೨ ಶಾಸಕರ ಪೈಕಿ ೩೧ ಶಾಸಕರು ಜೆಡಿಎಸ್ ಅಭ್ಯರ್ಥಿ ಕುಪೇಂದ್ರರೆಡ್ಡಿಯವರಿಗೆ…
ಸುಂಕದಕಟ್ಟೆ ಬಳಿ ಯುವತಿಯೊಬ್ಬರ ಮೇಲೆ ಭಗ್ನಪ್ರೇಮಿ ನಡೆಸಿದ ಆಸಿಡ್ ದಾಳಿ ಕೃತ್ಯವು ಮಾಸುವ ಮುನ್ನವೇ ನಗರದಲ್ಲಿ ಮಹಿಳೆಯೊಬ್ಬರ ಮೇಲೆ ಇಂದು ಹಾಡುಹಗಲೇ ಆಸಿಡ್ ದಾಳಿ ನಡೆದಿರುವುದು ಜನರನ್ನು ಬೆಚ್ಚಿ ಬೀಳಿಸಿದೆ. ವಿವಾಹವಾಗಲು ಒಪ್ಪದಿದ್ದರಿಂದ ಮೂರು ಮಕ್ಕಳಿದ್ದ ೩೨ ವರ್ಷದ ಮಹಿಳೆಯ ಮೇಲೆ ಆಕ್ರೋಶಗೊಂಡ ವ್ಯಕ್ತಿಯೊಬ್ಬರು ಆಸಿಡ್ ದಾಳಿ ನಡೆಸಿದ ಮೃಗೀಯ ಕೃತ್ಯ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದ್ದು ಆತಂಕಕ್ಕೆ ಕಾರಣವಾಗಿದೆ. ಆಸಿಡ್ ದಾಳಿಗೊಳಗಾಗಿರುವ ಮಹಿಳೆಯ ಮುಖಕ್ಕೆ ಕಣ್ಣಿಗೆ ಹಾನಿಯುಂಟಾಗಿದ್ದು ಸಂಜಯಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಕೆಯು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ತಿಳಿಸಿದ್ದಾರೆ. ದಾಳಿ ನಡೆಸಿ ಪರಾರಿಯಾಗಿರುವ ಮಹಿಳೆಯ ಸಹೋದ್ಯೋಗಿ ಗೋರಿಪಾಳ್ಯದ ಆರೋಪಿ ಅಹ್ಮದ್ ಸುಳಿವು ದೊರೆತಿದ್ದು ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದರು. ಸಂತ್ರಸ್ತ ಮಹಿಳೆ ಹಾಗೂ ಆರೋಪಿಯು ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯ ಕರ್ನಾಟಕ ಅಗರಬತ್ತಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಮಹಿಳೆಗೆ ವಿವಾಹವಾಗಿ ಮೂವರು ಮಕ್ಕಳಿದ್ದು ಪತಿಯನ್ನು ತೊರೆದಿದ್ದ ಆಕೆ ವಿಚ್ಛೇದನ ಪಡೆದಿದ್ದರು.ಆರೋಪಿಗೆ ಕೂಡ…
ಪ್ರವಾದಿ ಮುಹಮ್ಮದ್ ಅವರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿ ಅಮಾನತ್ತು ಗೊಂಡಿರುವ ಬಿಜೆಪಿ ನಾಯಕಿ ನೂಪರ್ ಶರ್ಮಾ ವಿರುದ್ದ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.ಪ್ರವಾದಿ ವಿವಾದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ ಪ್ರಚೋದನಾತ್ಮಕ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶರ್ಮಾ ವಿರುದ್ಧ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡನೇ ಎಫ್ಐಆರ್ನಲ್ಲಿ ಬಿಜೆಪಿಯ ನವೀನ್ ಜಿಂದಾಲ್, ಪತ್ರಕರ್ತೆ ಸಾಬಾ ನಖ್ವಿ ಮತ್ತು ಇತರ ಕೆಲವರ ಹೆಸರಿದ್ದು, ಇಬ್ಬರನ್ನೂ ವಿಶೇಷ ಘಟಕ ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.ಎಫ್ಐಆರ್ನಲ್ಲಿ ನದೀಮ್, ಅಬ್ದುರ್ ರೆಹಮಾನ್, ಗುಲ್ಜಾರ್ ಅನ್ಸಾರಿ ವ್ಯಕ್ತಿಗಳನ್ನು ಹೆಸರಿಸಲಾಗಿದೆ, ದೆಹಲಿ ಪೊಲೀಸರು ಆರೋಪಿಗಳಿಗೆ ಸಮನ್ಸ್ ಕಳುಹಿಸುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. “ದ್ವೇಷದ ಭಾಷಣ ಮಾಡುವ , ವಿವಿಧ ಗುಂಪುಗಳು ಹಾಗು ಪ್ರಚೋದಿಸುವ ಮತ್ತು ಸಾರ್ವಜನಿಕ ನೆಮ್ಮದಿಯ ನಿರ್ವಹಣೆಗೆ ಹಾನಿಕಾರಕ ಸನ್ನಿವೇಶಗಳನ್ನು ಸೃಷ್ಟಿಸುವವರ ವಿರುದ್ಧ ದೆಹಲಿ ಪೊಲೀಸರು ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ…
ರಷ್ಯಾ-ಉಕ್ರೇನ್ ನಡುವಿನ ಕದನ ಮತ್ತಷ್ಟು ತೀವ್ರ ಸ್ವರೂಪಕ್ಕೆ ತಿರುಗುತ್ತಿರುವ ನಡುವೆಯೇ ಇದೀಗ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಇದೇ ತಿಂಗಳು ಸ್ಪೇನ್ನ ಮ್ಯಾಡ್ರಿಡ್ನಲ್ಲಿ ನಡೆಯಲಿರುವ ನ್ಯಾಟೋ ಶೃಂಗಸಭೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಭಾಗವಹಿಸುವುದು ಖಚಿತವಾಗಿದೆ. ಅದೂ ಅಲ್ಲದೆ ಮೈತ್ರಿಗಳ ರಾಷ್ಟ್ರಗಳ ಪಾಲುದಾರ ರಾಷ್ಟ್ರಗಳ ಪೈಕಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಲ್ಕು ಹೊಸ ದೇಶಗಳು ಕೂಡ ಭಾಗಿಯಾಗಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನ್ಯಾಟೋ (ಉತ್ತರ ಅಟ್ಲಾಂಟಿಕ್ ಒಪ್ಪಂದ ಸಂಸ್ಥೆ) ಕಾರ್ಯದರ್ಶಿ ಜನರಲ್ ಮಿರ್ಸಿಯಾ ಜೊಆನ್, ಖಂಡಿತವಾಗಿಯೂ ಇದು ನ್ಯಾಟೋದ ವಿಸ್ತರಣೆ ಹಾಗೂ ತೆರೆದ ಬಾಗಿಲು ನೀತಿಯ ಬಗ್ಗೆ ಪ್ರಮುಖ ಚರ್ಚೆ ನಡೆಯಲಿದೆ. ಫಿನ್ಲೆಂಡ್ ಹಾಗೂ ಸ್ವೀಡನ್ ನಮ್ಮ ಗುಂಪಿಗೆ ಸೇರಲಿದೆ ಎಂಬ ಭಾವನೆಯಿದೆ. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಕೂಡ ಭಾಗಿಯಾಗಲಿದ್ದು, ಹಾಗಾಗಿ ಉಕ್ರೇನ್ ಸೇರ್ಪಡೆ ಬಗ್ಗೆ ಕೂಡ ಪ್ರಮುಖವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಝೆಲೆನ್ಸ್ಕಿ ಅಲ್ಲದೆ ಪೆಸಿಫಿಕ್ ಮಹಾಸಾಗರದ ಪ್ರಮುಖ ರಾಷ್ಟ್ರಗಳಾದ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಜಪಾನ್ ಹಾಗೂ ದಕ್ಷಿಣ…