Author: admin

ಬೆಂಗಳೂರು:  ನಗರದಲ್ಲಿ ಇಬ್ಬರು ಮಹಿಳೆಯರ ಕೊಲೆಯಾಗಿದೆ. ಒಂದು ಪ್ರಕರಣದಲ್ಲಿ ತವರಿನಿಂದ ಹಣ, ಆಭರಣ ತರುವಂತೆ ಪತಿಯೇ ಪತ್ನಿಯನ್ನು ಕೊಲೆ ಮಾಡಿದರೆ, ಮತ್ತೊಂದು ಪ್ರಕರಣದಲ್ಲಿ ಮೊಬೈಲ್ನಲ್ಲಿ ಬೇರೆಯವರೊಂದಿಗೆ ಹೆಚ್ಚಾಗಿ ಮಾತನಾಡುತ್ತೀಯ ಎಂದು ಪತಿ ಜಗಳವಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಇದೀಗ ಇಬ್ಬರು ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ. ಚಾಕುವಿನಿಂದ ಇರಿದು ಕೊಲೆ ಯಾವಾಗಲೂ ಮೊಬೈಲ್  ನಲ್ಲಿ ಮಾತನಾಡುತ್ತೀಯ ಎಂದು ಪತ್ನಿ ಜತೆ ಜಗಳವಾಡಿದ ಪತಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ನೇಪಾಳ ಮೂಲದ ಕಮಲಾದೇವಿ (45) ಕೊಲೆಯಾದ ದುರ್ದೈವಿ. ಈಕೆ ಪತಿ ತೇಜ್ ಬಹದ್ದೂರ್ (52)ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ನೇಪಾಳ ಮೂಲದ ಈ ದಂಪತಿ 20 ವರ್ಷದ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದು, ಮೊದಲು ಸಂಜಯನಗರದಲ್ಲಿ ವಾಸವಾಗಿದ್ದು, ಕಳೆದ ಮೂರು ವರ್ಷಗಳ ಹಿಂದೆ ಮನೆ ಬದಲಿಸಿ ಬಿ.ಚನ್ನಸಂದ್ರದಲ್ಲಿ ವಾಸವಾಗಿದ್ದು, ಇವರಿಗೆ ಒಬ್ಬ ಮಗ ಹಾಗೂ ಮಗಳಿದ್ದು, ಮಗಳನ್ನು ಮದುವೆ ಮಾಡಿಕೊಡಲಾಗಿದೆ.…

Read More

ಕರ್ನಾಟಕದಲ್ಲಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮಗಳಿಗೆ ಹೆಚ್ಚಿನ ಬೇಡಿಕೆ ಇರುವುದನ್ನು ಗಮನಿಸಿ ಕೇಂದ್ರ ಸರ್ಕಾರ ಬೇಡಿಕೆ ಅನುಸಾರ ಅನುದಾನ ಹೆಚ್ಚಿಸಿ ಆದೇಶಿಸಿದೆಯಲ್ಲದೇ ಎರಡನೇ ಕಂತಿನ ಹಣವನ್ನೂ ಬಿಡುಗಡೆ ಮಾಡಿದೆ.2020-21ನೇ ಸಾಲಿನಲ್ಲಿ ಕೇಂದ್ರ , ರಾಜ್ಯ ಸರ್ಕಾರಕ್ಕೆ ಪಿಎಂಕೆಎಸ್ವೈಪಿಡಿಎಂ ಅಡಿಯಲ್ಲಿ 400 ಕೋಟಿ ರೂ. ಬಿಡುಗಡೆ ಮಾಡಿತ್ತು. 2021-22ನೇ ಸಾಲಿನಲ್ಲಿ ರಾಜ್ಯದಲ್ಲಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ಕೇಂದ್ರ ಸರ್ಕಾರ ಇದೀಗ ರಾಜ್ಯದ ಮನವಿಯಂತೆ 500 ಕೋಟಿ ರೂ.ಗಳ ಅನುದಾನ ಹಂಚಿಕೆ ಮಾಡಿದೆ.ಕಳೆದ ಬಾರಿಗೆ ಹೋಲಿಸಿದರೆ ಶೇ.25ರಷ್ಟು ಹೆಚ್ಚಿನ ಪಾಲು ಕೇಂದ್ರದ ಅನುದಾನ ಪಡೆಯಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕೇಂದ್ರ ಹಂಚಿಕೆ ಮಾಡಿದ್ದ 500 ಕೋಟಿ ರೂ. ಗಳಲ್ಲಿ ಮೊದಲ ಕಂತಿನ ಅನುದಾನವನ್ನಾಗಿ ರಾಜ್ಯಕ್ಕೆ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿತ್ತು. ಉಳಿದ 200ಕೋಟಿ ರೂ.ಗಳನ್ನು ಮಾರ್ಚ್ 25ರಂದು ಬಿಡುಗಡೆ ಮಾಡಿದೆ.ಸದರಿ ಅನುದಾನ ತೋಟಗಾರಿಕೆ, ಕೃಷಿ, ರೇಷ್ಮೆ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಗಳ ಕಾರ್ಯಕ್ರಮಗಳನ್ನೊಳಗೊಂಡಿರುತ್ತದೆ. ಕೇಂದ್ರ ಹಂಚಿಕೆ ಮಾಡಿದ ಅನುದಾನದಲ್ಲಿ ಶೇ.76ರಷ್ಟು ಸಾಮಾನ್ಯ…

Read More

ರಾಜ್ಯದಲ್ಲಿ ಕೋಮು ಆಧಾರಿತ ವ್ಯಾಪಾರ ವಹಿವಾಟುಗಳಿಗೆ ಕಡಿವಾಣ ಹಾಕುತ್ತಿರುವವರು ತಾಕತ್ತಿದ್ದರೆ ಮೇಲ್ಮಟ್ಟದಲ್ಲಿ ಮುಸ್ಲಿಂ ರಾಷ್ಟ್ರಗಳ ಜೊತೆಗಿನ ವ್ಯಾಪಾರ ವಹಿವಾಟನ್ನು ನಿಲ್ಲಿಸಲಿ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದವರು ಕರ್ನಾಟಕದಂತಾಗ ಬೇಕು ಎಂದು ಕೊಳ್ಳುತ್ತಿದ್ದಾರೆ. ಆದರೆ ಇವರು ಉತ್ತರ ಪ್ರದೇಶದ ಮಾದರಿ ಮಾಡಲು ಹೊರಟಿದ್ದಾರೆ. ಅಲ್ಲಿ ಅಭಿವೃದ್ಧಿಯಾಗಿದ್ದರೆ ಉತ್ತರ ಪ್ರದೇಶದವರು ಇಲ್ಲಿ ಬಂದು ಯಾಕೆ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ರಾಜ್ಯಕ್ಕೆ ಎರಡು ವರ್ಷದಿಂದ ಬಂಡವಾಳ ಹರಿದು ಬರುತ್ತಿಲ್ಲ. ಹಿಜಾಬ್, ಹಿಂದೂ-ಮುಸ್ಲೀಂ, ಭಗವದ್ಗೀತೆ ಹೆಸರಿನಲ್ಲಿ ಸೌಹಾರ್ದತೆ ಕದಡಿದ್ದಾರೆ. ಹೀಗಾಗಿ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ದೇಶದಲ್ಲಿ 8.5 ಲಕ್ಷ ಜನ ಭಾರತದಲ್ಲಿ ಒಳ್ಳೆಯ ವಾತಾವರಣ ಇಲ್ಲ ಎಂದು ನಮ್ಮ ದೇಶದ ನಾಗರಿಕತೆಯನ್ನೇ ತೊರೆದಿದ್ದಾರೆ. ದೇಶ ಬಿಟ್ಟು ಬೇರೆ ದೇಶಗಳಿಗೆ ಹೋಗಿದ್ದಾರೆ. ಇವರು ಜಾತಿ, ಧರ್ಮದ ರಾಜಕಾರಣ ಮಾಡುತ್ತಿದ್ದಾರೆ. ಹಸಿವಿಗೆ ಯಾವ ಜಾತಿ, ಧರ್ಮ ಇದೆ ಎಂದು…

Read More

ಬೆಂಗಳೂರಿನಲ್ಲಿ ಸಂತೆಗಳೆಂದರೆ ಏನೋ ಆಕರ್ಷಣೆ ಜನರು ಹೊಸತನ್ನು ಬಯಸಿ ಆ ಕಡೆಗೆ ಹೋಗಿ ಬರೋಣವೆಂದು ಸಾಗುವುದು ಸಹಜ. ಅದರಲ್ಲಿಯೂ ನವನವೀನ ಚಿತ್ರಗಳನ್ನು ಬಿಂಬಿಸುವ ಚಿತ್ರಸಂತೆಯ ಸೌಂದರ್ಯ ಸವಿಯಲು ವಾರದ ಕೊನೆಯ ದಿನದ ತಮ್ಮ ಹಾಜರಿಯನ್ನು ಅಲ್ಲಿ ಹಾಕಿಬಿಡುತ್ತಾರೆ. ಏಕೆಂದರೆ ಕರ್ನಾಟಕ ಚಿತ್ರಕಲಾ ಪರಿಷತ್ತಿನ 19ನೆಯ ಚಿತ್ರಸಂತೆಗೆ ಇನ್ನೂ ಬೆರಳೆಣಿಕೆಯಷ್ಟು ದಿನ ಇರುವುದು ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಮ್ಮಿಕೊಂಡಿರುವ ವಾರ್ಷಿಕ ಚಿತ್ರಸಂತೆಗೆ ಹಲವಾರು ಕಲಾವಿದರು ಕಲಾಸಕ್ತರು ಕಾಯುತ್ತಿರುವುದು ವಿಶೇಷವಲ್ಲ. ಚಿತ್ರಸಂತೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಡಾ. ಬಿ.ಎಲ್.ಶಂಕರ್ ವಹಿಸಲಿದ್ದಾರೆ. ಪ್ರತಿವರ್ಷ ನಡೆಯುವ ಚಿತ್ರಸಂತೆಯ ಒಂದೊಂದು ವಿಷಯವನ್ನು ಆಧರಿಸಿ ಆಯೋಜನೆ ಮಾಡಲಾಗುತ್ತದೆ.ಈ ವರ್ಷ ನಮಗೆಲ್ಲ ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದ ಮಹನೀಯರನ್ನು ಸ್ಮರಿಸುವ ಕ್ಷಣಕ್ಕಾಗಿ 19ನೇ ಚಿತ್ರಸಂತೆಯನ್ನು ಹಲವಾರು ಸ್ವತಂತ್ರ ಯೋಧರಿಗಾಗಿ ಆಯೋಜನೆ ಮಾಡುತ್ತಿದೆ. ಚಿತ್ರಕಲಾ ಪರಿಷತ್ ನಾಡಿನ ಪ್ರಸಿದ್ಧ ಕಲಾವಿದರನ್ನು ಗುರುತಿಸಿ ಚಿತ್ರಕಲಾ ಸಮ್ಮಾನ್ ಮತ್ತು ಎಂಎಸ್ ನಂಜುಂಡರಾವ್ ಪ್ರಶಸ್ತಿ ಪ್ರಧಾನ ಮಾಡುತ್ತಾ…

Read More

ತಿಪಟೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಸಾರ್ವಜನಿಕ ಶಿಕ್ಷಣ ಇಲಾಖೆ  ಸಹಯೋಗದಲ್ಲಿ   ಈ ದಿನ “ಮಕ್ಕಳು ಎದುರುಸುತ್ತಿರುವ ಪ್ರಚಲಿತ ಸಮಸ್ಯೆಗಳು” ಕುರಿತು ಸಂವಾದ ಕಾರ್ಯಕ್ರಮ  ತಿಪಟೂರಿನ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪಿ.ಜೆ ರಾಮಮೋಹನ್ ಅಧ್ಯಕ್ಷರು, ನಗರಸಭೆ ತಿಪಟೂರು ಇವರು ನೆರವೇರಿಸಿದರು. ಪ್ರಾಂಶುಪಾಲ ಪರಶಿವಮೂರ್ತಿ, ಉಪ ಪ್ರಾಂಶುಪಾಲ ಚನ್ನೆಗೌಡ ಉಪಸ್ಥಿತರಿದ್ದರು ಬಿ.ಎಸ್. ನಂದಕುಮಾರ್ ಮಕ್ಕಳ ಕಲ್ಯಾಣ ಸಮಿತಿ ತುಮಕೂರು ಇವರು ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು. ಕು.ರಶ್ಮೀ ರಕ್ಷಣಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತುಮಕೂರು, ದೈಹಿಕ ಶಿಕ್ಷಣಾಧಿಕಾರಿ ಶಮಂತ, ನಗರಸಭೆ ಆರೋಗ್ಯ ನಿರೀಕ್ಷಕ  ಶ್ರೀನಿವಾಸ್ , ಎ.ಎಸ್.ಐ. ಶಂಕರಪ್ಪ, ಶಿಕ್ಷಕರಾದ ಮಧು ಹಾಜರಿದ್ದರು. ವಿವಿಧ ಪ್ರೌಢಶಾಲೆಯ 70ಕ್ಕೂ ಹೆಚ್ಚು ಮಕ್ಕಳು ಸಂವಾದ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.ಸಹ ಶಿಕ್ಷಕ ಸಂತೋಷಕುಮಾರ್ ಕಾರ್ಯಕ್ರಮ ನಿರೂಪಿಸಿದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುರುವೇಕೆರೆ: ದಂಡಿನಶಿವರ ವಿ. ಎಸ್.ಎಸ್.ಎನ್. ಗೆ ಶುಕ್ರವಾರ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಕೆ.ಸಿದ್ದಗಂಗಯ್ಯ ಹಾಗೂ ಉಪಾಧ್ಯಕ್ಷರಾಗಿ ಕುಮಾರ್ ಕೆ.ಆರ್.  ಅವಿರೋಧವಾಗಿ ಆಯ್ಕೆಯಾದರು. ಸಹಕಾರ ಇಲಾಖೆಯ ಚುನಾವಣಾಧಿಕಾರಿ ಶಿವಕುಮಾರ್ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ  ಕೆ .ಸಿದ್ದಗಂಗಯ್ಯ,  ಮಾಜಿ ಶಾಸಕರಾದ ಎಂ.ಟಿ.ಕೃಷ್ಣಪ್ಪನವರ ಹಾಗೂ ಸಂಘದ ಸದಸ್ಯರ ಬೆಂಬಲದಿಂದ  ನಾನು ಇಂದು ಅಧ್ಯಕ್ಷನಾಗಿದ್ದು, ನನ್ನ ಆಯ್ಕೆಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು.  ಇಂದಿನಿಂದ  ಸಂಘದ ವತಿಯಿಂದ ಸಿಗುವ ಸರ್ಕಾರಿ ಸವಲತ್ತುಗಳನ್ನು ಪ್ರಾಮಾಣಿಕವಾಗಿ ಜನರಿಗೆ  ತಲುಪುವಂತೆ ಮಾಡುತ್ತೇವೆ. ಸಂಘವನ್ನು ಉತ್ತಮ ರೀತಿಯಲಿ ಅಭಿವೃದ್ಧಿ ಮಾಡಲು ಶ್ರಮಿಸುತ್ತೇನೆ ಎಂದರು . ಬಳಿಕ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿಯನ್ನು ಹಂಚಿ, ಸಂಭ್ರಮ ಆಚರಿಸಿದರು. ಈ ವೇಳೆ  ಬೀಚನಹಳ್ಳಿ ರಾಮಣ್ಣ, ತೋವಿನಕೆರೆ ರಂಗಸ್ವಾಮಿ , ಮಾಜಿ ಅಧ್ಯಕ್ಷರಾದ ಶಿವರಾಜು, ಹೊನ್ನೆನಹಳ್ಳಿ ಕೃಷ್ಣಪ್ಪ , ಗಂಗಣ್ಣ,ರೋಹಿತ್, ಪದ್ಮರೋಹಿತ್ , ಮಾಚೆನಹಳ್ಳಿ ಲೋಕೇಶ್, ಸಿ. ಇ. ಓ.ಪ್ರಕಾಶ್ ಮತ್ತಿತರರು ಅಧ್ಯಕ್ಷ ಉಪಾಧ್ಯಕ್ಷರಿಗೆ…

Read More

ತುಮಕೂರು: ಮಾತಂಗ ಮಹರ್ಷಿ ಸೇವಾಶ್ರಮ ಹಂಪಿ  ಪರಮಪೂಜ್ಯ ಗುರುಗಳಾದ ಶ್ರೀ ಭಾರತಿ ಪೂರ್ಣನಂದ ಸ್ವಾಮೀಜಿಗಳ ಅಧ್ಯಕ್ಷತೆಯಲ್ಲಿ ಆದಿಜಾಂಬವ ಕೊಂಕಲ ಬೃಹನ್ಮಠ ಮಧುಗಿರಿಯ ಶ್ರೀ ಓಂಕಾರ ಮುನಿ ಸ್ವಾಮೀಜಿಗಳ  ಸಾನಿಥ್ಯದಲ್ಲಿ ಜಿಲ್ಲಾ ಮಾದಿಗರ ಸಮಾವೇಶ, ಮಾದಿಗ ಸಮುದಾಯದ  ನಾಯಕರಿಗೆ ಸನ್ಮಾನ ಕಾರ್ಯಕ್ರಮ ಹಾಗೂ  ಪ್ರಸ್ತುತ ರಾಜಕಾರಣದಲ್ಲಿ  ಮಾದಿಗ ಸಮುದಾಯ ಪಾತ್ರ,  ಕಡ್ಡಾಯ ಮತದಾನ ಜಾಗೃತಿ  ಸಮಾರಂಭ ತುಮಕೂರಿನ ಬಾಲಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಮಧುಗಿರಿ ಮಾಜಿ ಶಾಸಕ  ಕೆ.ಎನ್.ರಾಜಣ್ಣ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮಾಜಿ ಶಾಸಕರಾದ  ರಫೀಕ್ ಅಹಮ್ಮದ್ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸಿದ್ದಾಪುರ ರಂಗಶಾಮಣ್ಣ, ಕೊಟ್ಟ ಶಂಕರ್,  JCB ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿ ನಿವಾಸದ ಮೇಲೆ ಐಟಿ ದಾಳಿ ಬಳಿಕ ವಿದೇಶಕ್ಕೆ ತೆರಳದಂತೆ ಕೋರ್ಟ್ ನೀಡಿದ್ದ ಸೂಚನೆಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಮಾರ್ಚ್ 28ರಿಂದ ಏ.3 ರವರೆಗೆ ಎಕ್ಸ್ ಪೋನಲ್ಲಿ ಭಾಗವಹಿಸಲು ದುಬೈಗೆ ತೆರಳಲು ಅನುಮತಿ ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿದ ನ್ಯಾಯಾಲಯ, ದುಬೈಗೆ ತೆರಳಲು ಅನುಮತಿ ನೀಡಿದೆ. ಐಟಿ ದಾಳಿ ಪ್ರಕರಣದ ಬಳಿಕ ವಿದೇಶಕ್ಕೆ ತೆರಳದಂತೆ ಕೋರ್ಟ್ ಸೂಚಿಸಿತ್ತು. ಅಲ್ಲದೇ ಒಂದು ವೇಳೆ ವಿದೇಶ ಪ್ರಯಾಣ ಮಾಡಬೇಕೆಂದರೆ ಕೋರ್ಟ್ ಅನುಮತಿ ಪಡೆಯುವಂತೆ ಹೇಳಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್, ಇದೀಗ ಎಲ್ ಪಿ ಎಫ್ ಎಲ್ ಇ ಎಕ್ಸ್ ಬೇಸ್ ಇಂಡಸ್ಟ್ರಿ ಆಹ್ವಾನದ ಮೇರೆಗೆ ವಿಶೇಷ ಅತಿಥಿಯಾಗಿ ದುಬೈನಲ್ಲಿ ನಡೆಯುತ್ತಿರುವ ಎಕ್ಸ್ ಪೋದಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಅಲ್ಲದೇ 2021, ಸೆ.22 ರಂದು ಪಾಸ್ ಪೋರ್ಟ್ ಅವಧಿ ಮುಕ್ತಾಯವಾಗಿದ್ದು, ನವೀಕರಿಸಲು ಅನುಮತಿ ನೀಡುವಂತೆಯೂ ಕೋರಿದ್ದರು. ಎರಡೂ ಅರ್ಜಿಗಳಿಗೆ ಸಮ್ಮತಿ ನೀಡಿರುವ…

Read More

ಹಿರಿಯೂರು: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಹಿರಿಯೂರು ಘಟಕ ಮತ್ತು ತಾಲ್ಲೂಕಿನ ವಾಲ್ಮೀಕಿ ನಾಯಕ ಸಮುದಾಯದಿಂದ ಎಲ್.ಜಿ.ಹಾವನೂರುರವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹಿರಿಯೂರಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯದ ಹರಿಕಾರರು, ಹಿಂದುಳಿದ ವರ್ಗಗಳ ನೇತಾರರು, ದಕ್ಷಿಣ ಆಫ್ರಿಕಾ ಸಂವಿಧಾನ ಸಲಹೆಗಾರರು, ಕಾನೂನು ಪಂಡಿತರು ಆಗಿರುವ ಎಲ್. ಹಾವನೂರು ಅವರ ಆದರ್ಶ ವ್ಯಕ್ತಿತ್ವ ಮುಂದಿನ ಪೀಳಿಗೆಗೆ ಗುಣಗಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಘಟಕ ತಾಲ್ಲೂಕು ಅಧ್ಯಕ್ಷರಾದ ಎಸ್ ಜೋಗಪ್ಪ, ಉಪಾಧ್ಯಕ್ಷರುಗಳಾದ ನೀಲಕಂಠಪ್ಪ, ಚಿದಾನಂದ ಸ್ವಾಮಿ ಆರ್., ಭರತೇಶ್, ನಿಜಲಿಂಗಪ್ಪ, ಯೋಗಾನಂದ ಮೂರ್ತಿ, ಪ್ರಧಾನ ಕಾರ್ಯದರ್ಶಿಯಾದ ಎನ್.ಕುಮಾರ್, ಖಜಾಂಚಿ ಕೆ.ನಾಗರಾಜು ಸೊಂಡೆಕೆರೆ, ಕಾರ್ಯದರ್ಶಿಗಳಾದ ಗಿರೀಶ್ ಕುಮಾರ್, ಜುಂಜಾರಾಮ್ ನಾಯಕ, ತಿಪ್ಪೇಸ್ವಾಮಿ ಮಿಲ್ಕ್, ಅರುಣ್ ಕುಮಾರ್, ಕಾನೂನು ಸಲಹೆಗಾರರು ಪಿ.ರಮೇಶ್ ವಕೀಲರು, ಲೋಕೇಶ್ ವಕೀಲರು, ಅಜಯ್ ಕುಮಾರ್ ಹರ್ತಿಕೋಟೆ, ಓಬಳೇಶ್ ತಾವಂದಿ, ನಾಗಣ್ಣ, ರಂಗಯ್ಯ ವದ್ದಿಕೆರೆ, ಲೋಕೇಶ್ ಭರಮಗಿರಿ, ಜಯರಾಮಪ್ಪ ಭರಮಗಿರಿ, ಓಬಳೇಶ್, ಸಿದ್ದಮ್ಮ ಕೊಟ್ಟಿಗೆ, ಕೆಂಜಾಡಿಯಪ್ಪ,…

Read More

ಸರಗೂರು:  ಸಮೀಪದ ಹಂಪಾಪುರ ಗ್ರಾಮ ಪಂಚಾಯಿತಿಯ ಕೋಹಳ್ಳ ಗ್ರಾಮದಲ್ಲಿ 2021-2022 ನೇ ಸಾಲಿನಲ್ಲಿ ನರೇಗಾದಡಿಯಲ್ಲಿ ನಡೆಸಲಾದ ಮೇಟ್ಲಿಂಗ್ ಕಾಮಗಾರಿ ರಸ್ತೆ ಕಾಮಗಾರಿಕಳಪೆಯಿಂದ ಕೂಡಿದ್ದು. ಸೂಕ್ತ ತನಿಖೆ ನಡೆಸಬೇಕೆಂದು ಗ್ರಾಮಸ್ಥರು ಅಗ್ರಹಸಿದ್ದಾರೆ ಕೋಹಳ್ಳ ಗ್ರಾಮದ ದೇವಪ್ಪನ ಜಮೀನಿಂದ ಶಿವಜಂನಯ್ಯನ ಜಮೀನುವರೆಗೆ ಮೆಟ್ಟಿಂಗ್ ರಸ್ತೆ ಅಭಿವೃದ್ಧಿ ಕಾಮಗಾರಿ ಕೆಲಸವನ್ನು 2021 ರ ನವೆಂಬರ್ ನಲ್ಲಿ ಶುರುಮಾಡಲಾಗಿದ್ದು. ಆರಂಭದಿಂದಲೇ ಕಳಪೇ ಕಾಮಗಾರಿ ಮಾಡಲಾಗಿದೆ. ಇದಲ್ಲದೆ ನರೇಗಾದಡಿ ಕೆಲಸವನ್ನು ಜೆಸಿಬಿ ಯಂತ್ರದಿಂದ ಬಳಸಿಕೊಂಡು ಕೆಲಸ ಮಾಡಲಾಗಿದ್ದು. ಸಮರ್ಪಕವಾಗಿ ಕೆಲಸ ಮಾಡಿಲ್ಲ. ಪಂಚಾಯಿತಿ ಸದಸ್ಯರು ತಮ್ಮ ಮನಬಂದಂತೆ ಕೆಲಸ ಮಾಡಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಕಾಮಗಾರಿ ಗೆ ಪಂಚಾಯಿತಿಯಿಂದ 3 ಲಕ್ಷ ಅನುದಾನ ಮಂಜೂರಾಗಿದ್ದು, ಮೆಟ್ಲಿಂಗ್  ಗೆ ಬಳಸಿದ ಜಲ್ಲಿ ಮಣ್ಣನ್ನು ಕಡಿಮೆ ಪ್ರಮಾಣದಲ್ಲಿ ಬಳಸಲಾಗಿದೆ. ರಸ್ತೆಯು ಹಳ್ಳ ದಿಣ್ಣೆಗಳಿಂದ ಕೂಡಿದ್ದು, ನೆನ್ನೇ ಸುರಿದ ಬಾರಿ ಮಳೆಗೆ ಮಳೆ ನೀರು ರಸ್ತೆಯನ್ನು ಕೊಚ್ಚಿಕೊಂಡು ಹೋಗಿದೆ. ಅಲ್ಲದೆ ನೀರು ಹೋಗಲು ಮೋರಿ ಹಾಕಲಾಗಿದ್ದು, ಕಳಪೆ ಗುಣಮಟ್ಟದ ಪೈಪುಗಳನ್ನು ಮೊರಿಗೆ ಅಳವಡಿಸಲಾಗಿದೆ.…

Read More