Subscribe to Updates
Get the latest creative news from FooBar about art, design and business.
- ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
- ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
- ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
- ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
- ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
- ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
- ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
- ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್.ಕೃಷ್ಣಮೂರ್ತಿ
Author: admin
ತುಮಕೂರು: ಮನೆ ಮುಂದೆ ನಿಲ್ಲಿಸಲಾಗಿದ್ದ ಯಮಹಾ RX 135 ಬೈಕ್ ನ್ನು ಕಳ್ಳರು ರಾತ್ರಿ ವೇಳೆಯಲ್ಲಿ ಕದ್ದೊಯ್ದ ಘಟನೆ ನಡೆದಿದೆ. ನಗರದ ಹನುಮಂತಪುರ ರಸ್ತೆಯ ಕೋತಿತೋಪು ಸರ್ಕಲ್ ನಿನ್ನೆ ರಾತ್ರಿ 1:45ರ ವೇಳೆ ಈ ಘಟನೆ ನಡೆದಿದೆ. ಕಳ್ಳರು ಬೈಕ್ ನ್ನು ಕದ್ದೊಯುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಾಜಿ ನಗರಸಭಾ ಉಪಾಧ್ಯಕ್ಷ ವಾಲೆ ಚಂದ್ರಯ್ಯನವರ ಪುತ್ರ ವಾಸು ಅವರಿಗೆ ಸೇರಿದ ಬೈಕ್ ಇದಾಗಿದ್ದು, ರಾತ್ರೋರಾತ್ರಿ ಆಗಮಿಸಿದ ಕಳ್ಳರು ಬೈಕ್ ನ್ನು ಕದ್ದೊಯ್ದಿದ್ದಾರೆ. ಸಿಸಿ ಕ್ಯಾಮರಾದಲ್ಲಿ ಕಳ್ಳರ ಕೈಚಳಕ ಸೆರೆಯಾಗಿದೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಇಸ್ಲಾಂ ಧರ್ಮದ ಪವಿತ್ರ ಗ್ರಂಥ ಕುರಾನ್ ಗೆ ಅಗೌರವ ತೋರಿಸಿದ್ದಾರೆಂದು ಆರೋಪಿಸಿ ಪ್ರಸಿದ್ಧ ಆಫ್ಘಾನ್ ಫ್ಯಾಷನ್ ಮಾಡೆಲ್ ಸೇರಿದಂತೆ ಮೂವರನ್ನು ತಾಲಿಬಾನ್ ಬಂಧಿಸಿದೆ. ಮಾಡೆಲಿಂಗ್, ಕಾರ್ಯಕ್ರಮಗಳಗೆ ಹೆಸರು ವಾಸಿಯಾದ ಅಜ್ಮಲ್ ಹಖಿಕಿ ಅವರನ್ನು ಬಂಧಿಸಲಾಗಿದೆ ಎಂದು ತಾಲಿಬಾನ್ ಗುಪ್ತಚರ ಸಂಸ್ಥೆ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದೆ. ಅಜ್ಮಲ್ ಹಖಿಕಿ ಹಾಸ್ಯದ ರೀತಿಯಲ್ಲಿ ಕುರಾನ್ ನ ಪದ್ಯಗಳನ್ನು ಅರೇಬಿಕ್ ನಲ್ಲಿ ಪಠಿಸಿದ ವಿಡಿಯೋ ವೈರಲ್ ಆಗಿತ್ತು. ಬಂಧನದ ನಂತರ, ತಾಲಿಬಾನ್ ಹಖಿಕಿ ಮತ್ತು ಅವರ ಸಹೋದ್ಯೋಗಿಗಳ ವೀಡಿಯೊವನ್ನು ಬಿಡುಗಡೆ ಮಾಡಿದೆ. ಜೈಲು ಸಮವಸ್ತ್ರದಲ್ಲಿ ನಿಂತು ತಾಲಿಬಾನ್ ಸರ್ಕಾರ ಮತ್ತು ಧಾರ್ಮಿಕ ವಿದ್ವಾಂಸರಲ್ಲಿ ಹಖಿಕಿ ಕ್ಷಮೆಯಾಚಿಸಿದರು. ಇನ್ನೂ, ಕುರಾನ್ ಪದ್ಯಗಳನ್ನು ಅಥವಾ ಪ್ರವಾದಿ ಮಹಮ್ಮದ್ ಅವರ ಮಾತುಗಳನ್ನು ಅವಮಾನಿಸಲು ಯಾರಿಗೂ ಅವಕಾಶವಿಲ್ಲ ಎಂದು ವಿಡಿಯೊನಲ್ಲಿ ಉಲ್ಲೇಖಿಸಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ನನಗಿರುವ ಮಾಹಿತಿ ಪ್ರಕಾರ ಕುಮಾರಸ್ವಾಮಿ ಮನೆಯವರೇ ನಾಟಕ ಮಾಡ್ತಿದ್ದಾರೆ. ನನ್ನನ್ನು ಮುಗಿಸಬೇಕು ಅಂತಾ ಹೇಳಿ ಅವರೇ ತಮಗೆ ಬೇಕಾದವರಿಂದ ಕ್ರಾಸ್ ವೋಟಿಂಗ್ ಮಾಡಿಸಿದ್ದಾರೆ ಎಂದು ಜೆಡಿಎಸ್ ನ ಅಸಮಾಧಾನಿತ ಶಾಸಕ ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ. ಕ್ರಾಸ್ ವೋಟಿನ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ಬ್ಯಾಲೆಟ್ ಪೇಪರ್ ತೋರಿಸುವಾಗ ಸರಿಯಾಗಿಯೇ ತೋರ್ತಿದ್ದೇನೆ. ಮೂರ್ನಾಲ್ಕು ನಿಮಿಷ ಹಿಡಿದುಕೊಂಡಿದ್ದೇನೆ. ಅದಾದ ಮೇಲೆ ಹೋಗಿ ವೋಟ್ ಹಾಕಿದ್ದೇನೆ. ಅವನೇನು ಕತ್ತೆ ಕಾಯುತ್ತಿದ್ದನಾ…? ಹೆಬ್ಬೆಟ್ಟು ತೆಗಿ ಅನ್ನಬೇಕಿತ್ತು. ನನಗಿರುವ ಮಾಹಿತಿ ಪ್ರಕಾರ ಕುಮಾರಸ್ವಾಮಿ ಮನೆಯವರೇ ನಾಟಕ ಮಾಡ್ತಿದ್ದಾರೆ ಎಂದು ಶ್ರೀನಿವಾಸ್ ಕುಮಾರಸ್ವಾಮಿ ವಿರುದ್ಧ ಏಕ ವಚನದಲ್ಲಿಯೇ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಿದ್ದಾರೆ. ನನಗೂ, ಅವರಿಗೂ ಆಗೊಲ್ಲ ಅನ್ನೋದು ಗೊತ್ತು. ಈಗಾಗಲೇ ನನ್ನನ್ನು ಸೋಲಿಸಲೇ ಬೇಕು ಅಂತಾ ಷಡ್ಯಂತರ ಮಾಡಿದ್ದಾರೆ. ಇದು ಕೂಡ ಅದೇರೀತಿ ಷಡ್ಯಂತರ. ಇದೇ ಕುಮಾರಸ್ವಾಮಿ ಕ್ರಾಸ್ ವೋಟಿಂಗ್ ಮಾಡ್ಸಿ, ನನ್ನ ಮೇಲೆ ಹಾಕುತ್ತಿದ್ದಾರೆ. ಅವರಿಗೆ…
ಗುಬ್ಬಿ: ತಾಲೂಕಿನ ಮಂಚಲದೊರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಗಿಡಗಳನ್ನು ನೀಡುವುದರ ಮೂಲಕ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಬಗ್ಗೆ ಕಾಲೇಜು ಮತ್ತು ಪ್ರೌಢಶಾಲಾ ಮಕ್ಕಳಿಗೆ ಯೋಜನೆಯ ಕೃಷಿ ಮೇಲ್ವಿಚಾರಕರಾದ ರಘುರಾಜು ಮಾತನಾಡಿ, ಪರಿಸರ ಸಂರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸಲು ಪ್ರತಿಯೊಬ್ಬರೂ ಒಂದೊಂದು ಗಿಡ-ಮರಗಳನ್ನು ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದ್ದು, ಪರಿಸರ ಉಳಿವಿಗಾಗಿ ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಇಂತಹ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಅವರ ಸಲಹೆ ಸೂಚನೆ ಮೇರೆಗೆ ಪ್ರತಿಯೊಂದು ತಾಲೂಕನ ವಿವಿಧ ಕಡೆ 2,000 ಗಿಡಗಳನ್ನು ನೆಡಲಾಗಿದೆ. ಶಾಲಾ ಮಕ್ಕಳಿಗೆ ದತ್ತು ನೀಡಿ ಪಾಲನೆ-ಪೋಷಣೆ ಮಾಡಿ ಬೆಳೆಸುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಮಂಚಲದೊರೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಿದ್ದಗಂಗಮ್ಮ , ಉಪಾಧ್ಯಕ್ಷರಾದ ಕವಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪ್ರಸಾದ್, ಬಸವರಾಜು, ಮುಖ್ಯ ಶಿಕ್ಷಕರಾದ ಚೇತನ್, ಗ್ರಾಮ ಪಂಚಾಯತಿ…
ತುರುವೇಕೆರೆ: ಮಾಯಸಂದ್ರದವರಾದ ಚಿತ್ರನಟ ಜಗ್ಗೇಶ್ ಅವರನ್ನು ಬಿಜೆಪಿ ಪಕ್ಷ ರಾಜ್ಯಸಭೆಗೆ ಆಯ್ಕೆ ಮಾಡಿರೋದು ನನಗೆ ತುಂಬಾ ಸಂತೋಷವಾಗಿದೆ.ಅವರಿಗೆ ನಮ್ಮ ತಾಲ್ಲೂಕಿನ ಜನರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮಾತನಾಡಿದ ಶಾಸಕ ಮಸಾಲೆ ಜಯರಾಮ್ ತಿಳಿಸಿದರು. ತಾಲ್ಲೂಕಿನ ಮಾಯಸಂದ್ರದಲ್ಲಿ ಕಲ್ಪತರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಮಸಾಲೆ ಜಯರಾಮ್, ಕುರಿ ಸಾಕಾಣೆಯಲ್ಲಿ ನಮ್ಮ ದೇಶ ಎರಡನೇಯ ಸ್ಥಾನದಲ್ಲಿದೆ. ಕುರಿ ಸಾಗಾಣಿಕೆಗೆ ಹೆಚ್ಚಿನ ಉತ್ತೇಜನ ನೀಡಬೇಕಿದೆ ಎಂದು ಹೇಳಿದರು. ರೈತರ ಒಳಿತಿಗಾಗಿ ಈ ಸಂಘ ತೆಗೆದುಕೊಳ್ಳುವ ಕಾರ್ಯಕ್ರಮಗಳಿಗೆ ನನ್ನ ಸಹಕಾರ ಇರಲಿದೆ. ಸದಾ ನಿಮ್ಮ ಜೊತೆ ನಾನು ಇರುತ್ತೇನೆ ಎಂದು ಹೇಳಿದರು. ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಕುರಿ ಸಾಗಾಣಿಕೆಯಿಂದ ಪ್ರತಿ ಹಂತದಲ್ಲೂ ಲಾಭ ಕಾಣಬಹುದು. ಕುರಿಯ ಮಾಂಸಕ್ಕೆ ಉತ್ತಮ ಬೇಡಿಕೆ ಇದೆ. ಅದರ ಉಣ್ಣೆಯಲ್ಲೂ ಹಣ ಗಳಿಸಬಹುದು ಜೊತೆಗೆ ಅದರ ಗೊಬ್ಬರದಲ್ಲೂ ರೈತನಿಗೆ ಲಾಭವಿದೆ ಎಂದರು. ರೈತರು ಸರ್ಕಾರದ ಸವಲತ್ತುಗಳನ್ನು ಪಡೆಯುವ…
ನಿರ್ಮಾಣ ಹಂತದಲ್ಲಿರುವ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್)ನ 7ನೇ ಮಹಡಿಯಿಂದ ಬಿದ್ದು ವೈದ್ಯರೊಬ್ಬರು ಮೃತಟ್ಟಿರುವ ಘಟನೆ ಅಸ್ಸಾಂನ ಮ್ರೂಪ್ ಜಿಲ್ಲೆಯಲ್ಲಿ ನಡೆದಿದೆ. ಫಲ್ಗು ಪ್ರತಿಮ್ ದಾಸ್ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ವೈದ್ಯ. ಕಟ್ಟಡ ಕಾಮಗಾರಿಯಲ್ಲಿ ನಿರತರಾಗಿದ್ದ ಕಾರ್ಮಿಕರಿ ಭಾರೀ ಸದ್ದು ಕೇಳಿ ಬಂದಿದೆ. ಕೂಡಲೇ ಸ್ಥಳಕ್ಕೆ ಹೋಗಿ ನೊಡಲಾಗಿ ವೈದ್ಯರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ವೈದ್ಯರು ಕಟ್ಟಡದ ಏಳನೇ ಮಹಡಿಯಿಂದ ಸ್ವತಃ ಬಿದ್ದಿದ್ದಾರೆಯೇ, ಆತ್ಮಹತ್ಯೆಯೇ ಅಥವಾ ಅಪಘಾತವೋ ಸದ್ಯಕ್ಕೆ ತಿಳಿದುಬಂದಿಲ್ಲ. ತನಿಖೆಯ ಸ್ಪಷ್ಟವಾಗಲಿದೆ ಎಂದು ಪೊಲೀಸ್ ತಿಳಿಸಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ರಾಜ್ಯದಲ್ಲಿ ವಿವಾದ ಎಬ್ಬಿಸಿರುವ ಜಿಲ್ಲಾಯ ಶ್ರೀರಂಗಪಟ್ಟಣದಲ್ಲಿರುವ ಟಿಪ್ಪು ಸುಲ್ತಾನ್ ಕಾಲದಲ್ಲಿ ನಿರ್ಮಾಣವಾಗಿರುವ ಜಾಮಿಯಾ ಮಸೀದಿ ವಿವಾದಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದು ಮಸೀದಿಯಲ್ಲ, ಮಂದಿರ ಅನ್ನುವ ಹಿಂದೂ ಸಂಘಟನೆಗಳ ವಾದಕ್ಕೆ ಇದೀಗ ಆರ್ಕಿಯಾಲಜಿ ಸರ್ವೇ ಆಫ್ ಮೈಸೂರು ಪುಸ್ತಕದಲ್ಲಿ ಮಂದಿರವೆಂದು ಉಲ್ಲೇಖ ಮಾಡಿರುವುದು ಬೆಳಕಿಗೆ ಬಂದಿದೆ. ಈ ದಾಖಲೆಯೊಂದಿಗೆ ಇದೀಗ ಹಿಂದೂ ಸಂಘಟನೆಗಳು ಕಾನೂನು ಹೋರಾಟಕ್ಕೆ ಮುಂದಾಗಿವೆ. ಕಳೆದ ಒಂದು ವಾರದಿಂದ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದ, ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ವಿವಾದದ ಸಂಬಂಧ ದಶಕಗಳ ಹಿಂದಿನ ಪುಸ್ತಕವೊಂದು ಪತ್ತೆಯಾಗಿದ್ದು, ಈ ಮೂಲಕ ಪುರಾತತ್ವ ಇಲಾಖೆಗೆ ಸಂಬಂಧಿಸಿದ ದಾಖಲೆ ಸಿಕ್ಕಿದಂತಾಗಿದೆ. ಕೆಲ ದಿನಗಳ ಹಿಂದಷ್ಟೇ ಬಾಲಗಣಪತಿ ಭಟ್ಟ ಎಂಬುವರು ಬರೆದಿದ್ದ ಮೂಡಲ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಸುಪ್ರಭಾತ ಎಂಬ ಪುಸ್ತಕ ದೊರೆತಿತ್ತು. ದಶಕಗಳ ಹಿಂದೆಯೇ ಬರೆಯಲಾಗಿದ್ದ ಈ ಪುಸ್ತಕದಲ್ಲಿ, ಟಿಪ್ಪು ಸುಲ್ತಾನ್ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನವನ್ನು ಕೆಡವಿ ಅಲ್ಲಿನ ಅರ್ಚಕರ ಕೈ ಕತ್ತರಿಸಿದ್ದಲ್ಲದೆ, ಅಲ್ಲಿದ್ದ…
ಹೃದಯಾಘಾತ ಎನ್ನುವುದು ಪ್ರಸ್ತುತ ಯುವ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಯಾಗಿದೆ. ನಮ್ಮಲ್ಲಿ ಸಾಮಾನ್ಯ ರೀತಿಯಲ್ಲಿ ಕಾಣಿಸಿಕೊಳ್ಳುವ ಸಮಸ್ಯೆ ಏಕಾಏಕಿ ಪ್ರಾಣವನ್ನೇ ತೆಗೆದು ಭಾರೀ ನಷ್ಟವನ್ನುಂಟು ಮಾಡುವ ಹೃದಯಾಘಾತದ ಬಗ್ಗೆ ನಾವು ತಿಳಿದುಕೊಳ್ಳಬೇಕಿರುವುದು ಅವಶ್ಯಕವಾಗಿದೆ. ಹೃದಯಾಘಾತವಾಗುವುದಕ್ಕೂ ಮೊದಲು ಎದೆ ಸ್ವಲ್ಪ ನೋವಾಗುತ್ತದೆ. ಇದು ಮೊದಲ ಲಕ್ಷಣವಾಗಿದೆ. ಆ ಬಳಿಕ ಎದೆ ಭಾರವಾದಂತೆ ಭಾಸವಾಗುತ್ತದೆ. ಎದೆಯಲ್ಲಿ ಏನೋ ಸಂಕಟ ಎಂಬಂತೆ ಅನ್ನಿಸುತ್ತದೆ. ಇದು ಕೆಲವು ನಿಮಿಷಗಳವರೆಗೆ ಇರುತ್ತದೆ. ಆ ಬಳಿಕ ಬೆನ್ನು, ಕುತ್ತಿಗೆ, ದವಡೆ ಹೊಟ್ಟೆಯಲ್ಲಿ ಕೂಡ ನೋವು ಆರಂಭವಾಗಿ ಮತ್ತೆ ಸಹಜ ಸ್ಥಿತಿಗೆ ಬರುತ್ತದೆ. ಮೇಲೆ ಹೇಳಲಾದ ಎಲ್ಲ ಲಕ್ಷಣಗಳ ಬಳಿಕ ಏಕಾಏಕಿ ಹೃದಯಾಘಾತವಾಗುತ್ತದೆ. ಈ ವೇಳೆ ಎದೆಯಲ್ಲಿ ಭಾರೀ ನೋವು, ಬೆವರು, ಹೆದರಿಕೆಯಾಗುತ್ತದೆ. ಇನ್ನು ಕೆಲವರು ಈ ಸಂದರ್ಭದಲ್ಲಿ ವಾಂತಿ ಮಾಡಿಕೊಳ್ಳುವ ಸಾಧ್ಯತೆಗಳು ಕೂಡ ಇವೆ. ಈ ಎಲ್ಲ ಲಕ್ಷಣಗಳ ಬಳಿಕ 10ರಿಂದ 15 ನಿಮಿಷದಲ್ಲಿ ಇದು ಸುಧಾರಿಸದೇ ಹೋದರೆ, ಅದು ದೊಡ್ಡ ಹೃದಯಾಘಾತದ ಲಕ್ಷಣವಾಗಿದೆ. ಈ ವೇಳೆ ಕೂಡಲೇ ಆಸ್ಪತ್ರೆಗೆ…
ತುರುವೇಕೆರೆ: ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೊವೊಂದು ಮಗುಚಿ ಬಿದ್ದಿದ್ದು, ಪರಿಣಾಮವಾಗಿ ವಾಹನ ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬದರಿಕಾಶ್ರಮ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಗ್ಗೇಜ್ ಟೆಂಪೋ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತುರುವೇಕೆರೆಯಿಂದ ಮಾಯಸಂದ್ರಕ್ಕೆ ಕೊಬ್ಬರಿ ಚೀಲ ತುಂಬಿಕೊಂಡು ವಾಹನ ಹೋಗುತ್ತಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ತುರುವೇಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ರಾಷ್ಟ್ರೀಯ ತನಿಖಾ ದಳ ಎನ್ಐಎ ಇಂದು ತಮಿಳುನಾಡು ಹಾಗೂ ಪುದುಚೇರಿಯ ಕೆಲವು ಭಾಗಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಉಗ್ರ ಜಾಲಗಳ ಬೆನ್ನತ್ತಿದೆ. ತಮಿಳುನಾಡಿನ ಚೆನ್ನೈ ನೆರೆಯ ಪುದುಚೇರಿ ಕರೆಕಲ್ಲ್ ಮತ್ತು ಮೈಲ್ನಾಡು ತುರೈ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ. ಎನ್ಐಎನ ಭಯೋತ್ಪಾದನಾ ಘಟಕದ ಅಧಿಕಾರಿಗಳು ದಿಡೀರ್ ಕಾರ್ಯಾಚರಣೆ ನಡೆಸಿದ್ದು, ಕೆಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇತ್ತೀಚೆಗೆ ಜಮ್ಮು ಕಾಶ್ಮೀರದ ಪೊಲೀಸರು ಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಂಘಟನೆಗೆ ಸೇರಿದ್ದ ಶಂಕಿತನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಕರ್ನಾಟಕದ ಮಂಗಳೂರು, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸ್ಯಾಟ್ಲೈಟ್ ಬಳಕೆಯ ಸಿಗ್ನಲ್ಗಳು ಪತ್ತೆಯಾಗಿದ್ದವು. ಹೀಗಾಗಿ ಕೇಂದ್ರ ತನಿಖಾ ಸಂಸ್ಥೆ ತನ್ನ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ. ಕಳೆದೆರಡು ವರ್ಷಗಳ ಹಿಂದೆ ಸರಣಿ ಕಾರ್ಯಾಚರಣೆ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿ ಮತ್ತು ಕರ್ನಾಟಕದಲ್ಲಿ ಅಡಗಿದ್ದ ಕೆಲವು ಉಗ್ರರನ್ನು ಎಡೆಮುರಿ ಕಟ್ಟಿತ್ತು. ಹೀಗಾಗಿ ಒಂದಷ್ಟು ದಿನ ಉಗ್ರ ಚಟುವಟಿಕೆಗಳು ಹತೋಟಿಯಲ್ಲಿದ್ದವು. ಆದರೆ ಈಗ ಮತ್ತೆ…