Subscribe to Updates
Get the latest creative news from FooBar about art, design and business.
- ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
- ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
- ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ
- ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ
- ಕರ್ನಾಟಕ ಒಲಂಪಿಕ್ 2025: ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; ಪದಕ ಗೆದ್ದರೆ ಕೋಟಿ ಕೋಟಿ ನಗದು ಸಂಭಾವನೆ
- ಪಾವಗಡ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: 17 ಸಾವಿರ ಮಕ್ಕಳಿಗೆ ಲಸಿಕೆ ಗುರಿ
- ಸಂತಪುರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
Author: admin
ತುಮಕೂರು: ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಒತ್ತಾಯಿಸಿ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕರ್ನಾಟಕ, ವತಿಯಿಂದ ಪ್ರತಿಭಟನೆ ನಡೆಯಿತು. ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳು ನಡೆಯುತ್ತಿರುವುದು ವಿಪರ್ಯಾಸ. ವಿದ್ಯಾವಂತ, ಬಡ ಮತ್ತು ಪ್ರತಿಭಾವವಂತ ವಿದ್ಯಾರ್ಥಿಗಳು ನ್ಯಾಯಯುತವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿ ತಮ್ಮನಸನ್ನು ನನಸಾಗಿಸಲು ಅನೇಕ ಸವಾಲುಗಳನ್ನು ಎದುರಿಸುತ್ತಾರೆ. ಆದರೆ ಇಂತಹ ಪರೀಕ್ಷೆಯಲ್ಲಿ ಅಕ್ರಮ ನಡೆಯುತ್ತಿರುವುದು ವಿಪರ್ಯಾಸವಾಗಿದೆ ಎಂದು ಸಂಘಟನೆ ಖಂಡಿಸಿದೆ. ಹುದ್ದೆಗಳ ಸಂಖ್ಯೆ ಬೆರಳೆಣಿಕೆಯಷ್ಟಿದ್ದರೂ ಸಾವಿರರರು – ಲಕ್ಷಾಂತರ ಸಂಖ್ಯೆಯಲ್ಲಿ ಸರ್ಧಾತ್ಮಕ ಪರೀಕ್ಷೆ ಎದುರಿಸುತ್ತಾರೆ. ಆದರೆ ಅವರು ಎದುರಿಸುವ ಪರೀಕ್ಷೆಗಳಲ್ಲಿಯೇ ದೊಡ್ಡಮಟ್ಟದಲ್ಲಿ ಅಕ್ರಮಗಳು ನಡೆಯುತ್ತವೆ. ಇದರಿಂದಾಗಿ ಬಡ ಮತ್ತು ಪ್ರತಿಭಾವಂತ ನಿರುದ್ಯೋಗಿಗಳ ಕನಸಿಗೆ ತಣ್ಣೀರೆರಚಿದಂತಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರೀ ಆಕ್ರಮ, ಭ್ರಷ್ಟಾಚಾರ ನಡೆಯುತ್ತಿರುವುದು ವಿದ್ಯಾವಂತ ನಿರುದ್ಯೋಗಿಗಳಲ್ಲಿ ನಿರಾಸೆಯನ್ನು ಮೂಡಿಸಿದೆ ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಪರೀಕ್ಷೆಗಳಲ್ಲಿ ಅಕ್ರಮ ನಡೆಯುತ್ತಿರುವ ಬಗೆಗೆ ಈ…
ಪಾವಗಡ: ಗೊಲ್ಲರ ಆರಾಧ್ಯದೈವನಾದ ಪಾಲೇನಹಳ್ಳಿ ಶ್ರೀಚಿತ್ರಲಿಂಗೇಶ್ವರ ಸ್ವಾಮಿಯ ದೇವಸ್ಥಾನ ನಿರ್ಮಾಣದ ಶಿಲಾಸ್ತಂಭ ರಥಯಾತ್ರೆಯನ್ನು ಸುತ್ತಮುತ್ತಲಿನ ಹಳ್ಳಿಗಳಿಂದ ಗೊಲ್ಲ ಜನಾಂಗದವರು ಸಿ.ಕೆ.ಪುರ ಮತ್ತು ದೇವರಹಟ್ಟಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು. ಈ ಶಿಲಾಸ್ತಂಭ ರಥ ಯಾತ್ರೆಯ ನೇತೃತ್ವವನ್ನು ಮುಖ್ಯ ಇಂಜಿನಿಯರ್ ಸಣ್ಣ ಚಿತ್ತಪ್ಪ ವಹಿಸಿದರು. ಈ ದೇವಸ್ಥಾನವು ಸುಮಾರು ಐವತ್ತು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಇಂಜಿನಿಯರ್ ಸಣ್ಣಚಿತ್ತಪ್ಪ. ಮುಗ್ದಾಳಬೆಟ್ಟ ನರಸಿಂಹಪ್ಪ. ಕೆ.ಟಿ.ಹಳ್ಳಿ ಚಿಕ್ಕಣ್ಣ, ಕೋಟೆ ಪ್ರಭಾಕರ್. ಕೆಪಿಸಿಸಿ ಒಬಿಸಿ ಪ್ರಧಾನಕಾರ್ಯದರ್ಶಿಗಳಾದ ಮೈಲಾರರೆಡ್ಡಿ. ದೇವದಬೆಟ್ಟ ಚಿತ್ತಯ್ಯಪೂಜಾರ್, ಬೆಸ್ಕಾಂ ಯರ್ರಪ್ಪ, ಗುಂಡಾರ್ಲಹಳ್ಳಿ ಜಯಂತ್ ಇನ್ನು ಅನೇಕ ಯಾದವ ಮುಖಂಡರುಗಳು ಭಾಗವಹಿಸಿದ್ದರು. ವರದಿ: ದೇವರಹಟ್ಟಿ ನಾಗರಾಜ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು_ತುಮಕೂರು ನಗರದ ಸದಾಶಿವನಗರ ರಿಂಗ್ ರಸ್ತೆಯಲ್ಲಿ ಹಾಡುಹಗಲೇ ಪುಂಡರು ಗಂಟೆಗಟ್ಟಲೆ ಬೈಕ್ ವೀಲಿಂಗ್ ಮಾಡುತ್ತಾ ಅಟ್ಟಹಾಸ ಮೆರೆಯುತ್ತಿದ್ದು ಇಂತಹ ಪುಂಡರಿಗೆ ಸಂಬಂಧಪಟ್ಟ ಇಲಾಖೆಗಳು ಕಡಿವಾಣ ಹಾಕಬೇಕು ಎಂದು ಸಾರ್ವಜನಿಕ ವಲಯದಲ್ಲಿ ಆಗ್ರಹ ವ್ಯಕ್ತವಾಗಿದೆ. ಇನ್ನು ರಂಜಾನ್ ಹಬ್ಬದ ದಿನದಂದು ಪುಂಡರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಬೈಕ್ ವೀಲಿಂಗ್ ಮಾಡುತ್ತಿದ್ದನ್ನು ಸ್ಥಳದಲ್ಲಿದ್ದ ಸಾರ್ವಜನಿಕರೊಬ್ಬರು ಮೊಬೈಲ್ ನಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ವೈರಲ್ ಆಗಿದೆ. ಸುಮಾರು ನಾಲ್ಕು ಬೈಕ್ಗಳಲ್ಲಿ ಬಂದ ಪುಂಡರು ಮರಳೂರು ಸರ್ಕಲ್ ನಿಂದ ಸದಾಶಿವನಗರದ ಎರಡನೇ ಹಂತದ ಸರ್ಕಲ್ ವರೆಗೂ ಸತತ ಅರ್ಧಗಂಟೆಗೂ ಹೆಚ್ಚು ಕಾಲ ಬೈಕ್ ವೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದ್ದಾರೆ. ಇನ್ನು ಇದೇ ಸ್ಥಳದಲ್ಲಿ ಪೊಲೀಸರು ಸಹ ಸಂಚರಿಸಿ ಗಸ್ತು ಹಾಕುತ್ತಿದ್ದರು ಸಹ ಅಂತಹ ಪೊಲೀಸರನ್ನು ಯಾಮಾರಿಸಿ ಬೈಕ್ ವೀಲಿಂಗ್ ಮಾಡಿರುವ ಪುಂಡರು ಸರ್ವಿಸ್ ರಸ್ತೆಯಲ್ಲಿ ಪ್ರಾಕ್ಟೀಸ್ ಮಾಡುತ್ತಾ ಮುಖ್ಯರಸ್ತೆಯಲ್ಲಿ ಬೈಕ್ಗಳನ್ನು ಒಂದು ಚಕ್ರದಲ್ಲಿ ಎತ್ತಿಕೊಂಡು ಕಿಲೋಮೀಟರ್ ಗಟ್ಟಲೆ ಕರ್ಕಶವಾದ…
ತುಮಕೂರು: ಏಪ್ರಿಲ್ 30 ರಿಂದ ಮೇ 3ರವರಿಗೆ ದೆಹಲಿಯ ತ್ಯಾಗರಾಜ್ ಕ್ರೀಡಾಂಗಣದಲ್ಲಿ ಖೇಲೋ ಮಾಸ್ಟರ್ ಗೇಮ್ ನಡೆಯಿತು. ಇದರಲ್ಲಿ ತುಮಕೂರು ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದು, 2 ಬೆಳ್ಳಿ, 4ಪದಕಗಳೊಂದಿಗೆ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. *ಉದಯ್ ಕುಮಾರ್ ಚಿಕ್ಕಮರಳಿ (ದೈಹಿಕ ಶಿಕ್ಷಣ ಶಿಕ್ಷಕರು ) SBG ವಿದ್ಯಾಲಯ ಮಾಯಸಂದ್ರ ರವರು 1ಬೆಳ್ಳಿ,1 ಕಂಚಿನ *ಗಿರಿಧರ್KS ದೈಹಿಕ ಶಿಕ್ಷಣ ಶಿಕ್ಷಕರು SBg ವಿದ್ಯಾಲಯ ಮಾಯಸಂದ್ರ 1ಬೆಳ್ಳಿ * ಕಿರಣ್ ಕುಮಾರ್ YS SKBRHS ಡಿ ಕಲ್ಕೆರೆ ತುರುವೇಕೆರೆ 2ಕಂಚು * ರಕ್ಷಿತ್ CB ಸಹಶಿಕ್ಷಕರು ಶಂಕರಾನಂದ ಭಾರತಿ ವಿದ್ಯಾಪೀಠ ಕುವೆಂಪು ಪ್ರೌಢಶಾಲೆ ಕುಂತಿಬೆಟ್ಟ ಪಾಂಡುಪುರ ಮಂಡ್ಯ ಜಿಲ್ಲೆ 1ಚಿನ್ನ 3ಕಂಚು *ವೆಂಕಟೇಶ್, ವಿಶ್ವನಾಥ್, ಶ್ರೀಧರ್ಭಾಗ, ಪದಕದೊಂದಿಗೆ ತಾಲೂಕು ಮತ್ತು ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ತುಮಕೂರು:ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬಸ್ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ಬಳಿ ನಡೆದಿದೆ. ವೇಗವಾಗಿ ಬಂದ ಬಸ್, ಲಾರಿಗೆ ಡಿಕ್ಕಿ ಹೊಡೆದಿದ್ದು ನಂತರ ಬಸ್ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ಭೀಕರತೆಗೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಬಗೆದಷ್ಟು ಬಯಲಾಗ್ತಿದೆ. ಇಷ್ಟು ದಿನ ಜ್ಞಾನಜ್ಯೋತಿ ಶಾಲೆಯ ಸುತ್ತಲೂ ಗಿರಕಿ ಹೊಡೆಯುತ್ತಿದ್ದ ಸಿಐಡಿ ಅಧಿಕಾರಿಗಳು ಮತ್ತೊಂದು ರಹಸ್ಯ ಬಿಚ್ಚಿಟ್ಟಿದ್ದಾರೆ. ಕಿಂಗ್ಪಿನ್ ಆರ್ಡಿ ಪಾಟೀಲ್ ಅಕ್ರಮದ ಬಗ್ಗೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ಆತನ ಹೇಳಿಕೆ ಆಧರಿಸಿ ಹೊರಟಿದ್ದ ಸಿಐಡಿ ಅಧಿಕಾರಿಗಳು ‘ಹೂಕುಂಡಲಿ’ ರಹಸ್ಯವನ್ನು ಭೇದಿಸಿದ್ದು, ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಂತಾಗಿದೆ. ಅಕ್ರಮದ ಕೇಂದ್ರ ಬಿಂದು ಆಗಿದ್ದ ಜ್ಞಾನ ಜ್ಯೋತಿ ಶಾಲೆಯಲ್ಲಿನ ಅಕ್ರಮದ ತನಿಖೆ ನಡೆಸುವ ವೇಳೆ ಸಿಐಡಿ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದೆ. ಕಲಬುರಗಿಯ ಇನ್ನೊಂದು ಕಾಲೇಜಿನ ಅಕ್ರಮವನ್ನು ಕಿಂಗ್ಪಿನ್ ಆರ್ಡಿ ಪಾಟೀಲ್ ಬಾಯ್ಬಿಟ್ಟಿದ್ದಾನೆ. ನಗರದ MS ಇರಾನಿ ಕಾಲೇಜ್ನಲ್ಲಿ ನಡೆದ ಅಕ್ರಮದ ಬಗ್ಗೆ ಇಂಚಿಂಚೂ ಮಾಹಿತಿಯನ್ನು ಸಿಐಡಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ. ಕಿಂಗ್ಪಿನ್ ಆರ್ಡಿ ಪಾಟೀಲ್ ತನ್ನ ಅಡಿಟರ್ ಮೂಲಕ ಪರಿಚಯವಾದ ಕಲಬುರಗಿಯ ರಾಜಾಪುರ ಬಡಾವಣೆಯ ನಿವಾಸಿ ಪ್ರಭು ಅನ್ನೋ ಅಭ್ಯರ್ಥಿಗೆ ಬ್ಲೂಟೂತ್ ಮೂಲಕ ಎಂ.ಎಸ್.ಇರಾನಿ ಕಾಲೇಜ್ನಲ್ಲಿ ಪರೀಕ್ಷೆ ಬರೆಸಿರುವುದಾಗಿ ಸತ್ಯ ಕಕ್ಕಿದ್ದಾನೆ.…
ಮಧ್ಯಪ್ರದೇಶ: ಏಕಕಾಲದಲ್ಲಿಯೇ ಮೂವರು ಮಹಿಳೆಯರನ್ನು ವ್ಯಕ್ತಿಯೊಬ್ಬ ಬುಡಕಟ್ಟು ಸಂಪ್ರದಾಯದ ಪ್ರಕಾರ ಮದುವೆಯಾಗಿದ್ದಾನೆ. ಈ ಮದುವೆ ನಡೆದಿರುವುದು ಮಧ್ಯಪ್ರದೇಶದ ಭೋಪಾಲ್ನ ಮೋರಿ ಫಾಲಿಯಾ ಗ್ರಾಮದಲ್ಲಿ. ಮದುವೆಯಾದ ವ್ಯಕ್ತಿಯ ಹೆಸರು ಮೌರ್ಯ. ಈತ ಭೋಪಾಲ್ನಿಂದ ಸುಮಾರು 400ಕಿ.ಮೀ ದೂರದಲ್ಲಿರುವ ನಾನ್ಪುರ ಗ್ರಾಮದ ಮಾಜಿ ಸರ್ಪಂಚ್ ಆಗಿದ್ದ. ಒಂದೇ ಮಂಟಪದಲ್ಲಿ ನಾನಾಬಾಯಿ, ಮೇಳ ಮತ್ತು ಸಕ್ರಿ ಎಂಬ ಮೂವರು ಮಹಿಳೆಯರನ್ನು ವರಿಸಿದ್ದಾನೆ. 2003ರಲ್ಲಿ ನಾನಾಬಾಯಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮೌರ್ಯ ಬಳಿಕ ಒಟ್ಟಿಗೆ ವಾಸವಾಗಿದ್ದರು. ಇವರ ಜೊತೆ ಮತ್ತಿಬ್ಬರು ಸಹ ಕಳೆದ 15 ವರ್ಷದಿಂದ ವಾಸವಾಗಿದ್ದರಂತೆ. ಇದೀಗ ಮೌರ್ಯ ಮೂವರನ್ನು ಸಹ ಬುಡಕಟ್ಟು ಪದ್ಧತಿಯ ಪ್ರಕಾರ ಏಕಕಾಲದಲ್ಲಿ ವಿವಾಹವಾಗಿದ್ದಾನೆ. ಈ ಮದುವೆ ಸಮಾರಂಭದಲ್ಲಿ ಮೂವರು ಮಹಿಳೆಯರ ಆರು ಮಕ್ಕಳು ಸಹ ಪಾಲ್ಗೊಂಡಿದ್ದರು. ಸದ್ಯ ಮದುವೆಯ ಫೋಟೋ ಮತ್ತು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಬುಡಕಟ್ಟು ಜನಾಂಗದ ಪದ್ಧತಿಯ ಪ್ರಕಾರ ವಿಜೃಂಭಣೆಯಿಂದ ವಿವಾಹ ಕಾರ್ಯಕ್ರಮ ನಡೆದಿದೆ. ಇನ್ನು ಮದುವೆಯ ಬಗ್ಗೆ ಮೌರ್ಯ ಮಾತನಾಡಿದ್ದು, “ಈ ಸಂಬಂಧಗಳು…
ಕೇಂದ್ರ ಸರ್ಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಸ್ಥಾಪಿಸಲಾಗಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯದ ಉದ್ಘಾಟನೆಗೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ್, ಅರಗ ಜ್ಞಾನೆಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು. ಕರ್ನಾಟಕ ವಿಧಾನ ಪರಿಷತ್ತಿನ ಹಿರಿಯ ಜನತಾದಳ (ಜಾತ್ಯತೀತ) ನಾಯಕ ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾದರು. ಮುಂಬರುವ ಚುನಾವಣೆಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಎಲ್ಸಿ ಟಿಕೆಟ್ ಪಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಇದೀಗ ಪರಿಷತ್ ಟಿಕೆಟ್ ಆಕಾಂಕ್ಷಿ ಮೋಹನ್ ಲಿಂಬಿಕಾಯಿ ಅವರ ವಿರೋಧದ ನಡುವೆಯೂ ಹೊರಟ್ಟಿಗೆ ಬಿಜೆಪಿ ಟಿಕೆಟ್ ನೀಡುವುದನ್ನು ಖಚಿತಗೊಳಿಸಲಾಗಿದೆ. ಈ ವರ್ಷ ಜೂನ್ ಅಥವಾ…
ನವದೆಹಲಿ: ಒಬ್ಬ ವ್ಯಕ್ತಿ ಗುರಿ ಸಾಧಿಸಲು ನಿರ್ಧರಿಸಿದರೆ ಕಠಿಣ ಪರಿಶ್ರಮ ಪಡಲೇಬೇಕು. ಪ್ರತಿ ವರ್ಷ ಅನೇಕ ಅಭ್ಯರ್ಥಿಗಳು UPSCಯಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಅವರು ನಾಗರಿಕ ಸೇವಾ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗುತ್ತಾರೆ. ಇಂದು ನಾವು ನಿಮಗೆ ಐಎಎಸ್ ಅಧಿಕಾರಿ ನಮಿತಾ ಶರ್ಮಾರ ಯಶಸ್ವಿ ಕಥೆಯನ್ನು ಹೇಳುತ್ತಿದ್ದೇವೆ. ಯುಪಿಎಸ್ಸಿಯಲ್ಲಿ ಅವರ ಪ್ರಯಾಣ ಸಾಕಷ್ಟು ಹೋರಾಟದಿಂದ ಕೂಡಿತ್ತು. ಅನೇಕ ಬಾರಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ವೈಫಲ್ಯ ಎದುರಿಸಿದ್ರೂ ಅವರು ಎದೆಗುಂದಲಿಲ್ಲ. ಛಲಬಿಡದೆ ತಮ್ಮ ಗುರಿ ಸಾಧಿಸಿದ ಅವರ ಕಥೆ ಎಲ್ಲರಿಗೂ ಸ್ಪೂರ್ತಿಯಾಗಿದೆ. UPSC ಜರ್ನಿ ತುಂಬಾ ಸವಾಲಿನದ್ದಾಗಿತ್ತು ನಮಿತಾ ಶರ್ಮಾರ ಯುಪಿಎಸ್ಸಿ ಪ್ರಯಾಣವು ತುಂಬಾ ಸವಾಲಿನದ್ದಾಗಿತ್ತು. ಇದರಲ್ಲಿ ಅವರು ಅನೇಕ ಬಾರಿ ವಿಫಲರಾಗಬೇಕಾಯಿತು. ನಾಗರೀಕ ಸೇವೆಯಲ್ಲಿ ನಮಿತಾ 5 ಬಾರಿ ಫೇಲ್ ಆಗಿದ್ದು ಗೊತ್ತಾದ್ರೆ ಆಶ್ಚರ್ಯ ಆಗುತ್ತೆ. ಎಷ್ಟೋ ಬಾರಿ ಫೇಲ್ ಆದ ನಂತರ ಹೆಚ್ಚಿನವರು ಭರವಸೆಯನ್ನೇ ಕಳೆದುಕೊಂಡುಬಿಡುತ್ತಾರೆ. ಆದರೆ, ನಮಿತಾ ಅವರು ಐಎಎಸ್ ಅಧಿಕಾರಿಯಾಗಲೇಬೇಕೆಂದು ನಿರ್ಧರಿಸಿದ್ದರು. ಈ ಉತ್ಸಾಹವೇ ಅವರಿಗೆ ದೊಡ್ಡ ಶಕ್ತಿ ನೀಡಿತ್ತು ಮತ್ತು…
ಬೆಂಗಳೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಸ್ಥಾಪಿಸಲಾಗಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯದ ಉದ್ಘಾಟನೆಗೆಂದು ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೀಕ್ರೆಟ್ ಆಪರೇಷನ್ ಮಾಡಿದ್ದಾರೆಯೇ ಎಂಬ ಕುತೂಹಲ ಮೂಡಿದೆ. ಸಚಿವ ಅಮಿತ್ ಶಾ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ರಾಜ್ಯ ರಾಜಕೀಯದ ಕುರಿತಾಗಿ ಪೂರ್ಣ ಮಾಹಿತಿ ಪಡೆದಿದ್ದಾರಂತೆ. ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿರುದ್ಧ ನಕಾರಾತ್ಮಕವಾಗಿ ಅಭಿಪ್ರಾಯಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಗಂಭೀರ ಕ್ರಮ ಕೈಗೊಂಡಿರುವ ಶಾ ಅವರು ಸೀಕ್ರೆಟ್ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ ದಿನ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ಬದಲಾವಣೆ ಬಗ್ಗೆ ಚರ್ಚೆ ನಡೆಸಿರುವ ಸಾಧ್ಯತೆ ಇದೆ. ಇನ್ನು ಇದರ ಸಂಪೂರ್ಣ ನಿಯಂತ್ರಣ ಪ್ರಧಾನಿ ನರೇಂದ್ರ ಮೋದಿಯವರ ಕೈಯಲ್ಲಿದೆ ಎನ್ನಲಾಗಿದೆ. ಪ್ರಧಾನಿಗಳ ತೀರ್ಮಾನದ ಮೇಲೆ ಸಂಪುಟ ಬದಲಾವಣೆ ವಿಚಾರ ನಿಂತಿದೆ.…