Author: admin

ತುಮಕೂರು: ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಅವರು ಕ್ಷೇತ್ರದ ತುಯಾಲಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡು ಹಾಡುವ ಮೂಲಕ ಸಾರ್ವಜನಿಕರನ್ನು ರಂಜಿಸಿದ್ದಾರೆ. ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಅವರು ಶಿವಪ್ಪ ಕಾಯೋ ತಂದೆ ಮೂರು ಲೋಕ ಸ್ವಾಮಿ ದೇವ ಎನ್ನುವ ಹಾಡು ಮತ್ತು ಇದು ಸೋಮನ ಅವತಾರ ರಾಮನ ಅವತಾರ ಎನ್ನುವ ಹಾಡುಗಳನ್ನು ಹಾಡುತ್ತ ನೆರೆದಿದ್ದ ಸಾರ್ವಜನಿಕರನ್ನು ರಂಜಿಸಿದರು. ಗುಬ್ಬಿ ತಾಲೂಕಿನ ಹಿಂಡಿಸಿಗೆರೆ ಗ್ರಾಮದಲ್ಲಿ ನಡೆದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಸಹ ಶಾಸಕರ ಮಸಾಲ ಜಯರಾಮ್ ಬಡ್ಡಿ ಹಾಡುವ ಮೂಲಕವೇ ವಿಶೇಷವಾಗಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಇನ್ನೂ ಶಾಸಕರ ಹಾಡಿರುವ ಹಾವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ವರದಿ: ಮಾರುತಿ ಪ್ರಸಾದ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ಪರಿಹಾರವನ್ನು ನೀಡುವುದಾಗಿ ಹೇಳಲಾಗಿದೆ. ಈ ಮೂಲಕ ಮೃತ ಕುಟುಂಬಗಳಿಗೆ ಪರಿಹಾರವೂ ಸಿಗುತ್ತಿದೆ. ಆದ್ರೆ, ಕೆಲ ಜನ ಹಣದ ಆಸೆಗೆ ಸುಳ್ಳು ಮಾಹಿತಿ ನೀಡಲು ಪ್ರಾರಂಭಿಸಿದ್ದಾರೆ. ಇಂತಹ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರದ ಅನುಮತಿ ಸಿಕ್ಕಿದೆ ಕೊರೋನಾ ಮರಣ ಪರಿಹಾರವನ್ನು ಪಡೆಯಲು ಸುಳ್ಳು ದೂರುಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ. ಇದರ ಅಡಿಯಲ್ಲಿ, ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಸಲ್ಲಿಸಲಾದ 5% ಕ್ಲೈಮ್‌ಗಳನ್ನು ಪರಿಶೀಲಿಸಲಾಗುತ್ತದೆ. 60 ದಿನಗಳಲ್ಲಿ ಕ್ಲೈಮ್ ಮಾಡಿ ಕೊರೋನಾ ಮೃತ ಪಟ್ಟವರ ಪರಿಹಾರವನ್ನು ಪಡೆಯಲು ಸುಪ್ರೀಂ ಕೋರ್ಟ್ ಮಾರ್ಚ್ 28 ರವರೆಗೆ 60 ದಿನಗಳನ್ನು ನಿಗದಿಪಡಿಸಿದೆ. ಭವಿಷ್ಯದ ಸಾವಿಗೆ ಪರಿಹಾರವನ್ನು ಪಡೆಯಲು, 90 ದಿನಗಳಲ್ಲಿ ಕ್ಲೈಮ್ ಮಾಡಬೇಕಾಗಿದೆ. 4 ರಾಜ್ಯಗಳಲ್ಲಿ ತನಿಖೆ ನಡೆಸಲಾಗುವುದು ಸುಪ್ರೀಂ ಕೋರ್ಟ್‌ನ ಅನುಮತಿಯ ನಂತರ, ಕೇಂದ್ರ ಸರ್ಕಾರವು 4 ರಾಜ್ಯಗಳಲ್ಲಿ…

Read More

ಐಪಿಎಲ್ 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಮಾರ್ಚ್ 26 ರಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಮೊದಲ  ಪಂದ್ಯ ನಡೆಯಲಿದೆ. T20 ಕ್ರಿಕೆಟ್ ಅನ್ನು ಸಾಮಾನ್ಯವಾಗಿ ಬ್ಯಾಟ್ಸ್‌ಮನ್ ಆಟ ಎಂದು ಕರೆಯಲಾಗುತ್ತದೆ, ಆದರೆ ವರ್ಷಗಳಲ್ಲಿ, ಬೌಲರ್‌ಗಳು ಯಾವುದೇ ತಂಡವನ್ನು ಗೆಲ್ಲಲು ಉತ್ತಮ ಬೌಲಿಂಗ್ ಎಷ್ಟು ಮುಖ್ಯ ಎಂಬುದನ್ನು ತೋರಿಸಿದ್ದಾರೆ. ಇಂದು ನಾವು ಐಪಿಎಲ್‌ನ 5 ಅತ್ಯಂತ ಅಪಾಯಕಾರಿ ಬೌಲರ್‌ಗಳ ಬಗ್ಗೆ ಸಂಪೂರ್ಣ ಮಾಹಿತಿ ನಿಮಗಾಗಿ ತಂದಿದ್ದೇವೆ. 1. ಆನ್ರಿಚ್ ನಾರ್ಟ್ಜೆ ದಕ್ಷಿಣ ಆಫ್ರಿಕಾದ ಸ್ಟಾರ್ ವೇಗದ ಬೌಲರ್ ಆನ್ರಿಚ್ ನಾರ್ಟ್ಜೆ ಕೆಲವೇ ವರ್ಷಗಳಲ್ಲಿ ಐಪಿಎಲ್‌(IPL)ನಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ. ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿದ ನಂತರ ಆನ್ರಿಚ್ ನಾರ್ಟ್ಜೆ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಆನ್ರಿಚ್ ನಾರ್ಟ್ಜೆ ಬಗ್ಗೆ ಪ್ರಮುಖ ವಿಷಯವೆಂದರೆ ಡೆತ್ ಓವರ್‌ಗಳಲ್ಲಿ ಅತ್ಯಂತ ಅಪಾಯಕಾರಿ ಬೌಲಿಂಗ್ ಮಾಡುವುದು. ಆನ್ರಿಚ್ ನಾರ್ಟ್ಜೆ ಡೆತ್ ಓವರ್‌ಗಳಲ್ಲಿ ರನ್‌ಗಳನ್ನು ನಿಲ್ಲಿಸುವ ಕಲೆಯನ್ನು ಹೊಂದಿದ್ದಾರೆ. ಅಲ್ಲದೆ,…

Read More

ಮೆಜೆಸ್ಟಿಕ್ ನ ತ್ರಿವೇಣಿ ಥಿಯೇಟರ್ ಹಾಗೂ ಅನುಪಮಾ ಥಿಯೇಟರ್‌ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ  ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಥಿಯೇಟರ್ ಗಳಲ್ಲಿ ಪುನೀತ್ ಅಭಿನಯದ ಜೇಮ್ಸ್ ಎತ್ತಂಗಡಿ ಮಾಡಿ RRR ಸಿನಿಮಾ ಹಾಕಿದ್ರೇ ಥಿಯೇಟರ್ ಗೆ ನುಗ್ಗಿ ಪ್ರತಿಭಟನೆ ಮಾಡ್ತೀವಿ ಎಂಬ ಎಚ್ಚರಿಕೆ ನೀಡಿದರು. ಅಲ್ಲದೆ ಅನುಪಮಾ ಥಿಯೇಟರ್ ಮುಂಭಾಗ ಇದ್ದ ಪೋಸ್ಟರ್ ಕಿತ್ತುಹಾಕಿ ಆಕ್ರೋಶ ಹೊರಹಾಕಿದರು.ಪುನೀತ್ ಅಭಿನಯದ ‘ಜೇಮ್ಸ್’  ಬಿಡುಗಡೆಯಾದ ಒಂದೇ ವಾರದಲ್ಲಿ 450 ಸ್ಕ್ರೀನ್‌ ಗಳಿಂದ 150 ಕ್ಕೆ ಇಳಿಸುವುದನ್ನು ಒಪ್ಪಲು ಸಾಧ್ಯವಿಲ್ಲ. ಪುನೀತ್ ಸಿನಿಮಾವನ್ನು ಅಭಿಮಾನಿಗಳು ನೋಡುತ್ತಿದ್ದಾರೆ. ಉತ್ತಮ ಕಲೆಕ್ಷನ್ ಆಗುತ್ತಿದೆ. ಅಲ್ಲದೆ ಡಾ. ಪುನೀತ್ ರಾಜ್ ಕುಮಾರ್  ಅವರ ಕಡೇಯ ಸಿನಿಮಾವನ್ನು ಅಭಿಮಾನಿಗಳಿಗೆ ನೋಡಲು ಅವಕಾಶ ಕೊಡಬೇಕೆಂದು ಆಗ್ರಹಿಸಿದರು. ತ್ರಿವೇಣಿ ಥಿಯೇಟರ್ ಮಾಲೀಕ ಅನಂತ್, ಜೇಮ್ಸ್  ಸಿನಿಮಾ ತೆಗೆಯಲ್ಲ RRR ಸಿನಿಮಾ ಪ್ರದರ್ಶಿಸುವುದಿಲ್ಲ, ಜೇಮ್ಸ್ ಐವತ್ತು ದಿನಗಳ ಕಾಲ ಪ್ರದರ್ಶನ ಮುಂದುವರಿಸುತ್ತೇವೆ ಎಂದು ಭರವಸೆ ಕೊಟ್ಟ ಬಳಿಕ ಪ್ರತಿಭಟನೆ (Protest) ಕೈಬಿಟ್ಟರು. ಅನುಪಮಾ…

Read More

ಆಸ್ಪತ್ರೆಯಲ್ಲಿ ಐವರು ವ್ಯಕ್ತಿಗಳು ಖಾರದ ಪುಡಿ ಎರಚಿ ಮಾರಾಮಾರಿ ಮಾಡಿಕೊಂಡ ಘಟನೆ ನಗರದ ಬ್ರಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ನಡೆದಿದೆ. ದಾಳಿಯಲ್ಲಿ ನಾಲ್ವರಿಗೆ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಹಲ್ಲೆಗೆ ಒಳಗಾಗದವರು ರೌಫ್, ಫಿರೋಜ್ ಖಾನ್, ಅಫಸರ್ ಖಾನ್, ಅರಬಾಜ್ ಖಾನ್, ಅಜ್ಜು ಗಂಭಿರ ಗಾಯಗೊಂಡ ವ್ಯಕ್ತಿ. ಹೆಚ್ಚಿನ ಚಿಕಿತ್ಸೆ ಗಾಗಿ ಮಹ್ಮದ್ ರೌಭ್ ಹೈದರಾಬಾದ್ ಗೆ ರವಾನೆ ಮಾಡಲಾಗಿದೆ. ಪ್ರಕರಣ ಕುರಿತಂತೆ ನ್ಯೂ ಟೌನ್ ಹಾಗೂ ಟೌನ್ ಪೋಲಿಸ್ ಠಾಣೆಯಲ್ಲಿ ಸೆಕ್ಷನ್ಬ 307,353 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರಾಮಾರಿಗೆ ಕಾರಣ : ಕಳೆದ ವರ್ಷ ಕಾಂಗ್ರೆಸ್ ಪಕ್ಷದ ಮುಖಂಡನ ಪುತ್ರ ಹಾಗೂ ರೌಫ್ ಮಧ್ಯ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದಿತ್ತು. ನಗರದ ಮನಿಯಾರ ತಾಲಿಮ್ ನಲ್ಲಿ ರೌಫ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡನ ಮಕ್ಕಳ ಮಧ್ಯ ಮಾರಾಮಾರಿ ನಡೆದಿತ್ತು.ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ರೌಫ್ ಮತ್ತು ಕೈ ಮುಖಂಡ ಹಾಗೂ ಮಕ್ಕಳಿಂದ ರೌಫ್ ಮೇಲೆ ಹಲ್ಲೆ ಮಾಡಿದ್ದಾರೆ.…

Read More

ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾ ರುಣವಾಗಿ ಮೃತಪಟ್ಟಿದ್ದಾರೆ  ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ಅವಘಡ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟಿದ್ದಾರೆ . ಮೃತರನ್ನು 43 ವರ್ಷದ ನಾಗರಾಜ್, 37 ವರ್ಷದ ಶೈಲಜ, 9 ವರ್ಷದ ವೀರೇಶ್, 7 ವರ್ಷದ ಸಂತೋಷ್ ಎಂದು ಗುರುತಿಸಲಾಗಿದೆ. ಮೃತರು ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದ ಬಂಧುಗಳ ಮನೆಯಲ್ಲಿ ಊಟ ಮುಗಿಸಿಕೊಂಡು ರಾತ್ರಿ ಹನ್ನೊಂದುವರೆ ಸಮಯದಲ್ಲಿ ಸ್ವ ಗ್ರಾಮ ಬಿದುರ್ಗ ಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ . ಚಿತ್ರದುರ್ಗದ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಸ್ ಒವರ್ ಟೇಕ್ ಮಾಡಿ ಮುನ್ನುಗ್ಗುತ್ತಿದ್ದ ವೇಳೆ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ…

Read More

ಸರಗೂರು: ಸಂಸದರ ನಿಧಿಯಿಂದ 50ಲಕ್ಷ ರೂ. ವೆಚ್ಚದಲ್ಲಿ ಅತ್ಯಾವಶ್ಯಕತೆ ಇರುವ ಆಂಬ್ಯುಲೆನ್ಸ್ ಗಳನ್ನು ನೀಡಲಾಗುತ್ತಿದ್ದು, ಕಾಡಂಚಿನ ಭಾಗದ ವಾಹನ ಸಮಸ್ಯೆಗಳನ್ನು ಗಮನಿಸಿ ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಇಲ್ಲಿನ ಎನ್.ಬೇಗೂರು ಭಾಗಕ್ಕೂ ಪ್ರತ್ಯೇಕ ಆಂಬ್ಯುಲೆನ್ಸ್  ನೀಡಲಾಗುವುದು ಎಂದು ಸಂಸದ ವಿ.ಶ್ರೀನಿವಾಸ್‍ಪ್ರಸಾದ್ ಭರವಸೆ ನೀಡಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬುಧವಾರ ಸರಗೂರು ತಾಲ್ಲೂಕಿನ ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಸದರ ನಿಧಿಯಿಂದ ನೀಡಲಾದ ಆಂಬ್ಯುಲೆನ್ಸ್‍ ಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಈ ಭಾಗದಲ್ಲಿ ವೈದ್ಯರು, ವಿಶೇಷವಾಗಿ ಹೆರಿಗೆ ವೈದ್ಯರು, ತಜ್ಞರುಗಳ ಕೊರತೆ ಇದೆ ಎಂಬುದರ ಬಗ್ಗೆ ಮಾಹಿತಿ ಇದೆ.  ಇದರ ಬಗ್ಗೆ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದರು. ನಾನು ಕಂದಾಯ ಮಂತ್ರಿಯಾಗಿದ್ದಾಗ ಸರಗೂರು ನೂತನ ತಾಲ್ಲೂಕ್ಕಾಗಿ ಮಾಡಲು ನೀಡಿದ ಸಲಹೆಯೇ ಬೇರೆ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಾನು ಬಿಟ್ಟು ಹೋದಮೇಲೆ ಮಾಡಿದ ತಾಲ್ಲೂಕೇ ಬೇರೆ. ಸರಗೂರು ತಾಲ್ಲೂಕು…

Read More

ಪಾವಗಡ: ವಿಧಾನ ಪರಿಷತ್ ಸದಸ್ಯರಾದ ಆರ್.ರಾಜೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಇತ್ತೀಚಿಗೆ ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಮೇಲೆ ನಡೆದ ಖಾಸಗಿ ಬಸ್ ಅಪಘಾತ ದುರಂತಕ್ಕೆ ತುತ್ತಾಗಿರುವ ಗಾಯಾಳುಗಳು ಹಾಗೂ ಮೃತಪಟ್ಟಿರುವ ಕುಟುಂಬಗಳಿಗೆ ಸಹಾಯ ಧನ ನೀಡಲಾಯಿತು. ಹಾಗೆ ಮೃತರ ಭಾವ ಚಿತ್ರ ಅಥವಾ ಫೋಟೊಗಳು ಅವರವರ  ಮನೆಗೆ ನೀಡಲಾಯಿತು.  ಈ ಸಂದರ್ಭದಲ್ಲಿ ಮೈಲಾರರೆಡ್ಡಿ, KNR ಅಭಿಮಾನಿ ಬಳಗದ ಅಧ್ಯಕ್ಷರಾದ ಶ್ರೀನಿವಾಸ್, PLD ಬ್ಯಾಂಕ್ ಮಾಜಿ ಅಧ್ಯಕ್ಷರಾದ  ಸೀತಾರಾಮಪ್ಪ,  ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅನಿಲ್ ಯಾದವ್ ಮತ್ತಿತರರಿದ್ದರು. ವರದಿ: ನಾಗರಾಜ ದೇವರಹಟ್ಟಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತಿಪಟೂರು:  ಇಲ್ಲಿನ  ಕುಪ್ಪೂರು ತಮ್ಮಡಿಹಳ್ಳಿಯ ವಿರಕ್ತ ಮಠದ ಶಾಖಾಮಠ ಭಕ್ತರ ಅಪೇಕ್ಷೆಯ ಮೇರೆಗೆ ಮಾರ್ಚ್ 27ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ತಮ್ಮಡಿಹಳ್ಳಿ ವಿರಕ್ತ ಮಠದ ಡಾ. ಅಭಿನವ ಮಲ್ಲಿಕಾರ್ಜುನ ದೇಶಿಯ ಕೇಂದ್ರ ಮಹಾಸ್ವಾಮಿಗಳು ತಿಳಿಸಿದರು. ತಿಪಟೂರಿನಲ್ಲಿ ಸುದ್ದಿಗೋಷ್ಠಿಯ ಲಿ ಮಾತನಾಡಿದ ಶ್ರೀಗಳು,  ಶಾಖಾ ಮಠವನ್ನು ಕೆರೆಗೋಡಿ ರಂಗಾಪುರ ಗುರುಪರದೇಶಿಕೇಂದ್ರ ಸ್ವಾಮೀಜಿ ಅಮೃತ ಹಸ್ತದಿಂದ ಲೋಕಾರ್ಪಣೆಗೊಳ್ಳುತ್ತಿದೆ. ಅಭಿನವ ಸದನ ಕಟ್ಟಡದ ಉದ್ಘಾಟನೆಯು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸಚಿವರುಗಳಾದ ಜೆ.ಸಿ. ಮಧುಸ್ವಾಮಿ ಬಿ.ಸಿ. ನಾಗೇಶ್ ಸಂಸದ ಜಿ.ಎಸ್. ಬಸವರಾಜು ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ  ಎಂದರು. ತಿಪಟೂರಿನಲ್ಲಿ ಹತ್ತು ವರ್ಷದ ಹಿಂದೆ ಸಹಕಾರಿ ಬ್ಯಾಂಕ್ ಪ್ರಾರಂಭಿಸಿದ್ದು,  ಭಕ್ತರ ಒತ್ತಾಸೆಯ ಮೇರೆಗೆ ಶಾಖಾ ಮಠವನ್ನು ಪ್ರಾರಂಭಿಸಬೇಕೆಂದು ಪ್ರೇರಣೆ ಯಾಗಿದ್ದರಿಂದ ಶಾಖಾ ಮಠವನ್ನು ಪ್ರಾರಂಭಿಸುತ್ತಿದ್ದು, ಪ್ರತಿ ತಿಂಗಳು ಹುಣ್ಣಿಮೆಯ ದಿನ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು ಅಂದು ಮತ್ತು ಪ್ರತಿ ಭಾನುವಾರ ಸದನದಲ್ಲಿ ಉಪಸ್ಥಿತರಿದ್ದರು ಆಶೀರ್ವಾದ ನೀಡಲಿದ್ದಾರೆ ಎಂದು ತಿಳಿಸಿದರು. ಈ ಸಭೆಯಲ್ಲಿ ಸದಾಶಿವಯ್ಯ ಹಾಗೂ ಮುಖಂಡರು ಭಾಗವಹಿಸಿದ್ದರು. ವರದಿ: ಆನಂದ ತಿಪಟೂರು…

Read More

ಹಿಜಾಬ್ ವಿವಾದದಿಂದ ಹೊತ್ತಿಕೊಂಡ ಕಿಚ್ಚು ಮಲೆನಾಡು, ಕರಾವಳಿ, ದಕ್ಷಿಣ ಕನ್ನಡ ಭಾಗಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಸುವ ಹಂತ ತಲುಪಿದ್ದು, ಈಗ ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿದೆ. ಮುಸ್ಲಿಮರ ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿ ಮಾಡಲು ನಿಷೇಧ ಹೇರಬೇಕು. ಹಲಾಲ್ ವಸ್ತುಗಳ ಖರೀದಿಗೆ ಬ್ರೇಕ್ ಹಾಕಲು ಹಿಂದೂಪರ ಸಂಘಟನೆಗಳು ಚಿಂತನೆ ನಡೆಸಿವೆ ಎಂದು ತಿಳಿದುಬಂದಿದೆ. ಈಗಾಗಲೇ ರಾಜ್ಯದ ಹಲವು ಅಂಗಡಿಗಳಲ್ಲಿ ಖರೀದಿಗೆ ನಿಷೇಧ ಹೇರಲಾಗಿದ್ದು, ರಾಜಧಾನಿಯಲ್ಲೂ ಕೂಡ ನಿಷೇಧ ಹೇರಬೇಕೆಂಬ ಮಾತುಗಳು ಕೇಳಿಬಂದಿವೆ. ಜಾತ್ರೆ, ಮಹೋತ್ಸವ ರಥೋತ್ಸವ ಸಮಾರಂಭಗಳಲ್ಲಿ ಮುಸ್ಲಿಂ ಅಂಗಡಿಗಳಿಗೆ ನಿಷೇಧ ಹೇರಲಾಗಿದೆ. ಅದೇ ರೀತಿ ಯಾವುದೇ ಕಾರಣಕ್ಕೂ ವಸ್ತುಗಳನ್ನು ಖರೀದಿ ಮಾಡಬಾರದು ಎಂದು ಹಿಂದೂಪರ ಸಂಘಟನೆಗಳು ಕರೆ ನೀಡಲು ಮುಂದಾಗಿವೆ.ಬೆಂಗಳೂರಿನ ಬಹುತೇಕ ಮಾಲ್, ಅಂಗಡಿ, ಮಳಿಗೆಗಳಲ್ಲಿ ಈ ವರ್ಗದ ಸಿಂಬಲ್ ಇರುವ ವಸ್ತುಗಳ ಖರೀದಿ ಮಾಡಬಾರದು ಎಂದು ನಿರ್ಧರಿಸಲಾಗಿದೆ. ಈಗ ಮುಸ್ಲಿಮರು ಹಲಾಲ್ ಅಂತ ಹೊಟೇಲ್ ಮುಂದೆ ಬೋರ್ಡ್ ಇದ್ದರೆ ಮಾತ್ರ ಹೊಟೇಲ್‍ಗಳಿಗೆ ಹೋಗುತ್ತಾರೆ, ಇಲ್ಲದಿದ್ದರೆ ಹೋಗುವುದಿಲ್ಲ. ಅಂತಹ ಹೊಟೇಲ್‍ಗಳಿಗೆ ಹಿಂದೂಗಳು…

Read More