Author: admin

ತಿಪಟೂರು: ಸ್ಥಗಿತಗೊಂಡಿರುವ ರಾಗಿ ಖರೀದಿಯ ಪ್ರಕ್ರಿಯೆಯನ್ನು ಪುನರಾರಂಭಿಸುವಂತೆ ಹಾಗೂ ಸಣ್ಣ ಹಿಡುವಳಿದಾರರು ಹಾಗೂ ದೊಡ್ಡ ಹಿಡುವಳಿ  ರೈತರು ಬೇಳೆದಿರುವ ರಾಗಿಯನ್ನು ಕೇಂದ್ರ ಸರ್ಕಾರವು ನೋಪೆಡ್ ಮೂಲಕ  ಖರೀದಿ ಮಾಡಲು ಭಾರತೀಯ ಕಿಸಾನ್ ಸಂಘದ ತುಮಕೂರು ಜಿಲ್ಲಾ ಸಹಕಾರ್ಯದರ್ಶಿ ಮನೋಹರ್ ರಂಗಾಪುರ ಅವರು ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಸಂಘಟನಾ ಮಂತ್ರಿ  ದಿನೇಶ್ ಕುಲಕರ್ಣಿ ಅವರಿಗೆ ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಮನವಿ ಮಾಡಿದರು. ಕರ್ನಾಟಕ ರಾಜ್ಯದ ಸುಮಾರು ಹತ್ತರಿಂದ ಹನ್ನೆರಡು ಜಿಲ್ಲೆಯಲ್ಲಿ ರಾಗಿ ಬೆಳೆಯನ್ನು ಬೆಳೆಯುತ್ತಿದ್ದು ಇತ್ತೀಚಿನ ಅತಿವೃಷ್ಟಿಯಿಂದಾಗಿ ಬೆಳೆಯು ನಾಶವಾಗಿದ್ದು ತುಂಬಾ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹಾಗೂ ಈಗ ಖರೀದಿ ಪ್ರಕ್ರಿಯೆ ಮತ್ತು ನೋಂದಾಣಿ ಪ್ರಕ್ರಿಯೆಯನ್ನು ಸ್ಥಗಿತಗೊಂಡಿರುವುದರಿಂದ  ರೈತರು ತುಂಬಾ ಸಂಕಷ್ಟಕ್ಕೆ ಒಳಗಾಗಿದ್ದಾರೆ.  ಎಂದು ತಿಳಿಸಲಾಯಿತು .   ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಸಂಘಟನಾ ಮಂತ್ರಿ ದಿನೇಶ್ ಕುಲಕರ್ಣಿ ಮಾತನಾಡಿ, ಅತಿ ಶೀಘ್ರದಲ್ಲಿ ಭಾರತ ಸರ್ಕಾರದ ಕೃಷಿ ಮಂತ್ರಾಲಯಕ್ಕೆ ಮನವಿ ಸಲ್ಲಿಸಿ ನೋಂದಣಿ ಪ್ರಕ್ರಿಯೆ ಮತ್ತು ರಾಗಿ ಖರೀದಿಗೆ ಅವಕಾಶ ನೀಡುವಂತೆ ಮನವಿ…

Read More

ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಮತದಾನಕ್ಕೆ ಮುನ್ನ ಕೊನೆಯ ದಿನ ಪ್ರಚಾರ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತದಾರರಿಗೆ ತಲಾಕ್, ತಲಾಖ್, ತಲಾಖ್ ಎಂದು ಹೇಳುವಂತೆ ಮನವಿ ಮಾಡಿದರು. ಎಸ್‌ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ ಅಸಾದುದ್ದೀನ್ ಓವೈಸಿ, ‘ಎಸ್‌ ಪಿ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಯೋಗಿ-ಅಖಿಲೇಶ್ ಬೇರ್ಪಟ್ಟ ಸಹೋದರರು ಎಂದು ತೋರುತ್ತದೆ. ಇಬ್ಬರ ಮನಸ್ಥಿತಿಯೂ ಒಂದೇ. ಇಬ್ಬರೂ ಕ್ರೂರ ಮತ್ತು ದುರಹಂಕಾರಿಗಳು. ಅವರು ತಮ್ಮನ್ನು ತಾವು ನಾಯಕರೆಂದು ಪರಿಗಣಿಸುವುದಿಲ್ಲ, ಚಕ್ರವರ್ತಿಗಳೆಂದು ಪರಿಗಣಿಸಿದ್ದಾರೆ” ಎಂದು ಓವೈಸಿ ಹೇಳಿರುವುದಾಗಿ ಪಿಟಿಐ ಉಲ್ಲೇಖಿಸಿದೆ. ತಮ್ಮ ಚುನಾವಣಾ ರ್ಯಾಲಿಗಳಲ್ಲಿ ತ್ರಿವಳಿ ತಲಾಖ್ ನಿಷೇಧದ ಬಗ್ಗೆ ಮಾತನಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ‘ಮೋದಿ ತ್ರಿವಳಿ…

Read More

ಕನ್ನಡ ಚಿತ್ರರಂಗದ ಹಿರಿಯ ನಟ, ‘ಕಲಾ ತಪಸ್ವಿ’ ರಾಜೇಶ್(Kalatapasvi Rajesh) ಶನಿವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಇಂದು ಮುಂಜಾನೆ 2.30ಕ್ಕೆ ರಾಜೇಶ್ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. 89 ವರ್ಷದ ಹಿರಿಯ ನಟ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಇಂದು ಸಂಜೆ 6 ಗಂಟೆವರೆಗೂ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ರಾಜೇಶ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ರಾಜೇಶ್(Kannada senior actor Rajesh) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ಮಾರುಕಟ್ಟೆಗಳಲ್ಲಿ ರಾಶಿ ಅಡಿಕೆ ಧಾರಣೆಯಲ್ಲಿ ಶನಿವಾರ ಏರಿಳಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 51,509 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(18-04-2022)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ. ತಾಲೂಕು ಅಡಿಕೆ ಗರಿಷ್ಠ ಬೆಲೆ (ಫೆಬ್ರವರಿ 18, 2022) ಕೊಪ್ಪ (ಚಿಕ್ಕಮಗಳೂರು ಜಿಲ್ಲೆ) ರಾಶಿ ಅಡಿಕೆ 45,899 ರೂ. ಚನ್ನಗಿರಿ (ದಾವಣಗೆರೆ ಜಿಲ್ಲೆ) ರಾಶಿ ಅಡಿಕೆ 46,500 ರೂ. ದಾವಣಗೆರೆ (ದಾವಣಗೆರೆ ಜಿಲ್ಲೆ) ರಾಶಿ ಅಡಿಕೆ 46,329…

Read More

ರಷ್ಯಾ ಮತ್ತು ಉಕ್ರೇನ್ ನಡುವಿನ ಉದ್ವಿಗ್ನತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿಸಿದೆ. ಪಾಕಿಸ್ತಾನ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಪೆಟ್ರೋಲ್ ಬೆಲೆ ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಆದರೆ, ಭಾರತದಲ್ಲಿ ವಾಹನ ಇಂಧನ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ ಗೆ 93 ಡಾಲರ್‌ ದಾಟಿದೆ. ಆದರೆ ಮೂರು ತಿಂಗಳಿನಿಂದ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ತಜ್ಞರ ಪ್ರಕಾರ, ಭಾರತೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ಥಿರತೆ ಹೆಚ್ಚು ಕಾಲ ಉಳಿಯುವುದಿಲ್ಲ. ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಜಿಗಿತ ಕಂಡುಬರುವ ಸಾಧ್ಯತೆಯಿದೆ. ಮಾರ್ಚ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುವ ನಿರೀಕ್ಷೆಯಿದೆ.ಭಾರತೀಯ ಪೆಟ್ರೋಲಿಯಂ…

Read More

ಪಾವಗಡ: ತಾಲ್ಲೂಕಿನ ಚೆನ್ನಕೇಶವಪುರದ ಚೆನ್ನಕೇಶವ ಸ್ವಾಮಿ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು  ಹಾಗೂ ಕುಕ್ಕೆ ಸುಬ್ರಮಣ್ಯ ಮಠಾಧೀಶರಾದ  ಪರಮ ಪೂಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಚೆನ್ನಕೇಶವ ಸ್ವಾಮಿಯ ಹಾಗೂ ಆಂಜನೇಯ ಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಿದಂತಹ ವ್ಯಾಸರಾಜ ಗುರುಗಳ ಬಗ್ಗೆ ಸ್ವಾಮೀಜಿಗಳು ಮಾತನಾಡಿದರು. ಇದೇ ವೇಳೆ  ಶ್ರೀಪ್ರಾಣ ದೇವರಾದ ಆಂಜನೇಯ ಸ್ವಾಮಿಯ  ದರ್ಶನ ಪಡೆದು, ದೇವರ ಪವಾಡಗಳನ್ನು ಹಾಗೂ  ಮಹಿಮೆಗಳನ್ನು ತಿಳಿದುಕೊಂಡು  ಸಂತೋಷ ಪಟರು. ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯಸ್ತರಾದ  ಗೋಪಾಲ್ ರಾವ್ ಹಾಗೂ ಸಿ.ಎನ್ ಆನಂದ್ ರಾವ್, ನಾಗರಾಜು ಸ್ವಾಮಿ,  ಅಜಯ್ ನಾಗೇಶ್,  ಬಿಂದು ಮಾಧವ್ ರಾವ್, ಉಭಯ ಶ್ರೀ ಗಳನ್ನು ಭಕ್ತಿಯಿಂದ ದೇವಸ್ಥಾನದ ಸಂಪ್ರದಾಯದಂತೆ ಸ್ವಾಗತಿಸಿ ದೇವರ ದರುಶನವನ್ನು ಮಾಡಿಸಿ ಗೌರವಿಸಿದರು. ವರದಿ: ದೇವರಹಟ್ಟಿ ನಾಗರಾಜು, ಕಸಬಾ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ, ದಬ್ಬೆಘಟ್ಟ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾoಕ್ಷೆಯ ” ಗ್ರಾಮ್ ಒನ್” ಕೇಂದ್ರವನ್ನು ಉದ್ಘಾಟಿಸಲಾಯಿತು. ನಾಡಕಚೇರಿಯಲ್ಲಿ ಸಿಗಬಹುದಾದ ಎಲ್ಲಾ ಮೂಲಭೂತ ಸೌಕರ್ಯಗಳ ಅರ್ಜಿಯನ್ನು ಇಲ್ಲಿ ಸಲ್ಲಿಸ ಬಹುದಾಗಿದೆ. ಜನರು ನಾಡಕಚೇರಿಯಲ್ಲಿ, ಅಥವಾ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಸರತಿಯ ಸಾಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿ ಇನ್ನು ಮುಂದೆ ಇರುವುದಿಲ್ಲ. ಈ ಸೇವೆಯನ್ನು ಉದ್ಘಾಟಿಸಿದ ಮಾತನಾಡಿದ ಪ್ರಕಾಶ್, ಸರ್ಕಾರಿ ಕೆಲಸದ ದಿನಗಳಲ್ಲಿ ನಿರಂತರವಾಗಿ ನಾವು ಸೇವೆಯನ್ನು ಒದಗಿಸಲು ಬದ್ಧರಾಗಿದ್ದು, ಸರ್ಕಾರದ ಮಹತ್ವಾಕಾoಕ್ಷೆಯ ಸೇವೆಯನ್ನು ಸರ್ಕಾರದ ನಿಯಮಮಾವಳಿಗಳ ಮೂಲಕ ಸರ್ಕಾರಿ ನಿಗದಿತ ಶುಲ್ಕವನ್ನು ಪಡೆದು ಸೇವೆಯನ್ನು ಒದಗಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಅವರ ತಂದೆ ನಂಜಪ್ಪ,ತಾಯಿ ರoಗಮ್ಮ ಪಟೇಲ್ ನಾಗರಾಜ್ , ದಲಿತ ಸಂಚಾಲಕರಾದ ಬಿ.ಪುರ ತಮ್ಮಯ್ಯ , ಶಿವರಾಂ ಎಲೆಕೊಪ್ಪಇತರರು ಹಾಜರಿದ್ದರು. ವರದಿ: ಸುರೇಶ್ ಬಾಬು ಎಂ., ತುರುವೇಕೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರಸಭೆಯಲ್ಲಿ ಶುಕ್ರವಾರ ನಡೆದ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಿ.ಸುಧಾಕರ್ ರವರ ನೇತೃತ್ವದಲ್ಲಿ ಜೆ.ಆರ್. ಅಜಯ್ ಕುಮಾರ್ ರವರು ಅವಿರೋಧವಾಗಿ ಆಯ್ಕೆಯಾದರು . ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ನೂತನವಾಗಿ ಆಯ್ಕೆಯಾಗಿರುವ ಅಜಯ್ ಕುಮಾರ್ ರವರಿಗೆ ಶುಭಾಶಯ ತಿಳಿಸಿದರು . ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಎಲ್ಲಾರಿಗೂ ಸಿಹಿ ಹಂಚಿ ನಗರಸಭೆ ಮುಂದೆ ಪಟಾಕಿ ಸಿಡಿಸಿ, ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ಗೆ ಪೂಜೆ ಸಲ್ಲಿಸಿದರು . ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯೂರು ತಾಲ್ಲೂಕಿನ ನಗರಸಭೆ ಪೌರಯುಕ್ತ ಡಿ. ಉಮೇಶ್, ಸ್ಥಾಯಿ ಸಮಿತಿ ಚುನಾವಣೆ ಪ್ರಕ್ರಿಯೆ ಗೊಂಡು, ಈ ಚುನಾವಣೆ ಪ್ರಕ್ರಿಯೆ ಯಲ್ಲಿ ಹಿರಿಯೂರು ನಗರಸಭೆ ಯಲ್ಲಿ ಒಟ್ಟು 33 ಜನ ಸದಸ್ಯರುಗಳಲ್ಲಿ 30 ಜನ ಭಾಗವಹಿಸಿದರು. ಇದರಲ್ಲಿ ಒಬ್ಬರು ಸೂಚಕರು ,…

Read More

ಬೆಂಗಳೂರು: ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋ ತೆರವುಗೊಳಿಸಿ ವಿವಾದಕ್ಕೀಡಾಗಿದ್ದ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಆದೇಶ ಹೊರಡಿಸಿದ್ದಾರೆ. ಸಿಜೆ ಅವರ ನಿರ್ದೇಶನದ ಮೇರೆಗೆ ರಾಯಚೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿನಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿನಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ  ಧ್ವಜಾರೋಹಣ ಸ್ಥಳದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವ ಚಿತ್ರ ಹಾಗೂ ಗಾಂಧೀಜಿ ಭಾವ ಚಿತ್ರವನ್ನಿಡಲಾಗಿತ್ತು. ಆದರೆ, ಅಂಬೇಡ್ಕರ್ ಚಿತ್ರವನ್ನು ತೆರವುಗೊಳಿಸಿ ಬಳಿಕ ಮಲ್ಲಿಕಾರ್ಜುನ ಗೌಡ ಧ್ವಜಾರೋಹಣ ಮಾಡಿದ್ದು, ಇದರ ವಿರುದ್ಧ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದೆ.…

Read More

ಪಾವಗಡ: ಅಂಬೇಡ್ಕರ್ ಭವನದ ಮೇಲೆಯೇ ವಿದ್ಯುತ್ ತಂತಿಯೊಂದು ಹಾದು ಹೋಗಿದ್ದು, ಇದನ್ನು ತೆರವುಗೊಳಿಸಲು ಸಾಕಷ್ಟು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಇಲ್ಲಿನ ನಿವಾಸಿಗಳು ದೂರಿದ್ದಾರೆ. ಪಾವಗಡ ತಾಲೂಕಿನ ನಿಡಿಗಲ್ ಹೋಬಳಿಯ ಸಿ.ಕೆ.ಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ತೂರು ಗ್ರಾಮದಲ್ಲಿ ಇಂತಹದ್ದೊಂದು ಸಮಸ್ಯೆ ಉದ್ಭವವಾಗಿದ್ದು,  ಇಲ್ಲಿನ ಅಂಬೇಡ್ಕರ್ ಭವನದ ಮೇಲೆ ಅಪಾಯಕಾರಿ ಅಂತರದಲ್ಲಿ ವಿದ್ಯುತ್ ತಂತಿ ಹಾದು ಹೋಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಯ ಬಗ್ಗೆ ಇಲ್ಲಿನ ನಿವಾಸಿಗಳು ಸಾಕಷ್ಟು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಕ್ರಮ ಜರಗಿಸಿಲ್ಲ ಎಂದು ಗ್ರಾಮಸ್ಥರಾದ ಹನುಮಂತರಾಯಪ್ಪ, ಸಣ್ಣಪ್ಪ, ಚಿಕ್ಕಣ್ಣ ಆಕ್ರೋಶ ವ್ಯಕ್ತಪಡಿಸಿದರು. ವರದಿ: ನಂದೀಶ್ ಕೊತ್ತೂರ್, ನಿಡಿಗಲ್ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More