Author: admin

ತುಮಕೂರು: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನೀಡಿರುವ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಮೈಕ್ ಬಳಕೆ ವಿಚಾರದಲ್ಲಿ, ಬಿಜೆಪಿಗೆ ಸಾಧ್ಯವಾಗದಿದ್ದರೆ, ಅಧಿಕಾರದಿಂದ ಕೆಳಗಿಳಿಯಲಿ, ನನಗೆ 24 ಗಂಟೆಗಳ ಸಮಯ ನೀಡಲಿ, ನ್ಯಾಯ ಪಾಲಿಸದವರಿಗೆ ಗುಂಡು ಹೊಡೆದು ಆದೇಶ ಜಾರಿಗೊಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಮುತಾಲಿಕ್ ಅವರನ್ನು ತಕ್ಷಣವೇ ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ವೆಲ್ಫೆರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಕೊರಟಗೆರೆ : ಬೆಟ್ಟ ಶಂಭೋನಹಳ್ಳಿ ಗ್ರಾಮದ ಜಮೀನಿನ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೇ, ಹಳ್ಳಗಳನ್ನು ಹಾದು ಹೋಗುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಇದರ ವಿರುದ್ಧ  ಇಲ್ಲಿನ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಟ್ಟ ಶಂಭೋನಹಳ್ಳಿ ಗ್ರಾಮದ ಸರ್ವೇ ನಂಬರ್ 52,10,11,14 ,15ರಲ್ಲಿ ಗ್ರಾಮದ ಮುಖ್ಯ ರಸ್ತೆಯಿಂದ ನಕಾಶೆ ರಸ್ತೆ ಇರುವ ಕಾರಣ ಗ್ರಾಮದ ರೈತರು ಮತ್ತು ಸಾರ್ವಜನಿಕರು ತಹಶೀಲ್ದಾರ್ ರವರಿಗೆ ದಿನಾಂಕ 17/06/2020ರ ಹಿಂದಿನಿಂದಲೂ ಮನವಿ ಸಲ್ಲಿಸಿದ್ದರು. ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಸಮಸ್ಯೆಯನ್ನ ಕಾನೂನು ಬದ್ಧವಾಗಿ ಪರಿಹರಿಸಲು ವಿಫಲರಾಗಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಪಕ್ಕ ಜಾಮೀನಿನ ಮಾಲೀಕರು ನಕಾಶೆ ರಸ್ತೆಯನ್ನ ಒತ್ತುವರಿ ಮಾಡಿ ರೈತರಿಗೆ ನಿರಾಕರಣ ಸಮಸ್ಯೆಯನ್ನು ಮಾಡುತ್ತಿರುವುದು ಕಂಡು ಬಂದಿದೆ.  ಮೂಲ ನಕಾಶೆ ರಸ್ತೆ ಪಕ್ಕದಲ್ಲಿಯೇ ಹಳ್ಳ ಒಂದು ಹಾದು ಹೋಗುತ್ತಿದ್ದು ಈ ಹಳ್ಳದಲ್ಲಿಯೆ ಓಡಡಾಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗ್ರಾಮಸ್ಥರಾದ ಪಾರ್ವತಮ್ಮ ಮಾತನಾಡಿ, ನಾವು…

Read More

ಕೊಲ್ಕೋತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಬಹುದಿತ್ತು. ಆದರೆ, ಕೋವಿಡ್ ಎರಡನೇ ಅಲೆ ಬಂದಿದ್ದರಿಂದ ಸಮಸ್ಯೆಯಾಯಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ಆದರೆ, ಕೋವಿಡ್​ ಎರಡನೇ ಅಲೆಯ ಕಾರಣ ಬಿಜೆಪಿಗೆ ಪ್ರಚಾರ ನಡೆಸಲು ತೊಂದರೆಯಾಯಿತು ಎಂದು ಹೇಳಿಕೊಂಡಿದ್ದಾರೆ. ದೇಶದಲ್ಲಿ ಎರಡನೇ ಅಲೆ ಕಾರಣ ಲಾಕ್​ಡೌನ್ ಹಾಗೂ ಕೋವಿಡ್ ಮಾರ್ಗಸೂಚಿ ಹೇರಿಕೆ ಮಾಡಲಾಗಿತ್ತು. ಹೀಗಾಗಿ, ನಮ್ಮ ಚುನಾವಣಾ ಪ್ರಚಾರದ ಕಾರ್ಯ ಸರಿಯಾಗಿ ನಡೆಸಲು ಆಗಲಿಲ್ಲ ಎಂದು ನಡ್ಡಾ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು ಎಂಟು ಹಂತಗಳಲ್ಲಿ ಚುನಾವಣೆ ನಡೆದಿತ್ತು. ನಾಲ್ಕನೇ ಹಂತದ ಕ್ಷೇತ್ರಗಳಿಗೆ ಮತದಾನ ನಡೆಯುವ ಹೊತ್ತಿಗೆ ಕೋವಿಡ್ ಅಲೆ ಹೆಚ್ಚಾಗಿದ್ದರಿಂದ ಕೆಲವೊಂದು ಪ್ರದೇಶಗಳಲ್ಲಿ ಸರಿಯಾಗಿ ಪ್ರಚಾರ ನಡೆಸಲು ಸಾಧ್ಯವಾಗಲಿಲ್ಲ ಎಂದರು. ಪಶ್ಚಿಮ ಬಂಗಾಳದಲ್ಲಿ ನಮ್ಮ ಪ್ರಯತ್ನ ಯಾವುದೇ ಕಾರಣಕ್ಕೂ ನಿಲ್ಲಲ್ಲ ಎಂದಿರುವ ಅವರು, ಬರುವ ದಿನಗಳಲ್ಲಿ ಖಂಡಿತವಾಗಿ ತೃಣಮೂಲ ಕಾಂಗ್ರೆಸ್​ ಸೋಲಿಸಿ, ನಮ್ಮ ಪಕ್ಷವನ್ನ ಅಧಿಕಾರಕ್ಕೆ ತರುತ್ತೇವೆ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಮಂಡ್ಯ:  ಪ್ರೀತಿ ನಿರಾಕರಿಸಿದ ಯುವತಿ ಮೇಲೆ ನಡು ರಸ್ತೆಯಲ್ಲೇ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಕ್ಕರೆ ನಾಡಿನಲ್ಲಿ ನಗರದ ಮಿಮ್ಸ್‌ ಆವರಣದಲ್ಲಿ ಗುರುವಾರ ಸಂಜೆ ನಡೆದಿದೆ. ಮಂಡ್ಯ ತಾಲೂಕಿನ ವೈ.ಯರಹಳ್ಳಿ ಗ್ರಾಮದ ಸಂಪತ್‌ ಅದೇ ಗ್ರಾಮದ ಆತನ ಸಂಬಂಧಿಯೇ ಆದ ಯುವತಿಯನ್ನು ಕಳೆದ 2 ವರ್ಷಗಳ ಹಿಂದೆಯಿಂದ ಪ್ರೀತಿಸುತ್ತಿದ್ದ. ಆದರೆ ಸರಿಯಾಗಿ ಕೆಲಸಕ್ಕೂ ಹೋಗದೇ ಇದ್ದ ಸಂಪತ್‌ ಗೆ ಮಗಳನ್ನು ಕೊಟ್ಟು ಮದುವೆ ಮಾಡಲು ಯುವತಿಯ ಕುಟುಂಬಸ್ಥರು ವಿರೋದ ವ್ಯಕ್ತಪಡಿಸಿದ್ದು. ಯವತಿ ಸಹ  ಸಂಪತ್‌ ನನ್ನು ಪ್ರೀತಿಸಲು ನಿರಾಕರಿಸಿದ್ದಾಳೆ. ಆದರೆ ಸಂಪತ್‌ ಮಾತ್ರ  ನವ್ಯಾಳನ್ನು ಹಿಂಬಾಲಿಸುವುದು, ಕಾಲೇಜು ಬಳಿ ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಇದನ್ನು ತನ್ನ ತಂದೆ- ತಾಯಿ ಬಳಿ ಹೇಳಿಕೊಂಡಾಗ ಗ್ರಾಮದಲ್ಲಿ ಪಂಚಾಯ್ತಿ ನಡೆಸಿ, ನವ್ಯಾ ತಂಟೆಗೆ ಹೋಗದಂತೆ ಸಂಪತ್‌ ಗೆ ಎಚ್ಚರಿಸಿದ್ದಾರೆ. ಮಿಮ್ಸ್‌ ಕಾಲೇಜಿನಲ್ಲಿ 2ನೇ ವರ್ಷದ ಪ್ಯಾರಾ ಮೆಡಿಕಲ್‌ ಓದುತ್ತಿದ್ದ ನವ್ಯಾ ಇಂಟರ್ನಲ್‌ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಾಗ, ಆಕೆಯನ್ನು ಅಡ್ಡಗಟ್ಟಿ ಪ್ರೀತಿಸುವಂತೆ ಮತ್ತೆ ಪೀಡಿಸಿದ್ದಾನೆ. ಜತೆಗೆ ಸಂಜೆ…

Read More

ತುಮಕೂರು: ರಾಜ್ಯ ಸರ್ಕಾರದ ನಿರ್ಣಯದಲ್ಲಿ ಆರ್.ಎಸ್.ಎಸ್. ಪ್ರಭಾವವಿದೆ. ರಾಜ್ಯ ಸರ್ಕಾರ ಆರ್.ಎಸ್.ಎಸ್.  ಮಾತು ಕೇಳಿ ಅಂಬೇಡ್ಕರ್, ಬಸವಣ್ಣ, ಕುವೆಂಪು ಅವರ ವಿಚಾರಗಳನ್ನು ಸುಟ್ಟು ಹಾಕಲು ಪ್ರಯತ್ನಿಸುತಿತ್ತು. ಹಾಗಾಗಿ ನಾವು ಆರ್.ಎಸ್.ಎಸ್. ಚಡ್ಡಿ ಸುಟ್ಟಿದ್ದೇವೆ ಎಂದು ಬಿಡುಗಡೆಗೊಂಡ ಎನ್‌.ಎಸ್.ಯು.ಐ. ರಾಜ್ಯಾಧ್ಯಕ್ಷ ಕೀರ್ತಿಗಣೇಶ್ ಹೇಳಿಕೆ ನೀಡಿದರು. ಅವರು ತುಮಕೂರು ಜಿಲ್ಲಾ ಕಾರಾಗೃಹದಿಂದ ಬಿಡುಗಡೆಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆದ ಗೊಂದಲಗಳ ಬಗ್ಗೆ ಹಾಗೂ ಮಹಾ ನಾಯಕರಿಗೆ ಅವಮಾನ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಶಿಕ್ಷಣ ಸಚಿವರ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದು ವಿನಾಕಾರಣ ತಮ್ಮನು ಬಂಧಿಸಲಾಗಿತ್ತು ಎಂದರು. ರಾಜ್ಯ ಸರ್ಕಾರದ ಪ್ರತಿಯೊಂದು ನಡೆಯ ಹಿಂದೆಯೂ ಆರ್. ಎಸ್. ಎಸ್ ನ ಪಾತ್ರವಿದ್ದು, ಅದರ ವಿರುದ್ಧ ಪ್ರತಿಭಟಿಸಿದ್ದೆವು. ಈ ಹೋರಾಟದಲ್ಲಿ ಕಾಂಗ್ರೆಸ್ ನಾಯಕರು ಸದಾ ನಮ್ಮ ಜೊತೆ ಇದ್ದರು. ದೇಶಕೋಸ್ಕರ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೋರಾಟ ಮಾಡಿ  ಜೈಲಿಗೆ ಹೋಗಿರುವುದು ನಮ್ಮಲ್ಲಿ ಖುಷಿ ತಂದಿದೆ. ನಾಡಿಗಾಗಿ ಜೈಲಿಗೆ ಹೋಗಿದ್ದು ಹೆಮ್ಮೆ ಅನಿಸುತ್ತದೆ.…

Read More

ತುಮಕೂರು: ಜಿಲ್ಲೆಯ ತುರುವೇಕೆರೆ  ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ  ತುರುವೇಕೆರೆ ತಾಲ್ಲೂಕು ಘಟಕದ ವತಿಯಿಂದ ಪ್ರೊ. ಬಿ.ಕೃಷ್ಣಪ್ಪ ರವರ ಜನ್ಮದಿನಾಚಾರಣೆ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ  ತಾಲ್ಲೂಕು ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ಮಾತನಾಡಿ , ಪ್ರೊ. ಬಿ.ಕೆ.ರವರು ದಲಿತರ ಏಳಿಗೆಗಾಗಿ  ರಾಜ್ಯದ , ಉದ್ದಗಲಕ್ಕೂ ಸಂಘಟನೆಗಳನ್ನು ಬಲಪಡಿಸಿ ಹೋರಾಟಗಳನ್ನು ಮಾಡಿ ದಲಿತರ  ನೋವು, ನಲಿವು ಗಳಲ್ಲಿ  ಭಾಗಿಯಾಗಿದ್ದರು ಎಂದು ತಿಳಿಸಿದರು. ಇನ್ನು ಈ ಕಾರ್ಯಕ್ರಮದಲ್ಲಿ  ಪ್ರೊ.ಬಿ.ಕೃಷ್ಣಪ್ಪರವರ ಭಾವಚಿತ್ರಕ್ಕೆ  ಪೂಜೆ ಸಲ್ಲಿಸಿ, ಪುಷ್ಪಅರ್ಚನೆ ಮಾಡಲಾಯಿತು . ಇನ್ನು ಈ ಕಾರ್ಯಕ್ರಮದಲ್ಲಿ ಮಲ್ಲೂರು ತಿಮ್ಮೇಶ್ , ಹೊನ್ನೆನಹಳ್ಳಿ ಕೃಷ್ಣಪ್ಪ , ಪಟ್ಟಣದ ಶಿವರಾಜು , ಹಿರಿಯರಾದ ಕೆಂಪಣ್ಣ , ಸುನಿಲ್,  ಮುನಿಯೂರು ರಂಗಸ್ವಾಮಿ , ದಿಲೀಪ್ ಹಾಜರಿದ್ದರು. ವರದಿ: ಸುರೇಶ್ ಬಾಬು , ತುರುವೇಕೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಹೆಚ್.ಡಿ.ಕೋಟೆ: ತಾಲೂಕಿನ ಚಾ ಕಳ್ಳಿ ಮತ್ತು  ಹೆಗ್ಗಡಾಪುರ ಗ್ರಾಮಗಳ ಸರ್ಕಾರಿ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಪೆನ್ನು ಮತ್ತು ಪೆನ್ಸಿಲ್ ಗಳನ್ನು ರಕ್ಷಣಾ ಸೇವಾ ಟ್ರಸ್ಟ್ ಅಧ್ಯಕ್ಷರಾದ ಚಂದ್ರಿಕಾ ದೊರೆಸ್ವಾಮಿ ಹಾಗೂ ಸ್ವಯಂ ನಿವೃತ್ತಿ ಹೊಂದಿದ ಎಎಸ್ಐ ದೊರೆಸ್ವಾಮಿ ವಿತರಣೆ ಮಾಡಿದರು. ಸಂದರ್ಭದಲ್ಲಿ ಚಂದ್ರಿಕಾ ದೊರೆಸ್ವಾಮಿ ಮಾತನಾಡಿ,  ಹೆಚ್.ಡಿ.ಕೋಟೆ ತಾಲೂಕು ಹಿಂದುಳಿದ ತಾಲೂಕು ಎಂದು ಹೆಸರುವಾಸಿಯಾಗಿದೆ ಹಿಂದುಳಿದ ತಾಲೂಕು ಎಂಬ ಹಣೆ ಪಟ್ಟಿಯ ಬಗ್ಗೆ ಕೇವಲ ಸ್ಟೇಜ್ ಮೇಲೆ ಬೂಟಾಟಿಕೆ ಮಾತುಗಳಿಂದ ಆಗಲಿ ವೇದಾಂತದ ಮಾತುಗಳಿಂದ ಆಗಲಿ ಸುಳ್ಳು ಆಶ್ವಾಸನೆ ಭರವಸೆಗಳಿಂದ ಆಗಲಿ ಸಾಧ್ಯವಿಲ್ಲ, ಬದಲಿಗೆ ವಿದ್ಯೆಯಿಂದ , ಬುದ್ಧಿಯಿಂದ ಜ್ಞಾನದಿಂದ ಪ್ರಜ್ಞಾವಂತರಾದ ರೆ ಮಾತ್ರ ಅಭಿವೃದ್ಧಿ ಮತ್ತು ಬದಲಾವಣೆ ಮಾಡಲುಸಾಧ್ಯ ಎಂದು ಅರಿತು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು. ಪೋಲಿಸ್ ಇಲಾಖೆಯಿಂದ ನಿವೃತ್ತ ಹೊಂದಿ ಸಮಾಜಸೇವೆ ಮಾಡಲು ಎಎಸ್ಐ ದೊರೆಸ್ವಾಮಿ ಮಾತನಾಡಿ, ಹೆಚ್.ಡಿ.ಕೋಟೆಯನ್ನು ಬದಲಾವಣೆಯತ್ತ ಕೊಂಡೊಯ್ಯಲು ವಿದ್ಯೆಯಿಂದ ಜ್ಞಾನದಿಂದ ಸಾಧ್ಯ ಎಂದು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ…

Read More

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಸೇರಿದಂತೆ ದೇಶದ 4 ರಾಜ್ಯಗಳ 16 ಸ್ಥಾನಗಳಿಗೆ ಮತದಾನ ಇಂದು ಆರಂಭವಾಗಿದೆ. ವಿಧಾನಸಭೆಯ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಮತದಾನ ಮುಕ್ತವಾಗಿರುವುದರಿಂದ ಯಾರು ಯಾವ ಅಭ್ಯರ್ಥಿಗೆ ಮತ ಹಾಕಿದ್ದಾರೆ, ಎಷ್ಟು ಅಡ್ಡ ಮತದಾನವಾಗಲಿದೆ ಎಂದು ಸುಲಭವಾಗಿ ತಿಳಿದು ಬರಲಿದೆ. ಶಾಸಕರು ಮತದಾನ ಮಾಡುವಾಗ ತಮ್ಮ ಪಕ್ಷದ ಏಜೆಂಟ್ ಗೆ ತೋರಿಸಿ ಮತ ಹಾಕಬೇಕಾಗುತ್ತದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿವಾಸದ ಮುಂದೆ ಪ್ರತಿಭಟಿಸಿ ಆರೆಸ್ಸೆಸ್ ಚಡ್ಡಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಎನ್ ಎಸ್ ಯುಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣ, ಕುವೆಂಪು ಅವರಿಗೆ ಪಠ್ಯಪುಸ್ತಕದಲ್ಲಿ ಅವಮಾನ ಮಾಡಿರುವುದನ್ನು ವಿರೋಧಿಸಿದ್ದ ಎನ್ ಎಸ್ ಯುಐ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿತ್ತು. ಈ ವೇಳೆ ಬಿ.ಸಿ.ನಾಗೇಶ್ ಮನೆ ಮುಂದೆ ವಿದ್ಯಾರ್ಥಿಗಳು ಚಡ್ಡಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆಯ ವೇಳೆ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿಗಳನ್ನು 9 ದಿನಗಳ ಬಳಿಕ ಇಂದು ಬಿಡುಗಡೆಗೊಳಿಸಲಾಗಿದೆ. ವಿದ್ಯಾರ್ಥಿಗಳ ಬಿಡುಗಡೆಗಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿತ್ತು. ಬಿಡುಗಡೆಯ ಬಳಿಕ ಮಾತನಾಡಿದ ಎನ್ ಎಸ್ ಯುಐ ರಾಜ್ಯಾದ್ಯಕ್ಷ  ಕೀರ್ತಿ ಗಣೇಶ್, ದೇಶಕ್ಕೋಸ್ಕರ ಹೋರಾಟ ಮಾಡಿ ಜೈಲಿಗೆ ಹೋಗಿದ್ದಕ್ಕೆ ಖುಷಿ ಇದೆ. ಆರೆಸ್ಸೆಸ್ ಮಾತು ಕೇಳಿ ಬಿಜೆಪಿಯವರು ಅಂಬೇಡ್ಕರ್, ಬಸವಣ್ಣ, ಕುವೆಂಪು ವಿಚಾರಗಳನ್ನು ಸುಟ್ಟು ಹಾಕಲು ಪ್ರಯತ್ನಿಸುತ್ತಿತ್ತು. ಹಾಗಾಗಿ ನಾವು ಆರೆಸ್ಸೆಸ್ ಚಡ್ಡಿ ಸುಟ್ಟಿದ್ದೇವೆ ಎಂದು…

Read More

ಹಿರಿಯೂರು: ಪುರುಷರಿಗೆ ಸಮಾನವಾಗಿ ಮಹಿಳೆಯರು ಕರ್ತವ್ಯ ನಿರ್ವಹಿಸಲು ಸುರಕ್ಷಿತ ಹಾಗೂ ಸಾರ್ಥಕ ಸೇವೆ ಮಾಡಲು ಅನುಕೂಲಕರ ಕ್ಷೇತ್ರಗಳಲ್ಲಿ ಈ ಪೊಲೀಸ್ ಇಲಾಖೆಯು ಅಗ್ರಗಣ್ಯ ಸ್ಥಾನದಲ್ಲಿದೆ ಎಂಬುದಾಗಿ ನಗರಠಾಣೆ ಅಪರಾಧ ವಿಭಾಗದ ಉಪನಿರೀಕ್ಷಕಿಯಾದ ಪಿ ಎಸ್ ಐ ಅನುಸೂಯಮ್ಮ ಹೇಳಿದರು. ಹಿರಿಯೂರು ನಗರದ ಪೊಲೀಸ್ ಠಾಣೆಯಿಂದ ಪದೋನ್ನತಿ ಹೊಂದಿ ಚಿತ್ರದುರ್ಗ ನಗರ ಸಂಚಾರಿ ಠಾಣೆಗೆ ವರ್ಗಾವಣೆಗೊಂಡ ಮಹಿಳಾ ಪೇದೆ ಮಂಜುಳಾ ಅವರಿಗೆ ಹಮ್ಮಿಕೊಳ್ಳಲಾಗಿದ್ದ  ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ಇಂದಿನ ದಿನಗಳಲ್ಲಿ ಮಹಿಳೆಯರು ತಮ್ಮನ್ನು ಗುರುತಿಸಿಕೊಂಡಿದ್ದು, ಮಹಿಳಾ ಸಿಬ್ಬಂದಿಗೆ ಕೆಲವೊಂದು ಕ್ಷೇತ್ರಗಳಲ್ಲಿ ವಿನಾಕಾರಣ ಕಿರುಕುಳ ನೀಡುವ ಉದಾಹರಣೆಗಳನ್ನು ಸಹ ನೋಡಿದ್ದೇವೆ ಎಂದರು. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಎಲ್ಲಾ ಹಂತದ ಸಿಬ್ಬಂದಿ, ಅಧಿಕಾರಿಗಳು ನಿರ್ಭೀತವಾಗಿ ಕಾರ್ಯ ನಿರ್ವಹಿಸುವ ಕ್ಷೇತ್ರವಾಗಿದೆ. ಕೌಟುಂಬಿಕ ಸೌಜನ್ಯ, ಕಿರುಕುಳ ಹಾಗೂ ಅಬಲೆಯರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಪೋಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗೆ ಹೆಚ್ಚು ಅವಕಾಶ ಸಿಗುವ ಕಾರಣ ಇಲಾಖೆಯ ಸೇವೆಯನ್ನು ಆತ್ಮತೃಪ್ತಿಯಿಂದ ಮಾಡಬಹುದಾಗಿದೆ ಎಂದು ತಿಳಿಸಿದರು.…

Read More