Subscribe to Updates
Get the latest creative news from FooBar about art, design and business.
- ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
- ಬೀದರ್: ಆನ್ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
- 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
- ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
- ಒಳಮೀಸಲಾತಿ: “ನಾಗಮೋಹನ್ ದಾಸ್ ಆಯೋಗದ ವರದಿ ಅವೈಜ್ಞಾನಿಕ”: ಮಾ.25ರಂದು ಬೃಹತ್ ಪ್ರತಿಭಟನೆ
- ನಾಲ್ಕು ಹೆಣ್ಣುಮಕ್ಕಳ ತಾಯಿಗೆ ಸ್ವಯಂ ಉದ್ಯೋಗ: ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಕಾರ್ಯಕ್ಕೆ ಇಕ್ಬಾಲ್ ಅಹಮದ್ ಸಾಥ್
- ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ
- ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ
Author: admin
ಬೆಂಗಳೂರು: ತಮ್ಮ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೃಢಪಡಿಸಿದ್ದಾರೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂದು ಬೆಳಗ್ಗೆ ನಮ್ಮ ಶಾಲೆಯಲ್ಲಿ ಸ್ಟಾಫ್, ಪ್ರಿನ್ಸಿಪಾಲ್ ಎಲ್ಲಾ ಶಾಲೆಗೆ ಹೋಗಿದ್ದಾರೆ. ಆಗ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದಿದೆ. ಬೆದರಿಕೆ ಬಗ್ಗೆ ತಕ್ಷಣ ನಮಗೆ ತಿಳಿಸಿದರು ಎಂದರು. ಸ್ಕೂಲ್ ಕ್ಯಾಂಪಸ್ ನಲ್ಲಿ ಇರುವವರನ್ನು ಸ್ಥಳಾಂತರ ಮಾಡಿದೆವು. ಕೂಡಲೇ ಪೊಲೀಸ್ ಆಯುಕ್ತರ ಜೊತೆ ಮಾತನಾಡಿದೆವು. 70% ತಪಾಸಣೆ ಮಾಡಿದ್ದಾರೆ. ಇನ್ನೂ ತಪಾಸಣೆ ನಡೆಯುತ್ತಿದೆ ಎಂದರು. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಪೋಷಕರು ಗಾಬರಿ ಆಗುವುದು ಬೇಡ. ನಮ್ಮಲ್ಲಿ ಹೈ ಸೆಕ್ಯೂರಿಟಿಯಿದೆ. ಪ್ರತಿ ಚಲನವಲನವೂ ಸಿಸಿ ಕ್ಯಾಮೆರಾದಲ್ಲಿ ದಾಖಲಾಗುತ್ತದೆ. ನಿನ್ನೆ ಒಂದು ಪರೀಕ್ಷೆ ಇತ್ತು. ಹಾಗಾಗಿ ಬೇರೆಯವರು ಬರಲಿಕ್ಕೆ ಅವಕಾಶ ನೀಡಲಾಗಿತ್ತು. ಸಮಸ್ಯೆ ಆಗುವುದು ಬೇಡವೆಂದು ಪೊಲೀಸರಿಗೆ ತಿಳಿಸಿದೆವು. ಅವರು ನಾವೇ ಎಲ್ಲಾ ನೋಡಿಕೊಳ್ಳೋದಾಗಿ ಹೇಳಿದ್ದಾರೆ ಎಂದು ಘಟನೆ ಕುರಿತು ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕವಾಗಿ ಸ್ಫೋಟಗೊಂಡ ಗ್ರೆನೇಡ್ ಸೇನಾ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿ ಇಬ್ಬರನ್ನೂ ಬಲಿ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಭಾನುವಾರ ತಡರಾತ್ರಿ ಪೂಂಚ್ ನ ಮೆಂಧರ್ ಸೆಕ್ಟರ್ನಲ್ಲಿ ಈ ಘಟನೆ ನಡೆದಿದ್ದು, ಈ ವೇಳೆ ಸೇನಾ ಸಿಬ್ಬಂದಿ ಕರ್ತವ್ಯದಲ್ಲಿದ್ದರು ಎಂದು ಸೇನಾ ಪಿಆರ್ ಒ ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣವೇ ಸೇನಾ ಕ್ಯಾಪ್ಟನ್ ಮತ್ತು ನೈಬ್-ಸುಬೇದಾರ್ (ಜೆಸಿಒ) ಅವರನ್ನು ಹೆಲಿಕಾಪ್ಟರ್ ನಲ್ಲಿ ಚಿಕಿತ್ಸೆಗಾಗಿ ಉಧಮ್ಪುರಕ್ಕೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಹುಟ್ಟು ಹಬ್ಬದ ದಿನವೇ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪರಿಚಿತರೇ ಯುವಕನನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾರೆನ್ನಲಾಗಿದೆ. ಗೊಲ್ಲಹಳ್ಳಿ ನಿವಾಸಿ ಹೇಮಂತ್ ಕುಮಾರ್ (25) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಹುಟ್ಟು ಹಬ್ಬದ ಸಲುವಾಗಿ ಹೇಮಂತ್ ನನ್ನು ಸ್ನೇಹಿತರು ಫೋನ್ ಮಾಡಿ ಮನೆಯ ಹೊರಗಡೆ ಬರಲು ಹೇಳಿದ್ದಾರೆ. ಸ್ನೇಹಿತರೊಂದಿಗೆ ರಾತ್ರಿ ಹೊರಗಡೆ ಹೋಗಿದ್ದ ಯುವಕ ಇಂದು ಬೆಳಗ್ಗೆ ಕೋನಸಂದ್ರ ಬಳಿ ಬರ್ಬರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಹೇಮಂತ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತ ಯುವಕನ ಕೈ ಮೇಲೆ ತ್ರಿಶೂಲ, ಢಮರು ಟ್ಯಾಟು ಇದ್ದು, ಇದರ ಮೂಲಕ ಪೋಷಕರು ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಯುವಕನ ಮುಖದ ಗುರುತು ಸಿಗದಂತಾಗಿತ್ತು. ಸದ್ಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಹಾಲಿನ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಲ್ಲ. ಆದರೆ ಹಾಲಿನ ಉತ್ಪನ್ನಗಳು ದರ ಏರಿಕೆಯಾಗಲಿದೆ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳ ಕೆಎಂಎಫ್ ತಿಳಿಸಿದೆ. ಕೇಂದ್ರ ಸರ್ಕಾರ ಶೇ.5ರ ಸರಕು ಸೇವಾ ಸುಂಕ (ಹಾಲಿನ ಪ್ಯಾಕೇಟ್ ಉತ್ಪನ್ನ) ವಿಧಿಸಿರುವ ಹಿನ್ನೆಲೆಯಲ್ಲಿ (ಲೇಬಲ್ಡ್ ಅಕ್ಕಿ ಇತರೆ) ನಾಳೆಯಿಂದ ಬೆಲೆ ಹೆಚ್ಚಳವಾಗಲಿದೆ. ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ ಉತ್ಪನ್ನದ ಮೇಲೆ ಸರಾಸರಿ 1ರಂದ 3ರವರೆಗೆ ಬೆಲೆ ಹೆಚ್ಚಾಗಲಿದೆ. ಈ ಮೊದಲು ಲೀಟರ್ ಮೊಸರಿಗೆ 43 ಇತ್ತು. ಜುಲೈ 18ರಿಂದ ಅದು 46 ಆಗಲಿದೆ. ಅರ್ಧ ಲೀಟರ್ ಮೊಸರಿನ ಬೆಲೆ 22 ಇತ್ತು. ನಾಳೆಯಿಂದ 24 ಆಗಲಿದೆ. ಮಜ್ಜಿಗೆ 200 ಎಂಎಲ್ ಮಜ್ಜಿಗೆ ಹಾಗೂ ಲಸ್ಸಿ ಮೇಲೆ 1ರೂ. ಹೆಚ್ಚಿಸಲಾಗಿದೆ. ಪಾಕೆಟ್ ನಲ್ಲಿ ಸದ್ಯ ಹಳೆಯ ದರಗಳೇ ನಮೂದಾಗಿರುತ್ತವೆ. ಆದರೆ, ಗ್ರಾಹಕರು ಹೊಸದಾಗಿ ನಿಗದಿಪಡಿಸಿರುವಷ್ಟು ದರ ನೀಡಿ ಖರೀದಿಸಬೇಕು ಎಂದು ಕೆಎಂಎಫ್ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರಸಭೆಯ ನೂತನ ಅಧ್ಯಕ್ಷೆಯಾಗಿ ಮೂರನೇ ವಾರ್ಡಿನ ಎಸ್. ಶಿವರಂಜಿನಿ ಯಾದವ್ ಶನಿವಾರದಂದು ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಿ ಸುಧಾಕರ್ ರವರ ನೇತೃತ್ವದಲ್ಲಿ ಹಿರಿಯೂರು ನಗರಸಭೆಯ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದರು . ಹಿರಿಯೂರು ತಾಲ್ಲೂಕಿನ ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಪದಗ್ರಹಣ ಸಮಾರಂಭ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ. ಸುಧಾಕರ್ ಭಾಗವಹಿಸಿ, ಅವಿರೋಧವಾಗಿ ಆಯ್ಕೆಯಾದ ಹಿರಿಯೂರು ನಗರಸಭೆ ನೂತನ ಅಧ್ಯಕ್ಷೆ ಶಿವರಂಜನಿ ಯಾದವ್ ಅವರಿಗೆ ಶುಭ ಹಾರೈಸಿ ಆಶೀರ್ವಾದಿಸಿದರು. ಈ ಸಂದರ್ಭದಲ್ಲಿ ಪತ್ರಿಕೆ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರಾದಂತಹ ಡಿ. ಸುಧಾಕರ್, ನಾನು ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ರಾಜಕಾರಣ ಮಾಡಿದವನು. ನಾನು ಯಾವ ಜಾತಿಯ ವಿರೋಧಿಯೂ ಅಲ್ಲ. ಮೊದಲಿನಿಂದಲೂ ತೀರಾ ಹಿಂದುಳಿದವರ, ಅಶಕ್ತರ ಧ್ವನಿಯಾಗುತ್ತಾ ಬಂದಿದ್ದೇನೆ. ಸರ್ವ ಜನಾಂಗವನ್ನು ಸಮಾನವಾಗಿ ಕಾಣುತ್ತಾ ಸಾಮಾಜಿಕ ನ್ಯಾಯ ಸರ್ವರಿಗೂ ಸಿಗಬೇಕು ಎಂಬ ಧ್ಯೇಯವನ್ನು ಪರಿಪಾಲನೆ ಮಾಡುತ್ತಾ ಬರಲಾಗಿದೆ…
ತುಮಕೂರು: ಮಳೆ ನೀರಿನಲ್ಲಿ ಆಟೋ ಚಾಲಕ ಕೊಚ್ಚಿ ಹೋದ ಘಟನೆ ಹಿನ್ನೆಲೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವ ಅರಗ ಜ್ಞಾನೇಂದ್ರ ತುಮಕೂರಿಗೆ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಆಟೋ ಚಾಲಕ ಇನ್ನೂ ಪತ್ತೆಯಾಗಿಲ್ಲ. ಆಟೋ ಚಾಲಕ ಪತ್ತೆಯಾದ ಬಳಿಕ ಮುಂದಿನ ಕ್ರಮಕೈಗೊಳ್ಳೋಣ. ವ್ಯಕ್ತಿ ಮೊದಲು ಬದುಕಿದ್ದಾನೆ ಅಂದುಕೊಳ್ಳೋಣ. ವ್ಯಕ್ತಿ ಪತ್ತೆಯಾಗುವವರೆಗೂ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ತಿಳಿಸಿದರು. ಸ್ಮಾರ್ಟ್ ಸಿಟಿ ಹಿನ್ನೆಲೆಯಲ್ಲಿ ತುಮಕೂರಿನ ವಿವಿಧೆಡೆಗಳಲ್ಲಿ ಅವೈಜ್ಞಾನಿಕ ಕಾಮಕಾರಿಗಳು ನಡೆಯುತ್ತಿದ್ದು, ಇದೀಗ ಇದರ ಫಲವಾಗಿ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಈ ಬಗ್ಗೆ ಯಾವ ಕ್ರಮಕೈಗೊಳ್ಳುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲಿ ಮಳೆ ನೀರು ತುಂಬಿತ್ತು ಎಂದು ಮಾಹಿತಿ ಇದೆ. ಅದನ್ನು ಸರಿಪಡಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇವೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು. ತುಮಕೂರಿನ ವಿವಿಧ ಪ್ರದೇಶಗಳಲ್ಲಿರುವ ಅಂಡರ್ ಪಾಸ್ ಗಳಲ್ಲಿ ಇದೇ ರೀತಿಯ ಸಮಸ್ಯೆಗಳಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,…
ಕನ್ನಡ ಭಾಷೆಯ ಮೂಲ ತತ್ವಗಳನ್ನು ಮಕ್ಕಳಿಗೆ ಅರ್ಥಪೂರ್ಣ ಮತ್ತು ಕ್ರಮಬದ್ಧವಾಗಿ ಶಿಕ್ಷಕರು ಕಲಿಸಿಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕೆ.ಪದ್ಮನಾಭ ಅಭಿಪ್ರಾಯಪಟ್ಟರು. ತುರುವೇಕೆರೆ ಪಟ್ಟಣದ ಬಿಆರ್ ಸಿ ಕಚೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತುಮಕೂರು, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ತುರುವೇಕೆರೆ ಹಾಗೂ ತಾಲ್ಲೂಕು ಕನ್ನಡ ಭಾಷಾ ಬೋಧಕರ ಸಂಘದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕಲಿಕಾ ಚೇತರಿಕೆ ಉಪಕ್ರಮ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಪಠ್ಯದಲ್ಲಿರುವ ಮೌಲ್ವಿಕ ಅಂಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವ ಮೂಲಕ ಗುಣಾತ್ಮಕ ಕಲಿಕೆಗೆ ಹೆಚ್ಚು ಒತ್ತು ಕೊಡಬೇಕು. ತಾಲ್ಲೂಕಿನ ಪ್ರೌಢ ಶಾಲೆಗಳಲ್ಲಿ ವಿಷಯ ಶಿಕ್ಷಕರ ಕೊರತೆಯ ನಡುವೆಯೂ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಎಂದರು. ಜಿಲ್ಲಾ ಕನ್ನಡ ವಿಷಯ ಪರಿವೀಕ್ಷಕ ಎಚ್.ಜಿ.ಗಿರೀಶ್ 8 ಮತ್ತು 9ನೇ ತರಗತಿಯ ಮಕ್ಕಳಿಗೆ ಕಲಿಕಾ ಚೇತರಿಕೆ ಉಪಕ್ರಮಗಳ ಕುರಿತು ಮಾತನಾಡಿ, ಕೋವಿಡ್ 19ರ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಸಮರ್ಪಕ ಕಲಿಕೆ ಉಂಟಾಗಿಲ್ಲ. ಹಾಗಾಗಿ ಔಪಚಾರಿಕ ಶಿಕ್ಷಣದ ಒಂದು ಉಪಕ್ರಮವಾಗಿ ಕಲಿಕಾಚೇತರಿಕೆಯನ್ನು…
ತುಮಕೂರು: ಮಳೆ ನೀರಿನಲ್ಲಿ ಕೊಚ್ಚಿ ಹೋದ ಆಟೋ ಚಾಲಕನ ಪತ್ತೆಗೆ ಭಾನುವಾರ ಎನ್.ಡಿ.ಆರ್.ಎಫ್ ತಂಡ ಆಗಮಿಸಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ. ಶನಿವಾರ ಸಂಜೆ ನಗರದ ಗುಬ್ಬಿ ಗೇಟ್ ರಿಂಗ್ ರಸ್ತೆಯಲ್ಲಿ ಮಳೆ ನೀರಿನ ಫೋಟೋ ತೆಗೆಯುತ್ತಿದ್ದ ಆಟೋ ಚಾಲಕ ಅಮ್ಜದ್ ರಾಜಕಾಲುವೆಗೆ ಬಿದ್ದು ಕೊಚ್ಚಿ ಹೋಗಿದ್ದನು. ಬಳಿಕ ಆತನ ಪತ್ತೆಗೆ ಸ್ಥಳೀಯ ಅಗ್ನಿಶಾಮಕ ದಳ ಹಾಗೂ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿದ್ದರಾದರೂ ಆತನ ಸುಳಿವು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಪತ್ತೆ ಕಾರ್ಯಾಚರಣೆಗೆ ಎನ್.ಡಿ.ಆರ್.ಎಫ್ ತಂಡದ ಮೊರೆ ಹೋಗಲಾಗಿದೆ. 6 ಗಂಟೆಗೆ ಆರಂಭ; ಭಾನುವಾರ ಬೆಳಗ್ಗೆ 6 ಗಂಟೆಗೆ ಅಮ್ಜದ್ ಪತ್ತೆ ಕಾರ್ಯಾಚರಣೆಯನ್ನು ಎನ್.ಡಿ.ಆರ್.ಎಫ್ ತಂಡ ಆರಂಭಿಸಿದೆ. ಬೆಂಗಳೂರಿನಿಂದ ಬಂದಿರುವ ತಂಡದಿಂದ ರಿಂಗ್ ರಸ್ತೆಯ ರಾಜಕಾಲುವೆಯಲ್ಲಿ ಹುಡುಕಾಟ ನಡೆದಿದೆ. ಆದರೆ ಈವರೆಗೆ ಅಮ್ಜದ್ ಪತ್ತೆಯಾಗಿಲ್ಲ. ಸ್ಥಳದಲ್ಲೇ ಮೊಕ್ಕಾಂ; ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಕಾರ್ಯಾಚರಣೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಅಮ್ಜದ್ ಪತ್ನಿ ಹಾಗೂ ಕುಟುಂಬ ಸದಸ್ಯರು ಕೂಡ ಕಾರ್ಯಾಚರಣೆ ಸ್ಥಳದಲ್ಲಿ ಹಾಜರಿದ್ದಾರೆ. ವರದಿ…
ತುಮಕೂರು: ಶಿಕ್ಷಕಿಯರ ಮನಸ್ತಾಪದಿಂದ ಬೇಸತ್ತ ಗ್ರಾಮಸ್ಥರು ಶಾಲೆಗೆ ಬೀಗ ಜಡಿದ ಘಟನೆ ತುಮಕೂರು ತಾಲೂಕಿನ ಚಿಕ್ಕಸಾರಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಪ್ರತಿದಿನವೂ ಶಾಲೆಗೆ ತಡವಾಗಿ ಬರುವ ಗಂಗಲಕ್ಷ್ಮಮ್ಮ ಹಾಗೂ ಭಾಗ್ಯಮ್ಮ ಅವರಿಗೆ ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗುವುದಿಲ್ಲ, ಮಕ್ಕಳಿಗೆ ಪಾಠ ಮಾಡದೇ ಸದಾ ಪರಸ್ಪರ ಜಗಳವಾಡುತ್ತಿರುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವೈಯಕ್ತಿಕ ವಿಚಾರಗಳು ಸೇರಿದಂತೆ ಶಾಲೆಗೆ ತಡವಾಗಿ ಬರುವ ವಿಚಾರಕ್ಕೆ ಜಗಳವಾಡುತ್ತಾರೆ ಎನ್ನಲಾಗಿದೆ. ಸಹಶಿಕ್ಷಕಿಯರ ಜಗಳ ನೋಡಲಾರದೇ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಘಟನೆ ಸಂಬಂಧ ಶಾಲೆಗೆ ತುಮಕೂರು ಬಿಇಒ ಹನುಮನಾಯಕ್ ಭೇಟಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸರಗೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಶುಕ್ರವಾರ ರಾತ್ರಿ ಕಬ್ಬೇಪುರ ಹಾಡಿಯ ಆಶ್ರಾಮ ಶಾಲೆಯಲ್ಲಿ ವ್ಯಾಸ್ತವ್ಯ ಹೂಡಿದರು. ಬಿ ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ ನೀಡಿ ನಂತರ ಶಾಸಕರ ಜೊತೆಗೂಡಿ ಮೊಳೆಯೂರು ಗ್ರಾಮದ ಶಾಲೆಯಲ್ಲಿ ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಮತ್ತು ಶಾಸಕರು ಅನೀಲ್ ಚಿಕ್ಕಮಾದು ಗಣ್ಯರು ಜೊತೆಯಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಗ್ರಾಪಂ ಅಧ್ಯಕ್ಷ ರು ರೂಪಾಬಾಯಿ ಉಪಾಧ್ಯಕ್ಷ ದೇವದಾಸ್ ಬೆಟ್ಟಸ್ವಾಮಿ ಸದಸ್ಯರು ಸಾಥ್ ನೀಡಿದರು. ಆ ಗ್ರಾಮದಲ್ಲಿ ಮಳೆಯಿಂದ ಮನೆಗಳು ಕುಸಿದು ಬಿದ್ದಿರುವ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ರಸ್ತೆಗಳು ಅಳಗುಂಡಿ ಇರುವುದನ್ನು ಗಮನಿಸಿ ಪಂಚಾಯಿತಿ ಅಧಿಕಾರಿಗಳಿಗೆ ನರೇಗಾಯಡಿ ಕಾಮಗಾರಿ ಮಾಡಲು ಸೂಚನೆ ನೀಡಿದರು. ಸರಗೂರು ತಾಲ್ಲೂಕಿನ ಬಿ ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊಳೆಯೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಂದ ಹಲವು ಅರ್ಜಿಗಳನ್ನು ಸ್ವೀಕರಿಸಿದರು. ಮತ್ತು ಸಮಸ್ಯೆಗಳಿಗೆ…