Subscribe to Updates
Get the latest creative news from FooBar about art, design and business.
- ತಿಪ್ಪಯನದುರ್ಗ ಗ್ರಾಮದಲ್ಲಿ ಮಣ್ಣು ಹಗರಣ: ಪ್ರಶ್ನಿಸಿದಾಗ ಸ್ಥಳೀಯ ಶಾಸಕರ ಹೆಸರು ದುರ್ಬಳಕೆ!
- ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
- ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
- ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ: ಬಿ.ವೈ. ವಿಜಯೇಂದ್ರ ಆರೋಪ
- ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ
- ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
- ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
- ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
Author: admin
ತುಮಕೂರು ಗ್ರಾಮಾಂತರ : ಅರಣ್ಯ ಇಲಾಖೆ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಕುಂದೂರಿನಲ್ಲಿ ಗುಡಿಸಲುಗಳನ್ನು ತೆರವುಗೊಳಿಸಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿಗೆ ಖಡಕ್ ಸೂಚನೆ ನೀಡಿರುವ ಶಾಸಕ ಡಿ.ಸಿ.ಗೌರಿಶಂಕರ್ ಜಂಟಿ ಸರ್ವೇ ಆಗುವವರೆಗೂ ಸ್ಥಳ ಕಾಲಿಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಊರ್ಡಿಗೆರೆ ಹೋಬಳಿಯ ಬೆಳಗುಂಬ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಂದೂರು ಗ್ರಾಮದಲ್ಲಿ ವಸತಿ ರಹಿತರು ಗುಡಿಸಲು ಹಾಕಿಕೊಂಡು ವಾಸವಿದ್ದರು. ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ ಈ ಸ್ಥಳಕ್ಕೆ ಅರಣ್ಯ ಇಲಾಖೆಗೆ ಸೇರಿದ್ದು, ಕೂಡಲೇ ಗುಡಿಸಲನ್ನು ತೆರವುಗೊಳಿಸಬೇಕೆಂದು ತಿಳಿಸಿ ಅವರ ಗುಡಿಸಲುಗಳನ್ನು ತೆರವುಗೊಳಿಸಲು ಮುಂದಾಗಿದ್ದರು. ಈ ವಿಚಾರವಾಗಿ ಗುಡಿಸಲು ನಿವಾಸಿಗಳು ಅರಣ್ಯ ಇಲಾಖೆಯ ಸಿಬ್ಬಂದಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವಿಷಯ ವ್ಯಾಪಕವಾಗಿ ಹರಡುತ್ತಿದ್ದಂತೆ ಸುದ್ದಿ ತಿಳಿದು ಖುದ್ದು ಸ್ಥಳಕ್ಕೆ ಬುಧವಾರ ಬೆಳಗಿನ ಜಾವ ಭೇಟಿ ನೀಡಿದ ಶಾಸಕ ಡಿ.ಸಿ.ಗೌರಿಶಂಕರ್ ಅಲ್ಲಿಯ ಸ್ಥಳ ಪರಿಶೀಲನೆ ನಡೆಸಿ, ಸ್ಥಳದ ದಾಖಲೆ ಪರಿಶೀಲನೆ ಮಾಡಿದರು.…
ಪಾಟ್ನಾ: ಬಿಹಾರದ ಮುಸ್ಲಿಂ ಕುಟುಂಬವೊಂದು (Muslim Family) ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಪೂರ್ವ ಚಂಪಾರಣ್ ಜಿಲ್ಲೆಯ ಕೈತ್ವಾಲಿಯಾ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ವಿಶ್ವದ ಅತಿ ದೊಡ್ಡ ಹಿಂದೂ ಮಂದಿರ ವಿರಾಟ್ ರಾಮಾಯಣ ದೇವಾಲಯಕ್ಕೆ 2.5 ಕೋಟಿ ರೂ. ಮೌಲ್ಯದ ಜಮೀನನ್ನು ದಾನ ಮಾಡಿದೆ (Virat Ramayan Mandir). ದೇವಸ್ಥಾನಕ್ಕೆ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ: ಗುವಾಹಟಿಯಲ್ಲಿ ವಾಸಿಸುತ್ತಿರುವ ಪೂರ್ವ ಚಂಪಾರಣ್ನ ಉದ್ಯಮಿ ಇಶ್ತಿಯಾಕ್ ಅಹ್ಮದ್ ಖಾನ್ ಅವರು, ಈ ಭೂಮಿಯನ್ನು ದಾನ ಮಾಡಿದ್ದಾರೆ ಎಂದು ಮಹಾವೀರ ಮಂದಿರ ಟ್ರಸ್ಟ್ನ ಮುಖ್ಯಸ್ಥ ಆಚಾರ್ಯ ಕಿಶೋರ್ ಕುನಾಲ್ ( Kishore Kunal) ತಿಳಿಸಿದ್ದಾರೆ. ದೇವಸ್ಥಾನ ನಿರ್ಮಾಣಕ್ಕಾಗಿ ಭೂಮಿ ದಾನಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ವ ಚಂಪಾರಣ್ನ ಕೇಸರಿಯಾ ಉಪವಿಭಾಗದ ರಿಜಿಸ್ಟ್ರಾರ್ ಕಚೇರಿಯಲ್ಲಿ ಇತ್ತೀಚೆಗೆ ಪೂರ್ಣಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ (Virat Ramayan Mandir). ಎರಡು ಸಮುದಾಯಗಳ ನಡುವಿನ ಸಾಮಾಜಿಕ ಸಾಮರಸ್ಯದ ಉದಾಹರಣೆ : ಇಶ್ತಿಯಾಕ್ ಅಹ್ಮದ್ ಖಾನ್ ಮತ್ತು ಅವರ ಕುಟುಂಬದವರ ಈ ದೇಣಿಗೆಯು…
ಜೂಜು ಅಡ್ಡೆ (Gambling) ಮೇಲೆ ಚಿಕ್ಕಬಳ್ಳಾಪುರ ಜಿಲ್ಲಾ ಡಿಸಿಬಿ ಪೊಲೀಸರ ದಾಳಿ ನಡೆಸಿದ್ದು, 19 ಜನರನ್ನು ಬಂಧಿಸಲಾಗಿದೆ. ಆಂಧ್ರದ ಖ್ಯಾತ ನಟ ಹಾಗೂ ಹಿಂದೂಪುರ ಶಾಸಕ ನಂದಮೂರಿ ಬಾಲಕೃಷ್ಣ (Nandamuri Balakrishna) ಆಪ್ತ ಸಹಾಯಕ ಎಂದು ಹೇಳಿಕೊಂಡಿರುವ ಬಾಲಾಜಿ ಮತ್ತು ವೈಎಸ್ ಆರ್ ಪಕ್ಷದ ಸಂಚಾಲಕ ಎಂದು ಹೇಳಿಕೊಂಡಿರುವ ಶ್ರೀರಾಮರೆಡ್ಡಿ ಸೇರಿದಂತೆ 19 ಜನರನ್ನು ಅರೆಸ್ಟ್ ಮಾಡಲಾಗಿದೆ.ಆಂಧ್ರದ ಗಡಿ ನಗರಗೆರೆ ಗ್ರಾಮದ ಬಿಎನ್ ಆರ್ ಕಂಫರ್ಟ್ ರೆಸ್ಟೋರೆಂಟ್ ನಲ್ಲಿ ಹೈಟೆಕ್ ಜೂಜು ನಡೆಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಬಂಧಿತರಿಂದ 1,56,750 ರೂಪಾಯಿ ಹಣ, 8 ಕಾರುಗಳು, 3 ಬೈಕ್ ಗಳನ್ನು ಜಪ್ತಿ ಮಾಡಲಾಗಿದೆ. ಈ ಬಗ್ಗೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಗುಡಿಬಂಡೆ ನ್ಯಾಯಾಲಯಕ್ಕೆ (Court) ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿ: ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಕೊರಟಗೆರೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುವ ಪತ್ರಿಕಾ ರಂಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಸೇವಾ ಭದ್ರತೆಯಿಲ್ಲದೆ ಇರುವುದು ಶೋಚನೀಯವಾಗಿದ್ದು ಸರ್ಕಾರ ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ಭದ್ರತೆಯೊಂದಿಗೆ ಸವಲತ್ತು ನೀಡಬೇಕಿದೆ ಎಂದು ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ತಿಳಿಸಿದರು. ಕೊರಟಗೆರೆ ಪಟ್ಟಣದ ಬೈಪಾಸ್ ಬೆಂಗಳೂರು- ಕೊರಟಗೆರೆ ರಸ್ತೆಯಲ್ಲಿರುವ ನವೀನ್ ಕಂಫರ್ಟ್ ಕಾಮಧೇನು ವೆಜ್ ಹೋಟೆಲ್ ಸಭಾಂಗಣದಲ್ಲಿ ನವರಸ ನಾಯಕ ಜಗ್ಗೇಶ್ ರವರ 59ನೇ ಹುಟ್ಟು ಹಬ್ಬದ ಅಂಗವಾಗಿ ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ, ನೂತನವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆಯಾದ ಸದಸ್ಯರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪತ್ರಿಕಾರಂಗದಲ್ಲಿ ವೃತ್ತಿ ಧರ್ಮ ಬದ್ದತೆಯನ್ನು ಬಿಟ್ಟು ಕೊಡದೆ ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸುವ ಪತ್ರಕರ್ತರಿಗೆ ಸೇವಾ ಭದ್ರತೆ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತರು ನಿಷ್ಪಕ್ಷಪಾತ ವರದಿ ಮಾಡುವ ಮೂಲಕ ಸಮಾಜದಲ್ಲಿ ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗ ಸಮರ್ಪಕವಾಗಿ ಕಾರ್ಯನಿರ್ವಸಲು ಸಹಕಾರಿಯಾಗಿದ್ದು, ಮುಂದಿನ…
ನಿನ್ನೆ ತಾನೆ ಮೊದಲ ಲಿರಿಕಲ್ ಸಾಂಗ್ ರಿಲೀಸ್ (Toofan Lyrical Song) ಮಾಡುವ ಮೂಲಕ ಬಿರುಗಾಳಿ ಎಬ್ಬಿಸಲು ಸಜ್ಜಾಗಿರುವ ಕ್ಲ್ಯೂ ನೀಡಿದೆ ‘ಕೆಜಿಎಫ್ 2’ ಚಿತ್ರತಂಡ. ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ‘ಕೆಜಿಎಫ್ 2’ ಎಲ್ಲಿಲ್ಲದ ಕುತೂಹಲ, ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಏಪ್ರಿಲ್ ನಲ್ಲಿ ‘ಕೆಜಿಎಫ್ 2’ ಬೆಳ್ಳಿತೆರೆಗೆ ಅಪ್ಪಳಿಸಲಿದೆ. ‘ಕೆಜಿಎಫ್ 2’ (KGF2) ಜೊತೆಗೆ ಬಾಕ್ಸಾಫೀಸ್ ಕಾಳಗ ಮಾಡಲು ಯಾವ ಸಿನಿಮಾಗಳು ಸಹ ಧೈರ್ಯ ತೋರುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈಗ ‘ಕೆಜಿಎಫ್ 2’ ಚಿತ್ರಕ್ಕೆ ಸವಾಲೆಸೆಯಲು ತಮಿಳಿನ ಸ್ಟಾರ್ ನಟ ವಿಜಯ್ ಸಿನಿಮಾ ಸಜ್ಜಾಗಿದೆ. ಇಷ್ಟು ದಿನ ಗಾಸಿಪ್ ರೂಪದಲ್ಲಿ ಇದ್ದ ಈ ಸುದ್ದಿ ಈಗ ಅಧಿಕೃತವಾಗಿದೆ. ಹೌದು, ಇತ್ತ ಬಾಕ್ಸಾಫೀಸ್ ಕೊಳ್ಳೆ ಹೊಡೆಯಲು ‘ಕೆಜಿಎಫ್ 2’ ಸಕಲ ಸಿದ್ಧತೆ ಮಾಡಿಕೊಂಡಿದ್ದರೆ, ಅತ್ತ ತಮಿಳಿನ ಬಹು ನಿರೀಕ್ಷಿತ ಸಿನಿಮಾ ‘ಬೀಸ್ಟ್’ (Beast) ಕೂಡ ತೆರೆಗೆ ಬರುತ್ತಿದೆ. ವಿಶೇಷ ಎಂದರೆ ಈ ಎರಡೂ ಚಿತ್ರಗಳು ಪ್ಯಾನ್ ಇಂಡಿಯಾ…
ನೀರಿನ ರಾಜಕಾರಣ ಮಾಡಿ ಮುಖ್ಯಮಂತ್ರಿ ಆಗುತ್ತೇನೆ ಎನ್ನುವ ಭ್ರಮೆಯಿಂದ ಹೊರಗೆ ಬನ್ನಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಗೆ ಬಿಜೆಪಿ ಟಾಂಗ್ ನೀಡಿದೆ. ಮೇಕೆದಾಟು ಯೋಜನೆ ವಿಚಾರವಾಗಿ ಮಂಗಳವಾರ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ‘ಮೇಕೆದಾಟು ಯೋಜನೆ(Mekedatu Project)ಯನ್ನು ಜಾರಿಗೊಳಿಸಲು ಬಿಡುವುದಿಲ್ಲವೆಂದು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದೆ. ತಮ್ಮದೇ ಮೈತ್ರಿ ಪಕ್ಷದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಏಕೆ ಮೌನವಾಗಿದ್ದಾರೆ? ತಮಿಳುನಾಡಿಗೆ ಪಾದಯಾತ್ರೆ ಮಾಡುವುದೆಂದು?’ ಅಂತಾ ಪ್ರಶ್ನಿಸಿದೆ. ‘ರಾಹುಲ್ ಗಾಂಧಿ(Rahul Gandhi)ತಮಿಳುನಾಡು ಸಿಎಂ ಸ್ಟ್ಯಾಲಿನ್ ಅವರ ಜೊತೆ ಇತ್ತೀಚೆಗೆ ವೇದಿಕೆ ಹಂಚಿಕೊಂಡಿದ್ದರು. ಆದರೆ ಅಧಿಕಾರದ ದಾಹದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಕರ್ನಾಟಕದ ಪರವಾಗಿ ಮಾತನಾಡಲು ಹಿಂಜರಿದರು. ಡಿಕೆಶಿಯವರೇ, ಇಲ್ಲಿ ಪಾದಯಾತ್ರೆ(Mekedatu Padayatre) ಮಾಡುವ ಬದಲು ತಮಿಳುನಾಡಿನ ಕಡೆಗೆ ಪಾದ ಬೆಳೆಸಿದ್ದರೆ ಏನಾದರೂ ಲಾಭವಾಗುತ್ತಿತ್ತಲ್ಲವೇ?’ ಅಂತಾ ಟೀಕಿಸಿದೆ. ರಾಜಕೀಯ ಲಾಭಕ್ಕಾಗಿ ಡಿಕೆಶಿ(DK Shivakumar)ಯವರು ಒಂದಲ್ಲ ಎರಡು ಬಾರಿ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ. ಎರಡು ಬಾರಿ #ಸುಳ್ಳಿನಜಾತ್ರೆ…
ತಮಿಳುನಾಡು ಮೇಕೆದಾಟು (Mekedatu) ಯೋಜನೆ ವಿಚಾರವಾಗಿ ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಇಂದು ಕಾನೂನು ಹಾಗೂ ತಾಂತ್ರಿಕ ಸಲಹೆ ಪಡೆದು ನಾಳೆ ಸದನದಲ್ಲಿ ನಿರ್ಣಯ ತರಲಾಗುವುದು ಎಂದು ತಿಳಿಸಿದರು. ಶೂನ್ಯ ವೇಳೆಯಲ್ಲಿ ಮೇಕೆದಾಟು ವಿಚಾರವಾಗಿ ಮಾತನಾಡಿದ ಅವರು, ಮೇಕೆದಾಟು ಕುಡಿಯುವ ನೀರು ಹಾಗೂ ವಿದ್ಯುತ್ (Electricity) ಉತ್ಪಾದನೆಗಾಗಿ ಯೋಜನೆ ಆಗಿದ್ದು, ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ಸಮಸ್ಯೆ ಇಲ್ಲ. ತಮಿಳುನಾಡು ಹೆಚ್ಚುವರಿ ನೀರನ್ನ ಬಳಕೆ ಮಾಡಿ ಯೋಜನೆ ರೂಪಿಸುತ್ತಿದ್ದಾರೆ. ಹೊಗೆನಕಲ್ ಎರಡನೇ ಹಂತವನ್ನು ತೆಗೆದುಕೊಳ್ಳುವ ಮಾತು ನಮ್ಮ ನೀರಿನ ಹಕ್ಕಿನ ಮೇಲೆ ಹೊಡೆತ ಆಗಿದೆ. ಅದಕ್ಕಾಗಿ ವಿರೋಧ ಮಾಡಿದ್ದೇವೆ ಮುಂದೆಯೂ ಮಾಡುತ್ತೇವೆ ಎಂದರು. ನಾವು ಕಾವೇರಿ (Kaveri Water) ನೀರನ್ನು ಬಳಕೆ ಮಾಡುವ ಎಲ್ಲ ಸಂದರ್ಭದಲ್ಲಿ ತಮಿಳುನಾಡಿನಿಂದ ಅಡ್ಡಿಯಾಗುತ್ತಿದೆ. ನಮ್ಮ ನೀರಿನ ಹಕ್ಕು ಪಡೆದುಕೊಳ್ಳಲು ನಾವು ಪರಿತಪಿಸುವುದು ರಾಜ್ಯದ ಹಿತ ದೃಷ್ಟಿಯಿಂದ ಸರಿಯಲ್ಲ. ಇದನ್ನು ಪ್ರಬಲವಾಗಿ ತೆಗೆದುಕೊಂಡು ಹೋಗುತ್ತೇವೆ ಎಂದರು. ಕೇಂದ್ರಕ್ಕೂ ಒತ್ತಾಯ ಮಾಡುತ್ತೇವೆ. ನಮ್ಮ ಡಿಪಿಆರ್…
ಮೈಸೂರು: ಡಾ. ಪುನೀತ್ ರಾಜ್ ಕುಮಾರ್ (Puneeth Rajkumar)... ಈ ಹೆಸರು ಪ್ರತಿಯೊಬ್ಬರ ಉಸಿರು. ‘ಅಪ್ಪು’ ಮಾಡಿದ ಸಾಧನೆಗೆ ಇದೀಗ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಈ ಮೂಲಕ ‘ಕರುನಾಡ ರತ್ನ’ವನ್ನು ಮತ್ತೊಮ್ಮೆ ನೆನೆಯಲಾಗಿದೆ. ಮೈಸೂರು ವಿವಿ 102ನೇ ಘಟಿಕೋತ್ಸವ(102nd Convocation of University of Mysore)ದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ‘ಅಪ್ಪು’ ಪತ್ನಿ ಅಶ್ವಿನಿಯವರು ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು. ಮೈಸೂರು ವಿವಿಯಿಂದ ಪುನೀತ್ ರಾಜ್ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್(Doctorate) ಪದವಿ ಪ್ರದಾನ ವೇಳೆ ಇಡೀ ಡಾ.ರಾಜ್ ಕುಮಾರ್ ಕುಟುಂಬವೇ ಹಾಜರಿತ್ತು. ಈ ವೇಳೆ ಪ್ರತಿಯೊಬ್ಬರೂ ಭಾವುಕರಾಗಿ ಅಗಲಿದ ‘ಕರುನಾಡ ರತ್ನ’ವನ್ನು ನೆನೆದರು. ಗಣ್ಯರ ಸಾಲಿನಲ್ಲಿ ಕುಳಿತುಕೊಂಡಿದ್ದ ಪುನೀತ್ ರಾಜ್ ಕುಮಾರ್ ಸಹೋದರಿಯರು, ‘ಅಪ್ಪು’ ಪರವಾಗಿ ಅವರ ಪತ್ನಿ ಅಶ್ವಿನಿ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡುವಾಗ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು. ಈ ವಿಶೇಷ ಸಂದರ್ಭದಲ್ಲಿ ವರನಟ ಡಾ.ರಾಜ್…
ಮಧುಗಿರಿ: ಪ್ರೇರಣಾ ಫೌಂಡೇಶನ್ ಮಧುಗಿರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಮಧುಗಿರಿ ಹಾಗೂ ಮಹೇಶ್ ಶಿಕ್ಷಣ ಸಂಸ್ಥೆ ಅಶೋಕ ನಗರ ತುಮಕೂರು ವತಿಯಿಂದ ಮಧುಗಿರಿ ಕನ್ನಡ ಭವನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಪರೀಕ್ಷಾ ಸಿದ್ಧತಾ ಕಾರ್ಯಾಗಾರ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೇರಣಾ ಫೌಂಡೇಶನ್ ಅಧ್ಯಕ್ಷರಾದ ರಮೇಶ್ ಎಸ್.ಆರ್. ಅವರು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಫೌಂಡೇಶನ್ ಪ್ರತಿ ವರ್ಷ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ಉದ್ದೇಶ ಹಾಗೂ ಮಧುಗಿರಿ ತಾಲ್ಲೂಕು ಮಕ್ಕಳು ರಾಜ್ಯದಲ್ಲಿ ಮೊದಲ ಶ್ರೇಣಿಯಲ್ಲಿ ತೇರ್ಗಡೆ ಹೊಂದಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸುತ್ತಿರುವುದಾಗಿ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜನಾರ್ಧನ ರವರು ಪರೀಕ್ಷಾ ಸಿದ್ಧತಾ ಕಾರ್ಯಾಗಾರದ ಬಗ್ಗೆ ವಿದ್ಯಾರ್ಥಿಗಳೂಂದಿಗೆ ಸಂವಾದ ನಡೆಸಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಸಹನಾ ನಾಗೇಶ್, ಮಾರುತಿ ಇಂಟರ್ನೆಟ್ ಸಂಸ್ಧೆಯ ರಮೇಶ್, ಮಹೇಶ್ ಶಿಕ್ಷಣ ಸಂಸ್ಥೆಯ…
ಪಾವಗಡ: ಇತ್ತೀಚೆಗೆ ಪಾವಗಡ ಸಮೀಪ ಪಳವಳ್ಳಿ ಕಟ್ಟೆ ಮೇಲೆ ಬಸ್ ಅಪಘಾತವಾಗಿ 6 ಜನ ಮೃತಪಟ್ಟು, 30ಕ್ಕೂ ಹೆಚ್ಚು ಗಾಯಾಳುಗಳು ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಸಾವು ಬದುಕಿನ ನಡುವೆ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಗಾಯಾಳುಗಳ ಪೈಕಿ ಮಹೇಂದ್ರ ಎಂಬ ವಿದ್ಯಾರ್ಥಿಗೆ ಶಸ್ತ್ರ ಚಿಕಿತ್ಸೆಗೆ ನೆರವು ಕೋರಿ ಪಾಲಕರು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ್ದು, ಈ ಹಿನ್ನಲೆಯಲ್ಲಿ ಇಂದು ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಕೆ.ಎನ್.ಆರ್. ಅಭಿಮಾನಿ ಬಳಗ ಹಾಗೂ ಹೆಲ್ಪ್ ಸೊಸೈಟಿ ವತಿಯಿಂದ ಅರ್ಥಿಕ ಸಹಾಯವನ್ನು ಹೆಲ್ಪಿಂಗ್ ಹ್ಯಾಂಡ್ ಸಂಘಟನೆ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ನೆರವು ವಿತರಿಸಿ ಮಾತನಾಡಿದ ಕೆ.ಎನ್.ಆರ್.ಅಭಿಮಾನ ಬಳಗದ ಅಧ್ಯಕ್ಷ ಡಿ.ಸಿ.ಸಿ. ಶ್ರೀನಿವಾಸ್ ಮಾತನಾಡಿ, ರಾಜ್ಯ ಸರ್ಕಾರ ಮೃತಪಟ್ಟ ಕುಟುಂಬಗಳಿಗೆ ತಲಾ ಇಪ್ಪತ್ತು ಲಕ್ಷ ಹಾಗೂ ಗಾಯಾಲುಗಳಿಗೆ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸುವಂತೆ ಈ ಮೂಲಕ ಒತ್ತಾಯಿಸಿದರು. ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಮಾತನಾಡುತ್ತ, ಸರ್ಕಾರ ಹಾಗೂ ಜನಪ್ರತಿನಿಧಿಗಳು ಸಂಪೂರ್ಣ ವೈದ್ಯಕೀಯ ವೆಚ್ಚ ಭರಿಸುವುದಾಗಿ ಹೇಳುತ್ತಿದ್ದಾರೆ. ಆದರೆ,…