Subscribe to Updates
Get the latest creative news from FooBar about art, design and business.
- ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
- ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
- ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
- ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
- ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
- ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
- ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
- ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Author: admin
ಇಂದೋರ್: ಮಧ್ಯಪ್ರದೇಶ(Madhya Pradesh)ದ ಇಂದೋರ್ ಜಿಲ್ಲೆಯಲ್ಲಿ 75 ವರ್ಷದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಆಕೆಯ ಮೊಮ್ಮಗ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. 500 ಗ್ರಾಂ ತೂಕದ ಬೆಳ್ಳಿಯ ಉಂಗುರಗಳಿಗಾಗಿ ಆರೋಪಿಗಳು ವೃದ್ಧೆಯನ್ನು ಕೊಂದು ಆಕೆಯ ಎರಡೂ ಕಾಲುಗಳನ್ನು ಕತ್ತರಿಸಿ ಆಭರಣಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳ್ಳಿ ಉಂಗುರ ನೀಡಲು ಅಜ್ಜಿಯ ನಕಾರ ಇಂದೋರ್(Indore)ನಿಂದ ಸುಮಾರು 35 ಕಿಮೀ ದೂರದಲ್ಲಿರುವ ಚೋಟಿ ಖುದೈಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. 24 ವರ್ಷದ ರಾಜೇಶ್ ಬಗ್ರಿ ಸಂಬಂಧಿಕರ ಮಗನ ಮದುವೆಗೆ ಆರ್ಥಿಕ ಸಹಾಯಕ್ಕಾಗಿ ತನ್ನ ಅಜ್ಜಿ ಜಮುನಾ ಅವರಿಂದ ಬೆಳ್ಳಿ ಉಂಗುರಗಳನ್ನು ಕೇಳಿದ್ದಾನೆ. ಆದರೆ ಅಜ್ಜಿ ತನ್ನ ಕಾಲುಗಳಲ್ಲಿ ಧರಿಸಿದ್ದ ಎರಡು ಉಂಗುರಗಳನ್ನು ಕೊಡಲು ನಿರಾಕಿಸಿದ್ದಳೆಂದು ಎಸ್ಪಿ (ಗ್ರಾಮೀಣ) ಭಗವತ್ ಸಿಂಗ್ ವಿರ್ಡೆ ತಿಳಿಸಿದ್ದಾರೆ.ಸ್ನೇಹಿತನೊಂದಿಗೆ ಸೇರಿ ಅಜ್ಜಿ ಕೊಂದ ಮೊಮ್ಮಗ ಅಜ್ಜಿ(Grandmother)ತನ್ನ ಬಳಿಯಿದ್ದ ಉಂಗುರಗಳನ್ನು ಕೊಡಲು ನಿರಾಕರಿಸಿದ್ದರಿಂದ ಮೊಮ್ಮಗ ತನ್ನ 19 ವರ್ಷದ ಸ್ನೇಹಿತ ವಿಜಯ್ ಧೋಲಿಯೊಂದಿಗೆ ಸೇರಿ ಆಕೆಯನ್ನು…
ಚಂಡೀಗಢ : ಕಳೆದ ವರ್ಷ ಗಣರಾಜ್ಯೋತ್ಸವ ದಿನದಂದು (Republic Day)ದೆಹಲಿಯ ಕೆಂಪು ಕೋಟೆ ಬಳಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಪಂಜಾಬಿ ನಟ ದೀಪ್ ಸಿಧು (Deep Sidhu) ಮಂಗಳವಾರ (ಫೆಬ್ರವರಿ 15) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ದೀಪ್ ಸಿಧು ಅವರ ಕಾರು ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಟ್ರಕ್ ಚಾಲಕ : ಬಂಧಿತ ಆರೋಪಿ ಟ್ರಕ್ ಚಾಲಕನನ್ನು ಹರಿಯಾಣದ ನಹು ನಿವಾಸಿ ಖಾಸಿಂ ಎಂದು ಗುರುತಿಸಲಾಗಿದೆ. ಬಂಧಿತನನ್ನು ಇಂದು (ಫೆಬ್ರವರಿ 18) ನ್ಯಾಯಾಲಯಕ್ಕೆ (Court) ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಟ್ರಕ್ಗೆ ಎಸ್ಯುವಿ ಡಿಕ್ಕಿ : ಹರಿಯಾಣದ ಸೋನಿಪತ್ ಜಿಲ್ಲೆಯ ಖರ್ಖೋಡಾ ಬಳಿ ಕುಂಡ್ಲಿ-ಮನೇಸರ್-ಪಲ್ವಾಲ್ ಹೆದ್ದಾರಿಯಲ್ಲಿ ದೀಪ್ ಸಿಧು (Deep Sidhu) ಅವರ ಎಸ್ಯುವಿ ಟ್ರಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ದೀಪ್ ಸಿಧು ಸಾವನ್ನಪ್ಪಿದ್ದರು. ಅಪಘಾತದ ವೇಳೆ ದೀಪ್ ಜೊತೆಗಿದ್ದ ಭಾವಿ ಪತ್ನಿ : ಅಪಘಾತದ ವೇಳೆ ದೀಪ್ ಸಿಧು ಅವರ…
ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಪದ್ಧತಿ (Food) ಮತ್ತು ಅನಾರೋಗ್ಯಕರ ಜೀವನಶೈಲಿಯಿಂದಾಗಿ ದೇಹ ದುರ್ಬಲವಾಗುತ್ತಿದೆ. ಇದರಿಂದಾಗಿ ಸ್ವಲ್ಪ ದೂರ ನಡೆದರೂ ಸುಸ್ತಾಗುವ ಅನುಭವವಾಗುತ್ತದೆ. ಅದೇ ರೀತಿ ನಾವು ನಮ್ಮ ಮನೆಯ ಮೆಟ್ಟಿಲುಗಳನ್ನು (Steps) ಏರಿದಾಗ ಏದುಸಿರು ಬಿಡುತ್ತೇವೆ ಮತ್ತು ನಮ್ಮ ಹೃದಯ ಬಡಿತವೂ ತುಂಬಾ ವೇಗವಾಗಿರುತ್ತದೆ. ನಿಮ್ಮ ದೇಹ ದುರ್ಬಲವಾಗಿದೆಯೇ? ಇದು ಅನೇಕ ಜನರು ಅನುಭವಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಮೆಟ್ಟಿಲುಗಳನ್ನು ಹತ್ತುವಾಗ (Climbing stairs) ದಣಿವಾಗುವುದು ದೊಡ್ಡ ವಿಷಯವಲ್ಲ, ಆದರೆ ಇದು ತುಂಬಾ ಸೀಮಿತ ಪ್ರಮಾಣದಲ್ಲಿರಬೇಕು. ಸಮಸ್ಯೆ ಹೆಚ್ಚಿದ್ದರೆ, ಅದು ದುರ್ಬಲ ದೇಹದ ಲಕ್ಷಣವನ್ನು ತೋರಿಸುತ್ತದೆ. ಮೆಟ್ಟಿಲು ಹತ್ತುವಾಗ ಸಾಕಷ್ಟು ಸುಸ್ತು ಇರುತ್ತದೆ ಮೆಟ್ಟಿಲುಗಳನ್ನು ಹತ್ತುವಾಗ ಮತ್ತು ಇಳಿಯುವಾಗ ಸಹ, ನಮ್ಮ ದೇಹದ ಕ್ಯಾಲೊರಿ ಖರ್ಚಾಗುತ್ತದೆ. ಇದರಿಂದಾಗಿ ನಾವು ಹೆಚ್ಚಿನ ಶಕ್ತಿಯನ್ನು ಹಾಕಬೇಕಾಗುತ್ತದೆ. ಇದರಿಂದ ದಣಿವಾಗುತ್ತದೆ. ಆದರೆ ಎರಡು ಮಹಡಿಗಳನ್ನು ಹತ್ತಿದ ನಂತರ ನೀವು ಸುಸ್ತಾಗಲು ಪ್ರಾರಂಭಿಸಿದರೆ, ಅದು ಒಳ್ಳೆಯ ಲಕ್ಷಣವಲ್ಲ. ಇದು ನಿಮ್ಮ ದೇಹದ ದೌರ್ಬಲ್ಯವನ್ನು ತೋರಿಸುತ್ತದೆ. ತಲೆ ತಿರುಗುವ…
ವಿವಾದ (Hijab Controversy) ನಿಧಾನವಾಗಿ ಇಡೀ ದೇಶಕ್ಕೆ ಹರಡಿದೆ. ಹಿಜಾಬ್ ವಿವಾದದ ಪ್ರಕರಣ, ಕರ್ನಾಟಕ ಹೈಕೋರ್ಟ್ನಲ್ಲಿ (Karnataka High Court) ವಿಚಾರಣೆ ನಡೆಯುತ್ತಿದ್ದು, ತೀರ್ಪು ಬರಬೇಕಿದೆ. ಈ ಮಧ್ಯೆ, ಉತ್ತರ ಪ್ರದೇಶದ ಅಲಿಗಢದ ಡಿಎಸ್ ಕಾಲೇಜು (DS College) ಸಮವಸ್ತ್ರ ಧರಿಸುವುದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸುತ್ತೋಲೆ ಹೊರಡಿಸಿದೆ. ನಿಯಮಗಳನ್ನು ಉಲ್ಲಂಘಿಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಸಮವಸ್ತ್ರವಿಲ್ಲದೆ ಕಾಲೇಜಿಗಿಲ್ಲ ಪ್ರವೇಶ : ಅಲಿಘರ್ನ ಡಿಎಸ್ ಕಾಲೇಜಿನಲ್ಲಿ (DS College)ನಿಗದಿತ ಸಮವಸ್ತ್ರವಿಲ್ಲದೆ, ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶವನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಮಾತನಾಡಿದ ಕಾಲೇಜು ಪ್ರಾಂಶುಪಾಲ ಡಾ.ರಾಜ್ ಕುಮಾರ್ ವರ್ಮಾ, ವಿದ್ಯಾರ್ಥಿಗಳು ಮುಖ ಮುಚ್ಚಿಕೊಂಡು ಕ್ಯಾಂಪಸ್ಗೆ ಪ್ರವೇಶಿಸುವಂತಿಲ್ಲ ಎಂದಿದ್ದಾರೆ. ಕಾಲೇಜು ಆವರಣದೊಳಗೆ ಕೇಸರಿ ಶಾಲು ಅಥವಾ ಹಿಜಾಬ್ (Hijab) ಧರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕಾಲೇಜಿನ ಆದೇಶದ ಬಗ್ಗೆ ವಿವಾದ ಪ್ರಾರಂಭವಾಗಬಹುದು : ಡಿಎಸ್ ಕಾಲೇಜಿನ (DS College)ಈ ಆದೇಶದ ಮೇಲೆ ವಿವಾದ ಪ್ರಾರಂಭವಾಗಬಹುದು ಎಂದು ಹೇಳಲಾಗಿದೆ. ಯಾಕೆಂದರೆ ಯಾವುದೇ ವಿದ್ಯಾರ್ಥಿಗೆ…
ಪಾವಗಡ: ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ನಿಡಗಲ್ ಸಂಸ್ಥಾನ ವತಿಯಿಂದ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ, ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಲಾಯಿತು. ಇದೇ ವೇಳೆ ಉಪ ತಹಶೀಲ್ದಾರ್ ಸುಮತಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಪ್ರತಿಭಟನೆಯನ್ನುದ್ದೇಶಿ ಶ್ರೀವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾಡಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನ ನಂದಾಪುರಿ ಸ್ವಾಮೀಜಿ ರವರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತತ ಎಂಟು ದಿನಗಳಿಂದ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಹೋರಾಟ ಮಾಡುತ್ತಿರುವ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ರವರ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿ ಶೀಘ್ರವಾಗಿ ಸರ್ಕಾರ ಪರಿಶಿಷ್ಟ ಪಂಗಡದ ಶೇಕಡ 3ರಿಂದ 7.5 ಪರಿಶಿಷ್ಟ ಜಾತಿಯ ಸಮುದಾಯಗಳಿಗೆ 15ರಿಂದ 18 ಪರ್ಸೆಂಟ್ ಹೆಚ್ಚಿಸುವಂತೆ ರಾಜನಹಳ್ಳಿ ಶ್ರೀಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಮೊಗ್ಗ ಸಿದ್ಧಾರೂಢ ಶ್ರಮದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ,…
ಬೆಂಗಳೂರು: ಗ್ರಾಮವೊಂದರಲ್ಲಿ ಯೇಸುವಿನ ಪ್ರತಿಮೆಯನ್ನು ಕೆಡವಿರುವುದು ದಕ್ಷಿಣ ಭಾರತದ ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ಹೆಚ್ಚುತ್ತಿರುವ ದಾಳಿಗೆ ಇತ್ತೀಚಿನ ಉದಾಹರಣೆ ಎಂದು ಕರ್ನಾಟಕದ ಕ್ಯಾಥೋಲಿಕ್ ಬಿಷಪ್ ಗಳು ಹೇಳಿದ್ದಾರೆ. ಕೋಲಾರದಲ್ಲಿನ ಪ್ರತಿಮೆಯನ್ನು “ಅತ್ಯಂತ ಅಸಭ್ಯ ಮತ್ತು ನೋವಿನ ರೀತಿಯಲ್ಲಿ” ಮತ್ತು ಸರಿಯಾದ ನ್ಯಾಯಾಲಯದ ಆದೇಶವಿಲ್ಲದೆ ಕೆಡವಲಾಗಿದೆ ಎಂದು ಕರ್ನಾಟಕ ಪ್ರಾದೇಶಿಕ ಕ್ಯಾಥೋಲಿಕ್ ಬಿಷಪ್ಸ್ ಕೌನ್ಸಿಲ್ (ಕೆಆರ್ಸಿಬಿಸಿ) ವಕ್ತಾರ ಫಾದರ್ ಫೌಸ್ಟಿನ್ ಲೋಬೋ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಆರ್ಚ್ಡಯಾಸಿಸ್ ಅಡಿಯಲ್ಲಿ ಬರುವ ಕೋಲಾರವು ರಾಜ್ಯದ ರಾಜಧಾನಿ ಬೆಂಗಳೂರಿನ ಈಶಾನ್ಯಕ್ಕೆ ಸುಮಾರು 65 ಕಿಮೀ ದೂರದಲ್ಲಿದೆ. ಕರ್ನಾಟಕದ ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕು ಆಡಳಿತವು ಸ್ಥಳೀಯ ಕ್ರೈಸ್ತರ ವಿರೋಧದ ನಡುವೆ ಫೆಬ್ರವರಿ 15 ರಂದು ಗೋಕುಂಟೆ ಗ್ರಾಮದಲ್ಲಿ 20 ಅಡಿ ಎತ್ತರದ ಯೇಸುವಿನ ಪ್ರತಿಮೆಯನ್ನು ಕೆಡವಿತು. “ಧ್ವಂಸಗೊಳಿಸುವಿಕೆಯ ವೀಡಿಯೊವನ್ನು ವ್ಯಾಪಕವಾಗಿ ಪ್ರಸಾರ ಮಾಡಲಾಯಿತು ಮತ್ತು ಹಿಂದೂ ಪರವಾದ ಸರ್ಕಾರಿ ಯಂತ್ರಗಳ ಪುನರಾವರ್ತಿತ ಕೃತ್ಯಗಳಿಂದ ಕ್ರಿಶ್ಚಿಯನ್ನರು ನಿಜವಾಗಿಯೂ ಗಾಬರಿಗೊಂಡಿದ್ದಾರೆ ಮತ್ತು ನೋವಿನಿಂದ ಕೂಡಿದ್ದಾರೆ” ಎಂದು ಫಾದರ್ ಲೋಬೋ…
ಹೆಚ್.ಡಿ.ಕೋಟೆ: ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥೆಯಿಂದ ತಾಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹಿರೇಹಳ್ಳಿ ಹಾಡಿ ಎ. ಕಾಲೋನಿಯಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥೆಯ ಸಿಬ್ಬಂದಿಗಳ ಜೊತೆ ಹಿರೇಹಳ್ಳಿ ಹಾಡಿಯ ಮುಖಂಡರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ಹಿರೇಹಳ್ಳಿ ಹಾಡಿಯ ಚಿಕ್ಕ ಮಕ್ಕಳು ಕೂಡ ಶ್ರಮದಾನದಲ್ಲಿ ಪಾಲ್ಗೊಂಡರು. ಹಿರೇಹಳ್ಳಿ ಹಾಡಿಯ ಮನೆಯ ಮುಂಭಾಗ ಬೆಳೆದಿರುವಂತಹ ಗಿಡಗಂಟಿಗಳನ್ನು ಕಡಿದು. ಒಂದು ಕಡೆ ಶೇಖರಣೆ ಮಾಡಿ ಬೆಂಕಿ ಹಚ್ಚಲಾಯಿತು. ಹಿರೇಹಳ್ಳಿ ಹಾಡಿಯ ಪ್ರಮುಖ ಎರಡು ಬೀದಿಗಳಲ್ಲಿರುವ ಕಳೆಗಳನ್ನು ಸ್ವಚ್ಛಗೊಳಿಸಲಾಯಿತು. ಚರಂಡಿಯಲ್ಲಿರುವ ತ್ಯಾಜ್ಯ ವಸ್ತುಗಳನ್ನು ಬೇರ್ಪಡಿಸಿ, ಕಸಗಳನ್ನು ಹೊರೆತೆಗೆದು ಚರಂಡಿ ನೀರನ್ನು ಹಾಡಿಯಿಂದ ಹೊರಗಡೆ ಹೋಗುವಂತೆ ಸ್ವಚ್ಛತೆ ಮಾಡಿದರು. ಇದೇ ವೇಳೆ ಚರಂಡಿ ನೀರಿನ ಬಗ್ಗೆ ಹಾಗೂ ಮನೆಯ ಮುಂಭಾಗ ಬೆಳೆದಿರುವಂತಹ ಗಿಡಗಂಟಿಗಳಿಂದ ಬರುವಂತಹ ರೋಗಗಳ ಬಗ್ಗೆ ಹಾಡಿ ಜನತೆಗೆ ಅರಿವು ಮೂಡಿಸಿದರು. ಬಳಿಕ ಹಿರೇಹಳ್ಳಿ ಹಾಡಿಯ ಮುಖಂಡ ಬಸವರಾಜ ಅವರು ಮಾತನಾಡಿ, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥೆಯು…
ತುರುವೇಕೆರೆ: ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರ ಮತ್ತು ಗ್ಲೋಬಲ್ ಇನ್ಸ್ಟಿಟ್ಯೂಟ್ ಫಾರ್ , ಎಜುಕೇಶನ್, ಅಂಡ್ ರಿಸರ್ಚ್ ಫೌಂಡೇಸ್ಷನ್ ಸಹಹೋಗದೊಂದಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ತರಬೇತಿ ಹಾಗೂ ಪರವಾನಗಿ ಆಂದೋಲನ, ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಅಂಕಿತ ಅಧಿಕಾರಿಗಳಾದ ಡಾ.ಪ್ರಭಾವತಿ, ಬದಲಾಗುತ್ತಿರುವ ಆಧುನಿಕ ಜಗತ್ತಿನಲ್ಲಿ, ಅಸುರಕ್ಷಿತ ಆಹಾರ ಪದ್ಧತಿ, ಸ್ವಚ್ಚತೆ ಇಲ್ಲದೆ ಇರುವ ಪರಿಸರದಲ್ಲಿ ಆಹಾರ ಉತ್ಪಾದನೆ, ಕಲಬೆರಕೆ, ಅಸುರಕ್ಷಿತ ಪ್ಯಾಕಿಂಗ್ ಮತ್ತು ಸಾಗಾಣಿಕೆ , ಆತಾಂತ್ರಿತವಾಗಿ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಉತ್ಪಾದನೆ ಇತ್ಯಾದಿ ಕಾರಣಗಳಿಂದ ನಾವು ತೆಗೆದುಕೊಳ್ಳುವ ಆಹಾರ ಗುಣಮಟ್ಟವಿಲ್ಲದೇ ಹಲವಾರು ಅನಾರೋಗ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಎಲ್ಲ ವಿಧದ ವ್ಯಾಪಾರಿಗಳು ಖಡ್ಡಾಯವಾಗಿ ನೋಂದಣಿ ಹಾಗೂ ಪರವಾನಗಿ ಮಾಡಿಸಲೇ ಬೇಕು ಎಂದರು. ಈ ಸಂದರ್ಭದಲ್ಲಿ, ಸೀನಿಯರ್ ಫುಡ್ ಸೆಫ್ಟಿ ಆಫಿಸರ್ , ನಾರಾಯಣಪ್ಪ, ತುರುವೇಕೆರೆ ತಾಲ್ಲೂಕು ವರ್ತಕರ ಸಂಘದ ಮಲ್ಲಿಕಾರ್ಜುನ್ ಹಾಗೂ ಗ್ಲೋಬಲ್ ಇನ್ಸ್ಟಿಟ್ಯೂಟ್ ಫಾರ್ ಎಜುಕೇಶನ್ ರಿಸರ್ಚ್…
ಕೊರಟಗೆರೆ : ಅಣ್ಣ-ತಂಗಿಯ ಅನೈತಿಕ ಸಂಬಂಧಕ್ಕೆ ತಾಯಿ ಅಡ್ಡ ಬರುತ್ತಾರೆ ಎಂಬ ಕಾರಣಕ್ಕೆ ಮಲಗಿದ್ದ ತಾಯಿಯನ್ನು ಮಧ್ಯರಾತ್ರಿ ಉಸಿರುಕಟ್ಟಿಸಿ ಕೊಲೆ ಮಾಡಿದ ವಿಲಕ್ಷಣ ಘಟನೆಯನ್ನು ಕೊರಟಗೆರೆ ಪೊಲೀಸರು ಭೇದಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೊರಟಗೆರೆ ಪಟ್ಟಣದ ಸಜ್ಜನರ ಬೀದಿ ಕೃಷ್ಣಾಚಾರ್ ಎಂಬವರ ಪತ್ನಿ 45 ವರ್ಷ ವಯಸ್ಸಿನ ಸಾವಿತ್ರಮ್ಮ ಹತ್ಯೆಗೀಡಾದವರಾಗಿದ್ದಾರೆ. ಸಾವಿತ್ರಮ್ಮನ ಮಗಳು ಶೈಲಜಾ ಹಾಗೂ ಸಾವಿತ್ರಮ್ಮನ ತಂಗಿಯ ಮಗ ಪುನೀತ್ ಹತ್ಯೆ ಆರೋಪಿಗಳಾಗಿದ್ದಾರೆ. ಸಂಬಂಧದಲ್ಲಿ ಅಣ್ಣ ತಂಗಿಯಾಗಿದ್ದ ಪುನೀತ್ ಮತ್ತು ಶೈಲಜಾ ನಡುವೆ ಅನೈತಿಕ ಸಂಬಂಧವಿತ್ತು ಎನ್ನಲಾಗಿದ್ದು, ಈ ಸಂಬಂಧಕ್ಕೆ ಸಾವಿತ್ರಮ್ಮ ಅಡ್ಡವಾಗುತ್ತಿದ್ದಾರೆ ಎಂಬ ಕಾರಣಕ್ಕೆ ಮಲಗಿದ್ದ ವೇಳೆ ಇಬ್ಬರೂ ಸೇರಿ ಅವರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದು, ಬಳಿಕ ನೀರಿನ ಸಂಪಿನೊಳಗೆ ಮೃತದೇಹವನ್ನು ಹಾಕಿ ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಸಂಬಂಧಿಕರು ಕೂಡ ಸಾವಿತ್ರಮ್ಮ ನೀರಿನ ಸಂಪಿಗೆ ಬಿದ್ದ ಮೃತಪಟ್ಟಿರಬಹುದು ಎಂದು ನಂಬಿದ್ದರು. ಹಾಗಾಗಿ ಮರಣೋತ್ತರ ಪರೀಕ್ಷೆ ನಡೆಸದೆಯೇ ಅಂತ್ಯಕ್ರಿಯೆ ನಡೆಸಿದ್ದರು. ಆದರೆ ಇತ್ತೀಚೆಗೆ ಇವರಿಬ್ಬರ ಮೇಲೆ ಅನುಮಾನಗೊಂಡು…
ಹಿರಿಯೂರು: ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿ, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು –ಹಿರಿಯೂರಿನ ರಾಷ್ಟ್ರೀಯ ಹೆದ್ದಾರಿ 4ರ ಕೆ ಆರ್ ಹಳ್ಳಿ ಗೇಟ್ ಬಳಿಯಲ್ಲಿ ನಡೆದಿದೆ. ಬೆಂಗಳೂರಿನ ನಂಜುಡೇಶ್ವರ ನಗರದ ನಂದಿನಿ ಬಡಾವಣೆ ನಿವಾಸಿಗಳು ಅಪಘಾತಕ್ಕೀಡಾದವರಾಗಿದ್ದು, ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮದ ಸಮೀಪ ರವಿಡಾಬಾ ಹೋಟೆಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ಮೃತಪಟ್ಟು, ಮೂವರಿಗೆ ಗಂಭೀರ ಗಾಯವಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆ ಯ ಪಿ ಎಸ್ ಐ ಶಶಿಕಲಾ ಡಬ್ಲೂ, ಪರಿಶೀಲನೆ ನಡೆಸಿದ್ದು, ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ ). ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…