Author: admin

ಚಿತ್ರದುರ್ಗ: ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸಿಬೇಕಾಗುತ್ತದೆ ಎಂದು ಕಾಡುಗೊಲ್ಲ ಸಂಘದ ರಾಜ್ಯಾಧ್ಯಕ್ಷ ಹಾಗೂ ಬಿ ಬಿ ಎಂ ಪಿ ರಾಜಣ್ಣ ಎಚ್ಚರಿಸಿದರು . ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಸಮೀಪ ನಡೆದ ಕಾಡುಗೊಲ್ಲ ಸಭೆಯಲ್ಲಿ ಬಿ ಜೆ ಪಿ ಮುಖಂಡರಾದ ಸಿದ್ದೇಶ್ ಯಾದವ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಪಕ್ಷಾತೀತ ಕಾಡುಗೊಲ್ಲ ಮುಖಂಡರ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸುವಂತೆ ಒತ್ತಾಯಿಸಿ ದಶಕಗಳಿಂದ ಹೋರಾಟ ನಡೆಸುತ್ತಿದ್ದೇವೆ . ಆದರೂ ಆಡಳಿತ ನಡೆಸಿದವರು ನಮ್ಮನ್ನು ಮತ ಬ್ಯಾಂಕ್ ಆಗಿ ಬಳಸಿಕೊಂಡವರೇ ಹೊರತು, ಕಾಡುಗೊಲ್ಲ ಸಮುದಾಯದ ಬೇಡಿಕೆಯನ್ನು ಈಡೇರಿಸಲಿಲ್ಲ. ಹೀಗಾಗಿ ಚುನಾವಣೆ ಬಹಿಷ್ಕಾರದಂತಹ ದಿಟ್ಟ ತೀರ್ಮಾನ ಕೈಗೊಳ್ಳಲು ಚಿಂತನೆನಡೆಸಿದ್ದೇವೆ ಎಂದರು. ಎಸ್ಟಿ ಮೀಸಲಾತಿಗಾಗಿ ರಾಜಕೀಯ ವ್ಯತ್ಯಾಸಗಳನ್ನು ಬದಿಗಿಟ್ಟು ಹೋರಾಟ ನಡೆಸೋಣ. ರಾಜಕೀಯ ಕಾರಣಕ್ಕಾಗಿ ಈ ಹೋರಾಟ ನಡೆಸುತ್ತಿಲ್ಲ. ನಮ್ಮ ಹಕ್ಕನ್ನು ಪಡೆಯಲು ಅನಿವಾರ್ಯವಾಗಿ ಬೀದಿಗೆ ಇಳಿಯಬೇಕಾಗಿದೆ ಎಂದು ಅವರು ಕರೆ ನೀಡಿದರು. ಬಿಜೆಪಿ ಸರ್ಕಾರದಲ್ಲಿ ಕಾಡುಗೊಲ್ಲರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ…

Read More

ಕರ್ನಾಟಕ ಬಂಜಾರ ಜಾಗೃತಿ ದಳ ವತಿಯಿಂದ ರಾಜ್ಯಾಧ್ಯಕ್ಷ ತಿಪ್ಪ ಸರ್ ನಾಯ್ಕ್  ಅಧ್ಯಕ್ಷತೆಯಲ್ಲಿ  283ನೇ ಶ್ರೀ ಸಂತ ಸೇವಾಲಾಲ್ ಜಯಂತೋತ್ಸವ ಕಾರ್ಯಕ್ರಮ  ಬೆಳಗುಂಬ ತಾಂಡದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭೋಗ್ ಪೂಜಾ ಕಾರ್ಯಕ್ರಮ, ಧಾರ್ಮಿಕ ಜಾಗೃತಿ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಅನ್ನಸಂತರ್ಪಣೆ  ನಡೆಸಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಜಯರಾಂ ನಾಯ್ಕ, ಮಹಿಳಾ ಘಟಕ ಅಧ್ಯಕ್ಷೆ ಶಾಂತಾ ಜಯರಾಂ, ಯುವ ಘಟಕ ಅಧ್ಯಕ್ಷ ಮಂಜಾನಾಯ್ಕ್, ಸಂಘಟನೆ ಕಾರ್ಯದರ್ಶಿ ಉಮೇಶ್ ನಾಯ್ಕ್ ಹಾಗೂ ದೇವಸ್ಥಾನ ಮಂಡಳಿ ಕಾರ್ಯಧ್ಯಕ್ಷ  ದೇವರಾಜ್ ನಾಯ್ಕ್ ಹಾಗೂ ಊರಿನ ಮತ್ತು ಅಕ್ಕ ಪಕ್ಕದ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು: ಯಾವ ಕಾಲೇಜಿನಲ್ಲಿ ಮೊದಲಿನಿಂದಲೂ ಸಿಡಿಸಿ ಕಮಿಟಿಗಳು ಹಿಜಾಬ್ ಹಾಕಬೇಕು ಬೇಡ ಅಂತ ತೀರ್ಮಾನ ತೆಗೆದುಕೊಂಡಿದ್ದಾರೆ ಆ ಕಾಲೇಜುಗಳಿಗೆ  ಕೋರ್ಟ್ ಆದೇಶ ಅನ್ವಯವಾಗುತ್ತದೆ ಎಂದು ತುಮಕೂರು ವೆಲ್ಫೇರ್ ಪಾರ್ಟಿ  ಜಿಲ್ಲಾಧ್ಯಕ್ಷ ತಾಜುದ್ದೀನ್ ಶರೀಫ್ ತಿಳಿಸಿದರು. ತುಮಕೂರು ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗ ಅಧಿಕಾರಿಗಳಿಗೆ ಹೈಕೋರ್ಟ್ ಮಧ್ಯಾಂತರ ಆದೇಶದ ಬಗ್ಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು,  ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚೆ ನಡೆಸಿದ್ದೇವೆ. ಸ್ಕೂಲಿಗೆ ಬರುವ ಮಕ್ಕಳಿಗೆ ಹಿಜಾಬ್ ಇಲ್ಲದೆ  ಬರಬೇಕು ಅಂತ ಹೇಳಿದ್ದಾರೆ.  ಅದಕ್ಕಾಗಿ ಹೈಕೋರ್ಟಿನ ಮಧ್ಯಂತರ ಆದೇಶ ಏನಿದೆ ಅದನ್ನು ವಿವರವಾಗಿ ತಿಳಿಸಿದ್ದೇವೆ  ಎಂದರು. ಮೊದಲಿನಿಂದಲೂ ಯಾವ ಕಾಲೇಜಿನಲ್ಲಿ ಹಿಜಾಬ್ ಮತ್ತು ದುಪಟ್ಟ ಹಾಕಿ ಬರಲಾಗುತ್ತಿತ್ತು ಅಲ್ಲಿ ಅವಕಾಶ ನೀಡಬೇಕು ಎಂದು  ನ್ಯಾಯಮೂರ್ತಿಗಳ ಮಧ್ಯಂತರ ತೀರ್ಪಿನಲ್ಲಿ ಇದೆ ಎಂದು ಹೇಳಿದ ಅವರು, ಈ ವಿಚಾರವಾಗಿ ನಾವು ಉಪವಿಭಾಗಾಧಿಕಾರಿಗಳಿಗೆ ವಿವರವಾಗಿ ತಿಳಿಸಿ, ಜಿಲ್ಲಾಧಿಕಾರಿಯವರಿಗೆ ಮನವಿ ನೀಡಿದ್ದೇವೆ ಎಂದರು. ತುಮಕೂರು ನಗರದಲ್ಲಿ ಒಂದು ಎಜುಕೇಶನ್ ನಲ್ಲಿ ಹಿಂದುಳಿದ ಹೆಣ್ಣು…

Read More

ತುಮಕೂರು ಗ್ರಾಮಾಂತರ: ಗೂಳೂರು ಹೋಬಳಿ ನೇರಳಾಪುರ ಕೆರೆಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 3-4 ವರ್ಷದ ಹೆಣ್ಣು ಚಿರತೆ ಬಿದ್ದಿದ್ದು ಸುತ್ತಮುತ್ತಲಿನ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್ ರವರ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ನಟರಾಜು, ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಮೊಹಮದ್ ಉಮರ್ ರಬ್ಬಾನಿ ಸಿಬ್ಬಂದಿಗಳಾದ ಬಾಲಕೃಷ್ಣೇಗೌಡ ಹೊಳಕಲ್ ಗಂಗಪ್ಪ ಮುಂತಾದವರು ಈ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು: ಜಿಲ್ಲಾ ಪಂಚಾಯತ್ ತುಮಕೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ನೇಹ ಜೀವನ ಫೌಂಡೇಶನ್ ಸಹಯೋಗದಲ್ಲಿಂದು ಗುಬ್ಬಿ ತಾಲೂಕಿನ  ಇಡಗೂರು ಗ್ರಾಮ‌ ಪಂಚಾಯಿತಿಯಲ್ಲಿ  ಜಲ ಜೀವನ್ ಮಿಷನ್ ಯೋಜನೆ ಕುರಿತು   ವಿಶೇಷ ಗ್ರಾಮಸಭೆ  ಸ್ವ ಸಹಾಯ‌ ಸಂಘದ ಮಹಿಳೆಯರಿಂದ ಜಾಥಾ ಹಾಗೂ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಕಿರುಚಿತ್ರ  ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮಸಭೆಯಲ್ಲಿ ಮಾನವ ಸಂಪನ್ಮೂಲ ಅಧಿಕಾರಿ ಗೋವರ್ಧನ್ ಅವರು, ಜಲ ಜೀವನ್‌ ಮಿಷನ್ ಯೋಜನೆಯ ಗುರಿ ಉದ್ದೇಶಗಳು, ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಮತ್ತು ಸುರಕ್ಷಿತ ನೀರಿನ ಅವಶ್ಯಕತೆ, ಮೀಟರ್ ಅಳವಡಿಕೆ ಮಹತ್ವ, ಸಮುದಾಯವಂತಿಕೆ, ಗ್ರಾಮ‌ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರ ಜವಾಬ್ದಾರಿಗಳು, FTK ಅನುಕೂಲಗಳು, ನೀರಿನ ಪರೀಕ್ಷಾ ವಿಧಾನ, ಶೌಚಾಲಯ ಬಳಕೆ, ಬಚ್ಚಲುಗುಂಡಿ ನಿರ್ಮಾಣ, ಘನತ್ಯಾಜ್ಯ ನಿರ್ವಹಣೆ ಮೊದಲಾದ ವಿಷಯಗಳನ್ನು ಚರ್ಚೆ ಮಾಡಲಾಯಿತು. ಮಾಹಿತಿ‌ ಶಿಕ್ಷಣ ತಜ್ಞರಾದ ಸುಜಾತ ಅವರು ಆರೋಗ್ಯ ಮತ್ತು ನೈರ್ಮಲ್ಯ ಕುರಿತ ಕಿರುಚಿತ್ರ ಪ್ರದರ್ಶಿಸಿ ಗ್ರಾಮಗಳ ಶುಚಿತ್ವದ…

Read More

ಪಾವಗಡ:  ತಾಲ್ಲೂಕಿನ ನಿಡಗಲ್ ಹೋಬಳಿ ವ್ಯಾಪ್ತಿಯ  ಸಿ.ಕೆ. ಪುರ ಗ್ರಾಮ ಪಂಚಾಯಿತಿ ಮುಂಭಾಗದ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ದುರಸ್ತಿ ಕಾರ್ಯವು ನಡೆಯಿತು. ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದ ಕಾರಣ, ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಮಪ್ಪನವರು ಅಧ್ಯಕ್ಷತೆ  ಶಾಲೆಯ ಬಗ್ಗೆ ಕಾಳಜಿ ವಹಿಸಿ ದುರಸ್ತಿ ನಡೆಸಲಾಗಿದ್ದು,  ಮಳೆಯಿಂದ ಸೋರುತ್ತಿದ್ದ ಕಟ್ಟಡವನ್ನು ದುರಸ್ತಿ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ಈ ಶಾಲೆಯಲ್ಲಿ 93 ಜನ  ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದೇ ವೇಳೆ ಎಲ್ಲ ಮಕ್ಕಳಿಗೆ ಬೆಳೆ, ಎಣ್ಣೆಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ವಿಶ್ವೇಶ್ವರಯ್ಯ, ದೈಹಿಕ ಶಿಕ್ಷಕ ಲಕ್ಷ್ಮಿನಾರಾಯಣ, ಶೀನಿವಾಸ್,  ಪೃಥ್ವಿರಾಜ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು. ವರದಿ: ದೇವರಹಟ್ಟಿ, ನಾಗರಾಜು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ನೆಲೆಸಿರುವಂತಹ ಕರ್ನಾಟಕ ರಾಜ್ಯದ ಸುಪ್ರಸಿದ್ಧ ಶ್ರೀ ಶನಿಮಹಾತ್ಮ ಸ್ವಾಮಿ ಮತ್ತು ಜೇಷ್ಠಾ ದೇವಿಯ ಬ್ರಹ್ಮರಥೋತ್ಸವ ನಡೆಯಿತು. ಕಳೆದ 3 ದಿನಗಳಿಂದ ದೇವಸ್ಥಾನದಲ್ಲಿ ವಿವಿಧ ಹೋಮ ಪೂಜೆಗಳನ್ನು ಆಚರಿಸಲಾಗುತ್ತಿತ್ತು. ಹುಣ್ಣಿಮೆಯ ಪ್ರಯುಕ್ತ ಇಂದು ಸ್ವಾಮಿಯ ರಥೋತ್ಸವವನ್ನು ಪಾವಗಡ ಪಟ್ಟಣದ ಸರ್ಕಲ್ ನಲ್ಲಿ ನೆರವೇರಿಸಲಾಯಿತು. ಎಸ್ ಎಸ್ ಕೆ ಕಾರ್ಯ ನಿರ್ವಾಹಕ ಸಂಘದ ವತಿಯಿಂದ ದೇವಸ್ಥಾನದಲ್ಲಿ ಅತ್ಯಂತ ವೈಭವವಾಗಿ ಹೂವಿನ ಅಲಂಕಾರವನ್ನು ಮಾಡಲಾಗಿತ್ತು.  ರಥೋತ್ಸವ ವೀಕ್ಷಿಸಲು ತಾಲ್ಲೂಕಿನಾದ್ಯಂತ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸರಗೂರು :  ಜನಧ್ವನಿ ಸಮುದಾಯ ಬಾನುಲಿ ಕೇಂದ್ರದಲ್ಲಿ  ವಿಶೇಷಚೇತನರಿಗಾಗಿ ಸಮಗ್ರ ಆರೈಕೆ, ಬೆಂಬಲ ಮತ್ತು ಚಿಕಿತ್ಸೆ  ನೇರ ಫೋನ್ ಇನ್ ಕಾರ್ಯಕ್ರಮ ನಡೆಯಿತು. ಎಸ್.ವಿ.ವೈ.ಎಮ್ ನ ಜೀವನಾಧಾರ ಆಯ್ಕೆಗಳು  ಮತ್ತು ಸಮನ್ವಯತೆಯ ಸಂಯೋಜಕಿ ಮಮತ ಅವರು ಮಾತನಾಡಿ,  ವಿಶೇಷ ಚೇತನರನ್ನು ಸಬಲೀಕರಣಗೊಳಿಸುವ ಸಲುವಾಗಿ ತರಬೇತಿ ಮಾಡಲಾಗುತ್ತದೆ.  ಹೆಚ್. ಡಿ.ಕೋಟೆ ತಾಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ತರಬೇತಿ ನಡೆಸಲಾಗುತ್ತದೆ. ಒಟ್ಟು 3 ರೀತಿಯಲ್ಲಿ ವಿಶೇಷ ಚೇತನರಿಗೆ ವೃತ್ತಿಪರ ತರಬೇತಿಯನ್ನು ನೀಡಲಾಗುತ್ತಿದೆ. ವಿಶೇಷ ಚೇತನರು ಈ ತರಬೇತಿಯನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಲ್ಲಿ ಮುಂದಾಗಬೇಕು ಎಂದು ಮನವಿ ಮಾಡಿಕೊಂಡರು. ಇದೇವೇಳೆ ಸಿ.ಸಿ.ಎಸ್.ಟಿ. ಕಾರ್ಯಕ್ರಮದ ವ್ಯವಸ್ಥಾಪಕರಾದ ಎಂ.ಪಿ. ರಮೇಶ್, ವಿ.ಆರ್.ಎಲ್.ಸಿ ವ್ಯವಸ್ಥಾಪಕ ಪಿ.ಡಿ ನಾಯಕ್ ಹಾಗೂ ಜನಧ್ವನಿ ಸಮುದಾಯ ಬಾನುಲಿ ಕೇಂದ್ರದ ವ್ಯವಸ್ಥಾಪಕ ನಿಂಗರಾಜು ಹಾಗೂ ಇನ್ನಿತರರು ಇದ್ದರು. ವರದಿ:  ಚಂದ್ರಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಕರ್ನಾಟಕ ಸರ್ಕಾರವು ಪ್ರತಿ ವರ್ಷ ನಡೆಸುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸಹಯೋಗದೊಂದಿಗೆ ನಡೆಸಿಕೊಡುತ್ತಿದೆ. 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ  ಮಾರ್ಚ್ 3ರಿಂದ 10ರವರೆಗೆ  ಬೆಂಗಳೂರಿನಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮಾ ಸಂಸ್ಕೃತಿಯನ್ನು ಪಸರಿಸುವ ಪ್ರಮುಖ ಕೇಂದ್ರವಾಗಿದೆ. ಕರ್ನಾಟಕ ಸಾಹಿತ್ಯ, ಕಲೆ, ಶಿಲ್ಪಕಲೆ ಹಾಗೂ ಸಿನಿಮಾಗೆ ಸಂಬಂಧಪಟ್ಟಂತೆ  ಶ್ರೀಮಂತ ಪರಂಪರೆಯನ್ನು ಹೊಂದಿರುವ ಹೆಮ್ಮೆಯ ರಾಜ್ಯ. 87 ವರ್ಷ ಇತಿಹಾಸವಿರುವ ಕನ್ನಡ ಚಲನಚಿತ್ರರಂಗ ಗುಣಮಟ್ಟದ ದೃಷ್ಟಿಯಿಂದ ಜಗತ್ತಿನ ಗಮನ ಸೆಳೆದಿದೆ. ಈ ದಿನಗಳಲ್ಲಿ ವರ್ಷಕ್ಕೆ ಇನ್ನೂರಕ್ಕೂ ಹೆಚ್ಚು ಚಿತ್ರಗಳನ್ನು ತಯಾರಿಸಿ ತನ್ನ ಮಾರುಕಟ್ಟೆ ವಿಸ್ತರಿಸಿಕೊಂಡಿದೆ. ಜಗತ್ತಿನ ವಿವಿಧ ಭಾಗಗಳಲ್ಲಿ ನಡೆಯುವ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡ ಚಿತ್ರಗಳು ನಿರಂತರವಾಗಿ ಭಾಗವಹಿಸುತ್ತಿವೆ. ಜೊತೆಗೆ ಅಂತಾರಾಷ್ಟ್ರೀಯ ಪುರಸ್ಕಾರಗಳನ್ನ, ಮಾನ್ಯತೆ ಮತ್ತು ಜನಮನ್ನಣೆಯನ್ನ ಪಡೆಯುತ್ತಿವೆ. 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಈ ಬಾರಿ ಚಲನಚಿತ್ರ ನಿರ್ಮಾಪಕರ ಸಂಘಗಳ ಅಂತರರಾಷ್ಟ್ರೀಯ ಒಕ್ಕೂಟ (FIAPF) ಮಾನ್ಯತೆ…

Read More

ಕೊರಟಗೆರೆ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲ್ಲೂಕು ಕಚೇರಿಯಲ್ಲಿ ಶ್ರೀ ಸಂತ ಸೇವಲಾಲ್ ಜಯಂತಿಯನ್ನು ಸರ್ಕಾರದ ಆದೇಶದ ಮೇರೆಗೆ  ಸರಳವಾಗಿ ಆಚರಣೆ ಮಾಡಲಾಗಿತ್ತು. ಸೇವಲಾಲ್ ಜಯಂತಿಯ ಆಚರಣೆಯ ವೇಳೆ ತಹಶೀಲ್ದಾರ್ ನಹೀದಾ ಜಮ್ ಜಮ್ ಅವರು ಮಾತನಾಡಿ, ಸೇವಲಾಲ್ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದಂತಹ ಮಹಾನ್ ವ್ಯಕ್ತಿ, ಇಂದು ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಆದೇಶಿಸಿರುವಂತೆ ಸರಳವಾಗಿ ಆಚರಣೆ ಮಾಡುತ್ತಿದ್ದೇವೆ, ಅವರ ತತ್ವಗಳನ್ನು ಆದರ್ಶಗಳನ್ನು ಜೀವನದಲ್ಲಿ ಅಳಡಿಸಿಕೊಂಡು ಜೀವನವನ್ನು ಸಾಗಿಸೋಣ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲಾ ತಾಂಡಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆಯೋಜನೆ ಮಾಡಿ ಅದರಲ್ಲಿ ಅವರ ಸಮಸ್ಯೆಗಳನ್ನು ಆಲಿಸಿ ಕೂಡಲೇ ಅವರಿಗೆ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಹೇಳಿದರು. ಬಂಜಾರ ಸಮುದಾಯದ ತಾಲ್ಲೂಕು ಅಧ್ಯಕ್ಷ ಬಿಜಿ ಶ್ರೀ ರಾಮುನಾಯ್ಕ ಮಾತನಾಡಿ, ಸೇವಲಾಲ್ ರವರು ನಮ್ಮ ಸಮಾಜಕ್ಕೆ ಜೀವನವನ್ನು ಮುಡಿಪಾಗಿಟ್ಟವರು, ಹಿಂದೆ ನಮ್ಮ ಸಮಾಜ ಪ್ರಾಣಿಗಳ ರೀತಿಯಲ್ಲಿ ಕಾಡುಗಳಲ್ಲಿ  ಗೆಡ್ಡೆ, ಗೆಣಸು ತಿನ್ನುತ್ತ ಬೆಳಯುತ್ತಿದ್ದೆವು. ಅದನ್ನು ಕಂಡ ಸೇವಲಾಲ್ ರವರು…

Read More