Subscribe to Updates
Get the latest creative news from FooBar about art, design and business.
- ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
- ಬೀದರ್: ಆನ್ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
- 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
- ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
- ಒಳಮೀಸಲಾತಿ: “ನಾಗಮೋಹನ್ ದಾಸ್ ಆಯೋಗದ ವರದಿ ಅವೈಜ್ಞಾನಿಕ”: ಮಾ.25ರಂದು ಬೃಹತ್ ಪ್ರತಿಭಟನೆ
- ನಾಲ್ಕು ಹೆಣ್ಣುಮಕ್ಕಳ ತಾಯಿಗೆ ಸ್ವಯಂ ಉದ್ಯೋಗ: ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಕಾರ್ಯಕ್ಕೆ ಇಕ್ಬಾಲ್ ಅಹಮದ್ ಸಾಥ್
- ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ
- ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ
Author: admin
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಡರಾತ್ರಿ ವಾಪಾಸ್ ಪಡೆದುಕೊಳ್ಳಲಾಗಿದೆ. ಸರ್ಕಾರಿ ನೌಕರರ ಮನವಿಯ ಮೇರೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯಬಾರದು ಎನ್ನುವ ಆದೇಶವನ್ನು ತಡರಾತ್ರಿ ವಾಪಾಸ್ ಪಡೆಯಲಾಗಿದೆ. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ವಿಧಿಸುತ್ತಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈಸ್ ಮಿಲ್ ಮಾಲೀಕರು ವರ್ತಕರು ತುಮಕೂರು ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಪ್ರತಿಭಟನೆ ನಡೆಸಿದರು. ರೈಸ್ ಮಿಲ್ ಮಾಲೀಕರ ಸಂಘದ ಅಧ್ಯಕ್ಷ ಡಾ.ರಮೇಶ್ ಬಾಬು ಮಾಧ್ಯಮಗಳ ಜೊತೆಗೆ ಮಾತನಾಡಿ, ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ವಿಧಿಸುತ್ತಿರುವುದು ಸಾಮಾನ್ಯ ಜನರಿಗೆ ತೊಂದರೆಯಾಗಲಿದೆ ಎಂದರು. ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ಹಾಕಬಾರದು, ಇದನ್ನು ತಕ್ಷಣವೇ ರದ್ದುಗೊಳಿಸಬೇಕು. ಇದರ ವಿರುದ್ಧ ದೇಶವ್ಯಾಪಿ ಹೋರಾಟ ನಡೆಯುತ್ತಿದ್ದು, ಕೇಂದ್ರ ಸರ್ಕಾರ ತಕ್ಷಣವೇ ಜಿ.ಎಸ್.ಟಿ. ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಪ್ರತಿಭಟನಾಕಾರರು ಭಾರತ್ ಮಾತಾಕೀ ಜೈ ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಾದಾಮಿ : ಕೆರೂರಿನಲ್ಲಿ ನಡೆದಿದ್ದ ಗುಂಪು ಘರ್ಷಣೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಮಾಜಿ ಸಿಎಂ, ವಿಪಕ್ಷ ನಾಯಕ ಹಾಗೂ ಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ತೆರಳಿದ್ದು, ಸಂತ್ರಸ್ತರಿಗೆ ಈ ವೇಳೆ ಅವರು ನೀಡಿದ್ದ ಹಣವನ್ನು ಮಹಿಳೆಯೊಬ್ಬರು ಸಿದ್ದರಾಮಯ್ಯನವರ ಕಾರಿನೊಳಗೆ ಎಸೆದ ಘಟನೆ ನಡೆದಿದೆ. ತಾಲೂಕಿನ ಕೆರೂರಿನಲ್ಲಿ ನಡೆದಿದ್ದ ಗುಂಪು ಘರ್ಷಣೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಹಿಳೊಬ್ಬರು ಸಿಟ್ಟಿಗೆದ್ದು ಹಣ ವಾಪಾಸ್ ಎಸೆದಿದ್ದಾರೆ. ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಕೆಲ ಜನರಿಗೆ ಗಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಸಾಂತ್ವನ ಹೇಳಿ ಪರಿಹಾರ ನೀಡುವ ಸಲುವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಮಹಿಳೆಯೊಬ್ಬರಿಗೆ 2 ಲಕ್ಷ ನೆರವು ನೀಡಿದ್ದರು. ಸಂದರ್ಭದಲ್ಲಿ ನನಗೆ ಹಣಬೇಡ ನನಗೆ ಶಾಂತಿ, ನಮಗೆ ನ್ಯಾಯ ಕೊಡಿ ಎಂದು ಸಿದ್ದರಾಮಯ್ಯ ಅವರು ನೀಡಿದ ಹಣವನ್ನು ಏಕಾಏಕಿ ಕಾರಿನ ಮೇಲೆ ಎಸೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಆ ಮಹಿಳೆಯನ್ನು ಯಾರೋ ಎತ್ತಿ ಕಟ್ಟಿದ್ದಾರೆ ದುಡ್ಡು ಬಿಸಾಡಿದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಪ್ರಧಾನ ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆಯು ಸಾರ್ವಜನಿಕರಿಗೆ ಆಕರ್ಷಣೀಯವಾಗಿ, ಸ್ವಚ್ಛವಾಗಿ ಹಾಗೂ ಮಾದರಿಯಾಗಿ ಇರಬೇಕು ಎಂದು ಜಿಲ್ಲಾ ಕಾನೂನು ನ್ಯಾಯಾಧೀಶರು ಹಾಗೂ ಕೆರೆ ಮತ್ತು ಕಾಲುವೆಗಳ ಸಂರಕ್ಷಣಾ, ಪ್ರಾಧಿಕಾರ ಅಧ್ಯಕ್ಷರಾಗಿರುವ ಗಿರೀಶ್ ಅವರು ತಿಳಿಸಿದರು. ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವಿವಿಧ ವಿಭಾಗಗಳಲ್ಲಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಯಾಗಿರುವ ಕುಮಾರನಾಯ್ಕ ಜೊತೆಗೂಡಿ ಆಸ್ಪತ್ರೆಯ ಹೆರಿಗೆವಿಭಾಗ, ಶಸ್ತ್ರಚಿಕಿತ್ಸೆ, ತುರ್ತು ಚಿಕಿತ್ಸಾ ವಿಭಾಗ, ಆಕ್ಸಿಜನ್ ಘಟಕ, ಒಳರೋಗಿಗಳ ವಿಭಾಗ, ಔಷಧಿ ಉಗ್ರಾಣ, ಆಸ್ಪತ್ರೆಯಲ್ಲಿರುವ ಶೌಚಾಲಯಗಳು ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಳರೋಗಿಗಳಾಗಿ ದಾಖಲಾಗಿದ್ದ ರೋಗಿಗಳೊಂದಿಗೆ ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ವಿಚಾರಿಸಿದರು. ಔಷಧಿ ಉಗ್ರಾಣದಲ್ಲಿ ಅವಧಿ ಮೀರಿದ ಔಷಧಗಳ ಬಗ್ಗೆ ಎಚ್ಚರ ವಹಿಸುವಂತೆ ತಿಳಿಸಿ, ಉಗ್ರಾಣದ ನಿರ್ವಹಣೆ ಬಗ್ಗೆ ಪರಿಶೀಲಿಸಿ ಉಗ್ರಾಣದಲ್ಲಿ ಸಾಕಷ್ಟು ಔಷಧಿಗಳ ಲಭ್ಯತೆ ಇರುವುದನ್ನು ಖಚಿತಪಡಿಸಿಕೊಂಡು ಪ್ರಶಂಸೆ ವ್ಯಕ್ತಪಡಿಸಿದರು. ಬಡರೋಗಿಗಳಿಗೆ ಹೊರಗಡೆಗೆ ಔಷಧಿಗಳನ್ನು ಬರೆದುಕೊಡದಂತೆ ಸೂಚಿಸಿದರು. ಸರ್ಕಾರಿ ಆಸ್ಪತ್ರೆಯನ್ನು ನಂಬಿ…
ತುಮಕೂರು: ನಗರದ ಭದ್ರಮ್ಮ ಸರ್ಕಲ್ ಬಳಿಯ ಎಚ್ ಡಿಎಫ್ ಸಿ ಬ್ಯಾಂಕ್ ಮುಂಭಾಗದಲ್ಲಿ ಕಳ್ಳನೋರ್ವ ನೋಡನೋಡುತ್ತಲೇ ವ್ಯಕ್ತಿಯೊಬ್ಬರ ಕೈಯಿಂದ ಹಣ ಕದ್ದು ಪರಾರಿಯಾದ ಘಟನೆ ನಡೆದಿದೆ. ಕಾಂತರಾಜು ಎಂಬವರು ಎಚ್ ಡಿಎಫ್ ಸಿ ಬ್ಯಾಂಕ್ ನಿಂದ ಎರಡು ಲಕ್ಷ ಹಣ ಡ್ರಾ ಮಾಡಿ ಬ್ಯಾಗ್ ಗೆ ಹಾಕಿಕೊಂಡಿದ್ದರು. ಬ್ಯಾಂಕ್ ಒಳಗೆ ಇದನ್ನು ಗಮನಿಸಿದ ಓರ್ವ ಮತ್ತೋರ್ವನಿಗೆ ಸಂದೇಶ ರವಾನಿಸಿದ್ದು, ಕಾಂತರಾಜು ಬ್ಯಾಂಕ್ ನಿಂದ ಹೊರ ಬರುವ ವೇಳೆ ಕಳ್ಳ ಹಣದ ಬ್ಯಾಗ್ ಕಿತ್ತು ಪರಾರಿಯಾಗಿದ್ದಾನೆ. ಕಳ್ಳರು ಪಲ್ಸರ್ ಹಾಗೂ ಯೂನಿಕಾನ್ ಬೈಕ್ ನಲ್ಲಿ ಬಂದಿದ್ದರು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಡಿಎಸ್ಪಿ ಶ್ರೀನಿವಾಸ್, ಎನ್ ಇ ಪಿಎಸ್ ಪೊಲೀಸರು ಭೇಟಿ ನೀಡಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ಡಿಸೆಂಬರ್ ವೇಳೆಗೆ ತುರುವೇಕೆರೆ ತಾಲೂಕಿನಲ್ಲಿ 57 ರ ನಮೂನೆ ಅರ್ಜಿ ದಾರರಿಗೆ ಸಾಗುವಳಿ ಚೀಟಿ ವಿತರಿಸುವ ವಿಶ್ವಾಸವಿದೆ ಎಂದು ಶಾಸಕ ಮಸಾಲ ಜಯರಾಮ್ ಹೇಳಿದರು. ತುರುವೇಕೆರೆ ಶಾಸಕ ಮಸಾಲ ಜಯರಾಮ್ ಸುದ್ದಿಗಾರರೊಂದಿಗೆ ಗುಬ್ಬಿ ಪಟ್ಟಣದಲ್ಲಿ ಮಾತನಾಡಿ, ನಮ್ಮ ತುರುವೇಕೆರೆ ತಾಲೂಕಿನಲ್ಲಿ 57 ನಮೂನೆ ಅರ್ಜಿ ಬಾಕಿ ಉಳಿದಿದ್ದು, ಅವುಗಳನ್ನು ಪರಾಮರ್ಶೆ ಮಾಡಿ ಬರುವ ಡಿಸೆಂಬರ್ ವೇಳೆಗೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿಗಳನ್ನು ಮಂಜೂರಿ ಕೊಡಲಾಗುವುದು ಎಂದರು. ಇನ್ನೂ ತುರುವೇಕೆರೆ ತಾಲೂಕಿನಲ್ಲಿ ಯಾವುದೇ ಅವ್ಯವಹಾರಗಳು ನಡೆದಿರುವುದಿಲ್ಲ 2017ರ ಹಿಂದೆ ನಡೆದಿದ್ದು, ಅವುಗಳನ್ನು ವಿಭಾಗಾಧಿಕಾರಿಗಳಿಗೆ ಪರಿಶೀಲನೆ ಮಾಡಲು ಕೊಟ್ಟಿದ್ದೆವು. ಅವುಗಳಲ್ಲಿ 915 ಅರ್ಜಿಗಳನ್ನ ನಾನೇ ಕುದ್ದು ವಜಾ ಮಾಡಿಸಿರುತ್ತೇನೆ. ನನ್ನ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಭಾಗದಲ್ಲಿ ಯಾವುದೇ ಅವ್ಯವಹಾರಗಳು ನಡೆದಿರುವುದಿಲ್ಲ. ಏಕೆಂದರೆ, ನನ್ನ ಭಾಗದಲ್ಲಿ ಹಿಡಿತ ಸಾಧಿಸಿದ್ದೇನೆ ಎಂದರು. ವರದಿ: ಸುರೇಶ್ ಬಾಬು ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ತುಮಕೂರು: ಹಾಲು ಅಳತೆಯಲ್ಲಿ ಮೋಸ ಮಾಡುತ್ತಿದ್ದದ್ದನ್ನು ಪತ್ತೆ ಮಾಡಿದ ರೈತನ ಮೇಲೆ ಡೈರಿ ಕಾರ್ಯದರ್ಶಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ತುಮಕೂರು ಹಾಲು ಒಕ್ಕೂಟ ವ್ಯಾಪ್ತಿಯ ಕುಣಿಗಲ್ ತಾಲೂಕಿನ ಹೆಡ್ಡಿಗೆರೆ ಡೈರಿಯಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ರೈತರು ತಗಾದೆ ತೆಗೆದಿದ್ದಾರೆ. ಹಾಲು ಪರೀಕ್ಷೆಗೆ ಹೆಚ್ಚುವರಿ ಹಾಲು ಪಡೆದು ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ರೈತರು, ಮೋಸವನ್ನು ಪತ್ತೆ ಮಾಡಿ ಪ್ರಶ್ನಿಸಿದ ರೈತರ ಕೊರಳಪಟ್ಟಿ ಹಿಡಿದು ಕಾರ್ಯದರ್ಶಿ ಬೊರಮ್ಮ ಎಂಬಾಕೆ ಹಲ್ಲೆಗೆ ಯತ್ನಿಸಿದ್ದಾಳೆ ಎಂದು ದೂರಿದ್ದಾರೆ. ಹೆಡ್ಡಿಗೆರೆ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಸಂಗ್ರಹಿಸುವ ಹಾಲಿನಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿದ್ದು, ಹಾಲು ಪರೀಕ್ಷೆಗೆ 30 ಮಿ.ಲೀ ಹಾಲು ಪಡೆಯುವ ಬದಲು 180 ಮಿ.ಲೀ ಹಾಲು ಪಡೆಯಲಾಗುತ್ತಿದೆ ಎಂದು ಕಾರ್ಯದರ್ಶಿ ಬೋರಮ್ಮ ವಿರುದ್ಧ ರೈತರು ಆರೋಪಿಸಿದ್ದಾರೆ. ಹೆಚ್ಚುವರಿ ಹಾಲು ಪಡೆಯುತ್ತಿದ್ದದ್ದನ್ನು ಪಶ್ನೆ ಮಾಡಿದಾಗ 50 ಮಿ.ಲೀ ಅಷ್ಟೇ ಎಂದು ವಾದಿಸಿ ಕಾರ್ಯದರ್ಶಿ ಬೋರಮ್ಮ ಗಲಾಟೆ…
ಚಾಮರಾಜಪೇಟೆ ಆಟದ ಮೈದಾನ ಭೂ ವಿವಾದ ಹಿನ್ನೆಲೆಯಲ್ಲಿ ಕರೆ ನೀಡಿದ್ದ ಬಂದ್ ಯಶಸ್ವಿಯಾಗಿದ್ದೇ ಅದೇ ಉತ್ಸಾಹದಲ್ಲಿ ಇದೀಗ ಮುಂದುವರದ ಭಾಗವಾಗಿ ಮತ್ತೊಂದು ಹೋರಾಟಕ್ಕೆ ನಾಗರಿಕ ಒಕ್ಕೂಟ ವೇದಿಕೆ ಮುಂದಾಗಿದೆ. ಈ ಬಾರಿ ಸ್ಥಳೀಯ ಸಂಸದ ಪಿ.ಸಿ ಮೋಹನ್ ಕಣಕ್ಕಿಳಿದಿದ್ದು, ಹೋರಾಟಗಾರರಿಗೆ ಆನೆ ಬಲ ಬಂದಾಗಿದೆ. ಕಳೆದೊಂದು ತಿಂಗಳಿನಿಂದ ಚಾಮರಾಜಪೇಟೆ ಈದ್ಗಾ ಮೈದಾನ ಭೂ ಮಾಲಿಕತ್ವ ವಿವಾದ ಚರ್ಚೆಯಲ್ಲಿದೆ. ಸದ್ಯ ಈ ಮೈದಾನ ಯಾರಿಗೆ ಸೇರಿದ್ದು ಎಂಬ ಕುರಿತು ಬಿಬಿಎಂಪಿ ವರ್ಸಸ್ ವಕ್ಫ್ ಬೋರ್ಡ್ ದಾಖಲೆಗಳ ಪರಿಶೀಲನೆ ಮುಂದುವರೆದಿದೆ. ಇದೀಗ ಈ ಮೈದಾನ ರಾಜಕೀಯ ತಿರುವು ಪಡೆದಿದೆ. ಕೆಲ ದಿನಗಳ ಹಿಂದೆ ತನ್ನ ಬೆಂಬಲಿಗರ ಸಭೆ ಕರೆದ ಸ್ಥಳೀಯ ಜಮೀರ್ ಅಹ್ಮದ್ ಟಾಂಗ್ ಕೊಡುವಂತೆ ಇಂದು ನಾಗರಿಕ ಒಕ್ಕೂಟ ವೇದಿಕೆ ಜೊತೆ ಬಿಜೆಪಿ ಸಂಸದ ಪಿ.ಸಿ ಮೋಹನ್ ಕಾಣಿಸಿಕೊಂಡಿದ್ದಾರೆ. ಇಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಭೇಟಿ ಮಾಡಿ ಮೈದಾನ ಕುರಿತು ಪಿಸಿ ಮೋಹನ್ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು. ಸಂಸದ ಪಿ.ಸಿ…
ಖ್ಯಾತ ಪಂಜಾಬಿ ಗಾಯಕ ದಲೇರ್ ಮೆಹಂದಿ ಅವರನ್ನು ಬಂಧಿಸಲಾಗಿದೆ. ವಿದೇಶಕ್ಕೆ ಮಾನವ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ 2 ವರ್ಷ ಜೈಲು ಶಿಕ್ಷೆಯಾಗಿದೆ. ಅಕ್ರಮವಾಗಿ ವಿದೇಶಗಳಿಗೆ ಜನರನ್ನು ಕಳುಹಿಸಿದ ಆರೋಪ ಅವರ ಮೇಲಿದೆ. ಇದಕ್ಕೂ ಮೊದಲು ಪಟಿಯಾಲಾದ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮೆಹಂದಿ ವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 2 ಸಾವಿರ ದಂಡ ವಿಧಿಸಿ ಆದೇಶ ನೀಡಿತ್ತು. ಈ ಹಿನ್ನೆಲೆ ಗುರುವಾರ ಅವರನ್ನು ಬಂಧಿಸಲಾಗಿದೆ. ಈ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ನಡೆಯುತ್ತಿತ್ತು. 27 ಆಗಸ್ಟ್ 2003ರಲ್ಲಿ ನಮೂದಾದ ಎಫ್ಐಆರ್ ಸಂಖ್ಯೆ 498ರ IPS u/s 406,420,120B, 465,468,471 ಮತ್ತು ಭಾರತೀಯ ಪಾಸ್ಪೋರ್ಟ್ ಕಾಯ್ದೆಯ ಅಡಿ ಈ ಪ್ರಕರಣ ನಮೂದಿಸಲಾಗಿತ್ತು, HS ಗ್ರೆವಾಲ್ ನ್ಯಾಯಾಲಯವು ಆರೋಪಿ ಗಾಯಕ ದಲೇರ್ ಮೆಹಂದಿ ಅವರು ಸಲ್ಲಿಸಿದ್ದ ಮೇಲ್ಮನವಿಯ ವಿರುದ್ಧ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ದಲೇರ್ ಮೆಹಂದಿ ಅವರಿಗೆ 16 ಮಾರ್ಚ್ 2018 ರಂದು ಜೆಎಂಐಸಿ ಪಟಿಯಾಲ…
ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಅಧ್ಯಕ್ಷರಾದ ಲಲಿತ್ ಮೋದಿ ಅವರು ಇಂದು ನಟಿ ಸುಶ್ಮಿತಾ ಸೇನ್ ಅವರೊಂದಿಗೆ ಹೊಸ ಇನಿಂಗ್ಸ್ ಆರಂಭಿಸಿರುವುದಾಗಿ ಘೋಷಿಸಿಕೊಂಡಿದ್ದಾರೆ, ಅಷ್ಟೇ ಅಲ್ಲದೆ ಅವರನ್ನು ಬೆಟರ್ ಹಾಫ್ ಎಂದು ಕರೆದುಕೊಂಡಿದ್ದಾರೆ. ಈಗ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ಜೋಡಿಗಳು ಈಗಾಗಲೇ ಮದುವೆಯಾಗಿದ್ದಾರಾ? ಎನ್ನುವ ಪ್ರಶ್ನೆ ಎಲ್ಲರಲ್ಲಿಯೂ ಮೂಡಿದೆ.ಆದರೆ ಅವರ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಲಲೀತ್ ಮೋದಿ ತಾವಿನ್ನೂ ಮದುವೆಯಾಗಿಲ್ಲ, ಬರಿ ಡೇಟಿಂಗ್ ಮಾತ್ರ ಮಾಡುತ್ತಿರುವುದು..ಮುಂದೊಂದು ದಿನ ಅದು ಆದರೂ ಆಗಬಹುದು ಎಂದು ಅವರು ಹೇಳಿದ್ದಾರೆ. ಐಪಿಎಲ್ಗೆ ಸಂಬಂಧಿಸಿದ ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆಯ ತನಿಖೆಯ ಮಧ್ಯೆ ಲಲಿತ್ ಮೋದಿ 2010 ರಲ್ಲಿ ಭಾರತವನ್ನು ತೊರೆದಿದ್ದರು. ಅಂದಿನಿಂದ ಅವರು ಲಂಡನ್ನಲ್ಲಿದ್ದಾರೆ.ಸುಶ್ಮಿತಾ ಸೇನ್ 1994 ರಲ್ಲಿ ಭುವನ ಸುಂದರಿ ಕಿರೀಟವನ್ನು ಧರಿಸಿದ ನಂತರ ಅವರು 1996 ರ ದಸ್ತಕ್ ಚಲನಚಿತ್ರದಲ್ಲಿ ಬಾಲಿವುಡ್ಗೆ ಪಾದಾರ್ಪಣೆ ಮಾಡಿದರು. ಅವರು ಬಿವಿ ನಂ 1,…