Subscribe to Updates
Get the latest creative news from FooBar about art, design and business.
- ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
- ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
- ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ: ಬಿ.ವೈ. ವಿಜಯೇಂದ್ರ ಆರೋಪ
- ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ
- ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
- ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
- ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
- ಕೊರಟಗೆರೆ ಬಸ್ ಗಾಗಿ ಪರದಾಟ: ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ
Author: admin
ಸರಗೂರು: ಉನ್ನತ ಮಟ್ಟದ ಚಿಕಿತ್ಸೆ ನೀಡುವುದೇ ನಮ್ಮ ಸಂಸ್ಥೆಯ ಗುರಿ ಎಂದು ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಮುಖ್ಯಾಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಜಿ.ಎಸ್ ಅವರು ತಿಳಿಸಿದರು. ಇಂದು ಹೆಚ್.ಡಿ.ಬಿ ಫೈನಾನ್ಸ್ ವತಿಯಿಂದ ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ನೀಡಿದ ಆರೋಗ್ಯ ತಪಾಸಣಾ ಯಂತ್ರೋಪಕರಣಗಳಿಗೆ ಚಾಲನೆ ನೀಡಿ ಅವರು ಮಾತನಾಡಿ, ಆಸ್ಪತ್ರೆಯ ನಿರಂತರ ಬೆಳವಣಿಗೆಯಿಂದ ಮುಂದಿನ ದಿನಗಳಲ್ಲಿಯೂ ಸಹ ಗ್ರಾಮೀಣಾ ಭಾಗದ ಜನರಿಗೆ ಉನ್ನತ ಮಟ್ಟದ ಸೇವೆಯನ್ನು ನೀಡಲಾಗುವುದು ಎಂದರು. ಹಾಗೆಯೇ ಗ್ರಾಮೀಣಾಭಿವೃದ್ಧಿಯಲ್ಲಿ ಉಂಟಾಗುವ ಸಮಸ್ಯೆಗಳನ್ನು ತಟೆಗಟ್ಟಲು ಐ.ಸಿ.ಓ. ವನ್ನು ಸಹ ಶುರು ಮಾಡಲಾಗುವುದು. ಹಾಗೂ ಸರ್ಜಿಕಲ್ ಸ್ಪೇಷಲಿಟಿ ಒಳಗೊಂಡಂತೆ ಕಣ್ಣಿನ ಸಮಸ್ಯೆ ಮತ್ತು ದಂತದ ಸಮಸ್ಯೆಗಳಿಗೆ ವಿವೇಕಾನಂದ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಒದಗಿಸಲಾಗುವುದು ಎಂದು ತಿಳಿಸಿದರು. ಗ್ರಾಮೀಣ ವ್ಯವಸ್ಥೆಗೆ ಬೇಕಾದ ವ್ಯಕ್ತಿಗಳನ್ನು ತಯಾರಿಸಲು ಪೂರ್ಣ ಪ್ರಮಾಣದ ನರ್ಸಿಂಗ್ ಕಾಲೇಜ್, ಮತ್ತು ಟಿ.ಎನ್.ಬಿ ಕೋರ್ಸ್ಗಳನ್ನು ತೆರೆಯಲಾಗುವುದು ಹಾಗೂ ಹೆಚ್.ಡಿ.ಬಿ ಫೈನಾನ್ಸ್ ಕಂಪನಿಯು ಆಸ್ಪತ್ರೆಗೆ ಒತ್ತು ನೀಡಿದಂತೆ, ಗ್ರಾಮೀಣಾ ಭಾಗದಲ್ಲಿ ಶಿಕ್ಷಣವನ್ನು ಅಭಿವೃದ್ಧಿಪಡಿಸಲು ಹೊಸ ಹೊಸ ಯೋಜನೆಗಳನ್ನು…
ಬಳ್ಳಾರಿ: ಜಿಲ್ಲೆಯ ಬಿಟಿಪಿಎಸ್(Ballary Thermal Power Station) ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ. ಬಳ್ಳಾರಿಯ ಕುಡತಿನಿ ಬಳಿಯ ಬಿಟಿಪಿಎಸ್ ಆಕ್ಸಿಜನ್ ಪ್ಲ್ಯಾಂಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಆಕ್ಸಿಜನ್ ಫಿಲ್ ಮಾಡುವ ವೇಳೆ ದುರ್ಘಟನೆ ಸಂಭವಿಸಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡು ಕಾರ್ಮಿಕರ ಮೈಗೆಲ್ಲ ಹತ್ತಿಕೊಂಡಿದೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳು ಕಾರ್ಮಿಕರಿಗೆ ಪ್ರಾಥಮಿಕ ಚಿಕಿತ್ಸೆ ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕುಡತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮುರುಳಿಧರನ್ ಆರ್., ಹಿರಿಯೂರು.. ( ಚಿತ್ರದುರ್ಗ – ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಶನಿವಾರ ಪಾವಗಡದಲ್ಲಿ ನಡೆದ ಬಸ್ ದುರಂತಕ್ಕೆ ಚಾಲಕನ ಅಜಾಗರೂಕತೆ ಹಾಗೂ ಬಸ್ ಓವರ್ಲೋಡ್ ಕಾರಣ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಶನಿವಾರ ಸಂಜೆ ಶ್ರೀರಾಮುಲು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು ಇದೇ ಸಂದರ್ಭದಲ್ಲಿ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಸಚಿವ ಶ್ರೀರಾಮುಲು ರವರು ವೈಯಕ್ತಿಕವಾಗಿ ತಲಾ 25 ಸಾವಿರ ರೂ. ನೆರವು ನೀಡಿದರು. ಇದೇ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದು, ಘಟನೆ ನಡೆದ ಸ್ಥಳವನ್ನು ಕೂಡಲೇ ಅಪಘಾತ ವಲಯ(BLACK SPOT) ಎಂದು ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಘಟನೆಯಲ್ಲಿ ಈಗಾಗಲೇ ಆರು ಮಂದಿ ಮೃತಪಟ್ಟಿದ್ದು ಅಪಘಾತದಲ್ಲಿ ಮೃತಪಟ್ಟ ಗಾಯಾಳುಗಳಿಗೆ ಸರ್ಕಾರದಿಂದ ತಲಾ ಐದು ಲಕ್ಷ ರೂಗಳ ಪರಿಹಾರವನ್ನು ನೀಡಲಾಗುವುದು ಎಂದರು. ಇನ್ನು ರಾಜ್ಯದಲ್ಲಿ ಇರುವ ಅಪಘಾತ ವಲಯಗಳನ್ನು ಗುರುತಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ರಸ್ತೆ ಸುರಕ್ಷತಾ ಅನುದಾನದಡಿ ಅಪಘಾತ ವಲಯಗಳನ್ನು ಗುರುತಿಸಿ…
ಸರಗೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಎಂದು ಕಾರ್ಯಕ್ರಮ ಮಾಡುತ್ತೀರಿ, ಆದರೆ, ಜಿಲ್ಲಾಧಿಕಾರಿಗಳೇ ಕಾರ್ಯಕ್ರಮದಲ್ಲಿ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಬದಲು ತಹಶೀಲ್ದಾರ್ ಬರುತ್ತಿದ್ದಾರೆ ಎಂದು ತಹಶೀಲ್ದಾರ್ ನ್ನು ಗ್ರಾಮಸ್ಥರು ತರಾಟೆಗೆತ್ತಿಕೊಂಡ ಘಟನೆ ಸರಗೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ಯ ಅವರಣದಲ್ಲಿನಡೆಯಿತು. ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮದಲ್ಲಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳೇ ಬರಬೇಕು. ಒಂದೋ ಜಿಲ್ಲಾಧಿಕಾರಿಗಳನ್ನು ಕರೆಸಿ ಇಲ್ಲವಾದರೆ, ಕಾರ್ಯಕ್ರಮ ರದ್ದುಪಡಿಸಿ ಎಂದು ಗ್ರಾಮಸ್ಥರು ತಹಶೀಲ್ದಾರ್ ಅವರನ್ನು ತರಾಟೆಗೆತ್ತಿಕೊಂಡರು. ಜಿಲ್ಲಾಧಿಕಾರಿಗಳು ಆಗಮಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದರು. ಈ ವೇಳೆ ತಹಶೀಲ್ದಾರ್ ಚಲುವರಾಜು ಅವರು ಪ್ರತಿಭಟನಾಕಾರರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದರೂ ಪ್ರತಿಭಟನಾಕಾರರು ಪಟ್ಟು ಹಿಡಿದು, ಜಿಲ್ಲಾಧಿಕಾರಿಗಳು ಬಾರದೇ ಕಾರ್ಯಕ್ರಮ ನಡೆಸುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಡಂಚಿನ ಭಾಗವಾಗಿರುವ ಈ ಗ್ರಾಮದಲ್ಲಿ ಕಾಡಾನೆ ಹಾವಳಿ ಜಾಸ್ತಿಯಾಗಿದೆ ಅರಣ್ಯ ಇಲಾಖೆ ಅಧಿಕಾರಿಗಳು ಜನರ ರಕ್ಷಣೆಗೂ ಮುಂದಾಗುತ್ತಿಲ್ಲ. ಇದರ ಜೊತೆಗೆ ನಷ್ಟ…
ಪಾವಗಡ: ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಕೇಂದ್ರ ಸಚಿವರದ ಎ.ನಾರಾಯಣಸ್ವಾಮಿ ಪಾವಗಡ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಧೈರ್ಯ ತುಂಬಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿ, ಅಪಘಾತ ನಡೆದ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ತೆರಳಿ ಮಾಹಿತಿ ಪಡೆದರು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಚಿಕಿತ್ಸೆ ಪಡೆಯುತ್ತಿರುವ 25ಕ್ಕೂ ಹೆಚ್ಚು ಗಾಯಾಳುಗಳು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ವರದಿ: ನಂದೀಶ್ ನಾಯ್ಕ ಪಿ. ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ,ಹೋಬಳಿ ಸೊರವನಹಳ್ಳಿ ಗ್ರಾಮದಲ್ಲಿ , ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ, ಮಾತನಾಡಿದ ತಾಲ್ಲೂಕು ಪಂಚಾಯ್ತಿ ಕಾರ್ಯನಿರವಾಹಣಾಧಿಕಾರಿ ಸತೀಶ್, ಆಧುನಿಕತೆ ಬೆಳೆದ ಹಾಗೆ, ಈ ದೇಶದಲ್ಲಿ ಪ್ರಜಾಪ್ರಭುತ್ವ ಸರ್ಕಾರಗಳು ಜಾರಿಗೆ ಬಂದ ಮೇಲೆ ಎಲ್ಲಾ ಸರ್ಕಾರಗಳು ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದವು. ಅದರಲ್ಲಿ ನಮ್ಮ ಈಗಿನ ರಾಜ್ಯ ಸರ್ಕಾರ ತಂದ ಕಾರ್ಯಕ್ರಮಗಳಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆಗೆ’ ಕಾರ್ಯಕ್ರಮ ವಿನೂತನ ಕಾರ್ಯಕ್ರಮ ಎಂದರು. ಜಿಲ್ಲಾಧಿಕಾರಿಗಳೇ ,ಹಳ್ಳಿಗಳಿಗೆ ತೆರಳಿ ಜನ ಸಾಮಾನ್ಯರ , ರೈತರ , ಶೋಷಿತರ ಇನ್ನು ಮುಂತಾದವರ ಸಮಸ್ಯೆ ಆಲಿಸಿ ಸಾಧ್ಯವಾಗುವ ಸಮಸ್ಯೆಗಳನ್ನ, ಸ್ಥಳದಲ್ಲೇ ಬಗೆಹರಿಸುವುದು ಈ ಕಾರ್ಯಕ್ರಮದ ಉದ್ದೇಶ, ಆದುದರಿಂದ ಜಿಲ್ಲಾಧಿಕಾರಿಗಳು ಕೇವಲ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಮಸ್ಯೆ ಆಲಿಸಲು ಮಾತ್ರ ಸಾಧ್ಯ, ಇನ್ನುಳಿದ ಕಾರ್ಯಕ್ರಮಗಳನ್ನು ಆಯಾ ತಾಲೂಕಿನ ತಹಶೀಲ್ದಾರರು ಮತ್ತು ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿ, ಸಮಸ್ಯೆ ಆಲಿಸಿ ಸ್ಥಳದಲ್ಲಿ ಸಾಧ್ಯವಾಗುವ ಸಮಸ್ಯೆಯನ್ನು, ಬಗೆಹರಿಸ ಬೇಕಾಗುತ್ತದೆ…
ಸರಗೂರು: ತಾಲ್ಲೂಕಿನ ಹುಲ್ಲೆಮಾಳ ಗ್ರಾಮದಲ್ಲಿ ನಿನ್ನೆ ಸಂಜೆ ಮಳೆ ಸುರಿದಿದ್ದು, ಈ ವೇಳೆ ಸಿಡಿಲು ಬಡಿದು ಮರವೊಂದು ಹೊತ್ತಿ ಉರಿದಿದ್ದು, ಘಟನೆಯಿಂದಾಗಿ ಜನರು ಆತಂಕಕ್ಕೀಡಾದ ಘಟನೆ ನಡೆದಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ಸಿಡಿಲು, ಮಿಂಚು, ಗಾಳಿ ಸಹಿತವಾಗಿ ಭಾರೀ ಮಳೆ ಸುರಿದಿದ್ದು, ಈ ವೇಳೆ ಕಣ್ಣು ಕೋರೈಸುವಂತೆ ಮರಕ್ಕೆ ಸಿಡಿಲು ಅಪ್ಪಳಿಸಿದ್ದು, ಮರ ಛಿದ್ರವಾಗಿರುವುದಲ್ಲದೇ ಹೊತ್ತಿ ಉರಿದು ಹೋಗಿದೆ. ಗ್ರಾಮಸ್ಥರು ಮೊದಲ ಬಾರಿಗೆ ಇಂತಹದ್ದೊಂದು ಅಚ್ಚರಿಯ ಘಟನೆಯನ್ನು ನೋಡಿದ್ದು, ಅಚ್ಚರಿಯ ಜೊತೆಗೆ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಅಕಾಲಿಕವಾಗಿ ಬರುವ ಮಳೆ, ಸಿಡಿಲುಗಳು ಅನಾಹುತವನ್ನು ಸೃಷ್ಟಿಸುತ್ತವೆ ಎನ್ನುವ ನಂಬಿಕೆ ಹಳ್ಳಿಗಳಲ್ಲಿದ್ದು, ಹೀಗಾಗಿ ಅಕಾಲಿಕ ಮಳೆ, ಸಿಡಿಲು ಬಂದಾಗ ಜನರು ಆತಂಕ್ಕೀಡಾಗುತ್ತಾರೆ. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಹಿರಿಯೂರು: ನದಿ ನೀರು ವ್ಯರ್ಥವಾಗಿ ಹರಿದು ಸಮುದ್ರ ಸೇರುವುದನ್ನು ತಪ್ಪಿಸಲು ನದಿ ಜೋಡಣೆ ಮೂಲಕ ದೇಶದ ಎಲ್ಲಾ ಕೆರೆಕಟ್ಟೆಗಳನ್ನು ತುಂಬಿಸುವ ಮೂಲಕ ಕುಡಿಯುವ ನೀರು ಮತ್ತು ನೀರಾವರಿ ಸಮಸ್ಯೆ ಬಗೆಹರಿಸಬೇಕು ಎಂದು ರಾಜ್ಯ ರೈತಸಂಘ ಮತ್ತು ಹಸಿರುಸೇನೆ ರಾಜ್ಯ ಸಂಚಾಲಕ ಕನಕಂಜೇನಹಳ್ಳಿ ಪಟೇಲ್ ಪ್ರಸನ್ನ ಕುಮಾರ್ ಒತ್ತಾಯಿಸಿದರು. ನಗರದ ತಾಲ್ಲೂಕು ಕಚೇರಿಗೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಕನಕಂಜೇನಹಳ್ಳಿಯಿಂದ ನದಿ ಜೋಡಣೆಗೆ ಒತ್ತಾಯಿಸಿ ಹಮ್ಮಿಕೊಂಡಿರುವ ರಾಷ್ಟ್ರಪತಿ ಭವನ್ ಚಲೊ ಜಾಥಾ ಬುಧವಾರ ಆಗಮಿಸಿದಾಗ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ನಂತರ ಸ್ಥಳೀಯ ರೈತರನ್ನು ಉದ್ದೇಶಿಸಿ ಅವರು ಮಾತನಾಡಿದರು. ನದಿ ಜೋಡಣೆ ಕಾರ್ಯಕ್ರಮ ಯಶಸ್ವಿಯಾದರೆ ರೈತರ ಜಮೀನುಗಳಿಗೆ ಸಾಕಷ್ಟು ನೀರು ಹರಿದು ಬರುತ್ತದೆ. ಇದರಿಂದ ಕೃಷಿ ಉತ್ಪನ್ನ ಪ್ರಮಾಣ ಸಹ ಹೆಚ್ಚುತ್ತದೆ ಎಂದರು. ಆಹಾರೋತ್ಪಾದನೆಯಲ್ಲಿ ದೇಶ ಅದ್ಭುತ ಸಾಧನೆ ತೋರುತ್ತದೆ. ಪ್ರಯುಕ್ತ ಉತ್ತರದ ಹಿಮಾಲಯದಿಂದ ದಕ್ಷಿಣದ ಹಿಂದೂ ಮಹಾಸಾಗರದವರೆಗೆ, ಪಶ್ಚಿಮದ ಗುಜರಾತಿನಿಂದ ಪೂರ್ವದ ಅರುಣಾಚಲದವರೆಗೆ ಹರಿಯುವ ನದಿಗಳ ಪಟ್ಟಿಯನ್ನು…
ತುಮಕೂರು: ತಾಲ್ಲೂಕು ಹೊನ್ನುಡಿಕೆ ಬಳಿಯ ಅರೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ದಾಳಿ ನಡೆಸಿದ್ದು, ಗ್ರಾಮದ ಹೊಸಮನೆ ವೆಂಕಟಪ್ಪ ಎನ್ನುವವರಿಗೆ ಸೇರಿದ ಮೂರು ಕುರಿಗಳು ಮೃತಪಟ್ಟಿವೆ. ಶುಕ್ರವಾರ ರಾತ್ರಿ ಎಂದಿನಂತೆ ವೆಂಕಟಪ್ಪನವರು ತಮ್ಮ ಕುರಿಗಳನ್ನು ಮನೆಯ ಕಾಂಪೌಂಡ್ ನಲ್ಲಿ ಕಟ್ಟಿ ಹಾಕಿದ್ದು ಬೆಳಿಗ್ಗೆ ಎದ್ದು ನೋಡುವಷ್ಟರಲ್ಲಿ ಚಿರತೆ ದಾಳಿ ನಡೆಸಿರುವ ಬಗ್ಗೆ ತಿಳಿದಿದೆ. ಇನ್ನು ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ಧಂತೆ ಅರೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದು ಕೂಡಲೇ ಚಿರತೆಯನ್ಮು ಬಂಧಿಸಬೇಕೆಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ವರದಿ : ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಹಿರಿಯೂರು: ಏಪ್ರಿಲ್ 2, 3 ರಂದು ಕರ್ನಾಟಕದಾದ್ಯಂತ ಕನ್ನಡಿಗರ ಚೈತ್ರ ಮಾಸದ ಯುಗಾದಿ ಹಬ್ಬವನ್ನು ಆಚರಿಸಲ್ಪಡುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಾಲೂಕು ದಂಡಾಧಿಕಾರಿಗಳ ನೇತೃತ್ವದಲ್ಲಿಸಭೆ ನಡೆಸಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರಾದ ಡಿ . ಉಮೇಶ್ ತಿಳಿಸಿದರು. ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು ಆಗದಂತೆ ಸಾರ್ವಜನಿಕರು ಸಹಕರಿಸಬೇಕು. ಪೊಲೀಸ್ ಇಲಾಖೆ ಹಾಗೂ ತಾಲೂಕು ದಂಡಾಧಿಕಾರಿಗಳ ಸಹಕಾರದೊಂದಿಗೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಸಾರ್ವಜನಿಕರಿಗೆ ಈ ಸಂಬಂಧ ಅರಿವು ಮೂಡಿಸುವ ಕಾರ್ಯಕ್ರಮವನ್ನು ಕೈಗೊಳ್ಳಲು ಕ್ರಮವಹಿಸಲಾಗುತ್ತದೆ. ನಗರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಲು ಸಮನ್ವಯತೆ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು. ನಮ್ಮತುಮಕೂರು ನ್ಯೂಸ್ ನ್ನು ನಾನು ವೀಕ್ಷಿಸುತ್ತಿದ್ದೇನೆ. ಉತ್ತಮವಾದ ವಿಚಾರಗಳನ್ನು ಕ್ರೂಢೀಕರಿಸಿ, ಪ್ರಚಾರ ಮಾಡುತ್ತಿದ್ದಾರೆ. ಸಾರ್ವಜನಿಕರು ಕೂಡ ಮಾಧ್ಯಮಕ್ಕೆ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಮಾಧ್ಯಮದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಡಿ .ಉಮೇಶ್, ಸಾರ್ವಜನಿಕರಿಗೆ ಇದೇ…