Subscribe to Updates
Get the latest creative news from FooBar about art, design and business.
- ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
- ಬೀದರ್: ಆನ್ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
- 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
- ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
- ಒಳಮೀಸಲಾತಿ: “ನಾಗಮೋಹನ್ ದಾಸ್ ಆಯೋಗದ ವರದಿ ಅವೈಜ್ಞಾನಿಕ”: ಮಾ.25ರಂದು ಬೃಹತ್ ಪ್ರತಿಭಟನೆ
- ನಾಲ್ಕು ಹೆಣ್ಣುಮಕ್ಕಳ ತಾಯಿಗೆ ಸ್ವಯಂ ಉದ್ಯೋಗ: ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಕಾರ್ಯಕ್ಕೆ ಇಕ್ಬಾಲ್ ಅಹಮದ್ ಸಾಥ್
- ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ
- ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ
Author: admin
ಖ್ಯಾತ ಪಂಜಾಬಿ ಗಾಯಕ ದಲೇರ್ ಮೆಹಂದಿ ಅವರನ್ನು ಬಂಧಿಸಲಾಗಿದೆ. ವಿದೇಶಕ್ಕೆ ಮಾನವ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ 2 ವರ್ಷ ಜೈಲು ಶಿಕ್ಷೆಯಾಗಿದೆ. ಅಕ್ರಮವಾಗಿ ವಿದೇಶಗಳಿಗೆ ಜನರನ್ನು ಕಳುಹಿಸಿದ ಆರೋಪ ಅವರ ಮೇಲಿದೆ. ಇದಕ್ಕೂ ಮೊದಲು ಪಟಿಯಾಲಾದ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮೆಹಂದಿ ವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 2 ಸಾವಿರ ದಂಡ ವಿಧಿಸಿ ಆದೇಶ ನೀಡಿತ್ತು. ಈ ಹಿನ್ನೆಲೆ ಗುರುವಾರ ಅವರನ್ನು ಬಂಧಿಸಲಾಗಿದೆ. 27 ಆಗಸ್ಟ್ 2003ರಲ್ಲಿ ನಮೂದಾದ ಎಫ್ಐಆರ್ ಸಂಖ್ಯೆ 498ರ IPS u/s 406,420,120B, 465,468,471 ಮತ್ತು ಭಾರತೀಯ ಪಾಸ್ಪೋರ್ಟ್ ಕಾಯ್ದೆಯ ಅಡಿ ಈ ಪ್ರಕರಣ ನಮೂದಿಸಲಾಗಿತ್ತು, HS ಗ್ರೆವಾಲ್ ನ್ಯಾಯಾಲಯವು ಆರೋಪಿ ಗಾಯಕ ದಲೇರ್ ಮೆಹಂದಿ ಅವರು ಸಲ್ಲಿಸಿದ್ದ ಮೇಲ್ಮನವಿಯ ವಿರುದ್ಧ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ದಲೇರ್ ಮೆಹಂದಿ ಅವರಿಗೆ 16 ಮಾರ್ಚ್ 2018 ರಂದು ಜೆಎಂಐಸಿ ಪಟಿಯಾಲ 2 ವರ್ಷಗಳ ಶಿಕ್ಷೆ ವಿಧಿಸಿತ್ತು. ಇದೀಗ…
ವಯಾಕಾಂ18ರ ಮುಂಚೂಣಿಯ ಆನ್-ಡಿಮ್ಯಾಂಡ್ ಸ್ಟ್ರೀಮಿಂಗ್ ಪ್ಲಾಟ್ಫಾರಂ ವೂಟ್ 8 ಸೀಸನ್ಗಳಿಂದ ಅಭೂತಪೂರ್ವ ಯಶಸ್ಸು ಗಳಿಸಿದ ಬಿಗ್ ಬಾಸ್ ಕನ್ನಡದ ಒಟಿಟಿ ಆವೃತ್ತಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಕನ್ನಡದ ಖ್ಯಾತ ನಟ `ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ ಈ ಕಾರ್ಯಕ್ರಮವನ್ನು ಹೊಚ್ಚಹೊಸ ಉತ್ಸಾಹಕರ ಮಾದರಿಯಲ್ಲಿ ಆಯೋಜಿಸಲಿದೆ. ಈ ಕಾರ್ಯಕ್ರಮ ಪ್ರಾರಂಭ ಕುರಿತು ಕಿಚ್ಚ ಸುದೀಪ, “ಉತ್ಸಾಹಕರ 8 ಋತುಗಳನ್ನು ಆಯೋಜಿಸಿದ ನಂತರ ಬಿಗ್ ಬಾಸ್ ಕನ್ನಡ ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಪಡೆದಿದೆ. ಈ ವರ್ಷ ಮೊಟ್ಟಮೊದಲನೆಯ ಒಟಿಟಿ ಆವೃತ್ತಿಯ ಮೂಲಕ ಮನರಂಜನೆಯಲ್ಲಿ ಕಥೆಗೆ ಟ್ವಿಸ್ಟ್ ತರಲು ಬಹಳ ಸಂತೋಷ ಹೊಂದಿದ್ದೇವೆ. ನಾವು ವೂಟ್ನಲ್ಲಿ ಈ ಶೋ ಪ್ರದರ್ಶನಕ್ಕೆ ಸಜ್ಜಾಗಿದ್ದು ನಾನು ವೀಕ್ಷಕರಿಗೆ 24/7 ಲೈವ್ ಆಕ್ಷನ್, ಆಸಕ್ತಿದಾಯಕ ಸಂವಹನಗಳು ಮತ್ತು ಪ್ಲಾಟ್ ಟ್ವಿಸ್ಟ್ಗಳನ್ನು ವೀಕ್ಷಕರಿಗೆ ತರಲು ಉತ್ಸುಕನಾಗಿದ್ದೇನೆ, ಇದು ನಮ್ಮ ವೀಕ್ಷಕರನ್ನು ಸೆಳೆಯುತ್ತದೆ ಎಂಬ ಭರವಸೆ ನನ್ನದು” ಎಂದರು. ಬಿಗ್ ಬಾಸ್ ಕನ್ನಡ ಹಿಂದಿನ ವರ್ಷಗಳಲ್ಲಿ ಅಪಾರ ಜನಪ್ರಿಯತೆ ಗಳಿಸಿದೆ. ಈ…
ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ ಪಕ್ಕದಲ್ಲಿರುವ ಜಮೀನಿನಲ್ಲಿದ್ದ ಹಲಸಿನ ಮರಕ್ಕೆ ಹಲಸಿನ ಹಣ್ಣನ್ನು ತಿನ್ನಲು ಬಂದ ಕರಡಿ ಮರಿಯೊಂದು ಮುಳ್ಳಿನ ತಂತಿಯಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಬೆಳಿಗ್ಗೆ ಜಮೀನಿನ ಕಡೆ ಬಂದ ರೈತರು ಮರದಲ್ಲಿ ಸಿಲುಕಿಹಾಕಿಕೊಂಡು ವೇದನೆ ಪಡುತ್ತಿದ್ದ ಕರಡಿಮರಿಯನ್ನು ಗಮನಿಸಿದ ರೈತರು ತಕ್ಷಣ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ . ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಕರಡಿ ಮರಿಗೆ ಅರವಳಿಕೆ ಮದ್ದು ನೀಡಿ ಸುರಕ್ಷಿತವಾಗಿ ಮುಳ್ಳು ತಂತಿಯಿಂದ ಬಿಡಿಸಿ ಮುಳ್ಳು ತಂತಿಯಿಂದ ಸಣ್ಣಪುಟ್ಟ ಗಾಯಗಳಾಗಿತ್ತು ಚಿಕಿತ್ಸೆ ನೀಡಿ ದೂರದ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ ಕಾರ್ಯಾಚರಣೆಯಲ್ಲಿ ಕೊರಟಗೆರೆ ಯ ಅರಣ್ಯ ಇಲಾಖೆ ಅಧಿಕಾರಿಗಳಾದ ಸುರೇಶ್, ನಾಗರಾಜು, ಸಿಬ್ಬಂದಿಗಳುಹಾಗೂ ಪಶು ವೈದ್ಯಾಧಿಕಾರಿಗಳು ಹಾಜರಿದ್ದರು . ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಬೆಂಗಳೂರು: ರಾಜ್ಯದಿಂದ ಕಾಶಿ ಯಾತ್ರೆಗೆ ತೆರಳುವವರಿಗೆ ರಾಜ್ಯ ಸರ್ಕಾರ ತಲಾ 5 ಸಾವಿರ ರೂಪಾಯಿ ಸಹಾಯಧನ ಯೋಜನೆಯನ್ನು ಘೋಷಣೆ ಮಾಡಿದ್ದು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಯೋಜಿಸಲಾಗಿದ್ದ ಸಮಾರಂಭದಲ್ಲಿ ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಣೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದ ಸಿಎಂ ಬಳಿಕ ಮಾತನಾಡಿ, ಇದೊಂದು ಹೊಸ ಕಾರ್ಯಕ್ರಮ. ಇತ್ತೀಚೆಗೆ ಕಾಶಿಯನ್ನು ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಪೂರ್ಣವಾಗಿ ನವೀಕರಣ ಮಾಡಿದ್ದಾರೆ. ಕಾಶಿ ಎಂದರೆ ಒಂದು ಶ್ರದ್ಧಾಸ್ಥಳ. ಬಹಳಷ್ಟು ಜನ ವಿಶ್ವಾಸ, ನಂಬಿಕೆ ಇಟ್ಟಿದ್ದಾರೆ. ಮೊದಲು ಏನು ಕೂಡ ವ್ಯವಸ್ಥೆ ಇಲ್ಲದೇ ಇದ್ದಾಗ ಅಂತಿಮಯಾತ್ರೆ ಅಂತ ಹೋಗುತ್ತಿದ್ದರು. ಈಗ ಬಹಳಷ್ಟು ಬದಲಾವಣೆ ಆಗಿದೆ. ನೇರವಾಗಿ ವಾರಣಾಸಿಗೆ ವಿಮಾನ, ರೈಲು, ಬಸ್ ವ್ಯವಸ್ಥೆಯಾಗಿದೆ. ಇದರಿಂದ ಕಾಶಿ ಯಾತ್ರಿಕರ ಸಂಖ್ಯೆ ಹೆಚ್ಚಾಗುತ್ತದೆ. ಇಂದು ಕಾಶಿ ಯಾತ್ರೆಗೆ ಹೋಗಿ ಬಂದ ಹತ್ತು ಜನರಿಗೆ ಚೆಕ್ ವಿತರಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ನೇರವಾಗಿ ಡಿ.ಬಿ.ಟಿ ಮೂಲಕ ಆನ್…
ಕೊಡಗು, ದ.ಕ., ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಡಿಕೇರಿಯಿಂದ ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಅಗಮಿಸುವ ಸಂದರ್ಭದಲ್ಲಿ ಕೊಯನಾಡು ಮತ್ತು ದ.ಕ. ಸಂಪಾಜೆಗೆ ಭೇಟಿ ನೀಡಿ ಮಳೆ ಮತ್ತು ಭೂಕಂಪನದಿಂದ ಹಾನಿಗೊಂಡು ಬಿರುಕು ಬಿಟ್ಟ ಮನೆಯನ್ನು ವೀಕ್ಷಣೆ ಮಾಡಿದರು. ಕೊಯನಾಡು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ನೆಲೆಸಿರುವವರಿಗೆ ಧೈರ್ಯ ತುಂಬಿದರು. ಸೇರಿದ್ದ ಜನರಿಂದ ಸಿಎಂ ಅಹವಾಲು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸಚಿವರಾದ ಎಸ್.ಅಂಗಾರ, ವಿ. ಸುನಿಲ್ ಕುಮಾರ್, ಆರ್.ಅಶೋಕ್, ಸಿ.ಸಿ.ಪಾಟೀಲ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಪಶ್ಚಿಮಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆಗಳ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್, ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್ ಮತ್ತಿತರರು ಇದ್ದರು. ದ.ಕ.ಸಂಪಾಜೆಗೆ ಭೇಟಿ: ಬಳಿಕ ದ.ಕ.ಸಂಪಾಜೆಯಲ್ಲಿ ಭೂಕಂಪನದಿಂದ ಬಿರುಕು ಬಿಟ್ಟ ಗ್ರಾ.ಪಂ.ಮಾಜಿ ಸದಸ್ಯ ಪಿ.ಆರ್. ನಾಗೇಶ್ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ…
ಸುಳ್ಯ:ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಯ ಪ್ರಮಾಣ ತಗ್ಗಿದ್ದರೂ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದುಅಪಾರ ನಷ್ಟ ಸಂಭವಿಸುತ್ತಿದೆ. ತೊಡಿಕಾನ ಗ್ರಾಮದ ಕುಂಟುಕಾಡು ಬಳಿ ಪೆರಾಜೆಯ ವ್ಯಾಪಾರೆ ದಾಮೋದರ ಅವರು ಖರೀದಿಸಿದ ಸ್ಥಳದಲ್ಲಿ ಇತ್ತೀಚಿನ ೨ ವರ್ಷಗಳಿಂದ ನೂತನ ಗೃಹ ನಿರ್ಮಾಣ ಮಾಡಿದ್ದು, ಇನ್ನೆರಡು ತಿಂಗಳುಗಳಲ್ಲಿ ಮನೆಯ ಕೆಲಸ ಪೂರ್ತಿಗೊಳಿಸಿ ಮನೆಯ ಗೃಹ ಪ್ರವೇಶ ಮಾಡುವುದೆಂದು ನಿಶ್ಚಯಿಸಿದ್ದರು. ಆದರೆ ಇತೀಚಿನ ಬಾರಿ ಮಳೆಗೆ ಭೂಮಿ ಅದುರಿದಂತಾಗಿ ಮನೆಯ ಹಿಂದಿನ ಬರೆ ಸ್ವಲ್ಪ ಸ್ವಲ್ಪವೇ ಕುಸಿಯುತ್ತಾ ಸೋಮವಾರ ಮತ್ತು ಮಂಗಳವಾರ ಬರೆ ಕುಸಿದು ಹೊಸ ಮನೆ ಬಾಗಶಃ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಜಾಲ್ಸೂರಿನ ಕಜೆಗದ್ದೆ ಕಾಂಪ್ಲೆಕ್ಸ್ ಹಿಂಬದಿಯಲ್ಲಿ ಬರೆ ಕುಸಿತಗೊಂಡ ಸ್ಥಳಕ್ಕೆ ಎ.ಸಿ. ಗಿರೀಶ್ ನಂದನ್, ತಹಸೀಲ್ದಾರ್ ಕು. ಅನಿತಾಲಕ್ಷ್ಮಿ, ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ನವೀನಚಂದ್ರ ಜೋಗಿ ಹಾಗೂ ಅಧಿಕಾರಿಗಳು ಸೋಮವಾರ ಸಂಜೆ ಭೇಟಿ ಪರಿಶೀಲನೆ ನಡೆಸಿದರು. ಚೆಂಬು ಗ್ರಾಮದ ಕುದ್ರೆಪಾಯ ಕಟ್ಟಪಾರೆ ಜನಾರ್ಧನ ನಾಯ್ಕ ರವರ ಮನೆಯ…
ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿರುವ ಘಟನೆ ಇಲ್ಲಿಗೆ ಸಮೀಪದ ಸಂತೆಕಟ್ಟೆ ಕೆ.ಜಿ .ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.12ರಂದು ನಡೆದಿದೆ. ಘಟನೆಯಲ್ಲಿ ಎಸ್ಕಾರ್ಟ್ ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಸಚಿವ ಕೋಟ ಅವರ ಬೆಂಗಾವಲು ವಾಹನದ ಮುಂದೆ ಸಂಚರಿಸುತಿದ್ದ ಲಾರಿ ಸೂಚನೆ ನೀಡದೆ ಏಕಾಏಕಿ ಪಥ ಬದಲಿಸಿದ ಕಾರಣ, ಚಾಲಕನ ನಿಯಂತ್ರಣ ತಪ್ಪಿ ವಾಹನ ಡಿವೈಡರ್ ಮೇಲೆ ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದು, ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವ ರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಅವರನ್ನು , ಸಚಿವ ಕೋಟ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದಲ್ಲಿ ಗುರುಪೂರ್ಣಿಮೆಯನ್ನು ಹಿರಿಯೂರು ನಗರದ ಬಸವರಾಜ್ ಆಸ್ಪತ್ರೆ ಯ ರಸ್ತೆಯಲ್ಲಿರುವ ಸಾಯಿಬಾಬಾ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳು ಸಾಯಿಬಾಬಾ ಸ್ವಾಮಿ ದೇವಸ್ಥಾನದಲ್ಲಿ ಗುರು ಪೂರ್ಣಿಮೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸಿದರು. ಗುರುಪೂರ್ಣಿಮೆ ನಿಮಿತ್ತ ಹಿರಿಯೂರು ನಗರದ ರಾಯರ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹಿರಿಯೂರು ನಗರದ ಬಸವರಾಜ್ ಹಾಸ್ಪಿಟಲ್ ರಸ್ತೆಯಲ್ಲಿರುವ ಸಾಯಿಬಾಬಾ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಕಾಕಡಾರತಿ, ಮಹಾಭಿಷೇಕ, ಮಂಗಲಸ್ನಾನ, ಅಲಂಕಾರ, ಆರತಿ ನಡೆಯಿತು. ನೂರಾರು ಜನರು ರುದ್ರಾಭಿಷೇಕ, ಸಹಸ್ರಬಿಲ್ವಾರ್ಚನೆ ಹಾಗೂ ಕುಂಕುಮಾರ್ಚನೆ ಕಾರ್ಯಕ್ರಮಗಳು ಸಹ ನಡೆದವು. ಬೆಳಗಿನಿಂದಲೇ ಭಕ್ತರು ಭಜನೆಯಲ್ಲಿ ನಿರತರಾಗಿದ್ದರು. ಹೋಮ-ಹವನಗಳಲ್ಲಿ ಪಾಲ್ಗೊಂಡರು. ನಂತರ ರಾಯರ ಮೆರವಣಿಗೆಯು ಸಹ ಹಿರಿಯೂರು ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ನಡೆಯಿತು. ಸಾಯಿಬಾಬಾನ ಭಕ್ತಾದಿಗಳಿಂದ ಅನ್ನಸಂತರ್ಪಣೆಯೂ ಸಹ ಬಹಳ ವಿಜೃಂಭಣೆಯಿಂದ ನಡೆಯಿತು. ಇದೇ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದಂತಹ ಹಿರಿಯೂರು ನಗರಸಭೆ ಸದಸ್ಯರಾದ ಅಂಬಿಕಾ ಯಾನೆ ಅಂಬಿಕಾಬಾಯಿ , ವಿಶಾಲಾಕ್ಷಮ್ಮ , ಲೋಕೇಶ್ ಅವರು ಸೇರಿದಂತೆ…
ಪರೋಟ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಸಾಲದ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಯೊಬ್ಬರು ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡು ಘಟನೆ ಸಾಲಿಗ್ರಾಮದ ಕಾರ್ಕಡ ಸಮೀಪ ಭಟ್ರಕಟ್ಟೆಯಲ್ಲಿ ನಡೆದಿದೆ. ಕಾರ್ಕಡ ಭಟ್ರಕಟ್ಟೆ ನಿವಾಸಿ 43 ವರ್ಷದ ಸುಧಾಕರ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಪರೋಟ ವ್ಯಾಪಾರ ಮಾಡಿಕೊಂಡಿದ್ದರು. ಪರೋಟ ವ್ಯಾಪಾರಕ್ಕೆ ದೊಡ್ಡ ಪ್ರಮಾಣದ ಬಂಡವಾಳ ಹೂಡಿದ್ದರು. ಆದರೆ, ಇತ್ತೀಚೆಗೆ 3 ವರ್ಷಗಳಿಂದ ವ್ಯಾಪಾರ ಸರಿಯಾಗಿ ಆಗದೇ ಸಾಲದ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. ಇದೇ ವಿಚಾರದಲ್ಲಿ ಜೀವನದಲ್ಲಿ ಮನನೊಂದು ನಿನ್ನೆ ಸಂಜೆ ಪರೋಟ ಮಾಡುವ ಶಡ್ ನಲ್ಲಿರುವ ಕಿಟಕಿಯ ಸರಳಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಅನಾಮದೇಯ ಕಾರಿನ ಜೊತೆಗೆ ವ್ಯಕ್ತಿಯೊಬ್ಬ ಸುಟ್ಟು ಶವವಾಗಿ ಪತ್ತೆಯಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ನಿರ್ಜನ ಪ್ರದೇಶದಲ್ಲಿ ಜು.12ರ ತಡರಾತ್ರಿ ವರದಿಯಾಗಿದೆ. ಕಾರಿನಲ್ಲಿದ್ದ ವ್ಯಕ್ತಿ ಸಮೇತ ಕಾರುಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನ ಹಿಂಬದಿ ಸೀಟ್ ನಲ್ಲಿ ವ್ಯಕ್ತಿ ಇದ್ದು, ವ್ಯಕ್ತಿಯ ಶವ ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟುಕರಕಲಾಗಿದೆ. ಕಾರಿನ ಚಾಲಕನ ಎಡಬದಿಯ ಸೀಟ್ ಹಿಂಬಾಗಕ್ಕೆ ವಾಲಿಕೊಂಡಂತಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯೋ ಆತ್ಮಹತ್ಯೆಯೋ ತನಿಖೆಯ ಬಳಿಕವಷ್ಟೇ ಸತ್ಯ ಹೊರ ಬರಬೇಕಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಯ ಜೊತೆಗೆ ಪ್ರಕರಣ ಭೇದಿಸಲು ಪೊಲೀಸರು ಮುಂದಾಗಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz