Author: admin

ಮುಂಬೈ: ಸಾಲ ವಸೂಲಿ ವೇಳೆ ರಿಕವರಿ ಏಜೆಂಟರು ಗ್ರಾಹಕರಿಗೆ ಬೆದರಿಕೆ ಹಾಕುವುದು ಮತ್ತು ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ನಂತರ ಪೋನ್‌ ಮಾಡುವಂತಿಲ್ಲವೆಂದು ಆರ್‌ಬಿಐ ಹೊಸ ಸುತ್ತೋಲೆ ಬಿಡುಗಡೆ ಹೊರಡಿಸಿದ್ದು, ಖಡಕ್ ಎಚ್ಚರಿಕೆ ನೀಡಿದೆ. ಬ್ಯಾಂಕ್‌ ಗಳು, ಎನ್‌ಬಿಎಫ್‌ಸಿಗಳು ಮತ್ತು ಎಆರ್‌ಸಿಗಳು ಸೇರಿದಂತೆ ನಿಯಂತ್ರಿತ ಘಟಕಗಳಿಗೆ ಹೆಚ್ಚುವರಿ ಸೂಚನೆ ನೀಡುವಾಗ ರಿಸರ್ವ್ ಬ್ಯಾಂಕ್ (RBI) ಸಾಲ ವಸೂಲಾತಿಗೆ ಸಂಬಂಧಿಸಿದಂತೆ ವಸೂಲಾತಿ ಏಜೆಂಟ್‌ಗಳು ತನ್ನ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದೆ. ಈ ಹಿಂದೆಯೇ ಹೊರಡಿಸಲಾಗಿರುವ ನಿಯಮಗಳನ್ನು ಸಂಸ್ಥೆಗಳು ಉಲ್ಲಂಘಿಸುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಹೊಸ ಸುತ್ತೋಲೆ ಹೊರಡಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ಸಾಲ ವಸೂಲಿ ಸಂದರ್ಭದಲ್ಲಿ ಅದಕ್ಕೆ ಸಂಬಂಧಿಸಿದ ಸಂಸ್ಥೆಗಳ ಪ್ರತಿನಿಧಿಗಳು ಬಲಪ್ರಯೋಗ, ಕಿರುಕುಳ ನೀಡುವಂಥ ಕ್ರಮಗಳನ್ನು ಅನುಸರಿಸುವಂತೆ ಇಲ್ಲ. ಅನಪೇಕ್ಷಿತ ಸಂದೇಶಗಳನ್ನು, ಅನಾಮಧೇಯರ ಹೆಸರಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ಬಳಿಕ ಫೋನ್‌ ಮಾಡುವಂತಿಲ್ಲವೆಂದು ತನ್ನ ಸುತ್ತೋಲೆಯಲ್ಲಿ ಆರ್‌ಬಿಐ…

Read More

ನವದೆಹಲಿ: ಪಶ್ಚಿಮ ನ್ಯೂಯಾರ್ಕ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಖ್ಯಾತ ಲೇಖಕ ಸಲ್ಮಾನ್ ರಶ್ದಿಗೆ ಅಪರಿಚಿತ ವ್ಯಕ್ತಿಯೊಬ್ಬ ಚಾಕು ಇರಿದು ಹಲ್ಲೆ ನಡೆಸಿದ್ದಾನೆ. ಷಟೌಕ್ವಾ ಇನ್‌ಸ್ಟಿಟ್ಯೂಟ್‌ ನ ವೇದಿಕೆಯ ಮೇಲೆ ಆಯೋಜಕರು ರಶ್ದಿ ಅವರನ್ನು ಭಾಷಣಕ್ಕೆ ಆಹ್ವಾನಿಸುತ್ತಿದ್ದಂತೆಯೇ ದಿಢೀರ್ ದಾಳಿ ನಡೆಸಿದ ಅಪರಿಚಿತ ವ್ಯಕ್ತಿ ರಶ್ದಿ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ಅವರು ನೆಲಕ್ಕೆ ಕುಸಿದುಬಿದ್ದಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ವೆಂಟಿಲೇಟರ್‌ನಲ್ಲಿ ಸಲ್ಮಾನ್ ರಶ್ದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ದಾಳಿಯ ಪರಿಣಾಮ ಅವರು ತಮ್ಮ ಒಂದು ಕಣ್ಣನ್ನು ಕಳೆದುಕೊಳ್ಳೂವ ಸಾಧ‍್ಯತೆ ಇದೆ ಎಂದು ತಿಳಿದುಬಂದಿದೆ. ಚಾಕು ಇರಿತದಿಂದ ರಶ್ದಿಯವರ ತೋಳಿನ ನರಗಳು ತುಂಡಾಗಿದ್ದು, ಯಕೃತ್ತಿಗೆ ಹಾನಿಯುಂಟಾಗಿದೆ. ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಬಫಲೋದಿಂದ ದಕ್ಷಿಣಕ್ಕೆ 75 ಮೈಲುಗಳಷ್ಟು ದೂರದಲ್ಲಿರುವ ಷಟೌಕ್ವಾದಲ್ಲಿ ಈ ಘಟನೆ ನಡೆದಿದೆ. ಇನ್ಸ್ಟಿಟ್ಯೂಟ್ ಪ್ರಕಾರ ‘ಅಭಿವ್ಯಕ್ತಿ ಸ್ವಾತಂತ್ರ್ಯದ ನೆಲೆಯಾಗಿ’ ದೇಶಭ್ರಷ್ಟ ಲೇಖಕರಿಗೆ ಅಮೆರಿಕ’ ವಿಷಯದ ಬಗ್ಗೆ ರಶ್ದಿ ಮಾತನಾಡಬೇಕಿತ್ತು. ಚಾಕು ಇರಿತದ ನಂತರ ಅವರನ್ನು ಹೆಲಿಕಾಪ್ಟರ್ ಮೂಲಕ…

Read More

ಯಾದಗಿರಿ: ಗಿರಿನಾಡು ಯಾದಗಿರಿಯಲ್ಲಿ ಗಾಂಜಾ ಘಾಟಿನ ಹಾವಳಿ ಹೆಚ್ಚಾಗಿದೆ. ಪಾನ್-ಬೀಡಾ ಅಂಗಡಿಗಳಲ್ಲಿ ಗಾಂಜಾ ಜಾಕಲೇಟ್ ಎಗ್ಗಿಲ್ಲದೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ಮಾದಕ ವ್ಯಸನಿಗಳ ಹಾಟ್ ಸ್ಪಾಟ್ ಆಯಿತಾ ಕರುನಾಡು ಅನ್ನೋ ಪ್ರಶ್ನೆ ಮೂಡಿದೆ. ವಿದ್ಯಾರ್ಥಿಗಳು ಹಾಗೂ ಮಧ್ಯ ವಯಸ್ಕರೇ ಗಾಂಜಾ ಆರೋಪಿಗಳ ಟಾರ್ಗೆಟ್ ಆಗಿದ್ದು, ಉತ್ತರ ಪ್ರದೇಶದ ಗಾಂಜಾ ನಶೆಯ ಜಾಕಲೇಟ್ ಯಾದಗಿರಿ ಜಿಲ್ಲೆಯಲ್ಲಿ ಮಾರಾಟವಾಗುತ್ತಿವೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದ ಮೂಲದವರಿಂದ ರಾಜಾರೋಷವಾಗಿ ಗಾಂಜಾ ಚಾಕಲೇಟ್ ಮಾರಾಟ ನಡೆಯುತ್ತಿದೆ. ‘ಉಡ್ತಾ ಪಂಜಾಬ್’ ಆಗುತ್ತಿದೇಯಾ ಯಾದಗಿರಿ ಅನ್ನೋ ಪ್ರಶ್ನೆ ಮೂಡಿದೆ. ಶಹಾಪೂರ ನಗರದಲ್ಲಿ ಪಾನ್‍ಶಾಪ್‍ ಇಟ್ಟುಕೊಂಡು ಗಾಂಜಾ ಚಾಕಲೇಟ್ ಮಾರಾಟ ಮಾಡುತ್ತಿದ್ದವರು ಆರೋಪಿಗಳು ಅಂದರ್ ಆಗಿದ್ದಾರೆ. 3 ಪಾನ್‍ಶಾಪ್‍ಗಳ ಮೇಲೆ ಅಬಕಾರಿ ಪೋಲಿಸರ ಮಿಂಚಿನ ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶ ಮೂಲದ ಜೀತೆಂದ್ರ ಹಾಗೂ ಮೋಹಿತ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಹಾಪೂರ ಅಬಕಾರಿ ಉಪ ಅಧೀಕ್ಷಕ…

Read More

ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ಉದಯೋನ್ಮುಖ ನಟ ಅರೆಸ್ಟ್ ಆಗಿದ್ದಾನೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿ. ‘ಮಿಸ್ಟರ್ ಭೀಮರಾವ್’ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಅರೋಪಿ ಯುವ ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ. ಉದ್ಯಮಿಗೆ ಇತ್ತೀಚೆಗೆ ಪರಿಚಯವಾಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದನೆಂದು ತಿಳಿದುಬಂದಿದೆ. ಉದ್ಯಮಿಗೆ ಭೇಟಿಯಾಗಿದ್ದ ಆತ ತಾವು ಕ್ರೈಂ ಪೊಲೀಸರು ಎಂದು ಹೇಳಿ ಹೆದರಿಸಿದ್ದ. ಯುವತಿಯರ ಜೊತೆಗೆ ಅಶ್ಲೀಲ ಚಾಟ್ ಬಗ್ಗೆ ನಿಮ್ಮ ಮೇಲೆ ಕೇಸ್ ದಾಖಲಾಗಿದೆ ಎಂದು ಸಹ ಬೆದರಿಕೆ ಹಾಕಿದ್ದ. ಈ ಕೇಸ್ ಕ್ಲೋಸ್ ಮಾಡಬೇಕೆಂದರೆ ನೀವು ನನಗೆ ಹಣ ನೀಡಬೇಕೆಂದು ಕೇಳಿದ್ದ. ಅದರಂತೆ ಮೊದಲಿಗೆ 50 ಸಾವಿರ, ನಂತರ ಬ್ಯಾಂಕ್​ನಲ್ಲಿ 3 ಲಕ್ಷ ಡ್ರಾ ಮಾಡಿಸಿಕೊಂಡಿದ್ದ. ಹಂತ ಹಂತವಾಗಿ ಒಟ್ಟು 14 ಲಕ್ಷ ರೂ.ಗೂ ಹೆಚ್ಚಿನ ಹಣವನ್ನು ಉದ್ಯಮಿ ಬಳಿ ವಸೂಲಿ ಮಾಡಿದ್ದ. ಹಲಸೂರು ಗೇಟ್ ಬಳಿ…

Read More

ಕ್ರೇಜಿಸ್ಟಾರ್ ರವಿಚಂದ್ರನ್ ಅಂದ್ರೇನೆ ಡಿಫರೆಂಟ್..ತನಗನಿಸಿದ್ದು ಏನು ಅದನ್ನೇ ಮಾಡಿ ತೋರಿಸೋರು ಅಂದ್ರೆ ಅದು ಕೇವಲ ನಮ್ಮ ಕನಸುಗಾರ. ನೋಡ್ರೋ ನಿಮಗಾಗಿ ಸಿನಿಮಾ ಮಾಡ್ತೀನಿ..ಪ್ರಚಾರ ಮಾಡಲ್ಲ..ನೀವೇ ಮಾಡ್ಕೊಳ್ಳಿ ಅಂತ ಅಭಿಮಾನಿಗಳ ಮೇಲೆ ನಂಬಿಕೆ ಇಟ್ಟು ಸಿನಿಮಾ ಮಾಡ್ತಾರೆ. ಅಂತೆಯೇ ಇದೀಗ ಕನಸುಗಾರನ ಕನಸಿನ ಕೂಸು “ರವಿ ಬೋಪಣ್ಣ” ಸಿನಿಮಾ ಭರ್ಜರಿಯಾಗಿ ತೆರೆ ಕಂಡಿದೆ. ಹಾಗಾದ್ರೆ “ರವಿ ಬೋಪಣ್ಣ” ಸಿನಿಮಾ ಹೇಗಿದೆ ಅನ್ನೋದ್ರ ಪಕ್ಕಾ ರಿವ್ಯೂ ನಿಮ್ಮ ಜೀ ಕನ್ನಡ ನ್ಯೂಸ್ ನಿಮ್ಮ ಮುಂದಿಡುತ್ತಿದೆ. ವಿಭಿನ್ನ ಪಾತ್ರಗಳನ್ನ ಮಾಡಲು ಸಾಧ್ಯವಾಗೋದು ಚಿತ್ರಬ್ರಹ್ಮನಿಗಷ್ಟೇ. ಹೊಸತನವಿರಬೇಕು ಅಂತ ಡಿಫರೆಂಟಾಗೇ ಚಿತ್ರಗಳನ್ನ ಮಾಡುತ್ತಾರೆ.ಸೋಲು-ಗೆಲುವು ಏನೇ ಬಂದ್ರು ಗಟ್ಟಿತನದಿಂದ ಸ್ವೀಕಾರ ಮಾಡುತ್ತಾರೆ. ‘ರವಿ ಬೋಪಣ್ಣ’ ಚಿತ್ರದಲ್ಲಿ ಅವರು ನಮ್ಮೊಳಗಿರೋ ವ್ಯಕ್ತಿತ್ವವನ್ನ ಇಟ್ಕೊಂಡೆ ಅದ್ಬುತವಾಗಿ ಕಥೆ ಬರೆದಿದ್ದಾರೆ. ‘ರವಿ ಬೋಪಣ್ಣ’ ಸಿನಿಮಾದಲ್ಲಿ ಅಥಿತಿ ಪಾತ್ರದಲ್ಲಿ ಕಿಚ್ಚ ಕಮಲ್ ಮಾಡಿದ್ದಾರೆ. ಇದು ಈ ಸಿನಿಮಾ ಇನ್ನಷ್ಟು ತೂಕ ಹೆಚ್ಚಾಗಿದೆ. ಕಾವ್ಯಾ ಶೆಟ್ಟಿ, ರಾಧಿಕಾ ಕುಮಾರಸ್ವಾಮಿ ಅವರ ಮೈಮಾಟ ಪಕ್ಕಾ ಪಡ್ಡೆ ಹುಡುಗರ ನಿದ್ದೆ…

Read More

ಡ್ರೋನ್ ಮೂಲಕ ಇಲ್ಲಿನ ವಿಕ್ಟೋರಿಯಾ ಸ್ಮಾರಕ ಭವನ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಛಾಯಾಚಿತ್ರಗಳನ್ನು ಸೆರೆಹಿಡಿದ ಆರೋಪದ ಮೇಲೆ ಇಬ್ಬರು ಬಾಂಗ್ಲಾದೇಶೀಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಯೂಸಿಯಂನ ಭದ್ರತೆಯಲ್ಲಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಹೇಸ್ಟಿಂಗ್ಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಕಾರ್ಯಾಚರಣೆ ಕೈಗೊಂಡು ಬಾಂಗ್ಲಾದೇಶದ ಇಬ್ಬರನ್ನು ವಿಕ್ಟೋರಿಯಾ ಮೆಮೋರಿಯಲ್ ಹಾಲ್ ಕಾಂಪೌಂಡ್‍ನಲ್ಲಿ ಬಂಧಿಲಾಗಿದೆ. ಆರಂಭಿಕ ತನಿಖೆಯಲ್ಲಿ ಇಬ್ಬರು ಬಾಂಗ್ಲಾದೇಶಿಗಳು ಮಾನವರಹಿತ ವೈಮಾನಿಕ ವಾಹನ ಡ್ರೋನ್ ಬಳಸಿ ಅವರು ಸ್ಮಾರಕ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಛಾಯಾಚಿತ್ರಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿ ಸೇನೆಯ ಪೂರ್ವ ಕಮಾಂಡ್ ಪ್ರಧಾನ ಕಛೇರಿಯೂ ಇದೆ ಇಬ್ಬರು ಬಾಂಗ್ಲಾದೇಶೀಯರನ್ನು ಆಗಸ್ಟ 23 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅವರು ವಿಮಾನ ಕಾಯಿದೆಯನ್ನು ಉಲ್ಲಂಘಿಸಿದ್ದಾರೆ. ವಿಕ್ಟೋರಿಯಾ ಸ್ಮಾರಕ ಸಭಾಂಗಣದಲ್ಲಿ ಡ್ರೋನ್ಗಳನ್ನು ಹಾರಿಸುವುದನ್ನು ನಿಷೇಧಿಸಲಾಗಿದೆ ಏಕೆಂದರೆ ಇದು ಡ್ರೋನ್ ರಹಿತ ವಲಯವಾಗಿದೆ ಮತ್ತು ರಕ್ಷಣಾ ಪ್ರದೇಶದಲ್ಲಿಯೂ ಬರುತ್ತದೆ.…

Read More

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲಾಯಲ್ಲಿ ಬಿಹಾರದ ಮೂಲದ ವಲಸೆ ಕಾರ್ಮಿಕನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಅಜಾಶ್ ವಲಯದಲ್ಲಿ ಕಳೆದ ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಭಯೋತ್ಪಾದಕರು ಮೊಹಮ್ಮದ್ ಅಮ್ರೇಜ್‍ನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಈತ ಬಿಹಾರದ ಮಾಧೇಪುರ ಪ್ರದೇಶದ ಸೋದಾನರಾ ಸುಂಬಲನ ನಿವಾಸಿ ಎನ್ನಲಾಗಿದ್ದು ಕಾಶ್ಮೀರದಲ್ಲಿ ಆತ ಕೆಲಸಮಾಡುತ್ತಿದ್ದ. ಮನೆಯಲ್ಲಿ ಮಲಗಿದ್ದಾಗ ಬಾಗಿಲು ತಟ್ಟಿ ನಂತರ ಒಳಗೆ ನುಗ್ಗಿ ಗುಂಡುಹಾರಿಸಿ ಭಯೋತ್ಪಾದಕರು ಅಲ್ಲಿಂದ ಪರಾರಿಯಾಗಿದ್ದಾರೆ. ಮತ್ತೊಬ್ಬನ ಮೇಲೂ ಗುಂಡು ಹಾರಿಸಲಾಗಿದ್ದು ಆತ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಶಾಸಕ ಸುದೀಪ್ ರಾಯ್ ಬರ್ಮನ್ ಮತ್ತು ಕಾಂಗ್ರೇಸ್ ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸುಶಾಂತ ಚಕ್ರವರ್ತಿ ಸೇರಿದಂತೆ ಇತರೆ ನಾಲ್ವರು ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಇಲ್ಲಿ ನಡೆದಿದೆ. ಅಗರ್ತಲಾದ ರಾಣಿರ್ ಬಜಾರ್‍ನಲ್ಲಿ ಸ್ಥಳೀಯ ಕಾಂಗ್ರೆಸ್‍ಮುಖಂಡರು ರ್ಯಾಲಿ ಆಯೋಜಿಸಿದ್ದರು ಅಲಿಗೆ ಬರುವಾಗ ಶಾಸಕರು ಮುಖಂಡರ ಮೆಲೆ ದಾಳಿ ನಡೆಸಲಾಗಿದೆ. ಗಾಯಗೊಂಡಿರುವ ಶಾಸಕ ರಾಯ್ ಬರ್ಮನ್ ಮತ್ತು ಚಕ್ರವರ್ತಿ, ಮಹಿಳಾ ಘಟಕದ ನಾಯಕಿ ಸುಮನಾ ಸಹಾ ಅವರನ್ನು ಇಲ್ಲಿನ ಜಿಬಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.ದಾಳಿಯ ವೇಳೆ ಕನಿಷ್ಠ 12 ಕಾಂಗ್ರೇಸ್ ಮುಖಂಡರು ಮತ್ತು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಅನುಮತಿಯಿಲ್ಲದೆ ರ್ಯಾಲಿ ಆಯೋಜಿಸಲಾಗಿತ್ತು ಏಕಾಏಕಿ ನೂರಕ್ಕೂ ಹೆಚ್ಚು ಜನರ ಗುಂಪು ದಾಳಿ ನಡೆಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.ಇದೇ ವೇಳೆ ಹಲವೆಡೆ ಎಂಟು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.ಬಿಜೆಪಿ ವಿರುದ್ದ ಕಾಂಗ್ರೇಸ್ ನಾಯಕರು ಆರೋಪಿಸಿದ್ದಾರೆ. ಕಾಂಗ್ರೇಸ್ ನ ಕಾನೂನು ಘಟಕವು ಪೊಲೀಸರಿಗೆ ದೂರು…

Read More

ಪೊಲೀಸ್ ಮೆಸ್‍ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಪೊಲೀಸ್ ಕಾನ್ಸ್‍ಟೇಬಲ್ ವೊಬ್ಬರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ವಿಡಿಯೋ ವೈರಲ್ಲಾಗಿದೆ. ಫಿರೋಜಾಬಾದ್‍ನ ಪೊಲೀಸ್ ಹೆಡ್‍ಕ್ವಾಟ್ರ್ರಸ್‍ನ ಮೆಸ್‍ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ರೊಟ್ಟಿ ದಾಲ್ ಮತ್ತು ಚಟ್ನಿ ಇರುವ ಆಹಾರದ ಪ್ಲೇಟ್‍ನ್ನು ಹಿಡಿದುಕೊಂಡು ಪೊಲೀಸ್ ಕಾನ್ಸ್‍ಟೇಬಲ್ ಸ್ಟೆಬಲ್ ಮನೋಜ್‍ಕುಮಾರ್ ರಸ್ತೆಗೆ ಬಂದಿದ್ದಾರೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಮುಂದೆ ಹೋಗಿ ನಾಯಿಯೂ ತಿನ್ನದಂತಹ ಕೆಟ್ಟ ಆಹಾರವನ್ನು ನಮಗೆ ನೀಡಲಾಗುತ್ತಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಪೌಷ್ಟಿಕ ಆಹಾರಕ್ಕಾಗಿ ಹೆಚ್ಚುವರಿಯಾಗಿ 1875 ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ. ಆದರೆ ಈ ರೊಟ್ಟಿ ನೋಡಿ ಎಂದು ಪ್ರಯಾಣಿಕರಿಗೆ ತೋರಿಸಿದ್ದಾರೆ. ಹೆದ್ದಾರಿಯ ಮಧ್ಯದಲ್ಲಿರುವ ಡಿವೈಡರ್ ಮೇಲೆ ಕುಳಿತು ಧರಣಿ ನಡೆಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಕಾನ್ಸ್‍ಟೇಬಲ್ ಹೆಡ್ ಕ್ವಾಟ್ರಸ್ ಮುಂದೆ ಆಹಾರದ ತಟ್ಟೆಯೊಂದಿಗೆ ನಿಂತು ಅತ್ತು ರಂಪಾಟ ಮಾಡಿದ್ದಾರೆ. ಈ ವಿಡಿಯೋ ಯೋಗಿ ಆದಿತ್ಯನಾಥ್ ಅವರಿಗೆ ತಲುಪಿಸಿ ನಮ್ಮ ಗೋಳು ಕೇಳುವವರು ಇಲ್ಲ. ಎಡಿಜಿಪಿ…

Read More

ಎಪ್ಪತ್ತೈದನೆ ಸ್ವಾತಂತ್ರ್ಯೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಆಚರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರಿನಲ್ಲಿಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಹೇಳಿದರು. 75ನೇ ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಳವಡಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಾದ್ಯಂತ ಸರ್ಕಾರ ಅದ್ಧೂರಿಯಾಗಿ ಆಚರಿಸಲಿದೆ. ಮುಂದಿನ ನಮ್ಮ ದೇಶದ ಭವಿಷ್ಯ ನಮ್ಮ ಜನತೆಯ ಕೈಯಲ್ಲಿದೆ. ಹರ್ ಘರ್ ತಿರಂಗಕ್ಕೆ ಕಾಂಗ್ರೆಸ್ ಟೀಕೆ ಮಾಡುತ್ತಿರುವ ವಿಚಾರಕ್ಕೆ ಕಿಡಿಕಾರಿದರು. ತ್ರಿವರ್ಣ ಧ್ವಜ ತ್ಯಾಗ, ಬಲಿದಾನ, ಹೋರಾಟದಿಂದ ಸಿಕ್ಕಿರುವುದು. ಸ್ವಾತಂತ್ರ್ಯ ಪೂರ್ವದಲ್ಲಿ ಹಿರಿಯರು ಹೋರಾಟ ಮಾಡಿರುವ ಫಲ. ಸ್ವಾತಂತ್ರ್ಯ ಹೋರಾಟವನ್ನು ತಿರುಚದೆ ಸತ್ಯಾಸತ್ಯತೆ ತಿಳಿಸಬೇಕಿದೆ. ತ್ರಿವರ್ಣ ಧ್ವಜದಲ್ಲಿ ಭಾರತದ ಏಕತೆ, ಶಕ್ತಿ, ಸ್ವಾತಂತ್ರ್ಯ, ಭವಿಷ್ಯ ಎಲ್ಲವೂ ಅಡಗಿದೆ. ಅದರ ಬಗ್ಗೆ ವಿರೋಧ ಮಾಡುವುದು, ಟೀಕೆ ಮಾಡುವುದು ದೇಶ ವಿರೋಧಿ ಕೃತ್ಯದಂತೆ. ಅಂತಹ ಕೀಳುಮಟ್ಟದ ಮಾತಿಗೆ ಜನತೆ ಬೆಲೆ ಕೊಡುವುದಿಲ್ಲ.…

Read More