Subscribe to Updates
Get the latest creative news from FooBar about art, design and business.
- ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
- ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
- ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
- ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
- ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
- ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
- ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
- ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್.ಕೃಷ್ಣಮೂರ್ತಿ
Author: admin
ತುಮಕೂರು: ತುರುವೇಕೆರೆ ಪಟ್ಟಣದಲ್ಲಿರುವ ತಾಲೋಕು ಕಚೇರಿಯಲ್ಲಿ ಮೈಸೂರು ದೊರೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಆಚರಿಸಲಾಯಿತು. ಒಡೆಯರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಪಟ್ಟಣದ ಶ್ರೀ ಕಾಂತರಾಜ್ ಅರಸ್, ಬಳಿಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹುಟ್ಟು ಹಬ್ಬದ ಶುಭಾಶಯವನ್ನು ಕೋರಿದರು. ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಸರ್ಕಾರಿ ಆಚರಣೆಯನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಕಾರ್ಯಕ್ರಮಕ್ಕೆ ಸಂಘ, ಸಂಸ್ಥೆಗಳಿಗೆ ತಿಳಿಸಿ ಆಚರಣೆಗೆ ಆಹ್ವಾನ ನೀಡಬೇಕಾಗಿತ್ತು. ಆದರೆ ಸಮಯದ ಅಭಾವ ಇರುವುದರಿಂದ ಸಾಧ್ಯವಾಗಿಲ್ಲ ಎಂದು ತಹಸೀಲ್ದಾರರ ಪರವಾಗಿ ಶ್ರೀ ಕಾಂತರಾಜ್ ಅರಸ್ ವಿಷಾದ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಹಾಗೂ ಸಿಬ್ಬಂದಿ ಭಾಗವಹಿಸಿ ಪೂಜೆ ಸಲ್ಲಿಸಿದರು . ಈ ಸಮಾರಂಭದಲ್ಲಿ ಇಲಾಖೆಯ ಎಲ್ಲಾ ಸಿಬ್ಬಂದಿ ಹಾಜರಿದ್ದರು. ವರದಿ: ಸುರೇಶ್ ಬಾಬು ಎಂ.ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಕಳೆದ ಒಂದು ವರ್ಷದಿಂದ ನಿಯಂತ್ರಣದಲ್ಲಿದ್ದ ಕೊರೊನಾ ಸೋಂಕು ಎರಡು ದಿನಗಳಿಂದ ಏರಿಕೆ ಗತಿಯಲ್ಲಿದ್ದು ದೈನಂದಿನ ಸೋಂಕು 3,962ರಷ್ಟಾಗಿದೆ. ಈ ನಡುವೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಗೆ ಪತ್ರ ಬರೆದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಆತಂಕಕಾರಿ ಬೆಳವಣಿಗೆಯಲ್ಲಿ ಇಂದು ಸೋಂಕಿನಿಂದ ಸಾವಿನ ಸಂಖ್ಯೆ 26ರಷ್ಟಾಗಿದೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 5,24,677ರಷ್ಟಾಗಿದ್ದು, ಶೇಕಡವಾರು 1.22ರ ಮಿತಿಯಲ್ಲಿದೆ.ನಿನ್ನೆ ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದ ಬುಲೇಟಿನನಲ್ಲಿ ದೈನಂದಿನ ಸೋಂಕು 4041ರಷ್ಟಿದ್ದು, ಸಾವಿನ ಸಂಖ್ಯೆ 10 ಎಂದು ನಮೂದಿಸಲಾಗಿತ್ತು. 84 ದಿನಗಳ ಬಳಿಕ ದೈನಂದಿನ ಸೋಂಕು ನಾಲ್ಕು ಸಾವಿರ ಗಡಿ ದಾಟಿತ್ತು. ಇಂದು ಬೆಳಗ್ಗೆ ಬಿಡುಗಡೆ ಮಾಡಲಾದ ವರದಿಯಲ್ಲಿ ದೈನಂದಿನ ಸೋಂಕು ನಾಲ್ಕು ಸಾವಿರದ ಗಡಿಯ ಸಮೀಪದಲ್ಲಿದೆ. ನಿನ್ನೆಗಿಂತಲೂ ಕಡಿಮೆ ಇದೆ ಎಂದು ಸಮಾಧಾನ ಪಟ್ಟುಕೊಳ್ಳುವ ವೇಳೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಈ ಮೊದಲು ಎರಡನೆ ಮತ್ತು ಮೂರನೇ ಅಲೆಯ ಮುನ್ಸೂಚನೆಯನ್ನು…
ಏಕದಾಂಪತ್ಯ ನಿರ್ಧಾರ ಮಾಡಿರುವ ವಡೋದರದ ಯುವತಿ ಕ್ಷಮಾ ಬಿಂಧು ನಿರ್ಧಾರ ಹುಚ್ಚುತನದ್ದು ಎಂದು ಟೀಕಿಸಿರುವ ಬಿಜೆಪಿ ಮುಖಂಡರು, ಆಕೆ ದೇವಸ್ಥಾನದಲ್ಲಿ ಮದುವೆಯಾಗಲು ಬಿಡುವುದಿಲ್ಲ ಎಂದು ಘೋಷಿಸಿದ್ದಾರೆ. ಸಮಾಜಶಾಸ್ತ್ರದಲ್ಲಿ ಪದವಿ ಪಡೆದು ಖಾಸಗಿ ಕಂಪೆನಿಯಲ್ಲಿ ಹಿರಿಯ ನೇಮಕಾತಿ ಅಧಿಕಾರಿಯಾಗಿ ಕೆಲಸ ಮಾಡುತ್ತಿರುವ ಕ್ಷಮಾರ ತಂದೆ ದಕ್ಷಿಣ ಆಫ್ರಿಕಾದಲ್ಲಿ ಇಂಜಿನಿಯರ್ ಆಗಿದ್ದು, ತಾಯಿ ಅಹಮದಾಬಾದ್ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿಯೊಂದು ಹುಡುಗಿಗೂ ತನ್ನ ಮದುವೆಯ ಬಗ್ಗೆ ಕನಸುಗಳು ಇರುತ್ತವೆ. ವರ ಕುದುರೆಯ ಮೇಲೆ ಬಂದು ಆಕೆಯನ್ನು ಕರೆದುಕೊಂಡು ಹೋಗಬೇಕು ಎಂಬ ನಾನಾ ರೀತಿಯ ಕಲ್ಪನೆಗಳಿರುತ್ತವೆ. ಆದರೆ ಕ್ಷಮಾ ಭಿನ್ನವಾದ ಆಲೋಚನೆ ಹೊಂದಿದ್ದಾಳೆ. ಅಂದರೆ ಆಕೆ ಬೇರೆಯವರನ್ನು ಮದುವೆಯಾಗಲು ಇಷ್ಟ ಪಟ್ಟಿಲ್ಲ. ಬದಲಾಗಿ ತನ್ನಲ್ಲೇ ತನ್ನ ವರನನ್ನು ಕಂಡುಕೊಂಡಿದ್ದಾಳೆ. ಬಹಳ ದಿನಗಳಿಂದ ತನ್ನಲ್ಲೇ ಉಳಿದುಕೊಂಡಿದ್ದ ಆಲೋಚನೆಗಳನ್ನು ಜಾರಿಗೆ ತರಲು ಅಂಜಿ ಮೌನವಾಗಿದ್ದಳು. ಅಂತಿಮವಾಗಿ ದೃಢ ನಿರ್ಧಾರ ಮಾಡಿ ಏಕದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದಾಳೆ. ಅಂತಿಮವಾಗಿ ಜೂನ್ 11ರಂದು ವಡೋದರದ ದೇವಸ್ಥಾನದಲ್ಲಿ ಎಲ್ಲಾ ಸಂಪ್ರದಾಯಗಳ ಪ್ರಕಾರ…
ಶಿವಮೊಗ್ಗ, ಜೂ. 3 ಹೌದು. ಇದು ವಿಚಿತ್ರವಾದರೂ ಸತ್ಯ! ಪ್ರಸ್ತುತ ಮಾರುಕಟ್ಟೆಯಲ್ಲಿ ಲೀಟರ್ ಡಿಸೇಲ್ ದರ 89ದೆ! ಮಾರುಕಟ್ಟೆಯ ದರಕ್ಕೆ ಹೋಲಿಸಿದರೆ, ಪ್ರತಿ ಲೀಟರ್ ಗೆ ಸರಿಸುಮಾರು 22ರೂ. ಹೆಚ್ಚು ದರ ಹೆಚ್ಚು ನೀಡಿ ಖರೀದಿಸುತ್ತಿದೆ!ಇದು ಕೆ.ಎಸ್.ಆರ್.ಟಿ.ಸಿ.ಗೆ ಅಕ್ಷರಶಃ ದುಬಾರಿ ಯಾಗಿ ಪರಿಣಮಿಸಿದೆ. ಇಂಧನ ವೆಚ್ಚ ಕಾರಣದಿಂದಲೇ ಹಲವೆಡೆ ಬಸ್ ಓಡಿಸಲು ಹಿಂದೇಟು ಹಾಕುವಂತಾಗಿದೆ. ಈ ಕಾರಣದಿಂದ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು, ಪೆಟ್ರೋಲ್ ಬಂಕ್ ಗಳಲ್ಲಿ ಡಿಸೇಲ್ ಖರೀದಿಗೆ ಮುಂದಾಗುತ್ತಿದ್ದಾರೆ. ಆದರೆ ಇದಕ್ಕೂ ಅಡ್ಡಗಾಲು ಹಾಕುವ ಹುನ್ನಾರಗಳು ನಡೆಯುತ್ತಿರುವುದು ಸತ್ಯ. ಕೆ.ಎಸ್.ಆರ್.ಟಿ.ಸಿ. ಸಂಸ್ಥೆಗೆ ಇಂಧನ ಮಾರಾಟ ಮಾಡದಂತೆ ಬಂಕ್ ಗಳಿಗೆ ಪರೋಕ್ಷ ಒತ್ತಡ ಹಾಕಲಾಗುತ್ತಿದೆ. ತೈಲ ಕಂಪೆನಿಯಿಂದಲೇ ನೇರವಾಗಿ ಇಂಧನ ಖರೀದಿಸುವ ತಂತ್ರಗಳು ನಡೆಯುತ್ತಲೆ ಇದೆ. ನಷ್ಟ: ಕಳೆದೆರೆಡು ವರ್ಷಗಳ ಅವಧಿಯಲ್ಲಿ, ಕೋವಿಡ್ ಕಾರಣದಿಂದ ಸರ್ಕಾರಿ ಸಾರಿಗೆ ಸಂಸ್ಥೆಯು ಭಾರೀ ನಷ್ಟಕ್ಕೀಡಾಗಿದೆ. ನೌಕರರಿಗೆ ಸಂಬಳ ನೀಡಲು ಸಾಧ್ಯವಾಗದಂತಹ ಸ್ಥಿತಿಗೆ ತಲುಪಿತ್ತು. ಪ್ರಸ್ತುತ ಸಂಸ್ಥೆ ಚೇತರಿಸಿಕೊಳ್ಳುತ್ತಿದ್ದ ಸಂಸ್ಥೆಯ ಕಾರ್ಯನಿರ್ವಹಣೆ ಸಹಜ ಸ್ಥಿತಿಗೆ ಬರುತ್ತಿದೆ. ಈ…
ಅತಿವೇಗವಾಗಿ ಹೋಗುತ್ತಿದ್ದ ಸ್ಪೋರ್ಟ್ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಪ್ರೆಸ್ಟೀಜ್ ಕಂಪನಿಯ ಉದ್ಯೋಗಿಯಾಗಿದ್ದ ನಿವೃತ್ತ ಎಸ್ ಪಿ ಗುರುಪ್ರಸಾದ್ ಪುತ್ರ ಹಾಗೂ ಆತನ ಗೆಳತಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಗರದ ಹೊರವಲಯದ ಸರ್ಜಾಪುರದಲ್ಲಿ ಇಂದು ನಸುಕಿನಲ್ಲಿ ನಡೆದಿದೆ. ಪ್ರೆಸ್ಟೀಜ್ ಕಂಪನಿಯ ಉದ್ಯೋಗಿಗಳಾದ ಮಾರತ್ ಹಳ್ಳಿಯ ಗಗನ್ ದೀಪ್ ಹಾಗೂ ಆತನ ಗೆಳತಿ ವೈಟ್ ಫೀಲ್ಡ್ ನ ಹೊಂಗಸಂದ್ರದ ಯಶಸ್ವಿನಿಮೃತ ದುರ್ದೈವಿಗಳು. ಸಿಬಿಐನಲ್ಲಿ ಎಸ್ ಪಿಯಾಗಿದ್ದ ನಿವೃತ್ತರಾಗಿದ್ದ ಗುರುಪ್ರಸಾದ್ ಅವರ ಪುತ್ರರಾಗಿದ್ದ ಗಗನ್ ದೀಪ್ ಹಾಗೂ ಆತನ ಗೆಳತಿ ಇಬ್ಬರು ಸರ್ಜಾಪುರದ ಪ್ರೆಸ್ಟೀಜ್ ಕಂಪನಿಯ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.ರಾತ್ರಿ ಪಾಳೆಯಲ್ಲಿ ಕೆಲಸ ಮುಗಿಸಿದ ಇವರಿಬ್ಬರೂ ಮುಂಜಾನೆ ೨.೩೦ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಡುಕಾಟಿ ಸ್ಪೋರ್ಟ್ ಬೈಕ್ ನಲ್ಲಿ ವೇಗವಾಗಿ ಹೋಗುತ್ತಿದ್ದರು. ಮಾರ್ಗ ಮಧ್ಯದ ರಸ್ತೆ ತಿರುವಿನಲ್ಲಿ ಗಗನ್ ದೀಪ್ ಅವರಿಗೆ ನಿಯಂತ್ರಣಕ್ಕೆ ಸಿಗದ ಬೈಕ್, ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ…
ಯುದ್ಧದಿಂದ ನಲುಗಿಹೋಗಿರುವ ಉಕ್ರೇನ್ ದೇಶಕ್ಕೆ ನ್ಯಾಟೋ ರಾಷ್ಟ್ರಗಳ ಬೆಂಬಲ ಸಿಕ್ಕಿದೆ. ಇದರಿಂದಾಗಿ ರಷ್ಯಾ ವಿರುದ್ದ ಹೋರಾಟ ಮಾಡಲು ಮತ್ತಷ್ಟು ಬಲ ಬಂದಂತಾಗಿದೆ. ಪಾಶ್ಚಿಮಾತ್ಯ ಮಿಲಿಟರಿ ಒಕ್ಕೂಟ, ಉಕ್ರೇನ್ ಅನ್ನು ಬೆಂಬಲಿಸುವ “ಜವಾಬ್ದಾರಿ” ಹೊಂದಿದೆ ಎಂದು ನ್ಯಾಟೋ ಮುಖ್ಯಸ್ಥ ಜೆನ್ ಸ್ಟೋಲ್ಟೆನ್ಬರ್ಗ್ ಹೇಳಿದ್ದಾರೆ. ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಅವರನ್ನು ಶ್ವೇತಭವನದಲ್ಲಿ ಭೇಟಿ ಮಾಡಿದ ಸುದೀರ್ಘ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೆನ್ , ಉಕ್ರೇನ್ನಲ್ಲಿ ಸುದೀರ್ಘವಾದ ” ಯುದ್ಧವಿರೋದಿ ” ನಿಲುವು ತೆಗೆದಕೊಳ್ಳಲು ಉಕ್ರೇನ್ ಬೆಂಬಲಸಲು ನ್ಯಾಟೋ ದೇಶಗಳು ಮುಂದಾಗಿವೆ ಎಂದು ಅವರು ಹೇಳಿದ್ದಾರೆ. ಉಕ್ರೇನಿಯನ್ನರು “ಯುದ್ಧಭೂಮಿಯಲ್ಲಿ ತಮ್ಮ ದೇಶವನ್ನು ರಕ್ಷಿಸಲು ಹೆಚ್ಚಿನ ಬೆಲೆ ಪಾವತಿಸುತ್ತಿದ್ದಾರೆ, ಆದರೆ ರಷ್ಯಾ ಹೆಚ್ಚಿನ ಸಾವು ನೋವು ತೆಗೆದುಕೊಳ್ಳುತ್ತಿದೆ.ಇದಕ್ಕೆ ಕಡಿವಾಣ ಹಾಕಬೇಕಾಗಿದೆ. ಉಕ್ರೇನ್ ಮತ್ತು ರಷ್ಯಾ ನಡುವಿನ ಬೆಳವಣಿಗೆಯನ್ನು ನಾವು ಸೂಕ್ಷ್ಮವಾಗಿ ನೋಡುತ್ತೇವೆ” ಎಂದು ಹೇಳಿದ್ದಾರೆ. ನ್ಯಾಟೋ, ರಷ್ಯಾದೊಂದಿಗೆ ನೇರ ಮುಖಾಮುಖಿಯಾಗಲು ಬಯಸುವುದಿಲ್ಲ ಎಂದು ಹೇಳಿರುವ ಅವರು ಯುದ್ಧದ ಸನ್ನಿವೇಶಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು…
ತುಮಕೂರು: ಸುಮಾರು ಮೂರೂವರೆ ತಿಂಗಳುಗಳಿಂದ ಶ್ರೀವಾಲ್ಮೀಕಿ ಸ್ವಾಮೀಜಿಯವರು ಎಸ್ ಟಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದು, ಅವರ ಧರಣಿಯನ್ನು ಬೆಂಬಲಿಸಲು ಶನಿವಾರ ತುಮಕೂರಿನಿಂದ ನಾಯಕ ಸಮುದಾಯ ಮುಖಂಡರು ಬೆಂಗಳೂರಿಗೆ ತೆರಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಬೇಕೆಂಬ ಪ್ರತಿಭಟನೆ ನಡೆಸುತ್ತಿದ್ದಾರೆ. ಮೀಸಲಾತಿ ಸಿಗುವವರೆಗೂ ಸ್ವಾಮೀಜಿಗಳು ಹೋರಾಟ ಮುಂದುವರಿಸಲಿದ್ದಾರೆ. ಹಾಗಾಗಿ ತುಮಕೂರಿನ ನಮ್ಮ ಸಮುದಾಯದ ಎಲ್ಲ ನಾಯಕರು ಬೆಂಗಳೂರಿಗೆ ಹೋಗ್ತಾ ಇದ್ದೀವಿ, ಸ್ವಾಮೀಜಿಗಳಿಗೆ ಬೆಂಬಲ ನೀಡುತ್ತೇವೆ ಎಂದು ಮುಖಂಡರು ಇದೇ ವೇಳೆ ತಿಳಿಸಿದರು. 7.5 ಶೇ. ಮೀಸಲಾತಿ ಸಿಗುವವರೆಗೂ ಧರಣಿ ಬಿಡುವುದಿಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿಗಳು ಯಾವುದೇ ರೀತಿಯ ತೀರ್ಮಾನ ತೆಗೆದುಕೊಂಡರೂ ನಾವು ಅವರನ್ನು ಬೆಂಬಲಿಸುತ್ತೇವೆ ಎಂದು ತಿಳಿಸಿದರು. ತುಮಕೂರು ನಗರ ವಾಲ್ಮೀಕಿ ಜನಾಂಗದ ಮುಖಂಡರುಗಳು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಾಂತಲಾ ರಾಜಣ್ಣನವರ ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿದರು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ…
ಗಾಯಕ-ರಾಪರ್ ಸಿಧು ಮೂಸೆವಾಲಾ ಹತ್ಯೆಯ ಬಳಿಕ ಜೀವ ಬೆದರಿಕೆ ಎದುರಿಸುತ್ತಿರುವ 434 ಮಂದಿಗೆ ಜೂನ್ 7 ರ ಒಳಗೆ ಭದ್ರತೆ ಮರು ನಿಯೋಜಿಸುವುದಾಗಿ ಹರಿಯಾಣ ಹೈಕೋರ್ಟ್ ಗೆ ಪಂಜಾಬ್ ರಾಜ್ಯ ಸರ್ಕಾರ ಈ ವಿಷಯ ತಿಳಿಸಿದೆ. ಕಳೆದ ವಾರ ಮೂಸೆವಾಲ ಸೇರಿದಂತೆ ಹಲವರ ಭದ್ರತೆ ಹಿಂತೆಗೆಕೊಳ್ಳಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಗಾಯಕ ಸಿಧು ಮೂಸೆವಾಲ ಹತ್ಯೆ ಮಾಡಲಾಗಿತ್ತು. ಇದರಿಂದ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರದ ಭದ್ರತೆ ಹಿಂತೆಗೆದುಕೊಂಡ ನಿರ್ಧಾರವನ್ನು ಪ್ರಶ್ನಿಸಿ ಮಾಜಿ ಉಪ ಮುಖ್ಯಮಂತ್ರಿ ಓಂ ಪ್ರಕಾಶ್ ಸೋನಿ ಅವರು ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಹೈಕೋರ್ಟ್ನಲ್ಲಿ ರಾಜ್ಯ ಸರ್ಕಾರ, ಔಪಚಾರಿಕ ಹೇಳಿಕೆ ನೀಡಿದೆ. ಗಾಯಕ ಮೂಸ್ ವಾಲಾ ಭದ್ರತೆ ಹಿಂತೆಗೆದುಕೊಂಡ ಒಂದು ದಿನದ ನಂತರ, ಮೇ ೨೯ ರಂದು ಮಾನ್ಸಾ ಜಿಲ್ಲೆಯ ಜವಾಹರ್ಕೆ ಹಳ್ಳಿಯಲ್ಲಿ ತನ್ನ ಸ್ನೇಹಿತನೊಂದಿಗೆ ತನ್ನ ವಾಹನದಲ್ಲಿ ಹೋಗುತ್ತಿದ್ದಾಗ ಮೂಸೆವಾಲ ಅವರ ಮೇಲೆ ಮಾರಣಾಂತಿಕವಾಗಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಮೂಸ್…
ತುಮಕೂರು: ಮಧುಗಿರಿ ಮೋದಿ ಹೆಸರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಬರೆದಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟ್ರೋಲ್ ಆಗಿವೆ. ಪತ್ರದಲ್ಲಿ ಕಂಡು ಬಂದಿರುವಂತೆ, 9 ಜನ ಬ್ರಾಹ್ಮಣ ಕವಿಗಳ ಪಾಠ ಮಕ್ಕಳಿಗೆ ಕೊಡುತ್ತಿದ್ದೀರಿ. ನಾನು ಹೋರಾಟಗಾರ, ನನ್ನ ಪಠ್ಯವನ್ನು ಸೇರಿಸಲು ರೋಹಿತ್ ಚಕ್ರತೀರ್ಥಗೆ ಸಲಹೆ ನೀಡಿ ಎಂದು ಹಿಂದೂ ಹೋರಾಟಗಾರ ಮಧುಗಿರಿ ಮೋದಿ ಹೆಸರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆಯಲಾಗಿದೆ. ಯೋಗಿ ಆದಿತ್ಯನಾಥ್ ಉತ್ತರಪ್ರದೇಶದ ಸಿಎಂ ಆಗಲೂ ನಾನು ಕಾರಣ. ದೇಶವ್ಯಾಪಿ ಹಿಂದುತ್ವ ಹರಡಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮಧುಗಿರಿ ಮೋದಿ ಹೆಸರಿನ ಈ ಪತ್ರ ನೆಟ್ಟಿನಲ್ಲಿ ಭಾರೀ ವೈರಲ್ ಆಗಿದೆ. ಈ ಪತ್ರ ಮಧುಗಿರಿ ಮೋದಿಯವರೇ ಬರೆದಿರುವುದೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ತಿಪಟೂರು: ಪ್ರಾಥಮಿಕ ಹಾಗೂ ಪ್ರೌಡಶಿಕ್ಷಣ ಸಚಿವ ಮನೆಯ ಮೇಲೆ ಎನ್.ಎಸ್ ಯು ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ದಾಂದಲೇ ಮಾಡಿರುವ ಘಟನೆ ಖಂಡಿಸಿ ಬಿ.ಜೆಪಿ ಕಾರ್ಯಕರ್ತರು ತಿಪಟೂರು ನಗರ ಸಭಾ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ಪ್ರತಿಭಟನಾಕಾರರು ಕಾಂಗ್ರೆಸ್ ಪಕ್ಷ ಹಾಗೂ ಎನ್.ಎಸ್.ಯು.ಐ. ಸಂಘಟನೆ ಬಗ್ಗೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ನಿರತರನ್ನ ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಕುಮಾರ್, ಸಚಿವರ ಊರಿನಲ್ಲಿ ಇಲ್ಲದಿರುವ ವೇಳೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ. ಕಾರ್ಯಕರ್ತರು ಸಚಿವರ ಮನೆಮುಂದೆ ದಾಂಧಲೆ ನಡೆಸಿ ಬೆಂಕಿಹಚ್ಚಿರುವ ಘಟನೆ ತೀವ್ರ ಖಂಡನೀಯ ಎಂದರು. ದೇಶದ ಇತಿಹಾಸವನ್ನ ಮಕ್ಕಳಿಗೆ ತಿಳಿಸುವ ವಿಚಾರದಲ್ಲಿ ಕಾಂಗ್ರೇಸ್ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಕಾಂಗ್ರೇಸ್ ಪಕ್ಷ ಗಲಾಟೆ ಗದ್ದಲ ಮಾಡುವ ತನ್ನ ಸಂಸ್ಕ್ರತಿ ಬಿಂಬಿಸಿದೆ ಯಾವುದೇ ಕಾರಣಕ್ಕೂ ನಮ್ಮ ಶಕ್ತಿಯನ್ನ ಹಗುರವಾಗಿ ಪರಿಗಣಿಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು ನಗರಸಭಾ ಅಧ್ಯಕ್ಷ ರಾಮ್ ಮೋಹನ್ ಮಾತನಾಡಿ, ಎನ್.ಎಸ್.ಯೂ.ಐ. ಕಾರ್ಯಕರ್ತರ ಕೃತ್ಯ ಪೂರ್ವನಿಯೋಜಿತವಾಗಿದ್ದು…