Author: admin

ಮಧುಗಿರಿ: ತಾಲೂಕಿನ ಐ.ಡಿ.ಹಳ್ಳಿ ಗ್ರಾಮದ ಜಾಮಿಯಾ ಮಸೀದಿಯ ಆವರಣದಲ್ಲಿ ಕೆ.ಜಿ.ಎನ್. ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಟ್ರಸ್ಟ್  ವತಿಯಿಂದ  ಮದರಸಾ ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ರಿಯಾಜ್ ಅಹ್ಮದ್,ಮೌಲಾನ ಗಳಾದ ಚಾಂದ್ ಭಾಷಾ, ಮುನೀರ್ ಅಹ್ಮದ್, ಮಹಮ್ಮದ್ ಜಾವೀದ್,  ಗ್ರಾಮ ಪಂಚಾಯಿತಿ ಸದಸ್ಯ ಜಿಲಾನ್, ಮುಖಂಡರಾದ ವಜೀರ್ ಭಾಷಾ, ಟ್ರಸ್ಟ್ ಅಧ್ಯಕ್ಷ ಜಲಾಲ್ ಬಾಷಾ, ಮದರಸಾ- ಎ- ತಾಲಿ ಮುಲ್-  ಖುರಾನ್   ಮಕ್ಕಳು ಹಾಜರಿದ್ದರು. ವರದಿ: ಆಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಂಡ್ಯ :  ‘ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ, RSS ಹೇಳಿದಂತೆ ರಾಜ್ಯ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಇದನ್ನ ನಾನು ಅಧಿಕಾರದಲ್ಲಿದ್ದಾಗ ತಂದಿದ್ದು ಅಂತಾರೆ. ಆ ಬಿಲ್ ನ ನನ್ನ ಮುಂದೆ ಇಟ್ಟಿದ್ದರು. ಅದನ್ನ ಬರೆದಿದ್ದ ಎಲ್ಲರೂ RSS ನವರಾಗಿದ್ದರು. ನಾನು ಆಗ ಆಂಜನೇಯನಿಗೆ ಅದನ್ನ ಮುಗಿಸಿಬಿಡು ಅಂತಾ ಹೇಳಿದ್ದೆ. ಅದರಂತೆ ಆಂಜನೇಯ ಅದನ್ನ ತಿರಸ್ಕರಿಸುವಂತೆ ಬರೆದಿದ್ದರು. ಆ ಬಿಲ್ ತಂದಿದ್ದು ಯಡಿಯೂರಪ್ಪ ಸರ್ಕಾರ ಇದ್ದಾಗ, ಅದನ್ನ ಸದನದಲ್ಲಿ ನಾನು ಯಡಿಯೂರಪ್ಪಗೆ ಹೇಳಿದೆ. ಯಡಿಯೂರಪ್ಪ ಅದನ್ನ ಒಪ್ಪಿಕೊಂಡರು ಎಂದು ಹೇಳಿದರು. ಇನ್ನು ಈಶ್ವರಪ್ಪ ಒಬ್ಬ ಪೆದ್ದ.  ಇದು RSSನವರು ಮಾಡಿರೋದು ಅಂತಾ ಹೇಳಿದೆ. ಹೌದು ಅಂತಾ ಈಶ್ವರಪ್ಪ ಸದನದಲ್ಲಿ ಒಪ್ಪಿಕೊಂಡ. ಸಂವಿಧಾನದಲ್ಲೇ ಅವಕಾಶ ಇದೆ. ಪ್ರೀತಿಸಿ ಮದುವೆ ಆಗೋದನ್ನ ಪ್ರಶ್ನೆ ಮಾಡೋಕೆ ಅವನ್ಯಾರು ಎಂದು ಪ್ರಶ್ನಿಸಿದರು. ನಾವು…

Read More

ಹಾಸನ: ಇಂದಿನಿಂದ ರಾಜ್ಯಾದ್ಯಂತ ಹತ್ತು ದಿನಗಳ ಕಾಲ‌ ನೈಟ್ ಕರ್ಫ್ಯೂ ಜಾರಿ ಹಿನ್ನಲೆ ಹಾಸನದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲೂ ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ ಐದು ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಆದೇಶಿಸಲಾಗಿದೆ. ಹೋಂಸ್ಟೇ, ರೆಸಾರ್ಟ್ ಗಳಲ್ಲಿ ರಾತ್ರಿ 10ರ ನಂತರ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಎಂದು ತಿಳಿಸಿದರು. ಇನ್ನು ಸರ್ಕಾರದ ಆದೇಶದಂತೆ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಬೇಕು. ರೆಸಾರ್ಟ್ ಮಾಲೀಕರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು. ಈಗಾಗಲೇ ನೀಡಿರುವ ಸೂಚನೆಯನ್ನು ಅನುಸರಿಸಬೇಕು. ಇಲ್ಲವಾದಲ್ಲಿ ಅಂತಹ ರೆಸಾರ್ಟ್, ಹೋಂಸ್ಟೇ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಅನಗತ್ಯ ಓಡಾಟ ತಪ್ಪಿಸಲು ಬ್ಯಾರೆಕೇಡ್ ಗಳನ್ನು ಹಾಕಲಾಗಿದೆ. ಚೆಕ್ ಫೋಸ್ಟ್ ಗಳಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಕಟ್ಟುನಿಟ್ಟಾಗಿ ಬಂದೋ ಬಸ್ತ್ ಮಾಡಲಾಗುವುದು. ಜನರು ಸಹಕರಿಸಬೇಕು, ಕಾರಣವಿಲ್ಲದೆ ಅನಗತ್ಯವಾಗಿ ಯಾರೂ ಓಡಾಟ…

Read More

ಹೆಚ್‍.ಡಿ.ಕೋಟೆ: ಕೇರಳದಲ್ಲಿ ಓಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್‍ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹೆಚ್‍.ಡಿ. ಕೋಟೆ ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್ ಬಾವಲಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಕೇರಳದಲ್ಲಿ 13 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ಕರ್ನಾಟಕ ರಾಜ್ಯ ಗಡಿಭಾಗ ಬಾವಲಿ ಚೆಕ್‍ಪೋಸ್ಟ್ ನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.ವಾಹನದಲ್ಲಿ ಬರುವವರನ್ನು ಬೆಳಿಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯವರೆಗೆ ತಪಾಸಣೆ ನಡೆಸಿ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಇದ್ದವರನ್ನು ಮಾತ್ರ ಬಿಡಲಾಗುತ್ತಿದೆ. ವಾಹನದಲ್ಲಿ ಓಡಾಡುವವರ ಹೆಸರು ನೋಂದಾಯಿಸಿಕೊಂಡು ಜಿಲ್ಲಾ ಸರ್ವೇಕ್ಷಣಾಕಾರಿಗಳ ಕಚೇರಿಗೆ ವರದಿ ನೀಡಲಾಗಿದೆ ಎಂದರು.ಕೋವಿಡ್ ವರದಿಯನ್ನು ಕ್ಯೂಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಬೇಕು ಎಂದು ಅರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಹೊಸ ವರ್ಷದ ಸಂಭ್ರಮಾಚರಣೆಗಾಗಿ ಕೇರಳದಿಂದ ಕರ್ನಾಟಕಕ್ಕೆ ಹೆಚ್ಚು ಪ್ರಯಾಣಿಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ…

Read More

ಮುಳಬಾಗಿಲು:  ಮಹಿಳೆಯರ ಸರ ಕದ್ದು ಪರಾರಿಯಾಗುತ್ತಿದ್ದ ಬೆಸ್ಕಾಂ ಸಿಬ್ಬಂದಿಯನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಆಂಧ್ರದಲ್ಲಿ ನಡೆದಿದೆ. ತಾಲ್ಲೂಕಿನ ಬೈರಪೂರದ ಬಾಳಸಂದ್ರ ಬಿ.ಕೆ.ಲೋಕೇಶ್(27) ಬಂಧಿತ ವ್ಯಕ್ತಿಯಾಗಿದ್ದಾನೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪೆದ್ದಪಂಜಾಬಿ ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೋಕೇಶ್ ಹಾಗೂ ಈತನ ಸ್ನೇಹಿತ ಕಿಶೋರ್ ಹಲ್ಲೆ ಮಾಡಿ ಸರ ಕಸಿದು ಪರಾರಿಯಾಗಿದ್ದಾರೆ. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದು, ಅಕ್ಕಪಕ್ಕದವರು ಸ್ಥಳಕ್ಕೆ ಬಂದು ಸುತ್ತುವರಿದು ಇಬ್ಬರನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೆದ್ದಪಂಜಾಬಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಇದಲ್ಲದೆ ವಿದ್ಯುತ್ ಪರಿವರ್ತಕಗಳನ್ನು ಕಳ್ಳತನ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ತನಿಖೆ ಮುಂದುವರೆದಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿಪಟೂರು: ಸಾರ್ವಜನಿಕ ಆಸ್ಪತ್ರೆ ತಿಪಟೂರು ANZ ಪ್ರವೇಟ್ ಲಿಮಿಟೆಡ್ ಮತ್ತು UNITED WAY OF BANGALORU  ಸ್ವಯಂ ಸೇವಾಸಂಸ್ಥೆಗಳ ನೆರವಿನೊಂದಿಗೆ ಅನುಷ್ಟಾನ ಗೊಂಡಿರುವ ಆಕ್ಸಿಜನ್ ಜನರೇಟರ್ 500 LPM ಹಾಗೂ ಎರಡು ಡಯಾಲಿಸಿಸ್ ಮಿಷನ್ ಗಳನ್ನು  ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಮತ್ತು ಸಕಾಲ ಸಚಿವಾರಾದ ಬಿ.ಸಿ.ನಾಗೇಶ್ ಉದ್ಘಾಟನೆ ಮಾಡಿದರು. ಇದೇ ವೇಳೆ ಸಾರ್ವಜನಿಕ ಆಸ್ಪತ್ರೆ ತಿಪಟೂರು ಇವರ ವತಿಯಿಂದ  ANZ ಪ್ರವೇಟ್ ಲಿಮಿಟೆಡ್ ಮತ್ತು UNITED WAY OF BENGALURU ಇವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ರವಿಕುಮಾರ್ ಸ್ವಾಗತಿಸಿದರು ಮತ್ತು ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿಗಳಾದ ಡಾ.ಪ್ರಹ್ಲಾದ್ ಅಭಿನಂದನಾ ಮಾತುಗಳನ್ನಾಡಿದರು. ತಾಲ್ಲೂಕಿನ ಕೋವಿಡ್ 19 ರೋಗಿಗಳಿಗೆ ಪ್ರಾಣವಾಯು ಪೂರೈಕೆಗೆ ನೆರವಾಗಿರುವ ಹಾಗೂ ಬಡ ರೋಗಿಗಳಿಗೆ ಡಯಾಲಿಸಿಸ್  ಸೇವಾ ಸೌಲಭ್ಯವನ್ನು  ನೀಡಲು ನೆರವಾಗಿರುವಂತಹ  ANZ ಪ್ರವೇಟ್ ಲಿಮಿಟೆಡ್  ಹಾಗೂ UNITED WAY OF BANGALORU ಸ್ವಾಯತ್ತ ಸಂಸ್ಥೆಗಳಿಗೆ ನಾವು ಅಭಾರಿಯಾಗಿದ್ದೇವೆ. ಸ್ವಯಂ ಸೇವಾ ಸಂಸ್ಥೆಯ ಅಧಿಕಾರಿಗಳು ತಿಪಟೂರು ತಾಲ್ಲೂಕಿನ ಬಡರೋಗಿಗಳಿಗೆ…

Read More

ಚಿತ್ರದುರ್ಗ: ಬಾಲಕಿಯನ್ನು ಚುಡಾಯಿಸಿ ಆತ್ಮಹತ್ಯೆಗೆ ಪ್ರೇರೇಪಣೆ ನೀಡಿದ ಪ್ರರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಹೊಸದುರ್ಗ ಡಿವೈಎಸ್ ರೋಷನ್ ಜಮೀರ್ ಹಾಗೂ ಸಿಪಿಐ ಫೈಜುಲ್ಲಾ ನೇತೃತ್ವದ ಪೊಲೀಸರ ಬಂದ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸುದೀಪ,(19) ಕೋಟಿ ಅಲಿಯಾಸ್ ಕೋಟೇಶ  (19)ಮುತ್ತು ಅಲಿಯಾಸ್ ಮುತ್ತುರಾಜ್, (21) ಅಭಿ ಅಲಿಯಾಸ್ ಅಭಿಷೇಕ್ (22) ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳು ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಗಳ ಕಿರುಕುಳದಿಂದ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದು, ಈ ವೇಳೆ ಬಾಲಕಿಯ ತಂದೆ, ತನ್ನ ಮಗಳ ಸಾವಿಗೆ ಪುಂಡರು ಕಾರಣವಾಗಿದ್ದು, ಅವರ ಕಿರುಕುಳದಿಂದ ನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದರು. ಘಟನೆ ಸಂಬಂಧ ಹೊಸ ದುರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನೂ ಆರೋಪಿಗಳನ್ನು ಕ್ಷಿಪ್ರವಾಗಿ ಬಂಧಿಸಿದ ಪೊಲೀಸ್ ಅಧಿಕಾರಿಗಳ ಕಾರ್ಯವನ್ನು  ಜಿಲ್ಲಾ ಪೊಲೀಸ್…

Read More

ಪೀಣ್ಯ: ಪೀಣ್ಯ ಮೇಲ್ಸೇತುವೆಯಲ್ಲಿ ಡಿಸೆಂಬರ್ 25ರಿಂದ 31ವರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತುರ್ತು ದುರಸ್ತಿ ಕಾರ್ಯ ಕೈಗೊಂಡಿರುವುದರಿಂದ, ಎಲ್ಲಾ ಬಗೆಯ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ. ತುಮಕೂರು-ಬೆಂಗಳೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದ್ದು, ಡಿಸೆಂಬರ್ 31ರವರೆಗೆ ಮೇಲ್ಸೇತುವೆ ಬಳಸದೇ ಸಹಕರಿಸುವಂತೆ ಮನವಿ ಮಾಡಲಾಗಿದೆ. ಬದಲಿ ಮಾರ್ಗಗಳು: ತುಮಕೂರು ಕಡೆಯಿಂದ ಬೆಂಗಳೂರು ನಗರದೊಳಗೆ ಪ್ರವೇಶಿಸುವ ವಾಹನಗಳು  ಮಾದಾವರದ ಬಳಿ ಬಲ ತಿರುವು ಪಡೆದು ನೈಸ್ ರಸ್ತೆಯ ಮೂಲಕ ಬೆಂಗಳೂರು ನಗರದೊಳಗೆ ಪ್ರವೇಶಿಸಬಹುದಾಗಿದೆ. ಬೆಂಗಳೂರು ನಗರದ ಕಡೆಯಿಂದ ತುಮಕೂರು ರಸ್ತೆಯ ಮುಖಾಂತರ ಹೊರ ಹೋಗುವ ವಾಹನಗಳು ಗೊರಗುಂಟೆಪಾಳ್ಯದ ಸಿಎಂಟಿಐ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ರಿಂಗ್ ರಸ್ತೆ ಮುಖಾಂತರ ಸುಮನಹಳ್ಳಿ, ಮಾಗಡಿ ರಸ್ತೆ ಕಡೆಗೆ ಸಂಚರಿಸಿ ನೈಸ್ ರಸ್ತೆ ಪ್ರವೇಶಿಸಿ ಬೆಂಗಳೂರಿನಿಂದ ಹೊರಗೆ ಸಂಚರಿಸಬಹುದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು 136ನೇ ಕಾಂಗ್ರೆಸ್ ಸ್ಥಾಪನಾ ದಿನಾಚರಣೆಯನ್ನು ನಡೆಸಲಾಯಿತು. ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಕೆಪಿಸಿಸಿ ಸದಸ್ಯರಾದ ಅಮೃತ ಸ್ವಾಮಿ, ನಗರಸಭೆ ಅಧ್ಯಕ್ಷೆ ಶಂಶದ್ ಉನ್ನಿಸಾ, ಶಿವಕುಮಾರ್, ಚನ್ನಯ್ಯ, ತಿಪ್ಪೇಸ್ವಾಮಿ, ನವೀನ, ರಾಜೇಶ್, ಚಿಲ್ಲಹಳ್ಳಿ ಶರಣಪ್ಪ, ದಾದಾಪೀರ್, ಸೈಫುಲ್ಲಾ, ಲಕ್ಷ್ಮಿಕಾಂತ್, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೇಡತ್ತೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಗಳ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಹಣದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಒಂಬುಡ್ಸ್ ಮೇನ್(ಭ್ರಷ್ಟಾಚಾರ ಪ್ರಕರಣಗಳ ಮೇಲ್ವಿಚಾರಕ) ಕಾಟಾಚಾರಕ್ಕೆ ಸ್ಥಳ ತನಿಖೆ ನಡೆಸಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲಾ ಪಂಚಾಯಿತಿ ವತಿಯಿಂದ ವೆಂಕಟೇಶ್ ರಾವ್ ನೇತೃತ್ವದ ತಂಡ ತನಿಖೆಗಾಗಿ ಆಗಮಿಸಿದ್ದು, ಗ್ರಾಮ ಪಂಚಾಯಿತಿ ಸಂತೋಷ್ ಸಿಂಗ್  PDO, ರವರ ಮೇಲೆ ಒಂಬುಡ್ಸ್ಮನ್ ತಂಡದವರು ನಾವುಗಳು ನರೇಗ ಪರಿಶೀಲನೆಗೆ ಬಂದಾಗ ಸಕ್ರಮವಾಗಿ ಮೂಲ ದಾಖಲಾತಿಗಳು ಫೈಲ್ ಒದಗಿಸಬೇಕೆಂದು ಆದೇಶಿಸಿದರು. ತುಮಕೂರು ಜಿಲ್ಲಾ ಪಂಚಾಯಿತಿ ನರೇಗ ಯೋಜನೆಗೆ ಬೇಡತ್ತೂರು ಗ್ರಾಮ ಪಂಚಾಯತಿಯಲ್ಲಿ ವಾಸವಾಗಿರುವ ರಾಮಚಂದ್ರಪ್ಪ S/o ಸಣ್ಣಪ್ಪ ರವರು 2021ರ ಅಕ್ಟೋಬರ್ ನಲ್ಲಿ ಇವರು ಬೇಡತ್ತೂರು ಗ್ರಾಮ ಪಂಚಾಯತಿಯಲ್ಲಿ ಅಕ್ರಮ ಕಾಮಗಾರಿಗಳು ಎಂದು ಆರೋಪದ ದೂರು ಮನವಿ  ಸಲ್ಲಿಸಿದರು. ಈ ಮನವಿ ಆಧಾರದ ಮೇಲೆ ಡಿಸೆಂಬರ್ 27 ರಂದು ಸ್ಥಳ ಪರಿಶೀಲನೆ ಮಾಡಿದ ನಂತರ ಇವರ ಮನವಿಯ ಮೇಲೆ ಒತ್ತಡ ಬಂದಿರುವ ಕಾರಣವೂ,ಅಥವಾ ಇವರ ವೈಯಕ್ತಿಕ ಕಾರಣವೂ…

Read More