Subscribe to Updates
Get the latest creative news from FooBar about art, design and business.
- ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
- ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
- ರಾಜ್ಯದಲ್ಲಿರೋದು ಚುನಾಯಿತ ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್.ಅಶೋಕ್ ಆರೋಪ
- ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
- ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
- 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
- ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
Author: admin
ತುಮಕೂರು: ಜಿಲ್ಲೆಯ ಜನತೆ ಶಾಂತಿಪ್ರಿಯರು, ಇಲ್ಲಿನ ಎಲ್ಲಾ ಸಮುದಾಯ, ಎಲ್ಲಾ ವರ್ಗ, ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲರೂ ಸಹ ಶಾಂತಿಪ್ರಿಯರು ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್ ಹೇಳಿದರು. ಶಾಲಾ ಕಾಲೇಜುಗಳಲ್ಲಿ ಸೃಷ್ಟಿಸಲಾಗಿರುವ ಹಿಜಬ್ ಹಾಗೂ ಕೇಸರಿ ಶಾಲು ವಿವಾದ ಸಂಬಂಧ ಪ್ರತಿಕ್ರಿಯಿಸಿದ ಅವರು, ತುಮಕೂರು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಜಿಲ್ಲಾಡಳಿತ , ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಕಾರದಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ನಡೆಯದಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು. ಧಾರ್ಮಿಕ ಭಾವನೆಗಳ ಸಂಕೇತವಾಗಿರುವ ಯಾವುದೇ ವಸ್ತ್ರಗಳನ್ನು ಧರಿಸಿ ಶಾಲಾ-ಕಾಲೇಜುಗಳಿಗೆ ತೆರಳದಂತೆ ಹೈಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಸರ್ಕಾರದ ಆದೇಶದ ಅನ್ವಯ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು , ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್ ಮುಖ್ಯ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಆದೇಶದ ಅನ್ವಯ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು. ತುಮಕೂರು ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಯ…
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಗ್ರಾಮದಲ್ಲಿ ಗ್ರಾಮೀಣ ಭಾಗದ ಕುಡಿಯುವ ನೀರಿನ ಯೋಜನೆಗೆ ಕಲ್ಪಿಸಿದ ಹೇಮಾವತಿ ಬಹು ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಹೊಡೆದು ಭಾರಿ ಪ್ರಮಾಣದ ನೀರು ಪೋಲಾಗಿದೆ ಪೈಪ್ ಒಡೆದು ಕಾರಂಜಿಯಂತೆ ಹರಿಯುತ್ತಿದ್ದ ನೀರನ್ನು ನೋಡಲು ಸಾರ್ವಜನಿಕರು ನೆರೆದಿದ್ದು, ನೀರು ಪೋಲಾಗುತ್ತಿರುವುದನ್ನು ಕಂಡು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಣುವಿನಕುರಿಕೆಯಿಂದ ತೋವಿನಕೆರೆ ಭಾಗದ ಗ್ರಾಮೀಣ ಪ್ರದೇಶಗಳಿಗೆ ಸರಬರಾಜು ಆಗುವ ಬಹು ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಇದಾಗಿದ್ದು, ಪೈಪ್ ಒಡೆದ ಪರಿಣಾಮ ತೋವಿನಕೆರೆಯ ಕೈಮರ ರಸ್ತೆಯಲ್ಲಿ ನೀರು ಚಿಮ್ಮಿದ್ದು, ಕಾರಂಜಿಯಂತೆ ನೀರು ಚಿಮ್ಮಿದೆ. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಸರಗೂರು: ಶಾಸಕ ಅನೀಲ್ ಚಿಕ್ಕಮಾದು ಅವರ 33ನೇ ವರ್ಷದ ಹುಟ್ಟು ಹಬ್ಬವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಆಚರಣೆ ಮಾಡಿದರು. ಪಟ್ಟಣದ ಮಹಾವೀರ ಸರ್ಕಲ್ ಬಳಿ ಶಾಸಕ ಅನಿಲ್ ಚಿಕ್ಕಮಾದು ರವರಿಗೆ ಸರಗೂರು ಕಾಂಗ್ರೆಸ್ ಪಕ್ಷದ ಮತ್ತು ಯೂತ್ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲ್ಲೂಕಿನ ಎಲ್ಲಾ ಗ್ರಾಮದ ಮುಖಂಡರು ಸೇರಿ ಪಟಾಕಿ ಸಿಡಿಸಿ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಹುಟ್ಟು ಹಬ್ಬದ ಪ್ರಯುಕ್ತ ಶಾಸಕ ಅನಿಲ್ ಚಿಕ್ಕಮಾದು ತಾಲ್ಲೂಕಿನ ನಾಡದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ಆರ್ಶೀವಾದ ಪಡೆದು, ನಂತರ ಸಾರ್ವಜನಿಕ ಆಸ್ಪತ್ರೆ ಗೆ ಹೊರರೋಗಿಗಳಿಗೆ ಹಣ್ಣುಗಳನ್ನು ಹಂಚಿದರು. ಬಳಿಕ ಪಟ್ಟಣದ ಮಹಾವೀರ ಸರ್ಕಲ್ ಬಳಿ ಇರುವ ಶ್ರೀ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಕಾರ್ಯಕರ್ತರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಅನಿಲ್ ಚಿಕ್ಕಮಾದು ,ಕಾರ್ಯಕರ್ತರು ಜೊತೆ ಗೂಡಿ ಕೇಕ್ ಯನ್ನು ಕತ್ತರಿಸಿ ಕಾರ್ಯಕರ್ತರ ಜೊತೆಗೆ ಖುಷಿ ಹಂಚಿಕೊಂಡರು. ಬಳಿಕ ಮಾತನಾಡಿದ ಅವರು, ತಾಲ್ಲೂಕಿನ ಜನತೆ…
ಕೊರಟಗೆರೆ : ತಾಲ್ಲೂಕಿನ ವಿವಿಧ ಕನ್ನಡ ಪರ ಸಂಘಟನೆಗಳಿಂದ ಪಟ್ಟಣದಲ್ಲಿ ಕನ್ನಡ ಭವನವನ್ನು ನಿರ್ಮಿಸಲು ಜಾಗ ಮಂಜೂರು ಮಾಡಲು ತಹಶೀಲ್ದಾರ್ ನಹೀದ ಜಮ್ ಜಮ್ ರವರಿಗೆ ಮನವಿ ಸಲ್ಲಿಸಲಾಯಿತು. ಕನ್ನಡಪರ ಸಂಘಟನೆಗಳಾದ ಕರ್ನಾಟಕ ರಣಧೀರರ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡ ಸುವರ್ಣ ವೇದಿಕೆ ಮತ್ತು ಹಲವು ಕನ್ನಡ ಪರ, ಪ್ರಗತಿಪರ ಸಂಘಟನೆಗಳ ವತಿಯಿಂದ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜು, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಕೆ.ಎನ್.ನಟರಾಜ್, ಕರ್ನಾಟಕ ರಣಧೀರರ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ.ಎಂ.ಎನ್, ಕರುನಾಡ ಸುವರ್ಣ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಹರೀಶ್ ಬಾಬು, ಕನ್ನಡ ಪರ ಹೋರಾಟಗಾರರಾದ ದಿನೇಶ್, ವಿನಯ್ ದಾಸರಹಳ್ಳಿ, ಮಾರುತಿ, ಸುರೇಶ್ ದೊಡ್ಡಯ್ಯ ಹಾಗೂ ಪ್ರಗತಿಪರ ಹೋರಾಟಗಾರರು ಹಾಜರಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಮಧುಗಿರಿ: ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಸುಸಜ್ಜಿತ ಐಸಿಯು ಸೌಲಭ್ಯವುಳ್ಳ ಆಂಬುಲೆನ್ಸ್ ನ್ನು ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಕೊಡುಗೆಯಾಗಿ ನೀಡಿ್ದರು. ಈ ನೂತನ ಆ್ಯಂಬುಲೆನ್ಸ್ ಗೆ ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ, ವಿಧಾನ ಪರಿಷತ್ ಶಾಸಕರಾದ ವೈ.ಎ.ನಾರಾಯಣ ಸ್ವಾಮಿ ಹಾಗೂ ಅನೇಕ ಕಾರ್ಯಕರ್ತರೊಂದಿಗೆ ಚಿದಾನಂದ್ ಎಂ. ಗೌಡ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಚಿದಾನಂದ್ ಎಂ.ಗೌಡ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿನ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸರ್ಕಾರಗಳು ಕೋವಿಡ್ 1,2,3ನೇ ಅಲೆಯನ್ನು ದೇಶಾದ್ಯಂತ ಸಮರ್ಥವಾಗಿ ನಿರ್ವಹಿಸಿದೆ. ಬಿಜೆಪಿ ಸರ್ಕಾರ ಜನರ ಜೀವ ರಕ್ಷಣೆಗೆ, ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಿದ್ದು, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವುದರ ಮೂಲಕ ಆಸ್ಪತ್ರೆಗಳಲ್ಲಿ ಆಮೂಲಾಗ್ರ ಬದಲಾವಣೆ ತಂದು ವೈದ್ಯ ಕೊರತೆ, ಆಕ್ಸಿಜನ್ ಕೊರತೆ ನೀಗಿಸಲಾಗಿದೆ. ಸರ್ಕಾರದ ಕ್ರಮದಿಂದ ಸರ್ಕಾರಿ ಆಸ್ಪತ್ರೆಗಳ ಮೇಲಿನ ಅವಲಂಬನೆ ಹೆಚ್ಚಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ತಿಳಿಸಿದರು. ಸ್ವದೇಶಿ…
ಪಾವಗಡ: ತಾಲೂಕು ಟೌನ್ ರೋಪ್ಪ ಪ್ರೀಮಿಯರ್ ಲೀಗ್(ಆರ್.ಪಿ.ಎಲ್. ) ಮೊಟ್ಟ ಮೊದಲ ಬಾರಿಗೆ ಲೈವ್ ಮಾಡುತ್ತಿದ್ದು, ಇದು ತುಂಬಾ ಸಂತೋಷದ ವಿಚಾರ ಎಂದು ಕಣ್ಮಣಿ ಸಮಾಜ ಸೇವಕರಾದ ನೇರಳೆ ಕುಂಟ್ಟೆ ನಾಗೇಂದ್ರ ಕುಮಾರ್ ಹೇಳಿದರು. ಕ್ರಿಕೆಟ್ ಒಂದು ಜನಪ್ರಿಯ ಆಟ. ಇಡೀ ಪ್ರಪಂಚದಲ್ಲಿಯೇ ಕ್ರಿಕೆಟ್ ಪ್ರೇಮಿಗಳಿದ್ದಾರೆ. ಇಂತ ಕ್ರೀಡೆಯನ್ನು ತಾಲೂಕಿನಲ್ಲಿಯೂ ನಡೆಸುತ್ತಾ, ಯುವಕರನ್ನು ಪ್ರೋತ್ಸಾಹಿಸುತ್ತಿರುವ ಎಲ್ಲರಿಗೂ ಶುಭ ಹಾರೈಸುತ್ತೇನೆ ಎಂದು ಅವರು ಹೇಳಿದರು. ಇಂತಹ ನೂರಾರು ಕ್ರೀಡೆಗಳು ನಮ್ಮ ಪಾವಗಡ ತಾಲ್ಲೂಕಿನಲ್ಲಿ ಹುಟ್ಟಿ ಬೆಳೆದು, ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ನಮ್ಮ ಒಂದು ಪಾವಗಡದ ಕೀರ್ತಿ ಪತಾಕೆ ಹಾರಬೇಕು. ಕ್ರೀಡೆ ಎಂಬುವುದು ಮಾನಸಿಕ ಮತ್ತು ದೈಹಿಕ ಆರೋಗ್ಯದ ಜೊತೆಗೆ ಸ್ನೇಹ ಬಾಂಧವ್ಯಗಳನ್ನು ಬೆಳೆಸಿ ನಮ್ಮ ತಾಲ್ಲೂಕು ಎಲ್ಲರಂಗದಲ್ಲಿಯೂ ಉನ್ನತ ಮಟ್ಟಕೆ ಹೋಗಬೇಕೆಂದು ಹಾರೈಸಿದರು. ವರದಿ: ರಾಮಪ್ಪ ಸಿ.ಕೆ.ಪುರ. ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ತುಮಕೂರು: ವಿವೇಕಾನಂದ ಸ್ಟಡಿ ಸೆಂಟರ್ ಹಾಗೂ ವಿವೇಕಾ ಹಂಸ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಮಹೇಶ್ ಪಿಯು ಸಂಸ್ಥೆಯ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನಾಚರಣೆಯ ಅಂಗವಾಗಿ “ವಿವೇಕ ಸಂಚಲನ 2022” ರ ಕಾರ್ಯಕ್ರಮವನ್ನು ಅಶೋಕನಗರ ದಲ್ಲಿರುವ ಮಹೇಶ್ ಪಿಯು ಕಾಲೇಜಿನಲ್ಲಿ ಸರಳವಾಗಿ ಸಂಭ್ರಮದಿಂದ ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು. ರಾಮಕೃಷ್ಣ ಮಠದ ಸಂಪನ್ಮೂಲ ವ್ಯಕ್ತಿಗಳಾದ ಸಂದೀಪ್ ವಶಿಷ್ಠರವರು ಮತ್ತು ಕಾಲೇಜಿನ ಪ್ರಾಂಶುಪಾಲರಾದ ವಿದ್ಯಾ ಪಟೇಲ್ ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂದೀಪ್ ವಸಿಷ್ಠರವರು ಸ್ವಾಮಿ ವಿವೇಕಾನಂದರ ಆದರ್ಶ, ಆಶಯ, ಮತ್ತು ಅವರ ಜೀವನ ಚರಿತ್ರೆ ಕುರಿತಾದ ಹಲವಾರು ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರುವ ಪರೀಕ್ಷೆ ಎದುರಿಸುವ ಕುರಿತಾಗಿ ಉಪಯುಕ್ತ ಸಲಹೆಗಳನ್ನು ನೀಡಿದರು. ಮಹೇಶ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಭವಿಷ್ಯ ಉತ್ತಮವಾಗಿರಲಿ ಎಂದು ಹಾರೈಸಿದರು. ಜಿಲ್ಲೆಯಲ್ಲೇ…
ಐಪಿಎಲ್ ಮೆಗಾಹರಾಜಿಗೆ ಕ್ಷಣಗಣನೆ ಶುರುವಾಗಿದ್ದು ಫೆ. 12 ಮತ್ತು 13 ರಂದು ಬೆಂಗಳೂರಿನಲ್ಲಿ ಹರಾಜು ನಡೆಯಲಿದೆ. ಈಗಾಗಲೇ ತಂಡಗಳ ಫ್ರಾಂಚೈಸಿಗಳು ಸಿಲಿಕಾನ್ ಸಿಟಿಗೆ ತಲುಪಿದ್ದು ತಮ್ಮ ತಂಡಕ್ಕೆ ಯಾವ ಯಾವ ಆಟಗಾರರನ್ನು ತೆಗೆದುಕೊಳ್ಳಬೇಕೆಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.ಈಗಾಗಲೇ ಐಪಿಎಲ್ನ ಬಿಡ್ ನಿಂದ ಸ್ಟಾರ್ ಆಟಗಾರರಾದ ಕ್ರಿಸ್ಗೇಲ್, ಮಿಚೆಲ್ ಸ್ಟ್ರಾಕ್, ಕೇಲ್ ಜೆಮ್ಮಿಸನ್, ಬೆನ್ ಸ್ಟ್ರೋಕ್ ಅವರು ಹೊರಗುಳಿದಿದ್ದರೆ, ಇನ್ನು ಬಿಡ್ ಅಖಾಡದಲ್ಲಿರುವ ಕೆಲವು ಸ್ಟಾರ್ ಆಟಗಾರರನ್ನು ಬಿಕರಿ ಮಾಡದೆ ಇರಲು ಕೂಡ ಫ್ರಾಂಚೈಸಿಗಳು ನಿರ್ಧರಿಸಿದ್ದರೆ. ಮೊದಲ ಸುತ್ತಿನಲ್ಲಿ ಸ್ಟಾರ್ ಆಟಗಾರರನ್ನು ಯಾವ ತಂಡಗಳ ಫ್ರಾಂಚೈಸಿಗಳು ಬಿಕರಿ ಮಾಡಿಕೊಳ್ಳದೆ ಎರಡನೇ ಸುತ್ತಿನಲ್ಲಿ ಕಡಿಮೆ ಬೆಲೆಗೆ ತಮ್ಮ ತಂಡದ ಪಾಲು ಮಾಡಿಕೊಳ್ಳುವ ಲೆಕ್ಕಾಚಾರಗಳನ್ನು ಕೂಡ ಹಾಕಿಕೊಂಡಿದ್ದಾರೆ.ಕಳೆದ ಬಾರಿಯ ಐಪಿಎಲ್ ಬಿಡ್ಡಿಂಗ್ನಲ್ಲೂ ಕೆರಿಬಿಯನ್ನ ಸ್ಟಾರ್ ಆಟಗಾರ ಕ್ರಿಸ್ ಗೇಲ್ ಅವರನ್ನು ಮೂಲ ಬೆಲೆ 2 ಕೋಟಿಗೆ ಪ್ರೀತಿ ಜಿಂಟಾ ಮಾಲೀಕತ್ವದ ಕಿಂಗ್ಸ್ ಪಂಜಾಬ್ ಕೊಂಡೊಕೊಂಡ ಜಾಣ್ಮೆಯನ್ನು ಈ ಬಾರಿಯು ಫ್ರಾಂಚೈಸಿಗಳು ತೊಡಗಿದ್ದು, ಭಾರತ ಹಾಗೂ ವಿದೇಶಿ ಸ್ಟಾರ್…
ಪಾವಗಡ: ತಾಲ್ಲೂಕು, ನಿಡಿಗಲ್ ಹೋಬಳಿ ಮಂಗಳವಾಡ ಗ್ರಾಮದಲ್ಲಿ ಅಂಬೇಡ್ಕರ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಪಂದ್ಯಾಕೂಟದಲ್ಲಿ ಕ್ರೀಡಾ ಅಭಿಮಾನಿಗಳಿಗೆ ಬೆಂಗಳೂರಿನ ಮಹಾಲಕ್ಷ್ಮಿಪುರಂನ ಶ್ರೀ ಸಾಯಿ ಲಾ ಚೇಂಬರ್ಸ್ ವತಿಯಿಂದ ಟ್ರೋಫಿ ನೀಡಿ ಪ್ರೋತ್ಸಾಹಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜನಪ್ರಿಯ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ, ಮಂಜುನಾಥ್, ಮಂಗಳವಾಡ ಗ್ರಾಮದ ಮುಖಂಡರಾದ ಧನಂಜಯ್, ಕಾಂತರಾಜ್, ನರಸೇಗೌಡ, ಮಂಜುನಾಥ್, ಬೆಟ್ಟದ ತಿಮ್ಮಣ್ಣ, ಹನುಮಂತರಾಯ, ರಾಮಣ್ಣ, ಭೂತಣ್ಣ, ಮದ್ದೆ ಮಲ್ಲಿಕಾರ್ಜುನ್, ರಾಜಣ್ಣ, ದೇವಲಕೆರೆ ಅಜಯ್ ಗೌಡ ಇನ್ನೂ ಅನೇಕ ಮುಖಂಡರು ಹಾಜರಿದ್ದರು. ವರದಿ: ನಂದೀಶ್, ಕೊಟ್ಟೂರು ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ದಾವಣಗೆರೆ: ಕನ್ನಡದ ಕಬೀರ್ ಎಂದೇ ಹೆಸರಾಗಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರರು ಮನಸ್ಸುಗಳನ್ನು ಬೆಸೆಯುವ ಸೌಹಾರ್ದದ ಕನಸುಗಾರರಾಗಿದ್ದರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಅವರು ಕಂಬನಿ ಮಿಡಿದರು. ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಪದ್ಮಶ್ರೀ ಇಬ್ರಾಹಿಂ ಸುತಾರ ಹಾಗೂ ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನದ ಗೌರವಾರ್ಥ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಿದ್ದ ಅವರು , ನೀ ಎಂತಾದರೂ ಇರು, ನೀ ಹೇಗಾದರೂ ಇರು. ಆದರೆ ನೀತಿವಂತನಾಗಿ ಬಾಳು. ನಿನ್ನ ಬದುಕಿನಲ್ಲಿ, ವ್ಯವಹಾರದಲ್ಲಿ ನೀತಿ ತಪ್ಪಿ ಬದುಕಬೇಡ ಎಂದು ತಮ್ಮ ಪ್ರವಚನದಲ್ಲಿ ಸದಾ ಹೇಳುತ್ತಿದ್ದರು ಎಂದು ವಾಮದೇವಪ್ಪ ಅವರು ಇಬ್ರಾಹಿಂ ಸುತಾರ ಅವರ ವ್ಯಕ್ತಿತ್ವವನ್ನು ಶ್ಲಾಘಿಸಿದರು. ಹಿರಿಯ ಪತ್ರಕರ್ತ, ರಂಗಕರ್ಮಿ ಭಾ.ಮ.ಬಸವರಾಜಯ್ಯ ಮಾತನಾಡಿ ಇಬ್ರಾಹಿಂ ಎನ್. ಸುತಾರ ಅವರು ದಿನಾಂಕ 10-05-1940 ರಲ್ಲಿ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಬಡಕುಟುಂಬದಲ್ಲಿ ಜನಿಸಿದರು. 1970 ರಲ್ಲಿ “ಭಾವೈಕ್ಯ ಜನಪದ…