Subscribe to Updates
Get the latest creative news from FooBar about art, design and business.
- ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
- ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
- ರಾಜ್ಯದಲ್ಲಿರೋದು ಚುನಾಯಿತ ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್.ಅಶೋಕ್ ಆರೋಪ
- ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
- ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
- 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
- ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
Author: admin
ಗುಬ್ಬಿ: ತಾಲ್ಲೂಕಿನ ಎಂ.ಎನ್.ಕೋಟೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನವಜೀವನ ಸಮಿತಿ ಸಭೆ ಆಯೋಜಿಸಲಾಗಿತ್ತು. ಕಾರ್ಯಕ್ರಮ ವನ್ನು ಬೆಂಗಳೂರು ಪ್ರದೇಶಿಕ ಕೇಂದ್ರದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಂ.ಎನ್.ಕೋಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ನವ ಜೀವನ ಸಮಿತಿ ಸದಸ್ಯರು ಮಾತನಾಡಿ, ನವಜೀವನ ಸಮಿತಿ ಸದಸ್ಯರಾದ ನಂತರದಲ್ಲಿ ನಾವುಗಳು ಅನೇಕ ದುಷ್ಚಟಗಳಿಂದ ಮುಕ್ತ ರಾಗಿ ಉತ್ತಮ ಜೀವನ ವ್ಯವಹಾರ ನೆಡೆಸುತ್ತಿದ್ದೇವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಮಧ್ಯವ್ಯಸನಿಗಳಿಗೆ ಕಾರ್ಯಾಗಾರ ನೆಡೆಸಿ ದುಷ್ಚಟಗಳಿಂದ ಹೊರಬರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ನಾವು ನಮ್ಮ ಜೀವನ ಶೈಲಿಯನ್ನು ಬದಲಾವಣೆ ಮಾಡಿಕೊಳ್ಳಲು ಸಾಧ್ಯವಾಯಿತು ಎಂದು ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ಹಂಚಿಕೊಂಡರು. ಕಾರ್ಯ ಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು, ಪ್ರಗತಿ ಬಂಧುಗಳು ಹಾಜರಿದ್ದರು. ವರದಿ: ಮಂಜುನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಮಧುಗಿರಿ: ಗ್ರಾಮೀಣ ಭಾಗದ ಜನರ ಬೇಡಿಕೆಗಳನ್ನು ಈಡೇರಿಸಲು ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ವೀರಪುರ ಗ್ರಾಮದಲ್ಲಿ ಸುಮಾರು 3 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ಜನರ ಬಹು ದಿನದ ಬೇಡಿಕೆಯಂತೆ ಉತ್ತಮ ರಸ್ತೆ ನಿರ್ಮಾಣವಾಗುತ್ತಿದ್ದು, ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಅವಶ್ಯಕತೆಗೆ ಅನುಗುಣವಾಗಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಗುತ್ತಿಗೆದಾರರು ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಬೇಕು ಹಾಗೂ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು. ವೀರಾಪುರ ಗ್ರಾಮದಲ್ಲಿ ಏಪ್ರಿಲ್ ನಂತರ ಶುದ್ದ ನೀರಿನ ಘಟಕ ಸ್ಥಾಪನೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ವಿರಭದ್ರಪ್ಪ, ಪಿಡಿಒ ಆನಂದ್, ಇಇ ಗಂಗಾಧರ್, ಗುತ್ತಿಗೆದಾರ ರಾಜೇಂದ್ರ, ಲೋಕೇಶ್ ರೆಡ್ಡಿ, ಸಿದ್ದಾರೆಡ್ಡಿ, ಜಯದೇವಪ್ಪ ಹಾಗೂ ಮುಂತಾದವರು ಇದ್ದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಕೊರೊನಾ ಸೋಂಕಿನಿಂದಾಗಿ ಕಳೆದ ಎರಡು ವರ್ಷಗಳಿಂದ ನಿರ್ಬಂಧ ವಿಧಿಸಲಾಗಿದ್ದ ವಿಶ್ವ ವಿಖ್ಯಾತ ಬೆಂಗಳೂರು ಕರಗ ಈ ಬಾರಿ ಅದ್ದೂರಿಯಾಗಿ ನೆರವೇರುವ ಸಾಧ್ಯತೆಗಳಿವೆ. ಬರುವ ಮಾ.8 ರಂದು ಕರಗ ಉತ್ಸವ ನಡೆಯಲಿದ್ದು, ಕರಗ ಸಮಿತಿಯವರು ಈಗಾಗಲೆ ಸಕಲ ಸಿದ್ದತೆಗಳನ್ನು ಕೈಗೊಂಡಿದ್ದಾರೆ. ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಕರಗ ಉತ್ಸವ ಇಂದಿಗೂ ತನ್ನ ಆಕರ್ಷಣೆಯನ್ನು ಕಳೆದುಕೊಂಡಿಲ್ಲ. ಬೆಂಗಳೂರು ನಿರ್ಮಾಪಕ ಕೆಂಪೇಗೌಡರ ಕಾಲದಿಂದಲೂ ಕರಗ ಉತ್ಸವ ನಡೆದುಕೊಂಡು ಬರುತ್ತಿದೆ. ಉತ್ಸವ ಅರಂಭದ ದಿನದಿಂದಲೂ ಇಲ್ಲಿಯವರೆಗೆ ದೇಶ ವಿದೇಶಗಳ ಸಾವಿರಾರು ಮಂದಿಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.ಇಂದಿಗೂ ಕರಗ ಉತ್ಸವಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳ 50 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡಿ ದೇವರ ದರ್ಶನ ಪಡೆದು ಪುನಿತರಾಗುತ್ತಾರೆ. ಇಂತಹ ಜನಾಕರ್ಷಣೆಯ ಉತ್ಸವದ ಮೇಲೂ ಕೊರೊನಾ ಕರಿನೆರಳು ಬಿದ್ದ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರಗ ಉತ್ಸವವನ್ನು ಸಾಧಾರಣವಾಗಿ ನಡೆಸಲಾಗಿತ್ತು. ಆದರೆ, ಈ ಬಾರಿ ಕೊರೊನಾ ಸೋಂಕು ಕ್ಷೀಣಿಸಿರುವುದರಿಂದ ಮಾರ್ಚ್ನಲ್ಲಿ ನಡೆಯಲಿರುವ ಕರಗದ ಅದ್ಧೂರಿ ಆಚರಣೆಗೆ…
ಅಂತಾರಾಷ್ಟ್ರೀಯ ವೃತ್ತಿಪರ ಕುಸ್ತಿಪಟು ಖಲಿ ಎಂದೇ ಗುರುತಿಸಲ್ಪಡುವ ದಿಲೀಪ್ ಸಿಂಗ್ ರಾಣಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಸ್ವೀಕರಿಸಿದ ಅವರು, ಬಿಜೆಪಿ ಸೇರ್ಪಡೆಯಾಗುತ್ತಿರುವುದಕ್ಕೆ ತುಂಬ ಸಂತೋಷವಾಗುತ್ತಿದೆ.ದೇಶಕ್ಕಾಗಿ ಕೆಲಸ ಮಾಡಲು ನರೇಂದ್ರ ಮೋದಿ ಅವರು ಸೂಕ್ತ ಪ್ರಧಾನಿ ನನಗೆ ಅನಿಸುತ್ತದೆ. ಹಾಗಾಗಿ ಸರ್ಕಾರದ ಅಭಿವೃದ್ದಿ ಕಾರ್ಯಗಳ ಜೊತೆ ಕೈ ಜೋಡಿಸಲು ನಾನು ಬಿಜೆಪಿ ಸೇರಿದ್ದೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ವಿಜಾಪುರ ಜಿಲ್ಲೆ : ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರವ್ವ ಮೂರಮನ, ನೈರ್ಮಲ್ಯ ಮುಕ್ತ ಗ್ರಾಮ ಪಂಚಾಯತಿಯನ್ನಾಗಿ ಮಾಡುವ ಪರಿಕಲ್ಪನೆಯಲ್ಲಿ ಸುಮಾರು 12 ಲಕ್ಷ ರೂಪಾಯಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು ಕಾರ್ಯಕ್ರಮದಲ್ಲಿ ಮಸಬಿನಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅಪ್ಪಾಸಾಬ ಮಡಗೊಂಡ ಮಾಡುವ ಗ್ರಾಮ ಪಂಚಾಯತಿ ಸದಸ್ಯರಾದ ಶಿವಯ್ಯ ಹಿರೇಮಠ, ಬಸಲಿಂಗಯ್ಯ ಕೂಡಿಗೆಮಠ, ಶಂಕರ್ ಹಾರಿವಾಳ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಜಿ ಬೀ ಕಲ್ಯಾಣಿ, ಭೀಮ್ ಭೈರವಾಡಗಿ, ಉಪಸ್ಥಿತರಿದ್ದರು ವರದಿ: ಎ.ಎನ್. ಪೀರ್ , ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ರಾಜ್ಯ ಗುಪ್ತಚರ ವಿಭಾಗ ಕೆಲ ದಿನಗಳಿಂದ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ. ಈ ಹಿಂದೆ ತಮ್ಮ ಕಚೇರಿಗೆ ನೀಡಲಾಗಿದ್ದ ರಕ್ಷಣೆಯನ್ನೂ ಕಡಿತಗೊಳಿಸಲಾಗಿದ್ದು, ವೈ-ಕೆಟಗರಿ ರಕ್ಷಣೆಯನ್ನು ಎಕ್ಸ್ ಕೆಟಗರಿಗೆ ಬದಲಾಯಿಸಲಾಗಿದೆ ಎಂದು ಹೇಳಿದರು. ತಮಿಳುನಾಡು ಪೊಲೀಸರ ಮೇಲೆ ಗುಪ್ತಚರ ಇಲಾಖೆ ಪ್ರಾಬಲ್ಯ ಸಾಸುತ್ತಿದೆ. ಗುಪ್ತಚರ ವಿಭಾಗದ ಎಡಿಜಿಪಿ ಪೊಲೀಸ್ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನನ್ನ ಫೋನ್ ಕದ್ದಾಲಿಕೆಯನ್ನು ಖಂಡಿಸುತ್ತೇನೆ. ಎಫ್ಐಆರ್ ದಾಖಲಿಸುವ ಮುನ್ನವೇ ಪೊಲೀಸರು ಒಂದು ತೀರ್ಮಾನಕ್ಕೆ ಬಂದಿರುವುದು ಇದೇ ಮೊದಲು ಎಂದು ದೂರಿದ್ದಾರೆ. ನಾವು ಏನೇ ಹೇಳಿದರೂ ಅದು ಸಾರ್ವಜನಿಕ ವಲಯದಲ್ಲಿ ಬರುತ್ತದೆ. ತಮಿಳುನಾಡು ಗುಪ್ತಚರ ತಂಡ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದೆ. ಇದನ್ನು ಸಾಬೀತುಪಡಿಸಲು ನಾನು ವಾಟ್ಸಪ್ ಚಾಟ್ಗಳ ಸ್ಕ್ರೀನ್ ಶಾಟ್ ಗಳನ್ನು ಸಹ ಹಂಚಿಕೊಂಡಿದ್ದೇನೆ. ಶೀಘ್ರವೇ ಔಪಚಾರಿಕವಾಗಿ ದೂರು ದಾಖಲಿಸುವುದಾಗಿ ಅವರು ತಿಳಿಸಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು: ಸರ್ಕಾರ 1996ರ ಆದೇಶದಂತೆ ಕಾರ್ಮಿಕರಿಗೆ ರೂಪಿಸಬೇಕು ಎಂದು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಮಿತಿಯ ಜಿಲ್ಲಾಧ್ಯಕ್ಷ ಬಿ.ಉಮೇಶ್ ಒತ್ತಾಯಿಸಿದರು. ನಗರದ ಕಾರ್ಮಿಕ ಇಲಾಖೆ ಕಚೇರಿ ಎದರು ಪ್ರತಿಭಟನೆ ನಡೆಸಿ ಮನವಿ ನೀಡಿ ನಂತರ ಮಾತನಾಡಿದ ಉಮೇಶ್, ಕೇಂದ್ರ ಸರಕಾರ ಕಾರ್ಮಿಕ ಕಾನೂನುಗಳನ್ನು ಸಂಹಿತಿಕರಣಗೊಳಿಸುವ ಪ್ರಕ್ರಿಯೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾನೂನು 1996′ ಹಾಗೂ ‘ಸೆಸ್ ಕಾನೂನು ರದ್ದು ಮಾಡಿದೆ. ಜೊತೆಗೆ ಕೇಂದ್ರದ ಓಹೆಚ್ಸಿ ಕಾರ್ಮಿಕ ಸಂಹಿತೆ ಅಡಿಯಲ್ಲಿ ಸೆಸ್ ಸಂಗ್ರಹ ಮಿತಿಯನ್ನು 10 ಲಕ್ಷ 1996″ ಈ ಎರಡೂ ಕಾನೂನುಗಳನ್ನು ರೂಪಾಯಿ ಮೌಲ್ಯದಿಂದ 50 ಲಕ್ಷ ರೂಪಾಯಿ ಮೌಲ್ಯ ಮೇಲ್ಪಟ್ಟು ಎಂದು ತಿದ್ದುಪಡಿ ಮಾಡಲಾಗಿದೆ. ಇದರಿಂದಾಗಿ ಸೆಸ್ ಸಂಗ್ರಹ ಗಣನೀಯವಾಗಿ ಕುಸಿಯಲಿದೆ ಕೂಡಲೇ ಸರ್ಕಾರ 1996ರ ಆದೇಶದಂತೆ ಕಾರ್ಮಿಕರಿಗೆ ರೂಪಿಸಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಟ್ಟಡ ಕಾರ್ಮಿಕ ಮಂಡಳಿ ಮತ್ತು ಸೆಸ್ ಸಂಗ್ರಹ ವ್ಯವಸ್ಥೆಯನ್ನು ಬಲಪಡಿಸಲು ಕ್ರಮವಹಿಸಬೇಕು, ಕಟ್ಟಡ ನಿರ್ಮಾಣ ಸಾಮಗ್ರಿಗಳ ಮೇಲೆ…
ಶಿಡ್ಲಘಟ್ಟ, ಮನೆಯ ಗವಾಕ್ಷಿ ಮೂಲಕ ಒಳನುಗ್ಗಿದ ದುಷ್ಕರ್ಮಿಗಳು ವೃದ್ದ ದಂಪತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಪಟ್ಟಣದ ಕಾಮಾಟಿಗರ ಪೇಟೆಯ ವಾಸವಿ ಕಲ್ಯಾಣ ಮಂಟಪದ ಹಿಂಭಾಗದ ಮನೆಯಲ್ಲಿ ವಾಸವಾಗಿದ್ದ ಶ್ರೀನಿವಾಸಲು(77) ಮತ್ತು ಪತ್ನಿ ಪದ್ಮಾವತಿ(66) ಕೊಲೆಯಾದ ವೃದ್ದ ದಂಪತಿ. ಶ್ರೀನಿವಾಸಲು ಪಟ್ಟಣದಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಅವರನ್ನು ಮದುವೆ ಮಾಡಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ದಂಪತಿ ಮಾತ್ರ ಈ ಮನೆಯಲ್ಲಿದ್ದರು. ತಡರಾತ್ರಿ ದುಷ್ಕರ್ಮಿಗಳು ಮನೆಯ ಗವಾಕ್ಷಿ ಮೂಲಕ ಒಳನುಗ್ಗಿದ್ದಾರೆ. ರೂಮ್ನಲ್ಲಿ ಮಲಗಿದ್ದ ದಂಪತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಮನೆ ಕೆಲಸದಾಕೆ ಬಂದಾಗ ಬಾಗಿಲು ತೆಗೆದಿಲ್ಲ. ಅನುಮಾನಗೊಂಡು ಅಕ್ಕಪಕ್ಕದವರನ್ನು ಕರೆದಿದ್ದಾರೆ. ನೆರೆಮನೆಯವರು ಮನೆ ಬಳಿ ಬಂದು ನೋಡಿದಾಗ ದಂಪತಿಯ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಗರ ಠಾಣೆ…
ಜಮೀನುಗಳ ಹದ್ದುಬಸ್ತಿಗೆ, ಭೂ ಸರ್ವೇಗೆ ಇದ್ದ ದರವನ್ನು ರಾಜ್ಯ ಸರ್ಕಾರ ನೂರೈವತ್ತು ಪಟ್ಟು ಹೆಚ್ಚಳ ಮಾಡಿರುವುದನ್ನು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕೃತಿ ವಿಕೋಪ, ಕರೋನಾ, ಬೆಳೆ ಏರಿಳಿತ, ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ನಾನಾ ಕಾರಣಗಳಿಂದ ರೈತರ ಬದುಕು ಸಂಕಷ್ಟದಲ್ಲಿದೆ. ಇಂದಿಗೂ ನಮ್ಮ ರೈತರಿಗೆ ಸ್ಥಿರವಾದ ಬೆಲೆ ಎಂಬುದು ಸಿಗುತ್ತಿಲ್ಲ. ಸದಾ ಅನಿಶ್ಚಿತತೆಯಲ್ಲೇ ಬದುಕಬೇಕಾದ ಪರಿಸ್ಥಿತಿಯಲ್ಲಿ ರೈತರಿದ್ದಾರೆ. ಜನಜೀವನದ ಮೇಲೂ ವ್ಯತಿರಿಕ್ತ ಪರಿಣಾಮ ಉಂಟಾಗಿದೆ.ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರದ ಹೊಸ ಆದೇಶ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಸರ್ವೇ ಶುಲ್ಕವನ್ನು ಬರೋಬ್ಬರಿ ನೂರು, ನೂರೈವತ್ತು ಪಟ್ಟು ಹೆಚ್ಚು ಮಾಡಿರುವುದು ನಿಜಕ್ಕೂ ಆತಂಕ ಸೃಷ್ಟಿಸಿದೆ ಎಂದಿದ್ದಾರೆ. ಜಮೀನು ಸರ್ವೇ ಸಮಸ್ಯೆ ಇಂದು ನಿನ್ನೆಯದ್ದಲ್ಲ. ಹಲವು ಕಡೆ ಇನ್ನೂ ಹಕ್ಕು ಪತ್ರಗಳು ಸರಿಯಾಗಿ ಆಗಿರುವುದಿಲ್ಲ. ಎರಡು, ಮೂರು ತಲೆಮಾರುಗಳ ಜಮೀನುಗಳು ಸರಿಯಾದ ರೀತಿ…
ಪಾವಗಡ: ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆಯಿಂದ ಮನಸ್ಸು ಮತ್ತು ದೇಹ ಸದೃಢವಾಗಿರುತ್ತದೆ ಎಂದು ಮಾಜಿ ಪುರಸಭಾ ಅಧ್ಯಕ್ಷ ಮಾನಂ ವೆಂಕಟಸ್ವಾಮಿ ತಿಳಿಸಿದರು. ಪಾವಗಡ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಫೆಬ್ರವರಿ 11 ರಿಂದ 13 ರ ರವರೆಗೆ ನಡೆಯುವ ಕ್ರಿಕೆಟ್ ಪ್ರೇಮಿಯರ್ ಲೀಗ್ ತಂಡಗಳಿಗೆ ಹೆಲ್ಪ್ ಸೊಸೈಟಿ ವತಿಯಿಂದ ಟೀ -ಶರ್ಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸೋಲು –ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸೌಹಾರ್ದತೆ ಕಾಪಾಡಲು ಗ್ರಾಮೀಣ ಕ್ರೀಡೆಗಳನ್ನು ಮುನ್ನಡೆಸೋಣ ಎಂದರು. ದೈಹಿಕ ಶಿಕ್ಷಕ ಹಾಗೂ ಕ್ರಿಕೆಟ್ ತಂಡದ ಪ್ರಯೋಜಕರಾದ ಯತೀಶ್ ರವರು ಮಾತನಾಡುತ್ತಾ, ಗ್ರಾಮೀಣ ಪ್ರದೇಶದ ಯುವಕರ ನೆಚ್ಚಿನ ಪಂದ್ಯಗಳಾದ ಕ್ರಿಕೆಟ್ ಆಟವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಾವಗಡ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಇಂದು ಆಟಗಾರರಿಗೆ ಟೀ -ಶರ್ಟ್ ವಿತರಿಸುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಮಾತನಾಡುತ್ತ, ಯುವಕರು ದುಷ್ಚಟಕ್ಕೆ ಬಲಿಯಾಗದೆ ಉತ್ತಮ ಹವ್ಯಾಸ ಜೊತೆಗೆ ಕ್ರೀಡೆಗಳ…