Subscribe to Updates
Get the latest creative news from FooBar about art, design and business.
- ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ವಿ.ಸೋಮಣ್ಣ
- KSRTC ಬಸ್ಸಿನ ಮೇಲಿದ್ದ ಗುಟ್ಕಾ ಜಾಹೀರಾತು ಹರಿದಿದ್ದಕ್ಕೆ ಸಚಿವ ರಾಮಲಿಂಗಾರೆಡ್ಡಿ ಬೇಸರ
- ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
- 77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ
- ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ
- 77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು
- “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
- ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ
Author: admin
ಚಂಡೀಗಢ: ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ರಾಜ್ಯ ಸಂಪುಟದಿಂದ ವಜಾಗೊಳಿ ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿಸಲಾಗಿದೆ. ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದು ಕೇವಲ ಎರಡು ತಿಂಗಳಾಗಿದ್ದು ಮಾನ್ಸಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ 52 ವರ್ಷದ ವಿಜಯ್ ಸಿಂಗ್ಲಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವುದಾಗಿ ಮುಖ್ಯಮಂತ್ರಿಗಳೇ ಘೋಷಿಸಿದರು. ತನ್ನ ಇಲಾಖೆಯ ಟೆಂಡರ್ಗಳು ಮತ್ತು ಖರೀದಿಗಳಲ್ಲಿ ಸಿಂಗ್ಲಾ ಶೇಕಡಾ 1 ಪರ್ಸೆಂಟ್ ಕಮಿಷನ್ಗೆ ಬೇಡಿಕೆಯಿಡುತ್ತಿದ್ದಾರೆ ಎಂದು ತಿಳಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾನ್ ಹೇಳಿದರು. ಸಿಂಗ್ಲಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೂ ಸೂಚಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದು ಸಿಂಗ್ಲಾ ಅವರನ್ನು ಪಂಜಾಬ್ ಪೋಲಿಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಭಗವಂತ್ ಮಾನ್ ಸರ್ಕಾರವು ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಎಂಬುದನ್ನು ಇದು ಪ್ರತಿಪಾದಿಸಿದೆ. ‘ನನ್ನ ಸರ್ಕಾರದ ಓರ್ವ ಸಚಿವ ತಮ್ಮ ಇಲಾಖೆಯ ಪ್ರತಿ ಟೆಂಡರ್ ಅಥವಾ ಖರೀದಿಯಿಂದ ಶೇಕಡಾ ಒಂದರಷ್ಟು ಕಮಿಷನ್ ಕೇಳುತ್ತಿರುವ ಬಗ್ಗೆ…
ಬೆಂಗಳೂರು: ಆ್ಯಸಿಡ್ ದಾಳಿಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಗೆ ಕೊನೆಯ ಹಂತದ ಸರ್ಜರಿ ನಡೆಸಿದ್ದು, ಯುವತಿಗೆ ಆರೋಗ್ಯ ಸುಧಾರಿಸಲು ಎರಡು ತಿಂಗಳ ಕಾಲವಕಾಶ ಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಗೆ ಇಂದು ಹೈ ಲೆವೆಲ್ ಎಕ್ಯೂಪ್ಮೆಂಟ್ ಬಳಸಿ ಸರ್ಜರಿ ಮಾಡಲಾಗಿದೆ. ಇನ್ನು ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಸಚಿವ ಡಾ. ಸುಧಾಕರ್ ಆರೋಗ್ಯ ವಿಚಾರಿಸಿದ್ದಾರೆ. ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್ನನ್ನು ಪೊಲೀಸರು ಕರೆ ತರುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದರು. ಸದ್ಯ ಆತನ ಪರಿಸ್ಥಿತಿಯ ಫೋಟೋವನ್ನು ಕಂಡ ಸಂತ್ರಸ್ತೆ ಯುವತಿ ಖುಷಿಪಟ್ಟಿದ್ದು,ತನ್ನ ಈ ಸ್ಥಿತಿಗೆ ಕಾರಣನಾದವನ ಗತಿಯನ್ನು ಕಂಡು ಆತ್ಮಸ್ಥೈರ್ಯ ಹೆಚ್ಚಿಸಿಕೊಂಡಿದ್ದಾಳೆ ಎನ್ನಲಾಗಿದೆ. “ಯುವತಿಗೆ ಸ್ಕಿನ್ ಬ್ಯಾಂಕ್ ನಿಂದ ಸ್ಕಿನ್ ನೀಡಲಾಗುವುದು.ಆ್ಯಸಿಡ್ ದಾಳಿಯಿಂದ ಶೇ.35ರಷ್ಟು ದೇಹದ ಭಾಗಗಳು ಸುಟ್ಟುಹೋಗಿವೆ. ಸಂತ್ರಸ್ತೆಯ ಸ್ಥಿತಿ ಸ್ಪಲ್ಪ ಕ್ಲಿಷ್ಟಕರವಾಗಿದೆ.…
ಪಾವಗಡ: ಪಾವಗಡ ತಾಲೂಕಿನಲ್ಲಿ ಭರಣಿ ಮಳೆ ಉತ್ತಮವಾಗಿ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿದೆ. ಪಾವಗಡ ಜನತೆಯ ರೈತರು ಇಲಾಖೆಯಲ್ಲಿ ನೀಡುತ್ತಿರುವ ಬಿತ್ತನೆ ಬೀಜಗಳು ವಿವಿಧ ತಳಿಗಳಾದ ಶೇಂಗಾ, ಹೆಸರು, ಕಾಳು, ಹಲಸಂದೆ, ತೊಗರಿ, ಭತ್ತ, ರಾಗಿ ಇನ್ನು ಮುಂತಾದ ಬಿತ್ತನೆ ಬೀಜಗಳನ್ನು ಪಡೆದು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ವೆಂಕಟರಮಣಪ್ಪ ಕರೆ ನೀಡಿದರು. ಕೃಷಿ ಉನ್ನತ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳು ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯ ಮೂರ್ತಿ ಕೃಷಿ ಇಲಾಖೆ ಅಧಿಕಾರಿಗಳ ರಾಮಾಂಜಿನಪ್ಪ, ವೇಣು, ಮಧು ಸಂಸದ್ ಸಂಸ್ಥೆಯ ಪರವಾಗಿ ಕೆ ಹೋ ಎಫ್ ಬಾಲಾಜಿ ಹಾಗೂ ರೈತ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮುಂತಾದ ಅನೇಕ ಗ್ರಾಮಸ್ಥರು ಭಾಗವಹಿಸಿದ್ದರು. ಕೆ.ಓ.ಎಫ್.ಬಾಲಾಜಿ ಹಾಗೂ ರೈತ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮುಂತಾದ ಅನೇಕ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ: ರಾಮಪ್ಪ ಸಿ.ಕೆ. ಪುರ, ಪಾವಗಡ…
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಕರ್ನಾಟಕದ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷಕ್ಕೆ ಬಲ ನೀಡುವ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಚಾರದಲ್ಲಿ ಭಾಗವಹಿಸುವಂತೆ ಇತ್ತೀಚೆಗೆ ಉದಯಪುರದಲ್ಲಿ ನಡೆದ ಚಿಂತನ ಶಿಬಿರದಲ್ಲಿ ಪಕ್ಷದ ರಾಜ್ಯ ಮುಖಂಡರ ನಿಯೋಗ ಮನವಿ ಸಲ್ಲಿಸಿದೆ. ಅವರು ಬಹುತೇಕ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಅವರು ಹೇಳಿದರು. ಇತ್ತೀಚೆಗಷ್ಟೇ ಉದಯಪುರದಲ್ಲಿ ನಡೆದ ಪಕ್ಷದ ಚಿಂತನ ಶಿಬಿರದಲ್ಲಿ ಶಿವಕುಮಾರ್ ಸೇರಿದಂತೆ ಕರ್ನಾಟಕ ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಅವರನ್ನು ಕರ್ನಾಟಕದಿಂದ ರಾಜ್ಯಸಭೆ ಸ್ಥಾನಕ್ಕೆ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದಾರೆ, ಪ್ರಿಯಾಂಕಾ ಸ್ಪರ್ಧಿಸುವುದರಿಂದ ಪಕ್ಷದ ನೈತಿಕತೆ ಹೆಚ್ಚುತ್ತದೆ 2023 ರ ವಿಧಾನಸಭಾ ಚುನಾವಣೆಯು ಕಾಂಗ್ರೆಸ್ ಪಕ್ಷಕ್ಕೆ ನಿರ್ಣಾಯಕವಾಗಿದೆ ಎಂದು ತಿಳಿಸಿದ್ದಾರೆ. ಎಂಎಲ್ಸಿ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್ ಮುಂದೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದೇವೆ ಎಂದು ಹೇಳಿದರು.…
ಸರಗೂರು: ಅರಣ್ಯ ಹಕ್ಕು ಕಾಯಿದೆ 2006ರ ನಿಯಮ 2008ರ ತಿದ್ದುಪಡಿ 2012ರ ಕಾಯ್ದೆ ಅನುಷ್ಠಾನ ಹಾಗೂ ದರಖಾಸ್ಸು ಸಮಿತಿಗೆ ಬುಡಕಟ್ಟು ಸಮುದಾಯಗಳ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ವತಿಯಿಂದ ಸೋಮವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಸರಗೂರು ತಾಲೂಕು ವ್ಯಾಪ್ತಿಯಲ್ಲಿ 52 ಹಾಡಿಗಳಿದ್ದು, ಜೇನುಕುರುಬ, ಯರವ, ಸೋಲಿಗ, ಕಾಡುಕುರುಬ ಸಮುದಾಯಗಳು ಸ್ವತಂತ್ರ ಪೂರ್ವದಲ್ಲಿ ಬಂಡೀಪುರ, ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ವಾಸಿಮಾಡುತ್ತಿದ್ದು, 1972ರ ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿ ಹಾಗೂ ನುಗು ಅಣೆಕಟ್ಟೆ ನಿರ್ಮಿಸುವಾಗ ಸಮುದಾಯಗಳ ಅಭಿವೃದ್ಧಿ ಮತ್ತು ಪುನರ್ವಸತಿ ಬಗ್ಗೆ ಸರಕಾರ ಯಾವುದೇ ಯೋಜನೆ ರೂಪಿಸಿದೆ ಏಕಾಏಕಿ ಹೊರತಂದು ಸಮುದಾಯಗಳನ್ನು ಅತಂತ್ರ ಪರಿಸ್ಥಿತಿಗೆ ತಂದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಸರಕಾರದ ವಿರುದ್ಧ ನಾನಾ ಘೋಷಣೆ ಕೂಗಿದರು. ನಿವಾಸಿಗಳಿಗೆ ಪುನರ್ವಸತಿ ಒದಗಿಸಲು ಕಾನೂನಿನಲ್ಲಿ ಅವಕಾಶವಿದ್ದರೂ ಜಡ್ಡುಕಟ್ಟಿದ ಆಡಳಿತ ವ್ಯವಸ್ಥೆ ನೊಂದ ಆದಿವಾಸಿ ಸಮುದಾಯಗಳಿಗೆ ನ್ಯಾಯ ಒದಗಿಸಲು ವಿಳಂಬನೀತಿ ಅನುಸರಿಸಿ ಅರಣ್ಯ ಹಕ್ಕು ಕಾಯಿದೆಯನ್ನು ಅನುಷ್ಠಾನಗೊಳಿಸುವಲ್ಲಿ…
ಚಿತ್ತದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಶ್ರೀಶೈಲ ಸರ್ಕಲ್ ಗೆ ಹೋಗುವ ರಸ್ತೆ ಬದಿಯಲ್ಲಿರುವ ಮತ್ತು ಕೆ ಎಮ್ ಕೊಟ್ಟಿಗೆಯ ಹಳೇ ವಾಲ್ಮಿಕಿ ಭವನದ ಬಳಿ ಇರುವಂತಹ ವಿದ್ಯುತ್ ಟಿಸಿ ಸುತ್ತಮುತ್ತ ಯಾವುದೇ ಸುರಕ್ಷತಾ ಕ್ರಮವನ್ನು ಕೈಗೊಳ್ಳದೇ ಸಾರ್ವಜನಿಕರ ಪ್ರಾಣದ ಜೊತೆಗೆ ಚೆಲ್ಲಾಟವಾಡು್ತಿದ್ದಾರೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ. ರಸ್ತೆ ಬದಿ ಇರುವ ಟಿಸಿ ಕೈಗೆಟಕುವ ಅಂತರದಲ್ಲಿದೆ. ಸಾರ್ವಜನಿಕರು ಸ್ವಲ್ಪ ಮೈಮರೆತು ಮುಟ್ಟಿದರೂ, ಅನಾಹುತವೇ ನಡೆದುಹೋಗಬಹುದು. ವಿದ್ಯಾರ್ಥಿಗಳು, ಪುಟ್ಟ ಮಕ್ಕಳು ಕಂಬವನ್ನು ಸ್ಪರ್ಶಿಸಿದರೆ, ಅವರ ಪ್ರಾಣಕ್ಕೆ ಯಾರು ಹೊಣೆ ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ. ಹಿರಿಯೂರು ತಾಲೂಕಿನಲ್ಲಿ ಈ ರೀತಿಯ ಟಿಸಿಗಳು ಎಲ್ಲೆಂದರಲ್ಲಿ ಕಾಣ ಸಿಗುತ್ತವೆ. ಸಾರ್ವಜನಿಕರ ಸುರಕ್ಷತೆಗೆ ಕಿಂಚಿತ್ತೂ ಗಮನ ಹರಿಸಲಾಗಿಲ್ಲ. ಟಿಸಿಯ ಸಮೀಪದಲ್ಲೇ ಗಿಡಗಳು ಬೆಳೆದಿವೆ. ಆಕಸ್ಮತ್ ವಿದ್ಯುತ್ ಗಿಡಗಳಿಗೆ ಸ್ಪರ್ಶಿಸಿದರೆ, ಅದನ್ನು ಜನರೋ, ಪ್ರಾಣಿಗಳೋ ಸ್ಪರ್ಶಿಸಿದರೆ, ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆಗಳಿವೆ. ಟಿಸಿಗಳ ಸುತ್ತಮುತ್ತ ಜನರು ಹೋಗದಂತೆ ಸುರಕ್ಷತೆ ಕ್ರಮವನ್ನು ಸಂಬಂಧಪಟ್ಟವರು ಅಳವಡಿಸಬೇಕು. ಈ ಬಗ್ಗೆ ಸ್ಥಳೀಯ ಶಾಸಕರು ಅಧಿಕಾರಿಗಳನ್ನು…
ಧಾರವಾಡದ ಭೀಕರ ಅಪಘಾತ ಮರೆಯಾಗುವ ಮೊದಲೇ ಹುಬ್ಬಳ್ಳಿ ನಗರದ ಹೊರವಲಯದ ರೇವಡಿಹಾಳ ಕ್ರಾಸ್ ಮೇಲ್ಸೇತುವೆ ಬಳಿ ಖಾಸಗಿ ಬಸ್ ಮತ್ತು ಅಕ್ಕಿ ಚೀಲ ಹೇರಿಕೊಂಡು ಹೊರಟಿದ್ದ ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು, 8 ಮಂದಿ ಸಾವಿಗೀಡಾಗಿದ್ದಾರೆ. ಬಸ್ ಚಾಲಕನು ಟ್ರ್ಯಾಕ್ಟರ್ ಹಿಂದಿಕ್ಕಿ ಮುಂದೆ ಸಾಗುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜ, ಪ್ರಯಾಣಿಕರಾದ ಇಚಲಕರಂಜಿಯ ಬಾಬಾಸಾ ಅಣ್ಣಾಸಾ ಚೌಗಲೆ, ಚಿಕ್ಕೋಡಿಯ ಬಾಬೂಸಾಬ ಸೇರಿದಂತೆ ಎಂಟು ಜನರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರೆಲ್ಲ ಬಹುತೇಕರೆಲ್ಲ ಬಸ್ಸಿನ ಪ್ರಯಾಣಿಕರಾಗಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಶ್ಚಿಮ ಬಂಗಾಳ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಕೇಂದ್ರ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಗಳ ವಿಚಾರದಲ್ಲಿ ಮಧ್ಯಪ್ರವೇಶಿಸುವುದನ್ನು ಖಂಡಿಸಿರುವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯು ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡುತ್ತಿದೆ ಎಂದು ಅವರು ಹೇಳಿದರು. ಬಿಜೆಪಿ ಆಡಳಿತದಲ್ಲಿ ಸರ್ವಾಧಿಕಾರಿಗಳಾದ ಅಡಾಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್, ಬೆನಿಟೊ ಮುಸ್ಸೊಲಿನಿ ಆಳ್ವಿಕೆಗಿಂತಲೂ ಹೀನಾಯ ಸ್ಥಿತಿ ನಿರ್ಮಾಣವಾಗಿದೆ . ಕೇಂದ್ರ ಸಂಸ್ಥೆಗಳಿಗೆ ಕೆಲಸ ಮಾಡಲಾಗುತ್ತಿಲ್ಲ. ಯಾಕೆಂದರೆ ಅವುಗಳಿಗೆ ಸ್ವಾಯತ್ತೆ ಇಲ್ಲ. ಸ್ವಾಯತ್ತೆ ಎಂಬುದು ಇಬ್ಬರು ವ್ಯಕ್ತಿಗಳು ಹಾಗೂ ಬಿಜೆಪಿ ಕೈಯಲ್ಲಿದೆ. ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಭೋಪಾಲ್: ಹೊಟೇಲ್ ನಲ್ಲಿ ಬಾಲಕಿಗೆ ತಾಳಿ ಕಟ್ಟಿ, ಬಳಿಕ ಅದೇ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಭೋಪಾಲ್ ನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಹನುಮಗಂಜ್ ಪೊಲೀಸರು, ಬಾಲಕಿ 9ನೇ ತರಗತಿಯ ವಿದ್ಯಾರ್ಥಿನಿ. ಆಕೆಯನ್ನು ಹೋಟೆಲ್ ಗೆ ಕರೆತರುವಾಗ ಆ ವ್ಯಕ್ತಿ ಆಕೆಯ ಹಣೆಗೆ ಸಿಂಧೂರ ಇಟ್ಟು ಕರೆತಂದಿದ್ದ. ಹೋಟೆಲ್ ಕೊಠಡಿಯಲ್ಲಿ ಸಾಂಕೇತಿಕ ವಿವಾಹವಾದ ಬಳಿಕ, ದೈಹಿಕ ಸಂಬಂಧ ಬೆಳೆಸಿದ್ದ. ಇದಾಗಿ ಕೆಲ ದಿನಗಳ ಅವಧಿಯಲ್ಲಿ ಮತ್ತೆ ಎರಡು ಬಾರಿ ದೈಹಿಕ ಸಂಪರ್ಕ ಮಾಡಿದ್ದ ಎಂದು ತಿಳಿಸಿದ್ದಾರೆ. ಇನ್ನು ತಾನೂ ಸಾಂಕೇತಿಕ ವಿವಾಹವಾಗಿರುವ ವಿಚಾರ ಬಾಲಕಿ ತನ್ನ ಮನೆಯವರಿಗೆ ಕೆಲ ದಿನಗಳ ಬಳಿಕ ತಿಳಿಸಿದ್ದಳು. ಕೂಡಲೇ ಅವರು ಯುವಕನ ಮನೆಯವರನ್ನು ಸಂಪರ್ಕಿಸಿದ್ದರು. ಆದರೆ, ಅವರು ಆಕೆಯನ್ನು ಸೊಸೆಯನ್ನಾಗಿ ಸ್ವೀಕರಿಸಲು ನಿರಾಕರಿಸಿದರು. ಹೀಗಾಗಿ ಯುವಕ ಕೂಡ ಬಾಲಕಿ ಜತೆಗಿನ ಸಂಪರ್ಕ ಕಡಿದುಕೊಂಡಿದ್ದಾನೆ. ಇದರಿಂದಾಗಿ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ…
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾಗೆ ಭಾರತ ಅಕ್ಕಿ, ಔಷಧ, ಹಾಲಿನ ಪುಡಿ ಹೀಗೆ ಅಗತ್ಯ ವಸ್ತುಗಳನ್ನು ಕಳುಹಿಸಿದೆ. ಭಾನುವಾರ ದ್ವೀಪರಾಷ್ಟ್ರದ ರಾಜಧಾನಿ ಕೊಲಂಬೋ ತಲುಪಿದ ಹಡಗು, ಅಗತ್ಯ ವಸ್ತುಗಳನ್ನು ಶ್ರೀಲಂಕಾ ಸರ್ಕಾರಕ್ಕೆ ಹಸ್ತಾಂತರಿಸಿದ್ದು, 9,000 ಮೆಟ್ರಿಕ್ ಟನ್ ಅಕ್ಕಿ, 50 ಮೆಟ್ರಿಕ್ ಟನ್ ಹಾಲಿನ ಪುಡಿ ಹಾಗೂ 25 ಮೆಟ್ರಿಕ್ ಟನ್ ಗಿಂತ ಹೆಚ್ಚು ಔಷಧಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಭಾರತೀಯ ಹೈಕಮಿಷನರ್ ಗೋಪಾಲ್ ಬಾಗ್ಲೆ ಲಂಕಾದ ವಿದೇಶಾಂಗ ಸಚಿವ ಜಿಎಲ್ ಪೀರಿಸ್ ಅವರಿಗೆ ಹಸ್ತಾಂತರಿಸಿದರು. ಹಾಲಿನ ಪುಡಿ, ಅಕ್ಕಿ ಹಾಗೂ ಔಷಧ ಸೇರಿದಂತೆ 200 ಕೋಟಿ ರೂ. ಮೌಲ್ಯದ ಮಾನವೀಯ ನೆರವು ನೀಡಲಾಗಿದೆ. ಈ ಸಹಾಯಕ್ಕೆ ತಮಿಳುನಾಡು ಮುಖ್ಯಮಂತ್ರಿಗೂ ಹಾಗೂ ಭಾರತಕ್ಕೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಟ್ವೀಟ್ನಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…