Author: admin

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿ ಸಮೀಪ ಯಡಿಯೂರು ಕಲ್ಲೂರು ಮುಖ್ಯರಸ್ತೆಯಲ್ಲಿ ಏಕಕಾಲದಲ್ಲಿ ಮೂರು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಜಲಧಿಗೆರೆ ಕಡೆಯಿಂದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಕಲ್ಲೂರು ಕಡೆಗೆ  ಡಿಸ್ ಕವರ್ ಮತ್ತು ಪಲ್ಸರ್ ಬೈಕ್ ಗಳಲ್ಲಿ ತೆರಳುತ್ತಿದ್ದ ನಾಲ್ವರು ತೆರಳುತ್ತಿದ್ದರು ಎನ್ನಲಾಗಿದ್ದು, ಇತ್ತ ಕಲ್ಲೂರು ಕಡೆಯಿಂದ ಸ್ಪೆಂಡರ್ ಬೈಕಿನಲ್ಲಿ  ಇಬ್ಬರು ಬರುತ್ತಿದ್ದರು ಎನ್ನಲಾಗಿದೆ. ಈ ಮೂರು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ  ನಾಲ್ಕು ಸಾವನ್ನಪ್ಪಿದ್ದಾರೆ. ಇನ್ನು ಓರ್ವನ ಸ್ಥಿತಿ ಗಂಬೀರವಾಗಿದ್ದು ಸ್ಥಳೀಯರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ಅಪಘಾತದಲ್ಲಿ ಒಬ್ಬ ಅಪಾಯದಿಂದ ಪಾರಾಗಿದ್ದಾನೆ. ಮಾಯಸಂದ್ರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಗುಬ್ಬಿ:  ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್ ನಾಗಮೋಹನ್ ದಾಸ್ ಆಯೋಗದ ವರದಿ ತಕ್ಷಣವೇ ಜಾರಿಗೊಳಿಸಿ ಎಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಾಲ್ಮೀಕಿ ಸಮಾಜದ ಗುರುಗಳಾದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ನಿವೃತ್ತ ನ್ಯಾಯಮೂರ್ತಿ ಹೆಚ್ .ಎನ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಇಂದಿಗೆ ಮೂರು ದಿವಸಗಳು ಕಳೆದರೂ ಇದುವರೆಗೂ ಸರ್ಕಾರ ನಮ್ಮ ಸಮುದಾಯದ ಬೇಡಿಕೆ ಈಡೇರಿಸುವಲ್ಲಿ ಮುಂದಾಗದಿರುವುದು ದುರಂತವೇ ಸರಿ ಎಂದು ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ನರಸಿಂಹಮೂರ್ತಿ ಬೇಸರ ವ್ಯಕ್ತಪಡಿಸಿದರು. ನಮ್ಮ ರಾಜ್ಯದಲ್ಲಿ ಸುಮಾರು ಪರಿಶಿಷ್ಟ ಪಂಗಡಕ್ಕೆ ಸೇರಿದ ನಾವುಗಳು ಸುಮಾರು 50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದ್ದರೂ ಪ್ರಸ್ತುತ ದಿನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಿದ್ದೇವೆ. ಸರ್ಕಾರಗಳು ಚುನಾವಣೆ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಹಿತ ಕಾಯುವ ಆಶ್ವಾಸನೆ ನೀಡಿ…

Read More

ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಪರಿಶಿಷ್ಟ,ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದವರ  ಕಲ್ಯಾಣಕ್ಕಾಗಿ  ಆರ್ಥಿಕ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಸಬಲಿಕರಣವಾಗಲು ನ್ಯಾಯಮೂರ್ತಿ ಎಚ್.ನಾಗಮೋಹನದಾಸ್  ಅವರ ವರದಿಯನ್ನು ಕೂಡಲೇ ಜಾರಿಗೊಳಿಸುವಂತೆ ತುರುವೇಕೆರೆ ತಾಲೂಕು, ವಾಲ್ಮೀಕಿ ಸಮಾಜದ ವತಿಯಿಂದ ಹಾಗೂ ಪ್ರಗತಿಪರ ದಲಿತ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಪ್ರವಾಸಿ ಮಂದಿರದ ಹತ್ತಿರ ಜಮಾವಣೆಗೊಂಡ, ಪ್ರತಿಭಟನಾಕಾರರು ಮೊದಲು ಮುಖ್ಯ ರಸ್ತೆಯ ಮೂಲಕ ಸಂಚರಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನ್ಯಾಯಮೂರ್ತಿ, ನಾಗಮೋಹನ್ ದಾಸ್ ಅವರ , ವರದಿಯನ್ನು ಜಾರಿಗೊಳಿಸುವಂತೆ ಘೋಷಣೆಗಳನ್ನು ಕೂಗುತ್ತಾ, ತುರುವೇಕೆರೆ ತಾಲೂಕು ಕಚೇರಿ ಕಚೇರಿ ಮುಂಭಾಗ ಮಾನವ ಸರಪಳಿ ನಿರ್ಮಿಸಿ ,ಪ್ರತಿಭಟನೆ ನಡೆಸಿದರು. ನಂತರ ತಾಲೂಕು ಕಚೇರಿಯ ಬಳಿಬಂದು ತಹಶೀಲ್ದಾರ್  ನಯೀಮ್ ಉನ್ನಿಸಾ ಅವರಿಗೆ ಮನವಿ ಪತ್ರ ನೀಡಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಚಿದಾನಂದ,  ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಟ ವರ್ಗದವರಿಗೆ ಮೀಸಲಾತಿಯನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ವರದಿಯನ್ನು ಕೈಗೆತ್ತಿಕೊಂಡು ಸಂವಿಧಾನಬದ್ಧವಾಗಿ ನೀಡಬೇಕಾಗಿರುವ ಪರಿಶಿಷ್ಟ…

Read More

ಸರಗೂರು:  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವಂತೆ, ಹಾಗೂ ಪರಿಶಿಷ್ಟರು, ಹಿಂದುಳಿದವರ ಕಲ್ಯಾಣಕ್ಕಾಗಿ ನ್ಯಾ.ಎಚ್.ಎನ್.ನಾಗಮೋಹನ್‍ದಾ ಸ್ ವರದಿಯನ್ನು ಕೂಡಲೇ ಜಾರಿಗೊಳಿಸುವಂತೆ ನಾಯಕ ಸಮಾಜದ ಸ್ವಾಮೀಜಿಗಳು ನಡೆಸುತ್ತಿರುವ ಧರಣಿ ಸತ್ಯಗ್ರಹವನ್ನು ಬೆಂಬಲಿಸಿ ಪಟ್ಟಣದಲ್ಲಿ ತಾಲ್ಲೂಕಿನ ನಾಯಕ ಸಂಘಟನೆಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಮೊದಲ ಮುಖ್ಯರಸ್ತೆ, ಎರಡನೇ ಮುಖ್ಯರಸ್ತೆ ನಂತರ ಸಂತೇಮಾಳದಿಂದ ಮುಖ್ಯ ರಸ್ತೆಯಲ್ಲಿ ಸಾಗಿ ಬಳಿಕ ಬಸ್‍ನಿಲ್ದಾಣದ ಎದುರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.  ನಂತರ ತಾಲ್ಲೂಕು ಕಚೇರಿಗೆ ಆಗಮಿಸಿ ತಾಹಸೀಲ್ದಾರ್ ಚಲುವರಾಜು ರವರು ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಪುರದಕಟ್ಟೆ ಬಸವರಾಜು, ಬಿಜೆಪಿ ಸರಕಾರ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸಂವಿಧಾನ ಬದ್ಧವಾಗಿ ಸರಕಾರ ನೀಡಬೇಕಾಗಿರುವ ಪರಿಶಿಷ್ಟರ ಶೇ.7.5, ಪರಿಶಿಷ್ಟ ಜಾತಿಗೆ ಶೇ.17 ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು. ಪಪಂ…

Read More

ತಿಪಟೂರು:  ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಮೀಸಲಾತಿ ಹೆಚ್ಚಳ ಮಾಡಬೇಕು ಸಂವಿಧಾನ ಬದ್ದವಾಗಿ ದೊರೆಯಬೇಕಾದ ಮೀಸಲಾತಿಯನ್ನ ಸರ್ಕಾರ ಕೂಡಲೇ ಜಾರಿಗೊಳಿಸಬೇಕು ಎಂದು ತಿಪಟೂರಿನಲ್ಲಿ ಮಹಶ್ರೀವಾಲ್ಮೀಕಿ ಸಂಘ ಹಾಗೂ ಮದಕರಿ ನಾಯಕ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ನಗರಸಭಾ ವೃತ್ತದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಬಿ.ಹೆಚ್.ರಸ್ತೆ ಮೂಲಕ ಸಾಗಿ ತಿಪಟೂರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು ಪತ್ರಿಭಟನಾಕಾರರನ್ನುದ್ದೇಶಿಸಿ  ಮಾತನಾಡಿದ ಮದಕರಿ ನಾಯಕ ಸಂಘದ ಅಧ್ಯಕ್ಷ ಮಹೇಶ್,  ರಾಜ್ಯದಲ್ಲಿ ವಾಲ್ಮೀಕಿ ನಾಯಕ ಸಮುದಾಯ ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಸಾಮಾಜಿಕವಾಗಿ ಹಿಂದುಳಿದಿದ್ದು ಪರಿಶಿಷ್ಠ ಪಂಗಡಗಳಲ್ಲಿಯೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ವಾಲ್ಮೀಕಿನಾಯಕ ಸಮುದಾಯಕ್ಕೆ ಜನಸಂಖ್ಯೆ ಆಧಾರದಲ್ಲಿ 3% ಮೀಸಲಾತಿಯನ್ನು 7.5%ಕ್ಕೆ ಹೆಚ್ಚಳ ಮಾಡಬೇಕು ಹಾಗೂ ಪರಿಶಿಷ್ಟ ಜಾತಿ ಮೀಸಲಾಯಿಯನ್ನ ಶೇಕಡ 15ರಿಂದ 17ಕ್ಕೆ ಹೆಚ್ಚಿಸಬೇಕು  ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಯಥವತ್ ಜಾರಿಗೊಳಿಸಬೇಕು   ಎಂದು ಒತ್ತಾಯಿಸಿದರು. ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಮೀಸಲು ಹಣ ಕಾಯ್ದೆ 2017 ಕಲಂ 7ಡಿ ಯನ್ನು…

Read More

ಹಿರಿಯೂರು: ಹಾವುಗಳು ಎಂದಾಕ್ಷಣ ಮಾರುದ್ದ ಓಡುವವರೇ ಹೆಚ್ಚು. ಇಂತಹವರ ಮಧ್ಯೆ ಚಿತ್ರದುರ್ಗ ನಗರದಲ್ಲಿ ಮಹಾನಾಯಕ ವಾರಪತ್ರಿಕೆ ಸಂಪಾದಕರಾಗಿ ಪತ್ರಿಕೆ  ನಡೆಸುತ್ತಿರುವ  ವ್ಯಕ್ತಿಯೊಬ್ಬರು ಯಾವ ಭಯವೂ ಇಲ್ಲದೆ 100ಕ್ಕೂ ಅಧಿಕ ವಿಷದ ಹಾವನ್ನು ಹಿಡಿದು ರಕ್ಷಣೆ ಮಾಡಿದ್ದಾರೆ.. ಚಾಕಚಕ್ಯತೆಯಿಂದ ಹಾವುಗಳನ್ನು ಹಿಡಿಯುವ ಇವರ ಧೈರ್ಯ, ಸಾಹಸಕ್ಕೆ ನಿಬ್ಬೆರಗಾಗಲೇಬೇಕು. ಚಿತ್ರದುರ್ಗ ನಗರದಲ್ಲಿ ವಾರಪತ್ರಿಕೆ ನಡೆಸುತ್ತಿರುವಂತಹ  ಶಿವಕುಮಾರ್ ಅವರೇ ಈ ರೀತಿ ಸಾಧನೆ ಮಾಡುತ್ತಿರುವವರು. ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಪುರ ಸೇರಿದಂತೆ  ಎಲ್ಲೇ ವಿಷದ ಹಾವು ಇರುವ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ಆ ಪ್ರದೇಶಕ್ಕೆ ತೆರಳಿ ಹಾವನ್ನು ರಕ್ಷಿಸಿ ಕಾಡಿಗೆ ಬಿಡುತ್ತಾರೆ.  ಕನ್ನಡಿ ಹಾವು, ಹೆಬ್ಬಾವು, ಕೆರೆ ಹಾವು, ನೀರು ಹಾವು ಸೇರಿದಂತೆ ನಾನಾ ಜಾತಿಯ ಹಾವುಗಳನ್ನು ಪಳಗಿಸಿದ ಹೆಗ್ಗಳಿಕೆ ಇವರದು. ವಾಣಿವಿಲಾಸಪುರ ಗ್ರಾಮದ ಜಮೀನಿನಲ್ಲಿ  ಸಿಕ್ಕಿಹಾಕಿಕೊಂಡಿದ್ದ  ಸುಮಾರು ಆರು ಅಡಿ ಉದ್ದದ ಕೆರೆ ಹಾವನ್ನು  ರಕ್ಷಣೆ ಮಾಡಿದ ಶಿವಕುಮಾರ್ ಅವರು,  ಹಾವನ್ನು ರಕ್ಷಿಸಿ ಎಂಬ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಶಿವಕುಮಾರ್ ಅವರಿಗೆ …

Read More

ಕೆನಡಾ ದೇಶದ ಸಂಸತ್ತಿನಲ್ಲಿ ತುಮಕೂರು ಮೂಲದ ಸಂಸದ ಚಂದ್ರ ಆರ್ಯ ಅವರು ತಮ್ಮ ಮಾತೃ ಭಾಷೆ ಕನ್ನಡದಲ್ಲೇ ಮಾತನಾಡುವ ಮೂಲಕ ಗಮನ ಸೆಳೆದಿದ್ದು,  ಕನ್ನಡದಲ್ಲಿ ಮಾತನಾಡಲು ಕೆನಡಾ ಸಂಸತ್ ನಲ್ಲಿ ಅವಕಾಶ ದೊರಕಿದ್ದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. “ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ, ಮತ್ತು ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ” ಎಂದು ಅವರು ತಮ್ಮ ಭಾಷಣದಲ್ಲಿ ತಿಳಿಸಿದರು. ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ರಾಷ್ಟ್ರ ಕವಿ ಕುವೆಂಪು ಬರೆದಿರುವ ಮತ್ತು ನಟ ಸರ್ವಭೌಮ ಡಾ.ರಾಜ್ ಕುಮಾರ್ ಹಾಡಿರುವ ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು ಎನ್ನುವ ಸಾಲುಗಳನ್ನು ಅವರು ಓದಿ ಹೇಳಿದರು. ಇನ್ನೂ ಈ ವಿಡಿಯೋವನ್ನು ಟ್ವೀಟ್ ಮಾಡಿರುವ ಚಂದ್ರ ಆರ್ಯ ಅವರು,  ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ ಕನ್ನಡದಲ್ಲಿ…

Read More

ಹುಳಿಯಾರಿನ ಜ್ಞಾನಜ್ಯೋತಿ ಆಂಗ್ಲ ಪ್ರೌಢಶಾಲೆಗೆ ಇಂದು ಪ್ರಕಟವಾದ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100ರಷ್ಟು ಫಲಿತಾಂಶ ಲಭ್ಯವಾಗಿದೆ. ಒಟ್ಟು 34 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು ಅತ್ಯುನ್ನತ ಶ್ರೇಣಿಯಲ್ಲಿ(A+) 12 ವಿದ್ಯಾರ್ಥಿಗಳು ,ಪ್ರಥಮ ಶ್ರೇಣಿಯಲ್ಲಿ 22 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕೆ.ಎಮ್.ಪ್ರೀತಿ- 610,ಕಲ್ಯಾಣ ಪ್ರಭು M.V.- 609, ವಚನ- 603, ಶ್ವೇತಾ ಡಿ.ವಿ.-602 ಇವರುಗಳು 600 ಮೇಲೆ ಅಂಕಗಳಿಸಿದ ವಿದ್ಯಾರ್ಥಿಗಳಾಗಿದ್ದಾರೆ. ಸುಮನ್- 599, ಪ್ರಜ್ವಲ್- 598 ,ಗೌತಮಿ- 594,ಇಂಚರ- 593,ದೀಪ್ತಿ- 585, ಸಹನ ಶಂಕರ್- 573, ಸ್ನೇಹ- 566,ಕಿರಣ್- 563, ಶ್ವೇತಾ- 562 ,ವರ್ಷ- 560, ಸುಮಿತ್- 560, ಪ್ರಜ್ವಲ್- 558, ಧ್ರುವ- 558 , ಮುತ್ತುರಾಜ್- 557, ಮಿಥುನ್ -557, ಆಕಾಶ- 553 ,ವಿಜಯ್ ಸಾಗರ- 546, ತೇಜಸ್ವಿನಿ- 537, ಕನಕಲಕ್ಷ್ಮಿ- 533 ,ಶಶಾಂಕ್- 528, ಪುಟ್ಟೇಗೌಡ- 521 ,ಹರ್ಷ- 518 ,ಕಲಂದರ್- 509, ಶ್ರೀನಿವಾಸ್ -505 ಈ ವಿದ್ಯಾರ್ಥಿಗಳು 500ರ ಮೇಲೆ ಅಂಕಗಳಿಸಿದವರಾಗಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲೆಯ…

Read More

ಕೊರಟಗೆರೆ: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಸಲಹೆ ಮತ್ತು ಸೂಚನೆಯಂತೆ ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಗೆ ನೂತನ ಅಧ್ಯಕ್ಷರಾಗಿ ಸುನಂದ ಶಶಿಧರ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಡ್ಲಹಳ್ಳಿ ಅಶ್ವತ್ಥನಾರಾಯಣ್ ತಿಳಿಸಿದರು. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಯಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್  ನ ಸಮಗ್ರ ಅಭಿವೃದ್ದಿಗೆ ನಮ್ಮ ಶಾಸಕರಾದ ಡಾ.ಜಿ.ಪರಮೇಶ್ವರ್ ಆರ್ಶಿವಾದ ಸದಾ ಇರಲಿದೆ. ಕ್ಯಾಮೇನಹಳ್ಳಿ ಗ್ರಾಪಂಗೆ ನೂತವಾಗಿ ಆಯ್ಕೆಯಾದ ಅಧ್ಯಕ್ಷರು ತಮ್ಮ ಸದಸ್ಯರ ಜೊತೆಗೂಡಿ ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಸಹಕಾರ ನೀಡಬೇಕಿದೆ ಎಂದು ತಿಳಿಸಿದರು. ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷೆ ಸುನಂದ ಶಶಿಧರ್ ಮಾತನಾಡಿ, ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಗೆ ನಾನು ಪ್ರಥಮವಾಗಿ ಅವಿರೋಧ ಆಯ್ಕೆ ಆಗಿದ್ದೇನೆ. ನಮ್ಮ ಶಾಸಕರು ಮತ್ತು ಗ್ರಾಮ ಪಂಚಾಯತ್  ಸರ್ವಸದಸ್ಯರ ಜೊತೆ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ನನಗೆ ಪ್ರತ್ಯಕ್ಷ…

Read More

ಡಾ.ವಡ್ಡಗೆರೆ ನಾಗರಾಜಯ್ಯ  “ವೀರಶೈವ- ಲಿಂಗಾಯತರು” ಎಂದು ವಿಚಿತ್ರ ಜಾತಿಯ ಹೆಸರನ್ನು ಘೋಷಿಸುವ ವಿದ್ಯಮಾನ ಸಂಭವಿಸಿರುವುದು ನನ್ನಲ್ಲಿ ಆಶ್ಚರ್ಯವನ್ನುಂಟುಮಾಡಿದೆ. ಇಂತಹ ಜಾತಿ ಹಿಂದೆಂದೂ ಅಸ್ತಿತ್ವದಲ್ಲಿ ಇರಲಿಲ್ಲ. ಈಗಲೂ ಅಸ್ತಿತ್ವದಲ್ಲಿರದ “ವೀರಶೈವ ಲಿಂಗಾಯತ” ಎಂಬ ಹೆಸರಿನ ಹೊಸ ಜಾತಿಯನ್ನು ಏಕೆ ಘೋಷಿಸಿಕೊಂಡರೋ ತಿಳಿಯದು. ಹೀಗೊಂದು ಹೊಸ ಜಾತಿ ಹುಟ್ಟು ಪಡೆಯಲು ಸಾಧ್ಯವೇ? ಲಿಂಗಾಯತರೇ ಬೇರೆ, ವೀರಶೈವರೇ ಬೇರೆ. ಇಬ್ಬರೂ ಒಬ್ಬರೇ ಹೇಗಾಲು ಸಾಧ್ಯ?  ಲಿಂಗಾಯತ ಧರ್ಮವನ್ನು ಸಾಂಸ್ಥೀಕರಣಗೊಳಿಸಿ ಜಾತಿಯ ಹಂತಕ್ಕೆ ಕುಗ್ಗಿಸಿದ್ದು ವೀರಶೈವರು. ಲಿಂಗಾಯತ ಎಂಬ ಪದ ಬಸವಣ್ಣನಿಗೂ ಪೂರ್ವದ್ದು. ಲಿಂಗಾಯತವನ್ನು ಧರ್ಮವನ್ನಾಗಿ ಸ್ಥಾಪಿಸಿದ್ದು, ಬೆಳಗಿದ್ದು ಮತ್ತು ಬೆಳೆಸಿದ್ದು ಮಾತ್ರ ಬಸವಣ್ಣ. ಕನ್ನಡಿಗರೇ ರೂಪಿಸಿದ ಲಿಂಗಾಯತ ಧರ್ಮಕ್ಕೆ ಹೊರಗಿನ ಆಂಧ್ರಪ್ರದೇಶ ಮೂಲದಿಂದ ಬಂದ ತೆಲುಗುಬಾಳು ಆರಾಧ್ಯ ಜಂಗಮರು, ಸಂಸ್ಕೃತ ಭಾಷೆ- ಪಂಚಾಂಗ- ಜ್ಯೋತಿಷ್ಯ- ಸಂಸ್ಕೃತ ಭಾಷೆಯ  ‘ಶಿದ್ಧಾಂತ ಶಿಖಾಮಣಿ’ ಕೃತಿ ಮುಂತಾದವುಗಳನ್ನು ಹೇರುವ ಮೂಲಕ ಲಿಂಗಾಯತವನ್ನು ಸ್ವತಂತ್ರ ಧರ್ಮವಾಗದಂತೆ ನೋಡಿಕೊಂಡರು. ವೀರಶೈವರು ಬಸವಣ್ಣನನ್ನು ಗುರುವೆಂದು ಎಂದಿಗೂ ಒಪ್ಪಿದವರಲ್ಲ. ತೀರಾ ಇತ್ತೀಚಿನವರೆಗೂ ವೀರಶೈವ ಪಂಚಾಚಾರ್ಯರ ಮನೆಗಳಲ್ಲಾಗಲೀ,…

Read More