Subscribe to Updates
Get the latest creative news from FooBar about art, design and business.
- ಕೊರಟಗೆರೆ | ತಾಲ್ಲೂಕು ಕುರುಬ ಸಂಘದ ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಆಯ್ಕೆ
- ಲಂಕೆ ಗ್ರಾಮ ಮಾದರಿ ಗ್ರಾಮ ಮಾಡಲು ಪ್ರಯತ್ನ: ಶಾಸಕ ಅನಿಲ್ ಚಿಕ್ಕಮಾದು
- ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ
- ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ
- AI ಭಾವನಾತ್ಮಕವಾಗಿ ಯೋಚಿಸಿದರೆ ಹೇಗಿರಬಹುದು: ಇಲ್ಲಿದೆ ಸುಂದರ ಕಥೆ
- ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ
- ಸರಗೂರು: ಶ್ರದ್ಧಾ–ಭಕ್ತಿ, ಸಡಗರದಿಂದ ಹನುಮ ಜಯಂತಿ ಆಚರಣೆ
- ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ
Author: admin
ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮಾಡುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು. ಉಡುಪಿ-ಮಂಗಳೂರು ಪ್ರವಾಸಕ್ಕೆ ತೆರಳುವ ಮುನ್ನ ಬೆಂಗಳೂರಿನ ಆರ್ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಇಂದು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ಗೆ ಪ್ರತಿಭಟನೆ ಮಾಡೋಕೆ ನೈತಿಕ ಹಕ್ಕೇ ಇಲ್ಲ ಎಂದರು. ಈ ದೇಶದಲ್ಲಿ ಅತಿ ಹೆಚ್ಚು ಬೆಲೆ ಏರಿಕೆ ಮಾಡಿದ ಕೀರ್ತಿ, ಖ್ಯಾತಿ, ದಾಖಲೆ ಕಾಂಗ್ರೆಸ್ ಪಕ್ಷದ್ದು ಎಂದು ವಾಗ್ದಾಳಿ ನಡೆಸಿದ ಅವರು, ಯಾವ ನೈತಿಕತೆ ಇಟ್ಟುಕೊಂಡು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೋ ಗೊತ್ತಿಲ್ಲ ಎಂದರು. ಕಾಂಗ್ರೆಸ್ ಆಡಳಿತದಲ್ಲಿ ಯಾವುದೇ ಬೆಲೆಗಳು ಇಳಿಕೆಯಾಗಿರಲಿಲ್ಲ. ಈಗಿರುವಾಗ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುವುದಕ್ಕೆ ನೈತಿಕತೆ ಇಲ್ಲ ಎಂದರು. ಮಂಡ್ಯದ ವಿದ್ಯಾರ್ಥಿನಿ ಮಸ್ಕಾನ್ಗೂ ಆಲ್ ಖೈದಾಗೂ ಸಂಬಂಧ ಇದೆ ಈ ಬಗ್ಗೆ ತನಿಖೆ ನಡೆಸಿ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ…
ಗುಜರಾತಿನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ 6 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಹ್ಮದಾಬಾದ್ ನಿಂದ ೨೩೫ ಕಿ.ಮೀ. ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಘಟಕದಲ್ಲಿ ಮುಂಜಾನೆ ೩ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.ಈ ಕುರಿತು ಪ್ರತಿಕ್ರಿಯಿಸಿದ ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್, ಮೃತಪಟ್ಟಿರುವ ಆರು ಕಾರ್ಮಿಕರು ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದರು. ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎಂದರು. ರಿಯಾಕ್ಟರ್ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಂಕಿಯನ್ನು ಸಹ ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಬೇರೆ ಯಾರೂ ಗಾಯಗೊಂಡಿಲ್ಲ ಎಂದು ಅವರು ಹೇಳಿದರು. ವರದಿ: ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದರು. ನಗರದಲ್ಲಿಂದು ಫ್ರೀಡಂ ಪಾರ್ಕ್ನಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪದೇ ಪದೇ ಪಟ್ರೋಲ್, ಡಿಸೇಲ್,ಗ್ಯಾಸ್ ಸಿಲಿಂಡರ್, ಪಿಎನ್ ಜಿ, ಸಿಎನ್ ಜಿ ಬೆಲೆಗಳನ್ನು ಏರಿಸುತ್ತಿದೆ. ಮೋದಿ ಸರ್ಕಾರ ಜನವಿರೋಧಿ ಎಂಬುದಕ್ಕೆ ಇದು ಸಾಕ್ಷಿ ಎಂದು ದೂರಿದರು.ಅಧಿಕಾರ ವೈಫಲ್ಯವನ್ನು ಮರೆಮಾಚಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೆಸ್ ನಾಯಕರು ಸಮರ ಸಾರಿದರು. ಕಾಂಗ್ರೆಸ್ ಮಖಂಡರಾದ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಎಂ. ಉದಯ್ಶಂಕರ್, ಮತ್ತಿತರರು ಭಾಗವಹಿಸಿದ್ದರು. ಭಾವನಾತ್ಮಕ ವಿಚಾರಗಳನ್ನು ಮುನ್ನಲೆಗೆ ತಂದು…
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ಜಾರಿ ನಿರ್ದೇಶನಾಲಯ ಇಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ವಿಚಾರಣೆ ಒಳಪಡಿಸಿತು. 79 ವರ್ಷದ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕನಾಗಿರುವ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದರು. ಈ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಹತ್ವದ ಮಾಹಿತಿ ಸಂಗ್ರಹಿಸಿದರು ಎಂದು ಮೂಲಗಳು ತಿಳಿಸಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಖರ್ಗೆಯವರ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ತನಿಖೆ ಪೂರಕವಾಗಿ ಖರ್ಗೆಯವರನ್ನು ಕೆಲವೊಂದು ವಿಷಯಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿದೆ. ಫೆ. 26, 2011ರಲ್ಲಿ ಅಸೋಸಿಯೇಟೆಡ್ ಜರ್ನರಲ್ಸ್ ಲಿಮಿಟೆಡ್ಗೆ ಸಂಬಂಧಿಸಿದ ಶೇರುಗಳ ಸ್ವಾಧೀನ ಪ್ರಕರಣದಲ್ಲಿ ವಿವಾದ ಉಂಟಾಗಿದೆ. ನ. 20 ಅಸೋಸಿಯೇಟೆಡ್ ಜರ್ನರಲ್ಸ್ ಲಿಮಿಟೆಡ್ ಸಾರ್ವಜನಿಕ ಲಿಮಿಟೆಡ್ ಕಂಪನಿಯಾಗಿತ್ತು. 1937ರ ಭಾರತೀಯರ ಕಂಪನಿಗಳ ಕಾಯ್ದೆಯಡಿ ಲಿಮಿಟೆಡ್ ಕಂಪನಿಯಾಗಿತ್ತು. ವಿವಿಧ ಭಾಷೆಗಳಲ್ಲಿ ಪತ್ರಿಕೆಗಳನ್ನು…
ಹಿಂದೂ ಮತ್ತು ಮುಸ್ಲಿಂ ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನಗಳು ನಿಲ್ಲಬೇಕು. ಯಾವುದೇ ಕಾರಣಕ್ಕೂ ಸಾಮರಸ್ಯಕ್ಕ ಧಕ್ಕೆ ತರುವ ಕಿಡಿಗೇಡಿಗಳ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಳಗಾವಿ ಪ್ರವಾಸಕ್ಕೆ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ, ಮುಸ್ಲಿಂರು ಒಂದೇ ತಾಯಿಯ ಮಕ್ಕಳಂತೆ ಬಾಂಧವ್ಯ ಇರಬೇಕು ಎಂಬುದು ನಮ್ಮ ಅಪೇಕ್ಷೆ. ಯಾರೋ ಕಿಡಿಗೇಡಿಗಳು ಈ ಬಾಂಧವ್ಯಕ್ಕೆ ಧಕ್ಕೆ ತಂದರೆ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು. ಹಿಂದೂ-ಮುಸ್ಲಿಂ ಬಾಂಧವ್ಯಕ್ಕೆ ಧಕ್ಕೆ ತರುವ ಕೆಲಸವನ್ನು ನಿಲ್ಲಿಸಿ. ಅವರೂ ಸಹ ಗೌರವದಿಂದ ಬಾಳುವಂತೆ ನೋಡಿಕೊಳ್ಳೋಣ. ಅನವಶ್ಯಕವಾಗಿ ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ ಬೇಡ ಎಂಬ ಕಿವಿ ಮಾತು ಎಲ್ಲರಿಗೂ ಹೇಳುತ್ತೇನೆ ಎಂದರು. ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಮುಖ್ಯಮಂತ್ರಿಗಳು ಹಿಂದೆ ಕಾಂಗ್ರೆಸ್ ಕಾಲದಲ್ಲಿ ಯಾವ ರೀತಿ ಬೆಲೆ ಏರಿಕೆಯಾಗಿತ್ತು ಎಂದು…
ಮಧುಗಿರಿ: ಯುಕ್ತ ಕೌಶಲ್ಯ ತರಬೇತಿ ಕೇಂದ್ರ ತಾಲ್ಲೂಕಿನ ವಿಕಲಚೇತನರ (M.R.W,U. R. W, V. R. W)ಸ್ಫೂರ್ತಿ ಪುನರ್ವಸತಿ ಕಾರ್ಯಕರ್ತರ ಸಂಘ ಇವರುಗಳ ಸಹಯೋಗದಲ್ಲಿ ಬಾಬು ಜಗಜೀವನ ರಾವ್ ಮತ್ತು . ಡಾ ಬಿ.ಆರ್ . ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ, ಮಧುಗಿರಿಯ ಯುಕ್ತ ಕೌಶಲ್ಯ ತರಬೇತಿ ಮಾಹಿತಿ ಕಾರ್ಯಾಗಾರದಲ್ಲಿ msyep ತರಬೇತಿಯನ್ನು ನಮ್ಮ ತಾಲ್ಲೂಕಿನ ಎಲ್ಲಾ V. R.W ಮತ್ತು U. R.W ಗಳಿಗೆ ಆಸಕ್ತಿವುಳ್ಳ ದೈಹಿಕ ವಿಕಲ ಚೇತನರಿಗೆ ತರಬೇತಿ ನೀಡುವುದಾಗಿ ಸಂಸ್ಥಾಪಕ ನಿರ್ದೇಶಕರಾದ ಮಧುಗಿರಿ ದಿಲೀಪ್ ತಿಳಿಸಿದರು. ಜಿಲ್ಲಾ ಮುಖ್ಯ ಕಾರ್ಯಕ್ರಮ ಆಯೋಜಕರಾದ ದೀಪಿಕಾ ವೆಂಕಟೇಶ್ ರವರು msyep ಕಾರ್ಯಕ್ರಮದಲ್ಲಿ ನೀಡುವ ತರಬೇತಿಗಳ ಬಗ್ಗೆ ಮಾಹಿತಿ ನೀಡಿದರು ಹಾಗೂ ಯುಕ್ತ ಕೌಶಲ್ಯ ತರಬೇತಿ ಕೇಂದ್ರದ ಸಂಸ್ಥಾಪಕ ನಿರ್ದೇಶಕರಾದ ಮಧುಗಿರಿ ದಿಲೀಪ್ ರವರು msyep ತರಬೇತಿ ಕಾರ್ಯಕ್ರಮ ಕ್ಕೆ ಸಹಯೋಗ ನೀಡುವ ಸಂಸ್ಥೆಗಳು ಹಾಗೂ ತರಬೇತಿಯ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ ಜಿಲ್ಲಾ ಪಂಚಾಯತಿಯ …
ತಿಪಟೂರು: ತಾಲ್ಲೋಕಿನ ಪ್ರಸಿದ್ದ ಪುಣ್ಯಕ್ಷೇತ್ರ ಹಾಲ್ಕುರಿಕೆ ಶ್ರೀ ಕೆಂಪಮ್ಮ ದೇವಿ ಶ್ರೀ ಪ್ಲೇಗಿನಮ್ಮ ದೇವಿ ಜಾತ್ರಾಮಹೋತ್ಸವದ ಅಂಗವಾಗಿ ನಡೆದ ಬನ್ನಿಮರ ಈಚಲಮರ ಹತ್ತುವ ಕಾರ್ಯಕ್ರಮವು ಭಕ್ತರ ಮೈ ನವಿರೇಳಿಸುವಂತೆ ಮಾಡಿತ್ತು ರಥೋತ್ಸವದಿಂದ ಇಳಿದ ಶ್ರೀ ಕೆಂಪಮ್ಮ ದೇವಿ ಶ್ರೀ ಪ್ಲೇಗಿನಮ್ಮ ದೇವಿಗೆ ಪೂಜೆಸಲ್ಲಿಸಿ ದೇವಿ ಮೈಮೇಲೆ ಅವಾಹನೆ ಅವಾಹನೆಹೊಂಡ ಅರ್ಚಕ ಮುಳ್ಳಗಳಿಂದ ಕೂಡಿದ ಈಚಲ ಮರವನ್ನ (ಬನ್ನಿಮರ)ಎರುತ್ತಿದ್ದಂತೆ ಜಾತ್ರೆಯಲ್ಲಿ ನೆರೆದಿದ್ದ ಭಕ್ತರಲ್ಲಿ ಹರ್ಷೋದ್ಗಾರ ಮನೆಮಾಡಿದ್ದು, ಮುಳ್ಳುಗಳ Nಡುವೆ ಮರವೇರಿದ ಅರ್ಚಕ ಪೂಜೆಸಲ್ಲಿಸಿ ಮರದಿಂದ ಕೆಳಗೆ ಇಳಿಸಲಾಯಿತು. ಶ್ರೀಕೆಂಪಮ್ಮ ದೇವಿ ಶ್ರೀಪ್ಲೇಗಿನಮ್ಮ ದೇವಿ ಜಾತ್ರಾಮಹೋತ್ಸವದ ಅಂಗವಾಗಿ ಆರತಿಬಾನ ಹಾಗೂ ಶ್ರೀಪ್ಲೇಗಿನಮ್ಮ ದೇವಿ ಗಂಗಾಸ್ನಾನ ನಡೆಸಲ್ಲಾಯಿತು. ತೇರು ಬೀದಿಯ ಮಜ್ಜನ ಬಾವಿಯಿಂದ ಕಳಶಸ್ಥಾಪನೆ ಮಾಡಿ ನಡೆಮುಡಿಯೊಂದಿ ಮೂಲಸ್ಥಾನಕ್ಕೆ ಕರೆತರಲಾಯಿತು ನಂತರದಿನ ನಡೆದ ಶ್ರೀಕೆಂಪಮ್ಮ ದೇವಿ ಗಂಗಾಸ್ನಾನದಲ್ಲಿ ಮಜ್ಜನಬಾವಿಯಲ್ಲಿ ಕಳಶ ಸ್ಥಾಪನೆಗೊಂಡು ಶ್ರೀಕೆಂಪಮ್ಮ ದೇವಿ ಶ್ರೀ ಪ್ಲೇಗಿನಮ್ಮ ದೇವಿಯವರನ್ನ ಪುಷ್ಟಾಲಂಕೃತ ದರ್ಭಾರ ವಾಹನದಲ್ಲಿ ಕೂರಿಸಿ ಕೀಲುಕುದುರೆ ನರ್ತನ ನಾಸೀಕ್ ಡೋಲ್ ಸೇರಿದಂತೆ ವಿವಿಧ ಸಾಂಸ್ಕ್ರತಿಕ ಕಲಾತಂಡಗಳೊಂದಿಗೆ…
ತಿಪಟೂರು. ಸಮಾಜದ ದುಶ್ಚಟವಾದ ಮದ್ಯಪಾನವು ಇಂದು ಮಹಾಮಾರಿಯಾಗಿದ್ದು, ಅದನ್ನ ನಿಯಂತ್ರಿಸಿದರೆ ಉಳಿದೆಲ್ಲವನ್ನೂ ನಿಯಂತ್ರಿಸಿದಂತೆ ಎಂಬುದು ಧರ್ಮಸ್ಥಳದ ಹೆಗ್ಗಡೆಯವರ ಆಶಯವಾಗಿದೆ ಎಂದರು. ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ವಲಯದಲ್ಲಿ 1518 ನೇ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಿದರು. ಸಪ್ತವ್ಯಸನಿಗಳಲ್ಲಿ ಮೊದಲನೆಯದು ಮದ್ಯವ್ಯಸನ ಅದನ್ನು ಜಾರಿಸಿದರೆ ಉಳಿದೆಲ್ಲವನ್ನು ಜಾರಿಸಿದಂತೆ. ಗ್ರಾಮೀಣ ಭಾಗದ ಜನರ ಸರ್ವತೋಮುಖ ಅಭಿವೃದ್ದಿಗೆ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಶ್ರಮಿಸುತ್ತಿದೆ ಹೆಣ್ಣುಮಕ್ಕಳ ಆರ್ಥಿಕ ಸಾಮಾಜಿಕ, ಶೈಕ್ಷಣಿಕ ಹಾಗೂ ಸಮುದಾಯಿಕ ಅಭಿವೃದ್ಧಿಯೊಂದಿಗೆ ಮದ್ಯ ವ್ಯಸನಿಗಳಾಗಿರುವ ಜನರಿಗೆ ಮನಃಪರಿವರ್ತನೆ ಮೂಲಕ ಮದ್ಯಮುಕ್ತರನ್ನಾಗಿ ಮಾಡಿಸುವುದೇ ಈ ಶಿಬಿರದ ಉದ್ದೇಶವಾಗಿದೆ ಎಂದು ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ನಿರ್ದೇಶಕಿ ದಯಾಶೀಲ ಮಾತನಾಡಿ ತಿಪಟೂರು ತಾಲ್ಲೂಕಿನಲ್ಲಿ ಈ ಹಿಂದೆ ಹಲವು ಶಿಬಿರಗಳು ನಡೆದಿದ್ದು ಸುಮಾರು 1000 ಹೆಚ್ಚು ಕುಟುಂಬಗಳು ಇಂದು ಮದ್ಯಮುಕ್ತ ನೆಮ್ಮದಿ ಜೀವನ ನಡೆಸುತ್ತಿದ್ದಾರೆ ಹಾಗೂ ಇವರ ಸಾಲಿನಲ್ಲಿ ನೀವು ಕೂಡ ನಿಲ್ಲಬೇಕು ಎಂದು ಆಗಮಿಸಿದ ಶಿಬಿರಾರ್ಥಿಗಳನ್ನು ಹುರಿದುಂಬಿಸಿದರು. ಸಂದರ್ಭದಲ್ಲಿ ಮದ್ಯವರ್ಜನ ವ್ಯವಸ್ಥಾಪನ…
ಮಧುಗಿರಿ: ತಾಲೂಕಿನ ಐ. ಡಿ ಹಳ್ಳಿ ಹೋಬಳಿಯಲ್ಲಿ ನೂತನ ರೈತ ಸಂಪರ್ಕ ಕಟ್ಟಡಕ್ಕೆ ಜನಪ್ರಿಯ ಶಾಸಕರಾದ ಎಂ.ವಿ ವೀರಭದ್ರಯ್ಯ ನವರು ಭೂಮಿ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ನಾನು ಐಡಿಹಳ್ಳಿ ಹೋಬಳಿಗೆ ಮುಂದುವರೆದು ಹೆಚ್ಚಿನ ಅನುದಾನ ಕೊಟ್ಟು ಅಭಿವೃದ್ಧಿ ಪಡಿಸಿದ್ದೇನೆ. ಈ ಅಭಿವೃದ್ಧಿ ವಿಚಾರಕ್ಕೆ ಬಂದರೆ ಸಿಸಿ ರಸ್ತೆ, ಶಾಲೆಗಳಿಗೆ ಕಾಂಪೌಂಡ್, ಸ್ಕೂಲ್ ರಂಗಮಂದಿರ , ಬಸ್ ಸ್ಟಾಂಡ್ ಮುಂಭಾಗ 30 ಲಕ್ಷ ರೂಪಾಯಿ ಸಿಸಿ ರಸ್ತೆ ಕಾಮಗಾರಿ, ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ಕೊಟ್ಟಿದ್ದು, ಮತ್ತು ಶೀಘ್ರದಲ್ಲಿಯೇ ಬಸ್ ಸ್ಟಾಂಡ್ ನಲ್ಲಿ ಶೌಚಾಲಯ ನಿರ್ಮಾಣ ಮಾಡುವುದಾಗಿ ತಿಳಿಸಿದರು. ಮುಖಂಡರುಗಳಾದ ವೆಂಕಟರಂಗಾರೆಡ್ಡಿ ಆರ್. ಕೆ ರೆಡ್ಡಿ, ರಿಯಾಜ್ ಅಹಮದ್, ಲಿಂಗಪ್ಪ ಎಲ್. ಐ. ಸಿ. ಮಂಜುನಾಥ್, ಜಿಲಾನ್ , ವಕೀಲರಾದ ನರಸಿಂಹಮೂರ್ತಿ , ವಜೀರ್ ಬಾಷಾ , ಕೃಷಿಕ ಸಮಾಜದ ಅಧ್ಯಕ್ಷರಾದ, ಚನ್ನ ಲಿಂಗಪ್ಪ ಸದಸ್ಯರಾದ ಸಿದ್ಧಾರೆಡ್ಡಿ , ಉಮೇಶ್ ಕೃಷಿ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ, ಕೃಷಿ ಅಧಿಕಾರಿ…
ತುಮಕೂರು: ನಾವು ನ್ಯಾಯ ಮತ್ತು ಧರ್ಮಕ್ಕೆ ಹೆಸರಾದ ಶ್ರೀರಾಮನ ಯಾವ ಗುಣಗಳನ್ನು ಪಾಲಿಸುತ್ತಿದ್ದೇವೆ ಎಂಬ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಹಾಗೂ ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ನೌಕರರ ಒಕ್ಕೂಟದವತಿಯಿಂದ ಆಯೋಜಿಸಿದ್ದ ಸವ್ಯಸಾಚಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಚಿಕಾಗೋ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮೀ ವಿವೇಕಾನಂದರು ಪ್ರತಿಪಾದಿಸಿದ, ಎಲ್ಲಾ ಧರ್ಮಗಳನ್ನು ಪ್ರೀತಿಸುವ ಹಿಂದೂ ಧರ್ಮವಾಗಿ ಈಗ ಉಳಿದಿದೆಯೇ ಎಂಬುದನ್ನು ನಾವು ಹಿಂದಿರುಗಿ ನೋಡಬೇಕಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಪ್ರಸ್ತಾವನೆಯಲ್ಲಿ ಪ್ರತಿಪಾದಿಸಿದ ಸಮಾನತೆ, ಸಾಮರಸ್ಯ, ಬಾತೃತ್ವವನ್ನು ಒಳಗೊಂಡ ಧರ್ಮದ ಅಗತ್ಯವಿದೆ ಎಂದರು. ಭಾರತ ಒಂದು ಕಾಲದಲ್ಲಿ ಪಾಶ್ಚಿಮಾತ್ಯರಿಗೆ ಮಾದರಿಯಾಗಿದ್ದ ದೇಶ. ನಳಂದ, ತಕ್ಷಶಿಲೆಯಂತಹ ವಿಶ್ವವಿದ್ಯಾಲಯಗಳಿಗೆ ದೇಶ, ವಿದೇಶಗಳ ಜನರು ಕಲಿಯಲು ಬರುತ್ತಿದ್ದರು.ಸಹಿಷ್ಣತೆ ಮತ್ತು ಶಾಂತಿ ಭಯಸುವ ಭಾರತ ಇಂದಿಗೆ ಅಗತ್ಯವಾಗಿದೆ. ವಿನೋಧ ಭಾವೆಯವರ ಒಂದು ಮಾತಿಗೆ ಬೆಲೆ ಕೊಟ್ಟು,ಶಿಕ್ಷಣದಿಂದ ಬದಲಾವಣೆ ಸಾಧ್ಯ ಎಂದು ನಂಬಿ ನನ್ನ…