Subscribe to Updates
Get the latest creative news from FooBar about art, design and business.
- ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
- ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
- ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
- ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
- ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
- ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
- ಜೂಜಾಟ: 12 ಮಂದಿ ಆರೋಪಿಗಳ ಬಂಧನ
Author: admin
ನವದೆಹಲಿ, ಸೆ.6: ಬಿಜೆಪಿ ಜೊತೆ ಮೈತ್ರಿ ತೊರೆದು ಆರ್ಜೆಡಿ ಜೊತೆ ಸರ್ಕಾರ ರಚಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೆ ತೃತೀಯ ರಂಗದ ರಚನೆಯ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಅವರು ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಮಧ್ಯೆ ಸೋಮವಾರ ರಾತ್ರಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಸಂಜೆ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಎಚ್ಡಿ ಕುಮಾರಸ್ವಾಮಿ ಕೆಲ ಕಾಲ ಮಾತುಕತೆ ನಡೆಸಿದರು. ಸಭೆಯಲ್ಲಿ ರಾಜ್ಯದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ರಾಜ್ಯದ ಜೆಡಿಯು ಅಧ್ಯಕ್ಷ ಮಹಿಮಾ ಪಟೇಲ್ ಸಹ ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, “ಜನತಾ ಪರಿವಾರ ಒಗ್ಗೂಡುವ ಬಗ್ಗೆ ಮಾತುಕತೆ ನಡೆಯಿತು. ಕೆಲ ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ನಂತರ ಮತ್ತೆ ಈ ಚರ್ಚೆಗೆ ಚಾಲನೆ ಸಿಕ್ಕಿದೆ. ಜಯಪ್ರಕಾಶ ನಾರಾಯಣ್…
ಬೆಳಗಾವಿ: ಮಳೆ ನೀರು ಸೋರದಂತೆ ಮನೆ ಮಾಳಿಗೆ ಮನೆಯ ಮೇಲೆ ತಗಡಿನ ಪತ್ರೆಗಳನ್ನು ಹಾಕುವ ವೇಳೆ ವಿದ್ಯುತ್ ತಂತಿ ತಗಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಒರ್ವ ಗಂಭೀರ ಗಾಯಗೊಂಡ ಘಟನೆ ಘಟನೆ ತಾಲ್ಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದೆ. ವಿನಾಯಕ ಕಾಲಖಾಂಬಕರ (25), ಬೆನಕನಹಳ್ಳಿ ನಿವಾಸಿ ವಿಲಾಸ ಗೋಪಾಲ ಅಗಸಗೇಕರ (57) ಮೃತಪಟ್ಟವರು. ವಿನಾಯಕ ಅವರ ಮನೆ ಮಳೆಯಿಂದಾಗಿ ಸೋರುತ್ತಿತ್ತು. ಈಗಾಗಲೇ ಇದ್ದ ತಗಡಿನ ಚಾವಣಿ ಮೇಲೆ ಹೊಸ ತಗಡುಗಳನ್ನು ಹಾಕಲು ವಿನಾಯಕ ಹಾಗೂ ವಿಲಾಸ ಚಾವಣಿ ಮೇಲೆ ಹತ್ತಿದ್ದರು. ಮನೆ ಮೇಲೆ ಹಾದು ಹೋದ ವಿದ್ಯುತ್ ತಂತಿಗೆ ತಗಡು ಸಿಕ್ಕಿಕೊಂಡಿದ್ದರಿಂದ ಅದರ ಮೂಲಕ ವಿದ್ಯುತ್ ಪ್ರವಹಿಸಿ, ಇಬ್ಬರೂ ಕ್ಷಣ ಮಾತ್ರದಲ್ಲೇ ಮೃತಪಟ್ಟರು. ನೆರವಿಗೆ ಬಂದಿದ್ದ ಇನ್ನೊಬ್ಬ ವ್ಯಕ್ತಿಗೂ ವಿದ್ಯುತ್ ತಂತಿ ತಗಲಿದ್ದರಿಂದ ಕೆಳಗೆ ಬಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ತಿಪಟೂರು: ತಾಲೂಕಿನ ಗಾಂಧಿ ನಗರ ಭಾಗದಲ್ಲಿ ಗಣೇಶೋತ್ಸವ ಪ್ರಯುಕ್ತ ಸುಮಾರು 50ಕ್ಕೂ ಅಧಿಕ ಗಣೇಶನ ವಿಗ್ರಹಗಳನ್ನು ಸ್ಥಾಪಿಸಲಾಗಿತ್ತು. ಮೂರ್ತಿ ಪ್ರತಿಷ್ಠಾಪನೆಗೊಂಡು 5ನೇ ದಿನವಾದ ಸೋಮವಾರ ಸಡಗರದಿಂದ ಉತ್ಸವ ನಡೆಸಲಾಯಿತು. ಗಾಂಧಿ ನಗರದ ಮುಖ್ಯ ರಸ್ತೆಗಳಲ್ಲಿ ನೂರಾರು ಯುವಕರು ವಿವಿಧ ಸಾಂಸ್ಕೃತಿಕ ವಾದ್ಯಗಳೊಂದಿಗೆ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ 50ಕ್ಕೂ ಹೆಚ್ಚು ಸಾಮೂಹಿಕ ಗಣಪತಿಗಳ ವಿಗ್ರಹಗಳಿದ್ದವು. ಗಾಂಧಿನಗರ ಭಾಗವು ಅತಿ ಸೂಕ್ಷ್ಮ ಪ್ರದೇಶವಾದ ಕಾರಣ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಶಹಪುರವಾಡ್ ರವರು ಸಹ ಭಾಗಿಯಾಗಿದ್ದು ಯಾವುದೇ ರೀತಿಯ ಗಲಭೆಗೆ ಅವಕಾಶ ನೀಡದೆ ಉತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು. ಉತ್ಸವದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ನಗರಸಭಾ ಅಧ್ಯಕ್ಷ ರಾಮ್ ಮೋಹನ್, ನಗರಸಭಾ ಪೌರಾಯುಕ್ತ ಉಮಾಕಾಂತ್ ಮತ್ತಿತರರು ಭಾಗಿಯಾಗಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ: ಕೆಲವು ತಿಂಗಳುಗಳಿಂದ ಧಾರಕಾರವಾಗಿ ಸುರಿದ ಮಳೆಯಿಂದಾಗಿ ರೈತರ ಜೀವನಾಡಿ ಆಗಿರುವ ವಾಣಿ ವಿಲಾಸ ಸಾಗರ ಕೋಡಿ ಬಿದ್ದಿದೆ. ಸಾಗರ ಕೋಡಿ ಹರಿದಿರುವುದು ಒಂದೆಡೆ ಜನರಿಗೆ ಸಂತಸ ತಂದಿದ್ದರೆ, ಮತ್ತೊಂದೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ಜಮೀನು ಜಲಾವೃತವಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರಿಗೆ ತೀವ್ರ ಸಮಸ್ಯೆ ಸೃಷ್ಠಿಯಾಗಿದೆ. ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ಗುಡಿಹಳ್ಳಿ ಹಾಗೂ ಗೌನಹಳ್ಳಿಯಲ್ಲಿ ವಿಪರೀತ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ಇಂದು ಜಲಾವೃತ್ತವಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಯಾದ ಸಿದ್ದೇಶ್ ಜಿ ಹಾಗೂ ತಾಲ್ಲೂಕು ತಹಶೀಲ್ದಾರರಾದ ಪ್ರಶಾಂತ ಕೆ.ಪಾಟೀಲ ಅವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಒಟ್ಟು ಮೂವತ್ತು ಏಕರೆಯುಳ್ಳ , ತೆಂಗು ಬಾಳೆ ಮತ್ತು ಅಡಿಕೆ ಬೆಳೆಗಳು ಮಳೆಯಿಂದಾಗಿ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದ್ದು, ರೈತರಿಗೆ ನಷ್ಟವಾಗಿದೆ. ಬೆಳೆ ಹಾನಿಯಾದ ಸಂತ್ರಸ್ಥ ರೈತರ ಕುಟುಂಬಗಳಿಗೆ ಸರ್ಕಾರದಿಂದ ಅತಿ ಶೀಘ್ರದಲ್ಲೇ ಪರಿಹಾರ ಒದಗಿಸಿಕೊಡುವುದಾಗಿ ತಾಲ್ಲೂಕು ತಹಶೀಲ್ದಾರರಾದ ಪ್ರಶಾಂತ ಕೆ. ಪಾಟೀಲ ತಿಳಿಸಿದ್ದಾರೆ. ವರದಿ:…
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಸೂರ್ಯನ ಸುತ್ತ ಆವರಿಸಿದ ಸೂರ್ಯನ ಕಕ್ಷೆಯ ದೃಶ್ಯವು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿತು. ಸೂರ್ಯನ ಸುತ್ತ ಆವರಿಸಿದ ಕಕ್ಷೆಯನ್ನು ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿ ಅಚ್ಚರಿ ವ್ಯಕ್ತಪಡಿಸಿದರು. ಭೂಮಿಯಲ್ಲಿ ವಾತಾವರಣದ ತೇವಾಂಶವು ಹೆಚ್ಚಾದಾಗ ಸೂರ್ಯನ ಸುತ್ತ ಕಾಮನ ಬಿಲ್ಲು ಸೃಷ್ಟಿಯಾಗುತ್ತದೆ. ಈ ದೃಶ್ಯ ನಯನ ಮನೋಹರವಾಗಿರುತ್ತದೆ. ಈ ರೀತಿಯ ದೃಶ್ಯವು ಮುಂದಿನ ದಿನಗಳಲ್ಲಿ ವಿಪರೀತವಾದ ಮಳೆ ರಾಯನ ಆರ್ಭಟ ಜೋರಾಗಲಿದೆ ಎಂಬುದಾಗಿ ಸೂಚಿಸುತ್ತದೆ ಎಂದು ಹೇಳಲಾಗಿದೆ. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ: ಬುದ್ಧ, ಬಸವ, ಅಂಬೇಡ್ಕರ್, ಏಸುಕ್ರಿಸ್ತ ಮುಂತಾದ ಮಹನೀಯರು ಜಗತ್ತಿಗೆ ಶಾಂತಿ, ಪ್ರೀತಿ, ವಾತ್ಸಲ್ಯಗಳ ಮೂಲಕ ನಾವೆಲ್ಲರೂ ಭಾರತೀಯ ಮಕ್ಕಳು ಎಂದು ತೋರಿಸಿಕೊಟ್ಟಿದ್ದಾರೆ. ಇಂದು ಈ ಎಲ್ಲ ಮಹನೀಯರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನಕ್ಕೆ ಒಂದು ಅರ್ಥ ಸಿಗಲಿದೆ ಎಂದು ಬೆಳಗಾವಿ ಗ್ರಾಮಿಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಗಣೇಶಪುರ ಶಿವಂ ನಗರದಲ್ಲಿರುವ ಸೆಂಟ್ ಜಾನ್ ಬಾಪ್ಟಿಸ್ಟ್ ಚರ್ಚ್ ಸುತ್ತಮುತ್ತಲಿನ ರಸ್ತೆಗಳನ್ನು ನಿರ್ಮಾಣ ಮಾಡಿಕೊಟ್ಟ ಹಿನ್ನಲೆಯಲ್ಲಿ ಚರ್ಚಿನ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಭಾನುವಾರ ಮಾತನಾಡಿದರು. ದೇವನೊಬ್ಬ ನಾಮ ಹಲವು ಎನ್ನುವ ಹಾಗೆ, ವಿವಿಧ ಧರ್ಮೀಯರು ತಮ್ಮದೇ ಆದ ಪದ್ಧತಿಯಲ್ಲಿ ದೇವರನ್ನು ಸ್ಮರಿಸುತ್ತಾರೆ. ಆದರೆ ಎಲ್ಲ ಧರ್ಮಗಳ ಸಾರವೂ ಒಂದೇ ಆಗಿದ್ದು ಸರ್ವ ಧರ್ಮಗಳನ್ನು ಗೌರವಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು. ಇದೇ ವೇಳೆ ಚರ್ಚ್ ವತಿಯಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ…
ಚಿತ್ರದುರ್ಗ : ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಲಿದ್ದು, ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಮುರುಘಾ ಶರಣರ ಪೊಲೀಸ್ ಕಸ್ಟಡಿ ಬೆಳಗ್ಗೆ 11 ಗಂಟೆಗೆ ಅಂತ್ಯವಾಗಲಿದ್ದು, ತನಿಖಾಧಿಕಾರಿಗಳು ಶರಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗೆ ಮತ್ತೊಂದಿಷ್ಟು ಕಾಲಾವಕಾಶ ಬೇಕು ಅನಿಸಿದರೆ ಮತ್ತೆ ವಶಕ್ಕೆ ಪಡೆಯಲಿದ್ದಾರೆ. ಮುರುಘಾಶ್ರೀಗಳ ನಿರೀಕ್ಷಣಾ ಜಾಮೀನು ವಜಾ ಆಗಿರುವುದರಿಂದ ಸೋಮವಾರ ಮಠದ ವಕೀಲರು ರೆಗ್ಯೂಲರ್ ಬೇಲ್ ಗಾಗಿ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ವಿನಾಯಕ ಹೋರಕೇರಿ (28) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಹಲ್ಲೆ ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶನಿವಾರವಷ್ಟೇ ಯುವಕ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಎಂದು ತಿಳಿದುಬಂದಿದೆ. ಇನ್ನು ಕಳೆದ ವರ್ಷ ಸತೀಶ್ ಜಾರಕಿಹೊಳಿ ಆಪ್ತರೊಬ್ಬರ ಮೇಲೆ ಕೊಲೆಯಾದ ಯುವಕ ನಾಡಪಿಸ್ತೂಲಿನಿಂದ ಫೈರಿಂಗ್ ಮಾಡಿ ಪರಾರಿಯಾಗಿದ್ದನಂತೆ. ಇದಾಗಿ ಕೆಲ ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಯಮಕನಮರಡಿ ಪಿಎಸ್ಐ ಬಿ.ವಿ.ನಾಮ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲಗಾ ಗ್ರಾಮದ ಶ್ರೀ 1008 ಪಾರ್ಶ್ವನಾಥ ದಿಗಂಬರ ಜೈನ ಬಸದಿಯ 108 ಶ್ರೀ ಬಾಲಾಚಾರ್ಯ ಸಿದ್ಧಸೇನ ಮುನಿ ಮಹಾರಾಜರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ದಶಲಕ್ಷಣ ನೊಂಪಿ ಪರ್ವ 2022 ರ ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಹಲಗಾ ಗ್ರಾಮದಲ್ಲಿ ಈ ದಶಲಕ್ಷಣ ನೊಂಪಿ ಕಾರ್ಯಕ್ರಮ ಹದಿನಾರು ದಿನಗಳ ಕಾಲ ಜರುಗಲಿದ್ದು, ಹಲವಾರು ಮಹಿಳೆಯರು ಮಡಿವಂತರಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುಖೇನ ಆತ್ಮಶುದ್ಧಿಗಾಗಿ, ನಾಡಿನ ಏಳ್ಗೆಗಾಗಿ, ದೇಶದ ಐಕ್ಯತೆಗಾಗಿ, ನಾಡಿನಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ಸದಾಕಾಲವೂ ನೆಲೆಸಲಿ ಎಂದು ಪ್ರಾರ್ಥಿಸುತ್ತಾರೆ. ಇಂತಹ ಭಕ್ತಿಪೂರ್ವಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಖುಷಿ ಎನಿಸುತ್ತಿದೆ. ಸಮಾಜವನ್ನು ಸನ್ಮಾರ್ಗದಲ್ಲಿ ಮುನ್ನಡೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿ. ಅಹಿಂಸೆ ಸೇರಿದಂತೆ ಜೈನ ಧರ್ಮದ ಎಲ್ಲ ತತ್ವಗಳು ಇಡೀ ಸಮಾಜಕ್ಕೆ ಆದರ್ಶವಾಗಿವೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಚಾರುಕೀರ್ತಿ ಸೈಬಣ್ಣವರ, ಮಹಾವೀರ ಪಾಟೀಲ, ಧನ್ಯಕುಮಾರ ದೇಸಾಯಿ, ಸುಕುಮಾರ…
ನಗರದಲ್ಲಿ ಮಳೆ ಬಂದರೆ ವಿದ್ಯುತ್ ವ್ಯವಸ್ಥೆ ಸಹ ಕೈ ಕೊಡುತ್ತದೆ. ಅದರಲ್ಲೂ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡರೆ ಜನರು ಬೆಸ್ಕಾಂ ಸಂಪರ್ಕಿಸಬೇಕಾಗುತ್ತದೆ. ಬೆಸ್ಕಾಂ ಜನರ ಉಪಯೋಗಕ್ಕಾಗಿ ವಾಟ್ಸಪ್ ಸಹಾಯವಾಣಿಯನ್ನು ಆರಂಭಿಸಿದೆ. ಒಂದು ವೇಳೆ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಬ್ಯುಸಿ ಇದ್ದರೆ ಜನರು ವಾಟ್ಸಪ್ ಮೂಲಕವೂ ದೂರು ನೀಡಬಹುದು. ಉಳಿದರಂತೆ ಸಂಪರ್ಕ ಸಂಖ್ಯೆಗಳು ದಕ್ಷಿಣ ವಲಯ 82778 84011, ಪಶ್ಚಿಮ ವಲಯ 82778 84012, ಪೂರ್ವ ವಲಯ 82778 84013ಮ ಉತ್ತರ ವಲಯ 82778 84014. ಮಳೆ ಸಮಸ್ಯೆ ಆದಾಗ ಸಂಪರ್ಕಿಸಲು ಜಲಮಂಡಳಿ ಸಂಪರ್ಕಿಸಲು ಪ್ರತ್ಯೇಕ ಸಹಾಯವಾಣಿ ಇಲ್ಲ. ದೂರು ನೀಡಲು ಬಳಕೆ ಮಾಡುವ 1916 ಸಂಖ್ಯೆಗೆ ಜನರು ಕರೆ ಮಾಡಬೇಕಿದೆ. ಮ್ಯಾನ್ ಹೋಲ್ ಉಕ್ಕಿ ಹರಿಯುವುದು, ಒಳಚರಂಡಿ ಸಮಸ್ಯೆ ಮುಂತಾದವುಗಳಿಗೆ ಈ ಸಂಖ್ಯೆಗೆ ಕರೆ ಮಾಡಬೇಕಿದೆ. ಬೆಂಗಳೂರಿನ ಆಡಳಿತ ನೋಡಿಕೊಳ್ಳುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಮಳೆ ಸಂದರ್ಭದಲ್ಲಿ ಸಂಪರ್ಕಿಸಬೇಕು. ಬಿಬಿಎಂಪಿ ಎಲ್ಲಾ ಸಹಾಯವಾಣಿಗಳನ್ನು ವಿಲೀನಗೊಳಿಸಿದೆ. ಈಗ ಬಿಬಿಎಂಪಿಯನ್ನು…