Subscribe to Updates
Get the latest creative news from FooBar about art, design and business.
- ಸ್ನೇಹಮಯಿ ಕೃಷ್ಣ ಯೂಟರ್ನ್: ಶಾಲಿನ್ ರಜನೀಶ್ ಗೆ ಕ್ಷಮೆಯಾಚನೆ
- ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ
- ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ
- ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
- ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ: ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
- ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
- ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
- ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
Author: admin
ತುಮಕೂರು: ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ತುಮಕೂರು ಜಿಲ್ಲಾಶಾಖೆ ವತಿಯಿಂದ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 395ನೇ ಜಯಂತ್ಯುತ್ಸವವನ್ನು ಮರಾಠ ಕ್ಷತ್ರಿಯ ಸಮಾಜ ಕಚೇರಿ ಆವರಣದಲ್ಲಿ ಆಚರಿಸಲಾಯಿತು. ಬಿಜಿಎಸ್ ವೃತ್ತದಿಂದ ಜಾನಪದ ಕಲಾತಂಡದೊಂದಿಗೆ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿಗಳು ದಿವ್ಯ ಸಾನಿಧ್ಯವಹಿಸಿದ್ದರು. ಎಸ್. ಸುರೇಶ್ ರಾವ್ ಸಾಠೆ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಜ್ಯೋತಿಗಣೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿ ವೇತನ ವಿತರಿಸಿದರು. ಟಿ.ಆರ್.ವೆಂಕಟರಾವ್ ಚವಾಣ್, ಜನಾರ್ಧನ್ ರಾವ್ ಸೋನಾಲೆ, ಶ್ರೀನಿವಾಸ್ ರಾವ್ ಸಾಳಂಕೆ, ಟಿ.ಆರ್.ಸುನೀಲ್ ಚವಾಣ್, ಟಿ.ಎಲ್.ಸುರೇಶ್ ರಾವ್ ಸೋನಾಲೆ, ಎಸ್.ಪಿ.ಚಿದಾನಂದ್, ಶ್ರೀನಿವಾಸರಾವ್ ಮಗಾರ್, ವಿಷ್ಣುವರ್ಧನ್, ಮಹಮ್ಮದ್ ಜಿಯಾವುಲ್ಲಾ, ದನಿಯಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊಪ್ಪಳ: ಗಂಗಾವತಿ ತಾಲೂಕಿನ ಮಾಜಿ ಎಂಎಲ್ ಸಿ ಹೆಚ್.ಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ಹೊರನಡೆದಿದ್ದು, ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಅಧಿಕೃತ ಮಾಹಿತಿ ಹೊರಬಿದ್ದಿದೆ. ಮಾಜಿ ಸಂಸದ ಹೆಚ್.ಜಿ ರಾಮುಲು ಅವರ ಪುತ್ರ ಹೆಚ್ ಆರ್ ಶ್ರೀನಾಥ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ರನ್ನು ಭೇಟಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ನಿಂದ ಜೆಡಿಎಸ್ ಪಕ್ಷ ಸೇರಿದ್ದ ಶ್ರೀನಾಥ್ ಇದೀಗ ಮರಳಿ ಗೂಡಿಗೆ ಕಾಲಿಟ್ಟಿದ್ದಾರೆ. ಗಂಗಾವತಿ ವಿಧಾನಸಭೆ ಟಿಕೆಟ್ ಆಕಾಂಕ್ಷಿ ಆಗಿರುವ ಶ್ರೀನಾಥ್ ಶೀಘ್ರವೇ ಕಾಂಗ್ರೆಸ್ ಮರು ಸೇರ್ಪಡೆಗೊಳ್ಳಲಿದ್ದಾರೆ. ಇನ್ನು ಶ್ರೀನಾಥ್ ಸೇರ್ಪಡೆಗೆ ಗಂಗಾವತಿ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಡಿಕೆಶಿಯನ್ನು ಶ್ರೀನಾಥ್ ಭೇಟಿ ಮಾಡಿದ ಬಳಿಕ ಅನ್ಸಾರಿಯವರಿಗೂ ಟೆನ್ಶನ್ ಶುರುವಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ಅನ್ಸಾರಿಯನ್ನು ವಿರೋಧಿಸಿ ಶ್ರೀನಾಥ್ ಜೆಡಿಎಸ್ ಪಕ್ಷಕ್ಕೆ ಸೇರಿದ್ದರು. ಇನ್ನು ಕಳೆದ ಕೆಲ ದಿನಗಳ ಹಿಂದೆ ಬಿಕೆ ಹರಿಪ್ರಸಾದ್ ಗಂಗಾವತಿಗೆ ಭೇಟಿ ನೀಡಿದ್ದು, ಆ ಸಂದರ್ಭದಲ್ಲಿ ಈ ಬಾರಿ ಹಿಂದೂಗಳಿಗೆ…
ಜುಲೈ 28 ರಿಂದ ಪ್ರಾರಂಭವಾಗುವ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತದ ಕುಸ್ತಿ ತಂಡವು 8-9 ಚಿನ್ನದ ಪದಕಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಯೋಗೇಶ್ವರ್ ದತ್ ಶುಕ್ರವಾರದಂದು ಹೇಳಿದ್ದಾರೆ. ರವಿ ದಹಿಯಾ (57 ಕೆಜಿ), ಬಜರಂಗ್ ಪುನಿಯಾ (65 ಕೆಜಿ), ನವೀನ್ (74 ಕೆಜಿ), ನವೀನ್ (74 ಕೆಜಿ) ), ದೀಪಕ್ ಪುನಿಯಾ (86 ಕೆಜಿ), ದೀಪಕ್ (97 ಕೆಜಿ) ಮತ್ತು ಮೋಹಿತ್ ದಹಿಯಾ (125 ಕೆಜಿ) ಅವರು ಈ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಇನ್ನೊಂದೆಡೆಗೆ ಮಹಿಳೆಯರ ವಿಭಾಗದಲ್ಲಿ ಪೂಜಾ ಗೆಹ್ಲೋಟ್ (50 ಕೆಜಿ), ವಿನೇಶ್ ಫೋಗಟ್ (53 ಕೆಜಿ), ಅಂಶು ಮಲಿಕ್ (57 ಕೆಜಿ), ಸಾಕ್ಷಿ ಮಲಿಕ್ (62 ಕೆಜಿ), ದಿವ್ಯಾ ಕಕ್ರನ್ (68 ಕೆಜಿ) ಮತ್ತು ಪೂಜಾ ಧಂಡಾ (76 ಕೆಜಿ) ಇದ್ದಾರೆ. ಇವೆರಲ್ಲರೂ ಈಗ ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ದೇಶವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಕುಸ್ತಿಗೆ ಕಾಮನ್ವೆಲ್ತ್ ಕ್ರೀಡಾಕೂಟವು…
ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆ ಗುಣರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ಎಂಬ ವದಂತಿ ಹರಿದಾಡ್ತಿದೆ. ಈ ಬಗ್ಗೆ ಗುಣರಂಜನ್ ಶೆಟ್ಟಿ ಕೂಡ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ಹಿರಿಯ ಪೊಲೀಸರ ಮಾಹಿತಿ ಪ್ರಕಾರ ಜೈಲಿನಲ್ಲಿ ಗುಣರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ತಯಾರಾಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಮುತ್ತಪ್ಪ ರೈ ಸಂಬಂಧಿ ಮನ್ಮಿತ್ ರೈನಿಂದ ಕೊಲೆಗೆ ಸ್ಕೆಚ್ ಎಂಬ ಸುದ್ದಿ ಹರಿದಾಡ್ತಿದೆ. ಆದರೆ ಮನ್ಮಿತ್ ರೈ ವಿದೇಶದಲ್ಲಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಇನ್ನೂ ಗುಣರಂಜನ್ ಕೊಲೆಗೆ ಸ್ಕೆಚ್ ಸಂಬಂಧಿಸಿದಂತೆ ಬಂಟ್ವಾಳದ ಮುತ್ತಪ್ಪ ರೈ ಆಪ್ತ ರಾಕೇಶ್ ಮಲ್ಲಿಯನ್ನ ಮಂಗಳೂರು ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ರಾಕೇಶ್ ಮಲ್ಲಿ ಹಾಗೂ ಮನ್ಮಿತ್ ಆಪ್ತರಾಗಿದ್ದು, ಇದೇ ವಿಚಾರಕ್ಕೆ ಪೊಲೀಸರು ಕರೆಸಿ ವಿಚಾರಣೆ ಮಾಡಿದ್ದಾರೆ. ರೈ ಬದುಕಿದ್ದಾಗ ಒಟ್ಟಿಗೆ ಇದ್ದ ರಾಕೇಶ್ ಮಲ್ಲಿ, ಮನ್ಮಿತ್ ಹಾಗೂ ಗುಣರಂಜನ್ ಶೆಟ್ಟಿ ರೈ ಸಾವಿನ ನಂತರ ದೂರಾಗಿದ್ದರು. ರೈ ಸಾವಿನ ನಂತರ ಡಾನ್ ಪಟ್ಟಕ್ಕೇರಲು, ದೊಡ್ಡ…
ಇಲ್ಲೊಬ್ಬ ವ್ಯಕ್ತಿ ದಿನಕ್ಕೆ 14ರಿಂದ 15ಕೆಜಿ ಆಹಾರ ಸೇವಿಸುತ್ತಾನಂತೆ. ಕೇಳೋದಿಕ್ಕೆ ಆಶ್ಚರ್ಯ ಆದ್ರೂ ಸತ್ಯ ಸಂಗತಿ. ಈತನ ತೂಕ ಕೇಳಿದ್ರೆ ದಂಗಾಗೋದು ನೀವು ಗ್ಯಾರಂಟಿ. ಬರೋಬ್ಬರಿ 200 ಕೆಜಿ ತೂಕ ಇರುವ ಈ ವ್ಯಕ್ತಿಗೆ ದಿನವೊಂದಕ್ಕೆ 3ಕೆಜಿ ಅನ್ನ, 4ಕೆಜಿ ರೊಟ್ಟಿ, 2 ಕೆಜಿ ಮಾಂಸ, 1.5ಕೆಜಿ ಮೀನು ಬೇಕಂತೆ. ಹೌದು, ಈ ಸುದ್ದಿ ನೋಡಿದ್ರೆ ಒಮ್ಮೆ ಶಾಕ್ ಆಗೋದು ಖಂಡಿತ. ಪ್ರತೀ ದಿನ ಮಾಂಸಾಹಾರ ಸೇವನೆ ಮಾಡುವ ಈ ವ್ಯಕ್ತಿಯ ಹೆಸರು ಮೊಹಮ್ಮದ್ ರಫೀಕ್ ಅದ್ನಾನ್. ವಯಸ್ಸು ಕೇವಲ 30 ವರ್ಷ. ಆದರೆ ಈತನ ಧಡೂತಿ ದೇಹ ಕಂಡರೆ ಎಲ್ಲರೂ ಬೆರಗಾಗೋದು ಖಂಡಿತ. ಈ ವ್ಯಕ್ತಿಗೆ ಒಂದಿಷ್ಟು ನಡೆದರೂ ಸಹ ಸುಸ್ತಾಗಿ ಏದುಸಿರು ಬಿಡಲು ಪ್ರಾರಂಭಿಸುತ್ತಾನಂತೆ. ಹೀಗಾಗಿ ಕೊಂಚ ದೂರ ನಡೆಯಬೇಕು ಎಂದರೂ ಸಹ ಬುಲೆಟ್ ಬೈಕ್ನಲ್ಲಿ ಪ್ರಯಾಣಿಸುತ್ತಾನೆ. ಅತಿಯಾದ ಆಹಾರ ಸೇವನೆಯಿಂದ ದೇಹದ ಗಾತ್ರವೂ ಹೆಚ್ಚಾಗಿದೆ. ಅಷ್ಟೇ ಅಲ್ಲದೆ, ಈತನ ಆಹಾರ ಪದ್ಧತಿ ಕಂಡ ಜನರು ಯಾವುದೇ ಕಾರ್ಯಕ್ರಮಗಳಿಗೂ…
ಜೂನ್ 21ರಂದು ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಂಚರಿಸಲಿರುವ ಪ್ರದೇಶದ ರಸ್ತೆಗಳ ಕಾಮಗಾರಿ ನಡೆಸಲಾಗುತ್ತಿದೆ. ಆದರೆ ಈ ಪ್ರಕ್ರಿಯೆಯು ಜನರಿಗೆ ಸಂಕಷ್ಟ ತಂದೊಡ್ಡಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ರಸ್ತೆ, ಎಂಜಿ ರೋಡ್, ರೈಲ್ವೆ ನಿಲ್ದಾಣದ ರಸ್ತೆ, ಮೈಸೂರು ವಿವಿಗೆ ತೆರಳುವ ಮಾರ್ಗ, ಅರಮನೆ ಸುತ್ತಲಿನ ಮಾರ್ಗಗಳನ್ನು ಕಾಮಗಾರಿ ಮಾಡಲಾಗುತ್ತಿದೆ. ಆದರೆ ಈ ಕಾಮಗಾರಿ ಪ್ರಕ್ರಿಯೆಯಿಂದಾಗಿ ವಾಹನ ಸವಾರರರು ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಜೂನ್ 20ರಂದು ಆಗಮಿಸಲಿದ್ದಾರೆ. ಆದರೆ ಇದಕ್ಕೂ ಮುನ್ನ ಕೈಗೊಂಡಿರುವ ಕಾಮಗಾರಿ ಪ್ರಕ್ರಿಯೆಯು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಬದಲಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದರೂ ಸಹ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಯೋಗ ದಿನಾಚರಣೆಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಈ…
ಬೆಂಗಳೂರು: ತಡರಾತ್ರಿಯಾದರೂ ಪಾರ್ಟಿ ನಡೆಸುತ್ತಿದ್ದ ಫೈವ್ ಸ್ಟಾರ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ನಡೆಸಿದ್ದು, ಪಾರ್ಟಿಯಲ್ಲಿ ತೊಡಗಿದ್ದ ಒಟ್ಟು 50 ಜನರನ್ನ ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ರಾಜಕೀಯ ನಾಯಕರ ಮಕ್ಕಳು ಸಹ ಪಾರ್ಟಿಯಲ್ಲಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಅನುಮಾನ ಹಿನ್ನೆಲೆ ಜಿಟಿ ಮಾಲ್ ಮುಂಭಾಗದಲ್ಲಿರುವ ಫೈವ್ ಸ್ಟಾರ್ ಹೋಟೆಲ್ ಮೇಲೆ ದಾಳಿ ನಡೆಸಲಾಗಿದೆ. ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್ ನಲ್ಲಿರುವ ಪ್ರತಿಷ್ಠಿತ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ಮಾಡಿದ್ದಾರೆ. ವಶಕ್ಕೆ ಪಡೆದಿದ್ದ 50 ಜನರ ಪೈಕಿ 35 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ್ದು, ಐವರು ಮಾದಕವಸ್ತು ಸೇವನೆ ಮಾಡಿರೋದು ದೃಢವಾಗಿದೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೇ ಪಾರ್ಟಿಯಲ್ಲಿ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಪುತ್ರ, ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಸಹ ಇರುವುದು ಖಚಿತವಾಗಿದೆ. ಈ ಪರಿಣಾಮ ಸಿದ್ಧಾಂತ್…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರು ನಗರ ಬಸ್ ನಿಲ್ದಾಣದಲ್ಲಿರುವ ಶೌಚಾಲಯ ಗಬ್ಬೆದ್ದು ನಾರುತ್ತಿದ್ದು, ಶೌಚಾಲಯದ ನೈರ್ಮಲ್ಯ ಕಾಪಾಡಲು ಕ್ರಮಕೈಗೊಳ್ಳಬೇಕಾದ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂತಹದ್ದೊಂದು ಘಟನೆ ನಡೆದಿದ್ದು, ಪ್ರಯಾಣಿಕರು ಮೂಗುಮುಚ್ವಿಕೊಂಡು ಓಡಾಡುವಂತಹ ಪರಿಸ್ಥಿತಿ ಇದೀಗ ಬಂದಿದೆ. ಹಿರಿಯೂರು ನಗರದಲ್ಲಿ ದಿನಕ್ಕೆ ಸಾವಿರಾರು ಮಂದಿ ಪ್ರಯಾಣ ಪ್ರಯಾಣ ಮಾಡುವಂತಹ ನಿಲ್ದಾಣವಾಗಿದ್ದು, ಹಿರಿಯೂರು ನಗರದ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಶೌಚಾಲಯದ ಇದೀಗ ಸರಿಯಾದ ವ್ಯವಸ್ಥೆ ಇಲ್ಲದೆ ಗಬ್ಬೆದ್ದು ಹೋಗಿದೆ. ಸಾರ್ವಜನಿಕರು ಹಾಗೂ ಪ್ರಯಾಣಿಕರು ಸಂಬಂಧ ಪಟ್ಟ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ . ಇದೇ ಸ್ಥಳದಲ್ಲಿಕಾರ್ಯ ನಿರ್ವಹಿಸುವ ಸಾರಿಗೆ ಸಂಸ್ಥೆ ಇಲಾಖೆಯ ಅಧಿಕಾರಿಗಳು , ಬಸ್ ನಿಲ್ದಾಣದ ದುಸ್ಥಿತಿ ಕಂಡೂ ಕಂಡು ಕಾಣದಂತೆ ಕಣ್ಣುಮುಚ್ಚಿ ಕುಳಿತಿದ್ದಾರೆ. ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಕೇಳುವವರು ಯಾರು? ಎನ್ನುವ ಪ್ರಶ್ನೆಗಳಿಗೆ ಇದು ಕಾರಣವಾಗಿದೆ. ಬಸ್ ನಿಲ್ದಾಣದ ಆವರಣದಲ್ಲಿರುವ ಮರವೊಂದು ಒಣಗಿ ಹೋಗಿದ್ದು, ಇದನ್ನು ಇನ್ನೂ ತೆರವುಗೊಳಿಸದೇ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲ್ಲೂಕು ಆಡಳಿತ, ಕಾರ್ಮಿಕ ಇಲಾಖೆ, ನಗರಸಭೆ , ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ , ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಇಲಾಖೆ ಮತ್ತು ಪೋಲಿಸ್ ಇಲಾಖೆ ಹಿರಿಯೂರು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥಾ ಮತ್ತು ಮಕ್ಕಳು ಮತ್ತು ಪೋಷಕರಿಗೆ ಶಿಕ್ಷಣದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹಿರಿಯೂರು ನಗರದ ಸಿವಿಲ್ ನ್ಯಾಯಾಧೀಶರು ಮತ್ತು ಜೆ ಎಮ್ ಎಫ್ ಸಿ ಹಾಗೂ ಅಧ್ಯಕ್ಷರು, ತಾಲ್ಲೂಕು ಕಾನೂನು ಸೇವಾ ಸಮಿತಿ , ಹಿರಿಯೂರು ಮೊಹಮ್ಮದ್ ಮೊಯಿನುದ್ದಿನ್ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ನಾಮ ಆತ್ಮಸಾಕ್ಷಿಯಾಗಿ ಪ್ರಮಾಣ ಮಾಡುವುದೇನೆಂದರೆ, ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಹಾಗೂ ನಿರ್ಮೂಲನೆಗೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಹದಿನಾಲ್ಕು ವರ್ಷದೊಳಗಿನ ಶಾಲೆಯಿಂದ ಹೊರಗಡೆ ಇರುವ ಯಾವುದೇ ಮಗು ಕಂಡುಬಂದರೆ, ಅವರ ಪೋಷಕರಿಗೆ ತಿಳುವಳಿಕೆ ಹೇಳಿ, ಆ ಮಗುವನ್ನು ಶಾಲೆಗೆ ಸೇರಿಸಲು ಹಾಗೂ…
ಪಾವಗಡ: ಪಾವಗಡ ಪಟ್ಟಣದ ಅಪ್ ಬಂಡೆ ಬಳಿ ಇಂದು ಹೆಲ್ಪ್ ಸೊಸೈಟಿ ವತಿಯಿಂದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಯಿತು. ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಸ್ಥಳೀಯ ಬಾಲಕರ ಪೋಷಕರೊಂದಿಗೆ ವಿಚಾರ ವಿನಮಯ ನಡೆಸಿ, ಮಕ್ಜಳನ್ನು ತಪ್ಪದೆ ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ವಿನಂತಿಸಿದರು. ಬಾಲ ಮಕ್ಕಳನ್ನು ಯಾವುದೇ ಕಾರಣಕ್ಕೂ ದುಡಿಯಲು ಪ್ರೇರಪಿಸಬೇಡಿ, ಅಂತಹ ಕೆಟ್ಟ ದುಸ್ಸಾಹಕ್ಜೆ ಕೈ ಹಾಕಿದ್ದಲ್ಲಿ, ಕಾನೂನು ರೀತ್ಯ ಅಪರಾಧವಾಗುತ್ತದೆ ಎಂದು ಅವರು ಸ್ಥಳೀಯ ನಾಗರಿಕರಿಗೆ ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ ಮಕ್ಜಳೊಂದಿಗೆ ಸಿಹಿ ಹಂಚಿ ಆತ್ಮೀಯತೆಯೊಂದಿಗೆ ಬಾಲ ಕಾರ್ಮಿಕ ವಿರೋಧಿ ದಿನ ವನ್ನು ಆಚರಿಸಿದರು. ಈ ವೇಳೆ ಸಾಗರ್,ವೀರ, ಗೌತಮ್, ಬಾಬಾ, ಸಾಯಿ ಕುಮಾರ್, ಮೋಹನ್, ಇದ್ದರು. ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz