Subscribe to Updates
Get the latest creative news from FooBar about art, design and business.
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
Author: admin
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2022-23ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸ್ನಾತಕ/ಸ್ನಾತಕೋತ್ತರ ಕೋರ್ಸ್ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ, ಎಂ.ಎ/ಎಂ.ಸಿ.ಜೆ/ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ಗಳ ಪ್ರವೇಶಾತಿಗೆ 31/10/2022 ಕಡೆಯ ದಿನಾಂಕವಾಗಿರುತ್ತದೆ. ಇತರ ಕಾಲೇಜಿನಲ್ಲಿ ಅಥವಾ Regular DV ಆಗಿ ಓದುತ್ತಿರುವ ವಿದ್ಯಾರ್ಥಿಗಳು ಮೊದಲ ವರ್ಷ ವ್ಯಾಸಂಗ ಮಾಡಿ ಕಾರಣಾಂತರಗಳಿಂದ ಓದಲು ಆಗದಿದ್ದರೆ ಅಥವಾ Regular DV ಆಗಿ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳು ಆರ್ಹತಾ ಮಾನದಂಡಗಳನ್ನು ಪೂರೈಸಿ 2ನೇ ಮತ್ತು 3ನೇ ವರ್ಷಕ್ಕೆ ಮುಕ್ತ ವಿವಿಯಲ್ಲಿ ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರೆಸಬಹುದು. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ…
ಮಧುಗಿರಿ: ಕುರಿ ಮರಿಗಳನ್ನು ನಾಯಿಗಳು ಕಚ್ಚಿ ಕೊಂದು ಹಾಕಿದ ಘಟನೆ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಗೆ ಒಳಪಡುವ ತೊಣಚಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುರಿಗಾಯಿಯಾದ ದೊಡ್ಡ ರಂಗಯ್ಯನವರಿಗೆ ಸೇರಿದ ಸುಮಾರು 14 ಕುರಿಗಳು ನಾಯಿಗಳ ದಾಳಿಗೆ ಬಲಿಯಾಗಿವೆ. ಕುರಿಗಳನ್ನೇ ನಂಬಿಕೊಂಡು ಬದುಕಿರುವ ಇವರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಈ ಭಾಗದಲ್ಲಿ ನಾಯಿ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ರೈತರಿಗೆ ಕಷ್ಟಕರವಾಗಿದೆ. ಕಷ್ಟಪಟ್ಟು ಸಾಕಿರುವ 14 ಕುರಿಗಳನ್ನು ನಾಯಿಗಳು ಕಚ್ಚಿ ಕೊಂದು ಹಾಕಿವೆ. ಸಂಕಷ್ಟದಲ್ಲಿರುವ ರೈತನಿಗೆ ಸರ್ಕಾರ ಪರಿಹಾರ ನೀಡುವ ಮೂಲಕ ರೈತರ ರಕ್ಷಣೆಗೆ ಮುಂದಾಗಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಧುಗಿರಿ: ಕವಣದಾಲ ಆದಿ ಜಂಬವ ಬಾಯ್ಸ್ ಜನಾಂಗದ ವತಿಯಿಂದ ಗಣಪತಿ ವಿಗ್ರಹ ಮೆರವಣಿಗೆ ತಾಲೂಕಿನ ದೊಡ್ಡೇರಿ ಹೋಬಳಿಯ ಕಾವಣ ದಾಲ ಗ್ರಾಮದಲ್ಲಿ ನಡೆಯಿತು. ಆದಿ ಜಾಂಬವ ಬಾಯ್ಸ್ ವತಿಯಿಂದ ಹಲವು ದಿನಗಳ ಕಾಲ ಆಯೋಜಿಸಲಾಗಿದ್ದ ಗಣೇಶೋತ್ಸವದಲ್ಲಿ ಪ್ರತಿ ದಿನವೂ ಒಂದೊಂದು ವಿಶಿಷ್ಟ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಗಮನ ಸೆಳೆಯಲಾಯಿತು. ಉತ್ಸವದಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆ ನಡೆಸಲಾಗಿತ್ತು. ಗ್ರಾಮದ ನಿವಾಸಿಗಳು ಮೆರವಣಿಗೆಯ ಮೂಲಕ ಸಾಗಿ ಕವಣದಾಲ ಕೆರೆಗೆ ಗಣೇಶನ ಮೂರ್ತಿಯನ್ನು ವಿಸರ್ಜಿಸಲಾಯಿತು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಪಟ್ಟಣ ಗ್ರಾಮ ಪಂಚಾಯತಿಗೆ ವ್ಯಾಪ್ತಿಯ ಗಾಂಧಿನಗರ ಗ್ರಾಮದ ಸಿದ್ಧರಾಜು ಎಂಬುವರ ಗುಡಿಸಿಲಿನ ಮನೆಗೆ ಬೆಂಕಿ ತಗುಲಿ ಗುಡಿಸಲು ಸುಟ್ಟ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಜುರವರ ಗುಡಿಸಲಿನ ಮನೆಗೆ ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕರಾದ ಹಂದ್ರಾಳ್ ನಾಗಭೂಷಣ್ ಭೇಟಿ ನೀಡಿ ಪರಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಗಾಂಧಿನಗರ ಗ್ರಾಮದ ದುಸ್ಥಿತಿಯನ್ನು ನೋಡಿದ ನಾನು ಮತ್ತು ನನ್ನ ಸೇಹಿತರ ತಂಡ ಈ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದೇವೆ. ತಹಶೀಲ್ದಾರ್ ರವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸ್ಥಳೀಯ ಗ್ರಾಮ ಪಂಚಾಯತ್ ವತಿಯಿಂದ ಶಾಸಕರ ವಿಶೇಷ ಅನುದಾನದ ಅಡಿ ಹೆಚ್ಚುವರಿ ಮನೆಗಳನ್ನು ನಿರಾಶ್ರಿತರಿಗೆ ಮಂಜೂರು ಮಾಡಿ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿದ್ದೇನೆ. ತಹಶೀಲ್ದಾರ್ ನಹೀದ ಜಂ ಜಂ ರವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಈಗಾಗಲೇ ಈ ಗ್ರಾಮಕ್ಕೆ ಖುದ್ದು ಭೇಟಿ…
ದೇಶದಲ್ಲಿ 5,379 ಹೊಸ ಕೊರೊನಾ ಪ್ರಕರಣಗಳು (Corona Cases in India) ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4,44,72,241 ಕ್ಕೆ ತಲುಪಿದೆ. ಈ ಪೈಕಿ 4,38,93,590 ಜನರು ವೈರಸ್ನಿಂದ ಚೇತರಿಸಿಕೊಂಡಿದ್ದಾರೆ. ಇಲ್ಲಿಯವರೆಗೆ 5,28,057 ಜನರು ಸಾವನ್ನಪ್ಪಿದ್ದಾರೆ ಮತ್ತು 50,594 ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 7094 ಜನರು ಚೇತರಿಸಿಕೊಂಡಿದ್ದಾರೆ ಮತ್ತು 16 ಜನರು ಸಾವನ್ನಪ್ಪಿದ್ದಾರೆ. ಕರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ದೈನಂದಿನ ಧನಾತ್ಮಕ ಪ್ರಮಾಣವು ಶೇಕಡಾ 1.67 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ. ಒಟ್ಟು ಪ್ರಕರಣಗಳಲ್ಲಿ 0.11 ಪ್ರತಿಶತದಷ್ಟು ಸಕ್ರಿಯವಾಗಿದೆ, ಚೇತರಿಕೆಯ ಪ್ರಮಾಣವು 98.70 ಪ್ರತಿಶತ ಮತ್ತು ಸಾವಿನ ಪ್ರಮಾಣವು 1.19 ಪ್ರತಿಶತ ಎಂದು ಅದು ಘೋಷಿಸಿತು. ದೇಶಾದ್ಯಂತ 213.91 ಕರೋನಾ ಲಸಿಕೆ ಡೋಸ್ಗಳನ್ನು ವಿತರಿಸಲಾಗಿದೆ ಎಂದು ಅದು ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭಾರತೀಯ ಜನತಾ ಪಕ್ಷ ನಗರದ ಜನರಲ್ ಸೆಕ್ರೆಟರಿ ಮುರುಗೇಂದ್ರ ಗೌಡ ಪಾಟೀಲ್ ಅವರು ಮಹಾಂತೇಶ್ ನಗರದ ಮಹಾತ್ ಭವನ್ ದಲ್ಲಿ ಆಯೋಜಿಸಿದ ಸಂಗೀತ ಮತ್ತು ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹಾಂತೇಶ್ ನಗರ್ ಗಣೇಶ್ ಉತ್ಸವ ಮಂಡಲ ಹಾಗೂ ಯಮನಾಪೊರ ಗಣೇಶ್ ಪ್ರತಿಷ್ಠಾನ ಮಂಡಳಿ ಅನ್ನಪ್ರಸಾದ ಕಾರ್ಯಕ್ರಮ ಪಾಲ್ಗೊಂಡಿದ್ದರು. ಬಳಿಕ ಗಣೇಶ್ ಉತ್ಸವ ಮಂಡಲಗಳಿಂದ ಮುರುಗೇಂದ್ರ ಗೌಡ ಪಾಟೀಲ್ ಅವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯಮನಾಪುರ್ ಗಣೇಶ್ ಪ್ರತಿಷ್ಠಾನ ಮಂಡಲ ಸದಸ್ಯರಾದ ಬಾಬು ಗಸ್ತಿ ,ಸಂಜು ಗಸ್ತಿ, ಸಿದ್ದರಾಯಿ ನಾಯಕ್, ಮತ್ತು ಮಂಡಲ ಸದಸ್ಯರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುರಕುಂದಾದಲ್ಲಿ ಬಲಭೀಮೇಶ್ವರ ಕ್ರಿಕೆಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕುರಕುಂದಾ ಪ್ರೀಮಿಯರ್ ಲೀಗ್ -02 ಸೀಜನ್ ಕ್ರಿಕೇಟ್ ಪಂದ್ಯಾವಳಿಯನ್ನು, ಬಿಜೆಪಿ ಯುವ ಮುಖಂಡರಾದ ಮಹೇಶರೆಡ್ಡಿ ಮುದ್ನಾಳ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು… “ಯುವಕರು ದುಶ್ಚಟಗಳಿಂದ ದೂರ ಇರಬೇಕು. ಉತ್ತಮ ಆರೋಗ್ಯಕ್ಕೆ ಕ್ರೀಡೆ, ವ್ಯಾಯಾಮ, ಪ್ರಾಣಾಯಾಮ ಹಾಗೂ ದೈಹಿಕ ಕಸರತ್ತು ಮಾಡಬೇಕು ಮತ್ತು ಪಾಠದ ಜೊತೆಗೆ ಕ್ರೀಡೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಒಬ್ಬೊಬ್ಬರಲ್ಲಿ ಒಂದೊಂದು ಕಲೆ, ಕ್ರೀಡಾ ಪ್ರತಿಭೆ ಇರುತ್ತದೆ. ಅದನ್ನು ವೇದಿಕೆಗಳಲ್ಲಿ ಹಾಗೂ ಆಟೋಟಗಳಲ್ಲಿ ಪ್ರದರ್ಶನ ಮಾಡಬೇಕು. ಗೆಲುವು ಮತ್ತು ಸೋಲನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡೆಗಳಲ್ಲಿ ಸೌಹಾರ್ದದಿಂದ ಭಾಗವಹಿಸಬೇಕು. ಎಲ್ಲರೂ ಶಾಲೆ, ಕಾಲೇಜುಗಳಿಗೆ ತಪ್ಪದೇ ಹಾಜರಾಗಬೇಕು. ವಿದ್ಯಾರ್ಥಿಗಳು ಅರ್ಧಕ್ಕೆ ಶಿಕ್ಷಣ ಬಿಡುತ್ತಿರುವದು ಆತಂಕಕಾರಿ ಬೆಳವಣಿಗೆ, ಉಜ್ವಲ ಭವಿಷ್ಯಕ್ಕಾಗಿ ವಿದ್ಯಾಭ್ಯಾಸದ ಅವದಿಯಲ್ಲಿ ಉತ್ತಮವಾಗಿ ಓದಿ ಎಲ್ಲರಿಗೂ ಮಾದರಿಯಾಗಬೇಕು ಎಂದು ಹೇಳಿದರು. ಬಿಜೆಪಿ ಯುವ ಮುಖಂಡರಾದ ಮಹೇಶರೆಡ್ಡಿ ಗೌಡ ಮುದ್ನಾಳ, ದಿವ್ಯ ಸಾನಿಧ್ಯವಹಿಸಿದ ಶ್ರೀ ಬಸಲಿಂಗಯ್ಯ…
ಸಾರ್ವಜನಿಕ ವಲಯದ ಜೀವ ವಿಮಾ ದೈತ್ಯ… ಭಾರತೀಯ ಜೀವ ವಿಮಾ ನಿಗಮ (Life Insurance Corporation) ಹೊಸ ಪಿಂಚಣಿ ಪ್ಲಸ್ ಯೋಜನೆಯನ್ನು (LIC Pension Plus Policy) ಪರಿಚಯಿಸಿದೆ. ಇದು ಯುನಿಟ್ ಲಿಂಕ್ಡ್, ವೈಯಕ್ತಿಕ ಪಿಂಚಣಿ ಯೋಜನೆಯಾಗಿದೆ. ಈ ಯೋಜನೆಯು ಪಾಲಿಸಿದಾರರಿಗೆ ನಿಯಮಿತ ಮತ್ತು ಶಿಸ್ತುಬದ್ಧ ಉಳಿತಾಯವನ್ನು ಮಾಡಲು ಸಹಾಯ ಮಾಡುತ್ತದೆ ಎಂದು ಎಲ್ಐಸಿ (LIC) ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಚಾಲ್ತಿಯಲ್ಲಿರುವ ನೀತಿಯ ಪ್ರಕಾರ, ಈ ಯೋಜನೆಯು ವಾರ್ಷಿಕ ಪ್ರೀಮಿಯಂನ ಶೇಕಡಾವಾರು ಪ್ರಮಾಣದಲ್ಲಿ ಖಾತರಿಪಡಿಸಿದ ಸೇರ್ಪಡೆಗಳ (ಎಲ್ಐಸಿ ಒದಗಿಸಿದ ಹೆಚ್ಚುವರಿ ಮೊತ್ತ) ಪಾವತಿಯನ್ನು ಒಳಗೊಂಡಿರುತ್ತದೆ. ನಿಯಮಿತ ಪ್ರೀಮಿಯಂ ಶ್ರೇಣಿಗಳಲ್ಲಿ 5-15.5 ಪ್ರತಿಶತ ಮತ್ತು ಏಕ ಪ್ರೀಮಿಯಂ ಪಾವತಿಗಳಲ್ಲಿ 5 ಪ್ರತಿಶತದವರೆಗೆ. ಪಾಲಿಸಿದಾರರು ಆಯ್ಕೆಮಾಡಿದ ನಿಧಿಯನ್ನು ಅವಲಂಬಿಸಿ ಘಟಕಗಳನ್ನು ಖರೀದಿಸಲು ಈ ಹಣವನ್ನು ಬಳಸಬಹುದು. ಪಾಲಿಸಿದಾರರು ನಾಲ್ಕು ರೀತಿಯ ಫಂಡ್ಗಳಲ್ಲಿ ಹೂಡಿಕೆ ಮಾಡಬಹುದು. ಆದರೆ ಇದಕ್ಕೆ ಪಾವತಿಸಿದ ಪ್ರತಿ ಪ್ರೀಮಿಯಂಗೆ ಶುಲ್ಕಗಳಿವೆ. ಐಡಿಬಿಐ ಬ್ಯಾಂಕ್ನಲ್ಲಿ (IDBI BANK) ಶೇ 60 ರಷ್ಟು…
ಇ-ಕಾಮರ್ಸ್ ದೈತ್ಯ ಸಂಸ್ಥೆಗಳಲ್ಲಿ ಒಂದಾದ ಫ್ಲಿಪ್ಕಾರ್ಟ್… ಇತ್ತೀಚೆಗೆ ಹೋಟೆಲ್ ಬುಕಿಂಗ್ ಸೇವೆಗಳನ್ನು (Hotel Booking Services) ಆರಂಭಿಸಿದೆ. ಇದಕ್ಕಾಗಿ ಫ್ಲಿಪ್ ಕಾರ್ಟ್ ಹೋಟೆಲ್ (Flipkart Hotel) ಎಂಬ ವಿಶೇಷ ಸೇವೆಯನ್ನು ಆರಂಭಿಸಿದೆ. ನೀವು 3 ಲಕ್ಷ ದೇಶೀಯ ಮತ್ತು ಅಂತಾರಾಷ್ಟ್ರೀಯ ಹೋಟೆಲ್ಗಳ ಬಗ್ಗೆ ಮಾಹಿತಿಯೊಂದಿಗೆ ಕೊಠಡಿಗಳನ್ನು ಬುಕ್ ಮಾಡಬಹುದು. ಪ್ರಸ್ತುತ ಹಬ್ಬದ ಋತುವನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಸೇವೆಗಳನ್ನು (Flipkart New Service) ಪ್ರಾರಂಭಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ (61) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಮಂಗಳವಾರ (ಸೆಪ್ಟೆಂಬರ್ 6) ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ, ‘ಉಮೇಶ ಕತ್ತಿ ಜೀ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ. ಓಂ ಶಾಂತಿ’ ಎಂದು ಸಂತಾಪ ಸೂಚಿಸಿದ್ದಾರೆ. ಉಮೇಶ್ ಕತ್ತಿ ಅವರನ್ನು ಅವರ…