Author: admin

ಆಯುರ್ವೇದದಲ್ಲಿ ಗಿಡಮೂಲಿಕೆಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಎಲ್ಲಾ ಗಿಡ ಮೂಲಿಕೆಗಳು ಸಹ ಒಂದಿಲ್ಲೊಂದು ಪ್ರಯೋಜನವನ್ನು ಹೊಂದಿರುತ್ತವೆ. ಅಂತಹ ಎಲೆಗಳಲ್ಲಿಯೇ ಒಂದು ಈ ದೊಡ್ಡಪತ್ರೆ ಎಲೆ. ಇದನ್ನು ಸಾಮಾನ್ಯವಾಗಿ ಅಜ್ವೈನ್ ಎಲೆಗಳು, ದೊಡ್ಡಿಪತ್ರೆ ಎಲೆಗಳು, ಸೆಲರಿ ಸಸ್ಯ ಎಂತಲೂ ಕರೆಯಲಾಗುತ್ತದೆ. ಈ ಎಲೆಗಳು ವಾತ-ಪಿತ್ತದಲ್ಲಿ ಪರಿಹಾರ ನೀಡುವುದಲ್ಲದೆ ಕೆಮ್ಮು ಮತ್ತು ಶೀತ, ಶ್ವಾಸಕೋಶ, ಮೂತ್ರದ ಸಮಸ್ಯೆ, ಅಲರ್ಜಿ, ತೂಕ ಹೆಚ್ಚಳದಿಂದಲ್ಲೂ ಪರಿಹಾರ ನೀಡುತ್ತದೆ ಎಂದು ಹೇಳಲಾಗುತ್ತದೆ. ದೊಡ್ಡಪತ್ರೆ ಎಲೆಗಳಲ್ಲಿರುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ… ದೊಡ್ಡಪತ್ರೆ /ಅಜ್ವೈನ್ ಎಲೆಗಳ ಪ್ರಯೋಜನಗಳು: ಅಜ್ವೈನ್ ಸಸ್ಯವು ತುಂಬಾ ಪ್ರಯೋಜನಕಾರಿಯಾಗಿದೆ. ಚಳಿಗಾಲದಲ್ಲಿ ಇದು ನಮಗೆ ವಿಶೇಷವಾಗಿ ಉಪಯುಕ್ತವಾಗಿದೆ. ಸೆಲರಿ ಸಸ್ಯವು ನೋಡಲು ಆಕರ್ಷಕವಾಗಿರುವುದು ಮಾತ್ರವಲ್ಲ, ಇದರ ಎಲೆಗಳನ್ನು ಅನೇಕ ರೀತಿಯ ಆಹಾರ ಪದಾರ್ಥಗಳನ್ನು ತಯಾರಿಸಲು ಉಪಯೋಗಿಸುತ್ತಾರೆ. ಇದನ್ನು ಅನೇಕ ದೇಶೀಯ ಔಷಧಿಗಳಲ್ಲಿಯೂ ಸಹ ಬಳಸುತ್ತಾರೆ. ವಾತದ ಸಮಸ್ಯೆ ಇರುವವರಿಗೆ ಪ್ರಯೋಜನಕಾರಿ: ನಮ್ಮ ಆಹಾರದಲ್ಲಿನ ಬದಲಾವಣೆ ಬಿಡುವಿಲ್ಲದ ಜೀವನ ಶೈಲಿಯಿಂದಾಗಿ ಹಲವರು ವಾತದ ಸಮಸ್ಯೆಯನ್ನು ಎದುರಿಸುತ್ತಿರುತ್ತಾರೆ. ಅಂತಹವರಿಗೆ ದೊಡ್ಡಪತ್ರೆ ಎಲೆಗಳ…

Read More

ಅಲ್ಲೂರಿ ಸೀತಾರಾಮ ರಾಜು ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲೆಂದು ಪ್ರಧಾನಿ ಮೋದಿ ಆಂಧ್ರಪ್ರದೇಶಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿಯವರ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಸಂಭವಿಸಬಹುದಾದ ಭಾರೀ ದುರಂತವೊಂದು ತಪ್ಪಿದೆ. ಪಂಜಾಬ್‌ನಲ್ಲಿ ನಡೆದಿದ್ದ ಭದ್ರತಾ ಲೋಪದ ಬಳಿಕ ಆಂಧ್ರಪ್ರದೇಶದ ವಿಜಯವಾಡದಲ್ಲಿ ಈ ಘಟನೆ ನಡೆದಿದೆ. ಸ್ವಾತಂತ್ರ್ಯ ಹೋರಾಟಗಾರ, ಬುಡಕಟ್ಟು ಜನಾಂಗದ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದ ಅಲ್ಲೂರಿ ಸೀತಾರಾಮ ರಾಜು ಅವರ 125ನೇ ಜನ್ಮದಿನದಂದು ಪ್ರತಿಮೆ ಅನಾವರಣ ಮಾಡಲು ಪ್ರಧಾನಿ ಮೋದಿ ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದರು. ಆದರೆ ಪ್ರಧಾನಿ ಭೇಟಿಗೆ ಕಾಂಗ್ರೆಸ್‌ ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭಲ್ಲಿ ಕಪ್ಪು ಬಲೂನ್‍ಗಳನ್ನು ಹಾರಿ ಬಿಡಲಾಗಿತ್ತು. ಬಲೂನ್‌ಗಳು ಎಲ್ಲವೂ ಆಕಾಶದಲ್ಲಿ ಹಾರುತ್ತಿದ್ದವು. ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿಸಿ ಹೊರಡಬೇಕು ಎಂದು ಹೆಲಿಕಾಪ್ಟರ್ ಹತ್ತಿದ್ದಾರೆ. ಆದರೆ ಹೆಲಿಕಾಪ್ಟರ್ ಟೇಕ್ ಆಫ್ ಆಗುತ್ತಿದ್ದಂತೆ ಪ್ರತಿಭಟನಾಕಾರರು ಹಾರಿಬಿಟ್ಟ ಬಲೂನ್ ಅಡ್ಡಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೈಲೆಟ್ ಬಹುದೊಡ್ಡ ಅಪಾಯ ತಪ್ಪಿಸಿದ್ದಾರೆ. ಪ್ರತಿಭಟನೆ ವೇಳೆ ಬಲೂನ್…

Read More

ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಮತ್ತೆ ಭೂಕಂಪ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಪೋರ್ಟ್‌ಬ್ಲೇರ್‌ನಲ್ಲಿ ಇಂದು ಬೆಳಿಗ್ಗೆ 5.57ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಪೋರ್ಟ್ ಬ್ಲೇರ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 215 ಕಿಮೀ ಇಎಸ್‌ಇ ದೂರದಲ್ಲಿ ಮುಂಜಾನೆ 5.57 ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಕೊಲ್ಲಿಯಿಂದ 44 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಭೂಕಂಪದಿಂದ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತಂತೆ ಟ್ವೀಟ್ ಮಾಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS), ಭೂಕಂಪನದ ತೀವ್ರತೆ: 5.0, ಕಾಲಮಾನ 05-07-2022 ರಂದು ಬೆಳಿಗ್ಗೆ 05:57:04 IST, ಲ್ಯಾಟ್: 10.54 ಮತ್ತು ಉದ್ದ: 94.36, ಆಳ: 44 ಕಿಮೀ , ಸ್ಥಳ: 215 ಕಿಮೀ, ಪೋರ್ಟ್‌ಬ್ಲೇರ್ ಮತ್ತು ಇಎಸ್‌ಇ ಮತ್ತು ನಿಕೋಬಾರ್ ದ್ವೀಪ, ಭಾರತ.” ಎಂದು ಮಾಹಿತಿ…

Read More

ತುಮಕೂರು: ಜಿಲ್ಲೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿ.ಎಸ್.ಪುರ ಗ್ರಾಮದಲ್ಲಿ  ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ಹಾಗೂ ಸಿ.ಎಸ್.ಪುರದ ಬ್ಲಾಕ್  ಕಾಂಗ್ರೆಸ್ ವತಿಯಿಂದ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ರವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಯುವಶಕ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮ ಬಾಣಸಂದ್ರದ ಲಕ್ಷ್ಮೀದೇವಮ್ಮ ರವರ ಪ್ರಾರ್ಥನೆಯಿಂದ ಪ್ರಾರಂಭವಾಯಿತು. ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಯುವ ಮುಖಂಡರುಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರಾಸ್ತಾವಿಕವಾಗಿ  ಯುವ ಮುಖಂಡ ನಂಜಪ್ಪ ಮಾತನಾಡಿ,  ಸ್ವಾತಂತ್ರ ನಂತರ ಹಸಿವು ಮುಕ್ತ ಭಾರತ, ಸಾಕ್ಷರ ಭಾರತ, ನಿರುದ್ಯೋಗ ಸಮಸ್ಯೆಯನ್ನು ಎದುರಿಸಿ ಶಿಕ್ಷಣ ವಂಚಿತರಿಗೆ ಶಿಕ್ಷಣ ದೊರಕಿಸಿ, ಈ ಎಲ್ಲಾ ಕಾರ್ಯಕ್ರಮಗಳು ಕೊಟ್ಟಂತ ಸರ್ಕಾರ ನಮ್ಮ ಕಾಂಗ್ರೆಸ್ ಸರ್ಕಾರ. ಆದ್ದರಿಂದ ಮುಂದಿನ ದಿನಗಳಲ್ಲಿ ನಮ್ಮ ಪಕ್ಷ  ಅಧಿಕಾರಕ್ಕೆ ಬಂದು ಉತ್ತಮ ಯೋಜನೆಗಳನ್ನು ಕೊಡುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು. ರಾಜ್ಯ ಯುವ ಕಾರ್ಯದರ್ಶಿ ಇಲ್ಲಾಯಿ ಸಿಕಂದರ್ ಮಾತನಾಡಿ, ಕೇಂದ್ರ ಸರ್ಕಾರ ಯುವಕರನ್ನ ಓಲೈಸಿ, ಇಲ್ಲಸಲ್ಲದ…

Read More

ಮಧುಗಿರಿ: ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಜಿಲ್ಲಾಮಟ್ಟದ ಶ್ರೀ ಕಣಿವೆ ಕಬ್ಬಡಿ ಸ್ಪೋರ್ಟ್ಸ್ ಆಯೋಜನೆ ಮಾಡಲಾಯಿತು.  ಈ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ 10,000 ತುಮಕೂರಿನ ‘ಎ’  ತಂಡ ಗಳಿಸಿದ್ರೆ,  ದ್ವಿತೀಯ ಬಹುಮಾನ 5,000 ದೊಡ್ಡೇರಿ ತಂಡಗಳಿಸಿತು, ತೃತೀಯ ಬಹುಮಾನ ತುಮಕೂರಿನ ಮತ್ತೊಂದು ‘ಬಿ’  ತಂಡ ಪಡೆಯಿತು, ಸಮಾಧಾನಕರ  ನಾಲ್ಕನೇ ಬಹುಮಾನ ಸೋದೇನಳ್ಳಿ ಗಳಿಸಿತು. ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಉದ್ಯಮಿ ಡಿ.ಟಿ.ವೆಂಕಟೇಶ್, ಡಿ.ಆರ್.ರಮೇಶ್, ಪ್ರಸನ್ನ ಕುಮಾರ್, ನಾಗಮಣಿ ರಂಗಸ್ವಾಮಿ, ವಕೀಲರ ಶಿವಣ್ಣ, ಡಿ.ವಿ.ಮಂಜುನಾಥ್, ದೊಡ್ಡೇರಿ ಕಣಿ ಮಯ್ಯ, ದೊಡ್ಡೇರಿ ಮಹಾಲಿಂಗಯ್ಯ, ಶಿವಣ್ಣ, ಕೆ.ಹರ್ಷವರ್ಧನ್, ಕಾಂತರಾಜ್, ಆರಾಧ್ಯ, ರಾಕೇಶ್, ಚೇತನ್, ಕಾಂತರಾಜ್,  ಗೋವಿಂದ, ಪ್ರವೀಣ್ ಇನ್ನು ಮುಂತಾದವರು ಭಾಗವಹಿಸಿದ್ದರು. ವರದಿ: ಅಬಿದ್, ಮಧುಗಿರಿ  ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ದಂಡಿನ ಶಿವರ ಹೋಬಳಿಗೆ ಸೇರಿದ ಸಂಪಿಗೆ ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೇಂದ್ರದ ಸಿಬ್ಬಂದಿ ಕೆಲಸದ ಸಮಯದಲ್ಲಿ ಸುಳ್ಳು ಕಾರಣ ಹೇಳಿ ಸಹಕಾರ ಸಂಘದ ಕೇಂದ್ರಕ್ಕೆ ಬೀಗ ಹಾಕಿ ತೆರಳಿದ ಘಟನೆ ನಡೆದಿದ್ದು, ಇದರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಹಕಾರ ಸಂಘದ ಕೇಂದ್ರದಲ್ಲಿ ಸುಮಾರು ಐದು ಜನ ಸಿಬ್ಬಂದಿ ಇದ್ದು, ಕಚೇರಿಗೆ ಸುಮಾರು 1 ಗಂಟೆಗೆ ಹಾಕಲಾದ ಬೀಗ 3 ಗಂಟೆಯವರೆಗೆ ತೆರೆಯದೇ ನಿರ್ಲಕ್ಷ್ಯ ವಹಿಸಿದ್ದಾರೆ. ಯಾರೊಬ್ಬರೂ ಕರ್ತವ್ಯದ ಸಮಯದಲ್ಲಿ ಇಲ್ಲದಿರುವುದನ್ನು ಕಂಡ ಸಾರ್ವಜನಿಕರು ಬೀಗ ಹಾಕಿರುವ ಘಟನೆ ಬಗ್ಗೆ ವಿಚಾರಿಸಿದಾಗ ಅಲ್ಲಿದ್ದ ಸಿಬ್ಬಂದಿ ಮತ್ತು ಕಾರ್ಯದರ್ಶಿಗಳು ತುರುವೇಕೆರೆ ಸಭೆಗೆ ಹೋಗಿದ್ದಾರೆ ಎಂದು ಸುಳ್ಳು ಉತ್ತರ ನೀಡಿದ್ದಾರೆನ್ನಲಾಗಿದೆ. ಈ ಬಗ್ಗೆ ಸಾರ್ವಜನಿಕರ ದೂರಿನನ್ವಯ ತುಮಕೂರಿನಿಂದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಿಬ್ಬಂದಿಯನ್ನು ಫೋನ್ ಕರೆ ಮಾಡುವ ಮೂಲಕ ಕರೆಸಿ, ಈ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಕೇಂದ್ರದ ಬೀಗವನ್ನು…

Read More

ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣಕ್ಕೆ ಗೃಹ ಸಚಿವ ಅರಗಜ್ಞಾನೇಂದ್ರ ಅವರೂ ಕಾರಣ, ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಸಿಎಂ ಬಸವರಾಜ ಬೊಮ್ಮಾಯಿ ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿದ್ದಾರೆ. ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ನಗರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರನೌಕರರ ಸಂಘ, ಹಿರಿಯೂರು ಸಮಿತಿ ಹಾಗೂ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಿರಿಯೂರು ಶಾಖೆಯ ನೇತೃತ್ವದಲ್ಲಿ ಜುಲೈ 1 ಶುಕ್ರವಾರದಿಂದ ರಾಜ್ಯಾದ್ಯಂತ ನಗರ ನೈರ್ಮಲ್ಯ, ಸ್ವಚ್ಛತೆ ಸ್ಥಗಿತಗೊಳಿಸಿ, ಹಮ್ಮಿಕೊಳ್ಳಲಾಗಿದ್ದ ಅನಿರ್ಧಿಷ್ಟಾವಧಿ ಮೂರನೇ ದಿನಕ್ಕೆ ಕಾಲಿಟ್ಟಿಟ್ಟಿದ್ದು, ಹೊರಗುತ್ತಿಗೆದಾರರಾದ ಪೌರಕಾರ್ಮಿಕರು, ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್ ಗಳು, ವಾಟರ್ ಮ್ಯಾನ್ ಗಳು ಇಂದೂ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರಸಭೆ ಕಾರ್ಯಾಲಯದ ಮಾಜಿ ಉಪಾಧ್ಯಾಕ್ಷರಾಗಿದ್ದ ಜ್ಯೋತಿಲಕ್ಷ್ಮಿ ಗೋಪಿಯಾದವ್, ನಾನು ನಗರಸಭೆಯ ಮಾಜಿ ಉಪಾಧ್ಯಕ್ಷೆಯಾಗಿ ಕೆಲಸ ಮಾಡಿದ್ದು, ಈಗಲೂ ಸಹ ಕಾರ್ಮಿಕ ವಿಭಾಗದಲ್ಲಿ ಕಾರ್ಯಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಗುತ್ತಿಗೆ ಕಾರ್ಮಿಕರು ಜೀವನ ನಡೆಸುವುದು ತುಂಬಾ ದುಸ್ತರವಾಗಿದೆ. ಇಂತಹ ಸಂದರ್ಭದಲ್ಲಿ ಗುತ್ತಿಗೆ ಆಧಾರದ ನೌಕರರನ್ನು ಖಾಯಂಗೊಳಿಸಿದರೆ, ಅವರ ಕುಟುಂಬ ಜೀವನ ನಡೆಸಲು ಅನುಕೂಲವಾಗುತ್ತದೆ ಎಂದರು. ಸರ್ಕಾರ ಇಂದು ಪೌರಕಾರ್ಮಿಕರಿಗೆ ಸಂಕಷ್ಟ ಬತ್ಯೆ 2,000…

Read More

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘದ ವತಿಯಿಂದ ನಡೆದ ಎಂಟನೇ ಅಂತರರಾಷ್ಟ್ರೀಯ ವಸ್ತು ಪ್ರದರ್ಶನದ ಸಮಾರಂಭದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹಿರಿಯ ಛಾಯಾಗ್ರಹಕರಾದ ಹಿರಿಯೂರಿನ ಸೂರ್ಯೋದಯ ಸ್ಟುಡಿಯೋ ಮಾಲಿಕರು ಹಾಗೂ ಛಾಯಾಗ್ರಾಹಕರಾದ ಹೆಚ್.ಆರ್. ಅಬ್ದುಲ್ ಅಜೀಜ್ ಹಾಗೂ ಪಾರ್ಥಸಾರಥಿ, ಗೌಸ್ ಪೀರ್ ಮತ್ತು ರಾಮಕೃಷ್ಣಪ್ಪ ಅವರ ಸೇವಾ ಮನೋಭಾವವನ್ನು ಗುರುತಿಸಿ “ಪೋಟೋ ಗ್ರಾಫಿ ಎಕ್ಸಲೆನ್ಸಿ ಅವಾರ್ಡ್” ನೀಡಿ ಸನ್ಮಾನಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹೆಚ್. ಆರ್ .ಅಬ್ದುಲ್ ಅಜೀಜ್, ಇವತ್ತು ಛಾಯಾಗ್ರಹಣ ಕ್ಷೇತ್ರ ಎಲ್ಲಾ ವಿಧದ ತಂತ್ರಜ್ಞಾನದೊಂದಿಗೆ ಅಭಿವೃದ್ಧಿಯಾಗಿದೆ. ಆದರೆ ಇಷ್ಟೊಂದು ಅಭಿವೃದ್ಧಿ ಒಮ್ಮೆಲೇ ಆಗಿಲ್ಲ ಬದಲಿಗೆ ಹಂತಹಂತವಾಗಿ ಅಭಿವೃದ್ಧಿಯಾಗಿರುವುದನ್ನು ನಾವು ಒಪ್ಪಲೇ ಬೇಕಾಗುತ್ತದೆ. ಛಾಯಾಗ್ರಹಣ ಕ್ಷೇತ್ರದ ಅಭಿವೃದ್ಧಿಯಾಗಲು ಹಲವರು ತಮ್ಮದೇ ಆದ ತಂತ್ರಜ್ಞಾನವನ್ನು ಬಳಸಿ ಹೊಸ ಪ್ರಯೋಗಗಳನ್ನು ಕೂಡ ಮಾಡಿದ್ದಾರೆ. ಅಂತಹವರ ಸಾಲಿಗೆ ಫ್ರಾನ್ಸ್ ದೇಶದ ಎಲ್.ಜೆ.ಎಂ.ಡಾಗೈರ್ ಸೇರುತ್ತಾರೆ ಎಂದರು. ಎಲ್.ಜೆ.ಎಂ.ಡಾಗೈರ್ ಅವರನ್ನು ಛಾಯಾಗ್ರಹಣದ ಪಿತಾಮಹ ಎಂದು ಕೂಡ ಕರೆಯಲಾಗುತ್ತದೆ. ವಿಶ್ವ ಛಾಯಾಗ್ರಾಹಕರ ದಿನದಂದು ಪ್ರತಿಯೊಬ್ಬರು…

Read More

ಕೊರಟಗೆರೆ: ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರೀಷ್ಠರಾದ ಹೆಚ್.ಡಿ.ದೇವೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದು ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಹೇಳಿದರು. ಕೊರಟಗೆರೆ ಪಟ್ಟಣದ ಬೈಲಾಂಜಿನೇಯ ಸ್ವಾಮಿ ಸಮುದಾಯ ಭವನದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ತಂದೆಯ ವಯಸ್ಸಿನಷ್ಟಿರುವ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಕೆ.ಎನ್.ರಾಜಣ್ಣನವರು ಹೇಳಿಕೆ ನೀಡಿರುವುದು ಖಂಡನೀಯವಾದುದ್ದು, ಇಡೀ ರಾಜ್ಯ, ರಾಷ್ಟ್ರ ದೇವೇಗೌರನ್ನು ಅಭಿಮಾನ ದಿಂದ ಪ್ರೀತಿಸುತ್ತಾರೆ ಎಂದರು. ಇಳಿವಯಸ್ಸಿನಲ್ಲೂ ದೇಶದ ರೈತರ ಬಗ್ಗೆ ಚಿಂತಿಸುವ ರಾಜಕಾರಣಿಯಾಗಿರುವ ಅವರು ನೀರಾವರಿ ವಿಚಾರದಲ್ಲಿ ಅವರು ನಡೆಸಿದ ಐತಿಹಾಸಿಕ ಹೋರಾಟಗಳು ಇತಿಹಾಸ ಪುಟಗಳಲ್ಲಿ ದಾಖಲಾಗಿದೆ ಎಂದು ತಿಳಿಸಿದರು. ರಾಗಿಗೆ ಬೆಂಬಲ ಬೆಲೆ ನೀಡುವಂತೆ ಸಂಸತ್ತಿನಲ್ಲಿ ದೇವೇಗೌಡರು ಧ್ವನಿ ಎತ್ತಿದ ಕೂಡಲೇ ಮೋದಿ ಸರ್ಕಾರ ರಾಗಿ ಬೆಳೆಗೆ ಬೆಂಬಲ ಬೆಲೆ ಪ್ರಕಟಿಸಿತು. ಇದು ದೇಶದ ರಾಜಕಾರಣದಲ್ಲಿ ದೇವೇಗೌಡರಿಗಿರುವ ಗೌರವ ಎಂದು ತಿಳಿಸಿದರು. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.…

Read More