Subscribe to Updates
Get the latest creative news from FooBar about art, design and business.
- ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ
- ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
- ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್
- ಶಿಕ್ಷಕರ ಅರ್ಹತಾ ಪರೀಕ್ಷೆ: ಅಡೆತಡೆಗಳಿಲ್ಲದೇ ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
- ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ
- ಹಣಕಾಸಿನ ವಿಚಾರಕ್ಕೆ ಮಹಿಳೆಯ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
- ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ
- ತುಮಕೂರು | ಡಿಸೆಂಬರ್ 7ರಂದು ಕನ್ನಡ ಕವಿತೆಗಳ ಗೀತ ಗಾಯನ ಕಾರ್ಯಕ್ರಮ
Author: admin
ರಾಜಾಜಿನಗರದ ಶ್ರೀ ರಾಮಮಂದಿರ ಆಟದ ಮೈದಾನದಲ್ಲಿ ಜನರು ಕುಳಿತುಕೊಳ್ಳುವ ಗ್ಯಾಲರಿ, ಟೆನ್ಸಿಲ್ ರೂಫ್, ರಕ್ಷಣಾ ಬೇಲಿ, ಹೊನಲು ಬೆಳಕು ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು 6ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಸ್.ಸುರೇಶ್ಕುಮಾರ್ ಹೇಳಿದರು. ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಆಟದ ಮೈದಾನದ ನವೀಕರಣ ಕಾಮಗಾರಿಯನ್ನು ಐದು ತಿಂಗಳಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಆಟದ ಮೈದಾನವನ್ನು ಲೋಕರ್ಪಣೆ ಮಾಡಲಾಗುವುದು ಎಂದು ಹೇಳಿದರು. ಶ್ರೀ ರಾಮಮಂದಿರ ಆಟದ ಮೈದಾನ ರಾಮಲೀಲಾ ಮೈದಾನದಷ್ಟೆ ಪ್ರಸಿದ್ಧಿ ಪಡೆದಿದೆ. ರಾಷ್ಟದ ಮಹಾನ್ ನಾಯಕರು ಶ್ರೀ ರಾಮಮಂದಿರ ಆಟದ ಮೈದಾನಕ್ಕೆ ಭೇಟಿ ನೀಡಿದ್ದಾರೆ. ಈ ಜಾಗವನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಿಗದಿತ ಅವಯಲ್ಲಿ ಕಾಮಗಾರಿಗಳನ್ನು ಪೂರ್ಣ ಗೊಳಿಸಲಾಗುವುದು ಎಂದರು. ಸಂಸದ ಪಿ.ಸಿ.ಮೋಹನ್ ಮಾತನಾಡಿ, ಶ್ರೀ ರಾಮಮಂದಿರ ಆಟದ ಮೈದಾನ ಇತಿಹಾಸವುಳ್ಳ ಕ್ರೀಡಾಂಗಣವಾಗಿದೆ. ಮಾಜಿ ಪ್ರಧಾನಿ ವಾಜಪೇಯಿ ಅವರಂತಹ ನಾಯಕರು ಈ ಆಟದ ಮೈದಾನದಲ್ಲಿ ಬಹಿರಂಗ ಸಭೆ ಮಾಡಿದ ಇತಿಹಾಸವಿದೆ. ಕ್ರೀಡಾ…
ತಿಪಟೂರು : ನಗರದ ವಿನೋದ ಚಿತ್ರಮಂದಿರದ ಪಕ್ಕದಲ್ಲಿನ ವೀರ ಆಂಜನೇಯ ದೇವಾಲಯದ ಮೇಲ್ಚಾವಣಿಯನನ್ನು ಮುರಿದು ತಡ ರಾತ್ರಿ ಕಳ್ಳತನ ಮಾಡಿರುವ ಘಟನೆ ನಡೆದಿದೆ. ದೇವಾಲಯದ ಅರ್ಚಕ ದರ್ಶನ್ ಹೇಳುವ ಪ್ರಕಾರ, ಭಾನುವಾರ ಭಕ್ತಾಧಿಗಳು ಸೇರಿ ರಾಮನವಮಿ ಆಚರಣೆಯನ್ನು ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರಿದ್ದು ಪ್ರಸಾದ, ಪಾನಕ-ಫಲಹಾರವನ್ನು ನೀಡಲಾಗಿತ್ತು. ಇಂದು ಬೆಳಿಗ್ಗೆ ಪೂಜೆಗೆ ಬಂದಾಗ ದೇವಸ್ಥಾನದ ಮೇಲ್ಛಾವಣಿಯನ್ನು ಒಡೆದುಕಳ್ಳರು ಹುಂಡಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಹುಂಡಿ ಬಿಟ್ಟರೆ ಬೇರೆ ಯಾವುದೇ ಬೆಲೆ ಬಾಳುವ ಆಭರಣಗಳು ದೇವಸ್ಥಾನದಲ್ಲಿರಲಿಲ್ಲ. ಹುಂಡಿಯಲ್ಲಿ ಸುಮಾರು 5-6 ಸಾವಿರ ನಗದು ಹಣ ಇದ್ದಿರಬಹುದು ಎಂದು ಅಂದಾಜಿಸಲಾಗಿದೆ. ಹುಂಡಿಯೂ ದೇವಾಲಯದ ಪಕ್ಕದಲ್ಲಿ ಬಿದ್ದಿದ್ದು ಕಲ್ಲಿನಿಂದ ಹೊಡೆದು ಹಣ ತೆಗೆದುಕೊಂಡು ಹೋಗಿದ್ದಾರೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಕೇಂದ್ರಸರ್ಕಾರಿ ಕಚೇರಿಗಳ ಬಹು ಕಾರ್ಯ ಸಿಬ್ಬಂದಿ (ಎಂಟಿಸಿ) ನೇಮಕಾತಿಯಲ್ಲಿ ಕನ್ನಡಿಗರಿಗೆ ವಂಚನೆಯಾಗುತ್ತಿದೆ ಎಂದು ಕನ್ನಡ ಗೆಳೆಯರ ಬಳಗ ಆರೋಪಿಸಿದೆ. ಕೋರಮಂಗಲದಲ್ಲಿರುವ ಕೇಂದ್ರೀಯ ಸದನಕ್ಕೆ ಇತ್ತೀಚೆಗೆ ಬಂದಿರುವ ಅರಣ್ಯ ಮತ್ತು ಪರಿಸರ ಇಲಾಖೆಯಲ್ಲಿ ಬಾಲಕ ಮತ್ತು ಎಂಟಿಎಸ್ (ಬಹು ಕಾರ್ಯ ಸಿಬ್ಬಂದಿ) ಹುದ್ದೆಗೆ ಬೆಂಗಳೂರಿನ ಉದ್ಯೋಗ ವಿನಿಮಯ ಕೇಂದ್ರದಿಂದ ಅಭ್ಯರ್ಥಿಗಳ ಪಟ್ಟಿಯನ್ನು ತರಿಸಿಕೊಂಡು ಆಯ್ಕೆ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಇತರೆ ಇಲಾಖೆಯವರು ಈ ನ್ಯಾಯವಾದ ಮಾರ್ಗ ಅನುಸರಿಸದೆ, ಸಿಬ್ಬಂದಿ ಆಯ್ಕೆ ಆಯೋಗದ (ಎಸ್ಎಸ್ಸಿ) ಮೂಲಕ ಆಯ್ಕೆ ಮಾಡಿ ಕನ್ನಡಿಗರಿಗೆ ಈ ಕೆಲಸ ಸಿಗದ0ತೆ ಮಾಡುತ್ತಿದ್ದಾರೆ. ವಾಸ್ತವವಾಗಿ ರೂಡಿಗತವಾಗಿ ಗುರುತಿಸುವ ಜವಾನ, ಇಲಾಖೆ ಸಹಾಯಕ ಹುದ್ದೆಯನ್ನೇ ಬಹುಕಾರ್ಯ ಸಿಬ್ಬಂದಿ (ಮಲ್ಟಿ ಟಾಸ್ಕಿಂಗ್ ಸ್ಟಾಪ್) ಎಂದು ಹೆಸರಿಸಿ, ಲಿಖಿತ ಪರೀಕ್ಷೆ ನಡೆಸುವ ಮೂಲಕ ಪ್ರತಿ ವರ್ಷ ಕನಿಷ್ಠ 500 ಕನ್ನಡಿಗರನ್ನು ಉದ್ಯೋಗ ವಂಚಿತರಾಗಿ ಮಾಡುತ್ತಿದ್ದಾರೆ. ನೀರು ತರುವುದಕ್ಕೆ, ಕಚೇರಿ ಶುಚಿಗೊಳಿಸುವುದಕ್ಕೆ ಪತ್ರ ವಿತರಣೆ ಮಾಡುವಂತಹ ಕೆಲಸಗಳಿಗೆ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಪರೀಕ್ಷೆ ನಡೆಸಿ, ಕನ್ನಡಿಗರನ್ನು ವಂಚಿಸುತ್ತಿರುವುದನ್ನು…
14 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಾಲೆಗಳಿಗೆ ಬಾಂಬ್ ಬೆದರಿಕೆ ಹುಸಿ ಎಂಬುದು ಪೊಲೀಸರ ತನಿಖೆಯಿಂದ ದೃಢಪಟ್ಟಿದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು. ಹುಸಿ ಬಾಂಬ್ ಬೆದರಿಕೆ ಕುರಿತು ಕೇಂದ್ರೀಯ ತನಿಖಾ ಸಂಸ್ಥೆಗಳು ಗಂಭೀರವಾಗಿ ತನಿಖೆ ನಡೆಸುತ್ತಿವೆ ಎಂದರು. ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಹಿಂದೂ ಸಂಘಟನೆಗಳ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ ನಡೆದಿದೆ. ಈ ಶೋಭಾಯಾತ್ರೆ ವೇಳೆ ಕರೆಂಟ್ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಹೇಳಿದರು. ಪರಪ್ಪನ ಅಗ್ರಹಾರದಲ್ಲಿ ಆರೋಪಿ ಖಾತೆಯಿಂದ ಹಣ ಪಡೆದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಖಂಡಿತವಾಗಿಯೂ ಈ ಪ್ರಕರಣವಲ್ಲಿ ಗಂಭೀರವಾಗಿ ಪರಿಗಣಿಸಿದ್ದೇವೆ. ಇದರ ಹಿಂದೆ ಯಾರೇ ಅಧಿಕಾರಿಗಳಿದ್ದರೂ ಕ್ರಮ ಕೈಗೊಳ್ಳುತ್ತೇವೆ. ಬಹಳ ದಿನಗಳಿಂದ ಇದು ನಡೆಯುತ್ತಿದೆ. ಜಾಮೀನು ತಂದು ಹಣ ಬೇಡಿಕೆ ಇಡುತ್ತಾರೆ. ಆರೋಪಿಗಳು…
ಪಾಕಿಸ್ತಾನ ರಾಜಕೀಯದಲ್ಲಿ ನಿನ್ನೆ ತಡರಾತ್ರಿವರೆಗೂ ನಡೆದ ರಾಜಕೀಯ ಐ ಡ್ರಾಮಾದಲ್ಲಿ ಇಮ್ರಾನ್ಖಾನ್ ನೇತೃತ್ವದ ಸರ್ಕಾರ ಪತನಗೊಂಡಿದೆ. ಈ ಹಿನ್ನೆಲೆಯಲ್ಲಿ ಹೊಸ ನಾಯಕನ ಪ್ರಕ್ರಿಯೆ ಚುರುಕುಗೊಂಡಿದೆ. ಶಹಬಾಜ್ ಶರೀಫ್ ಪಾಕಿಸ್ತಾನದ ನೂತನ ಪ್ರಧಾನಮಂತ್ರಿಯಾಗಲು ಇದೀಗ ವೇದಿಕೆಕೆ ಸಜ್ಜುಗೊಂಡಿದೆ. ಮೂರುವರೆ ವರ್ಷಗಳ ಕಾಲ ಪಾಕ್ ಪ್ರಧಾನಿಯಾಗಿದ್ದ ಮಾಜಿ ಕ್ರಿಕೆಟಿಗ ಹಾಗೂ ಇಮ್ರಾನ್ಖಾನ್ ವಿರುದ್ಧ ಪಾಕ್ ಅಸೆಂಬ್ಲಿಯಲ್ಲಿ ವಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯ ಮಂಡನೆಯಲ್ಲಿ ಸೋಲನುಭವಿಸಿ ಪದಚ್ಯುತಗೊಂಡಿದ್ದಾರೆ. 342 ಸದಸ್ಯ ಬಲದ ಸಂಸತ್ ನಲ್ಲಿ ಅವಿಶ್ವಾಸ ನಿರ್ಣಯ ಪರವಾಗಿ ಚಲಾವಣೆಗೊಂಡವು. ಇದರೊಂದಿಗೆ ಇಮ್ರಾನ್ ಖಾನ್ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳ್ಳಬೇಕಾಯಿತು. ಪಾಕಿಸ್ತಾನದ ಅಸೆಂಬ್ಲಿಯಲ್ಲಿ ನಾಳೆ ಹೊಸ ನಾಯಕರ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಹೊಸದಾಗಿ ಪಾಕಿಸ್ತಾನ ಸಂಸತ್ತು ಸಮಾವೇಶಗೊಂಡು ಪ್ರತಿಪಕ್ಷ ನಾಯಕ ಶಹಬಾಜ್ ಶರೀಫ್ ನೇತೃತ್ವದಲ್ಲಿ ನೂತನ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ಶಹಬಾಜ್ ಶರೀಫ್ ಪಾಕಿಸ್ತಾನದಿಂದ ಹೊರಗೆ, ಬೇರೆ ದೇಶಗಳಿಗೆ ಅಷ್ಟಾಗಿ ಪರಿಚಿತರಲ್ಲ. ಪಾಕಿಸ್ತಾನದಲ್ಲಿ ದಕ್ಷ ಅಧಿಕಾರಿಯಾಗಿ ಹೆಸರು ಮಾಡಿದ್ದಾರೆ. ಮೂರು ಬಾರಿ…
ಕೆ.ಆರ್. ಪುರ: ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕೆ.ಆರ್.ಪುರದ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು, ಪ್ರತಿನಿತ್ಯ ಮೂಲಭೂತ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಜನ ಜೀವನ ಕಷ್ಟಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ನಡುವೆ ಬೆಲೆ ಏರಿಕೆ ಬಡವರ ಮೇಲೆ ಬರೆ ಎಳೆದಂತಾಗಿದ್ದು, ಜೀವನ ಸಾಗಿಸುವುದು ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದೆ, ಜನವಿರೋಧಿ ಸರ್ಕಾರಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದು ನುಡಿದರು.ದಿನಬಳಕೆಯ ಸಾಮಾಗ್ರಿಗಳ ಬೆಲೆ ಗಗಕ್ಕೆರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಲೆ ಏರಿಕೆ ವಿರುದ್ಧ ಜನಸಾಮಾನ್ಯರು ನಲುಗಿದ್ದು ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನಕಾರ್ಯದರ್ಶಿ ಡಿ.ಕೆ.ಮೋಹನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್,ಅರಳಪ್ಪ, ಮಹಿಳಾ ಅಧ್ಯಕ್ಷೆ ಸಾಕಮ್ಮ, ಯುವ ಕಾಂಗ್ರೆಸ್ ಅಧ್ಯಕ್ಷ…
ದೇಶಾದ್ಯಂತ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆಯನ್ನು ನೀಡುವ ಕಾರ್ಯ ಆರಂಭವಾಗಿದ್ದರೂ ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಕಡೆ ಬೂಸ್ಟರ್ ಡೋಸ್ ಲಸಿಕೆಗೆ ಹೆಚ್ಚಿನ ಆಸಕ್ತಿ ತೋರಿಲ್ಲ. ಕೊರೊನಾ ಸೋಂಕು ಪ್ರಕರಣಗಳು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚೆರಿಕೆ ಡೋಸ್ ಪಡೆಯಲು ಜನ ಹೆಚ್ಚಿನ ಉತ್ಸಾಹ ಕಂಡು ಬಂದಿಲ್ಲ. ಲಸಿಕಾ ಕೇಂದ್ರಗಳತ್ತ ಜನ ಬೂಸ್ಟರ್ ಡೋಸ್ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿಲ್ಲ. ಕೋವಿಡ್ ನ 1 ಮತ್ತು 2ನೇ ಅಲೆ ಸಂದರ್ಭದಲ್ಲಿ ಲಸಿಕೆಗಾಗಿ ಲಸಿಕಾ ಕೇಂದ್ರಗಳಿಗೆ ಮುಗಿಬಿದ್ದು, ದಿನಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಲಸಿಕೆ ಹಾಕಿಸಿಕೊಳ್ಳುತ್ತಿದ್ದ ಜನ, ಬೂಸ್ಟರ್ ಡೋಸ್ ಲಸಿಕೆ ಬಗ್ಗೆ ಮಾತ್ರ ಅಷ್ಟೇನೂ ಉತ್ಸಾಹ ತೋರುತ್ತಿಲ್ಲ. ನೋಡೋಣ ಸರ್ಕಾರವೇ ಉಚಿತವಾಗಿ ಲಸಿಕೆ ಕೊಡಬಹುದು ಎಂಬ ನಿರೀಕ್ಷೆಯಲ್ಲಿ ಕೆಲವರಿದ್ದರೆ, ಇನ್ನೂ ಕೆಲವರು ಈಗ ಕೊರೊನಾ ಇಲ್ಲ, ಮುಂದೆ ಕೊರೊನಾ ಸೋಂಕು ಜಾಸ್ತಿಯಾದರೆ ಆಗ ಲಸಿಕೆ ಹಾಕಿಸಿಕೊಳ್ಳೋಣ ಎಂಬ ಮನಃಸ್ಥಿತಿಯಲ್ಲಿರುವುದು ಬೂಸ್ಟರ್ ಡೋಸ್ ಲಸಿಕೆಗೆ ಹೆಚ್ಚಿನ ಪ್ರತಿಕ್ರಿಯೆ ಸಿಕ್ಕಿಲ್ಲ. ಬೂಸ್ಟರ್…
ತುಮಕೂರು: ತುರುವೇಕೆರೆ ವಿಧಾನಸಭಾ ಶಾಸಕ ಮಸಾಲ ಜಯರಾಮ್ ಅವರು ತಮ್ಮ 54 ನೇ ಹುಟ್ಟು ಹಬ್ಬವನ್ನು ಬೆಂಬಲಿಗರು ಪಕ್ಷದ ಕಾರ್ಯಕರ್ತರು ಸಮ್ಮುಖದಲ್ಲಿ ಆಚರಿಸಿದರು. ತಮ್ಮ ಹುಟ್ಟೂರಿನಿಂದ ಕುಟುಂಬ ಸಮೇತ ಪ್ರಮುಖ, ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ತುರುವೇಕೆರೆಗೆ ಸಾಗುವ ಮಾರ್ಗ ಮಧ್ಯೆ ತಮ್ಮ ಬೆಂಬಲಿಗರು ಶುಭಾಶಯ ಕೋರಿದರು. ತುರುವೇಕೆರೆ ಪಟ್ಟಣದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಬಾಣಸಂದ್ರ ವೃತದಲ್ಲಿ ಸೇರಿ ಶಾಸಕರಿಗೆ ಜೈಕಾರ ಕೂಗುತ್ತ ,ಪಟಾಕಿ ,ಸಿಡಿಸಿ ಹೂಮಾಲೆ ಹಾಕಿ ಸಂಭ್ರಮಿಸಿದರು . ಬಳಿಕ ಶಾಸಕ ಮಸಾಲ ಜಯರಾಮ್ ತಮ್ಮ ,ತೋಟದ ಮನೆಯಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚಿಕೊಂಡರು. ಹುಟ್ಟು ಹಬ್ಬದ ಪ್ರಯುಕ್ತ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ವರದಿ: ಸುರೇಶ್ ಬಾಬು .ಎಂ.ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ರೈತರೊಬ್ಬರು ತನ್ನ ಜಮೀನು ತಕರಾರಿಗೆ ಸಂಬಂಧಿಸಿದಂತೆ ಸಮಸ್ಯೆ ನಿವಾರಣೆಗೆ ಸರ್ಕಾರಿ ಕಚೇರಿಗೆ ಅಲೆದಾಡಿ ಸುಸ್ತಾಗಿದ್ದು, ಕೊನೆಗೆ ಅಧಿಕಾರಿಗಳ ಕಾಲಿಗೆ ಬಿದ್ದು, ತನ್ನ ಕೆಲಸ ಬೇಗನೆ ಮಾಡಿಕೊಡಿ ಎಂದು ಗೋಗರೆದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಲ್ಲೂಕಿನ ನಾಗವಲ್ಲಿ ಮೂಲದ ಮುನಿಯಪ್ಪ ಎಂಬ ವೃದ್ಧ ರೈತ ತುಮಕೂರು ತಾಲೂಕು ಕಚೇರಿಗೆ ಅಲೆದಾಡಿ ಸುಸ್ತಾಗಿದ್ದು, ಕೊನೆಗೆ ಅಧಿಕಾರಿಗಳು ಹಾಗೂ ತಾಲೂಕು ಕಚೇರಿಯ ನೌಕರರ ನಿರ್ಲಕ್ಷ್ಯದಿಂದ ಬೇಸತ್ತು, ತಹಸೀಲ್ದಾರ್ ಕಾಲಿಗೆ ಬಿದ್ದು ಗೋಗರೆದಿದ್ದಾರೆ. ಇದುವರೆಗೂ ಯಾರೂ ಸಹ ನನ್ನ ಜಮೀನಿನ ವಿಚಾರವಾಗಿ ಸಹಾಯಕ್ಕೆ ಮುಂದಾಗಿಲ್ಲ. ನನಗೆ ನ್ಯಾಯ ಸಿಗಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಬಳಿ ತಾಲೂಕು ದಂಡಾಧಿಕಾರಿಗಳ ಕಾಲನ್ನು ಹಿಡಿದು ನ್ಯಾಯಕ್ಕಾಗಿ ಅಂಗಲಾಚಿದ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ರೈತ ಮುನಿಯಪ್ಪಗೆ ಸಂಬಂಧಿಸಿದ ಜಮೀನು ಇಲ್ಲಿದ್ದು, ಹಲವು ವರ್ಷಗಳಿಂದ ಜಮೀನಿಗೆ ಸಾಗುವಳಿ ಚೀಟಿ ಸಹ ನೀಡಲಾಗಿತ್ತು. ಅದರ ಸಂಬಂಧ ತಕರಾರು ಇದ್ದು, ಈ ವಿಚಾರವಾಗಿ ರೈತ ತಾಲೂಕು…
ತುಮಕೂರು: 161 ಅಡಿ ಎತ್ತರದ ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಯಾಗಿರುವುದು ಮುಂದಿನ ದಿನಗಳಲ್ಲಿ ಕನ್ನಡನಾಡಿಗೆ ಒಳ್ಳೆಯ ಕಾಲವಿದೆ ಎನ್ನುವುದರ ಸೂಚನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಇಂದು ಕುಣಿಗಲ್ ತಾಲ್ಲೂಕಿನ ಬಿದನಗೆರೆ ಶ್ರೀ ಬಸವೇಶ್ವರ ಮಠದ ವತಿಯಿಂದ ನಿರ್ಮಿಸಿರುವ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ರಾಮನವಮಿಯ ದಿನದಂದು ಪವಿತ್ರ ಕೆಲಸ ಕಾರ್ಯಗಳು ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದೆ. ಇಲ್ಲಿಯ ಅಭಿವೃದ್ಧಿ ಕಾರ್ಯಗಳು ಕೆಲವೇ ವರ್ಷಗಳಲ್ಲಿ ಎಷ್ಟು ದೊಡ್ಡ ಶಕ್ತಿಯಾಗಿ ಕ್ಷೇತ್ರಕ್ಕೆ ಬೆಳೆದಿದೆ ಎಂದು ತಿಳಿಯುತ್ತದೆ. ಇಲ್ಲಿನ ಭಕ್ತರ ಮನಸ್ಸು ಬಹಳ ದೊಡ್ಡದಿದೆ ಎಂದು ತಿಳಿಯುತ್ತದೆ ಎಂದರು. ಪಂಚಮುಖಿ ಆಂಜನೇಯ ಬಹಳ ವಿಶಿಷ್ಟ. ರಾಮಾಯಣದಲ್ಲಿ ವಿಶೇಷವಾದ ಸಂದರ್ಭದಲ್ಲಿ ಹನುಮನ ಅವತಾರವಿದು . ಸಂಪೂರ್ಣವಾಗಿ ಲೋಕಕಲ್ಯಾಣ ಕ್ಕಾಗಿ ಹನುಮ ಈ ಅವತಾರವನ್ನು ಎತ್ತಿದ ಎನ್ನುವುದು ತಿಳಿದ ಸಂಗತಿ. ಕನ್ನಡನಾಡಿನಲ್ಲಿ 161 ಅಡಿ ಎತ್ತರದ ಮೂರ್ತಿ ಸ್ಥಾಪನೆಯಾಗಿರುವುದು ಹನುಮನ ಇಚ್ಛೆ. ಶಿಲ್ಪಿಗಳು ಅದ್ಭುತವಾದ ಕಲಾಕೃತಿ ನಿರ್ಮಿಸಿದ್ದಾರೆ.…