Subscribe to Updates
Get the latest creative news from FooBar about art, design and business.
- ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ
- ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ
- ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ
- ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
- ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ
- ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ
- ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಎಫ್.ಡಿ.ಎ.ವಿರುದ್ಧ ಐದು ಪ್ರಕರಣ ದಾಖಲು
- ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
Author: admin
ಹಿರಿಯೂರು: ನಗರಸಭೆ ಅಧ್ಯಕ್ಷೆಯಾದ ಎಸ್ .ಶಿವರಂಜಿನಿ ಯಾದವ್, ಹಿರಿಯ ಆರೋಗ್ಯ ನಿರೀಕ್ಷಕರುಗಳಾದ ಸಂಧ್ಯಾ ಹಾಗೂ ಮೀನಾಕ್ಷಿ ಅವರು ವಾರ್ಡ್ ಪರಿಶೀಲನೆ ನಡೆಸುತ್ತಿದ್ದ ವೇಳೆ ವಾರ್ಡ್ ನಂಬರ್ 2ರಲ್ಲಿ ರಸ್ತೆ ಬದಿಯಲ್ಲಿ ಕಸ ಸುರಿದ ವ್ಯಕ್ತಿಯೋರ್ವನಿಗೆ ಸ್ವಚ್ಛತೆ ಪಾಠ ಹೇಳಿ, ಆತ ಸುರಿದ ಕಸವನ್ನು ಆತನಿಂದಲೇ, ಕಸದ ಗಾಡಿಗೆ ತುಂಬಿಸಿದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸಂಧ್ಯಾ ಅವರು, ಎಲ್ಲಾ 31 ವಾರ್ಡ್ ಗಳಲ್ಲಿಯೂ ಸ್ವಚ್ಛತಾ ಕಾರ್ಯ ಮಾಡಲು ಹೆಚ್ಚಿನ ಶ್ರಮ ವಹಿಸಲಾಗುತ್ತಿದ್ದು, ಪ್ರತಿಯೊಬ್ಬ ನಾಗರಿಕರೂ ಸ್ವಚ್ಚತೆ ಕಾಪಾಡಲು ಸ್ವಯಂ ಸಂಕಲ್ಪಮಾಡಿಕೊಳ್ಳಬೇಕಾಗಿದೆ ಎಂದರು. ಇದು ನಮ್ಮ ಹೊಣೆಗಾರಿಕೆಯಲ್ಲ ಎಂಬ ಉದಾಸೀನತೆಯ ಮನೋಭಾವದಿಂದ ಪ್ರತಿಯೊಬ್ಬ ನಾಗರಿಕರೂ ಹೊರಬಂದು, ನಮ್ಮ ಮನೆ ಹಾಗೂ ಸುತ್ತಮುತ್ತಲಿನ ವಾತಾವರಣ ಹಾಗೂ ನಾವು ನಡೆದಾಡುವ ಜಾಗವನ್ನು ನಾವೇ ಸ್ವಚ್ಛವಾಗಿಟ್ಟುಕೊಳ್ಳಬೇಕೆಂಬ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ನಾವು ಮೈಗೂಡಿಸಿಕೊಳ್ಳಬೇಕು ಎಂದರು. ಮೀನಾಕ್ಷಿ ಅವರು ಮಾತನಾಡಿ, ನಮ್ಮ ಮನೆಯ ಕಸ ಮತ್ತು ನಗರದ ಕಸವನ್ನು ಸ್ವಚ್ಛ ಮಾಡುವುದು ಕೇವಲ ನಗರಸಭೆ, ಪೌರಕಾರ್ಮಿಕರ ಕೆಲಸ…
ಇನ್ನೆರಡು ವರ್ಷದಲ್ಲಿ ಮೈಸೂರು ವಿವಿ ವ್ಯಾಪ್ತಿಗೆ ಒಳಪಡುವ ಪ್ರಾಚ್ಯ ವಸ್ತು ಸಂಗ್ರಹಾಲಯದಲ್ಲಿರುವ ತಾಳೆಗರಿ ಹಾಗೂ ಹಸ್ತಪ್ರತಿಗೆ ಡಿಜಿಟಲ್ ಸ್ಪರ್ಶ ಸಿಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯ ಮತ್ತು ದಿ ಮಿಥಿಕ್ ಸೊಸೈಟಿ ಸಹಯೋಗದೊಂದಿಗೆ ಪ್ರಾಚ್ಯವಿದ್ಯಾ ಸಂಶೋಧನಾಲಯದಲ್ಲಿ ನಡೆದ ಹಸ್ತಪ್ರತಿ ಸಂರಕ್ಷಣಾ ಮತ್ತು ಪ್ರಧೂಮೀಕರಣ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ನಮ್ಮ ಪ್ರಾಚೀನ ಪರಂಪರೆ ಹಾಗೂ ಜ್ಞಾನ ಭಂಡಾರವನ್ನು ಹಿರಿಯರು ತಾಳೆಗರಿಯಲ್ಲಿ ಸಂಗ್ರಹಿಸಿದ್ದಾರೆ. ತಾಳೆಗರಿಯಲ್ಲಿ ಸಾಧಕರ ಬಗ್ಗೆ ಮಾಹಿತಿ ಇದೆ. ಇದು ಸಂರಕ್ಷಣೆ ಆಗಬೇಕು. ಇದರ ಪ್ರಯೋಜನ ಮುಂದಿನ ಪೀಳಿಗೆಗೆ ಸಿಗಬೇಕೆಂಬ ಉದ್ದೇಶದಿಂದ ಪ್ರಾಚ್ಯವಸ್ತು ಸಂಗ್ರಹಾಲಯದಲ್ಲಿ ಡಿಜಿಟಲೀಕರಣ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಐದು ತಿಂಗಳ ಕೆಲಸ ಮುಗಿದಿದೆ. ಇನ್ನೆರಡು ವರ್ಷದಲ್ಲಿ ತಾಳೆಗರಿ ಮತ್ತು ಹಸ್ತಪ್ರತಿ ಸಂಪೂರ್ಣ ಡಿಜಿಟಲ್ ಆಗಲಿದೆ ಎಂದು ತಿಳಿಸಿದರು. ಇದೊಂದು ಅರ್ಥಪೂರ್ಣ ಕಾರ್ಯಕ್ರಮ. ಜ್ಞಾನದ ಸಂಪನ್ಮೂಲ ತಾಳೆಗರಿ. ಮೈಸೂರು ವಿವಿ ಜಗತ್ತಿಗೆ ಜ್ಞಾನದ ದಾಸೋಹ ಕೊಟ್ಟಿದೆ. ಮೈಸೂರು ವಿವಿ ಶುರುವಾಗುವ…
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.ಫ್ಲೆಕ್ಸ್ ಹಾಕುವವರು ಯಾರೇ ಆದರೂ ಸರಿ ಅನುಮತಿ ಪಡೆಯಬೇಕು. ಯಾವುದೇ ಪಕ್ಷದ ಫ್ಲೆಕ್ಸ್ ಹರಿಯುವ ಅವಶ್ಯಕತೆ ಇಲ್ಲ ಎಂದರು. ಪಿಎಫ್ ಐ ಬ್ಯಾನ್ ಎಲೆಕ್ಷನ್ ಗಿಮಿಕ್ ಎಂದ ಬಿಕೆ ಹರಿಪ್ರಸಾದ್ ಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ, ಬಿಕೆ ಹರಿಪ್ರಸಾದ್ ಗೆ ವ್ಯಾಖ್ಯಾನ ಮಾಡಲು ಬರಲ್ಲ. ಪಿಎಫ್ ಐ ಬ್ಯಾನ್ ಗೆ ಎಲ್ಲರೂ ಒತ್ತಾಯಿಸಿದ್ದರು. ಈಗ ಎಲೆಕ್ಷನ್ ಗಿಮಿಕ್ ಅಂತಿರೋದು ಎಷ್ಟು ಸರಿ…? ಎಂದು ಪ್ರಶ್ನಿಸಿದರು. ಎಸ್ ಡಿಪಿಐ ರಾಜಕೀಯ ಪಕ್ಷ ಅದಕ್ಕೆ ಬೇರೆ ಕಾನೂನಿದೆ ಎಸ್ ಡಿಪಿಐ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ತೆಗದುಕೊಂಡಿಲ್ಲ ಈ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ. ಅವರು ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು ಎಂದರು. ಈ ದೇಶದ ಪ್ರಧಾನಿ ಆರ್ ಎಸ್ ಎಸ್ ನಿಂದ ಬಂದವರು, ರಾಷ್ಷ್ರಪತಿ ಆರ್ ಎಸ್ ಎಸ್ ನಿಂದ ಬಂದವರು, ನಾವೆಲ್ಲರೂ ಆರ್ ಎಸ್ ಎಸ್ ನಿಂದ ಬಂದವರಾಗಿದ್ದೇವೆ. ಸಿದ್ದರಾಮಯ್ಯನವರು ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಯಡಿಯೂರಪ್ಪ ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು, ಸೆಪ್ಟಂಬರ್ 29: ಸ್ಥಳೀಯ ನಿವಾಸಿಗಳ ನಿರಂತರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ರಸ್ತೆಯಲ್ಲಿದ್ದ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಮೂಲಕ ಜನರ ಆತಂಕ ದೂರವಾಗಿಸಿದ್ದಾರೆ. ರಾಜಧಾನಿ ಬೆಂಗಳೂರಿನ ಮಹಾದೇವಪುರ ವ್ಯಾಪ್ತಿಯ ಬಳಗೆರೆ ಮುಖ್ಯ ರಸ್ತೆಯಲ್ಲಿಯೇ ವಿದ್ಯುತ್ ಕಂಬ ಒಂದನ್ನು ಅಳವಡಿಸಲಾಗಿತ್ತು. ನಿತ್ಯ ನೂರಾರು ವಾಹನಗಳು ಓಡಾಡುವ ಜಾಗದಲ್ಲೇ ವಿದ್ಯುತ್ ಕಂಬ ನಿಲ್ಲಿಸಲಾಗಿತ್ತು. ಇದು ರಸ್ತೆ ಅಪಘಾತ ಸೇರಿದಂತೆ ವಿವಿಧ ಗಂಡಾಂತರಗಳಿಗೆ ಆಹ್ವಾನ ನೀಡುವಂತೆ ರಸ್ತೆಯಲ್ಲೇ ಅಳವಡಿಸಲಾಗಿತ್ತು. ಈ ಸಂಬಂಧ ಬಳಗೆರೆ ಮುಖ್ಯ ರಸ್ತೆಯ ಸ್ಥಳಿಯ ನಿವಾಸಿಗಳು ವಿದ್ಯುತ್ ಪೂರೈಸುವ ಸರ್ವೀಸ್ ಲೈನ್ ಇರುವ ವಿದ್ಯುತ್ ಕಂಬವನ್ನು ರಸ್ತೆ ಮಧ್ಯೆ ನಿಲ್ಲಿಸಲಾಗಿದ್ದು, ಕೂಡಲೇ ತೆರವು ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಬಗ್ಗೆ ಬೆಸ್ಕಾಂ ನಿರ್ಲಕ್ಷ್ಯ ವಹಿಸಲಾಗಿತ್ತು ಎನ್ನಲಾಗಿದೆ. ಸಾರ್ವಜನಿಕರ ಮನವಿ ಮೇರೆಗೆ ಮಹದೇವಪುರ ಟಾಸ್ಕ್ ಫೋರ್ಸ್ ಮೊಬಿಲಿಟಿ ತಂಡವು ಕಾರ್ಯಾಚರಣೆ ನಡೆಸಿದೆ. ‘ಬಳಗೆರೆ ಮುಖ್ಯ ರಸ್ತೆಯಲ್ಲಿನ ನಿವಾಸಿಗಳ ಬಹುಬೇಡಿಕೆಯಂತೆ ವಿದ್ಯುತ್ ಕಂಬ ತೆರವುಗೊಳಿಸಲಾಗಿದೆ. ಅದಕ್ಕು ಮೊದಲು ಇಲ್ಲಿನ ಭೂ ಮಾಲೀಕರ ಜತೆಗಿನ ವ್ಯಾಜ್ಯ…
ಚಿತ್ರದುರ್ಗ, ಸೆಪ್ಟೆಂಬರ್, 29: ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಇನ್ನು ಎಂಟು ತಿಂಗಳು ಬಾಕಿ ಉಳಿದಿದೆ. ಈಗಿನಿಂದಲೇ ಟಿಕೆಟ್ ಖಾತ್ರಿ ಪಡಿಸಿಕೊಳ್ಳಲು ಟಿಕೆಟ್ ಆಕಾಂಕ್ಷಿಗಳು ಆಯಾ ಪಕ್ಷದ ವರಿಷ್ಠರ ಬೆನ್ನು ಬಿದ್ದಿದ್ದಾರೆ. 2018ರ ಜೆಡಿಎಸ್ ಪರಾಜಿತ ಅಭ್ಯರ್ಥಿ, ಕ್ಯಾಸಿನೊ ದೊರೆ ಹಾಗೂ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಸೇರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ. “ಭಾರತ್ ಜೋಡೋ” ಪಾದಯಾತ್ರೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಂಗಳವಾರ ಚಿತ್ರದುರ್ಗಕ್ಕೆ ಬಂದಿದ್ದರು. ಆಗ ಪಪ್ಪಿ ಅವರಿಗೆ ಟಿಕೆಟ್ ನೀಡುವಂತೆ ಅಭಿಮಾನಿಗಳು ಭಾವಚಿತ್ರ, ಫೋಟೋ ಹಿಡಿದು ಡಿ.ಕೆ.ಶಿವಕುಮಾರ್ ಬಳಿ ಒತ್ತಾಯಿಸಿದ್ದಾರೆ. ಈ ಬೆಳವಣಿಗೆಯನ್ನು ಗಮನಿಸಿದರೆ ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತವಾಗಿದೆ ಎನ್ನಬಹುದು. 2018ರಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಸುಮಾರು 49 ಸಾವಿರ ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ವಿರುದ್ಧ ಪರಾಭವಗೊಂಡಿದ್ದರು. 2023ಕ್ಕೆ ಚಿತ್ರದುರ್ಗ ಕ್ಷೇತ್ರ ಬಿಟ್ಟು,…
ಮೊದಲು ಕಾಂಗ್ರೆಸ್ ಪಕ್ಷವನ್ನೇ ಬ್ಯಾನ್ ಮಾಡಬೇಕು ಎಂದು ಹೇಳಿಕೆ ನೀಡಿದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಬಿ.ಕೆ ಹರಿಪ್ರಸಾದ್, ನಳೀನ್ ಕಟೀಲು ಮಂಪರು ಪರೀಕ್ಷೆ ಮಾಡಬೇಕು. ಮಂಗಳೂರಿನಲ್ಲಿ ಯಾರ ಜತೆ ಪಿಎಫ್ ಐ ಸಂಬಂಧ ಇದೆ ಎಂದು ಗೊತ್ತಾಗುತ್ತೆ. ಚುನಾವಣೆ ವೇಳೆ ಮೋದಿಗೆ ಜೀವ ಬೆದರಿಕೆ ವಿಚಾರ ಹೊರ ಬರುತ್ತೆ ಎಂದರು. ಇನ್ನು ಲೂಟಿ ರವಿಯ ಟೀಕೆಗಳಿಗೂ ನಾವು ಉತ್ತರಿಸುವ ಅಗತ್ಯವಿಲ್ಲ ಎಂದು ಬಿಕೆ ಹರಿಪ್ರಸಾದ್ ಟಾಂಗ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಈ ಬಾರಿ ಗುಮ್ಮಟನಗರಿ ವಿಜಯಪುರದಲ್ಲಿ ನಡೆಯಲಿದ್ದು, ಸಮ್ಮೇಳನದ ಲಾಂಛನವನ್ನು ಸೆ.30(ನಾಳೆ) ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅನಾವರಣ ಮಾಡಲಿದ್ದಾರೆ. ವಿಜಯಪುರದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳು, ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಚೂರಿ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ. ವಿಜಯಪುರ ಜಿಲ್ಲೆಯಾಗಿ ರೂಪುಗೊಂಡ ಮೇಲೆ ಇದೇ ಪ್ರಪ್ರಥಮ ಬಾರಿಗೆ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗುತ್ತಿದೆ. ಕಳೆದ ಬಾರಿ ಕಲಬುರಗಿಯಲ್ಲಿ ರಾಜ್ಯ ಸಮ್ಮೇಳನ ನಡೆದ ಬಳಿಕ ಮತ್ತೊಂದು ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ಅದೂ, ಗಡಿ ಜಿಲ್ಲೆಯಲ್ಲಿ ಕೆಯುಡಬ್ಲ್ಯೂಜೆ ರಾಜ್ಯ ಸಮ್ಮೇಳನ ಆಯೋಜಿಸಿರುವುದು ವಿಶೇಷ. ಆಲಮಟ್ಟಿ ಜಲಾಶಯ ಹೊಂದಿರುವ, ದ್ರಾಕ್ಷಿ ಬೀಡಾಗಿರುವ, ಗೋಳಗುಮ್ಮಟ ಖ್ಯಾತಿಯ ವಿಜಯಪುರ ನೆಲದ ಸೊಗಡನ್ನು ಒಳಗೊಂಡಂತೆ ರಾಜ್ಯ ಪತ್ರಕರ್ತರ ಸಮ್ಮೇಳನ ಲಾಂಛನವನ್ನು ಚಿತ್ರಕಲಾವಿದ ಮಂಜುನಾಥ ಮಾನೆ ಅವರು…
ನವದೆಹಲಿ, ಸೆಪ್ಟೆಂಬರ್ 29: ಅಸ್ಸಾಂನ ಧುಬ್ರಿ ಜಿಲ್ಲೆಯ ಬ್ರಹ್ಮಪುತ್ರ ನದಿಯಲ್ಲಿ ಸುಮಾರು 100 ಮಂದಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಿದೆ. ಈ ವೇಳೆ ಸರ್ಕಾರಿ ಅಧಿಕಾರಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವರು ನಾಪತ್ತೆಯಾಗಿದ್ದಾರೆ. ದೋಣಿಯಲ್ಲಿ 10 ಮೋಟರ್ಸೈಕಲ್ಗಳನ್ನು ತೆಗೆದುಕೊಂಡು ಹೋಗುತ್ತಿರುವುದೇ ಅಪಘಾತಕ್ಕೆ ಕಾರಣವಾಯಿತು ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ದೋಣಿ ಮುಳುಗಡೆ ಘಟನೆ ಕುರಿತು ತಿಳಿಯುತ್ತಿದ್ದಂತೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಸ್ಸಾಂ ಧುಬ್ರಿ ಟೌನ್ನಿಂದ ಸುಮಾರು 3 ಕಿಮೀ ದೂರದಲ್ಲಿರುವ ಅದಬರಿ ಎಂಬಲ್ಲಿನ ಸೇತುವೆಗೆ ದೋಣಿ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ, ಇದುವರೆಗೆ 15 ಜನರನ್ನು ರಕ್ಷಿಸಲಾಗಿದೆ. ಇದೇ ದೋಣಿಯಲ್ಲಿ ಶಾಲಾ ಮಕ್ಕಳೂ ಸಹ ಇದ್ದು, ಇದುವರೆಗೂ ಯಾವುದೇ ವಿದ್ಯಾರ್ಥಿಯನ್ನು ರಕ್ಷಿಸಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಧುಬ್ರಿ ಸರ್ಕಲ್ ಆಫಿಸರ್ ಸಂಜು ದಾಸ್ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳು ಸಮೀಕ್ಷೆಗಾಗಿ ದೋಣಿಯಲ್ಲಿ ಸಾಗುತ್ತಿದ್ದರು. ಭೂ ದಾಖಲೆ ಅಧಿಕಾರಿ ಮತ್ತು ಕಚೇರಿ…
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಜ್ಯೋತಿಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬೆಳಗಿಸಿದರು. ಈ ವೇಳೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕ್ರೀಡಾಜ್ಯೋತಿ ಬೆಳಗಿಸಲಾಯಿತು. ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲ್ಲಿಕ್, ಕ್ರೀಡಾ ಸಚಿವರಾದ ನಾರಾಯಣಗೌಡ ಅವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ ಎಂದರು. ರಾಜ್ಯದ ನಾನಾ ಜಿಲ್ಲೆಗಳಿಂದ ಸುಮಾರು 4500 ಕ್ರೀಡಾಪಟುಗಳು ಆಗಮಿಸಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು. ಶಾಸಕರಾದ ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಕ್ರೀಡಾಪಟುಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy