Author: admin

30 ವರ್ಷದ ಭಾರತೀಯ ಮೂಲದ ಮಹಿಳೆ ಮಂದೀಪ್ ಕೌರ್ ಮದುವೆಯ ನಂತರ ಉತ್ತಮ ಜೀವನವನ್ನು ಹುಡುಕಿಕೊಂಡು ನ್ಯೂಯಾರ್ಕ್‌ಗೆ ಹೋಗಿದ್ದರು. ಆದರೆ ತನ್ನ ಜೀವನ ಅಲ್ಲಿ ಮುಕ್ತಾಯವಾಗುತ್ತದೆ ಎಂದು ಅವರು ಭಾವಿಸಿರಲಿಲ್ಲ. ಕಳೆದ ದಿನ ವಿಡಿಯೋ ಮಾಡಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದರು. ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗಿತ್ತು. ಆದರೆ ಇದೀಗ ಮಹತ್ವದ ಮಾಹಿತಿ ಲಭಿಸಿದ್ದು, ಗಂಡು ಮಗುವಿಗೆ ಜನ್ಮ ನೀಡುವಂತೆ ಮಾನಸಿಕ ಹಿಂಸೆಯನ್ನೂ ಸಹ ಪತಿ ಆಕೆಗೆ ನೀಡುತ್ತಿದ್ದ ಎನ್ನಲಾಗಿದೆ. ಕೌರ್ ನೇಣು ಬಿಗಿದುಕೊಂಡು ತನ್ನ ಜೀವನವನ್ನು ಕೊನೆಗೊಳಿಸಿದ್ದಾಳೆ. ಆದರೆ ಪತಿ ರಂಜೋತ್ವೀರ್ ಸಿಂಗ್ ಸಂಧು ಅವರ ಕೈಯಲ್ಲಿ ಅವಳು ಎದುರಿಸಿದ ಚಿತ್ರಹಿಂಸೆಯ ನೋವಿನ ವಿವರಗಳನ್ನು ವಿವರಿಸುವ ಹೃದಯ ವಿದ್ರಾವಕ ವೀಡಿಯೊವನ್ನು ಬಿಡುಗಡೆ ಮಾಡಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ಈ ಪ್ರಕರಣ ಸಂಬಂಧ ಭಾರತ ಮತ್ತು ಅಮೆರಿಕಾದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಾಧ್ಯಮ ಸಂಸ್ಥೆ ಎಎನ್‍ಐ ಜೊತೆ ಮಾತನಾಡಿದ ಸಂತ್ರಸ್ತೆಯ ಸಹೋದರಿ ಕುಲದೀಪ್ ಕೌರ್,…

Read More

ಮೂತ್ರಪಿಂಡಗಳು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗ್ವೆ, ಕಿಡ್ನಿ ನಮಗೆ ನಮ್ಮ ದೇಹದ ಅನೇಕ ಕಾರ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ.ಆದ್ದರಿಂದ ಮೂತ್ರಪಿಂಡವನ್ನು ಆರೋಗ್ಯಕರವಾಗಿಡುವುದು ತುಂಬಾ ಮಹತ್ವದ್ದಾಗಿದೆ. ಮತ್ತೊಂದೆಡೆ, ಆರೋಗ್ಯಕರ ಆಹಾರ ಮತ್ತು ಸಾಕಷ್ಟು ನೀರು ಕುಡಿಯುವ ಮೂಲಕ ಮೂತ್ರಪಿಂಡವನ್ನು ಆರೋಗ್ಯಕರವಾಗಿರಿಸಿಕೊಳ್ಳಬಹುದು. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ಕಿಡ್ನಿ ಹಾಳಾಗುವ ಅಪಾಯ ಕಡಿಮೆಯಾಗುತ್ತದೆ. ಇನ್ನೊಂದೆಡೆ ಕಿಡ್ನಿಯನ್ನು ಆರೋಗ್ಯಕರವಾಗಿರಿಸಿಕೊಳ್ಳಲು ಕಿಡ್ನಿಯನ್ನು ಡಿಟಾಕ್ಸ್ ಮಾಡುವುದು ಕೂಡ ಮಹತ್ವದ್ದಾಗಿದೆ. ಇದಕ್ಕಾಗಿ ನಿಮ್ಮ ಆಹಾರದಲ್ಲಿ ನೀವು ಕೆಲವು ಪಾನೀಯಗಳನ್ನು ಶಾಮೀಲುಗೊಳಿಸಬೇಕು . ನಿಮ್ಮ ಕಿಡ್ನಿಯನ್ನು ನೀವು ಹೇಗೆ ಡಿಟಾಕ್ಸ್ ಮಾಡಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಕಿಡ್ನಿ ಡಿಟಾಕ್ಸ್ ಪಾನೀಯಗಳು ಸೇಬು-ವಿನೆಗರ್ ನಿಂದ ತಯಾರಿಸಿದ ಪಾನೀಯ: ಆಪಲ್ ಸೈಡರ್ ವಿನೆಗರ್‌ನಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು ಮತ್ತು ಸಿಡ್ರಿಕ್ ಆಮ್ಲವು ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಲು ಮತ್ತು ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದನ್ನು ಬಳಸಿ ಡಿಟಾಕ್ಸ್ ಪಾನೀಯವನ್ನು ತಯಾರಿಸಬಹುದು, ಇದಕ್ಕಾಗಿ ನೀವು ಒಂದು ಲೋಟ ಉಗುರುಬೆಚ್ಚಗಿನ ನೀರಿನಲ್ಲಿ ಒಂದು ಚಮಚ ಆಪಲ್ ಸೈಡರ್ ವಿನೆಗರ್…

Read More

ಸಾಗರ: ಹರ್ ಘರ್ ತಿರಂಗ ಅಭಿಯಾನಕ್ಕಾಗಿ ಸಾವಿರಕ್ಕೂ ಅಧಿಕ ರಾಷ್ಟ್ರ ಧ್ವಜ ಸಿದ್ಧವಾಗುತ್ತಿದೆ. ಇದೇ ಸಂದರ್ಬದಲ್ಲಿ ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯ್ತಿ ಕಚೇರಿಗೆ ರವಾನೆಯಾದ ಧ್ವಜವೊಂದರಲ್ಲಿನ ಅಶೋಕ ಚಕ್ರದ ಸಂಕೇತ ಧ್ವಜದ ಬದಿಗೆ ಸರಿದಿದ್ದು, ಅವಮಾನಕರವಾಗಿ ಕಂದು ಬಂದಿದೆ. ಮನೆ ಮನೆಗೆ ರಾಷ್ಟ್ರಧ್ವಜ ಹಂಚುವ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಚಾಲನೆ ನೀಡಿದ ಜನಪ್ರತಿನಿಧಿಗಳು ರಾಷ್ಟ್ರ ಧ್ವಜಗಳನ್ನು ಪ್ರದರ್ಶಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವೇಳೆ ಈ ದೋಷವನ್ನು ಗುರುತಿಸಲಾಗಿದೆ. ಧ್ವಜದ ಬಿಳಿ ಬಣ್ಣದ ಸ್ಥಳದ ಮಧ್ಯದಲ್ಲಿರಬೇಕಾದ ಅಶೋಕ ಚಕ್ರ ಪಕ್ಕದಲ್ಲಿದೆ ಎಂಬ ಆಕ್ಷೇಪದ ಮಾತುಗಳು ಕೇಳಿಬಂದಿವೆ. ಈ ಬಗ್ಗೆ ಅರಳಗೋಡು ಗ್ರಾಪಂ ಅಧ್ಯಕ್ಷ ಮೇಘರಾಜ್ ಅರೋಡಿ ಮಾತನಾಡಿ, ಧ್ವಜ ಸಂಬಂಧ ನಿರ್ದಿಷ್ಟ ನಿಯಮಗಳಿರುವ ಹಿನ್ನೆಲೆಯಲ್ಲಿ ದೋಷಪೂರಿತ ಧ್ವಜಗಳ ಬಳಕೆಯಾಗದಂತೆ ಕಟ್ಟೆಚ್ಚರ ಅಗತ್ಯ. ದೋಷಗಳಿರುವ ರಾಷ್ಟ್ರಧ್ವಜ ಬಳಕೆಯಾಗದಂತೆ ನಿಗಾ ವಹಿಸಲಾಗಿದೆ. ಸಿದ್ಧಪಡಿಸಲಾದ ಬಾವುಟಗಳಲ್ಲಿ ದೋಷಗಳಿರದಂತೆ ಪರಿಶೀಲನೆ ನಡೆಸಲಾಗುತ್ತಿದೆ. ಸೋಮವಾರ ಸಹ ಗ್ರಾಪಂ ಕಚೇರಿಯಲ್ಲಿ ಧ್ವಜಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದರು.…

Read More

ವಾಷಿಂಗ್ಟನ್: ಫ್ಲೋರಿಡಾದಲ್ಲಿರುವ ತನ್ನ ಮಾರ್-ಎ-ಲಾಗೊ ನಿವಾಸದ ಮೇಲೆ ಎಫ್‌ಬಿಐ ಏಜೆಂಟ್‌ಗಳು ಸೋಮವಾರ ದಾಳಿ ನಡೆಸಿದ್ದಾರೆಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಘೋಷಿತ ದಾಳಿ ನಡೆಸುವ ಮೂಲಕ ಎಫ್‌ಬಿಐ ಏಜೆಂಟ್‌ಗಳು ದುರ್ನಡತೆ ತೋರಿದ್ದಾರೆಂದು ಟ್ರಂಪ್ ಆರೋಪಿಸಿದ್ದಾರೆ. ಇದು ನಮ್ಮ ರಾಷ್ಟ್ರಕ್ಕೆ ಕರಾಳ ಸಮಯವಾಗಿದೆ, ಏಕೆಂದರೆ ಫ್ಲೋರಿಡಾದ ಪಾಮ್ ಬೀಚ್‌ನಲ್ಲಿರುವ ನನ್ನ ಸುಂದರ ಮಾರ್-ಎ-ಲಾಗೊ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಎಫ್‌ಬಿಐ ಏಜೆಂಟ್‌ಗಳ ದೊಡ್ಡ ಗುಂಪು ಮನೆಯನ್ನು ಆಕ್ರಮಿಸಿಕೊಂಡು ಶೋಧಕಾರ್ಯಾಚರಣೆ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷ ಹುದ್ದೆಯಲ್ಲಿದ್ದವರಿಗೆ ಈ ಹಿಂದೆ ಎಂದೂ ಇಂತಹ ಪರಿಸ್ಥಿತಿ ಬಂದಿರಲಿಲ್ಲ’ವೆಂದು ಟ್ರಂಪ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಫ್‌ಬಿಐ ದಾಳಿ ವೇಳೆ ನನ್ನ ಸುರಕ್ಷಿತ ನೆಲೆಯ ಬಾಗಿಲನ್ನು ಒಡೆದು ತೆರೆಯಲಾಗಿದೆ. ತೃತೀಯ ಜಗತ್ತಿನ ದೇಶಗಳಲ್ಲಿ ಮಾತ್ರ ಇಂತಹ ದಾಳಿ ನಡೆಯುತ್ತದೆ. ಸರ್ಕಾರಿ ತನಿಖಾ ಏಜೆನ್ಸಿಗಳೊಂದಿಗೆ ಸಹಕರಿಸಿದ ನಂತರವೂ, ನನ್ನ ಮನೆ ಮೇಲೆ ಈ ಅಘೋಷಿತ ದಾಳಿ ಅಗತ್ಯವಿರಲಿಲ್ಲ’ ಅಂತಾ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.…

Read More

ಶಿವಮೊಗ್ಗ: ತಮ್ಮ ಗ್ರಾಮಕ್ಕೆ ರಸ್ತೆ ಹಾಗೂ ವಿದ್ಯುತ್ ಸೌಲಭ್ಯ ನೀಡುವಂತೆ ಪುಟ್ಟ ಬಾಲಕಿಯೊಬ್ಬಳು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾಳೆ. ಶಿವಮೊಗ್ಗದ ಸಾಗರ ತಾಲೂಕಿನ ಕಾರ್ಗಲ್ ಬಳಿಯ ಉರುಳುಗಲ್ಲು ಗ್ರಾಮದ ಬಾಲಕಿ ಸಾನ್ವಿ ಡಿಸಿಗೆ ಮನವಿ ಮಾಡಿ ಗಮನ ಸೆಳೆದಿದ್ದಾಳೆ. ಅಂಗನವಾಡಿಗೆ ಹೋಗಿ ಬರಲು ರಸ್ತೆ ಸಂಪರ್ಕ ಕಲ್ಪಿಸುವಂತೆ 5 ವರ್ಷದ ಬಾಲಕಿ ಸಾನ್ವಿ ಮನವಿ ಮಾಡಿಕೊಂಡಿದ್ದಾಳೆ. ಶಿವಮೊಗ್ಗದ ಕುಗ್ರಾಮ ವಾಗಿರುವ ಕಾರ್ಗಲ್ ನ ಉರುಳುಗಲ್ಲುವಿನಲ್ಲಿ ರಸ್ತೆ ಸಂಪರ್ಕ ಹಾಗೂ ವಿದ್ಯುತ್ ಇಲ್ಲದೇ ಗ್ರಾಮಸ್ಥರು ಪರದಾಡುತ್ತಿದ್ದಾರೆ. ತಮ್ಮ ಗ್ರಾಮಕ್ಕೆ ರಸ್ತೆ ಹಾಗೂ ವಿದ್ಯುತ್ ಸೌಲಭ್ಯ ಕಲ್ಪಿಸುಂತೆ ಈ ಹಿಂದೆ ಸಹ ಗ್ರಾಮಸ್ಥರು ಹಲವು ಬಾರಿ ಪ್ರತಿಭಟನೆ ನಡೆಸಿದ್ದರು. ಕೆಲವು ದಿನಗಳ ಹಿಂದಷ್ಟೇ ರಸ್ತೆ ನಿರ್ಮಿಸಲು ಗ್ರಾಮಸ್ಥರೇ ಮುಂದಾಗಿದ್ದರು. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರ ಮೇಲೆ ಅರಣ್ಯ ಇಲಾಖೆಯ ಕೇಸ್ ಕೂಡ ಹಾಕಿತ್ತು. ಈ ಹಿನ್ನೆಲೆ ಕೆಲ ದಿನಗಳ ಹಿಂದೆ ಸ್ಥಳೀಯರು ಅರಣ್ಯ ಸಿಬ್ಬಂದಿ ವರ್ತನೆ ವಿರೋಧಿಸಿ ಪಾದಯಾತ್ರೆ ಕೂಡ ಮಾಡಿದ್ದರು. ಈಗ…

Read More

ತುಮಕೂರು: ಸ್ಮಾರ್ಟ್‌ಸಿಟಿ ತುಮಕೂರಲ್ಲಿ ರಸ್ತೆಗುಂಡಿಗಳೇ ಇಲ್ಲ! ಗುಂಡಿ ಮುಕ್ತ ಮಹಾನಗರ! ಹೀಗಂತ ಸ್ವತಃ ಮಹಾನಗರ ಪಾಲಿಕೆ ಘೋಷಿಸಿದೆ. ಇದು ಬರೀ ಘೋಷಣೆಯಲ್ಲ ಹೈಕೋರ್ಟ್‌ಗೆ ಸಲ್ಲಿಸಿರುವ ವರದಿ! ಆದರೆ, ಮಹಾನಗರ ಪಾಲಿಕೆ ಒಮ್ಮೆ ಬಿಡುವು ಮಾಡಿಕೊಂಡು ನಗರ ಪರ್ಯಟನೆ ಮಾಡಿದರೆ ಗುಂಡಿಗಳ ದಿಗ್ದರ್ಶನವಾಗುತ್ತದೆ. ಆದರೂ ಯಾವ ಮಾನದಂಡದಡಿ ಬಣ್ಣ-ಬಣ್ಣ ಛಾಯಾಚಿತ್ರಗಳ ಸಹಿತ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತು ಎಂಬುದು ಪ್ರಶ್ನೆ. ಮಹಾನಗರ ಪಾಲಿಕೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಯಾವುದೇ ಗುಂಡಿಗಳು ಕಂಡುಬಂದರೆ ಸಾರ್ವಜನಿಕರು ಗಮನಕ್ಕೆ ತಂದರೆ ಕೂಡಲೇ ಬಗೆಹರಿಸುವುದಾಗಿ ಪಾಲಿಕೆ ಹೇಳಿದೆ. ನಗರದ ಕುಣಿಗಲ್‌ ರಸ್ತೆ ಸೇರಿದಂತೆ ನಾನಾ ಮುಖ್ಯ ರಸ್ತೆಗಳು, ರಸ್ತೆಗಳು ಗುಂಡಿಮಯವಾಗಿವೆ. ಇದು ಪಾಲಿಕೆ ಕಣ್ಣಿಗೆ ಕಾಣದಿರುವುದು ಆಶ್ಚರ್ಯ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿಸುವ ಸಂಬಂಧ ಕದರನಹಳ್ಳಿ ತಾಂಡ್ಯದ ವಕೀಲ, ಜನಪರ ಹೋರಾಟಗಾರ ರಮೇಶ್‌ನಾಯಕ್‌. ಎಲ್‌. 2021 ನವೆಂಬರ್‌ನಲ್ಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಹೈಕೋರ್ಟ್‌ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ…

Read More

ಹಾಡಹಗಲೇ ಮನೆಯಲ್ಲಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಕಬ್ಬಿಣದ ರಾಡ್‍ನಿಂದ ಹೊಡೆದು ಕೃತ್ಯವೆಸಗಲಾಗಿದೆ. ಸಂಪತ್ ಕುಮಾರ್ (63) ಮೃತ ದುರ್ದೈವಿ. ಮನೆಗೆ ನುಗ್ಗಿ ಕೃತ್ಯವೆಸಗಿದ ಹಂತಕ ಪರಾರಿಯಾಗಿದ್ದಾನೆ. ಮೈಸೂರಿನ ಬೃಂದಾವನ ಬಡಾವಣೆಯ 1ನೆ ಹಂತದ ನಿವಾಸದಲ್ಲಿ ಘಟನೆ ನಡೆದಿದೆ. ಏಕಾಏಕಿ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಹತ್ಯೆ ಮಾಡಿದನೆಂದು ಮೃತನ ಪುತ್ರ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ರಿಯಲ್ ಎಸ್ಟೇಟ್ ಹಾಗೂ ಅಗರ್‍ಬತ್ತಿ ವಹಿವಾಟು ನಡೆಸುತ್ತಿದ್ದ ಸಂಪತ್ ಕುಮಾರ್ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪತ್ನಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. ಪತ್ನಿ ಶಾಲೆಗೆ ತೆರಳಿದ್ದ ಸಂದರ್ಭದಲ್ಲಿ ಹತ್ಯೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಭೋಪಾಲ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಹಬ್ಬದ ಜೋಶ್‌ನಲ್ಲಿ ಡಿಜೆ ಕಾರಿನ ಮೇಲ್ಭಾಗದಲ್ಲಿ ಡ್ಯಾನ್ಸ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಡಿಜೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದ ಸಮಯದಲ್ಲಿ, ಅವರು ಡಿಜೆ ಕಾರಿನ ಮೇಲೆ ನೃತ್ಯ ಮಾಡುತ್ತಿದ್ದರು. ಈ ವೇಳೆ ಹೈಟೆನ್ಷನ್ ವೈರ್‌ ತಗುಲಿ ಒಬ್ಬರ ನಂತರ ಒಬ್ಬರು ವಾಹನದಿಂದ ಕೆಳಗೆ ಬಿದ್ದಿದ್ದಾರೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಗೊಂಡವರೆಲ್ಲರೂ ಇಂದೋರ್‌ನ ಮಹಾರಾಜ ಯಶವಂತ್ ರಾವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಇಬ್ಬರು ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಡಾ.ಅಂಬೇಡ್ಕರ್‌ನಗರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್ಪಿ ಭಗವಂತ್ ಸಿಂಗ್ ತಿಳಿಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಪಶ್ಚಿಮ ಬಂಗಾಳದಲ್ಲಿ ಭೀಕರ ಅಪಘಾತವೊಂದು ತಪ್ಪಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಕಸ್ಮಿಕವಾಗಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ. ಎಲ್ಲರೂ ಅಪಾಯದಿಂದ ಪಾರಾಗಿದ್ದರಿಂದ ದೊಡ್ಡ ಅಪಘಾತ ಸ್ವಲ್ಪದರಲ್ಲೇ ತಪ್ಪಿದೆ. ಹೌರಾ ಜಿಲ್ಲೆಯ ಬಗ್ನಾನ್‌ನಲ್ಲಿ ಸೋಮವಾರ ಮುಂಜಾನೆ ಈ ಘಟನೆ ನಡೆದಿದೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ. ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 16ರಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಿಘಾಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತದ ಸಮಯದಲ್ಲಿ ಸುಮಾರು 70 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಆದರೆ, ಬಸ್ ಪಲ್ಟಿಯಾಗಲು ಕಾರಣ ತಿಳಿದುಬಂದಿಲ್ಲ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಶ್ಮಿಕಾ ಮಂದಣ್ಣ ಪ್ರಸ್ತುತ ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ತಯಾರಾಗುತ್ತಿರುವ ವಾರಿಸು ಚಿತ್ರದಲ್ಲಿ ವಿಜಯ್ ಜೊತೆ ಕೆಲಸ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮುಂಚೂಣಿ ನಾಯಕಿಯಾಗಿ ಏರಿದ್ದಾರೆ. ತೆಲುಗಿನಲ್ಲಿ ಚಿತ್ರೀಕರಣಗೊಂಡು ಹಲವು ಭಾಷೆಗಳಿಗೆ ಡಬ್ ಆಗಿದ್ದ ಪುಷ್ಪಾ ಚಿತ್ರ ರಶ್ಮಿಕಾಗೆ ಟರ್ನಿಂಗ್ ಪಾಯಿಂಟ್ ಆಗಿತ್ತು. ಸದ್ಯ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿರುವ ಸೀತಾರಾಮಂ ಚಿತ್ರದಲ್ಲಿ ರಶ್ಮಿಕಾ ಅಭಿನಯಕ್ಕೆ ಪ್ರಶಂಸೆಯೂ ಸಿಕ್ಕಿದೆ. ಹಿಂದಿಯಲ್ಲಿ ಅವರು ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ಮಿಷನ್ ಮಜ್ನು, ಅಮಿತಾಬ್ ಬಚ್ಚನ್ ಅವರೊಂದಿಗೆ ಗುಡ್ ಬೈ ಮತ್ತು ರಣಬೀರ್ ಕಪೂರ್ ಅವರೊಂದಿಗೆ ಅನಿಮಲ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹೀಗಿರುವಾಗ ರಶ್ಮಿಕಾ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ. ಪುಷ್ಪ ಚಿತ್ರದಲ್ಲಿ ನಟಿಸಲು ಈಗಾಗಲೇ 1 ಕೋಟಿ ಸಂಭಾವನೆ ಪಡೆದಿದ್ದು, ಇದೀಗ ಪುಷ್ಪ 2 ಚಿತ್ರದಲ್ಲಿ ನಟಿಸಲು 4 ಕೋಟಿ ಕೇಳುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿರುವ ಕಾರಣಕ್ಕೆ ರಶ್ಮಿಕಾ ಮಂದಣ್ಣ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ…

Read More