Author: admin

ತುಮಕೂರು: ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಶ್ರೀರಾಮನಗರ ವಾರ್ಡ್ ನಂಬರ್ ಐದು ಇವರ ಸಹಯೋಗದೊಂದಿಗೆ ನಗರದ ಶಿರಾಗೇಟ್ ನ ಡಿ.ಎಂ.ಪಾಳ್ಯ ಡಾನ್ ಬೋಸ್ಕೋ ಶಾಲಾವರಣದಲ್ಲಿ 2022 23 ನೇ ಸಾಲಿನ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಕ್ರೀಡಾಕೂಟಕ್ಕೆ ವಿವಿಧ ಗಣ್ಯರು ಚಾಲನೆ ನೀಡಿದರು. ಸಂಪ್ರದಾಯದಂತೆ ಮಕ್ಕಳಿಗೆ ಕ್ರೀಡಾಸಕ್ತಿ ಮೂಡಿಸುವ ಸಲುವಾಗಿ ವಿವಿಧ ಶಾಲೆಗಳಿಂದ ಆಗಮಿಸಿದ ಕ್ರೀಡಾಪಟುಗಳಿಂದ ಪತಸಂಚಲನ ನಡೆಸಲಾಯಿತು . 100 ಮೀಟರ್ ಓಟ, 200 ಮೀಟರ್ ಓಟ, ಕಬಡ್ಡಿ, ಫುಟ್ಬಾಲ್. ಗುಂಡು ಎಸೆತ ಸೇರಿದಂತೆ ವಿವಿಧ ಕ್ರೀಡೆಗಳು ನಡೆದವು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶ್ರೀರಾಮನಗರ ಪ್ರಾಥಮಿಕ ಪಾಠಶಾಲೆಯ ಎಸ್ ಡಿ ಎಂಸಿ ಅಧ್ಯಕ್ಷ ಬಶೀರ್ ಅಹ್ಮದ್, ಕಳೆದ ಮೂರು ವರ್ಷಗಳಿಂದ ಶಾಲೆಗಳಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ರೀತಿಯ ಕ್ರೀಡಾ ಚಟುವಟಿಕೆಗಳು ನಡೆದಿರಲಿಲ್ಲ. ಇದೀಗ ಶಿಕ್ಷಣ ಇಲಾಖೆ ಕ್ರೀಡಾ ಚಟುವಟಿಕೆಗಳಿಗೆ ಅನುಮತಿ ನೀಡಿದ್ದು ಹಿನ್ನೆಲೆಯಲ್ಲಿ ಹೋಬಳಿ ಮಟ್ಟದ ಕ್ರೀಡಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.…

Read More

ತುಮಕೂರು: ಕುಟುಂಬವೊಂದು ತಮ್ಮ ಮುದ್ದಿನ ಗಿಣಿಯನ್ನು ಹುಡುಕಿಕೊಟ್ಟವರಿಗೆ 50 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಕರಪತ್ರ ಅಂಟಿಸುವ ಮೂಲಕ ಭಾರೀ ಸುದ್ದಿಯಾಗಿತ್ತು. ಇದೀಗ ಕೊನೆಗೂ ಗಿಣಿ ಮಾಲಿಕರ ಮಡಿಲು ಸೇರಿದ್ದು, ಹುಡುಕಿಕೊಟ್ಟವರ ಕೈಗೆ ಭರ್ಜರಿ ಬಹುಮಾನ ಸಿಕ್ಕಿದೆ. ರುಸ್ತುಮ್ ಎಂಬ ಹೆಸರಿನ ಗಿಣಿ ನಾಪತ್ತೆಯಾದ ಗಿಣಿಯಾಗಿದ್ದು, ಈ ಗಿಣಿಯು ತುಮಕೂರಿನ ಬಡ್ಡಿಹಳ್ಳಿಯ ತೋಟವೊಂದರ ಮರದ ಮೇಲೆ ಪತ್ತೆಯಾಗಿತ್ತು. ಗಿಣಿಯನ್ನು ನೋಡಿದ ಬಡ್ಡಿಹಳ್ಳಿಯ ಕೃಷ್ಣಮೂರ್ತಿ ಮತ್ತು ಶ್ರೀನಿವಾಸ್ ಎಂಬವರು ತಮ್ಮ ಮನೆಗೆ ಕೊಂಡು ಹೋಗಿ ಸಾಕುತ್ತಿದ್ದರು. ಇತ್ತ ಗಿಣಿ ನಾಪತ್ತೆಯಾದ ಬಗ್ಗೆ ಪೋಸ್ಟರ್ ಕಂಡು ಗಿಣಿಯ ಮಾಲಿಕ ಅರ್ಜುನ್ ಅವರಿಗೆ ಕರೆ ಮಾಡಿದ್ದು, ಅವರು ತಕ್ಷಣ ಬಂದು ಈ ಗಿಣಿ ನಮ್ಮದು ಎಂದು ಖಾತರಿ ಪಡಿಸಿಕೊಂಡಿದ್ದಾರೆ.ಇನ್ನೂ ಗಿಣಿಯನ್ನು ಹುಡುಕಿಕೊಟ್ಟವರಿಗೆ ತಮ್ಮ ಮಾತಿನಂತಯೇ ಅರ್ಜುನ್ 85 ಸಾವಿರ ರೂಪಾಯಿ ಬಹುಮಾನ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಸರಗೂರು : ತಾಲ್ಲೂಕಿನ ಹೆಚ್. ಡಿ.ಕೋಟೆಯ ಹೆಬ್ಬಾಳ ಅಣ್ಣೆಕಟ್ಟೆಯಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಕೌಶಲ್ಯ ಅಭಿವೃದ್ಧಿ ಮೀನುಗಾರರನ್ನು ತರಬೇತಿ  ಶಿಬಿರ ಶನಿವಾರ ನಡೆಸಲಾಯಿತು. ಗ್ರಾಪಂ ಅಧ್ಯಕ್ಷ ಗೋವಿಂದಚಾರಿ ಶಿಬಿರಕ್ಕೆ  ಚಾಲನೆ ನೀಡಿ ಮಾತನಾಡಿ, ಹೊಸಬೀರ್ವಾಳ್ ಗ್ರಾಮದಲ್ಲಿ ಸಾಕಷ್ಟು ಜನರಿಗೆ ಸರಿಯಾದ ಜಮೀನಿಲ್ಲ. ಹಾಗಾಗಿ ಇಲ್ಲಿನ ಜನರಿಗೆ ಮೀನು ಸಾಕಣೆ ಅನುಕೂಲಕರವಾಗಲಿದೆ. ಸರ್ಕಾರ ಮೀನು ಸಾಕಣೆ ಸೌಲಭ್ಯ ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮೀನುಗಾರಿಕೆ ಇಲಾಖೆ ಅಧಿಕಾರಿ ಸಿದ್ದಯ್ಯ.ತಾಲ್ಲೂಕಾಧಿಕಾರಿ ರೇಣುಕಾಸ್ವಾಮಿ, ಗ್ರಾಮಿಣಮಹೇಶ್, ಸರಗೂರುಕೃಷ್ಣ, ಸೌಭಾಗ್ಯ ಶಿವಚನ್ನ, ಭಾಗ್ಯಸಿದ್ದರಾಜು, ಚಿಕ್ಕನಾಯಕ, ಪುಟ್ಟಮ್ಮ ಸಿದ್ದರಾಜು, ರೇಖಾನಾಗನಾಯಕ, ಶಿವರಾಜು, ಚಂದ್ರ, ಶ್ರೀನಿವಾಸ್,  ಜಗದೀಶಗೌಡ, ಸಂಘದ ಸದಸ್ಯರು ಮೃತ್ಯುಂಜಯ ರಂಗಸ್ವಾಮಿ ಸಿದ್ದರಾಜು,  ಬಸವರಾಜು,  ಚಂದ್ರನಾಯಕ,  ಸಿದ್ದರಾಜು,  ನಿಂಗರಾಜು,  ಸುರೇಶ, ಮಂಜುನಾಥ್ ಸಿದ್ದರಾಜು  ಮೊದಲಾವರು ಭಾಗವಹಿಸಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನವದೆಹಲಿ: ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಸ್ತಾಗಲಿ, ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾಜಪದೊಂದಿಗೆ ಸದಾ ಇದ್ದಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ ಅವರ ಮಹತ್ವದ ಅರಿವಿದೆ. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು. ಯಡಿಯೂರಪ್ಪನವರು ನಿರಂತರ ಪರಿಶ್ರಮದ ನಾಯಕ, ಅವರಿಗೆ ರಾಜಕೀಯ ಬಿಡುವು ಅನ್ನುವುದೇ ಇಲ್ಲ, ರಾಜಕೀಯದಲ್ಲಿ ನಿರಂತರವಾಗಿ ಬಿಎಸ್ ವೈ ಇರುತ್ತಾರೆ, ಹೋರಾಟವೇ ಅವರ ಬದುಕಿನ ಮೂಲಮಂತ್ರ. ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪನವರ ಬಲ, ಮಾರ್ಗದರ್ಶನ ಇರಲಿದೆ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹಿರಿಯೂರು: ಜುಲೈ 22ರಿಂದ 24ರವರೆಗೆ  ಹಿರಿಯೂರಿನ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಪುರುಷರ ಹಾಗೂ ಮಹಿಳೆಯರ ಖೋಖೋ ಪಂದ್ಯಾಟ ದೀಪಾಲಂಕೃತ ಖೋಖೋ ಅಸೋಸಿಯೇಷನ್ ಕಪ್-2022ಗೆ ಕ್ರೀಡಾ ಪ್ರಿಯರಿಂದ ಭರ್ಜರಿ ಸ್ವಾಗತ ದೊರೆತಿದೆ ಸುಮಾರು ಐದು  ಸಾವಿರಕ್ಕಿಂತಲೂ ಹೆಚ್ಚು ಜನರು  ಕುಳಿತುಕೊಂಡು ಕ್ರೀಡೆಯನ್ನು ವೀಕ್ಷಿಸುವ ಗ್ಯಾಲರಿ ವ್ಯವಸ್ಥೆ ಮಾಡಲಾಗಿದ್ದು,  ಕ್ರೀಡಾ ಅಭಿಮಾನಿಗಳು,  ಸಾರ್ವಜನಿಕರು ವೀಕ್ಷಿಸಬಹುದಾಗಿದೆ. ಮೈದಾನ ಪ್ರವೇಶಕ್ಕೆ ಯಾವುದೇ ಪ್ರವೇಶ ಶುಲ್ಕ ವಿಧಿಸಲಾಗಿಲ್ಲ  ಎಂದು ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಆಪ್ತಸಹಾಯಕರಾಗಿರುವ ನಿರಂಜನಮೂರ್ತಿ ತಿಳಿಸಿದರು. ಖೋ ಖೋ ಪಂದ್ಯಾವಳಿಯ ಕರ್ನಾಟಕ ಸ್ಟೇಟ್ ಜಾಯಿಂಟ್ ಸೆಕ್ರೆಟರಿ ಮಾತನಾಡಿ,  ಈ ಕ್ರೀಡೆಗೆ ನಮಗೆ ಎಲ್ಲಾ ರೀತಿಯ ಮೂಲಭೂತ ವ್ಯವಸ್ಥೆಯನ್ನು ಹಿರಿಯೂರು ತಾಲ್ಲೂಕಿನ ಶಾಸಕಿಯಾದ ಪೂರ್ಣಿಮಾ ಶ್ರೀನಿವಾಸ್ ಅವರು ಒದಗಿಸಿದ್ದು,  ಹಾಗೂ ರಾಜ್ಯ ಪ್ರವರ್ಗ -1 ರ ಗೊಲ್ಲ ಸಮುದಾಯದ ರಾಜ್ಯಾಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್ ಅವರಿಗೂ  ಇದೇ ವೇಳೆ ಅಭಿನಂದನೆ ಸಲ್ಲಿಸಿದರು. ಶಿವಪ್ರಸಾದ್, ವೆಂಕಟೇಶ್ ಸೇರಿದಂತೆ ಇತರರು ಸಹ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿ,…

Read More

ಸರಗೂರು: ತಾಲೂಕಿನ ಪಟ್ಟಣದ ಅಂಬೇಡ್ಕರ್ ಭವನದ ಬಳಿಯ ವಿಕಲಚೇತನರೊಬ್ಬರ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಗುರುವಾರ ರಾತ್ರಿ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ 7:30ರ ವೇಳೆ ಅಂಗಡಿ ಬಾಗಿಲು ತೆರೆಯಲು ಮಾಲಿಕ ಎಸ್.ಸಿ. ಪುಟ್ಟರಾಜು ಆಗಮಿಸಿದ ವೇಳೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ವಿಕಲ ಚೇತನರಾಗಿರುವ ಎಸ್.ಸಿ.ಪುಟ್ಟರಾಜು ಅವರು ಸ್ನೇಹಿತರ ಸಹಕಾರದೊಂದಿಗೆ ಪುಟ್ಟ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಇದೀಗ ಜೀವನಾಧಾರವಾಗಿದ್ದ ಅಂಗಡಿಗೆ ಕಳ್ಳರು ನುಗ್ಗಿರುವುದರಿಂದ ದಿಕ್ಕು ತೋಚದೇ ಕಂಗಾಲಾಗಿದ್ದಾರೆ. ಪುಟ್ಟರಾಜು ಅವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲಾ. ಆದರೂ ಪುಟ್ಟ ಅಂಗಡಿಯಿಂದ ಬಂದ ಹಣದಿಂದ ಜೀವನ ನಡೆಸುತ್ತಿದ್ದರು. ಆದರೆ ಇದೀಗ ಅವರ ಅಂಗಡಿಯಲ್ಲೂ ಕಳ್ಳತನ ನಡೆಸಲಾಗಿದೆ.  ಈ ಪ್ರದೇಶದಲ್ಲಿ ಸರಣಿ ಕಳ್ಳತನ ನಡೆಸಲಾಗುತ್ತಿದ್ದರೂ, ಪೊಲೀಸರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಪಟ್ಟಣದಲ್ಲಿ ಗಸ್ತು ನಡೆಸುತ್ತಿಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಕೊರಟಗೆರೆ: ಸುಮಾರು ಮೂರು ತಿಂಗಳುಗಳಿಂದ ರೈತರ ನಿದ್ದೆಕೆಡಿಸಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಸೆರೆ ಹಿಡಿದಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಚಿಕ್ಕನಹಳ್ಳಿ ಗ್ರಾಮದ ಸುತ್ತಮುತ್ತಲು ಸುಮಾರು ಮೂರು ತಿಂಗಳಿನಿಂದ ರೈತರ ಸಾಕುಪ್ರಾಣಿಗಳನ್ನು ಬೇಟೆಯಾಡಿ ತಿನ್ನುತ್ತಿದ್ದ ಚಿರತೆ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದೆ. ಕಳೆದ ಮೂರು ದಿನಗಳ ಹಿಂದೆ ಬೋನನ್ನು ಅಳವಡಿಸಲಾಗಿತ್ತು. ನೆನ್ನೆ ರಾತ್ರಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಸೆರೆಹಿಡಿದ ಚಿರತೆಯನ್ನು ದೂರದ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗುವುದು ಎಂದು ಅರಣ್ಯ ಇಲಾಖೆಯ ಸುರೇಶ್ ತಿಳಿಸಿದ್ದಾರೆ.’ ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಧಿಕಾರಿ ಸುರೇಶ್, ಉಪವಲಯ ಅರಣ್ಯ ಅಧಿಕಾರಿ ನಾಗರಾಜ್, ಅರಣ್ಯ ರಕ್ಷಕರಾದ ಮಂಜುನಾಥ್,ಚಾಂದ್ ಪಾಷಾ, ನರಸಿಂಹಯ್ಯ,ವಾಹನ ಚಾಲಕ ಮೂರ್ತಿ ಹಾಜರಿದ್ದರು. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಧುಗಿರಿ: ಭಾರತ ದೇಶದ ಗೌರವಾನ್ವಿತ ನೂತನ ರಾಷ್ಟ್ರಪತಿಯಾಗಿ ದ್ರೌಪತಿ ಮುರ್ಮು ರವರು ಆಯ್ಕೆಯಾದ ಹಿನ್ನೆಲೆಯಲ್ಲಿ ಮಧುಗಿರಿ ನಗರದ ಡೂಮ್ ಲೈಟ್ ಸರ್ಕಲ್ ನಲ್ಲಿ ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ  ನೇತೃತ್ವದಲ್ಲಿ ಸಂಭ್ರಮಾಚರಿಸಲಾಯಿತು. ಈ ವೇಳೆ ಮಾತನಾಡಿದ ಮಹಿಳಾ ಮುಖಂಡರು, ಒಬ್ಬ ಆದಿವಾಸಿ ಮಹಿಳೆಗೆ ಯಾವ ಸರ್ಕಾರವು ನೀಡದ ಗೌರವವನ್ನು ಮೋದಿ ಸರ್ಕಾರ ನೀಡಿದೆ. ಮಹಿಳೆಯರಿಗೆ ಸಮಾನತೆ ಕೊಟ್ಟಿರುವುದು ನಮ್ಮೆಲ್ಲರಿಗೆ ಹೆಮ್ಮೆಯನ್ನುಂಟು ಮಾಡಿದೆ ಎಂದರು. ಇದೇ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ವಿಭಾಗದ ಸಂಘಟನಾ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ವಿಧಾನ ಪರಿಷತ್ ಶಾಸಕರಾದ  ಕೆ.ಎಸ್.ನವೀನ್, ಜಿಲ್ಲಾಧ್ಯಕ್ಷರಾದ ಬಿ.ಕೆ. ಮಂಜುನಾಥ್, ಯುವ ಮುಖಂಡರಾದ ಹನುಮಂತೇಗೌಡ, ಮಧುಗಿರಿಯ ಮಾಜಿ ಶಾಸಕರಾದ ಗಂಗಹನುಮಯ್ಯ, ಸ್ಫೂರ್ತಿ ಚಿದಾನಂದ್,  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಣ್ಣ, ರವಿ ಪಾವಗಡ, ತಿಮ್ಮಜ್ಜ ಸೇರಿದಂತೆ ಎಲ್ಲಾ ಮಂಡಲಗಳ  ಪ್ರಮುಖರು ಹಾಜರಿದ್ದರು. ವರದಿ: ದೊಡ್ಡೇರಿ ಮಹಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುಮಕೂರು: ನಗರದ ಅಮಾನಿಕೆರೆ ಮುಂಭಾಗ ಬೆಳ್ಳಂಬೆಳಗ್ಗೆಯೇ ಭೀಕರ ಅಪಘಾತ ನಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ವೇಗವಾಗಿ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಅಮಾನಿಕೆರೆ ಮುಂಭಾಗ ಇಟ್ಟಿದ್ದ ಮೋರಿ ಪೈಪ್ ಗೆ ಗುದ್ದಿದ್ದು, ಪರಿಣಾಮವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರನ ಮಾಹಿತಿಗಳು ಇನ್ನೂ ತಿಳಿದು ಬಂದಿಲ್ಲ. ಅತೀವೇಗದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತಕ್ಕೀಡಾದ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವರದಿ : ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ಅಧ್ಯಕ್ಷರುಗಳು, ಉಪಾಧ್ಯಕ್ಷರ ನೇಮಕ ತಮ್ಮ ದೆಹಲಿ ಭೇಟಿ ಯಾತ್ರೆಯ ಸಂದರ್ಭದಲ್ಲಿ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತಿಂಗಳ ೨೫ ಮತ್ತು ೨೬ ರಂದು ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಈ ಸಂದರ್ಭದಲ್ಲಿ ವರಿಷ್ಠರ ಜತೆ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳಿಗೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕ ಎಲ್ಲದರ ಬಗ್ಗೆಯೂ ಚರ್ಚೆ ನಡೆಸುತ್ತೇನೆ ಎಂದರು.ವರಿಷ್ಠರ ಅನುಮತಿ ಸಿಕ್ಕರೆ ದೆಹಲಿ ಭೇಟಿ ನಂತರ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ನೇಮಕಾತಿಗಳು ನಡೆಯಲಿವೆ ಎಂದು ಅವರು ಹೇಳಿದರು. ಮಾಜಿ ಸಚಿವ ಈಶ್ವರಪ್ಪನವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗ ಅವರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಸಲ್ಲಿಕೆಯಾಗುತ್ತಿದೆ. ಮುಂದೆ ನೋಡೋಣ ಎಂದರು. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ನಡೆದಿರುವ…

Read More