Author: admin

ಮುಂಬೈನಲ್ಲಿ ಭಾನುವಾರ ರಾತ್ರಿ ಬಿಜೆಪಿ ನಾಯಕಿ ಸುಲ್ತಾನಾ ಖಾನ್ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ನಡೆದ ವೇಳೆ, ಸುಲ್ತಾನಾ ಪತಿಯೊಂದಿಗೆ ವೈದ್ಯರನ್ನು ಭೇಟಿ ಮಾಡಲು ಹೋಗುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕಾರನ್ನು ತಡೆದು ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲ ಸುಲ್ತಾನಾ ಅವರ ಪತಿಯ ಜೊತೆ ವಾಗ್ವಾದ ಕೂಡಾ ನಡೆಸಿದ್ದಾರೆ. ಈ ದಾಳಿಯಲ್ಲಿ ಸುಲ್ತಾನಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೀರಾ ರೋಡ್ ಪ್ರದೇಶದಲ್ಲಿ ರಾತ್ರಿ 11.15 ರ ಸುಮಾರಿಗೆ ತನ್ನ ಪತ್ನಿಯೊಂದಿಗೆ ವೈದ್ಯರನ್ನು ಭೇಟಿಯಾಗಲು ತೆರಳುತ್ತಿದ್ದುದ್ದಾಗಿ ಸುಲ್ತಾನಾ ಖಾನ್ ಪತಿ ತಿಳಿಸಿದ್ದಾರೆ. ಆ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬೈಕ್ ಎದುರಿಗೆ ತಂದು ಕಾರನ್ನು ಅಡ್ಡಗಟ್ಟಿದ್ದಾರೆ. ನಂತರ ಪತ್ನಿ ಸುಲ್ತಾನ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ವಿವರಿಸಿದ್ದಾರೆ. ದಾಳಿ ಬಳಿಕ ದುಷ್ಕರ್ಮಿಗಳು ಪರಾರಿ : ಸುಲ್ತಾನ ಖಾನ್ ಮೇಲೆ ದಾಳಿ ನಡೆಯುತ್ತಿದ್ದಂತೆ, ದುಷ್ಕರ್ಮಿಗಳು ಮತ್ತು ಸುಲ್ತಾನ ಅವರ ಪತಿ ಮಧ್ಯೆ ಜಗಳ ನಡೆದಿದೆ. ಈ ವೇಳೆ…

Read More

ಪಂಜಾಬ್ ಸ್ಟೇಟ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗ ಮಾಡಲು ಬಯಸುವ ಯುವಕರಿಗೆ ಗುಡ್ ನ್ಯೂಸ್ ಇದೆ. ಪಂಜಾಬ್ ಸ್ಟೇಟ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಪಿಎಸ್‌ಪಿಸಿಎಲ್) 1690 ಅಸಿಸ್ಟೆಂಟ್ ಲೈನ್‌ಮ್ಯಾನ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸಲ್ಲಿಸುವ ಮೊದಲು ಅರ್ಜಿದಾರರು ಅಧಿಸೂಚನೆಯನ್ನು ಓದುವುದು ಅವಶ್ಯಕ. ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಜುಲೈ 31, 2022 ರಿಂದ ಈ ಕೆಲಸಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಅಭ್ಯರ್ಥಿಗಳು ಪಂಜಾಬ್ ಸ್ಟೇಟ್ ಪವರ್ ಕಾರ್ಪೊರೇಷನ್ ಲಿಮಿಟೆಡ್, pspcl.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ, ಅಧಿಸೂಚನೆಯಲ್ಲಿ ನೀಡಲಾದ ಸೂಚನೆಗಳನ್ನು ಅವರು ನೆನಪಿನಲ್ಲಿಟ್ಟುಕೊಳ್ಳಬೇಕು. 10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು: 10 ನೇ ತರಗತಿ ಪಾಸ್ ಆದವರು, ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ / ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು. ಪರೀಕ್ಷೆಯ ಆಧಾರದ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಶುಲ್ಕವಾಗಿ ಅಭ್ಯರ್ಥಿಗಳು 944…

Read More

ಹುಣಸೂರು: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಮೂರು ಹಸುಗಳು ಸಜೀವ ದಹನವಾದ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಮುಳ್ಳೂರು ಗ್ರಾಮದ ಜಯಮ್ಮ ಎಂಬುವವರಿಗೆ ಸೇರಿದ ಮೂರು ಹಸುಗಳು ಘಟನೆಯಲ್ಲಿ ಸಾವನ್ನಪ್ಪಿದ್ದು, ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಮಲಗಿದ್ದ ವೇಳೆ ಆಕಸ್ಮಿಕ ಬೆಂಕಿ ಬಿದ್ದು ಮೂರು ಹಸುಗಳು ಸಜೀವ ದಹನವಾಗಿದೆ. ಇನ್ನೂ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಹಸುಗಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಘಟನೆ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ತಮ್ಮ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೃಢಪಡಿಸಿದ್ದಾರೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂದು ಬೆಳಗ್ಗೆ ನಮ್ಮ ಶಾಲೆಯಲ್ಲಿ ಸ್ಟಾಫ್, ಪ್ರಿನ್ಸಿಪಾಲ್ ಎಲ್ಲಾ ಶಾಲೆಗೆ ಹೋಗಿದ್ದಾರೆ. ಆಗ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದಿದೆ. ಬೆದರಿಕೆ ಬಗ್ಗೆ ತಕ್ಷಣ ನಮಗೆ ತಿಳಿಸಿದರು ಎಂದರು. ಸ್ಕೂಲ್ ಕ್ಯಾಂಪಸ್ ನಲ್ಲಿ ಇರುವವರನ್ನು ಸ್ಥಳಾಂತರ ಮಾಡಿದೆವು. ಕೂಡಲೇ ಪೊಲೀಸ್ ಆಯುಕ್ತರ ಜೊತೆ ಮಾತನಾಡಿದೆವು. 70% ತಪಾಸಣೆ ಮಾಡಿದ್ದಾರೆ. ಇನ್ನೂ ತಪಾಸಣೆ ನಡೆಯುತ್ತಿದೆ ಎಂದರು. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಪೋಷಕರು ಗಾಬರಿ ಆಗುವುದು ಬೇಡ. ನಮ್ಮಲ್ಲಿ ಹೈ ಸೆಕ್ಯೂರಿಟಿಯಿದೆ. ಪ್ರತಿ ಚಲನವಲನವೂ ಸಿಸಿ ಕ್ಯಾಮೆರಾದಲ್ಲಿ ದಾಖಲಾಗುತ್ತದೆ. ನಿನ್ನೆ ಒಂದು ಪರೀಕ್ಷೆ ಇತ್ತು. ಹಾಗಾಗಿ ಬೇರೆಯವರು ಬರಲಿಕ್ಕೆ ಅವಕಾಶ ನೀಡಲಾಗಿತ್ತು. ಸಮಸ್ಯೆ ಆಗುವುದು ಬೇಡವೆಂದು ಪೊಲೀಸರಿಗೆ ತಿಳಿಸಿದೆವು. ಅವರು ನಾವೇ ಎಲ್ಲಾ ನೋಡಿಕೊಳ್ಳೋದಾಗಿ ಹೇಳಿದ್ದಾರೆ ಎಂದು ಘಟನೆ ಕುರಿತು ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕವಾಗಿ ಸ್ಫೋಟಗೊಂಡ ಗ್ರೆನೇಡ್ ಸೇನಾ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿ ಇಬ್ಬರನ್ನೂ ಬಲಿ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಭಾನುವಾರ ತಡರಾತ್ರಿ ಪೂಂಚ್‌ ನ ಮೆಂಧರ್ ಸೆಕ್ಟರ್‌ನಲ್ಲಿ ಈ ಘಟನೆ ನಡೆದಿದ್ದು, ಈ ವೇಳೆ ಸೇನಾ ಸಿಬ್ಬಂದಿ ಕರ್ತವ್ಯದಲ್ಲಿದ್ದರು ಎಂದು ಸೇನಾ ಪಿಆರ್‌ ಒ ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣವೇ ಸೇನಾ ಕ್ಯಾಪ್ಟನ್ ಮತ್ತು ನೈಬ್-ಸುಬೇದಾರ್ (ಜೆಸಿಒ) ಅವರನ್ನು ಹೆಲಿಕಾಪ್ಟರ್‌ ನಲ್ಲಿ ಚಿಕಿತ್ಸೆಗಾಗಿ ಉಧಮ್‌ಪುರಕ್ಕೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ಹುಟ್ಟು ಹಬ್ಬದ ದಿನವೇ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪರಿಚಿತರೇ ಯುವಕನನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾರೆನ್ನಲಾಗಿದೆ. ಗೊಲ್ಲಹಳ್ಳಿ ನಿವಾಸಿ ಹೇಮಂತ್ ಕುಮಾರ್ (25) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಹುಟ್ಟು ಹಬ್ಬದ ಸಲುವಾಗಿ ಹೇಮಂತ್‌ ನನ್ನು ಸ್ನೇಹಿತರು ಫೋನ್‌ ಮಾಡಿ ಮನೆಯ ಹೊರಗಡೆ ಬರಲು ಹೇಳಿದ್ದಾರೆ. ಸ್ನೇಹಿತರೊಂದಿಗೆ ರಾತ್ರಿ ಹೊರಗಡೆ ಹೋಗಿದ್ದ ಯುವಕ ಇಂದು ಬೆಳಗ್ಗೆ ಕೋನಸಂದ್ರ ಬಳಿ ಬರ್ಬರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಹೇಮಂತ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತ ಯುವಕನ ಕೈ ಮೇಲೆ ತ್ರಿಶೂಲ, ಢಮರು ಟ್ಯಾಟು ಇದ್ದು, ಇದರ ಮೂಲಕ ಪೋಷಕರು ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಯುವಕನ ಮುಖದ ಗುರುತು ಸಿಗದಂತಾಗಿತ್ತು. ಸದ್ಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಹಾಲಿನ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಲ್ಲ. ಆದರೆ ಹಾಲಿನ ಉತ್ಪನ್ನಗಳು ದರ ಏರಿಕೆಯಾಗಲಿದೆ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳ ಕೆಎಂಎಫ್ ತಿಳಿಸಿದೆ. ಕೇಂದ್ರ ಸರ್ಕಾರ ಶೇ.5ರ ಸರಕು ಸೇವಾ ಸುಂಕ (ಹಾಲಿನ ಪ್ಯಾಕೇಟ್ ಉತ್ಪನ್ನ) ವಿಧಿಸಿರುವ ಹಿನ್ನೆಲೆಯಲ್ಲಿ (ಲೇಬಲ್ಡ್ ಅಕ್ಕಿ ಇತರೆ) ನಾಳೆಯಿಂದ ಬೆಲೆ ಹೆಚ್ಚಳವಾಗಲಿದೆ. ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ ಉತ್ಪನ್ನದ ಮೇಲೆ ಸರಾಸರಿ 1ರಂದ 3ರವರೆಗೆ ಬೆಲೆ ಹೆಚ್ಚಾಗಲಿದೆ. ಈ ಮೊದಲು ಲೀಟರ್ ಮೊಸರಿಗೆ 43 ಇತ್ತು. ಜುಲೈ 18ರಿಂದ ಅದು 46 ಆಗಲಿದೆ. ಅರ್ಧ ಲೀಟರ್ ಮೊಸರಿನ ಬೆಲೆ 22 ಇತ್ತು. ನಾಳೆಯಿಂದ 24 ಆಗಲಿದೆ. ಮಜ್ಜಿಗೆ 200 ಎಂಎಲ್ ಮಜ್ಜಿಗೆ ಹಾಗೂ ಲಸ್ಸಿ ಮೇಲೆ 1ರೂ. ಹೆಚ್ಚಿಸಲಾಗಿದೆ. ಪಾಕೆಟ್‍ ನಲ್ಲಿ ಸದ್ಯ ಹಳೆಯ ದರಗಳೇ ನಮೂದಾಗಿರುತ್ತವೆ. ಆದರೆ, ಗ್ರಾಹಕರು ಹೊಸದಾಗಿ ನಿಗದಿಪಡಿಸಿರುವಷ್ಟು ದರ ನೀಡಿ ಖರೀದಿಸಬೇಕು ಎಂದು ಕೆಎಂಎಫ್ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಚಿತ್ರದುರ್ಗ: ಜಿಲ್ಲೆಯ  ಹಿರಿಯೂರು ನಗರಸಭೆಯ ನೂತನ ಅಧ್ಯಕ್ಷೆಯಾಗಿ ಮೂರನೇ ವಾರ್ಡಿನ ಎಸ್. ಶಿವರಂಜಿನಿ ಯಾದವ್ ಶನಿವಾರದಂದು ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಿ ಸುಧಾಕರ್ ರವರ ನೇತೃತ್ವದಲ್ಲಿ ಹಿರಿಯೂರು ನಗರಸಭೆಯ ಅಧ್ಯಕ್ಷರಾಗಿ  ಪದಗ್ರಹಣ ಸ್ವೀಕರಿಸಿದರು . ಹಿರಿಯೂರು ತಾಲ್ಲೂಕಿನ ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಪದಗ್ರಹಣ  ಸಮಾರಂಭ  ಅದ್ದೂರಿಯಾಗಿ ನಡೆಯಿತು.  ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ. ಸುಧಾಕರ್  ಭಾಗವಹಿಸಿ, ಅವಿರೋಧವಾಗಿ ಆಯ್ಕೆಯಾದ  ಹಿರಿಯೂರು ನಗರಸಭೆ  ನೂತನ ಅಧ್ಯಕ್ಷೆ ಶಿವರಂಜನಿ ಯಾದವ್ ಅವರಿಗೆ  ಶುಭ ಹಾರೈಸಿ ಆಶೀರ್ವಾದಿಸಿದರು. ಈ ಸಂದರ್ಭದಲ್ಲಿ  ಪತ್ರಿಕೆ ಮಾಧ್ಯಮದೊಂದಿಗೆ  ಮಾತನಾಡಿದ ಸಚಿವರಾದಂತಹ ಡಿ. ಸುಧಾಕರ್, ನಾನು ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ರಾಜಕಾರಣ ಮಾಡಿದವನು. ನಾನು ಯಾವ ಜಾತಿಯ ವಿರೋಧಿಯೂ ಅಲ್ಲ. ಮೊದಲಿನಿಂದಲೂ ತೀರಾ ಹಿಂದುಳಿದವರ, ಅಶಕ್ತರ ಧ್ವನಿಯಾಗುತ್ತಾ ಬಂದಿದ್ದೇನೆ. ಸರ್ವ ಜನಾಂಗವನ್ನು ಸಮಾನವಾಗಿ ಕಾಣುತ್ತಾ ಸಾಮಾಜಿಕ ನ್ಯಾಯ ಸರ್ವರಿಗೂ ಸಿಗಬೇಕು ಎಂಬ ಧ್ಯೇಯವನ್ನು ಪರಿಪಾಲನೆ ಮಾಡುತ್ತಾ ಬರಲಾಗಿದೆ…

Read More

ತುಮಕೂರು:  ಮಳೆ ನೀರಿನಲ್ಲಿ ಆಟೋ ಚಾಲಕ ಕೊಚ್ಚಿ ಹೋದ ಘಟನೆ ಹಿನ್ನೆಲೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವ ಅರಗ ಜ್ಞಾನೇಂದ್ರ ತುಮಕೂರಿಗೆ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ಅವರು,  ಆಟೋ ಚಾಲಕ ಇನ್ನೂ ಪತ್ತೆಯಾಗಿಲ್ಲ. ಆಟೋ ಚಾಲಕ ಪತ್ತೆಯಾದ ಬಳಿಕ ಮುಂದಿನ ಕ್ರಮಕೈಗೊಳ್ಳೋಣ. ವ್ಯಕ್ತಿ ಮೊದಲು ಬದುಕಿದ್ದಾನೆ ಅಂದುಕೊಳ್ಳೋಣ. ವ್ಯಕ್ತಿ ಪತ್ತೆಯಾಗುವವರೆಗೂ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ತಿಳಿಸಿದರು. ಸ್ಮಾರ್ಟ್ ಸಿಟಿ ಹಿನ್ನೆಲೆಯಲ್ಲಿ ತುಮಕೂರಿನ ವಿವಿಧೆಡೆಗಳಲ್ಲಿ ಅವೈಜ್ಞಾನಿಕ ಕಾಮಕಾರಿಗಳು ನಡೆಯುತ್ತಿದ್ದು, ಇದೀಗ ಇದರ ಫಲವಾಗಿ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಈ ಬಗ್ಗೆ ಯಾವ ಕ್ರಮಕೈಗೊಳ್ಳುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,  ಇಲ್ಲಿ ಮಳೆ ನೀರು ತುಂಬಿತ್ತು ಎಂದು ಮಾಹಿತಿ ಇದೆ. ಅದನ್ನು ಸರಿಪಡಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇವೆ.  ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು. ತುಮಕೂರಿನ ವಿವಿಧ ಪ್ರದೇಶಗಳಲ್ಲಿರುವ ಅಂಡರ್ ಪಾಸ್ ಗಳಲ್ಲಿ ಇದೇ ರೀತಿಯ ಸಮಸ್ಯೆಗಳಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,…

Read More

ಕನ್ನಡ ಭಾಷೆಯ ಮೂಲ ತತ್ವಗಳನ್ನು ಮಕ್ಕಳಿಗೆ ಅರ್ಥಪೂರ್ಣ ಮತ್ತು ಕ್ರಮಬದ್ಧವಾಗಿ ಶಿಕ್ಷಕರು ಕಲಿಸಿಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕೆ.ಪದ್ಮನಾಭ ಅಭಿಪ್ರಾಯಪಟ್ಟರು. ತುರುವೇಕೆರೆ ಪಟ್ಟಣದ ಬಿಆರ್ ಸಿ ಕಚೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತುಮಕೂರು, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ತುರುವೇಕೆರೆ ಹಾಗೂ ತಾಲ್ಲೂಕು ಕನ್ನಡ ಭಾಷಾ ಬೋಧಕರ ಸಂಘದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕಲಿಕಾ ಚೇತರಿಕೆ ಉಪಕ್ರಮ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಪಠ್ಯದಲ್ಲಿರುವ ಮೌಲ್ವಿಕ ಅಂಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವ ಮೂಲಕ ಗುಣಾತ್ಮಕ ಕಲಿಕೆಗೆ ಹೆಚ್ಚು ಒತ್ತು ಕೊಡಬೇಕು. ತಾಲ್ಲೂಕಿನ ಪ್ರೌಢ ಶಾಲೆಗಳಲ್ಲಿ ವಿಷಯ ಶಿಕ್ಷಕರ ಕೊರತೆಯ ನಡುವೆಯೂ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಎಂದರು. ಜಿಲ್ಲಾ ಕನ್ನಡ ವಿಷಯ ಪರಿವೀಕ್ಷಕ ಎಚ್.ಜಿ.ಗಿರೀಶ್ 8 ಮತ್ತು 9ನೇ ತರಗತಿಯ ಮಕ್ಕಳಿಗೆ ಕಲಿಕಾ ಚೇತರಿಕೆ ಉಪಕ್ರಮಗಳ ಕುರಿತು ಮಾತನಾಡಿ, ಕೋವಿಡ್ 19ರ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಸಮರ್ಪಕ ಕಲಿಕೆ ಉಂಟಾಗಿಲ್ಲ. ಹಾಗಾಗಿ ಔಪಚಾರಿಕ ಶಿಕ್ಷಣದ ಒಂದು ಉಪಕ್ರಮವಾಗಿ ಕಲಿಕಾಚೇತರಿಕೆಯನ್ನು…

Read More