Subscribe to Updates
Get the latest creative news from FooBar about art, design and business.
- “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ
- ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು
- ಗುಜರಾತ್ ಮಾದರಿ ನಮಗೆ ಬೇಡ, ಕರ್ನಾಟಕ ಇಡೀ ದೇಶಕ್ಕೆ ಮಾದರಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
- ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
Author: admin
ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ಧ್ವಜದ ಬಣ್ಣ ಗೊತ್ತಿಲ್ಲ. ಕೆಂಪು, ಬಿಳಿ, ಹಸಿರು ಎಂದು ಹೇಳುವ ಪರಿಸ್ಥಿತಿ ಅವರದ್ದಾಗಿದೆ. ಧ್ವಜದ ಬಣ್ಣದ ಕುರಿತು ನೀಡಿದ ಹೇಳಿಕೆಗೆ ಅವರು ಬಹಿರಂಗ ಕ್ಷಮೆಯಾಚಿಸಬೇಕು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರು ಅವರು ಭಾರತ ದೇಶವನ್ನು ಎರಡು ಭಾಗ ಮಾಡಿದ್ದರು. ಹೀಗಾಗಿ ನೆಹರು ಸಂತತಿ ಅಂದರೆ ಅದು ಜಿನ್ನಾ ಸಂತತಿ ಇದ್ದಂತೆ. ಈಗ ಅದೇ ಸಂತತಿಗೆ ಸೇರಿದ ರಾಹುಲ್ ಗಾಂಧಿ ಅವರಿಂದ ದೇಶ ಜೋಡೋ ಪಾದಾಯಾತ್ರೆ ಮಾಡಲಾಗುತ್ತಿದೆ. ದೇಶ ತುಂಡು ಮಾಡಿದವರು ರಾಷ್ಟಭಕ್ತರೋ ಅಥವಾ ರಾಷ್ಟ್ರದ್ರೋಹಿಗಳೋ ಎಂದು ದೇಶದ ಜನ ತೀರ್ಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ನಮಗೆ ರಾಷ್ಟ್ರಭಕ್ತಿ ಹೇಳಿಕೊಡುವ ಅವಶ್ಯಕತೆ ಕಾಂಗ್ರೆಸ್ ಗೆ ಇಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಪಕ್ಷದವರಿಗೆ ತ್ರಿವರ್ಣ ಧ್ವಜದ ಬಗ್ಗೆ ಅಭ್ಯಾಸವರ್ಗ ಮಾಡಲಿ. ತ್ರಿವರ್ಣ ಧ್ವಜದ ಬಗ್ಗೆ ಈಗಿನ ಕಾಂಗ್ರೆಸ್ ನಾಯಕರಿಗೆ ಯಾವುದೇ ಕಲ್ಪನೆಯಿಲ್ಲ. ವಿಧಾನಸಭೆ ಬಾವಿಗಳಿದು ಪ್ರತಿಭಟನೆ ಮಾಡುವ ಸಂದರ್ಭದಲ್ಲೂ…
ಕಾಂಗ್ರೆಸ್ ನವರು ಬರಿ ಅಲ್ಪ ಸಂಖ್ಯಾತರನ್ನು ಓಲೈಕೆ ಮಾಡೋಕೆ ಪ್ರಯತ್ನ ಮಾಡ್ತಾ ಇದ್ದಾರೆ. ಚಾಮರಾಜಪೇಟೆಯ ಆಟದ ಮೈದಾನ ಸರ್ಕಾರದ್ದು, ಅಲ್ಲಿ ಗಣೇಶ ಉತ್ಸವ ಏನು ಅಣ್ಣಮ್ಮ, ಚಾಮುಂಡೇಶ್ವರಿ ಉತ್ಸವವನ್ನೂ ಮಾಡುತ್ತೇವೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ. ಯಲಹಂಕದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಾಲ್ಲೂಲಕಿನ ಚಲ್ಲಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೇಲೆ ಸುಮಾರು 40 ಕ್ಕೂ ಹೆಚ್ಚು ಪ್ರಕರಣಗಳು ಇವೆ. ಅವುಗಳನ್ನು ಮುಚ್ಚಿಕೊಳ್ಳಲು ಎ.ಸಿ.ಬಿ ತಂದಿದ್ದರು. ಇಂದು ಕಾನೂನು ಹೋರಾಟದಲ್ಲಿ ಮತ್ತೆ ಲೋಕಾಯುಕ್ತಕ್ಕೆ ಬಲ ನೀಡಿ ಆದೇಶ ಬಂದಿದ್ದು ಸ್ವಾಗತಾರ್ಹ ಎಂದರು. ಲೋಕಾಯುಕ್ತ ಸಂಸ್ಥೆ ಇಡೀ ದೇಶದ¯್ಲÉ ತುಂಬಾ ಒಳ್ಳೇಯ ಸಂಸ್ಥೆ. ಎಂತಹವರನ್ನೂ ರಕ್ಷಣೆ ಮಾಡದೆ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಿ ದೇಶದ ಗಮನ ಸೆಳೆದ ಸಂಸ್ಥೆಗೆ ಬಲ ನೀಡಿರುವುದು ಭ್ರಷ್ಠರಿಗೆ ನಡುಕ ತರಿಸಿದೆ. ಅದಕ್ಕಾಗಿ ಕಾಂಗ್ರೆಸ್ ನಾಯಕರು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು. ಒಂದು ಬಾರಿ ಕಲಬುರಗಿ ನೋಡಿ, 9 ಸಾರಿ ಗೆದ್ದ…
ಇದೇ ಸೋಮವಾರದಂದು ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಥಮ ಬಾರಿಗೆ ಧ್ವಜಾರೋಹಣ ನಡೆಸುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಂದು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್, ಬಿಬಿಎಂಪಿ, ಗೃಹ, ಕಂದಾಯ ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ಕೊಟ್ಟು ಭದ್ರತೆಯ ಬಗ್ಗೆ ಪರಿಶೀಲನೆ ನಡೆಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಇದೇ ಮೊದಲ ಬಾರಿಗೆ ಚಾಮರಾಜಪೇಟೆಯ ಮೈದಾನದಲ್ಲಿ ಸ್ವಾತಂತ್ರ್ಯ ದಿನಾ ಚರಣೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯಿಂದ ಧ್ವಜಾರೋಹಣ ನೆರವೇರಿಸಲಾಗುವುದು. ಬೆಂಗಳೂರು ಉತ್ತರ ವಿಭಾಗದ ಉಪ ವಿಭಾಗಾಕಾರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರು, ಸಂಸದರು ಮಾತ್ರ ವೇದಿಕೆ ಏರಲು ಅವಕಾಶವಿದ್ದು, ಸಂಘಸಂಸ್ಥೆಗಳು, ಸಾರ್ವಜನಿಕರು, ಸಂಘಟನೆಗಳು ಪಾಲ್ಗೊಳ್ಳಬಹುದು ಎಂದು ಹೇಳಿದರು. ಆದರೆ ಕಾರ್ಯಕ್ರಮಕ್ಕೆ ಬರುವವರು ವಂದೇ ಮಾತರಂ, ಭಾರತ್ ಮಾತಾ ಕೀ ಜೈ ಘೋಷಣೆಗಳನ್ನು ಬಿಟ್ಟು ಬೇರೇ ಯಾವ ಘೋಷಣೆಯನ್ನು ಕೂಗುವಂತಿಲ್ಲ. ಒಂದು ವೇಳೆ ಯಾರಾದರೂ ಕಾನೂನು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕಾನೂನು…
ಅಮೃತ ಮಹೋತ್ಸವದ ನಿಮಿತ್ತ ಆ.15ರಂದು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ.15 ರಂದು 8.55ಕ್ಕೆ ಮುಖ್ಯಮಂತ್ರಿಗಳು ಮೈದಾನಕ್ಕೆ ಆಗಮಿಸಲಿದ್ದು, 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನಡೆಸಲಿದ್ದಾರೆ ಎಂದು ಅವರು ವಿವರಿಸಿದರು. ಧ್ವಜಾರೋಹಣದ ನಂತರ ಮುಖ್ಯಮಂತ್ರಿಗಳು ತೆರೆದ ಜೀಪ್ನಲ್ಲಿ ಪರೇಡ್ ಪರಿವೀಕ್ಷಣೆ ಹಾಗೂ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ಕೆಎಸ್ಆರ್ಪಿ, ಸಿಆರ್ಪಿಎಫ್, ಬಿಎಸ್ಎಫ್, ಸಿಎಆರ್, ಕೆಎಸ್ಐಎಸ್ಎಫ್, ಟ್ರಾಫಿಕ್ ಪೊಲೀಸರು, ಮಹಿಳಾ ಪೊಲೀಸ್ ಸಿಬ್ಬಂದಿಗಳು, ಹೋಮ್ ಗಾಡ್ರ್ಸ್, ಟ್ರಾಫಿಕ್ ವಾರ್ಡನ್ಗಳು, ಅಗ್ನಿಶಾಮಕ ದಳದ ಸಿಬ್ಬಂದಿಗಳು, ಡಾಗ್ ಸ್ಕ್ವಾಡ್, ಬ್ಯಾಂಡ್ಗಳು ಸೇರಿದಂತೆ 36 ತುಕಡಿಗಳು ಪಥಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಶಾಲಾ ಮಕ್ಕಳು ಸೇರಿದಂತೆ 1200 ಮಂದಿ ಪಥ ಸಂಚಲದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತುಷಾರ್ ಗಿರಿನಾಥ್ ಅವರು ವಿವರಣೆ ನೀಡಿದರು. ಪ್ರತ್ಯೇಕ ಆಸನ ವ್ಯವಸ್ಥೆ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಲು ಅತಿಗಣ್ಯ, ಗಣ್ಯ…
ಸರಗೂರು: ತಾಲ್ಲೂಕಿನ ನುಗು ವನ್ಯಜೀವಿ ಧಾಮ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಎತ್ತಿಗೆ ಗ್ರಾಮದ ಜಮೀನಿನ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ಕೇರಳ ರಾಜ್ಯದ ವೈನಾಡು ಜಿಲ್ಲೆ ಪಾಲಮಂಗಲಂ ಮೂಲದ ಕೂಲಿಕಾರ್ಮಿಕರ ಬಲಿಯಾಗಿದ್ದಾನೆ. ಸರಗೂರು ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎತ್ತಿಗೆ ಗ್ರಾಮದಲ್ಲಿ ಕೇರಳದ ಮೂಲದ ಜಮೀನು ಕೆಲಸ ಮಾಡುತ್ತಿರುವ ಸಮಯದಲ್ಲಿ ಕೇರಳದ 60 ವರ್ಷ ವಯಸ್ಸಿನ ಬಾಲನ್ ಮೃತಪಟ್ಟಿದ್ದಾನೆ. ಹೆಡಿಯಾಲ ಮತ್ತು ಚಿಕ್ಕಬರಗಿ ಹೋಗುವ ರಸ್ತೆಯ ಬದಿಯಲ್ಲಿ ಇರುವ ಜಮೀನಿನಲ್ಲಿ ಕಾಡಾನೆ ಬೆಳೆಗಳನ್ನು ನಾಶ ಮಾಡಿದೆ. ನಂತರ ಪರಮೇಶ ಎಂಬುವರು ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು. ಆದರೆ ಅವರು ಆನೆಯಿಂದ ತಪ್ಪಿಸಿಕೊಂಡು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಇದಾದ ಬಳಿಕ ಬಾಲನ್ ಎಂಬುವವರು ಜಮೀನು ನಲ್ಲಿ ಸಡ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವಾಗ ಕಾಡಿನಿಂದ ಬಂದ ಆನೆ ಏಕಾಏಕಿ ದಾಳಿ ಮಾಡಿದೆ. ಈ ಘಟನೆಯನ್ನು ಪರಮೇಶ್ ಅವರು ಪ್ರತ್ಯಕ್ಷವಾಗಿ ಕಂಡಿದ್ದಾರೆ. ಘಟನೆ ವೇಳೆ ಅಕ್ಕ ಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದ…
ಹಿರಿಯೂರು: ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಆಯೋಜಿಸಲಾದ ತಿರಂಗಾ ಜಾಥಾಕ್ಕೆ ತಾಲ್ಲೂಕು ತಹಶೀಲ್ದಾರ್ ಪ್ರಶಾಂತ ಕೆ. ಪಾಟೀಲ ಚಾಲನೆ ನೀಡಿದರು. ಈ ವೇಳೆ ನಮ್ಮತುಮಕೂರು ಜೊತೆಗೆ ಮಾತನಾಡಿದ ಪ್ರಶಾಂತ ಕೆ. ಪಾಟೀಲ, ಇದೀಗ ನಮ್ಮ ದೇಶದ 75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಮನೆಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ 75 ನೇ ಅಮೃತಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ಹಿರಿಯೂರು ತಾಲ್ಲೂಕಿನಲ್ಲಿ 1,000 ಅಡಿ ಧ್ವಜವನ್ನು ಯಾತ್ರೆಯ ಮುಖಾಂತರ ಪ್ರದರ್ಶಿಸಿ ಯಾತ್ರೆಯನ್ನು ಆಯೋಜಿಸಿರುವ ಕರ್ನಾಟಕ ರಕ್ಷಣಾ ವೇದಿಕೆಗೆ ತಹಶೀಲ್ದಾರರು ಇದೇ ವೇಳೆ ಅಭಿನಂದನೆ ತಿಳಿಸಿದರು. ಹಿರಿಯೂರು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವ ನಾಗಭೂಷಣ್ ಮಾತನಾಡಿ, ತಿರಂಗ ಯಾತ್ರೆಯನ್ನು ಯಶಸ್ವಿಗೊಳಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಹಾಗೂ ತಾಲ್ಲೂಕು ಮುಖಂಡರುಗಳಿಗೆ ಧನ್ಯವಾದಗಳನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಟಿ.ರಮೇಶ್ ಹಾಗೂ ತಾಲ್ಲೂಕು ಗೌರವ ಅಧ್ಯಕ್ಷರಾದ ಗೋ ಬಸವರಾಜು ಅವರು ಮಾತನಾಡಿದರು. ಈ…
ತುಮಕೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ-ಪರಿಸರ ಸಂರಕ್ಷಣಾ ಪಡೆಯಿಂದ ತುಮಕೂರಿನಲ್ಲಿ ದೇಶಕ್ಕಾಗಿ ಮಹಾ ನಡಿಗೆ ಕಾರ್ಯಕ್ರಮ ನಡೆಯಿತು. ಸುಮಾರು 3 ಸಾವಿರಕ್ಕೂ ಹೆಚ್ಚು ಜನರಿಂದ ರಾಷ್ಟ್ರಧ್ವಜ ಹಿಡಿದು ವಾಕಥಾನ್ ನಡೆಯಿತು. ಜೂನಿಯರ್ ಕಾಲೇಜು ಮೈದಾನದಿಂದ ಆರಂಭಗೊಂಡ ನಡಿಗೆ. ಟೌನ್ ಹಾಲ್ ವೃತ್ತ, ಸ್ವಾತಂತ್ರ್ಯ ಚೌಕದ ಮೂಲಕ ಗಾಜಿನ ಮನೆವರೆಗೂ ಸಾಗಿತು. ವಾಕಥಾನಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಎಸ್ಪಿ ರಾಹುಲ್ ಕುಮಾರ್, ಶಾಸಕ ಜಿ.ಬಿ.ಜ್ಯೋತಿಗಣೇಶ್, ಕಿರುತೆರೆ ನಟಿ ಚಂದನಾ ಭಾಗಿಯಾಗಿದ್ದರು. ಗಾಜಿನ ಮನೆಯಲ್ಲಿ ಸಮಾರಂಭ ನಡೆಯಲಿದ್ದು, ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಉಪಸ್ಥಿತರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಾಗಲಕೋಟೆ : ರಜೆ ಮೇಲೆ ಬಂದಿದ್ದ ಯೋಧನ ತನ್ನ ಬಾಮೈದನಿಂದಲೇ ಕೊಲೆಯಾಗಿದ್ದಾನೆ. 25 ವರ್ಷದ ಕರಿಸಿದ್ದಪ್ಪ ಕಳಸದ ಕೊಲೆಯಾದ ಯೋಧ. ಕರಿಸಿದ್ದಪ್ಪ ಕಳಸದನನ್ನು ಅವರ ಬಾಮೈದ ಚಾಕು ಇರಿದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಆರೋಪಿಯನ್ನು ಧರಿಗೌಡ ದೂಳಪ್ಪನವರ ಎಂದು ಗುರುತಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕರಿಸಿದ್ದಪ್ಪ ಕಳಸದ , ಕಳೆದ ನಾಲ್ಕು ದಿನದ ಹಿಂದೆ ರಜೆಯ ಮೇಲೆ ಊರಿಗೆ ಬಂದಿದ್ದ. ಈ ವೇಳೆ ತನ್ನ ಪತ್ನಿ ಜೊತೆ ಯೋಧ ಜಗಳವಾಡಿದ್ದಾನೆ. ಪತಿ ತನ್ನೊಂದಿಗೆ ಜಗಳವಾಡಿರುವ ವಿಚಾರವನ್ನು ಪತ್ನಿ ಆಕೆಯ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಾಳೆ. ರಜೆ ಮೇಲೆ ಬಂದಿದ್ದ ಯೋಧ ಊಟ ಮಾಡುವ ವೇಳೆ ಪತ್ನಿ ಜೊತೆ ಜಗಳವಾಡಿದ್ದಾನೆ. ಈ ವಿಚಾರಕ್ಕೆ ಯೋಧನ ಬಾಮೈದ ಕೋಪಗೊಂಡಿದ್ದಾನೆ. ತನ್ನ ಸಹೋದರಿಗೆ ಕಿರುಕುಳ ನೀಡುತ್ತೀಯಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ. ಹೀಗೆ ಮಾತಿಗೆ ಮಾತು ಬೆಳೆದು ಜಗಳ ಚಾಕು ಇರಿತದವರೆಗೆ ತಲುಪಿದೆ.…
ಧಾರವಾಡ: ವಿಮಾ ಪಾಲಿಸಿ ಹೊಂದಿದ್ದು ಎಮ್ಮೆಯೊಂದು ಕಾಯಿಲೆಯಿಂದ ಮರಣ ಹೊಂದಿದ ಬಗ್ಗೆ ಪೂರಕ ದಾಖಲೆಗಳೊಂದಿಗೆ ಮಾಹಿತಿ ನೀಡಿದರೂ, ಪರಿಹಾರ ಪಾವತಿಸದ ವಿಮಾ ಕಂಪೆನಿಗೆ ಇಲ್ಲಿನ ಜಿಲ್ಲಾ ಗ್ರಾಹಕ ವ್ಯವಹಾರಗಳ ಪರಿಹಾರ ಆಯೋಗವು 95 ಸಾವಿರ ರೂ.ದಂಡ ವಿಧಿಸಿದೆ. ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ ಮುತ್ತಪ್ಪ ತಪೇಲಿ ಎಂಬುವರು ವಿಮಾ ಪಾಲಿಸಿ ಹೊಂದಿದ್ದ ತಮ್ಮ ಎಮ್ಮೆ ಖಾಯಿಲೆಯಿಂದ ಮರಣಹೊಂದಿದರೂ ಕೂಡ ಯುನಿವೆರಲ್ ಸೊಂಪೆÇ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಕಂಪನಿಯವರು ಪರಿಹಾರದ ಹಣ ನೀಡಿಲ್ಲ ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆಯನ್ನು ನಡೆಸಿದ ಆಯೋಗವು ಎಮ್ಮೆಯ ಮೇಲಿನ ವಿಮಾ ಮೊತ್ತವನ್ನು ಫಿರ್ಯಾದಿಗೆ ನೀಡುವಲ್ಲಿ ಕರ್ತವ್ಯ ಲೋಪ ಎಸಗಿ ಸೇವಾ ನ್ಯೂನ್ಯತೆ ಮಾಡಿದ ವಿಮಾ ಕಂಪನಿಗೆ 95 ಸಾವಿರ ರೂ.ಗಳ ದಂಡ ವಿಧಿಸಿದೆ. 30 ದಿನಗಳ ಒಳಗಾಗಿ ಆದೇಶ ಪಾಲನೆ ಮಾಡಬೇಕು ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಈಶಪ್ಪ ಕೆ. ಭೂತೆ,…
ನುಗ್ಗೆಕಾಯಿ ತಿನ್ನುವುದರಿಂದ ಅಧಿಕ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದ ವಿಚಾರವೇ. ಆದರೆ ನುಗ್ಗೆಕಾಯಿ ಬೀಜಗಳು ಸಹ ಅನೇಕ ಅದ್ಭುತ ಪ್ರಯೋಜನಗಳನಗನು ಹೊಂದಿವೆ. ತಾಜಾ ಮತ್ತು ಹಸಿ ನುಗ್ಗೆಕಾಯಿ ಬೀಜಗಳು ಸಾಕಷ್ಟು ಸಾಫ್ಟ್ ಆಗಿರುತ್ತವೆ. ಆದರೆ ಅವು ಒಣಗಿದ ತಕ್ಷಣ, ಅವು ಗಟ್ಟಿಯಾಗುತ್ತವೆ. ವಿಶಿಷ್ಟವಾದ ರೆಕ್ಕೆಯಂತಹ ರಚನೆಗಳೊಂದಿಗೆ ಬೂದು-ಬಿಳಿ ಬಣ್ಣದಲ್ಲಿರುತ್ತವೆ. ಅವುಗಳನ್ನು ವಿವಿಧ ಉದ್ದೇಶಗಳಿಗಾಗಿ ಹಬೆಯಲ್ಲಿ ಬೇಯಿಸಬಹುದು, ಕುದಿಸಬಹುದು ಅಥವಾ ಹುರಿಯಬಹುದು. ನುಗ್ಗೆಕಾಯಿಯು ಜೀವಸತ್ವಗಳು, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಅಗತ್ಯವಾದ ಅಮೈನೋ ಆಮ್ಲಗಳಿಂದ ಸಮೃದ್ಧವಾಗಿರುವ ಪೋಷಕಾಂಶಗಳನ್ನು ಹೊಂದಿದೆ. ಇದು ದೇಹಕ್ಕೆ ಹಲವಾರು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ನುಗ್ಗೆಕಾಯಿ ಬೀಜಗಳ 10 ಆರೋಗ್ಯ ಪ್ರಯೋಜನಗಳು ಇಲ್ಲಿವೆ: 1. ನಿದ್ರೆಯನ್ನು ಸುಧಾರಿಸುತ್ತದೆ: ನುಗ್ಗೆಕಾಯಿ ಎಲೆಗಳನ್ನು 15 ನಿಮಿಷಗಳ ಕಾಲ ಬಿಸಿ ನೀರಿನಲ್ಲಿ ಹಾಕಿ ಮತ್ತು ನೀವು ಮಲಗುವ ಮೊದಲು ಅದನ್ನು ಕುಡಿಯಿರಿ ಮತ್ತು ರಾತ್ರಿಯ ವಿಶ್ರಾಂತಿಗಾಗಿ ಇದು ನಿಮಗೆ ಸಹಾಯ ಮಾಡುತ್ತದೆ ಮತ್ತು ರಾತ್ರಿಯಲ್ಲಿ ನಿದ್ರೆಗೆ ಜಾರಲು ಸಹಾಯ ಮಾಡುತ್ತದೆ. ಉತ್ತಮ ನಿದ್ದೆಯನ್ನು ಮಾಡಬಹುದು.…