Subscribe to Updates
Get the latest creative news from FooBar about art, design and business.
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
Author: admin
ಆಧ್ಯಾತ್ಮಿಕ ಗುರು ನಿತ್ಯಾನಂದ ಸ್ವಾಮೀಜಿಗೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ನಿತ್ಯಾನಂದನ ವಿರುದ್ಧ 2010ರಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ನಿತ್ಯಾನಂದನ ಮಾಜಿ ಚಾಲಕ ಲೆನಿನ್ ನೀಡಿರುವ ದೂರಿನ ಅನ್ವಯ ತನಿಖೆ ಮುಂದುವರಿದಿದೆ. 2019ರಿಂದ ಈ ಪ್ರಕರಣದ ವಿಚಾರಣೆಗೆ ಹಾಜರಾಗದ ಕಾರಣ ಬೆಂಗಳೂರಿನ ರಾಮನಗರ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಮುಂದಿನ ತಿಂಗಳ 23ರೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶಿಸಿದೆ. ಈ ಹಿಂದೆ ನಿತ್ಯಾನಂದ ‘ಕೈಲಾಸಂ’ ಹೆಸರಿನಲ್ಲಿ ಪ್ರತ್ಯೇಕ ದೇಶ ಸ್ಥಾಪಿಸಿದ್ದಾರೆ ಎಂದು ಪ್ರಚಾರ ಮಾಡಲಾಗಿತ್ತು. ಆ ವೇಳೆ ನಿತ್ಯಾನಂದ ರಹಸ್ಯ ಪ್ರದೇಶದಲ್ಲಿ ಮಾತನಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈಕ್ವೆಡಾರ್ ಬಳಿ ದ್ವೀಪವನ್ನು ಖರೀದಿಸಿರುವುದಾಗಿ ನಿತ್ಯಾನಂದ ಹೇಳಿದ್ದಾರೆ. ಅದಕ್ಕೆ ಕೈಲಾಸಂ ಎಂದು ಹೆಸರಿಡಲಾಗಿದೆ ಎಂದರು. ಆದರೆ, ಅವರು ತಮ್ಮ ದೇಶದಲ್ಲಿ ಇಲ್ಲ ಎಂದು ಈಕ್ವೆಡಾರ್ ಸರ್ಕಾರ ಹೇಳಿಕೊಂಡಿದೆ. ಈ ಹಿಂದೆ ಬೆಂಗಳೂರಿನ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ವಾರೆಂಟ್ ಜಾರಿ ಮಾಡಿದ್ದರೂ ಪೊಲೀಸರಿಗೆ ಆತನ…
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಮಾದಿಗ ಸಮುದಾಯದ ಆದಿ ಜಾಂಬವ ಸಹಕಾರ ಸಂಘ ನೂತನವಾಗಿ ಅಸ್ತಿತ್ವಕ್ಕೆ ಬಂದಿದ್ದು, ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಂಘವನ್ನು ಅಸ್ತಿತ್ವಕ್ಕೆ ತರಲಾಯ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ದುಂಡ ಓಬಳೇಶ್, ಎಲ್ಲಾ ಸಮುದಾಯಗಳಿಗೂ ಎಲ್ಲಾ ಜಾತಿಗಳಿಗೂ ಒಂದೊಂದು ಸಹಕಾರ ಸಂಘಗಳು ಇದೆ. ಹಾಗೆಯೇ ನಮ್ಮ ತುರುವೇಕೆರೆಯಲ್ಲೂ ಮಾದಿಗ ಸಮುದಾಯಕ್ಕೆ ಸಹಕಾರ ಸಂಘವನ್ನು ಮಾಡಬೇಕೆನ್ನುವ ಮಹಾದಾಸೆಯಿಂದ ನಮ್ಮ ಜಾತಿಯ ಮುಖಂಡರುಗಳ ಸಭೆಗಳನ್ನು ಕರೆದು ಚರ್ಚಿಸಿ ಕೊನೆಗೆ ಒಂದು ಹಂತಕ್ಕೆ ಬಂದು ಈ ದಿನ ಸಹಕಾರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆಯು ನಡೆದಿದೆ ಎಂದು ತಿಳಿಸಿದರು. ನಮ್ಮ ಜಾತಿಯಲ್ಲಿ ಹಿಂದುಳಿದ ಬಡ ಜನರಿಗೆ ಸಹಾಯ ಮಾಡುವ ಮತ್ತು ಆರ್ಥಿಕವಾಗಿ ಸದೃಢರಾಗಿ ಮಾಡುವ ಶೈಕ್ಷಣಿಕವಾಗಿ ಬೆಳೆಸುವ ಉದ್ದೇಶದಿಂದ ಈ ಸಹಕಾರ ಸಂಘವನ್ನು ರಚನೆ ಮಾಡಲಾಗುತ್ತಿದೆ ಎಂದು ಇದೇ ವೇಳೆ ಅವರು ತಿಳಿಸಿದರು. ಸಂಘದ ಅಧ್ಯಕ್ಷರಾಗಿ ದುಂಡ ಓಬಳೇಶ್, ಉಪಾಧ್ಯಕ್ಷರಾಗಿ ಮೇಗ ಲಹಳ್ಳಿ ಮಂಜಯ್ಯ , ಕಾರ್ಯದರ್ಶಿಯಾಗಿ ನಂಜಪ್ಪ ಮೇಗಲಹಳ್ಳಿ, ಉಪ ಕಾರ್ಯದರ್ಶಿಯಾಗಿ ಕಮಲ…
ಸಿನಿಮಾ ಕಾರ್ಮಿಕರಿಗಾಗಿ ಚಿರಂಜೀವಿ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ, ಮೆಗಾಸ್ಟಾರ್ ಚಿರಂಜೀವಿ ಇತ್ತೀಚೆಗೆ ಚಲನಚಿತ್ರ ಕಾರ್ಮಿಕರಿಗೆ ಈ ಘೋಷಣೆ ಮಾಡಿದರು. ಇತ್ತೀಚೆಗೆ ಚಿರು ಸೆಲೆಬ್ರಿಟಿ ಕ್ರಿಕೆಟ್ ಕಾರ್ನಿವಲ್ ಜೆರ್ಸಿಯನ್ನು ಅನಾವರಣಗೊಳಿಸಿದ್ದರು. ಈ ಜೆರ್ಸಿ ಲಾಂಚ್ ಕಾರ್ಯಕ್ರಮದಲ್ಲಿ ಚಿತ್ರಪುರಿ ಕಾಲೋನಿಯಲ್ಲಿ ಚಲನಚಿತ್ರ ಕಾರ್ಮಿಕರು ಮತ್ತು ದಿನಗೂಲಿ ಕಾರ್ಮಿಕರಿಗಾಗಿ ಆಸ್ಪತ್ರೆ ನಿರ್ಮಿಸುವುದಾಗಿ ಚಿರು ಘೋಷಿಸಿದರು. ಆಸ್ಪತ್ರೆಯ ಯೋಜನೆಯೂ ಪೂರ್ಣಗೊಂಡಿದೆ ಎಂದ ಅವರು, ತಮ್ಮ ತಂದೆ ಕೊನಿಡೇಲ ವೆಂಕಟ್ ರಾವ್ ಅವರ ಹೆಸರಿನಲ್ಲಿ ಈ ಆಸ್ಪತ್ರೆಯನ್ನು ನಿರ್ಮಿಸಲು ಬಯಸುವುದಾಗಿ ತಿಳಿಸಿದರು. ಈ ಜನ್ಮದಿನದಂದು ಶಂಕುಸ್ಥಾಪನೆ ನೆರವೇರಿಸಿ ಮುಂದಿನ ಜನ್ಮದಿನಕ್ಕೂ ಮುನ್ನ ಸೇವೆಗಳನ್ನು ಆರಂಭಿಸಲಾಗುವುದು ಎಂದರು. ಸದ್ಯ ಮೋಹನ್ ರಾಜಾ ನಿರ್ದೇಶನದಲ್ಲಿ ‘ಗಾಡ್ ಫಾದರ್’ಚಿತ್ರದಲ್ಲಿ ಚಿರಂಜೀವಿ ನಟಿಸುತ್ತಿದ್ದಾರೆ. ಚಿತ್ರೀಕರಣದ ಅಂತಿಮ ಹಂತದಲ್ಲಿರುವ ಈ ಚಿತ್ರ ದಸರಾ ಉಡುಗೊರೆಯಾಗಿ ಅಕ್ಟೋಬರ್ 5 ರಂದು ತೆರೆಗೆ ಬರಲಿದೆ. ಈ ಚಿತ್ರದ ಟೀಸರ್ ಆಗಸ್ಟ್ 21 ರಂದು ಬಿಡುಗಡೆಯಾಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಅಥಣಿಯಲ್ಲಿ ಜರುಗಿದ ಕಾಲೇಜು ಬಸ್ ಅಪಘಾತ ಸ್ಥಳಕ್ಕೆ ಹಾಗೂ ಆಸ್ಪತ್ರೆಗಳಿಗೆ ಬೆಳಗಾವಿ ಎಸ್ ಪಿ ಸಂಜೀವ್ ಪಾಟೀಲ ಭೇಟಿ ನೀಡಿ ಗಾಯಗೊಂಡ ವಿದ್ಯಾರ್ಥಿಗಳ ಪರಿಸ್ಥಿತಿ ಅವಲೋಕಿಸಿದರು. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿ, ಬಸ್ಸಿನಲ್ಲಿ ಅತೀಯಾಗಿ ಮಕ್ಕಳನ್ನು ತುಂಬಿದ್ದಾರೆ ಎಂಬ ಆರೋಪದ ಬಗ್ಗೆ ಪರಿಶೀಲನೆ ಮಾಡಲಾಗುವುದು. ಘಟನೆಯಲ್ಲಿ ಗಾಯಗೊಂಡ ಸುಮಾರು 39 ವಿದ್ಯಾರ್ಥಿಗಳಿಗೆ ನಾಲ್ಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿಸಿದರು. ಒಬ್ಬರು ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ (Belagavi Hospital) ರವಾನಿಸಲಾಗಿದೆ. ದುರ್ಘಟನೆ ಜರುಗಿದಾಗ ಸ್ಥಳೀಯ ಖಾಸಗಿ ವೈದ್ಯರು ಮತ್ತು ಸಾರ್ವಜನಿಕರು ಸಕಾಲಕ್ಕೆ ಸ್ಪಂದಿಸಿದ್ದಾರೆ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು. ಅಪಘಾತದಲ್ಲಿ ಬಸ್ ಹಾಗೂ ಲಾರಿಯ ಇಬ್ಬರೂ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಲೇಜು ವಾಹನದಲ್ಲಿ ಎಷ್ಟು ಜನ ಇದ್ದರು ಎನ್ನುವ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಬೇರೆಡೆ ಸ್ಥಳಾಂತರಿಸಲಿದ್ದೇವೆ ಎಂದು ಅವರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಹಲಗೂರು: ಮಂಡ್ಯ ಜಿಲ್ಲೆಯಲ್ಲಿ ಕುರಿ, ಮೇಕೆ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹಲಗೂರು ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಗಳಿಂದ 60 ಸಾವಿರ ನಗದು ಹಾಗೂ ಕಳ್ಳತನಕ್ಕೆ ಬಳಸಿದ ಇನ್ನೋವ ಕಾರು ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವಿಕುಮಾರ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಪೊಲೀಸ್ ಅಧೀಕ್ಷಕರಾದ ವೇಣುಗೋಪಾಲ್, ಡಿವೈಎಸ್ ಪಿ ನವೀನ್ ಕುಮಾರ್, ಹಲಗೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು. ಮುಖ್ಯಪೇದೆಗಳಾದ ರಿಯಾಜ್, ಉಮೇಶ್, ಪ್ರಭುಸ್ವಾಮಿ, ನಾಗೇಂದ್ರ, ಜಯಕುಮಾರ್, ಸಿದ್ದರಾಜ್, ಮಲ್ಲಿಕಾರ್ಜುನ ತುಳುಕಿ, ರವಿ ಡಿ.ವೈ. ಅವರ ತಂಡ ಆರೋಪಿಗಳನ್ನು ದಸ್ತಗಿರಿ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಬಂಟ್ವಾಳ: ಕೆಲವು ವರ್ಷಗಳ ಹಿಂದೆ ಅನಕ್ಷರತೆ ತುಂಬಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂದು ನಗರ ಭಾಗದ ವಿದ್ಯಾರ್ಥಿಗಳನ್ನು ಮೀರಿಸಿ ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಆ ಮೂಲಕ ಗ್ರಾಮೀಣ ಭಾಗ ಜ್ಞಾನಿಗಳ ಊರಾಗಿ ಮಾರ್ಪಡುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ದಕ್ಷಿಣ ಕನ್ನಡ ಇದರ ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶನಿವಾರ ಬಿ.ಸಿ.ರೋಡಿನಲ್ಲಿ ಹಮ್ಮಿಕೊಂಡ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳು ನಮ್ಮೂರ ಹೆಮ್ಮೆಯಾಗಿದ್ದಾರೆ. ಅವರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯವಾಗಿದೆ. ಅದರಿಂದ ಎನ್.ಎಸ್.ಯು.ಐ.ನಿಂದ ಗೌರವಿಸಲಾಗುತ್ತಿದೆ. ಇಂದಿನ ಸಾಧಕ ಸಾಧಕಿಯರು ಮುಂದೆ ಉನ್ನತ ಮಟ್ಟದ ಶಿಕ್ಷಣ ಪಡೆಯುವ ಮೂಲಕ ನಿಮ್ಮ ಹೆತ್ತವರ ಋಣ ತೀರಿಸಬೇಕು ಎಂದರು. ಶಿಕ್ಷಣ ಕೊಡದ ತಂದೆ ತಾಯಿ ಮಕ್ಕಳ ಮೊದಲ ವೈರಿ. ಇಂದಿನ…
ಮಂಡ್ಯ: ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅಪಮಾನಿಸಿದ ಕೊಡಗು ಜಿಲ್ಲೆಯ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ನೇತೃತ್ವದಲ್ಲಿ ನೂರಾರು ಕಾಂಗ್ರೇಸ್ ಕಾರ್ಯಕರ್ತರು ರಸ್ತೆಗಿಳಿದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ವಿರುದ್ದ ಧಿಕ್ಕಾರ ಘೋಷಣೆಗಳೊಂದಿಗೆ ಆಕ್ರೋಶ ವೈಕ್ತಪಡಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಿಕ್ಕೇರಿ ಸುರೇಶ್, ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಹೋಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಆರ್ ಎಸ್ ಎಸ್ ಮುಖಂಡರು ಕಪ್ಪುಭಾವುಟ ಪ್ರದರ್ಶಿಸಿ ನಮ್ಮ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದು ಅವಮಾನಿಸಿರುವುದು ಖಂಡನೀಯ ಮಾಜಿ ಮಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಅವಮಾನಿಸಿರುವ ಕೃತ್ಯ ಜನಪ್ರತಿನಿಧಿಗಳಿಗೆ ಅವಮಾನಿಸಿದಂತಾಗಿದೆ. ಹಾಗಾಗಿ ಈ ಕೃತ್ಯವನ್ನುವ್ಯಸಗಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಮತ್ತು ಕ್ಷಮೆಯಾಚಿಸಬೇಕು.…
ಹುಬ್ಬಳ್ಳಿ : ಮತ್ತಷ್ಟು ಸಾವರ್ಕರ್ ಕಿಚ್ಚು ಹೆಚ್ಚಾಗಿದ್ದು. ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಸಾವರ್ಕರ್ ಫೋಟೋಗೆ ಬೆಂಕಿ ಹಾಕಿ ದಹನ ಮಾಡಿದ್ದಾರೆ. ಈ ಹಿನ್ನೆಲೆ ಇಂದು ಹುಬ್ಬಳ್ಳಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ಎಂ.ಬಿ.ಪಾಟೀಲ್ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಹರಸಾಹಸ ಪಟ್ಟಿದ್ದಾರೆ. ಸಾವರ್ಕರ್ ಫೋಟೋ ಹಿಡಿದು ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದೆ. 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
2022-23 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಈ ಕೆಳಕಾಣ ಸಿದ 08 ಯೋಜನೆಗಳಿಗೆ ಸುವಿಧಾ ತಂತ್ರಾಂಶದಡಿ (ಪೋರ್ಟಲ್) ವಿಕಲಚೇತನರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ. ಮೆರಿಟ್ ವಿದ್ಯಾರ್ಥಿವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಪುನರ್ವಸತಿ ಕಾರ್ಯಕರ್ತರ ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ ಒಟ್ಟು 08 ಯೋಜನೆಗಳಾಗಿವೆ. ಬೆಳಗಾವಿ ಜಿಲ್ಲೆಯ ವಿಕಲಚೇತನ ವ್ಯಕ್ತಿಗಳು ಯೋಜನೆಗಳಡಿ (Suvidha Website URL: https://suvidha.karnataka.gov.in )ನಲ್ಲಿ ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಸಪ್ಟಂಬರ್ 19 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಹಾರ್ಡ ಪ್ರತಿಯೊಂದಿಗೆ ದ್ವಿ ಪ್ರತಿಯಲ್ಲಿ ಅರ್ಜಿಯನ್ನು ಆಯಾ ತಾಲೂಕು ಪಂಚಾಯತಿ ಕಛೇರಿಯಲ್ಲಿರುವ ಎಂ.ಆರ್.ಡಬ್ಲ್ಯೂ. ಗಳಿಗೆ ಸಲ್ಲಿಸಬೇಕು ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಸ್ವಾತಂತ್ರ್ಯೊತ್ಸವ ದಿನದಂದು ಕಚೇರಿಗಳ ಮೇಲೆ ಧ್ವಜ ಹಾರಿಸದ ಆರ್ ಎಸ್ ಎಸ್ ನಿಜವಾಗಿಯೂ ಅವರು ದೇಶದ್ರೋಹಿಗಳಿರುವ ಸಂಘಟನೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜಿಸಿಲಾದ ಅಮೃತ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಿರಂಗಾ ಅಪಶಕುನವೆಂದು ಹೇಳಿ ಆರ್ ಎಸ್ ಎಸ್ ಧ್ವಜಾರೋಹಣ ಮಾಡಿಲ್ಲ. ಕೋಮುವಾದಿಗಳು ಇತ್ತೀಚೆಗೆ ದೇಶಭಕ್ತಿಯ ಮಾತನಾಡಲು ಆರಂಭಿಸಿದ್ದಾರೆ. ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಕೊಡುಗೆಯನ್ನು ಜನತೆ ಮರೆತಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy