Subscribe to Updates
Get the latest creative news from FooBar about art, design and business.
- ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ | ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
- ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
- ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
- ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
- ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
- ಸರಗೂರು: ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
- ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
Author: admin
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಸಿಲಿನ ದಗೆಗೆ ಜನ ಹೈರಾಣಾಗಿದ್ದಾರೆ. ಹರಿಯಾಣ ಗಡಿಯ ಮಂಗೇಶ್ಕರ್ನಲ್ಲಿ ಗರಿಷ್ಠ ತಾಪಮಾನ 48.8 ಡಿಗ್ರಿ ತಲುಪಿದ್ದು ಹೊಸ ಆತಂಕಕ್ಕೆ ಕಾರಣವಾಗಿದೆ. ಬಿಸಿಗಾಳಿಯ ವಾತಾವರಣ ಹಾಗೂ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿರುವುದು ಹವಾಮಾನ ವೈಪರಿತ್ಯದ ಸಂಕೇತ ಎಂದು ಪರಿಸರವಾದಿಗಳು ಎಚ್ಚರಿಸಿದ್ದಾರೆ. ಮಳೆ ಕೊರತೆ ಉಂಟಾಗಲಿದೆ ಎಂದು ಹೇಳಲಾಗುತ್ತಿದೆ. ರಾಜಸ್ಥಾನ, ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಬಿಸಿ ಗಾಳಿ ಹೆಚ್ಚಾಗಿ ಬೀಸುತ್ತಿದೆ. ನವದೆಹಲಿಯ ಪಶ್ಚಿಮದಲ್ಲಿ ಕಳೆದ 2 ತಿಂಗಳಿನಿಂದ ದಟ್ಟಮೋಡದವ ವಾತಾವರಣ ಸೃಷ್ಟಿಯಾದರೂ ಮರೆಯಾಗುತ್ತಿಲ್ಲ. ಮೋಡ ಮುಸುಕಿನ ಸನ್ನಿವೇಶದಲ್ಲಿ ಬಿರುಗಾಳಿ ಬೀಸುವುದು ಸಾಮಾನ್ಯವಾಗಿದೆ. ಇದರಿಂದ ಉಷ್ಣಾಂಶ ಹೆಚ್ಚಾಗುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಯಾದಗಿರಿ: ಜಿಲ್ಲೆಯ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಡಾ.ಆರ್.ಕೋದಂಡರಾಮ್ ಅವರ ಮಾರ್ಗದರ್ಶನದಲ್ಲಿ ಸರಳ ಸಾಮೂಹಿಕ ವಿವಾಹ ಮತ್ತು ಮಂತ್ರ ಮಾಂಗಲ್ಯ ಬುದ್ಧ ವಂದನಾ ಹಾಗೂ ಮಂಗಲಧಾರಣೆ ನೆರವೇರಿಸಲಾಯಿತು. ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿಗಳು ಮತ್ತು ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಕಾಶೀನಾಥ್ ನಾಟೇಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 15 ಜೋಡಿಗಳಿಗೆ ವಿವಾಹವನ್ನು ನೇರವೇರಿಸಲಾಯಿತು. ವಿವಾಹ ಕಾರ್ಯಕ್ರಮವನ್ನು ನಾಗಪುರದ ನಾಗಾರ್ಜುನ ಬಂತೇಜಿಯವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ರಾಜ್ಯ ಗೌರವ ಅಧ್ಯಕ್ಷರಾದ ಶಿವರುದ್ರಪ್ಪ, ರಾಜ್ಯ ಉಪಾಧ್ಯಕ್ಷರಾದ ಆನಂದ್ ಕುಮಾರ್ ಎಂ., ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಜೆ.ಇ., ರಾಜ್ಯ ಕಾರ್ಯದರ್ಶಿಗಳು ಮತ್ತು ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ ., ರಾಜ್ಯ ಕಾರ್ಯದರ್ಶಿಗಳು ಮತ್ತು ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಕಾಶೀನಾಥ್ ನಾಟೇಕರ್ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಜಗದೀಶ್ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಅಧ್ಯಕ್ಷರಾದ ನಾಗೇಶ್ ಮತ್ತಿತರರು ಭಾಗವಹಿಸಿದ್ದರು. ವರದಿ: ಮುರುಳಿಧರನ್ ಆರ್.,…
ಸರಗೂರು: ತಾಲ್ಲೂಕಿನ ನಾಯಕ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಹಾಗೂ ಆದಿಜಾಂಭವ ಸಮಿತಿ ಆದಿವಾಸಿ ಬುಡಕಟ್ಟು, ಗಿರಿಜನ ಪ್ರಗತಿಪರ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಪರಮ ಪೂಜ್ಯ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರ ಹೋರಾಟಕ್ಕೆ ಬೆಂಬಲ ನೀಡಲು ಕರೆ ನೀಡಲಾಯಿತು. ತಾಲ್ಲೂಕಿನ ನಾಮಧಾರಿಗೌಡನ ಕಲ್ಯಾಣ ಮಂಟಪದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಪುರದಕಟ್ಟೆ ಬಸವರಾಜು, ಪರಮ ಪೂಜ್ಯ ಶ್ರೀ ಪ್ರಸನಾನಂದ ಸ್ವಾಮೀಜಿ ನಮ್ಮ ಜನಾಂಗಕ್ಕೆ ಸಂವಿಧಾನ ಬದ್ಧವಾಗಿ ಸರ್ಕಾರ ನೀಡಬೇಕಾಗಿರುವ ಪರಿಶಿಷ್ಟ ಪಂಗಡ 7.5ರಷ್ಟು ಮತ್ತು ಪರಿಶಿಷ್ಟ ಜಾತಿ 17ರಷ್ಟು ಮೀಸಲಾತಿ ಹೆಚ್ಚಳಕ್ಕಾಗಿ ಸುಮಾರು 95 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತ್ಯಗ್ರಹ ಧರಣಿ ಕುಳಿತಿದ್ದಾರೆ. ಆದರೆ ಈವರೆಗೆ ನ್ಯಾಯ ದೊರಕದೇ ಇರುವುದು ನೋವಿನ ಸಂಗತಿ ಎಂದರು. ಪಟ್ಟಣ ಪಂಚಾಯತ್ ಸದಸ್ಯ ಹಾಗೂ ನಾಯಕ ಸಮಾಜದ ಸಂಘದ ಉಪಾಧ್ಯಕ್ಷ ಶ್ರೀನಿವಾಸ ಮಾತನಾಡಿ, ಪರಮ ಪೂಜ್ಯ ಶ್ರೀ ಪ್ರಸನಾನಂದ ಸ್ವಾಮೀಜಿಗೆ ಬೆಂಬಲ ಸೂಚಿಸಿ ರಾಜ್ಯದ ಎಲ್ಲಾ ತಾಲ್ಲೂಕು…
ಕೊರಟಗೆರೆ: ಸರ್ಕಾರದಿಂದ ಶಾಲಾ ಕಾಲೇಜುಗಳ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗಲೆಂದು ಸ್ಯಾನಿಟರಿ ಪ್ಯಾಡ್ ಗಳ ಉಚಿತ ವಿತರಣೆ ಮಾಡಲಾಗಿದ್ದರೆ, ಇತ್ತ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಸ್ಯಾನಿಟರಿ ಪ್ಯಾಡ್ ಗಳನ್ನು ಹಂಚಿಕೆ ಮಾಡದೇ ಗೋಡಾನ್ ನಲ್ಲಿ ಕೊಳೆಯಲು ಹಾಕಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕೊರಟಗೆರೆ ತಾಲೂಕಿನ ವೈದ್ಯಾಧಿಕಾರಿ ವಿಜಯ್ ಕುಮಾರ್ ಅವರ ನಿರ್ಲಕ್ಷ್ಯದಿಂದಾಗಿ ಬಡ ಹೆಣ್ಣುಮಕ್ಕಳಿಗೆ ಸೇರಬೇಕಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸ್ಯಾನಿಟರಿ ಪ್ಯಾಡ್ ಗಳು ಆಸ್ಪತ್ರೆ ವಠಾರದಲ್ಲಿರುವ ಗೋಡಾನ್ ನಲ್ಲಿ ಕೊಳೆಯುತ್ತಿವೆ ಎನ್ನುವ ಆರೋಪ ಕೇಳಿ ಬಂದಿದೆ. ಸರ್ಕಾರದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ, ಬಡ ಹೆಣ್ಣು ಮಕ್ಕಳಿಗೆ ಈ ಕೊಡುಗೆ ನೀಡಿದೆ. ಆದರೆ, ಇದು ಫಲಾನುಭವಿಗಳಿಗೆ ದೊರಕದೇ ಈ ರೀತಿಯಾಗಿ ಗೋಡಾನ್ ನಲ್ಲಿ ಕೊಳೆಯುತ್ತಿರುವುದು ದುರದೃಷ್ಟಕರವಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರು ತಕ್ಷಣವೇ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಪಾಳು ಬಿದ್ದಿರುವ ಸ್ಥಿತಿಯಲ್ಲಿರುವ ಗೋಡಾನ್ ನಲ್ಲಿ ಸ್ಯಾನಿಟರಿ ಪ್ಯಾಡ್ ಗಳು ಕಂಡು ಬಂದಿದ್ದು,…
ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ದಿನಬಳಕೆಯ ಅಗತ್ಯ ತರಕಾರಿಯಾದ ಟೊಮೊಟೊ ಬೆಲೆ ರಾಜ್ಯ ರಾಜಧಾನಿಯಲ್ಲಿ 100 ರೂಪಾಯಿ ಗಡಿ ಮುಟ್ಟಿದ್ದು, ಬೇರೆ ನಗರಗಳಲ್ಲೂ ಸಹ 100 ರೂ.ಆಸುಪಾಸಿನಲ್ಲಿದೆ. ರಾಜ್ಯದಲ್ಲಿ ಚಂಡಮಾರುತದಿಂದ ಅಕ್ಕಪಕ್ಕದ ರಾಜ್ಯಗಳಲ್ಲಿ ಟೊಮೆಟೊ ಬೆಳೆಗೆ ಭಾರಿ ಹಾನಿಯಾಗಿದ್ದು, ಬೆಲೆ ಗಗನಕ್ಕೇರಿದೆ. ಚಂಡಮಾರುತದ ಜತೆಗೆ ಬಿರುಗಾಳಿ ಸಹಿತ ಮಳೆಯಿಂದಾಗಿ ಬೆಳೆ ಹಾನಿಯಾಗಲು ಪ್ರಮುಖ ಕಾರಣವಾಗಿದೆ. ಮಾರುಕಟ್ಟೆಗೆ ಟೊಮೆಟೊ ಅತಿ ಕಡಿಮೆ ಪ್ರಮಾಣದಲ್ಲಿ ಬರುತ್ತಿದ್ದು, ಇದರಿಂದಾಗಿ ಬೆಲೆ ಗಗನಕ್ಕೇರಿದೆ.ಟೊಮೆಟೊ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಬೆಂಗಳೂರು: ಮೇ 15ರಂದು ಡಿ.ಕೆ. ಶಿವಕುಮಾರ್ ರವರ 60ನೇ ವರ್ಷದ ಹುಟ್ಟುಹಬ್ಬವಾಗಿತ್ತು.ಹುಟ್ಟು ಹಬ್ಬ ಪ್ರಯುಕ್ತ ಅದೇ ದಿನ ಸಂಜೆ ಸಣ್ಣ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಿದ್ದರು ಅದರಲ್ಲಿ ಪ್ರಿಯಾಂಕಾ ಗಾಂಧಿ ಸಹ ಭಾಗಿಯಾಗಿದ್ದರು. ಅಲ್ಲಿ ನಡೆದ ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸದ ಪ್ರಸಂಗವನ್ನು ರಾಜ್ಯ ಬಿಜೆಪಿ ಟೀಕಿಸಿದೆ. ಡಿಕೆಶಿ ಹುಟ್ಟುಹಬ್ಬದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸದ ವಿಚಾರವಾಗಿ ಸರಣಿ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದಾರೆ.ಬಿಜೆಪಿಯುವರು ಡಿಕೆ ಶಿವಕುಮಾರ್ ಅವರನ್ನು ಹರಕೆಯ ಕುರಿಗೆ ಹೋಲಿಸಿದ್ದಾರೆ ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ನಕಲಿ ಗಾಂಧಿಗಳು ನಿಮ್ಮನ್ನು ಇಡುವಲ್ಲಿ ಸ್ಧಾನದಲ್ಲಿ ಇಡುತ್ತಾರೆ ಎಂದಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಟ್ರಬಲ್ ಶೂಟರ್ ಎನಿಸಿಕೊಂಡಿರುವ ಡಿಕೆಶಿ ಅವರ ಹುಟ್ಟುಹಬ್ಬದ ಕೇಕ್ ತಿನ್ನಿಸುವಷ್ಟೂ ಪ್ರಿಯಾಂಕಾ ಗಾಂಧಿಗೆ ಸೌಜನ್ಯವಿಲ್ಲ, ಬೆರೊಬ್ಬ ವ್ಯಕ್ಕಿಯ ಕೈಯಲ್ಲಿ ಕೇಕ್ ತಿನ್ನಿಸುವ ಪ್ರಮೇಯವೇನಿತ್ತು? ಎಂದು ಪ್ರಶ್ನಿಸಿದ್ದಾರೆ. ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಮುಯದಲ್ಲಿ ನಕಲಿ ಗಾಂಧಿ ವಂಶದವರು ಡಿಕೆ ಶಿವಕುಮಾರ್ ಅವರನ್ನು…
ತಿಪಟೂರು: ನಗರದ ಗುರುಕುಲ್ ನಂದ್ ಆಶ್ರಮದಲ್ಲಿ ಮೇ 20 ರಂದು ಜಿಲ್ಲಾ ಮಟ್ಟದ ಮೂರನೇ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಹಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಸಮ್ಮೇಳನಾಧ್ಯಕ್ಷೆ ಡಾ.ಲೀಲಾ ಸಂಪಿಗೆ ಅವರನ್ನು ತಿಪಟೂರು ಗ್ರಾಮದೇವತೆ ಕೆಂಪಮ್ಮ ದೇವಾಲಯದಿಂದ, ನಗರದ ಪ್ರಮುಖ ರಸ್ತೆಯಲ್ಲಿ ನಂದಿದ್ವಜ ಮಂಗಳವಾದ್ಯ ಜಾನಪದ ಕಲಾ ತಂಡದೊಂದಿಗೆ ಮೆರವಣಿಗೆ ಮೂಲಕ ಮಹಿಳಾ ಸಾಹಿತ್ಯ ಸಮ್ಮೇಳನ ವೇದಿಕೆಗೆ ತರಲಾಗುವುದು. ಬಳಿಕ ನಾಡಿನ ಹಿರಿಯ ಸಾಹಿತಿ ನಾಡೋಜ ಕಮಲ ಹಂಪನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ಕೇಂದ್ರ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಕಲ್ಪ ಜೋತಿ ಸಣ್ಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿಸುಧಾ ನರಸಿಂಹರಾಜು, ಕಿರುತೆರೆ ನಟಿ ಸುನಿತಾ ರಾವ್ ವೈ .ವಿ., ನಾರಾಯಣಸ್ವಾಮಿ, ಎಂಎಲ್ಸಿ ಎಂ ಚಿದಾನಂದಗೌಡ ಭಾಗವಹಿಸಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಸಾಹಿತ್ಯ ಸಮಾಜಸೇವೆ ಶಿಕ್ಷಣ ಕನ್ನಡ ಸೇವೆ…
ಎರಡು ವರ್ಷದ ನಂತರ ಪೂರ್ಣ ಪ್ರಮಾಣದ ಶಾಲೆ ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ವಿನೂತನವಾಗಿ ಕಲಿಕಾ ಚೇತರಿಕೆ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಎಂಪ್ರೆಸ್ ಶಾಲೆಯಲ್ಲಿ ನಡೆದ ಕಲಿಕಾ ಚೇತರಿಕೆ ಮತ್ತು ಶಾಲಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದ ಮಕ್ಕಳು ಸ್ಪರ್ಧಾತ್ಮಕವಾಗಿರುವ ಈ ಕಾಲದಲ್ಲಿ ಮೂಲಭೂತ ಶಿಕ್ಷಣದಿಂದ ವಂಚಿತವಾಗಬಾರದು, ಎರಡು ವರ್ಷದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ, ಇಂತಹ ಮಕ್ಕಳಿಗೆ ವಿಶೇಷ ಪಠ್ಯ ಕ್ರಮದ ಮೂಲಕ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಕಲಿಕಾ ಚೇತರಿಕೆ ಉದ್ದೇಶವಾಗಿದೆ ಎಂದರು. ನಮ್ಮ ರಾಜ್ಯದ ಭವಿಷ್ಯಕ್ಕೆ ಅಡಿಪಾಯ ಕಲಿಕಾಚೇತರಿಕೆಯಾಗಿದ್ದು, ಶಿಕ್ಷಣಕ್ಕೆ ಅನುದಾನ ನೀಡಿದರೆ ಸಾಲದು, ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಧ್ಯೇಯ ಹೊಂದಲಾಗಿದೆ, ಶಿಕ್ಷಕರ ನೇಮಕ ಮತ್ತು ಕೊಠಡಿ ನಿರ್ಮಾಣದಿಂದ ಎಲ್ಲವು ಆಗುವುದಿಲ್ಲ, ಜ್ಞಾನದ ಶತಮಾನದಲ್ಲಿ ಶಿಕ್ಷಣಕ್ಕೆ ಒತ್ತು ನೀಡಬೇಕಿರುವುದು ಸರ್ಕಾರದ ಬದ್ಧತೆಯಾಗಬೇಕಿದೆ ಎಂದರು. 21ನೇ ಶತಮಾನದಲ್ಲಿ ಜ್ಞಾನಕ್ಕೆ ಬೆಲೆ ಇದೆ, ಜ್ಞಾನ ಇದ್ದವನೇ ಜಗತ್ತು ಆಳುತ್ತಾರೆ, ಪ್ರಪಂಚದಲ್ಲಿ ಇಂದು ಬೆಂಗಳೂರು…
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೇ 28ರಂದು ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಹಿರಿಯ ನಿರ್ಮಾಪಕ, ಹೋರಾಟಗಾರ ಸಾ.ರಾ.ಗೋವಿಂದು ಅವರು ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಸಾ.ರಾ.ಗೋವಿಂದು ಅಧ್ಯಕ್ಷ ಸ್ಥಾನಕ್ಕೆ ಸ್ರ್ಪಧಿಸಿ ನಾಮಪತ್ರ ಸಲ್ಲಿಸಿದ್ದರೆ, ಅವರ ತಂಡದಲ್ಲಿರುವ ಚಿತ್ರಲೋಕ ವೀರೇಶ್ ನಿರ್ಮಾಪಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಕರಿಸುಬ್ಬು (ವಿ.ಸುಬ್ರಮಣಿ)ನಿರ್ಮಾಪಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ. ವಿತರಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಪಿ.ಎಸ್.ಜ್ಞಾನೇಶ್ವರ ಐತಾಳ್, ಪ್ರದರ್ಶಕರ ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಪಿ.ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಕೆ.ಸಿ.ಎನ್. ಕುಮಾರ್ (ಎಂ.ಎನ್.ಕುಮಾರ್) ವಿತರಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ, ಪ್ರದರ್ಶಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಎಲï.ಸಿ.ಕುಶಾಲ್ ಹಾಗೂ ಗೌರವ ಖಜಾÁಂಚಿ ಸ್ಥಾನಕ್ಕೆ ಬಿ.ಕೆ.ಜಯಸಿಂಹ ಮುಸರಿ ನಾಮಪತ್ರ ಸಲ್ಲಿಸಿದ್ದಾರೆ. ಮೇ 28ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಭಾರತ್ ಜೋಡೋ ಹೆಸರಿನಲ್ಲಿ ಕಾಂಗ್ರೆಸ್ ದೇಶದ ಚುನಾವಣಾ ವ್ಯವಸ್ಥೆಯನ್ನು ಗತಕಾಲಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಗೆದ್ದಾಗ ಇವಿಎಂ ಬಗ್ಗೆ ಮೌನ ವಹಿಸುವ ಕಾಂಗ್ರೆಸ್ ಪಕ್ಷ, ಸೋತಾಗ ಮಾತ್ರ ತನ್ನ ಕಳಪೆ ಪ್ರದರ್ಶನವನ್ನು ಇವಿಎಂ ಯಂತ್ರದ ಮೇಲೆ ಕಟ್ಟುತ್ತಾರೆ. ಮತಯಂತ್ರವನ್ನು ದೂಷಿಸಿ ಪಕ್ಷ ಪುನಶ್ಚೇತನಗೊಳಿಸಲು ಸಾಧ್ಯವೇ ಎಂದು ಬಿಜೆಪಿ ಪ್ರಶ್ನಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಬಿತ್ತಿದ್ದೇ ಬೆಳೆಯುತ್ತದೆ! ಅಧಿಕಾರದ ಅಮಲಿನಲ್ಲಿ, ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತ ಕಾಂಗ್ರೆಸ್ ನಾಯಕರು ಜನರಿಂದ ಬಹುದೂರ ಸಾಗಿದ್ದರು. ಕಾಂಗ್ರೆಸ್ ಜನಸಾಮಾನ್ಯರಿಂದ ದೂರವಾಗಿದೆ ಎಂಬ ಸತ್ಯ ಒಪ್ಪಿಕೊಳ್ಳುವ ಸ್ಥಿತಿ ಈಗ ನಿರ್ಮಾಣವಾಗಿದೆ. ಕಾಂಗ್ರೆಸ್ ಹಾಗೂ ಜನಸಾಮಾನ್ಯರ ನಡುವೆ ದೊಡ್ಡ ಕಂದಕವಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವಾಗ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶವನ್ನು ಧರ್ಮ, ಜಾತಿ, ಭಾಷೆ ಎಂದು ವಿಭಜಿಸಿತ್ತು. ಅದರ ಪರಿಣಾಮವಾಗಿ ದೇಶದ ಜನತೆ ಅಧಿಕಾರದಿಂದ ಕೆಳಗಿಳಿಸಿದರು, ಈಗ ಅಧಿಕಾರವಿಲ್ಲದ ಹತಾಶೆ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ. ಅದಕ್ಕಾಗಿ ಭಾರತ್ ಜೋಡೋ ಎಂದು ಹೊರಟಿದೆ ಎಂದು ವ್ಯಂಗ್ಯವಾಡಿದೆ. ಎಷ್ಟೊಂದು ನಾಟಕ ಮಾಡುವಿರಿ?:…