Subscribe to Updates
Get the latest creative news from FooBar about art, design and business.
- “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
- ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ: ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
- ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ ಪರಮೇಶ್ವರ್ ಸೂಚನೆ
- ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
Author: admin
ಬೆಂಗಳೂರು: ಬ್ರಿಟನ್ನಿನಲ್ಲಿದ್ದಾಗ ಸಾವರ್ಕರ್ ಗೋ ಮಾಂಸ ತಿಂದಿದ್ದರು, ಅವರು ಗೋಪೂಜೆಯನ್ನು ವಿರೋಧಿಸುತ್ತಿದ್ದರು ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗೋವು ಮಾತೆಯಲ್ಲ, ಅದು ಅದರ ಕರುವಿನ ಮಾತೆ ಎಂದು ಸಾವರ್ಕರ್ ಹೇಳಿದ್ದರು. ಭಗತ್ ಸಿಂಗ್ ನಿಜವಾದ ದೇಶಭಕ್ತರು, ಸಾವರ್ಕರ್ ಅಲ್ಲ. ರವಿಕುಮಾರ್ ಇದರ ಇತಿಹಾಸವನ್ನು ಓದಿಕೊಳ್ಳಲಿ ಎಂದಿದ್ದಾರೆ. ಇನ್ನು ಜನೋತ್ಸವ ಮಾಡಲು ಸರ್ಕಾರದ ಪ್ರಯತ್ನ ನಡೆದಿತ್ತು. ಜನರ ಆಕ್ರೋಶದಿಂದ ಎರಡು ಮೂರು ಬಾರಿ ಮುಂದೂಡಿಕೆಯಾಗಿದೆ. ಇದೀಗ ಜನೋತ್ಸವ ಬಿಟ್ಟು ಸಾವರ್ಕರ್ ಉತ್ಸವ ಮಾಡುತ್ತಿದ್ದಾರೆ. ಬಿಜೆಪಿಯವರದ್ದು ವಾಟ್ಸಾಪ್ ಯೂನಿರ್ಸಿಟಿ ಹಾಗಾಗಿ ಅದರಲ್ಲಿ ಏನೂ ಇರುವುದಿಲ್ಲ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಧಾರವಾಡ: ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ಲಾರಿ ಕ್ಲೀನರ್ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಖಾಸಗಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶೀಘ್ರದಲ್ಲೇ ಕೇಂದ್ರ ಸರ್ಕಾರ ಟೋಲ್ ಪ್ಲಾಜಾಗಳನ್ನು ತೆಗೆದುಹಾಕಲಿದೆ. ಇದರರ್ಥ ಇನ್ನು ಮುಂದೆ ಟೋಲ್ ಸಂಗ್ರಹ ಇರುವುದಿಲ್ಲವೆ? ಅಲ್ಲ, ಆದರೆ ಟೋಲ್ ಗೇಟ್ ಇರುವುದಿಲ್ಲ.. ಟೋಲ್ ಸಂಗ್ರಹ ಇರುತ್ತದೆ. ಮತ್ತು ಟೋಲ್ ಪ್ಲಾಜಾಗಳನ್ನು ತೆಗೆದುಹಾಕಿದರೆ, ಸಂಗ್ರಹಗಳು ಹೇಗೆ ಮಾಡುತ್ತವೆ ಎಂಬ ಅನುಮಾನ ಬರಬಹುದು. ಆದರೆ ತಂತ್ರಜ್ಞಾನ ಅಭಿವೃದ್ಧಿಯ ಭಾಗವಾಗಿ ಏನು ಬೇಕಾದರೂ ಆಗಬಹುದು. ಸರಕಾರವು ಅದರ ಭಾಗವಾಗಿ FASTAG ವ್ಯವಸ್ಥೆಯನ್ನು ಲಭ್ಯಗೊಳಿಸಿದೆ. ಆದರೆ ಇದು ಇನ್ನು ಮುಂದೆ ಇರುವುದಿಲ್ಲ. ಆದರೆ, ನೇರವಾಗಿ ಬ್ಯಾಂಕ್ ಖಾತೆಯಿಂದ ಟೋಲ್ ಸಂಗ್ರಹ ಮಾಡಲಾಗುವುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸುತ್ತಿದೆ. ಟೋಲ್ ಪ್ಲಾಜಾಗಳಿಲ್ಲದೆ ದಟ್ಟಣೆ ಕಡಿಮೆಯಾಗಲಿದೆ. ಟೋಲ್ ಪ್ಲಾಜಾಗಳಿಲ್ಲದಿದ್ದರೆ ಏನಾಗಬಹುದು? ಇದರಿಂದ ವಾಹನ ಸವಾರರಿಗೆ ಸಾಕಷ್ಟು ಸಮಯ ಉಳಿತಾಯವಾಗುತ್ತದೆ. ಅದೇ ಪ್ರೇರಣೆಯಿಂದ ಕೇಂದ್ರ ಸರ್ಕಾರವು ಟೋಲ್ ಪ್ಲಾಜಾಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಯೋಜನೆಗೆ ಹೆಜ್ಜೆ ಹಾಕುತ್ತಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಕುರಿತು ವಿವರಗಳನ್ನು ಬಹಿರಂಗಪಡಿಸಿದ್ದಾರೆ. ಟೋಲ್ ಪ್ಲಾಜಾಗಳಿಲ್ಲದಿದ್ದರೆ, ಟೋಲ್…
ವಡಗಾವಿಯ ತೆಗ್ಗಿನಗಲ್ಲಿ ನಿವಾಸಿ ಶೋಭಾ ವಲ್ಲೇಪೂರಕರ ಅನ್ನುವ 40 ವರ್ಷದ ಮಹಿಳೆ ಆಗಸ್ಟ್ 21 ರಂದು ಬೆಳಿಗ್ಗೆ 8:7 ಗಂಟೆಗೆ ಶಹಾಪೂರದಲ್ಲಿರುವ ಚಂದ್ರಕಲಾ ಹೇಡಾ ಇವರ ಮನೆಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಮಹಿಳೆ ಚಹರೆ:4 ಅಡಿ 8 ಇಂಚು ಎತ್ತರ, ದುಂಡು ಮುಖ, ಗಿಡ್ಡ ಮೂಗು, ಸಡಪಾತಾಳ ಮೈಕಟ್ಟು, ಗೋದಿಗೆಂಪು ಮೈಬಣ್ಣ ಹೊಂದಿರುವ ಮಹಿಳೆ ನಾಪತ್ತೆ ವೇಳೆಯಲ್ಲಿ ಬಿಳಿ ಮತ್ತು ಕೆಂಪು ಬಣ್ಣದ ಸಾಡಿ ಹಳದಿ ಬಣ್ಣದ ಜಂಪರ್ ಧರಿಸಿದ್ದಳು.. ಕನ್ನಡ, ಹಿಂದಿ, ತೆಲಗು, ಮರಾಠಿ ಭಾಷೆ ಬಲ್ಲ ಮಹಿಳೆ ಸುಳಿವು ಸಿಕ್ಕವರು ತಕ್ಷಣವೇ ಶಹಾಪೂರ ಪೊಲೀಸ್ ಠಾಣೆ ದೂರವಾಣ ಸಂಖ್ಯೆ 9480804046, 0831-2405233 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲ ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ರಾಜ್ಯ ಸರ್ಕಾರದ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಖ್ಯಮಂತ್ರಿ ಬೊಮ್ಮಾಯಿಯಿಂದ ಹಿಡಿದು ಎಲ್ಲ ಸಚಿವರುಗಳು, ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆಸುತ್ತಿದ್ದು, ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಪ್ರಧಾನಿ ಮೋದಿಗೆ ಪತ್ರ ಬರೆಯುವುದಾಗಿ ಕೆಂಪಣ್ಣ ಹೇಳಿದ್ದು ಕೋಲಾರ ಜಿಲ್ಲೆ ಉಸ್ತುವಾರಿ ಸಚಿವ ಮುನಿರತ್ನ ಅವರ ಹೆಸರನ್ನು ಮಾಧ್ಯಮಗಳ ಮುಂದೆ ಪ್ರಸ್ತಾಪಿಸಿರುವ ಗುತ್ತಿಗೆದಾರರ ಕೆಲಸ ಮಂಜೂರು ಆಗಬೇಕೆಂದರೆ ಲಂಚ ಕೊಡಬೇಕು, ಇಲ್ಲದಿದ್ದರೆ ಗುತ್ತಿಗೆ ರದ್ದು ಮಾಡಲಾಗುವುದು,ಹಣ ಕಲೆಕ್ಟ್ ಮಾಡಿ ತನ್ನಿ ಎಂದು ತೋಟಗಾರಿಕೆ ಸಚಿವ ಮುನಿರತ್ನ ನೇರವಾಗಿ ಬೆದರಿಕೆ ಹಾಕುತ್ತಾರೆ ಎಂದು ಕೆಂಪಣ್ಣ ದೂರಿದರು. ಸರ್ಕಾರದ ಸಚಿವರು, ಶಾಸಕರು ಲಂಚ, ಭ್ರಷ್ಟಾಚಾರದಲ್ಲಿ ನಂಬರ್ 1 ಮತ್ತು 2 ಸ್ಥಾನದಲ್ಲಿದ್ದಾರೆ. ಗುತ್ತಿಗೆದಾರರಿಂದ ಕಾಮಗಾರಿ ಹಣದಲ್ಲಿ ಶೇಕಡಾ 40ರಷ್ಟು ಲಂಚ ಪಡೆಯುತ್ತಾರೆ. ಅವರಿಗೆ ಇಷ್ಟೊಂದು ಲಂಚ ಹೋದರೆ ಉಳಿದ ಹಣದಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಲು…
ಬೆಳಗಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳು ಸ್ಥಾಪನೆಗೊಂಡಾಗಿನಿಂದ ಬಡವರಿಗೆ ಅಕ್ಷಯ ಪಾತ್ರೆಯಾಗಿ ಹೊರಹೊಮ್ಮಿದೆ. ಲಕ್ಷಾಂತರ ಬಡಜನರು ಈ ಗ್ರಾಮಾಭಿವೃದ್ಧಿ ಸಂಘಗಳ ಮೂಲಕ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಇತ್ತಿಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಶಾಖೆಗಳು ರಾಜ್ಯಾದ್ಯಂತ ಹರಡಿ ಜನರ ಸೇವೆ ಮಾಡುತ್ತಿವೆ. ತನ್ಮೂಲಕ ಸಮಾಜಕ್ಕೆ ಆದರ್ಶವಾಗಿವೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೊದಗಾ ಹಾಗೂ ಸುಳೇಭಾವಿ ಕಾರ್ಯಕ್ಷೇತ್ರದ ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮೀ ಪೂಜಾ ಹಾಗೂ ಧಾರ್ಮಿಕ ಸಭೆಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು. ಈ ಸಮಯದಲ್ಲಿ ದತ್ತಾ ಬಂಡಿಗಿಣಿ, ಶಂಕರಗೌಡ ಪಾಟೀಲ, ಲಕ್ಷ್ಮೀ ನಾರಾಯಣ ಕಲ್ಲೂರ, ವಿಠ್ಠಲ ಬಂಡಿಗಿಣಿ, ರುದ್ರಪ್ಪ, ಮಹೇಶ ಸುಗಣೆನ್ನವರ, ದುಗ್ಗೇಗೌಡ, ಪ್ರದೀಪ ಶೆಟ್ಟಿ, ಮಹಾಂತೇಶ ಬಸ್ಸಾಪುರ, ಗೀತ ಹಣಗೋಜಿ, ಶೈಲಾ ವಠಾರೆ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಬೆಂಗಳೂರು : ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ತಿಳಿಸಿರುವಂತೆ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಅಡುಗೆ ಸಿಬ್ಬಂದಿಯು ಸರ್ಕಾರದ ಪೂರ್ಣಕಾಲಿಕ ನೌಕರರಾಗುವುದಿಲ್ಲ. ನಿಗದಿತ ಗೌರವಧನ ಪಡೆದು ಪ್ರತಿ ದಿನ 4 ಗಂಟೆಗಳ ಅವಧಿಗೆ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಾರೆ. ಆದ್ದರಿಂದ ಈ ಅಡುಗೆ ಸಿಬ್ಬಂದಿಯ ವಾಸಸ್ಥಳವನ್ನು ಪರಿಶೀಲಿಸಿ ಮಹಾತ್ಮಗಾಂಧಿ ನರೇಗಾ ಅಧಿನಿಯಮದನ್ವಯ ಜಾಬ್ ಕಾರ್ಡ್ ನೀಡಲು ಮತ್ತು ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ಒದಗಿಸಲು ಅಗತ್ಯ ಕ್ರಮವಹಿಸುವಂತೆ ಆದೇಶಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ.ಅವರ ಆಪ್ತ ಸಹಾಯಕ ಈ ಕುರಿತಾಗಿ ಜಿಲ್ಲಾ ಪೊಲೀಸರಿಗೆ ದೂರು ನೀಡಿದ್ದಾರೆ. ಪತ್ರದಲ್ಲಿ ಸ್ವಾತಂತ್ರ್ಯಕ್ಕೆ ಹೋರಾಡಿದ ಟಿಪ್ಪು ಸುಲ್ತಾನ್ ಬಗ್ಗೆ ನೀನು ಮುಸ್ಲಿಂ ಗೂಂಡಾ ಎಂದು ಹೇಳಿದೆಯಲ್ಲ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಕಾಲೇಜು ಕಟ್ಟಡ ಕಟ್ಟಲು ನಮ್ಮ ಮುಸ್ಲಿಂ ಸಿಮೆಂಟ್ ಬೇಕು. ಆದರೆ, ಮುಸ್ಲಿಂ ಸಮುದಾಯ ಬೇಡ, ನಾಚಿಕೆಯಾಗಬೇಕು. ನಾಲಿಗೆ ಕಟ್ ಮಾಡುತ್ತೇವೆ. ಹುಷಾರ್, ಬಾಲ ಬಿಚ್ಚಬೇಡ ಎಂದು ಪತ್ರದಲ್ಲಿ ಬೆದರಿಕೆ ಬರೆಯಲಾಗಿದೆ. ಇನ್ನು ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಅವರು ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ. ನಾನು ಎಲ್ಲಾ ಮುಸ್ಲಿಂ ಸಮುದಾಯದವರನ್ನು ಬೈದಿಲ್ಲ. ಹರ್ಷ, ಪ್ರವೀಣ್ ನೆಟ್ಟಾರು, ಪ್ರೇಮ್ ಸಿಂಗ್ ಅವರ ಮೇಲೆ ದಾಳಿ ಮಾಡಿದವರು ಮುಸ್ಲಿಂ ಗೂಂಡಾಗಳು ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ತಮಿಳುನಾಡು : ಹೋಂ ವರ್ಕ್ ಒತ್ತಡ ಹೆಚ್ಚಾಗಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುವರುರ್ ಜಿಲ್ಲೆಯ ಪೆರಲಂನಲ್ಲಿ ಘಟನೆ ನಡೆದಿದೆ. 14 ವರ್ಷದ ಸಂಜಯ್ ಮೃತ ವಿದ್ಯಾರ್ಥಿಯಾಗಿದ್ದಾನೆ. ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೋಮ್ ವರ್ಕ್ ಕಾರಣಕ್ಕೆ ಸಾಕಾಗಿ ಹೋಗಿದ್ದ ಎನ್ನಲಾಗಿದೆ. ಹೀಗಾಗಿ ಶಾಲೆಯನ್ನು ಬದಲಿಸುವಂತೆ ತನ್ನ ಪೋಷಕರಿಗೆ ಪದೇ ಪದೇ ಹೇಳುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಪೋಷಕರು ಶಾಲೆ ಬದಲಿಸಲು ನಿರಾಕರಿಸಿದಾಗ ಇನ್ನಷ್ಟು ಒತ್ತಡಕ್ಕೊಳಗಾದ ಸಂಜಯ್ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆತನನ್ನು ತಿರುವುರ್ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು : ನ್ಯಾಷನಲ್ ಹೈವೇ 4 ರಲ್ಲಿ ಬೆಳಗಿನ ಜಾವ ಸರಿ ಸುಮಾರು 4ಗಂಟೆ ಸಮಯದಲ್ಲಿ ಕಳ್ಳಂಬೆಳ್ಳ ಮತ್ತು ಚಿಕ್ಕನಹಳ್ಳಿಯ ಸಮೀಪದ ಬಾಳೇನಹಳ್ಳಿಯ ಬಳಿ ಬೀಕರ ಅಪಘಾತ ನಡೆದಿದೆ. ಕ್ರೂಜರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕ್ರೂಜರ್ ನಲ್ಲಿದ್ದ ಒಂಬತ್ತು ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಕೂಲಿ ಕಾರ್ಮಿಕರು ರಾಯಚೂರು ಮತ್ತು ಮಾನ್ವಿಯ ಭಾಗದವರಂದು ತಿಳಿದು ಬಂದಿದೆ. ಕ್ರೂಜರ್ ವಾಹನದಲ್ಲಿ ಒಟ್ಟು 23 ಜನ ಕೂಲಿ ಕಾರ್ಮಿಕರು ಮಾನ್ವಿಯಿಂದ ಬೆಂಗಳೂರಿನ ಕಡೆಗೆ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 9 ಜನ ಕಾರ್ಮಿಕರು ಸ್ಥಳದಲ್ಲೇ ಮೃತರಾಗಿದ್ದು, ಉಳಿದ 14 ಜನ ಕಾರ್ಮಿಕರನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಅದರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂದರ್ಭದಲ್ಲಿ ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್, ಎಸ್.ಪಿ. ರಾಹುಲ್ ಕುಮಾರ್ ಶಹಪುರ್ ವಾಡ್, ಅಡಿಷನಲ್ ಎಸ್ಪಿ ಉದ್ದೇಶ್,…