Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ (61) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಮಂಗಳವಾರ (ಸೆಪ್ಟೆಂಬರ್ 6) ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ, ‘ಉಮೇಶ ಕತ್ತಿ ಜೀ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ. ಓಂ ಶಾಂತಿ’ ಎಂದು ಸಂತಾಪ ಸೂಚಿಸಿದ್ದಾರೆ. ಉಮೇಶ್ ಕತ್ತಿ ಅವರನ್ನು ಅವರ…
ಭುವನೇಶ್ವರ್ ಸೆಪ್ಟೆಂಬರ್ 7: ಒಡಿಶಾದಲ್ಲಿ ಪ್ರವಾಹದ ನೀರು ಇಳಿಮುಖವಾಗಿದ್ದು, ವಿಷಕಾರಿ ಇರುವೆಗಳಿಂದಾಗಿ ಗ್ರಾಮವೊಂದು ಭಯಭೀತಗೊಂಡಿದೆ. ಇರುವೆಗಳಿಂದಾಗಿ ಜನರು ಯಾವುದೇ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಕಾಲಿಟ್ಟಲೆಲ್ಲ ಇರುವೆಗಳದ್ದೇ ಕಾರುಬಾರು ಚಾಲ್ತಿಯಲ್ಲಿದೆ. ಇದರಿಂದಾಗಿ ಬೇಸತ್ತ ಅನೇಕ ಜನರು ಗ್ರಾಮವನ್ನು ತೊರೆದಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಜಿಲ್ಲಾಡಳಿತಕ್ಕೆ ಸಹಾಯ ಮಾಡಲು ವಿಜ್ಞಾನಿಗಳ ತಂಡವನ್ನು ಕಳುಹಿಸಿದೆ. ಅವರು ಈ ಭೀಕರ ಬಿಕ್ಕಟ್ಟಿನಿಂದ ಹೊರಬರಲು ಮಾರ್ಗವನ್ನು ಸೂಚಿಸಿದ್ದಾರೆ. ಈ ಇರುವೆಗಳ ದಾಳಿಯಿಂದ ಪಾರಾಗಲು ರಾಣಿ ಇರುವೆಗಳನ್ನು ಕಂಡುಹಿಡಿಯುವುದು ಒಂದೇ ಮಾರ್ಗವಾಗಿದೆ, ಇಲ್ಲದಿದ್ದರೆ ಈ ಬಿಕ್ಕಟ್ಟನ್ನು ಕೊನೆಗೊಳಿಸುವುದು ಕಷ್ಟ ಎಂದು ವಿಜ್ಞಾನಿಗಳು ಹೇಳುತ್ತಾರೆ. ವಿಷಪೂರಿತ ಇರುವೆಗಳು ಇಡೀ ಗ್ರಾಮವನ್ನು ವಶಪಡಿಸಿಕೊಂಡಿವೆ. ಹೀಗಾಗಿ ಒಡಿಶಾದ ಪುರಿ ಜಿಲ್ಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಪ್ರಮುಖ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ವಾಸ್ತವವಾಗಿ, ವಿಷಕಾರಿ ಇರುವೆಗಳು ಇಡೀ ಹಳ್ಳಿಯ ಮೇಲೆ ದಾಳಿ ಮಾಡಿದೆ. ಮಂಗಳವಾರ, ಅನೇಕ ಜನರು ಗ್ರಾಮವನ್ನು ತೊರೆದು ಓಡಿಹೋಗುವಂತೆ ಒತ್ತಾಯಿಸಲಾಗಿದೆ ಎಂದು ರಾಜ್ಯ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಚಂದ್ರದೇವಪುರ ಪಂಚಾಯಿತಿಯ ಬ್ರಾಹ್ಮಣಸಾಹಿ ಗ್ರಾಮದಲ್ಲಿ ಘಟನೆ…
ಬೆಂಗಳೂರು, ಸೆ.7. ದಂಪತಿ ನಡುವೆ ವೈವಾಹಿಕ ವ್ಯಾಜ್ಯ ಏರ್ಪಟ್ಟಿದ್ದಾಗ ಕೋರ್ಟ್ ಮಗುವನ್ನು ಪತ್ನಿಯ ವಶಕ್ಕೆ ಒಪ್ಪಿಸಿದ್ದರೆ ಆಗ ಪಾಸ್ ಪೋರ್ಟ್ ನೀಡಲು ತಂದೆಯ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಬೆಂಗಳೂರಿನ ಮಹಿಳೆಯೊಬ್ಬರು ಸಲ್ಲಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯಪೀಠ, ತಮ್ಮ ಅರ್ಜಿ ವಜಾಗೊಳಿಸಿರುವ ಪಾಸ್ಪೋರ್ಟ್ ಅಧಿಕಾರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿ ಈ ಆದೇಶ ಮಾಡಿದೆ. ”ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿ ಅರ್ಜಿದಾರರು ಸಲ್ಲಿಸಿರುವ ಅರ್ಜಿಯನ್ನು ಅವರ ಮಾಜಿ ಪತಿಯ ಉಪಸ್ಥಿತಿ ಕೇಳದೆ ಅಥವಾ ಒಪ್ಪಿಗೆ ಕೇಳದೆ ಪಾಸ್ ಪೋರ್ಟ್ ಅರ್ಜಿಯನ್ನು ಪರಿಗಣಿಸಬೇಕು” ಎಂದು ನ್ಯಾಯಪೀಠ ಆದೇಶ ನೀಡಿದೆ. ಭೇಟಿಯ ಹಕ್ಕು ಮೊಟಕಾಗದು: ಅಲ್ಲದೆ, ಕೇವಲ ಪಾಸ್ ಪೋರ್ಟ್ ನೀಡುವುದರಿಂದ ಮಗುವಿನ ಭೇಟಿಯ ಹಕ್ಕನ್ನು ಸಂಪೂರ್ಣವಾಗಿ ನಿರಾಕರಿಸಿದಂತಾಗುವುದಿಲ್ಲ. ಪ್ರತಿವಾದಿಗಳ ಪರ ವಕೀಲರು, ಪಾಸ್ಪೋರ್ಟ್ ಪಡೆದು ಆನಂತರ ವೀಸಾ ಪಡೆದರೆ ಅವರು ವಿದೇಶಕ್ಕೆ ತೆರಳಿದರೆ…
ಬೆಂಗಳೂರು ಸೆಪ್ಟೆಂಬರ್ 7: ಕರ್ನಾಟಕ ಬೆಂಗಳೂರಿನಲ್ಲಿ ತೀವ್ರ ಮಳೆಯ ನಡುವೆ, ಪೂರ್ವ ವಲಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ನಿನ್ನೆ ರಾತ್ರಿ ಬ್ಲಾಕ್ ಶಿಕ್ಷಣಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಬ್ಲಾಕ್ ಶಿಕ್ಷಣಾಧಿಕಾರಿಗಳು ಹೊರಡಿಸಿರುವ ಆದೇಶವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಅನ್ವಯವಾಗುತ್ತದೆ. ಇದೇ ವೇಳೆ ನಗರದಲ್ಲಿ 3 ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕಳೆದ 50 ವರ್ಷಗಳಲ್ಲಿ ನಗರದಲ್ಲಿ ಸುರಿದ ಎರಡನೇ ಅತಿ ಹೆಚ್ಚು ಮಳೆಯಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆಯ ಪರಿಸ್ಥಿತಿ ಮಂಗಳವಾರ ರಾತ್ರಿಯವರೆಗೂ ಹಾಗೆಯೇ ಇತ್ತು. ಮಂಗಳವಾರ, ಭಾರತೀಯ ಹವಾಮಾನ ಇಲಾಖೆ (IMD) ನಗರವು ಮುಂಬರುವ 2-3 ದಿನಗಳವರೆಗೆ ಮಳೆಯಿಂದ ಬಿಡುವು ಕಾಣುವುದಿಲ್ಲ ಎಂದು ಭವಿಷ್ಯ ನುಡಿದಿದೆ. ನಗರದ ಯೆಮಲೂರು, ರೈನ್ಬೋ ಡ್ರೈವ್ ಲೇಔಟ್, ಸನ್ನಿ ಬ್ರೂಕ್ಸ್ ಲೇಔಟ್,…
ಬೆಂಗಳೂರು, ಸೆಪ್ಟೆಂಬರ್ 07: ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 22 ಕಡೆಗಳಲ್ಲಿ ಏಕಕಾಲಕ್ಕೆ ದಾಳಿಯಾಗಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಬೆಂಗಳೂರು ನಗರದ 22 ಪ್ರದೇಶಗಳಲ್ಲಿ ಬುಧವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 45ಕ್ಕೂ ಅಧಿಕ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ. ಬುಧವಾರ ಬೆಳಗ್ಗೆ 6.30ಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಆರಂಭಿಸಿದ್ದಾರೆ. ಬೆಂಗಳೂರು ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಆಸ್ಪತ್ರೆ ಸೇರಿದಂತೆ ವಿವಿಧ ಕಡೆ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಮಣಿಪಾಲ್ ಸಮೂಹ ಸಂಸ್ಥೆಗಳ ಪ್ರಮುಖ ಕಚೇರಿ ಇರುವ ಉಡುಪಿಯ ಮಣಿಪಾಲ್ನಲ್ಲಿಯೂ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು, ಸೆ.7. ರಾಜ್ಯದಲ್ಲಿ ಗೋಮಾಳ, ಸರಕಾರಿ ಜಾಗ ಒತ್ತುವರಿ ಆಗುವುದು ಕಾಮನ್. ಆದರೆ, ಜನರು ಸ್ಮಶಾನದ ಜಾಗವನ್ನೂ ಸಹ ಬಿಡೋದಿಲ್ಲ.ಹೌದು ಅದು ನಿಜ, ಸರ್ಕಾರವೇ ಹೈಕೋರ್ಟ್ ಗೆ ಮಂಗಳವಾರ ನೀಡಿರುವ ಮಾಹಿತಿಯಂತೆ ಒಟ್ಟು 1,141 ಕಡೆ ಸ್ಮಶಾನ ಜಾಗಗಳು ಒತ್ತುವರಿಯಾಗಿದೆಯಂತೆ. ಆ ಪೈಕಿ ಸರ್ಕಾರ ಈವರೆಗೆ ತೆರವು ಮಾಡಿರುವುದು ಕೇವಲ 282, ಇನ್ನೂ 859 ಕಡೆ ಸ್ಮಶಾನ ಜಾಗಗಳ ಒತ್ತುವರಿಯನ್ನು ತೆರವುಗೊಳಿಸಬೇಕಾಗಿದೆ. ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪಾಲನೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬೆಂಗಳೂರಿನ ಮಹಮ್ಮದ್ ಇಕ್ಬಾಲ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯು ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಅವರಿದ್ದ ವಿಭಾಗೀಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರದ ಪರ ವಕೀಲರು, ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಸಲ್ಲಿಸಿದ ಅನುಪಾಲನಾ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.ಸರ್ಕಾರದ ಪರ ವಕೀಲರು ವಾದ…
ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಕೊನೆಯುಸಿರೆಳೆದಿದ್ದಾರೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿದ್ದಾಗ ಎದೆನೋವು ಕಾಣಿಸಿಕೊಂಡು ಬಾತ್ ರೂಮ್ ನಲ್ಲಿ ಕುಸಿದುಬಿದ್ದಿದ್ದರು. ಈ ವೇಳೆ ತಕ್ಷಣವೇ ಕುಟುಂಬಸ್ಥರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಅವರಿಗೆ ತಕ್ಷಣ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ತಡ ರಾತ್ರಿ ಸಚಿವ ಉಮೇಶ್ ಕತ್ತಿ ವಿಧಿವಶರಾಗಿದ್ದಾರೆ. ರಾಮಯ್ಯ ಅಸ್ಪತ್ರೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ಭೇಟಿ ನೀಡಿದ್ದಾರೆ. ಕುಟುಂಬಸ್ಥರು, ಅಭಿಮಾನಿಗಳ ಕಣ್ಣೀರು: ಉಮೇಶ್ ಕತ್ತಿ ಸಾವಿನ ಸುದ್ದಿ ಕೇಳಿ ಬೆಂಬಲಿಗರು, ಅಭಿಮಾನಿಗಳು ಮತ್ತು ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದತ್ತ ಬೆಂಬಲಿಗರು ಆಗಮಿಸಿದ್ದಾರೆ. ಉಮೇಶ್ ಕತ್ತಿ ಅವರ ಅಗಲಿಕೆಯನ್ನು ನಂಬಲಾಗದೆ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಘಟಕದ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಮೊದಲನೇ ವರ್ಷದ ಗಣೇಶೋತ್ಸವವನ್ನು ಆಚರಣೆ ಮಾಡಲಾಯಿತು. ಗಣೇಶೋತ್ಸವ ಮೆರವಣಿಗೆಯಲ್ಲಿ ಲೌಡ್ ಸ್ಪೀಕರ್ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಮೆರವಣಿಯನ್ನು ಪೊಲೀಸರು ತಡೆದು ನಿಲ್ಲಿಸಿದ್ದು, ಭಾರತದ ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ರಾಜ್ಯ ಸರಕಾರದ ಆದೇಶದಂತೆ ಲಘು ಶಬ್ದ ಬಳಕೆ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಡಿಗೆ ವೇಳೆ ಲೌಡ್ ಸ್ಪೀಕರ್ ಗೆ ಅನುಮತಿ ನೀಡಿದ್ದೀರಿ ಆದರೆ ನಮ್ಮನ್ನೇಕೆ ತಡೆಯುತ್ತಿದ್ದೀರಿ ಎಂದು ಮುಖಂಡರು, ಕಾರ್ಯಕರ್ತರ ಪ್ರಶ್ನಿಸಿದ್ದು, ಇದರಿಂದಾಗಿ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು. ಘಟನೆಯನ್ನು ಖಂಡಿಸಿ ಸ್ಥಳದಲ್ಲೇ ಪ್ರತಿಭಟನೆಗೆ ಮುಂದಾದಾಗ ಸಂಘಟಕರ ಜೊತೆ ಮಾತನಾಡಿದ ಪೊಲೀಸರು ಲೌಡ್ ಸ್ಪೀಕರ್ ನಿಯಮಗಳ ಬಗ್ಗೆ ಮನವರಿಕೆ ಮಾಡಿಸಿದ್ದು, ಬಳಿಕ ಡೋಲು, ನೃತ್ಯಗಳ ಮೂಲಕ ಮೆರವಣಿಗೆ ಮುಂದುವರೆಸಲಾಯಿತು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಗುಬ್ಬಿ : ತಾಲೂಕಿನಲ್ಲಿ ವರುಣನ ಆರ್ಭಟಕ್ಕೆ ಚೇಳೂರು ಹೋಬಳಿಯ ಹರಿವೆಸಂದ್ರ ಗ್ರಾಮದಲ್ಲಿ ಎರಡು ಮನೆಗಳು ತಡ ರಾತ್ರಿ ಧರೆಗೆ ಉರುಳಿದ್ದು, ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ತಡರಾತ್ರಿ 11 ಗಂಟೆಯ ಸಮಯದಲ್ಲಿ ಭಾರೀ ಮಳೆಗೆ ಮನೆ ಕುಸಿದಿದ್ದು, ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರು ಸಹ ಯಾರು ಸ್ವೀಕರಿಸುತ್ತಿಲ್ಲ ಎಂದು ಸಂತ್ರಸ್ತ ಮಹಿಳೆ ಮಹದೇವಮ್ಮ ದೂರಿದ್ದಾರೆ. ಕೂಡಲೇ ಸರಕಾರ ಈ ಮನೆಗಳಿಗೆ ಪರಿಹಾರ ನೀಡಿ ತಾತ್ಕಾಲಿಕವಾಗಿ ಅವರಿಗೆ ನೆರವು ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ವರದಿ: ಡಿ.ಮಂಜುನಾಥ್ ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಭಾರತೀಯ ಜೀವ ವಿಮಾ ಪ್ರತಿನಿಧಿಗಳು ತಿಪಟೂರು ಜೀವ ವಿಮಾ ಕಚೇರಿ ಮುಂದೆ ತಿಪಟೂರು ಘಟಕದ ಜೀವ ವಿಮಾ ಪ್ರತಿನಿಧಿಗಳ ಅಧ್ಯಕ್ಷ ಬಿ.ಪಿ.ಜಯಪ್ಪ ನೇತೃತ್ವದಲ್ಲಿ ಸಾಂಕೇತಿಕವಾಗಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಪ್ರೀಮಿಯಂದಾರರು ಸಾಲದ ಮೇಲಿನ ಬಡ್ಡಿ ದರ ಹೆಚ್ಚಳ, ಪ್ರೀಮಿಯಂ ಮೇಲಿನ ಜಿಎಸ್ ಟಿ ಹಿಂತೆಗೆತ ಹಾಗೂ ವಿಮಾ ಏಜೆಂಟ್ ಗಳ ಮೆಡಿಕ್ ಲೈನ್ ಪಿಂಚಣಿ ಸೌಲಭ್ಯ ಗ್ರಾಜುವಿಟಿ ವಿವಿಧ ರೀತಿಯ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಶಾಖ ಘಟಕದ ಅಧ್ಯಕ್ಷರಾದ ಬಿ.ಪಿ.ಜಯಪ್ಪ, ಉಪಾಧ್ಯಕ್ಷರಾದ ಹಾಲುಗೋಣ ಶಿವಾನಂದ್, ಗೊರಗುಂಡನಹಳ್ಳಿ ಗೋವಿಂದಪ್ಪ, ವಿದ್ಯಾಧರ ಸೇರಿದಂತೆ ಹಲವಾರು ಏಜೆಂಟ್ ಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz