Subscribe to Updates
Get the latest creative news from FooBar about art, design and business.
- ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ
- ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ
- ಹೇಮಾವತಿ ನೀರಿನ ವಿಚಾರದಲ್ಲಿ ನನಗೆ ವಿರೋಧವಿದೆ: ಶಾಸಕ ಎಸ್.ಆರ್.ಶ್ರೀನಿವಾಸ್
- ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ
- ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು
- ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್
- ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ
- ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ
Author: admin
ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರು ಗುಂಪುಕಟ್ಟಿಕೊಂಡು ರಸ್ತೆಯಲ್ಲಿಯೇ ಹೊಡೆದಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿನಿಯರ ವರ್ತನೆಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯರು ಇನ್ಸ್ಟಾಗ್ರಾಮ್ ನಲ್ಲಿ ಗಲಾಟೆ ಆರಂಭಿಸಿದ್ದು, ಪರಸ್ಪರ ಸವಾಲು ಹಾಕಿಕೊಂಡು ಕೈಕೈ ಮಿಲಾಯಿಸಿದ್ದು, ರಕ್ತ ಬರುವಂತೆ ಪರಸ್ಪರ ಹೊಡೆದಾಟ ನಡೆಸಿದ್ದು, ಈ ವೇಳೆ ಸಾರ್ವಜನಿಕರು ವಿದ್ಯಾರ್ಥಿನಿಯರ ಜಗಳವನ್ನು ಬಿಡಿಸಿ, ಎಚ್ಚರಿಸಿ ಸ್ಥಳದಿಂದ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಸುಮಾರು 20ರಷ್ಟಿದ್ದ ವಿದ್ಯಾರ್ಥಿನಿಯರು ಪರಸ್ಪರ ಹಲ್ಲೆ ನಡೆಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲವು ವಿದ್ಯಾರ್ಥಿನಿಯರು ಯೂನಿಫಾರ್ಮ್ ಧರಿಸಿದ್ದರೆ, ಇನ್ನು ಕೆಲವು ವಿದ್ಯಾರ್ಥಿನಿಯರು ಕಲರ್ ಡ್ರೆಸ್ ಧರಿಸಿರುವುದು ಕಂಡು ಬಂದಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಸಂಸ್ಥೆ ಪೋಷಕರನ್ನು ಕರೆಸಿ ಸಭೆ ನಡೆಸಿದೆ ಎನ್ನಲಾಗುತ್ತಿದೆ. ಘಟನೆಯ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಮಾಡು ಇಲ್ಲ ಮಡಿ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 3 ರನ್ಗಳ ರೋಚಕ ಗೆಲುವು ಸಾಧಿಸಿದ ಬೆನ್ನಲ್ಲೇ ಸನ್ರೈಸರ್ಸ್ ಹೈದ್ರಾಬಾದ್ ನ ನಾಯಕ ಕೇನ್ ವಿಲಿಯಮ್ಸನ್ ನಾಯಕತ್ವ ತೊರೆಯುವ ಮೂಲಕ ಆಘಾತ ನೀಡಿದ್ದಾರೆ.ಕೇನ್ ವಿಲಿಯಮ್ಸನ್ ಅವರ ಪತ್ನಿ ಮಗುವಿಗೆ ಜನ್ಮ ನೀಡುತ್ತಿರುವು ದರಿಂದ ಐಪಿಎಲ್ನಲ್ಲಿ ಉಳಿದಿರುವ ಪಂದ್ಯಗಳಿಂದ ಅವರು ತಂಡವನ್ನು ತೊರೆದಿದ್ದಾರೆ ಎಂದು ಎಸ್ಆರ್ಎಚ್ನ ಫ್ರಾಂಚೈಸಿಗಳು ತಿಳಿಸಿದ್ದಾರೆ. ಮಗುವಿನ ನಿರೀಕ್ಷೆಯಲ್ಲಿರುವ ಕೇನ್ ವಿಲಿಯಮ್ಸನ್ ಹಾಗೂ ಆತನ ಪತ್ನಿ ಸಾರಾ ರಹೀಂಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಕೇನ್ ವಿಲಿಯಮ್ಸ್ ಅವರು ತಂಡವನ್ನು ತೊರೆದಿರುವುದರಿಂದ ಸನ್ ರೈಸರ್ಸ್ನ ಮುಂದಿನ ನಾಯಕರಾಗಿ ವೆಸ್ಟ್ಇಂಡೀಸ್ನ ಸೀಮಿತ ಓವರ್ಗಳ ನಾಯಕ ನಿಕೋಲಸ್ ಪೂರನ್ ಅಥವಾ ಭಾರತದ ವೇಗದ ಬೌಲರ್ ಭುವನೇಶ್ವರ್ಕುಮಾರ್ ಅವರ ಹೆಗಲಿಗೆ ನಾಯಕನ ಜವಾಬ್ದಾರಿ ಬೀಳಲಿದೆ.ಸನ್ ರೈಸರ್ಸ್ ಹೈದ್ರಾಬಾದ್ ಮೇ 22 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ತನ್ನ ಕೊನೆಯ ಪಂದ್ಯ ಆಡಲಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಚಿತ್ರರಂಗಕ್ಕೂ ಕ್ರಿಕೆಟ್ ರಂಗಕ್ಕೂ ಬಿಡಿಸಲಾಗದ ಬಂಧವಿದೆ, ಎಷ್ಟೋ ನಟರು, ಕಲಾವಿದೆಯರನ್ನು ಮದುವೆ ಆಗಿದ್ದರೆ, ಕೆಲವು ಕ್ರೀಡಾಪಟುಗಳು ಚಿತ್ರರಂಗದಲ್ಲಿ ಮಿಂಚು ಹರಿಸಿದ್ದಾರೆ, ಈಗ ಭಾರತ ತಂಡದ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ರ ಸರದಿ. ಶಿಖರ್ ಧವನ್ ಅವರು ಡ್ರೀಮ್ 11 ಸೇರಿದಂತೆ ಎಷ್ಟೋ ಜಾಹೀರಾತುಗಳಲ್ಲಿ ತಮ್ಮ ನಟನಾ ಹಾಗೂ ನೃತ್ಯದ ಕೌಶಲ್ಯ ಮೆರೆದಿದ್ದು ಅಭಿಮಾನಿಗಳ ಮನ ಗೆದ್ದಿದ್ದಾರೆ. ಈಗ ನೇರವಾಗಿಯೇ ಬಾಲಿವುಡ್ನ ಚಿತ್ರವೊಂದರಲ್ಲಿ ನಟಿಸುವ ಮೂಲಕ ತಮ್ಮ ಎರಡನೇ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಶಿಖರ್ ಧವನ್ ಅವರು ಇತ್ತೀಚೆಗೆ ಅಕ್ಷಯ್ಕುಮಾರ್ ನಟನೆಯ ರಾಮ್ಸೇತು ಚಿತ್ರೀಕರಣದ ವೇಳೆ ಅಕ್ಕಿಯೊಂದಿಗೆ ಕಾಣಿಸಿಕೊಂಡಿದ್ದರು, ಶಿಖರ್ ಧವನ್ ಅವರು ಈ ಚಿತ್ರದಲ್ಲೇ ನಟಿಸುತ್ತಿದ್ದಾರೋ ಎಂದು ಅಂದಾಜಿಸಲಾಗುತ್ತಿದೆಯಾದರೂ ಗಬ್ಬರ್ ನಟಿಸುತ್ತಿರುವುದು ಬೇರೊಂದು ಚಿತ್ರದಲ್ಲಿ ಅಂತೆ. ಈ ಚಿತ್ರವನ್ನು ಬಾಲಿ ವುಡ್ನ ಖ್ಯಾತ ನಿರ್ದೇಶಕರೊಬ್ಬರು ನಿರ್ದೇಶಿಸುತ್ತಿದ್ದು ಸಿನಿಮಾದ ಟೈಟಲ್ ಅನ್ನು ಸದ್ಯದಲ್ಲೇ ತಿಳಿಸಲಿದ್ದಾರಂತೆ. ಅಂದಹಾಗೆ ಈ ಚಿತ್ರದಲ್ಲಿ ಬಂದ ಪುಟ್ಟ ಹೋದ ಪುಟ್ಟ ಎಂಬಂತೆ ಯಾವುದೋ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿಲ್ಲ,…
ಮಳೆಯಿಂದಾಗಿ ಬೆಂಗಳೂರು ಈಜುಕೊಳ ದಂತಾಗಿರುವುದನ್ನು ಜನರು ಪ್ರಶ್ನಿಸುತ್ತಿದ್ದಾರೆ. ಕೆರೆಗಳನ್ನೇ ನುಂಗಿ ಬಡಾವಣೆಗಳನ್ನು ನಿರ್ಮಿಸಿದ್ದರ ಪರಿಣಾಮವಿದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಯಶವಂತಪುರ ಮೆಟ್ರೋ ನಿಲ್ದಾಣದ ಬಳಿಯ ಅರವಿಂದ್ ಮೋಟಾರ್ಸ್ನಿಂದ ಪಂಚರತ್ನ ಕಾರ್ಯಕ್ರಮಕ್ಕಾಗಿ ಖರೀದಿಸಿದ 123 ಎಲ್ಇಡಿ ವಾಹನಗಳನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ಮಾತನಾಡಿದ ಅವರು, ನಗರದಲ್ಲಿ ಏಳು ಜನ ಸಚಿವರಿದ್ದರೂ ಮಳೆ ಬಂದಾಗ ನೀರು ನುಗ್ಗಿ ಅವಾಂತರ ಉಂಟುಮಾಡುವ ಪರಿಸ್ಥಿತಿ ತಪ್ಪಿಸದೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. 2006-07ರಲ್ಲಿ ಪುಟ್ಟೇನಹಳ್ಳಿ ನಿವಾಸಿಗಳ ಅನುಕೂಲಕ್ಕಾಗಿ ತಾವು ಕೈಗೊಂಡ ನಿರ್ಧಾರದಿಂದ ಅಲ್ಲಿನ ನಿವಾಸಿಗಳು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಆದರೆ, ಚುನಾವಣೆಯಲ್ಲಿ ನಮಗೆ 100 ವೋಟು, ಬಿಜೆಪಿಗೆ 600 ವೋಟು ಕೊಟ್ಟಿದ್ದಾರೆ ಎಂದರು. ಜನತಾ ಜಲಧಾರೆಯಿಂದ ಕಾಂಗ್ರೆಸ್-ಬಿಜೆಪಿಗೆ ನಡುಕ ಉಂಟಾಗಿದೆ. ನಮ್ಮ ಪಂಚರತ್ನ ಯೋಜನೆ ಬಗ್ಗೆ ಟೀಕೆ ಮಾಡಿದ್ದಾರೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲವೇ ಎಂದು ಕಿಡಿಕಾರಿದರು.ಹುಡುಗಾಟಿಕೆಗಾಗಿ ಪಂಚರತ್ನ ಯೋಜನೆ ಹಮ್ಮಿ ಕೊಂಡಿಲ್ಲ. ಈಗಾಗಲೇ ಸಮಾವೇಶದ ಮೂಲಕ ನಮ್ಮ ಸಾಮಥ್ರ್ಯವನ್ನು ಸಾಬೀತುಪಡಿಸಿದ್ದೇವೆ. 123 ಅಭ್ಯರ್ಥಿಗಳಿಲ್ಲ ಎಂದು ಲಘುವಾಗಿ ಆರೋಪಿಸಿದ್ದಾರೆ.…
ಸರಗೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಹೆಚ್.ಡಿ.ಕೋಟೆಯ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಚಿಕ್ಕಣ್ಣನವರ ಪುತ್ರರಾದ ಜಯಪ್ರಕಾಶ್ ಚಿಕ್ಕಣ್ಣ ಸ್ನೇಹ ಬಳಗದ ವತಿಯಿಂದ, ಜೆಡಿಎಸ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ವಿನೋದ್ ಪ್ರಸಾದ್ ಕೆ.ಟಿ.ಎಸ್ ರವರ ನೇತೃತ್ವದಲ್ಲಿ ವಿಶೇಷ ಚೇತನ ಶಾಲೆಯ ಮಕ್ಕಳಿಗೆ ಸಿಹಿ ಹಂಚಿದರು. ಶಾಲೆಯ ಆವರಣದಲ್ಲಿ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಮಕ್ಕಳಿಗೆ ರಾತ್ರಿಯ ಊಟದ ವ್ಯವಸ್ಥೆ ಮಾಡುವುದರ ಮೂಲಕ ಅತ್ಯಂತ ಸರಳವಾಗಿ, ಅರ್ಥಪೂರ್ಣವಾಗಿ ದೇವೇಗೌಡರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ವೇಳೆ ಶಾಲೆಯ ಮುಖ್ಯಸ್ಥರಾದ ಸತೀಶ್ ಕ್ಯಾತನಹಳ್ಳಿ ರವರು ಆನ್ ಲೈನ್ ಮೂಲಕ ಮಕ್ಕಳೊಂದಿಗೆ ಹೆಚ್.ಡಿ.ದೇವೇಗೌಡ ರವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಯುವ ಮುಖಂಡರು, ಜೆಡಿಎಸ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ವಿನೋದ್ ಪ್ರಸಾದ್ ಕೆ.ಟಿ.ಎಸ್ ಮಾತನಾಡಿದರು. ಈ ಸಂದರ್ಭದಲ್ಲಿ H.D.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮದ ಯುವ ಮುಖಂಡರುಗಳಾದ ಜೆಡಿಎಸ್ ಕಾರ್ಯಕಾರಿ ಸಮಿತಿ ಸದಸ್ಯ ವಿನೋದ್ ಪ್ರಸಾದ್ ಕುರ್ಣೇಗಾಲ, ಚೇತನ್, ಸಿದ್ದರಾಜು, ಹೊಮ್ಮರಗಳ್ಳಿ ಜಗದೀಶ್,…
ಗುಬ್ಬಿ: ತಾಲ್ಲೂಕು ನಂದಿಹಳ್ಳಿ ಶಿವಣ್ಣ ಅವರ ಜನ್ಮಸ್ಥಳವಾಗಿದ್ದು, ಕಾರ್ಮಿಕ ಮುಖಂಡ ಎನ್.ಶಿವಣ್ಣ (80) ಹೃದಯಾಘಾತದಿಂದ ಬುಧವಾರ ಬೆಂಗಳೂರಿನಲ್ಲಿ ಮಗನ ಮನೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. ಮೃತರು ಪತ್ನಿ, ಪುತ್ರ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಶಿವಣ್ಣ ಅವರ ಇಚ್ಛೆಯಂತೆ ದೇಹವನ್ನು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶಿವಣ್ಣ ಅವರು ಎಐಟಿಯುಸಿ ರಾಜ್ಯ ಕಾರ್ಯದರ್ಶಿ, ಸಿಪಿಐ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ಅಧ್ಯಕ್ಷರಾಗಿ ಸಂಘಟನೆ ಮುನ್ನಡೆಸಿದ್ದರು. ಒಮ್ಮೆ ತುರುವೇಕೆರೆ ತಾಲ್ಲೂಕು ಬೋರ್ಡ್ ಸದಸ್ಯರಾಗಿದ್ದರು. ಡಿಪ್ಲೊಮಾ ಶಿಕ್ಷಣ ಮುಗಿಸಿ, ಅಮ್ಮಸಂದ್ರ ಸಿಮೆಂಟ್ ಕಾರ್ಖಾನೆಯಲ್ಲಿ ಉದ್ಯೋಗಕ್ಕೆ ಸೇರಿಕೊಂಡ ಶಿವಣ್ಣ ಅವರು ಅಲ್ಲೂ ಕಾರ್ಮಿಕ ಸಂಘಟನೆ ಕಟ್ಟಿ ಬೆಳೆಸುವ ಮೂಲಕ ಕಾರ್ಮಿಕರಿಗೆ ಹಲವು ಸವಲತ್ತು ಕೊಡಿಸಿದ್ದರು. ನಂತರ ಕಾರ್ಮಿಕ ಸಂಘಟನೆ, ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವ ವಹಿಸಿಕೊಂಡು, ಅವರಿಗೆ ನ್ಯಾಯ ಕೊಡಿಸುವ ಹೋರಾಟದಲ್ಲಿ ನಿರತರಾಗಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ…
ಗುಬ್ಬಿ: ಬಿಜೆಪಿ ಪಕ್ಷ ಕೋಮುಪ್ರಚೋದನೆ ಸೃಷ್ಟಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಅತೀಕ್ ಅಹಮದ್ ಒತ್ತಾಯಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ದಲ್ಲಿರುವ ಬಿಜೆಪಿ ಸರ್ಕಾರ ನಿತ್ಯ ವು ಕೋಮುಪ್ರಚೋದನೆ ನೀಡುವ ಮೂಲಕ ಗಲಭೆ ಸೃಷ್ಟಿಸುವುದು ನಿಲ್ಲಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಗುಬ್ಬಿ ನಗರದ ಪ್ರವಾಸಿ ಮಂದಿರದಲ್ಲಿ ದಿ.22ರಂದು ತುಮಕೂರಿನ ಗಾಜಿನಮನೆಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಸಮಾವೇಶ ದ ಕುರಿತು ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮುಪ್ರಚೋದನೆ ನೀಡುವ ಮೂಲಕ ರಾಜ್ಯದಲ್ಲಿ ಶಾಂತಿ ಗಲಭೆ ಉಂಟು ಮಾಡುವ ಬದಲು ರಾಜ್ಯ ದ ಅಭಿವೃದ್ಧಿ ಗೆ ಹೆಚ್ಚಿನ ಒತ್ತು ನೀಡುವ ಕಡೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಮನಹರಿಸಲಿ ಎಂದರು. ಕೇವಲ ಒಂದು ಸಮುದಾಯವನ್ನು ರಾಜ್ಯದ ಲ್ಲಿ ಶೋಷಣೆಗೆ ಒಳಗಾಗುವಂತೆ ಮಾಡಿದರೆ, ಅದು ರಾಜ್ಯದ ಅಭಿವೃದ್ಧಿ ಗೆ ಮಾರಕವಾಗುತ್ತದೆ. ಇಂದು ನಿತ್ಯವೂ ಒಂದಲ್ಲ ಒಂದು ರೀತಿಯಲ್ಲಿ ಮುಸ್ಲಿಂ. ದಲಿತ. ಕ್ರೈಸ್ತ. ಹಾಗೂ ಇತರೆ ಹಿಂದುಳಿದವರು ಅಲ್ಪ ಸಂಖ್ಯಾತರ ಮೇಲೆ…
ಖ್ಯಾತ ನಟಿಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ಸ್ನೇಹಿತ ಶರತ್ ಜಿ. ನಾಯರ್ ರನ್ನು ನಗರ ಪೊಲೀಸರು ಬಂಧಿಸಿದ್ದಾರೆ. ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಿದ ಆರೋಪದಡಿ ಪೊಲೀಸರು ಶರತ್ ಜಿ. ನಾಯರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನಟ ದಿಲೀಪ್ ಜಾಮೀನು ಪಡೆದ ನಂತರ ಅವರ ಮನೆಗೆ ಶರತ್ ಜಿ. ನಾಯರ್ ಭೇಟಿ ನೀಡಿದ್ದಾರೆ ಎಂಬ ಚಲನಚಿತ್ರ ನಿರ್ದೇಶಕ ಬಾಲಚಂದ್ರಕುಮಾರ್ ಹೇಳಿಕೆ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ಅವರು, ನಟಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಸಂಚು ರೂಪಿಸಿದ್ದ ಆಡಿಯೋ ಟಿವಿಗಳಲ್ಲಿ ಪ್ರಸಾರವಾದ ಬಳಿಕ ದಿಲೀಪ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಉದ್ದೇಶಪೂರ್ವಕವಾಗಿ ತನ್ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಸಲು ತನಿಖಾಧಿಕಾರಿ ಯತ್ನಿಸಿದ್ದಾರೆ ಎಂದು ದಿಲೀಪ್ ಆರೋಪಿಸಿದ್ದರು. ತಮಿಳು, ತೆಲುಗು, ಮಲಯಾಳಂ, ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿರುವ ಖ್ಯಾತಿ ನಟಿಯನ್ನು 2017ರ ಫೆಬ್ರವರಿ 17ರಂದು ರಾತ್ರಿ ವಾಹನದಲ್ಲಿ ಅಪಹರಿಸಿ…
ತೀವ್ರ ಆರ್ಥಿಕ ಹೊಡೆತಕ್ಕೆ ಸಿಲುಕಿ ನಲುಗಿರುವ ಶ್ರೀಲಂಕಾಕ್ಕೆ ಭಾರತ ಮತ್ತೆ ನೆರವಿನ ಹಸ್ತ ಚಾಚಿದೆ. ಶ್ರೀಲಂಕಾಕ್ಕೆ ಪೆಟ್ರೋಲ್ ಸರಬರಾಜು ಮಾಡುತ್ತಿದ್ದು ಇದರಿಂದಾಗಿ ಸ್ವಲ್ಪ ಮಟ್ಟಿಗೆ ಸರ್ಕಾರ ಮತ್ತು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದಲ್ಲಿ ಪೆಟ್ರೋಲ್ ಖಾಲಿಯಾಗಿದ್ದು, ಜನರು ಪರಿತಪಿಸುವಂತಾಗಿದೆ. ಕೇವಲ ಒಂದು ದಿನಕ್ಕೆ ಸಾಕಾಗುವಷ್ಟು ಮಾತ್ರ ಪೆಟ್ರೋಲ್ ಇದೇ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ನಿನ್ನೆಯಷ್ಟೇ ಹೇಳಿಕೆ ನೀಡಿದ ಬೆನ್ನಲ್ಲೇ ಭಾರತ ಪೆಟ್ರೋಲ್ ಸರಬರಾಜು ಮಾಡುತ್ತಿದೆ. ಎರಡು ಹಂತಗಳಲ್ಲಿ ಪೆಟ್ರೋಲ್ ಸರಬರಾಜು ಮಾಡಲಾಗುತ್ತಿದೆ. ಇದು ಭಾರತೀಯ ಕ್ರೆಡಿಟ್ ಲೈನ್ಯಡಿಯಲ್ಲಿ ಮೇ ೧೮ ಮತ್ತು 19 ರಂದು ಬರಲಿದೆ ಎಂದು ವಿಕ್ರಮಸಿಂಘೆ ಟ್ವೀಟ್ ಮಾಡಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ಸರಿದೂಗಿಸಲು 75 ದಶಲಕ್ಷ ಅಮೆರಿಕನ್ ಡಾಲರ್ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಮುಕ್ತ ಮಾರುಕಟ್ಟೆಯ ಡಾಲರ್ಗಳನ್ನು ಪಡೆಯಲು ಕಾರ್ಯೋನ್ಮುಖರಾಗಿದ್ದಾರೆ ಎಂದು ಅವರು ತಿಳಿಸಿದರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಪ್ರಿಯಕರನಿಗಾಗಿ ಮನೆಯಲ್ಲಿದ್ದ ತಾಯಿಯ ಸುಮಾರು 1 ಕೆ.ಜಿ. ಚಿನ್ನಾಭರಣವನ್ನು ಕಳವು ಮಾಡಿ ರೋಲ್ಡ್ ಗೋಲ್ಡ್ ಚಿನ್ನವನ್ನು ತಂದಿಟ್ಟಿದ್ದ ಐನಾತಿ ಮಗಳು ಹಾಗೂ ಆಕೆಯ ಪ್ರಿಯತಮನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಮೃತಹಳ್ಳಿಯ ಜಕ್ಕೂರು ಲೇಔಟ್ ರತ್ನಮ್ಮ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ಮಗಳು ದೀಪ್ತಿ ಹಾಗೂ ಮದನ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ಅವರು ತಿಳಿಸಿದ್ದಾರೆ. ಬಂಧಿತರಿಂದ 36 ಲಕ್ಷ ಮೌಲ್ಯದ 725 ಗ್ರಾಂ. ತೂಕದ ವಿವಿಧ ಚಿನ್ನದ ಆಭರಣಗಳು ಹಾಗೂ ಕಳವು ಮಾಡಿದ ಆಭರಣಗಳ ಮಾರಾಟದಿಂದ ಬಂದ ಹಣದಿಂದ ಖರೀದಿಸಿದ್ದ ಸುಮಾರು 6 ಲಕ್ಷ ರೂ. ಬೆಲೆಬಾಳುವ 3 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಕ್ಕೂರು ಲೇಔಟ್ ನಲ್ಲಿ ರತ್ನಮ್ಮ ಹಾಗೂ ಪುತ್ರಿ ದೀಪ್ತಿ ವಾಸವಾಗಿದ್ದರು. ರತ್ನಮ್ಮ ಟೈಲರ್ ಕೆಲಸ ಮಾಡುತ್ತಿದ್ದರೆ, ಪುತ್ರಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಳು. ಈಗಾಗಲೇ ವಿವಾಹವಾಗಿದ್ದ ದೀಪ್ತಿಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದಳು. ಈ ನಡುವೆ ಡ್ರೈವಿಂಗ್ ಕಲಿಯಲು ಮದನ್ ನಡೆಸುತ್ತಿದ್ದ ಡೈವಿಂಗ್ ಸ್ಕೂಲ್ ಗೆ…