Subscribe to Updates
Get the latest creative news from FooBar about art, design and business.
- ರಾಜ್ಯ ರಾಜಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮರುಪ್ರವೇಶ: “ರಾಮನಗರವೇ ನನ್ನ ಅಂತಿಮ ರಾಜಕೀಯ ನೆಲೆ”
- ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರಲ್ಲ; 2028ರಲ್ಲೂ ನಮ್ಮದೇ ಸರ್ಕಾರ: ಸಿಎಂ ಸಿದ್ದರಾಮಯ್ಯ
- ಮಾಡೆಲ್ ಹೌಸ್ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ: ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ
- ಹುಬ್ಬಳ್ಳಿ: ಕಟೌಟ್ ಬಿದ್ದು ಮೂವರಿಗೆ ಗಾಯ; ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
- ಬಡವರು ಹಕ್ಕುಗಳಿಗಾಗಿ ಹೋರಾಡದಿದ್ದರೆ ಹಿಟ್ಲರ್–ಮುಸೊಲಿನಿಯಂಥವರು ದೇಶ ಆಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ
- 45 ದಿನಗಳಿಂದ ಇ–ಖಾತಾ ಸ್ಥಗಿತ: ಸಮಸ್ಯೆ ಬಗೆಹರಿಸಲು ಆಗ್ರಹ
- ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ
- ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ತಿಪಟೂರಿನಲ್ಲಿ ಸಿ.ಬಿ.ಶಶಿಧರ್ ಟೂಡಾ ಏಕವ್ಯಕ್ತಿ ಪ್ರತಿಭಟನೆ
Author: admin
ಗುಬ್ಬಿ: ಅಂಚೆ ಕಚೇರಿಯ ವಾಹನ, ಓಮಿನಿ ಹಾಗೂ ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ಹೇರೂರು ಗ್ರಾಮದ ಸಮೀಪ ಸಿಐಟಿ ಕಾಲೇಜು ಬಳಿ ನಡೆದಿದೆ. ಗಾಯಾಳುಗಳು ತಿಪಟೂರು ತಾಲೂಕಿನ ನೋವಿನಕೆರೆ ಹೋಬಳಿಯ ಧರ್ಮ ಗೌಡನಪಾಳ್ಯ ಗ್ರಾಮದಲ್ಲಿ ಎಂದು ತಿಳಿದು ಬಂದಿದೆ. ತುಮಕೂರಿನಿಂದ ನೊಣವಿನಕೆರೆ ಕಡೆಗೆ ಧಾವಿಸುತ್ತಿದ್ದ ಓಮಿನಿ, ತಿಪಟೂರಿನಿಂದ ತುಮಕೂರಿನ ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ರಸ್ತೆ ಸಂಚಾರ ಕೆಲಕಾಲ ಸ್ಥಗಿತಗೊಂಡಿದ್ದು, ಸ್ಥಳದಲ್ಲಿ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿತ್ತು. ವರದಿ: ಮಂಜುನಾಥ್ , ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ನಮ್ಮೆಲ್ಲರ ಜಾತಿ ಒಂದೆ. ಜಾತಿ, ಧರ್ಮಗಳನ್ನು ಮೀರಿದ್ದು ಮಾನವೀಯತೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಸಾರಿದರು. ಪಾದರಾಯನಪುರದ ಅಲ್ ಅಜರ್ ಫೌಂಡೇಶನ್ ಶಾಲೆಯಲ್ಲಿ ಇಂದು ಡಾ.ಅಂಬೇಡ್ಕರ್ ಜಯಂತಿ ಮತ್ತು ಈದ್ ಮಿಲಾದ್ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಬಿಎಂಪಿಯ ಪೌರ ಕಾರ್ಮಿಕರಿಗೆ ತಮ್ಮ ಕೈಯ್ಯಾರೆ ಭೋಜನ ಉಣಬಡಿಸಿದರು. ಇದೇ ವೇಳೆ ಇಸ್ಲಾಂ ಧರ್ಮ ಗುರುಗಳ ತಟ್ಟೆಯಿಂದ ತುತ್ತು ತೆಗೆದುಕೊಂಡು ಸ್ವೀಕರಿಸಿದರಲ್ಲದೇ ದಲಿತ ಸ್ವಾಮೀಜಿಗೆ ಕೈತುತ್ತು ತಿನ್ನಿಸಿ, ತಾವೂ ಕೈ ತುತ್ತು ತಿನ್ನುವ ಮೂಲಕ ಸಹೋದರತೆ ಮೆರೆದರು. ಮನುಷ್ಯರಾಗಿ ಬಾಳುವುದೇ ನಿಜವಾದ ಧರ್ಮ. ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮ ಎಂದಿಗೂ ಅಡ್ಡಿಯಾಗದು. ನಾವೆಲ್ಲರೂ ಸಹೋದರರಂತೆ ಬಾಳಬೇಕು ಎಂದು ಅವರು ಇದೇ ವೇಳೆ ಕರೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ನಮ್ಮ ತುಮಕೂರು ವರದಿ: ದೇಶದಲ್ಲಿ ಭೀತಿ ಸೃಷ್ಟಿಸುವ ಪ್ರಯತ್ನಗಳು ಮೇಲಿಂದ ಮೇಲೆ ನಡೆಯುತ್ತಿವೆ. ಸಮಾಜವನ್ನು ಒಡೆಯಬೇಕೆನ್ನುವ ದುರುದ್ದೇಶ ಇಲ್ಲಿ ಅಡಗಿದೆ. ಸಮುದಾಯಗಳ ನಡುವೆ ಸೌಹಾರ್ದಯುತ ವಾತಾವರಣ ಸೃಷ್ಟಿಸಲು ಕಾಂಗ್ರೆಸ್ ಸಾಕಷ್ಟು ಕೆಲಸ ಮಾಡಿದೆ. ಈ ಸಮುದಾಯಗಳನ್ನು ಅಭಿವೃದ್ಧಿ ಮಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅಮಾನಿಕೆರೆಯಲ್ಲಿರುವ ಗಾಜಿನಮನೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಲ್ಪಸಂಖ್ಯಾತರ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಅಲ್ಪ ಸಂಖ್ಯಾತ ಸಮುದಾಯಗಳನ್ನು ಅಭಿವೃದ್ಧಿ ಮಾಡಲು ನಮ್ಮ ಪಕ್ಷ ಬದ್ಧವಾಗಿದೆ ಎಂದರು. ಇತ್ತೀಚೆಗೆ ದೇಶದಲ್ಲಿ ಭೀತಿ ಸೃಷ್ಟಿಸುವ ಪ್ರಯತ್ನಗಳು ಮೇಲಿಂದ ಮೇಲೆ ನಡೆಯುತ್ತಿವೆ. ಸಮಾಜವನ್ನು ಒಡೆಯಬೇಕೆನ್ನುವ ದುರುದ್ದೇಶ ಇದರಲ್ಲಿ ಅಡಗಿದೆ ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್ ಹೇಳಿದರು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಡಾ. ಸಯ್ಯದ್ ನಾಸೀರ್ ಹುಸೇನ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇನ್ನೂ ರಾಜ್ಯ ರಾಜ್ಯ ಮಡಿವಾಳರ ಸಂಘ ತುಮಕೂರಿನಲ್ಲಿ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಮಡಿವಾಳ ಸಮುದಾಯದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆ ಬಸವರಾಜ್ ಹಾಸ್ಪಿಟಲ್ ರಸ್ತೆಯಲ್ಲಿರುವ ಹಿರಿಯೂರು ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದಿವಂಗತ ರಾಜೀವ್ ಗಾಂಧಿಯವರ 31ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾದ ಡಿ.ಸುಧಾಕರ್, ಈ ಹಿರಿಯೂರು ತಾಲ್ಲೂಕಿನಲ್ಲಿ,10 ವರ್ಷಗಳ ಕಾಲ ಎಲ್ಲಾ ವರ್ಗದ ಜನರಿಗೆ ನನ್ನ ಕೈಲಾದಷ್ಟು ಸಹಾಯ ಮಾಡಿದ್ದೇನೆ. ನನ್ನ ಆಡಳಿತ ಅವಧಿಯಲ್ಲಿ ಹಿರಿಯೂರು ತಾಲ್ಲೂಕಿನಲ್ಲಿ ಆದಂತಹ ಅಭಿವೃದ್ದಿ ಕಾರ್ಯಗಳು ಇನ್ನೂ ಯಾರಿಂದಲೂ ಮಾಡಲು ಸಾಧ್ಯವಿಲ್ಲ. ಹಿರಿಯೂರು ತಾಲ್ಲೂಕಿಗೆ ನನ್ನ ಆಡಳಿತ ಅವಧಿಯಲ್ಲಿ ಆದಂತ ಕೋಟ್ಯಾಂತರ ರೂ.ಗಳ ಚೆಕ್ ಡ್ಯಾಂಗಳು, ಮುರಾರ್ಜಿ ಶಾಲೆಗಳು, ರಸ್ತೆ ಅಭಿವೃದ್ದಿ ಕೆಲಸಗಳನ್ನ ಜನರಿಗೆ ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ನಾನು ಮೂಲತಃ ರಾಜಕಾರಣಿಯಲ್ಲ. ನಾನು ರಾಜಕೀಯ ಮಾಡಲೂ ಬಂದಿಲ್ಲ. ನನ್ನ ಕೈಲಾದಷ್ಟು ಸಹಾಯ ಮಾಡಲು ಬಂದಿರುವ ವ್ಯಕ್ತಿ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ. ಎಲ್ಲಾರೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸಂಜನಾ ಹಾಗೂ ಸೃಷ್ಠಿ ವಿ.ಆರ್. ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ನಮ್ಮ ಹಿರಿಯೂರು ತಾಲ್ಲೂಕಿಗೆ , ಜಿಲ್ಲೆಗೆ , ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿದ್ದಾರೆ. ಸಂಜನಾ ರಾಷ್ಟ್ರೀಯ ಅಕಾಡೆಮಿ ಸ್ಕೂಲ್ ನ ವಿದ್ಯಾರ್ಥಿನಿಯಾಗಿದ್ದು, ಸೃಷ್ಠಿ ವಿ ಆರ್ ಅವರು ಮಸ್ಕಲ್ ಗ್ರಾಮದ ಬೀಮನಬಂಡೆ ಯಜ್ಞ ವಾಲ್ಕ್ಯ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ. ಸಂಜನಾ ಮತ್ತು ಸಂಜನಾ ತಾಯಿ ಸಂಜನಾ ಹಾಗೂ ಸೃಷ್ಠಿ ವಿ ಆರ್ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಕನಸು ಕಂಡಿದ್ದರು. ಅವರ ಕನಸು ಶಾಲಾ ಶಿಕ್ಷಕರ ಸಹಕಾರ ಹಾಗೂ ಕುಟುಂಬಸ್ಥರ ಪ್ರೋತ್ಸಾಹದೊಂದಿಗೆ ಇಂದು ನೆರವೇರಿದೆ. ಇನ್ನೂ ತಮ್ಮ ಸಾಧನೆಯ ಕುರಿತಾಗಿ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿದ ಸಂಜನಾ ಹಾಗೂ ಸೃಷ್ಠಿ ವಿ ಆರ್ ಅವರು, ವಾರ್ಷಿಕ ಪರೀಕ್ಷೆ ರೀತಿಯಲ್ಲಿಯೇ ಆಗಾಗ ಕಿರುಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ…
ರಾಮನಗರ: ಜಿಲ್ಲೆ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಮತ್ತು ಮಾಜಿ ಸಚಿವ ಎಚ್.ಎಂ. ರೇವಣ್ಣ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ರೇವಣ್ಣ ಅವರಿಗೇ ಟಿಕೆಟ್ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆಯುವ ಮೂಲಕ ಬಾಲಕೃಷ್ಣ ನೇರ ಯುದ್ಧಕ್ಕೆ ಇಳಿದಿದ್ದಾರೆ. ರಾಜಕೀಯ ಜೀವನದುದ್ದಕ್ಕೂ ರೇವಣ್ಣ ವಿರುದ್ಧವೇ ಬಾಲಕೃಷ್ಣ ಹೋರಾಟ ಮಾಡಿಕೊಂಡು ಬಂದಿದ್ದು, ಕಾಂಗ್ರೆಸ್ ಸೇರ್ಪಡೆ ನಂತರವೂ ಇಬ್ಬರ ನಡುವಿನ ಸಂಬಂಧ ಗಟ್ಟಿ ಆಗಲೇ ಇಲ್ಲ. ಇದರಿಂದಾಗಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುವುದನ್ನು ತಡೆಯುವ ಸಲುವಾಗಿಯೇ ಬಾಲಕೃಷ್ಣ ಪತ್ರ ಸಮರ ಸಾರಿದ್ದಾರೆ. ಅಸಲಿಗೆ ಆಗಿದ್ದೇನು?: ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದ್ದ ಬಾಲಕೃಷ್ಣ ಪರಾಭವದ ನಂತರವೂ ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳಲಿಲ್ಲ. ಜೆಡಿಎಸ್ ಶಾಸಕ ಎ.ಮಂಜುನಾಥ್, ಎಚ್.ಎಂ. ರೇವಣ್ಣ ಅವರ ಗರಡಿಯಲ್ಲಿಯೇ ಪಳಗಿದ್ದು, ಕಳೆದ ಚುನಾವಣೆಯಲ್ಲಿ ರೇವಣ್ಣ ಅವರು ಮಂಜುನಾಥ್ ಪರವಾಗಿಯೇ ಕೆಲಸ ಮಾಡಿದ್ದಾರೆ ಎನ್ನುವ ಆರೋಪ ಕಾರ್ಯಕರ್ತರಲ್ಲಿ ಇದೆ. ಆದರೆ, ಬಾಲಕೃಷ್ಣ ಮುಂದಿನ…
ಕೋಲಾರ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ದೊಡ್ಡ ಬಫೂನ್. ಅವರು ಯಾವಾಗ ಯಾವ ಪಕ್ಷದಲ್ಲಿ ಇರುತ್ತಾರೆ, ಯಾರನ್ನು ಹೊಗಳುತ್ತಾರೆ, ಯಾರನ್ನು ತೆಗಳುತ್ತಾರೆ ಎಂಬುದು ಗೊತ್ತಿಲ್ಲ ಎಂದು ಸಂಸದ ಎಸ್.ಮುನಿಸ್ವಾಮಿ ವ್ಯಂಗ್ಯವಾಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಇಹ್ರಾಹಿಂ ರಾಜಕೀಯವಾಗಿ ಹತಾಶರಾಗಿದ್ದಾರೆ. ಅವರಿಗೆ ರಾಜಕೀಯ ಬದ್ಧತೆ ಇಲ್ಲ ಎಂದು ಟೀಕಿಸಿದರು. ಜಿಲ್ಲೆಯ ಬಹುತೇಕ ಕೆರೆಗಳು ತುಂಬಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಜಿಲ್ಲೆಯ ಜನರ ಆಶಯ ಈಡೇರಿಸಿದೆ. ಇಬ್ರಾಹಿಂ ಅವರು ಜಿಲ್ಲೆಗೆ ಬಂದು ನೀರಿನ ವಿಚಾರದಲ್ಲಿ ಜಲಧಾರೆ ಹರಿಸುವ ಅವಶ್ಯಕತೆಯಿಲ್ಲ. ಇಲ್ಲಿ ಬಂದು ಸುಮ್ಮನೆ ಮುಸ್ಲಿಮರ ಓಲೈಕೆಗೆ ಮಾತನಾಡಿದರೆ ಪ್ರಯೋಜನವಿಲ್ಲ ಎಂದರು. ಮುಸ್ಲಿಂ ಮತದಾರರು ನಮ್ಮ ಜತೆಗೂ ಇದ್ದಾರೆ. ನಾನು ಕೋಲಾರಕ್ಕೆ ಬಂದು ಬೆಂಕಿ ಹಚ್ಚಿಲ್ಲ, ಬದಲಿಗೆ ಬೆಂಕಿಯಂತಿದ್ದ ಕೋಲಾರವನ್ನು ತಣ್ಣಗೆ ಮಾಡಿದ್ದೇವೆ. ಆದರೆ, ಇಬ್ರಾಹಿಂ ಬೆಂಕಿ ಇಡುವುದಕ್ಕೆ ಕೋಲಾರಕ್ಕೆ ಬಂದಿದ್ದಾರೆ ಎಂದು ಗುಡುಗಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ಕೇಂದ್ರ ಸರ್ಕಾರದ ಕ್ರಮ ಶ್ಲಾಘನೀಯ. ದೇಶದ ಜನರ ಬಗೆಗೆ ಕಾಳಜಿ ಹೊಂದಿರುವ ನರೇಂದ್ರ ಮೋದಿಯವರು ಓರ್ವ ಸಂವೇದನಾಶೀಲ ನಾಯಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಪೆಟ್ರೋಲ್ಗೆ 8 ರೂ. ಮತ್ತು ಪ್ರತಿ ಲೀಟರ್ ಡೀಸೆಲ್ಗೆ 6 ರೂ. ಕಡಿತ ಮಾಡಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಸದ್ಯ ಜಾಗತಿಕ ಪರಿಸ್ಥಿತಿ ಸವಾಲಿನಿಂದ ಕೂಡಿದ್ದರೂ, ಈ ಬೆಲೆ ಇಳಿಕೆಗಳು ಜನರಿಗೆ ಬಹುದೊಡ್ಡ ನಿರಾಳತೆ ಒದಗಿಸಲು ಕಾರಣವಾಗಿದೆ. ಪ್ರತಿ ವರ್ಗದ ಮೇಲೆಯೂ ಪ್ರಧಾನಿಗಿರುವ ಕಾಳಜಿ ಅವರೊಬ್ಬ ಸಂವೇದನಾಶೀಲ ನಾಯಕ ಎಂಬುದನ್ನು ತಿಳಿಸುತ್ತದೆ ಎಂದಿದ್ದಾರೆ. ಹಣದುಬ್ಬರ ನಿಯಂತ್ರಿಸಲು ಮತ್ತು ಅಗತ್ಯ ವಸ್ತುಗಳ ದರ ಏರಿಕೆ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ನಿರ್ಧಾರ ಮಾಡಿದೆ. ಉಜ್ವಲ ಯೋಜನೆ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್ ಗೆ 200 ರೂ. ಸಬ್ಸಿಡಿ ನೀಡುವ ಘೋಷಣೆಯೂ ಮಹತ್ವದ ಕ್ರಮ…
ತುಮಕೂರು: ರಾಜ್ಯಾದ್ಯಂತ ಮಳೆಯಿಂದ ನಾನಾ ಸಂಕಷ್ಟಗಳಾಗಿವೆ. ಇದೇ ಸಂದರ್ಭದಲ್ಲಿ ತುಮಕೂರಿನಲ್ಲೂ ಮಳೆ ನಿರಂತರವಾಗಿ ಸುರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ಜನತೆಗೆ ಧೈರ್ಯ ಹೇಳಬೇಕಾದ ಜಿಲ್ಲಾ ಉಸ್ತುವಾರಿ ಸಚಿವರ ಪತ್ತೆಯೇ ಇಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ದಿನಗಳಿಂದ ನಿರಂತರ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಎಲ್ಲ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದರೆ, ಇತ್ತ ತುಮಕೂರಿಗೆ ಉಸ್ತುವಾರಿ ಸಚಿವರು ಇದ್ದೂ ಇಲ್ಲದಂತಿದ್ದಾರೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ. ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಈವರೆಗೂ ಜಿಲ್ಲೆಗೆ ಭೇಟಿ ನೀಡಿಲ್ಲ. ಅಧಿಕಾರಿಗಳ ಸಭೆ ನಡೆಸಿ ಮಳೆ ಪರಿಸ್ಥತಿ ನಿರ್ವಹಣೆಗೆ ಸೂಚನೆ ನೀಡಿಲ್ಲ ಎನ್ನುವುದು ಜಿಲ್ಲಾ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ಪ್ರೀತಿಸಿದ ಯುವತಿಯ ಆತ್ಮಹತ್ಯೆಯಿಂದ ನೊಂದ ಪ್ರೇಮಿಯೋರ್ವ ತಾನೂ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆ ಮಾಡಿಕೊಂಡ 6 ತಿಂಗಳ ಬಳಿಕ ಯುವಕನ ಅಸ್ಥಿ ಪಂಜರ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಮಾಗಡಿ ಬಳಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಮೃತನ ಬೈಕ್ ಶುಕ್ರವಾರ ಸಂಜೆ ಕಾಡುಶನೇಶ್ವರ ದೇವಾಲಯದ ಹಿಂಭಾಗದ ಕಾಡಿನ ಬಂಡೆ ಬಳಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ತನಿಖೆ ನಡೆಸಿದಾಗ ಅರಮನೆ ಹೊನ್ನಮಾಚನಹಳ್ಳಿಯ ಸಂತೋಷ ಎನ್ನುವುದು ತಿಳಿದು ಬಂದಿತ್ತು. ಸಂತೋಷ ತಾಲ್ಲೂಕಿನ ಕೆಬ್ಬಳಿಯ ಶಾಲಿನಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಪೋಷಕರು ವಿವಾಹಕ್ಕೆ ಒಪ್ಪದಿದ್ದಾಗ ನೊಂದ ಶಾಲಿನಿ ಆತ್ಮಹತ್ಯೆಗೆ ಶರಣಾಗಿದ್ದರು. ಯುವತಿಯ ಆತ್ಮಹತ್ಯೆಯ ಸುದ್ದಿ ಕೇಳಿದ ಸಂತೋಷ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು, ಪೋಷಕರು ಚಿಕಿತ್ಸೆ ಕೊಡಿಸಿದ್ದರು. ನವೆಂಬರ್ 28 ರಂದು ಬೆಂಗಳೂರಿನಿಂದ ಬಂದ ಸಂತೋಷ್, ಕಾಡಿನ ಬಂಡೆ ಬಳಿ ವಾಹನ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…