Subscribe to Updates
Get the latest creative news from FooBar about art, design and business.
- ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
- ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ: ಕೊರಟಗೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ
- ತಿಪಟೂರು: ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ
- ತುಮಕೂರು: ಜ.16ರಂದು ಮಿನಿ ಉದ್ಯೋಗ ಮೇಳ
- ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ
- ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ
- ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ
Author: admin
ತಮಿಳುನಾಡಿನಲ್ಲಿ ಬಂಧಿಸಲಾಗಿದ್ದ ಕಿರಾತಕ ಆ್ಯಸಿಡ್ ನಾಗೇಶ್ ನ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ, ಪೊಲೀಸರು ಆರೋಪಿಗೆ ಗುಂಡು ಹೊಡೆದಿದ್ದಾರೆ. ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಿ ಬೆಂಗಳೂರಿಗೆ ಕರೆ ತರುತ್ತಿದ್ದ ವೇಳೆ ನಾಗೇಶ್ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕೆಂಗೇರಿ ಮೇಲ್ಸೇತುವೆ ಬಳಿ ಮೂತ್ರ ವಿಸರ್ಜನೆಯ ನೆಪ ಹೇಳಿದ ನಾಗೇಶ್, ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ, ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ನಾಗೇಶ್ ನ ಬಲಗಾಲಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಳೆದ 16 ದಿನಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ನಾಗೇಶ್, ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿಯ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಸಿಬ್ಬಂದಿಯಿಂದ ದಲಿತ ಪರಿಶಿಷ್ಟ ಪಂಗಡದ ( ನಾಯಕ ) ಮಹಿಳೆಯ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ನಡೆದಾಡುವ ದೇವತೆ ಶ್ರೀ ಮಾತೆ ಕಮಲಮ್ಮನವರು ಸ್ಥಾಪಿತ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನ ದ ಸಿಬ್ಬಂದಿಯಾದ ಅಶ್ವಥ್ ನಾರಾಯಣ ಎಂಬ ವ್ಯಕ್ತಿ ಸರೋಜಮ್ಮ ಎಂಬ ದಲಿತ ( ನಾಯಕ ) ಮಹಿಳೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಪಕ್ಕದಲ್ಲಿ ಮಹಿಳೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಮಹಿಳೆ ತನ್ನ ಪರಿಚಯಸ್ಥರನ್ನು ಶ್ರೀ ಮಹಾಲಕ್ಷ್ಮಿಯ ದರ್ಶನ ಮಾಡಲು ಕರೆದುಕೊಂಡು ಹೋದ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಗೆ ಕರೆದುಕೊಂಡು ಹೋಗಿ ಅಪರಾಧಿಯಂತೆ ಬಾಯಿಗೆ ಬಂದಂತೆ ಬೈದು, ಭಾರತೀಯ ಸಂಸ್ಕೃತಿಯ ವಿಶಿಷ್ಟ ಪವಿತ್ರಸ್ಥಾನವನ್ನು ಹೊಂದಿರುವ ಮಾಂಗಲ್ಯವನ್ನು ಕಿತ್ತುಹಾಕಿ ಮಹಿಳೆಯ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನ…
ಕಳೆದ ತಿಂಗಳು ಯುವತಿ ಮೇಲೆ ಆಸಿಡ್ ಎರಚಿ ವಿಕೃತಿ ಮೆರೆದು ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್, ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಾಧ್ಯಮಗಳಲ್ಲಿ ಈತ ಮೊದ ಮೊದಲು ಸೌಮ್ಯ ಸ್ವಭಾವದವನು ಎಂಬ ಅಭಿಪ್ರಾಯಗಳು ಕೇಳಿ ಬಂದಿತ್ತಾದರೂ, ಆ ಬಳಿಕ ಈತನ ಅಸಲಿತನ ಬಯಲಾಗಿದೆ. ನಾಗೇಶ್ ನನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈತ ಬೆಂಗಳೂರಿಗೆ ಬರುವ ಮೊದಲೇ ತಮಿಳುನಾಡಿನಲ್ಲಿ ತನ್ನ ನೆರೆಹೊರೆಯ ಮಹಿಳೆಯರು ಸೇರಿದಂತೆ ಹಲವು ಮಹಿಳೆಯರಿಗೆ ಕಿರುಕುಳ ನೀಡಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಕೊಡಿಯಾಲಂ ಮೂಲದ ನಾಗೇಶ್ ತನ್ನ ನೆರೆಯ ಮಹಿಳೆಗೆ ಕಿರುಕುಳ ನೀಡಿದ್ದು, ಅಲ್ಲಿನ ಪೊಲೀಸರಿಗೆ ತಿಳಿಸಲಾಗಿತ್ತು. ಆದರೆ, ಮಹಿಳೆ ದೂರು ನೀಡದ ಕಾರಣ ಆತನನ್ನು ಕರೆಸಿ ಎಚ್ಚರಿಕೆ ಕೊಟ್ಟು ಕಳುಹಿಸಿದ್ದರು ಎಂದು ತಿಳಿದುಬಂದಿದೆ. ಈ ಮಧ್ಯೆ ನಾಗೇಶ್ ಬಂಧಿಸಲು ರಚಿಸಲಾದ 10ಪೊಲೀಸ್ ತಂಡಗಳು ಪ್ರಮುಖ ಯಾತ್ರಾ ಕೇಂದ್ರಗಳ ಎಲ್ಲಾ ಹೋಟೆಲ್ ಗಳಲ್ಲಿ ಶೋಧ ನಡೆಸಿದ್ದರು. ಅಲ್ಲದೇ ಆತನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪರಿಶೀಲಿಸುವ ಕೆಲವನ್ನೂ ನಡೆಸಿದ್ದರು.…
ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೋಲಿಸರು ಹುಡುಕಾಟ ನಡೆಸುತ್ತಿದ್ದ ವೇಳೆ ಆರೋಪಿಯು ತಮಿಳುನಾಡಿನ ತಿರುವಣ್ಣಾಮಲೈ ನಲ್ಲಿ ಸ್ವಾಮೀಜಿಯಂತೆ ವೇಷ ಧರಿಸಿ ತಲೆ ಮರೆಸಿಕೊಂಡಿದ್ದನು. ಏಪ್ರಿಲ್ 28 ರಂದು ದಾಳಿ ನಡೆಸಿ ಪರಾರಿಯಾಗಿದ್ದ. ಆಸಿಡ್ ದಾಳಿ ನಡೆದು 16 ದಿನ ಕಳೆದರೂ ಆರೋಪಿ ನಾಗೇಶ್ ಸುಳಿವು ಸಿಗದೆ ಪೊಲೀಸರಿಗೆ ತಲೆನೋವಾಗಿತ್ತು. ಪ್ರೀತಿ ನಿರಾಕರಿಸಿದ ಹೆಗ್ಗನಹಳ್ಳಿ ಕ್ರಾಸ್ ನಿವಾಸಿ 25 ವರ್ಷದ ಯುವತಿ ಮೇಲೆ ಹಾಡಹಗಲೇ ಆಸಿಡ್ ದಾಳಿ ನಡೆಸಲಾಗಿತ್ತು. ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ಭಗ್ನಪ್ರೇಮಿ ನಾಗೇಶ್ ಆಸಿಡ್ ಹಾಕಿ ಪರಾರಿಯಾಗಿದ್ದ. ನೋವಲ್ಲಿ ನರಳಾಡುತ್ತಿದ್ದ ಆಕೆಯನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಯುವತಿಯು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಆಟೋ ಮತ್ತು ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಾಘತದಲ್ಲಿ ಬಾಲಕಿಯೋರ್ವಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಹೊಸಹಳ್ಳಿ ಬಳಿ ನಡೆದಿದೆ. ಮೃತ ಬಾಲಕಿ ಯನ್ನು 12 ವರ್ಷದ ಪ್ರತಿಭಾ ಎಂದು ಗುರುತಿಸಲಾಗಿದೆ. ಕೊರಟಗೆರೆಯಿಂದ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್, ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದು ಅಪಾಘತದ ತ್ರೀವತೆಗೆ ಬಾಲಕಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನಾ ಸ್ಧಳಕ್ಕೆ ಆಗಮಿಸಿದ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದು ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗುಬ್ಬಿ: ತಾಲ್ಲೂಕಿನ ದಲಿತ ಸಮುದಾಯದವರಿಗೆ ರುದ್ರ ಭೂಮಿ ಮಂಜೂರಾತಿ ಮಾಡಬೇಕು ಎಂದು ದಲಿತ ಮುಖಂಡರು ಸಭೆಯಲ್ಲಿ ತಾಲೂಕು ಆಡಳಿತವನ್ನು ಆಗ್ರಹಿಸಿದರು. ತಾಲೂಕು ಆಡಳಿತದ ವತಿಯಿಂದ ಪಂಚಾಯಿತಿ ಸಂಭಾಗಣದಲ್ಲಿ ಆಯೋಜಿಸಿದ್ದ ದಲಿತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ದ.ಸಂ.ಸ. ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ, ತಾಲ್ಲೂಕಿನ ಯಾವುದೇ ದಲಿತ ಗ್ರಾಮದಲ್ಲಿ ದಲಿತರಿಗೆ ಸ್ಮಶಾನವಿಲ್ಲ ಇರುವ ಕಡೆ ಪ್ರಭಾವಿಗಳು ಜಾಗವನ್ನು ಒತ್ತುವರಿ ಹಾಗೂ ಖಾತೆ ಮಾಡಿಸಿಕೊಂಡಿದ್ದಾರೆ. ದಲಿತರು ಸತ್ತರೆ ಶವ ಸಂಸ್ಕಾರಕ್ಕೆ ಬಹಳ ತೊಂದರೆಯಾಗುತ್ತಿದೆ. ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ದಲಿತರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಂದಾಗುತ್ತಿಲ್ಲ ಕೇವಲ ಸಭೆಯಲ್ಲಿ ಮಾತ್ರ ದಲಿತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳುವ ಅಧಿಕಾರಿಗಳು ಇದುವರೆವಿಗೂ ಸಮಸ್ಯೆ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖಂಡ ನಿಟ್ಟೂರು ನಾಗರಾಜ್ ಮಾತನಾಡಿ, ತಾಲ್ಲೂಕಿನಲ್ಲಿ ದಲಿತರ ಜಮೀನು ಒತ್ತುವರಿಯಾಗಿದೆ. ಕೆಲವು ಗ್ರಾಮದಲ್ಲಿ ದಲಿತರಿಗೆ ಮೀಸಲಿರುವ ಜಮೀನು ಮಂಜೂರಾತಿ ಮಾಡುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ. ಜಮೀನುಗಳು ಪ್ರಭಾವಿಗಳ ಪಾಲಾಗುತ್ತಿದೆ ಕಂದಾಯ ಇಲಾಖೆ ಅಧಿಕಾರಿಗಳು ಶಾಮೀಲಾಗಿ ದಲಿತರ ಜಮೀನು…
ಪಾವಗಡ: ತಾಲ್ಲೂಕಿನಲ್ಲಿ ದೀ ಆರ್ಟ್ ಆಫ್ ಲೀವಿಂಗ್ ಸಂಸ್ಥೆಯ ಅಂತರ್ಜಲ ಚೇತನ ಯೋಜನೆಯಿಂದ ಪಾವಗಡ ತಾಲ್ಲೂಕಿನ ಇ.ಓ ಶಿವರಾಜಯ್ಯ. ಎ. ಡಿ ರಂಗನಾಥ್ ಹಾಗೂ ಕರ್ನಾಟಕ ರಾಜ್ಯ ಸಂಯೋಜಕರಾದ ಕೃಷ್ಣ ನಾಯಕ್ ರವರ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ಕೃಷ್ಣಾನಾಯಕ್ , ನಮ್ಮ ತಾಲ್ಲೂಕಿನಲ್ಲಿ 70 ವರ್ಷಗಳಿಂದ ಸುಮಾರು 50 ಬಾರಿ ಬರಗಾಲ ಬಂದಿದ್ದರಿಂದ ದೀ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ನಮ್ಮ ಪಾವಗಡ ತಾಲೂಕನ್ನು ಪ್ರಥಮ ಭಾರಿಗೆ ಆಯ್ಕೆ ಮಾಡಿಕೊಂಡಿದೆ. ಅಂತರ್ಜಲ ಚೇತನ ಯೋಜನೆಯಿಂದ ಹಳ್ಳಗಳಲ್ಲಿ ಬೋರ್ಡರ್ ಚೆಕ್ ಮತ್ತು ರಿಚಾರ್ಜ್ ವೆಲ್ ಕಾಮಗಾರಿಗಳನ್ನು 2021ನೇ ಸಾಲಿನಲ್ಲಿ ತಾಲ್ಲೂಕಿನ ಎಲ್ಲ ಗ್ರಾಮಪಂಚಾಯಿತಿಯಲ್ಲಿ ಸುಮಾರು 20ರಿಂದ 35 ಕಾಮಗಾರಿಗಳನ್ನು ಪೂರ್ಣಗೊಳಿಸಿದಾರೆ ಎಂದರು. ಈ ಕಾಮಗಾರಿಗಳಿಂದ ರೈತರ ಕೊಳೆವೆ ಬಾವಿಗಳು 80% (ಪರ್ಸೆಂಟ್ ) ಸೀಪೆಜ್ ಅಥವಾ ರಿಚಾರ್ಜ್ ಆಗಿವೆ ಮತ್ತು ಅಂತರ್ಜಲ ಮಟ್ಟ ಹೆಚ್ಚಾಗಿದೆ ಇದರಿಂದ ರೈತರರಿಗೆ ಅನುಕೂಲವಾಗಿದೆ. ಅದೇ ರೀತಿ ಈ ವರ್ಷದಲ್ಲಿ ಒಂದು ಗ್ರಾಮ ಪಂಚಾಯಿತಿಗೆ ಸುಮಾರು…
ಬೆಂಗಳೂರು: ನಾಡಪ್ರಭು ಕೆಂಪೇಗೌಡ, ಕುವೆಂಪುರವರ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಗಂಗಮ್ಮನ ದೇವಾಲಯದಲ್ಲಿ ಋಷಿ ಕುಮಾರ ಸ್ವಾಮಿಯ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಮಸಿ ಬಳಿದಿದೆ. ಋಷಿ ಕುಮಾರ ಸ್ವಾಮಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರು, ರಾಷ್ಟ್ರ ಕವಿ ಕುವೆಂಪು ರಚಿಸಿದ ನಾಡಗೀತೆಯನ್ನು ಅವಮಾನಿಸಿದ ಬಗ್ಗೆ ಸ್ವಾಮೀಜಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ನಾನು ಆ ರೀತಿ ಹೇಳಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ ಎಂದು ಋಷಿ ಕುಮಾರಸ್ವಾಮಿ ಸಮರ್ಥನೆ ನೀಡಲು ಮುಂದಾಗಿದ್ದಾರೆ. ಇದಾದ ಬಳಿಕ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸ್ವಾಮೀಜಿ ಮುಖಕ್ಕೆ ಮಸಿ ಬಳಿದಿದ್ದಾರೆ. ನಾಡಗೀತೆಯನ್ನ ಅನುಸರಿಸುತ್ತಿರುವ ಕನ್ನಡಪರ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ನೀಡಿದ್ದಾರೆಂದು ಕಾಳಿ ಸ್ವಾಮೀಜಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಸ್ವಾಮೀಜಿ ಮೇಲೆ ಮಸಿ ಬಳಿಯುವ ಮೂಲಕ ಹೇಳಿಕೆಯನ್ನು ಖಂಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಕರ್ನಾಟಕದ SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಬಹುತೇಕ ಮೌಲ್ಯಮಾಪನ ಮುಗಿದಿದ್ದು, ಮೇ 19 ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಮೇ 19ರಂದು ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಬಾರಿ 8,73,846 ವಿದ್ಯಾರ್ಥಿಗಳು SSLC ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಕೆಲವರನ್ನು ಹೊರತುಪಡಿಸಿ ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರ ಫಲಿತಾಂಶ ಪ್ರಕಟವಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ 22 ಮಂದಿ ಆರೋಪಿಗಳಿಗೆ ಪಾಕಿಸ್ತಾನ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ತಲಾ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕಳೆದ ವರ್ಷ ಜುಲೈ ತಿಂಗಳ 2021ರಲ್ಲಿ ಮದ್ರಸಾದಲ್ಲಿ 8 ವರ್ಷದ ಬಾಲಕ ಮೂತ್ರ ವಿಸರ್ಜನೆ ಮಾಡಿದ. ಈ ಹಿನ್ನೆಲೆಯಲ್ಲಿ ಮುಸ್ಲಿಮರು ನಮ್ಮ ದೇವರನ್ನು ಅಪವಿತ್ರಗೊಳಿಸಿದ್ದಾನೆ ಎಂದು ಆರೋಪಿಸಿ ಗಣೇಶ ಮಂದಿರವನ್ನು ಧ್ವಂಸಗೊಳಿಸಿದ್ದರು. ಭದ್ರತೆಗಾಗಿ ನಿಯೋಜಿಸಿದ್ದ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ 84 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನು ವಿಚಾರಣೆ ನಡೆಸಿ 22 ಮಂದಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ನಾಸೀರ್ ಹುಸೇನ್ ತೀರ್ಪು ಪ್ರಕಟಿಸಿದ್ದಾರೆ. ಉಳಿದ 62 ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ಗಣೇಶ ಮಂದಿರದ ಮೇಲಿನ ದಾಳಿಯನ್ನು ಪಾಕಿಸ್ತಾನ ಖಂಡಿಸಿ ನಿರ್ಣಯ ಅಂಗೀಕರಿಸಿತ್ತು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5