Author: admin

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ‘ತನ್ಹಾಜಿ: ದಿ ಅನ್‌ಸಂಗ್ ವಾರಿಯರ್’ ಗಾಗಿ ಸಂಪೂರ್ಣ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ನಟ ಮತ್ತು ಅತ್ಯುತ್ತಮ ಜನಪ್ರಿಯ ಚಲನಚಿತ್ರಕ್ಕಾಗಿ ಬಾಲಿವುಡ್ ನಟ ಅಜಯ್ ದೇವಗನ್ ಅವರಿಗೆ ಶುಕ್ರವಾರ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭಕ್ಕಾಗಿ, ಅಧ್ಯಕ್ಷ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದ ನಟ ಅಜಯ್ ದೇವಗನ್ ಕಪ್ಪು ಸೂಟ್ ಧರಿಸಿದ್ದರು. ‘ತನ್ಹಾಜಿ: ದಿ ಅನ್‌ಸಂಗ್ ವಾರಿಯರ್’ ಅನ್ನು ಓಂ ರೌತ್ ನಿರ್ದೇಶಿಸಿದ್ದು, ಇದು ಜನವರಿ 10, 2020 ರಂದು ಬಿಡುಗಡೆಯಾಯಿತು. ಇದು ದೇವಗನ್ ಅವರ 30 ವರ್ಷಗಳ ವೃತ್ತಿಜೀವನದಲ್ಲಿ 100ನೇ ಚಿತ್ರವಾಗಿದೆ. ಚಿತ್ರದಲ್ಲಿ ಸೈಫ್ ಅಲಿ ಖಾನ್, ಕಾಜೋಲ್ ಮತ್ತು ಶರದ್ ಕೇಳ್ಕರ್ ಕೂಡ ಇದ್ದಾರೆ. ಇದು ಗಲ್ಲಾಪೆಟ್ಟಿಗೆಯಲ್ಲಿ ವಿಶ್ವದಾದ್ಯಂತ ರೂ 368 ಕೋಟಿಗಳನ್ನು ಸಂಗ್ರಹಿಸಿತು ಮತ್ತು ವರ್ಷದ ಅತಿ ಹೆಚ್ಚು ಗಳಿಕೆ ಎಂದು ಘೋಷಿಸಲಾಯಿತು. ಈ ಚಿತ್ರವು ಮರಾಠಾ ಯೋಧ ತಾನಾಜಿ ಮಾಲುಸರೆ ಪಾತ್ರದಲ್ಲಿ ಅಜಯ್ ಅನ್ನು ಒಳಗೊಂಡಿತ್ತು. ಇದರಲ್ಲಿ ‘ಭಗವಾ’…

Read More

ಮೈಸೂರು, ಅಕ್ಟೋಬರ್ 1: ಒಂದು ಕಡೆ ಧರೆಗೆ ಮಳೆಯ ಸಿಂಚನವಾಗುತ್ತಿದ್ದರೆ ಇನ್ನೊಂದು ಕಡೆ ಮಳೆಗೆ ಸೆಡ್ಡು ಹೊಡೆಯುವಂತೆ ನೆರೆದಿದ್ದ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದು ರಿಯಲ್ ಸ್ಟಾರ್ ಉಪೇಂದ್ರ ಅವರ ಮತ್ತೇರಿಸುವಂತ ಡೈಲಾಗ್ಸ್, ಸಾಧುಕೋಕಿಲ ಹಾಗೂ ಚಿಕ್ಕಣ್ಣ ಅವರ ಹಾಸ್ಯ ಚಟಾಕಿ ಹಾಗೂ ಕಲಾವಿದರ ಸಂಗಮ. ಇಂತಹ ದೃಶ್ಯ ಕಂಡು ಬಂದಿದ್ದು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ 3ನೇ ದಿನದ ಯುವ ದಸರಾದ ಸ್ಯಾಂಡಲ್ ವುಡ್ ನೈಟ್‌ನಲ್ಲಿ. ವೇದಿಕೇಯ ಮೇಲೆ ಉಪೇಂದ್ರ ಹಾಗೂ ಸಾಧುಕೋಕಿಲ ಅವರು ರಕ್ತ ಕಣ್ಣೀರು ಚಿತ್ರದ ಹಾಡನ್ನು ಹಾಡುವುದರ ಜೊತೆಗೆ ನರ್ತಿಸಿ ಅಭಿಮಾನಿಗಳನ್ನು ರಂಜಿಸಿದರು. ಚಿಕ್ಕಣ್ಣ ಮಾತನಾಡಿ, ಉಪಾಧ್ಯಕ್ಷ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರ. ಅದನ್ನು ಯಶಸ್ವಿಯಾಗಿ ಬೆಳೆಸಬೇಕು ಎಂದು ಮನವಿ ಮಾಡಿ ಪುನೀತ್ ರಾಜ್ ಕುಮಾರ್ ಅವರಿಗಾಗಿ ರಾಜಕುಮಾರ ಚಿತ್ರದ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ಹಾಡಿದರು. ವೇದಿಕೆಯ ಮೇಲೆ ಸಾಧುಕೋಕಿಲ ಮುಕುಂದ ಮುರಾರಿ ಚಿತ್ರದ ನೀನೆ ರಾಮ ನೀನೇ ಶಾಮ ನೀನೇ…

Read More

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಅರಳಿ ನಿಂತಿರುವ ಅಪರೂಪದ ಹೂವೊಂದು ಇಲ್ಲಿನ ಪ್ರಕೃತಿ ಸೌಂದರ್ಯದ ಶ್ರೀಮಂತಿಕೆಯನ್ನು ಇಮ್ಮಡಿಗೊಳಿಸಿದೆ. 12 ವರ್ಷಗಳಿಗೊಮ್ಮೆ ಅರಳುವ ಈ ಹೂವು ಕಾಫಿನಾಡಿನ ಸೌಂದರ್ಯದ ದಿಕ್ಕನ್ನೇ ಬದಲಿಸಲಿದೆ. ಕಣ್ಣು ಹಾಯಿಸಿದಲೆಲ್ಲಾ ಕಾಣುವ ಅಪರೂಪದ ನೀಲಿ ಕುರುಂಜಿ ನೋಡುಗರ ಕಣ್ಮನ ಸೆಳೆಯುವರ ಜೊತೆಗರ ಪ್ರವಾಸಿಗರನ್ನು ಕೈ ಬೀಸಿ ತನ್ನತ್ತ ಕರೆಯುತ್ತಿದೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಚಿಕ್ಕಮಗಳೂರಿನ ಗಿರಿ-ಪರ್ವತ ಶ್ರೇಣಿಗಳ ಸಾಲು ನೀಲಿ ರೂಪ ಪಡೆದುಕೊಳ್ಳುತ್ತಿವೆ. ಬೆಟ್ಟ-ಗುಡ್ಡಗಳೆಲ್ಲಾ ನೀಲಿಯಾಗಿ ಕಂಗೊಳಿಸುತ್ತಿವೆ. ರಸ್ತೆಯ ಪಕ್ಕದಲ್ಲಿ ಅರಳಿ ನಿಂತಿರುವ ಕುರುಂಜಿ ಪ್ರವಾಸಿಗರನ್ನು ಕೈ ಬೀಸಿ ತನ್ನತ್ತ ಕರೆಯುತ್ತಿದೆ. ಪಶ್ಚಿಮ ಘಟ್ಟಗಳ ಪ್ರಕೃತಿಯಲ್ಲಿ ವಿವಿಧ ಬಗೆಯ ನಿಗೂಢಗಳು ಬಹಳಷ್ಟು ಇವೆ. ಅವುಗಳಲ್ಲಿ ಕುರುಂಜಿ ಸಸ್ಯವೂ ಒಂದಾಗಿದೆ. ಸಸ್ಯ ವಿಜ್ಞಾನದಲ್ಲಿ ಕುರುಂಜಿಗೆ ‘ಸ್ಟ್ರೋಬಿಲಾಂಥಿಸ್’ ಎಂಬ ಹೆಸರು ಇದೆ. 70ಕ್ಕೂ ಹೆಚ್ಚು ಪ್ರಬೇಧಗಳು (ಕುಂತಿಯಾನಸ್, ಬಾರ್ಬೇಟಸ್, ಸೆಸಿಲಿಸ್, ಕನ್ಸಾಗ್ವಿನಿಯಸ್) ಪಶ್ಚಿಮ ಘಟ್ಟಗಳಲ್ಲಿ ಕಂಡುಬರುತ್ತವೆ. 2, 4, 7, 12 ಹಾಗೂ 16 ವರ್ಷಗಳಿಗೊಮ್ಮೆ ಅರಳುವುದು ಈ ಸಸ್ಯ ಪುಷ್ಪಗಳ ವಿಶೇಷ ಎಂದು…

Read More

ಬೆಂಗಳೂರು : ಇಂದಿನಿಂದ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರ್ಕಾರಿ ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರಿಂದ 9 ರವರೆಗೆ ರಜೆ ಘೋಷಿಸಲಾಗಿದೆ. ಪ್ರಾಧ್ಯಾಪಕರ ಸಂಘದ ಮನವಿ ಪರಿಗಣಿಸಿ ಅಕ್ಟೋಬರ್ 1 ರಿಂದ ಅಕ್ಟೋಬರ್ 9 ರವರೆಗೆ ರಜೆ ನೀಡಿರುವ ಕಾಲೇಜು ಶಿಕ್ಷಣ ಇಲಾಖೆಯು, ಶೈಕ್ಷಣಿಕ ಕಾರ್ಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಯಾವುದೇ ತೊಂದರೆಯಾಗದಂತೆ ವಿಶ್ವವಿದ್ಯಾಲಯಗಳು ಕ್ರಮ ವಹಿಸಲು ಸೂಚಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮುಂಬೈ: ಮುಂಬೈನ ಅಂಧೇರಿಯಲ್ಲಿ 30 ವರ್ಷದ ಮಾಡೆಲ್ ಒಬ್ಬರು ಹೋಟೆಲ್ ಕೊಠಡಿಯಲ್ಲಿ ಫ್ಯಾನ್‌ ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಬುಧವಾರ ರಾತ್ರಿ 8 ಗಂಟೆಗೆ ಹೊಟೇಲ್ ಗೆ ಚೆಕ್ ಇನ್ ಮಾಡಿದ್ದಾಳೆ. ಊಟಕ್ಕೂ ಆರ್ಡರ್ ಮಾಡಿದಳು. ಆದರೆ ಗುರುವಾರ ಬೆಳಗ್ಗೆ ಆಕೆ ಬಾಗಿಲು ತೆಗೆದಿರಲಿಲ್ಲ. ಎಷ್ಟು ಕರೆ ಮಾಡಿದರೂ ಆಕೆ ಬಾಗಿಲು ತೆರೆಯಲಿಲ್ಲ. ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮಾಸ್ಟರ್ ಕೀ ಮೂಲಕ ಆ ಕೊಠಡಿಯ ಬಾಗಿಲನ್ನು ತೆರೆದರು. ಮಾಡೆಲ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಪೊಲೀಸರಿಗೆ ಕಂಡುಬಂದಿದೆ. ಆ ಕೊಠಡಿಯಿಂದ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ. ಕ್ಷಮಿಸಿ, ನನ್ನ ಸಾವಿಗೆ ಯಾರೂ ಕಾರಣರಲ್ಲ, ನನಗೆ ಸಂತೋಷವಿಲ್ಲ, ನನಗೆ ಶಾಂತಿ ಬೇಕು ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹೆಚ್ಚಿನ ವಿವರಗಳು ಇನ್ನೂ ಬಹಿರಂಗಗೊಳ್ಳಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ನಾಗಪುರ: ಜನರು ತಪ್ಪು ರೀತಿಯ ಆಹಾರ ಸೇವನೆ ಮಾಡಬಾರದು ಮತ್ತು ಅತಿಯಾದ ಹಿಂಸೆಯನ್ನು ಒಳಗೊಂಡ ಆಹಾರ ಸೇವಿಸುವುದರಿಂದ ದೂರ ಇರಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ. ಆರೆಸ್ಸೆಸ್‌ನ ಅಂಗ ಸಂಸ್ಥೆ ಭಾರತ್ ವಿಕಾಸ್ ಮಂಚ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವತ್ ಅವರು ವ್ಯಕ್ತಿತ್ವದ ಬಹುಮುಖ ಪ್ರಗತಿ ಕುರಿತಂತೆ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ. “ನೀವು ತಪ್ಪು ರೀತಿಯ ಆಹಾರ ಸೇವಿಸುತ್ತಿದ್ದರೆ, ಅದು ನಿಮ್ಮನ್ನು ತಪ್ಪು ದಾರಿಗೆ ಕೊಂಡೊಯ್ಯುತ್ತದೆ. ಜನರು ‘ತಾಮಸಿಕ’ ಆಹಾರ ತಿನ್ನಬಾರದು. ಅತಿಯಾದ ಹಿಂಸೆಯನ್ನು ಒಳಗೊಂಡ ಆಹಾರವನ್ನು ಸೇವನೆ ಮಾಡಬಾರದು” ಎಂದು ಸಲಹೆ ನೀಡಿದ್ದಾರೆ. ತಾಮಸಿಕ ಆಹಾರವು ಸಾಮಾನ್ಯವಾಗಿ ಮಾಂಸಾಹಾರ ಪದಾರ್ಥಗಳನ್ನು ಒಳಗೊಂಡಿರುತ್ತದೆ. ಪಶ್ಚಿಮದ ದೇಶಗಳು ಮತ್ತು ಭಾರತದಲ್ಲಿನ ಮಾಂಸಾಹಾರಿಗಳ ನಡುವೆ ಅವರು ಹೋಲಿಕೆಯನ್ನು ಮಾಡಿದ್ದಾರೆ. “ಜಗತ್ತಿನಲ್ಲಿ ಎಲ್ಲೆಡೆ ಮಾಂಸ ಸೇವಿಸುವಂತಹ ಜನರು ಭಾರತದಲ್ಲಿ ಇದ್ದಾರೆ. ಆದರೆ ನಮ್ಮ ದೇಶದಲ್ಲಿ ಮಾಂಸಾಹಾರಿಗಳಾಗಿದ್ದರೂ ಕೂಡ ಸಂಯಮಗಳನ್ನು ಹೊಂದಿರುತ್ತಾರೆ ಮತ್ತು ಕೆಲವು ನಿಯಮಗಳನ್ನು ಪಾಲಿಸುತ್ತಾರೆ” ಎಂದು ಹೇಳಿದ್ದಾರೆ. “ಇಲ್ಲಿ ಮಾಂಸಾಹಾರ…

Read More

ಲಂಡನ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ ಅವರು ವೇದಾಂತ ಗ್ರೂಪ್ ಅಧ್ಯಕ್ಷರಾದ ಅನಿಲ್ ಅಗರ್ವಾಲ್ ಅವರನ್ನು ಲಂಡನ್ನಲ್ಲಿ ಗುರುವಾರ ಸಂಜೆ ಭೇಟಿ ಮಾಡಿ, ರಾಜ್ಯದಲ್ಲಿನ ಹೂಡಿಕೆ ಅವಕಾಶಗಳ ಕುರಿತು ಮಾಹಿತಿ ನೀಡಿದರು. ನವೆಂಬರ್ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್ ಶೋ ಭಾಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್. ನಿರಾಣಿ ನೇತೃತ್ವದ ನಿಯೋಗ 7 ದಿನಗಳ ಯೂರೋಪ್ ಪ್ರವಾಸ ಕೈಗೊಂಡಿದೆ. ನಿಯೋಗವು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಡಾ. ಇ.ವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಒಳಗೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ: ಕೆಎಸ್‌ ಆರ್ ಟಿಸಿ ಬಸ್ ನಿಯಂತ್ರಣ ತಪ್ಪಿದ ಪರಿಣಾಮ ಗಂಡ ಮತ್ತು ಮಗುವಿನೊಂದಿಗೆ ದೇವಸ್ಥಾನಕ್ಕೆ ಹೋಗ್ತಿದ್ದ ಮಹಿಳೆ ಮೃತಪಟ್ಟ ದುರ್ಘಟನೆ ಜಿಲ್ಲೆಯ ಬಾದಾಮಿ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ. ಬಸ್ ಪಾಟಾ ಕಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹೋಗ್ತಿದ್ದ ವೆಂಕುಬಾಯಿ ಚವ್ಹಾಣ್ (35) ಎಂಬ ಮಹಿಳೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಬಾದಾಮಿಯಿಂದ ಕೆರೂರು ಕಡೆಗೆ ಹೋಗುತ್ತಿತ್ತು. ಮೃತ ವೆಂಕುಬಾಯಿ ತನ್ನ ಗಂಡ ಹಾಗೂ ಮಗುವಿನೊಂದಿಗೆ ಕರೆಮ್ಮ ದೇವಸ್ಥಾನಕ್ಕೆ ಹೋಗ್ತಿದ್ದಾಗ ಡಿಕ್ಕಿಯಾಗಿದೆ. ಅದೃಷ್ಟವಶಾತ್ ವೆಂಕುಬಾಯಿ ಗಂಡ ಹಾಗೂ ಮಗುವಿಗೆ ಯಾವುದೇ ಗಾಯಗಳಾಗಿಲ್ಲ. ಬಾದಾಮಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ: ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ಇದಕ್ಕೂ ಮುನ್ನ ದೆಹಲಿಯ ಎಐಸಿಸಿ ಕಚೇರಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನು ನನ್ನ ನಾಮಪತ್ರವನ್ನು ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ. ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್ ಮತ್ತು ಭೂಪಿಂದರ್ ಹೂಡಾ ಸೇರಿದಂತೆ ಕಾಂಗ್ರೆಸ್ ನಾಯಕರು ಖರ್ಗೆ ಅವರನ್ನು ಬೆಂಬಲಿಸಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಹಾಜರಿದ್ದರು. ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕ ಶಶಿ ತರೂರ್ ನಾಮಪತ್ರ ಸಲ್ಲಿಸಿದ್ದರು. ಜಾರ್ಖಂಡ್ ಕಾಂಗ್ರೆಸ್ ನಾಯಕ ಕೆ.ಎನ್.ತ್ರಿಪಾಠಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊರಟಗೆರೆ: ತಾಲ್ಲೂಕಿನ  ಚನ್ನರಾಯನದುರ್ಗದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ  ಆಯೋಜಿಸಲಾಗಿದ್ದ ಪೋಷಣ್ ಅಭಿಯಾನದ ಅಡಿಯಲ್ಲಿ ಭಾಗ್ಯಲಕ್ಷ್ಮಿ, ಸುಕನ್ಯಾ ಸಮೃದ್ಧಿ ಯೋಜನೆಯ ಪಾಸ್ ಬುಕ್ ಗಳನ್ನು ಶಾಸಕರಾದ ಡಾ.ಜಿ.ಪರಮೇಶ್ವರ್  ಫಲಾನುಭವಿಗಳಿಗೆ ವಿತರಿಸಿದರು. ಬಳಿಕ ಮಾತನಾಡಿದ ಅವರು, ನಮ್ಮ ಹಳ್ಳಿಗಳಲ್ಲಿ ಮಾಡುತ್ತಿದ್ದ ಆಗಿನ ಅಡುಗೆಗಳು ತುಂಬ ಪೌಷ್ಟಿಕಾಂಶ ಕೂಡಿರುತ್ತಿತ್ತು. ಈಗ ಫಾಸ್ಟ್ ಫುಡ್ ಗಳ ಮೊರೆ ಹೋಗಿರುವ ನಮ್ಮ ಜನರಲ್ಲಿ ಪೌಷ್ಠಿಕಾಂಶ ಕುಗ್ಗುತ್ತಿದೆ. ಆದ್ದರಿಂದ ಎಲ್ಲರೂ ಆರೋಗ್ಯಕರವಾದ ಉಪಾಹಾರವನ್ನು ಸೇವಿಸುವ ಮೂಲಕ ಪೌಷ್ಟಿಕಾಂಶವನ್ನು ಹೆಚ್ಚಿಸಿಕೊಳ್ಳಿ, ಗರ್ಭಿಣಿಯರು, ಬಾಣಂತಿಯರು  ಹಾಗೂ ಹುಟ್ಟುವ ಮಕ್ಕಳಿಗೆ ಆದಷ್ಟು ಪೌಷ್ಟಿಕಾಂಶವುಳ್ಳ ಆಹಾರಗಳನ್ನು  ಕೊಡಿ ಎನ್ನುವುದೇ ಈ ಪೋಷಣ್ ಅಭಿಯಾನದ ಮುಖ್ಯ ಉದ್ದೇಶ. ಇಂತಹ ಅನೇಕ ಕಾರ್ಯಕ್ರಮಗಳು ಎಂದಿನಿಂದಲೂ ಸರ್ಕಾರಗಳು ರೂಪಿಸುತ್ತಿವೆ ಒಳ್ಳೆಯ ಆಹಾರಗಳನ್ನು ಸೇವಿಸಿ  ಎಲ್ಲರೂ  ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ತಿಳಿಸಿದರು. ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ: ಡಾ.ಜಿ.ಪರಮೇಶ್ವರ್ ದೇಶದ ಅಭಿವೃದ್ದಿಯಲ್ಲಿ ಮಹಿಳೆಯ ಪಾತ್ರ ಮುಖ್ಯವಾಗಿದ್ದು ಮಕ್ಕಳಿಗೆ ಉತ್ತಮ…

Read More