Subscribe to Updates
Get the latest creative news from FooBar about art, design and business.
- ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!
- ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ
- ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
- ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
- ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ
- ವರನಟ ಡಾ. ರಾಜ್ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು
- ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾರ್ಗದರ್ಶಕರು: ಡಾ.ಅಶ್ವಿನಿ ಕೆ.ಪಿ.
- ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್
Author: admin
ಚಿತ್ರದುರ್ಗ: ಜಿಲ್ಲಾ ಮೂರನೇಯ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ನ್ಯಾಯಾಧೀಶರಾಗಿ ನೇಮಕಗೊಂಡಿರುವ ನ್ಯಾಯಾಧೀಶರಾದ ಸಹನಾ ಅವರನ್ನು ಜಿಲ್ಲಾ ವಕೀಲರ ಸಂಘದಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಸಿ.ಶಿವು ಯಾದವ್, ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಹಲವು ವರ್ಷಗಳಿಂದ ನ್ಯಾಯಾಧೀಶರು ನೇಮಕಗೊಂಡಿರಲಿಲ್ಲ. ಇದೀಗ ಸಹನಾರವರು ನ್ಯಾಯಾಧೀಶರಾಗಿ ಆಗಮಿಸಿರುವುದು ತುಂಬಾ ಸಂತೋಷದಾಯಕ ವಿಷಯವಾಗಿದೆ. ಅವರ ನ್ಯಾಯಾಧೀಶರ ವೃತ್ತಿಜೀವನವು ಚಿತ್ರದುರ್ಗದಿಂದ ಆರಂಭಿಸುತ್ತಿದ್ದಾರೆ. ಅವರ ಮುಂದಿನ ನ್ಯಾಯಾಧೀಶರ ವೃತ್ತಿಜೀವನವು ಸುಂದರವಾಗಿರಲಿ ಎಂದು ಹಾರೈಸಿದರು. ನ್ಯಾಯಾಧೀಶರಾದ ಸಹನರವರಿಗೆ ನ್ಯಾಯದಾನ ವಿಚಾರದಲ್ಲಿ ಎಲ್ಲಾ ರೀತಿಯಿಂದಲೂ ವಕೀಲರ ಸಂಘದಿಂದ ಸಹಕಾರ ನೀಡಲಾಗುವುದು. ತ್ವರಿತ ನ್ಯಾಯದಾನದಲ್ಲಿ ನ್ಯಾಯಾಧೀಶರ ಮತ್ತು ವಕೀಲರ ಪರಸ್ಪರ ಸಹಕಾರ ಅತ್ಯವಶ್ಯಕವಾಗಿರುತ್ತದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರೇಮವತಿ ಮನಗೂಳಿ ಅವರು ಮಾತನಾಡಿ, ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಸಹನಾರವರನ್ನು ನೇಮಕ ಮಾಡಿರುವುದು ಸಂತೋಷದಾಯಕ ವಿಷಯವಾಗಿದೆ. ತಮ್ಮ ಕೆಲಸ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಲಿ…
ಹಿರಿಯೂರು: ಶ್ರಾವಣ ಮಾಸದ ಮೊದಲ ಸೋಮವಾರ ಹಾಗೂ ನಾಗರ ಪಂಚಮಿ ಹಬ್ಬದ ಪ್ರಯುಕ್ತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ದಕ್ಷಿಣ ಕಾಶಿ ಎಂದೇ ಪ್ರಖ್ಯಾತ ವಾಗಿರುವ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವನಿಗೆ ಪೂಜೆಗಳು ಬಹಳ ವಿಜೃಂಭಣೆಯಿಂದ ನಡೆದವು. ನಾಗರ ಪಂಚಮಿಯಂದು ದೇವಸ್ಥಾನ ಹಾಗೂ ಹುತ್ತಗಳಿಗೆ ಭಕ್ತಾದಿಗಳು ವಿಶೇಷ ಪೂಜೆ ಮಾಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು, ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ . ಈ ಹಬ್ಬವನ್ನು ಅಣ್ಣ –ತಂಗಿಯರು ಸೇರಿಕೊಂಡು ಪೂಜಿಸುವುದು ಇನ್ನೊಂದು ವಿಶೇಷತೆಯಾಗಿದೆ. ಹಿರಿಯೂರು ತಾಲ್ಲೂಕಿನ ದಕ್ಷಿಣ ಕಾಶಿ ಶ್ರೀ ತೇರು ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಹೊರ ಭಾಗದಲ್ಲಿರುವ ನಾಗರ ಕಲ್ಲುಗಳಿಗೆ ಭಕ್ತಾದಿಗಳು ಹಾಲು ಸುರಿದು ಪೂಜೆ ಸಲ್ಲಿಸುವುದರ ಮುಖಾಂತರ ನಾಗರ ಪಂಚಮಿ ಹಬ್ಬವನ್ನು ಬಹಳ ವಿಶೇಷತೆಯಿಂದ ಆಚರಿಸಿದರು . ಇದೇ ಸಂದರ್ಭದಲ್ಲಿ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕರು ತೇರುಮಲ್ಲೇಶ್ವರ ಸ್ವಾಮಿಯ ಹಾಗೂ ದೇವಸ್ಥಾನದ ವೈಶಿಷ್ಟ್ಯಗಳ ಬಗ್ಗೆ ನಮ್ಮ…
ಪಾವಗಡ: ತಾಲೂಕಿನ ನಿಡಗಲ್ಲು ಹೋಬಳಿ ದೇವಲಕೆರೆ ಗ್ರಾಮದಲ್ಲಿ ನಿರ್ಮಾಣ ಹಂತದ ಮನೆಯಲ್ಲಿ ಕರಡಿಯೊಂದು ರಾತ್ರಿ ಕಳೆದಿದೆ. ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯಿಂದ ರಕ್ಷಣೆ ಪಡೆಯಲು ಕರಡಿ ಮಂಜುಳಾ ಪುಟ್ಟರಾಜು ಎಂಬುವರ ನಿರ್ಮಾಣ ಹಂತದ ಮನೆಗೆ ಕರಡಿ ನುಗ್ಗಿದೆ ಎನ್ನಲಾಗಿದೆ. ಬುಧವಾರ ಬೆಳಿಗ್ಗೆ ಮನೆ ಬಳಿ ಹೋದಾಗ ಮನೆಯಲ್ಲಿ ಕರಡಿ ಮಲಗಿರುವುದನ್ನು ಗಮನಿಸಿದ ಮನೆಯ ಮಾಲೀಕರು ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ಗ್ರಾಮಸ್ಥರ ಸಹಕಾರದೊಂದಿಗೆ ಕರಡಿಯನ್ನು ಓಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ 2022-23ನೇ ಸಾಲಿನ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು, ಪರಿಶಿಷ್ಟ ಜಾತಿ, ಪಂಗಡದ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತ 75ಯೂನಿಟ್ ವಿದ್ಯುತ್ ಸರಬರಾಜು ಮಾಡುವ ಯೋಜನೆ ರೂಪಿಸಿದ್ದು ಇಂಧನ ಇಲಾಖೆ ಅಧಿಕಾರಿಗಳು ಈ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕೆಂದು ಅವರು ಸೂಚಿಸಿದರು. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 20 ಸಾವಿರ ರೂ.ಗಳ ಘಟಕ ಯೋಜನೆಯ ಸಹಾಯಧನದಲ್ಲಿ ಸ್ವಚ್ಚ ಭಾರತ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಅವರು ತಿಳಿಸಿದರು. ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ವಿಶೇಷವಾಗಿ ಈ ಸಮುದಾಯಕ್ಕೆ ವಸತಿ ಯೋಜನೆ ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆ…
ಮಧುಗಿರಿ: ಆಗಸ್ಟ್ 15ರ ಸ್ವಾತಂತ್ರ ದಿನಾಚರಣೆ ಅಮೃತ ಮಹೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಸಭಾಂಗಣದಲ್ಲಿ ತಿಳಿಸಿದ್ದಾರೆ. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಂಘ-ಸಂಸ್ಥೆಗಳ ಪೂರ್ವಭಾವಿ ಸಭೆ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೂ ಮೂರು ದಿನಗಳ ಕಾಲ ಸರ್ಕಾರಿ ಕಚೇರಿಗಳ ಮೇಲೆ ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯ್ತಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕೆಂದು. ರಾಷ್ಟ್ರಧ್ವಜಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾಡಬಾರದು ಎಂದು ತಿಳಿಸಿದರು. ಸಂದರ್ಭದಲ್ಲಿ ಮಾಜಿ ಸೈನಿಕರಿಗೆ ಪೆರೇಡ್ ಮಾಡಲು ಅವಕಾಶ ನೀಡಲಾಗುವುದು ಮತ್ತು ಅವರಿಗೆ ಸನ್ಮಾನ ಮಾಡಲಾಗುವುದಿಲ್ಲ. ಸರ್ಕಾರಿ ನೌಕರರು ಕ್ರಿಯಾಶೀಲವಾಗಿ ಕೆಲಸ ಮಾಡಿದಾಗ ವಿಜೃಂಭಣೆಯಿಂದ ಆಚರಿಸಲು ಸಾಧ್ಯ ಎಂದರು. ಆಗಸ್ಟ್ 15ರ ಬೆಳಿಗ್ಗೆ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾತಂತ್ರೋತ್ಸವದ ದಿನಕ್ಕೆ ಚಾಲನೆ ನೀಡಲಾಗುವುದು ಅದೇ ರೀತಿ ಸರ್ಕಾರಿ ಕಛೇರಿಗಳು ಬ್ಯಾಂಕುಗಳು ಆಗಸ್ಟ್ 13ರಿಂದ ತಮ್ಮ ಕಚೇರಿಗಳ ಮೇಲೆ…
ಬಾಗಲಕೋಟೆ: ಆಗಸ್ಟ್ 3ರಂದು ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ. ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಮೃತ ವ್ಯಕ್ತಿ ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದವ ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೆರೂರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಶಿರಾ ತಾಲ್ಲೂಕಿನ ಚನ್ನನಕುಂಟೆ ಬಳಿ ಹಳ್ಳ ದಾಟುತ್ತಿದ್ದ ಶಿಕ್ಷಕ ಆರೀಫ್ ವುಲ್ಲಾ (55) ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ. ದಾವೂದ್ ಪಾಳ್ಯ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಶಾಲೆ ಮುಗಿಸಿಕೊಂಡು ಶಿರಾಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಶಿರಾದ ದೊಡ್ಡ ಕೆರೆಯ ಕೋಡಿ ನೀರು ಚನ್ನನಕುಂಟೆ ಹಳ್ಳದ ಮೂಲಕ ಹರಿದು ಹೋಗುತ್ತಿದ್ದು, ಅದನ್ನು ದಾಟಲು ಪ್ರಯತ್ನಿಸಿದಾಗ ನೀರಿನ ರಭಸಕ್ಕೆ ದ್ವಿಚಕ್ರ ವಾಹನ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಧುಗಿರಿ: ಅಂಗನವಾಡಿ ಕಾರ್ಯಕರ್ತೆಯ ಕಾರ್ಯನಿರ್ವಹಣೆಯ ಬಗ್ಗೆ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ತಾಲ್ಲೂಕಿನ ಐ ಡಿ ಹಳ್ಳಿ ಹೋಬಳಿಯ ಹೊಸ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಅಂಗನವಾಡಿ ಕಾರ್ಯಕರ್ತೆಯು ಮಕ್ಕಳ ಆಹಾರ ಸಾಮಗ್ರಿಗಳನ್ನು ಕೇಳಲು ಹೋದಾಗ ಉಡಾಫೆ ಉತ್ತರಕೊಡುತ್ತಿದ್ದು, ಗ್ರಾಮಸ್ಥರನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಪೋಷಕರಾದ ನಾಗಮಣಿ ಎಂಬವರು ಆಕ್ರೋಶ ವ್ಯಕ್ತಪಡಿಸಿದರು. ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಿಲ್ಲ, ಮೊಟ್ಟೆಯೂ ಕೊಡುತ್ತಿಲ್ಲ ಎಂದು ಸಾವಿತ್ರಮ್ಮ ಎಂಬವರು ಆರೋಪಿಸಿದರು. ಅಂಗನವಾಡಿ ಕಾರ್ಯಕರ್ತೆಯ ಪತಿ ಪೋಷಕರ ಮನೆ ಮುಂದೆ ಹೋಗಿ ಗಲಾಟೆ ಮಾಡುತ್ತಿದ್ದಾರೆ. ಅಕ್ಷರ ಕಲಿಸಬೇಕಾದ ಶಿಕ್ಷಕಿ ಏಕವಚನದಲ್ಲಿ ಬೈಯ್ಯುತ್ತಾರೆ. ಮುಗ್ದ ಜನಗಳ ಬಳಿ ದುರಹಂಕಾರದಿಂದ ಮಾತನಾಡುತ್ತಾರೆ. 3 ದಿನಗಳಿಂದ ಅನಾವಶ್ಯಕವಾಗಿ ಅಂಗನವಾಡಿಯ ಬಾಗಿಲು ತೆರೆದಿಲ್ಲ ಎಂದು ಗ್ರಾಮಸ್ಥರು ಆರೋಪಗಳ ಸುರಿಮಳೆ ಸುರಿಸಿದ್ದಾರೆ. ಈ ಭಾಗದ ಇಲಾಖೆಯ ಸಂಬಂಧಪಟ್ಟ ಮೇಲಧಿಕಾರಿಗಳು ಗಡಿ ಭಾಗಗಳಿಗೆ ಹೋಗಿ ಕುಂದುಕೊರತೆ ಸಭೆಗಳನ್ನು ನಡೆಸಿ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ನಮ್ಮ ಊರಲ್ಲಿ ಈ ಕಾರ್ಯಕರ್ತೆ ಕಾರ್ಯನಿರ್ವಹಿಸುವುದು ಬೇಡ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ: ಅಬಿದ್…
ತುಮಕೂರು: ಮಳೆ ಅವಾಂತರದಿಂದಾಗಿ ವಿದ್ಯುತ್ ಶಾಕ್ ಹೊಡೆದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರನ್ನು ಭೇಟಿ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, 6 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಿಸಿದರು. ಸರ್ಕಾರದಿಂದ 5 ಲಕ್ಷ ಹಾಗೂ ಮಹಾನಗರ ಪಾಲಿಕೆಯಿಂದ 1 ಲಕ್ಷ ಪರಿಹಾರ ನೀಡಲಾಯಿತು. ಝೀರೋ ಟ್ರಾಫಿಕ್ ನಲ್ಲಿ ಮಳೆಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ ಗೃಹಸಚಿವರು. 20 ನಿಮಿಷಗಳ ಕಾಲ ಮಳೆ ಹಾನಿ ವೀಕ್ಷಿಸಿ ಬಳಿಕ ತೆರಳಿದರು. ಗೃಹಸಚಿವರ ಭೇಟಿ ಹಿನ್ನೆಲೆಯಲ್ಲಿ ಅರ್ಧಗಂಟೆಗೂ ಹೆಚ್ಚುಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಹಾನಗರ ಪಾಲಿಕೆ, ಚರ್ಚ್ ಸರ್ಕಲ್, ಕೋಟೆ ಆಂಜನೇಯ ದೇವಾಲಯ ಮುಂಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜಡಿ ಮಳೆಯಲ್ಲಿ ಸಿಲುಕಿದ ಪ್ರಯಾಣಿಕರು ಹಿಡಿಶಾಪ ಹಾಕಿರುವುದು ಕಂಡು ಬಂತು. ತುಮಕೂರಿನ ಎಸ್ ಮಾಲ್, ಅಮಾನಿಕೆರೆ ಹಾಗೂ ಕೋತಿತೋಪು ಬಳಿಯಿರುವ ಮನೆಗಳಿಗೆ ಸಚಿವರು ಭೇಟಿ ನೀಡಿದರು. ಗೃಹ ಸಚಿವರ ಜೊತೆ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಶಾಸಕ ಜ್ಯೋತಿ ಗಣೇಶ್, ಹಾಗೂ…
ತುಮಕೂರು: ಆರ್ಥಿಕವಾಗಿ, ಸಾಮಾಜಿಕವಾಗಿ,ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಬೇಕೆಂದು ಆಗ್ರಹಿಸಿ ಇಂದು ಅಖಿಲ ಭಾರತ ವೀರಶೈವ,ಲಿಂಗಾಯಿತ ಮಹಾಸಭಾದವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ವಿವಿಧ ಮಠಗಳ ಸ್ವಾಮೀಜಿಗಳ ನೇತೃತ್ವದಲ್ಲಿ ನಂದಿ ಧ್ವಜ,ವೀರಗಾಸೆ ಕಲಾ ಪ್ರದರ್ಶನದ ಜೊತೆಗೆ,ಸಾವಿರಾರು ಸಂಖ್ಯೆಯಲ್ಲಿದ್ದ ಲಿಂಗಾಯಿತ,ವೀರಶೈವ ಸಮುದಾಯದ ಮುಖಂಡರುಗಳು ನಗರದ ಟೌನ್ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. ಪ್ರತಿಭಟನಾನಿರತ ವೀರಶೈವ,ಲಿಂಗಾಯಿತ ಸಮುದಾಯದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಚಿಕ್ಕತೊಟ್ಲುಕೆರೆಯ ಶ್ರೀಅಟವಿ ಶಿವಲಿಂಗಸ್ವಾಮೀಜಿ,ಗೊಲ್ಲಹಳ್ಳಿಮಠದ ಶ್ರೀವೀಭವ ವಿದ್ಯಾಶಂಕರ ಸ್ವಾಮೀಜಿ, ಮಾಕನಹಳ್ಳಿ ಮಠದ ಶ್ರೀಗಂಗಾಧರ ಸ್ವಾಮೀಜಿ, ಬೆಳ್ಳಾವಿಯ ಶ್ರೀಕಾರದೇಶ್ವರ ಮಠದ ಶ್ರೀಕಾರದ ವೀರಬಸವಸ್ವಾಮೀಜಿ, ಶ್ರೀರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಹರಳೂರು ಮಠದ ಶ್ರೀ ಚನ್ನಬಸವಸ್ವಾಮೀಜಿಗಳು, ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ವೀರಶೈವ, ಲಿಂಗಾಯಿತರು ಸೇರಿದ್ದಾರೆ.ಆದರೆ ಕೇಂದ್ರದ ಪಟ್ಟಿಯಲ್ಲಿ ಇಲ್ಲ.ಇದರಿಂದ ಯುಪಿಎಸ್ಸಿ,ಸೇರಿದಂತೆ ಕೇಂದ್ರ ಸರಕಾರದ ಉದ್ಯೋಗಗಳಲ್ಲಿ ವೀರಶೈವ ಲಿಂಗಾಯಿತ…