Author: admin

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ರಾಷ್ಟ್ರೀಯ ಅಕಾಡೆಮಿ ಶಾಲೆಯಲ್ಲಿ ಕಸಬಾ ಹೋಬಳಿಯ ಕ್ರೀಡಾಕೂಟ ಆಯೋಜಿಸಲಾಯಿತು. ಶೆಟಲ್, ಖೋ ಖೋ , ಹೈಜಂಪ್, ಲಾಂಗ್ ಜಂಪ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಅಕಾಡೆಮಿ ಶಾಲೆಯ ಶಿಕ್ಷಕರಾದ ಪರಮೇಶ್, ಕ್ರೀಡೆಯು ನಮ್ಮ ಜೀವನದ ಒಂದು ಪ್ರಮುಖ ಭಾಗವಾಗಿದೆ. ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮ ಅಭಿವೃದ್ಧಿಯ ಮೂಲವಾಗಿದೆ ಎಂದರು. ಕ್ರೀಡೆ ನಮ್ಮ ದೇಹದ ರಕ್ತ ಪರಿಚಲನೆಗೆ ಸಹಕಾರಿಯಾಗಿದೆ. ಮತ್ತೊಂದೆಡೆ ಇದು ನಮ್ಮ ಮೆದುಳಿನ ಬೆಳವಣಿಗೆಯಲ್ಲಿ ಪ್ರಯೋಜನಕಾರಿಯಾಗಿದೆ. ಕ್ರೀಡೆಗಳನ್ನು ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗುತ್ತದೆ. ಯಶಸ್ವಿ ವ್ಯಕ್ತಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಾಗಿರಲು, ಮಾನಸಿಕ ಬೆಳವಣಿಗೆಯು ನಮ್ಮ ಶಾಲಾ ದಿನಗಳಿಂದ ಪ್ರಾರಂಭವಾಗುತ್ತದೆ. ಆದರೆ ದೈಹಿಕ ಬೆಳವಣಿಗೆಗೆ ವ್ಯಾಯಾಮವು ಕ್ರೀಡೆಯ ಮೂಲಕ ನಾವು ಪಡೆಯುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರಾದ ಪರಮೇಶ್, ರಂಗನಾಥ್, ವಿಜಯ್ ಕುಮಾರ್ ನಾಯಕ, ಶಶಿಕಲಾ ಸೇರಿದಂತೆ ಇತರರು…

Read More

ತಿಪಟೂರು: ತಮಿಳುನಾಡು ಮೂಲದ ಪುಲ್ಲರ್ ಟೆನ್ ಇಂಡಿಯಾ ಗ್ರಾಮಶಕ್ತಿ ಮೈಕ್ರೋ ಫೈನಾನ್ಸ್ ಕಂಪನಿಯವರು ಸಂಘದ ಸದಸ್ಯರಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿರುವ ಘಟನೆ ತಿಪಟೂರು ನಗರದ ಕಂಚಘಟ್ಟ ಗ್ರಾಮದಲ್ಲಿ ನಡೆದಿದೆ. ಗ್ರಾಮಶಕ್ತಿ ಹೆಸರಿನಲ್ಲಿ ರೈತರಿಗೆ ಮತ್ತು ಬಡ ಕುಟುಂಬಗಳಿಗೆ ಸಾಲ ಕೊಟ್ಟು ಕಂತುಗಳ ಮುಖಾಂತರ ಸಾಲ ವಸೂಲಿ ಮಾಡುವ ನೆಪದಲ್ಲಿ ಹಲವು ಸದಸ್ಯರ ಹಣವನ್ನು ಗುಳುಂ ಮಾಡಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಗ್ರಾಮಶಕ್ತಿ ಕ್ರೆಡಿಟ್ ಕಂಪನಿ ಲಿಮಿಟೆಡ್ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಮ್ಯಾನೇಜರ್ ನಮಗೆ ನ್ಯಾಯ ಕೊಡಿ ಎಂದು ಸದಸ್ಯರು ಕೇಳಿಕೊಂಡರೆ ಉಡಾಫೆ ಉತ್ತರ ಕೊಟ್ಟು ಕಳಿಸುತ್ತಿದ್ದಾರೆ ಎಂದು ಸಾರ್ವಜನಿಕರು ಮತ್ತು ಸದಸ್ಯರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದಯಮಾಡಿ ಸಂಬಂಧಪಟ್ಟಂತ ಅಧಿಕಾರಿಗಳು ಇತ್ತ ಗಮನಹರಿಸಿ ನ್ಯಾಯ ಒದಗಿಸಿ ಕೊಡಬೇಕೆಂದು ಸದಸ್ಯರು ಮತ್ತು ಸಾರ್ವಜನಿಕರು ಮನವಿ ಮಾಡಿದ್ದಾರೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ತಿಪಟೂರು: ಕರ್ನಾಟಕ ರಾಜ್ಯದ ಭೋವಿ ಜನಾಂಗದ ಜಾಗೃತಿ ಸಮಾವೇಶವು ಸೆಪ್ಟಂಬರ್ 28ರ ಭಾನುವಾರ ಬೆಳಗ್ಗೆ 10 ಗಂಟೆಗೆ ತುಮಕೂರಿನ ಅಮಾನಿಕೆರೆ ಆವರಣದ ಗಾಜಿನ ಮನೆಯಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ರಾಜ್ಯ ಭೋವಿ ಸಮಾಜ ಉಪಾಧ್ಯಕ್ಷರಾದ ಶಶಿಧರ್ ಅಯ್ಯನ ಬಾವಿ ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಚಿತ್ರದುರ್ಗ ಭೋವಿ ಸಮಾಜದ ಜಗದ್ಗುರುಗಳಾದ ಇಮ್ಮಡಿ, ಸಿದ್ದರಾಮೇಶ್ವರ ಸ್ವಾಮೀಜಿಗಳು, ಸಿಎಂ ಬಸವರಾಜ ಬೊಮ್ಮಾಯಿ, ಚಲನಚಿತ್ರ ನಟರಾದ ರಾಘವೇಂದ್ರ ರಾಜಕುಮಾರ್, ಅಜಯ್ ರಾವ್, ಐಎಎಸ್ ಅಧಿಕಾರಿ ಮಂಜುನಾಥ್ ಪ್ರಸಾದ್ ಹಾಗೂ ತುಮಕೂರಿನ ಎಲ್ಲಾ ಶಾಸಕರು ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹಲಗೂರು: ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಹಲಗೂರಿನ ಸರ್ಕಲ್ ನಿಂದ ಗ್ರಾಮ ಪಂಚಾಯಿತಿವರೆಗೆ ಜಾಥಾ ನಡೆಸಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನಯನ್ನುದ್ದೇಶಿಸಿ ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಕನ್ನಡ ಗಿರೀಶ್ ಮಾತನಾಡಿ, ಹಲಗೂರು ಗ್ರಾಮ ಪಂಚಾಯಿತಿಯಲ್ಲಿ ಕಾಯಂ ಆಗಿ ಆಡಳಿತ ಅಧಿಕಾರಿ ಇಲ್ಲದ ಕಾರಣ ನೂತನ ಕೆಲಸ ಕಾರ್ಯಗಳು ಆಗುತ್ತಿಲ್ಲ. ಗ್ರಾಮ ಪಂಚಾಯಿತಿಯಲ್ಲಿ 9/11 ಖಾತೆಗಳು ಆಗುತ್ತಿಲ್ಲ. ಹಣ ಕೊಟ್ಟವರಿಗೆ ಬೇಗ ಕೆಲಸ ಆಗುತ್ತಿದೆ.ತಿಂಗಳಿಗೆ 3 ಲಕ್ಷ ಕಂದಾಯ ಮತ್ತು ತೆರಿಗೆ ಹಣ ವಸೂಲಿ ಆದರೂ ಸಹ 1 ಟ್ರ್ಯಾಕ್ಟರ್ ಹಾಗೂ ಆಟೊ ಇದ್ದರೂಯಾವುದೇ ಸ್ವಚ್ಚತೆ ಕಾರ್ಯಗಳು ನಡೆದಿರುವುದು ಕಾಣುತ್ತಿಲ್ಲ ಎಂದು ಆರೋಪಿಸಿದರು. ಹಲಗೂರಿನ ಸರ್ಕಲ್ ನಲ್ಲಿ ಹೈಮಾಸ್ಕ್ ಲೈಟ್ ಕೆಟ್ಟಿದ್ದರೂ ರಿಪೇರಿಯಾಗಿಲ್ಲ. ಸ್ಥಳಕ್ಕೆ ತಾಲ್ಲೂಕು ಅಧಿಕಾರಿ ಅಥವಾ ಜಿಲ್ಲಾಡಳಿತ ಬಂದು ನಮ್ಮ ಮನವಿಯನ್ನು ಸ್ವೀಕರಿಸಬೇಕು .ಅಲ್ಲಿಯವರೆಗೂ ನಮ್ಮ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಸಂತೋಷ್ , ಗಿರೀಶ್ ಮನು, ಕೆಂಪೇಗೌಡ,…

Read More

ಬೆಂಗಳೂರು : ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದ್ದು, ಸೆಪ್ಟೆಂಬರ್ 12 ರಿಂದ 10 ದಿನಗಳ ವಿಧಾನಮಂಡಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯದ ಹೆಚ್ಚಿನ ಶಿಕ್ಷಕಿಯರಿಗೆ ಅನಾರೋಗ್ಯ ಕಾಡುತ್ತಿದೆ. ಶಿಕ್ಷಣ, ಆರೋಗ್ಯ ಇಲಾಖೆಯ ಜಂಟಿ ಸಮೀಕ್ಷೆಯಲ್ಲಿ ಬಹುತೇಕರಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡ ಕಂಡುಬಂದಿದೆ. ಶೇ.06 ಮಂದಿಯಲ್ಲಿ ಸ್ತನ, ಬಾಯಿ, ಗರ್ಭಕೋಶದ ಕ್ಯಾನ್ಸರ್ ಪತ್ತೆಯಾಗಿದೆ. ಒಟ್ಟು 2,20,066 ಸರ್ಕಾರಿ ಶಿಕ್ಷಕರ ಪೈಕಿ 60% ಮಂದಿ ಶಿಕ್ಷಕಿಯರಾಗಿದ್ದಾರೆ. ‘ವ್ಯಾಯಾಮ ಕೊರತೆ, ಕೆಲಸದ ಒತ್ತಡ, ಮನೆಯ ಆರ್ಥಿಕ ಸ್ಥಿತಿಯೇ ಇದಕ್ಕೆ ಕಾರಣ. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ಒಳ್ಳೆಯದು’ ಎಂಬುದು ವೈದ್ಯರ ಸಲಹೆ. ಇಂದಿನ ಆಹಾರ ಪದ್ದತಿ, ಮಾನಸಿಕ ಒತ್ತಡ, ಜೀವನ ಶೈಲಿಗಳು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಇದರಿಂದ ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಗಳಿಗೆ ಜನರು ಬಹುಬೇಗ ತುತ್ತಾಗುತ್ತಿದ್ದಾರೆ. ಆರೋಗ್ಯ ತಪಾಸಣೆಗೆ ಒಳಗಾದರೆ ವೈದ್ಯರು ಕಾಯಿಲೆ ಇದೆ ಎಂದು ಎಲ್ಲಿ ಹೇಳಿಬಿಡುತ್ತಾರೋ ಎಂಬ ಭಯದಿಂದಾಗಿ ಬಹಳಷ್ಟು ಜನರು ತಪಾಸಣೆಗೆ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ರೋಗ ಉಲ್ಭಣಿಸಿದ ನಂತರ ಪಡಿಪಾಟಲು ಪಡುವ ಪರಿಸ್ಥಿತಿ ಉಂಟಾಗುತ್ತಿದೆ. ಇದು ಮನುಷ್ಯನ ಆರೋಗ್ಯದ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದರು. ಪ್ರತಿಯೊಬ್ಬರೂ ಭಯ ತೊರೆದು…

Read More

ಇಟಲಿಯ ಓರ್ವ ವ್ಯಕ್ತಿಗೆ ಮೂರು ಮಾರಕ ವೈರಸ್ ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಆತನಿಗೆ ಕೊರೋನಾ, ಮಂಕಿಪಾಕ್ಸ್ & ಎಚ್‌ಐವಿ ಬಾಧಿಸಿವೆ. ಇತ್ತೀಚೆಗೆ, ಆತ ಸ್ಪೇನ್‌ನಲ್ಲಿ ಬೇರೊಬ್ಬ ಯುವಕನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಹೊಂದಿದ್ದ ಎಂದು ವೈದ್ಯರು ತಿಳಿಸಿದ್ದಾರೆ. 9 ದಿನಗಳ ನಂತರ ಕೋವಿಡ್, ಮಂಕಿಪಾಕ್ಸ್ ಮತ್ತು ಎಚ್‌ಐವಿ ಲಕ್ಷಣಗಳು ಕಾಣಿಸಿಕೊಂಡಿದ್ದವು. ಪರೀಕ್ಷೆ ನಡೆಸಿದಾಗ ಆತನಲ್ಲಿ ಮೂರು ವೈರಸ್‌ಗಳು ದೃಢಪಟ್ಟಿವೆ. ಅಲ್ಲಿಂದ ಮರಳಿ ಮನೆಗೆ ಬಂದವನೇ ಜ್ವರ, ಕಂಟಲು ನೋವು ಎಂದು ಮಲಗಿಬಿಟ್ಟಿದ್ದ. ವೈದ್ಯರಿಗೆ ತೋರಿಸಿದಾಗ ಕೊರೊನಾ ಪರೀಕ್ಷೆ (Covid 19 Test) ಮಾಡಿಸಿದ. ಪರೀಕ್ಷೆಯಲ್ಲಿ ಪಾಸಿಟಿವ್ ಬಂತು.ಕೊವಿಡ್ ಬಂತು ಅಂದುಕೊಂಡು ಎರಡೇ ದಿನಕ್ಕೆ ದೇಹದ ಭಾಗಗಳಲ್ಲಿ ಗುಳ್ಳೆಗಳು ಏಳಲಾರಂಭಿಸಿದವು. ಆ ಗುಳ್ಳೆಗಳು ನೋಯುತ್ತಿದ್ದವು. ಆಸ್ಪತ್ರೆಯಲ್ಲಿ ಒಂದು ವಾರದ ಚಿಕಿತ್ಸೆ ಪಡೆದುಕೊಂಡ ವ್ಯಕ್ತಿಯ ಆರೋಗ್ಯ ಸದ್ಯ ಸ್ಥಿರವಾಗಿದೆ. ಕೋವಿಡ್-19 ಮತ್ತು ಮಂಕಿಪಾಕ್ಸ್‌ನಿಂದ ಚೇತರಿಸಿಕೊಂಡ ನಂತರ ವ್ಯಕ್ತಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಆದರೆ ಹೆಚ್​ಐವಿ ಸೋಂಕು ಮಾತ್ರ ಹಾಗೇ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಬೆಂಗಳೂರು: ಶಾಲೆಗಳಲ್ಲಿ ವಿನಾಯಕನ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧವಿಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಲೆಗಳಲ್ಲಿ ಗಣೇಷ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧವಿಲ್ಲ. ಸರಸ್ವತಿ ಪೂಜೆ, ಗಣೇಶ ಪ್ರತಿಷ್ಠಾಪನೆ ನಡೆಯುತ್ತಿದೆ. ಮುಂದೆಯೂ ಸರಸ್ವತಿ ಪೂಜೆ, ಗಣೇಶ ಪ್ರತಿಷ್ಠಾಪನೆ ನಡೆಯಲಿದೆ ಎಂದರು. ಶಾಲೆಗಳಲ್ಲಿ ಈ ಪದ್ಧತಿಯು ಬಾಲಗಂಗಾಧರ ತಿಲಕ್ ಕಾಲದಿಂದಲೂ ಇದೆ. ಆದರೇ ಯಾವುದೇ ನಮಾಜ್, ಕೃಷ್ಣ ಪೂಜೆ, ಅಯ್ಯಪ್ಪ ಪೂಜೆ, ಕ್ರೈಸ್ತರ ಪ್ರಾರ್ಥನೆಗೆ ಶಾಲೆಗಳಲ್ಲಿ ಅವಕಾಶವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊರಟಗೆರೆ: ನೊಣದ ಕಾಟದಿಂದ ತಪ್ಪಿಸಿಕೊಳ್ಳಲು ಗ್ರಾಮಸ್ಥರು ಊರು ತೊರೆದ ಘಟನೆ ನಡೆದಿದ್ದು, ಕೊರಟಗೆರೆ ತಾಲೂಕಿನ ಬೋಮ್ಮಲದೇವಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತೊಗರಿಘಟ್ಟ ಗ್ರಾಮದ ಪಕ್ಕ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಕೋಳಿ ಫಾರಂನಿಂದಾಗಿ ಇಷ್ಟೆಲ್ಲ ಅವಾಂತರ ಸೃಷ್ಟಿಯಾಗಿದೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಕೋಳಿಗಳನ್ನು ಈ ಕೋಳಿ ಸಾಕಾಣಿಕೆ ಫಾರಂ ಸಾಕಲಾಗುತ್ತಿದೆ. ಪಕ್ಕದಲ್ಲಿಯೇ ಶ್ರೀ ಆದಿ ತಿಮ್ಮಪ್ಪ ದೇವಸ್ಥಾನ ಇದ್ದು, ಈ ಭಾಗದ ಸುತ್ತ ಮುತ್ತಲಿನ ಸುಮಾರು 15-20 ಗ್ರಾಮದವರು ಮದುವೆ, ಮುಂಜಿ, ನಾಮಕರಣ ಸೇರಿದಂತೆ ಇಂತಹ ಶುಭ ಸಮಾರಂಭಗಳನ್ನು ಮಾಡುತಿದ್ದರು. ಆದರೆ ಈ ಕೋಳಿ ಫಾರಂ ಆದಾಗಿನಿಂದ ನೊಣಗಳಕಾಟ ಹಾಗೂ ಗೊಬ್ಬರದ ಗಬ್ಬುನಾತ ಬೀರುತ್ತಿದೆ. ಈ ದುರ್ವಾಸನೆಗೆ ತೊಗರಿಘಟ್ಟ,ಮುದ್ದನಹಳ್ಳಿ ಬಿ.ಡಿ.ಪುರ ದುಗ್ಗೆನಹಳ್ಳಿ, ಶಕುನಿತಿಮ್ಮನಹಳ್ಳಿ , ಸೇರಿದಂತೆ ಸುಮಾರು ಹದಿನೈದು ಇಪ್ಪತ್ತು ಹಳ್ಳಿಗಳ ಜನರು ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಜನ ಮಾತ್ರವಲ್ಲದೇ ಜಾನುವಾರುಗಳು ಕೂಡ ನೊಣದ ಕಾಟದಿಂದ ಸಂಕಷ್ಟಕ್ಕೀಡಾಗಿದೆ. ಕುರಿ, ಮೇಕೆಗಳ ಕಣ್ಣು ಮೂಗು ಬಾಯಿ ಮೇಲೆ ನೋಟಗಳ ಕಾಟದಿಂದ…

Read More

ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಕ್ಯಾತಗಾನಹಳ್ಳಿ ಗ್ರಾಮದ ರಂಗಪ್ಪನ ಮಗ ಮಹೇಶ್ ಎನ್ನುವ 35 ವರ್ಷದ ರೈತ ನಿನ್ನೆ ಸಂಜೆ ಮನೆಯಿಂದ ತನ್ನ ತೋಟಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೊರಟಿದ್ದ ಮಹೇಶ್ ರಾತ್ರಿ 8ಗಂಟೆಯಾದರೂ ಮನೆಗೆ ಬರಲಿಲ್ಲ . ಮಹೇಶ್ ಪತ್ನಿ ಅನೇಕ ಬಾರಿ ಮಹೇಶ್ ಫೋನ್ ಗೆ ಕರೆ ಮಾಡಿದರೂ ಫೋನ್ ಸ್ವೀಕರಿಸದ ಕಾರಣ ಅನುಮಾನಗೊಂಡ ಕುಟುಂಬಸ್ಥರು . ತೋಟದ ಕಡೆ ಹುಡುಕಾಟ ನಡೆಸಿದ್ದು, ಅವರಿಗೆ ಅಕ್ಕಪಕ್ಕದ ಮನೆಯವರೂ ಹುಡುಕಾಟಕ್ಕೆ ಸಹಕಾರ ಮಾಡಿದ್ದಾರೆ. ತೋಟದ ಬಳಿ ಹೋಗಿ ನೋಡಿದಾಗ ಮಹೇಶ್ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವುದು ಕಂಡು ಬಂದಿತ್ತು. ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಬೆಸ್ಕಾಂ ಇಲಾಖೆಗೆ ಫೋನ್ ಮಾಡಿ ವಿಷಯ ಮುಟ್ಟಿಸಿದ್ದಾರೆ ವಿಷಯ ತಿಳಿದ ಕೋಳಾಲ ಬೆಸ್ಕಾಂ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರದೆ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯತನ ತೋರಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಹೇಶ್ ಮದುವೆಯಾಗಿ ವರ್ಷ ಕೂಡ ಕಳೆದಿಲ್ಲ ಇದಕ್ಕೆಲ್ಲ ಕಾರಣ ಬೆಸ್ಕಾಂ ಇಲಾಖೆ ಅಧಿಕಾರಿಗಳೆಂದು ಮಹೇಶ್ ಸ್ನೇಹಿತರು…

Read More