Author: admin

ನವದೆಹಲಿ: ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು ಇಂದು , ಸುಪ್ರೀಂ ಕೋರ್ಟ್ ನಡೆಸಲಿದೆ ಎನ್ನಲಾಗಿತ್ತು.ಆದರೇ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ. ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹರಿದ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿದೆ. ಈ ಅರ್ಜಿಗಳನ್ನು ಇಂದು ದ್ವಿಸದಸ್ಯ ಪೀಠದಿಂದ ವಿಚಾರಣೆ ಕೈಗೆತ್ತಿಕೊಂಡ ಬಳಿಕ, ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸಂಪಾಜೆ: ಪಯಶ್ವಿನಿ ನದಿಯಲ್ಲಿ ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಡಿಡೀರ್ ಪ್ರವಾಹ ಉಂಟಾಗಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ, ಬೃಹತ್ ಗಾತ್ರದ ಮರಗಳೂ ಕೊಚ್ಚಿ ಬಂದ ಘಟನೆ ಆ.29ರ ಬೆಳಿಗ್ಗಿನ ಜಾವ ಸಂಪಾಜೆ ಸುತ್ತಮುತ್ತ ನಡೆದಿದೆ. ಪಯಸ್ವಿನಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ನೀರು ತುಂಬಿ ಹರಿದು ಹಲವು ಕಡೆಗಳಲ್ಲಿ ನದೀ ಬದಿಯ ಪ್ರದೇಶಗಳಿಗೆ ನೀರು ನುಗ್ಗಿದೆ. ಕೊಯನಾಡು ಶಾಲೆ ಬಳಿಯ 5 ಮನೆಗಳು ಜಲಾವೃತವಾಯಿತು. ಬಳಿಕ ಈ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಭಾರೀ ಗಾತ್ರದ ಮರಗಳು ಪ್ರವಾಹ ನೀರಿನಲ್ಲಿ ಕೊಚ್ಚಿ ಬಂದು ಕೊಯನಾಡಿನ ಕಿಂಡಿ ಅಣೆಕಟ್ಟಿನಲ್ಲಿ ಅಡ್ಡಲಾಗಿ ನಿಂತಿದೆ. ಹಲವೆಡೆ ಕೃಷಿ, ತೋಟಗಳಿಗೆ ನೀರು ನುಗ್ಗಿದೆ. ಊರುಬೈಲು, ಚೆಂಬು ಭಾಗದಲ್ಲಿ ಸೇತುವೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಸಂಪಾಜೆ ಭಾಗದಲ್ಲಿ ಮಳೆ ಕಡಿಮೆ ಇದ್ದರೂ ಪ್ರವಾಹ ಬಂದು ನದಿ ಉಕ್ಕಿ ಹರಿದು ನೀರು ನುಗ್ಗಿದ ಕಾರಣ ಜನರಲ್ಲಿ ಆತಂಕ ಸೃಷ್ಠಿಯಾಯಿತು. ಕಲ್ಮಕಾರು , ಕೊಲ್ಲಮೊಗ್ರುನಲ್ಲೂ ಇಂತಹದೇ ಪರಿಸ್ಥಿತಿ ನಿರ್ಮಾಣವಾಗಿದೆ.…

Read More

* 1612- ಸೂರತ್ ಕದನದಲ್ಲಿ ಬ್ರಿಟಿಷರು ಪೋರ್ಚುಗೀಸರನ್ನು ಸೋಲಿಸಿದರು. * 1947- ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಡಿ ಭಾರತದಲ್ಲಿ ‘ಶಿಕ್ಷಣ ಇಲಾಖೆ’ಯನ್ನು ಮರುಸ್ಥಾಪಿಸಲಾಯಿತು. * 1947- ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಸಂವಿಧಾನ ರಚಿಸಲು ಭಾರತದ ಸಂವಿಧಾನ ಸಭೆಯಿಂದ ಕರಡು ಸಮಿತಿ ರಚಿಸಲಾಯಿತು. * 1947 – ಚೌಧರಿ ಚರಣ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಲೋಕದಳ ಪಕ್ಷದ ಸ್ಥಾಪನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೇಶಾದ್ಯಂತ ಇಂದು ರಾಷ್ಟ್ರೀಯ ಕ್ರೀಡಾದಿನ ಆಚರಿಸಲಾಗುತ್ತಿದೆ. ಪ್ರತಿ ವರ್ಷ ಆಗಸ್ಟ್​​ 29ರಂದು ಈ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಈ ದಿನವನ್ನೇ ಕ್ರೀಡಾ ದಿನವಾಗಿ ಆಯ್ಕೆ ಮಾಡಿರುವುದಕ್ಕೆ ಒಂದು ವಿಶೇಷವಾದ ಕಾರಣವಿದೆ. ರಾಷ್ಟ್ರೀಯ ಕ್ರೀಡಾ ದಿನ ಆಚರಣೆ ಏಕೆ? ಭಾರತದ ಹಾಕಿ ದಂತಕತೆ ಮೇಜರ್​ ಧ್ಯಾನ್ ‌ಚಂದ್​ ಅವರು ಆಗಸ್ಟ್​ 29 ರಂದು ಜನಿಸಿರುವುದರಿಂದ, ಅವರ ಹುಟ್ಟುಹಬ್ಬವನ್ನು ಪ್ರತಿವರ್ಷ ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಆಗಸ್ಟ್​​ 29, 1905ರಂದು ಮೇಜರ್​ ಧ್ಯಾನ್‌ ಚಂದ್​ ಅಹಮದಾಬಾದ್​​ನಲ್ಲಿ ಜನ್ಮ ತಾಳಿದರು. ವಿಶ್ವ ಕಂಡ ಅಪರೂಪದ, ಅತ್ಯುತ್ತಮ ಹಾಕಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅವರು ಸುಮಾರು 400ಕ್ಕೂ ಅಧಿಕ ಅಂತಾರಾಷ್ಟ್ರೀಯ ಗೋಲು ಗಳಿಸಿ ವಿಶೇಷ ದಾಖಲೆಯನ್ನೂ ತನ್ನ ಹೆಸರಿಗೆ ಬರೆದುಕೊಂಡಿದ್ದರು. 2012 ರಲ್ಲಿ ಭಾರತ ಸರ್ಕಾರ ಮೊದಲ ಬಾರಿಗೆ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಪರಿಚಯಿಸಿತ್ತು. ಇದು ದೇಶದಲ್ಲಿ ಕ್ರೀಡಾಭಿಮಾನಿಗಳನ್ನು ಆಕರ್ಷಿಸುತ್ತಿದೆ. ಕ್ರೀಡೆಯಿಂದಾಗುವ ಅನುಕೂಲಗಳನ್ನು ತಿಳಿಸಿ ಯುವಜನತೆಯಲ್ಲಿ ಕ್ರೀಡಾಪ್ರೇಮ ಹೆಚ್ಚಿಸುವುದೇ ಈ ದಿನದ ಉದ್ದೇಶ.. *…

Read More

ಹಾವೇರಿ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಂದಹಾಗೇ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದಂತ ಮುರುಘಾ ಶ್ರೀ ಅಜ್ಞಾತ ಸ್ಥಳಕ್ಕೆ ತೆರಳೋ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಖಚಿತ ಮಾಹಿತಿಯನ್ನು ಆಧರಿಸಿ, ಅವರನ್ನು ಬಂಧಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ವಿಜಯಪುರ: ಬೆಳಗಾವಿ ಗೋಲ್ಫ್ ಮೈದಾನದಲ್ಲಿ ಪತ್ತೆಯಾಗಿರುವ ಚಿರತೆಯನ್ನು ಸೆರೆ ಹಿಡಿಯಲಾಗದ ಕಾರಣಕ್ಕೆ ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ನಾನು ರಾಜೀನಾಮೆ ನೀಡಿದರೆ ಚಿರತೆ ಸೆರೆ ಆಗುತ್ತದೆ ಎಂದಾದರೆ ಈಗಲೇ ರಾಜಿನಾಮೆ ನೀಡುತ್ತೇನೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿರತೆ ಸೆರೆ ಹಿಡಿಯಲು‌ ಉತ್ತರ ಕರ್ನಾಟಕ ‌ಭಾಗದ ಸಿಬ್ಬಂದಿಯನ್ನು ಹಾಕಿದ್ದೇವೆ. ಪಳಗಿದ ಆನೆಗಳನ್ನು‌ ತಂದಿದ್ದೇವೆ, ಆದರೂ ಚಿರತೆ ಸೆರೆ ಸಾಧ್ಯವಾಗಿಲ್ಲ. ಎರಡು ದಿನಗಳಿಂದ ಚಿರತೆ ಬೆಳಗಾವಿ ಪಟ್ಟಣದಲ್ಲಿ ಎಲ್ಲೂ ಕಂಡು ಬಂದಿಲ್ಲ. ಚಿರತೆ ಗೋಲ್ಫ್ ಕೋರ್ಟ್ ಸುತ್ತಮುತ್ತ ತಿರುಗಾಡುತ್ತಿದೆ ಎನ್ನಲಾಗಿದೆ. ಸಿಬ್ಬಂದಿ ಚಿರತೆ ಸೆರೆಹಿಡಿಯುವ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬಳ್ಳಾರಿ: ವಿದ್ಯುತ್ ​ತಂತಿ ಸ್ಪರ್ಶಿಸಿ ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಂಡಿಹಟ್ಟಿಯಲ್ಲಿ ನಡೆದಿದೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಂಪಾಪತಿ ಹಾಗೂ ಅವರ ಪತ್ನಿ ದ್ಯಾವಮ್ಮ ಮೃತ ದುರ್ದೈವಿಗಳಾಗಿದ್ದಾರೆ. ಮನೆಯ ಮೇಲೆ ಹಾದು ಹೋಗಿದ್ದ ವಿದ್ಯುತ್​ ತಂತಿ ದ್ಯಾವಮ್ಮಗೆ ತಗುಲಿತ್ತು, ಈ ವೇಳೆ ಪತ್ನಿಯನ್ನ ಬಿಡಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನವದೆಹಲಿ: ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್  ಗಳನ್ನು ನಿಷೇಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳ ಒಂದು ಬ್ಯಾಚ್ ಅನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ಹಾಗೂ ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರ ಪೀಠ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ. ಈ ಹಿಂದೆ, ಅಂದಿನ ಸಿಜೆಐ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠದ ಮುಂದೆ ಹಲವಾರು ಸಂದರ್ಭಗಳಲ್ಲಿ ತುರ್ತು ವಿಚಾರಣೆಗಾಗಿ ಅರ್ಜಿಗಳನ್ನು ಉಲ್ಲೇಖಿಸಲಾಗಿತ್ತು, ಆದರೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಿರಲಿಲ್ಲ. ಶಾಲಾ ಕಾಲೇಜುಗಳ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ದೇಶಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹಿರಿಯೂರು: ಕೆಂಪೇಗೌಡ ಜಯಂತಿ ಅಂಗವಾಗಿ ನಡೆಸಲಾದ ಮೆರವಣಿಗೆಯಲ್ಲಿ ನಿಯಮ ಉಲ್ಲಂಘಿಸಿ ಅಧಿಕ ಶಬ್ಧದ ಡಿ.ಜೆ. ಬಳಸಲಾಗಿರುವ ಬಗ್ಗೆ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಡಿಸೆಬಲ್ ಮಿತಿ ಮೀರಿ ಡಿ.ಜೆ.ಬಳಕೆ ಮಾಡಲಾಗಿದ್ದು, ಈ ಮೂಲಕ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷರಾದ ರಾಮಚಂದ್ರಪ್ಪ ಹಾಗೂ ಡಿ ಜೆ ಮಾಲೀಕರ ಮೇಲೆ ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಆಗಸ್ಟ್ 18ರಂದು ಶ್ರೀ ಕೆಂಪೇಗೌಡ ಜಯಂತಿ ಅಂಗವಾಗಿ ಪ್ರಧಾನ ರಸ್ತೆಯಲ್ಲಿರುವ ರಂಜಿತ್ ಹೋಟೆಲ್ ಬಳಿಯಿಂದ ಡಿ.ಜೆ. ಬಳಕೆ ಮಾಡಿ ಮೆರವಣಿಗೆ ಮಾಡಲಾಗಿತ್ತು. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಸಾಂಬ್ರಾ ಗ್ರಾಮದ ಮಾರುತಿ ಗಲ್ಲಿಯಲ್ಲಿ ನೂತನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಯ ಕಾಂಕ್ರೀಟ್ (ಸ್ಲ್ಯಾಬ್ ಭರಣಿ) ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪೂಜೆ ನೆರವೇರಿಸಿದರು. ಲಕ್ಷ್ಮೀ ತಾಯಿ ಫೌಂಡೇಷನ್‌ ವತಿಯಿಂದ ಈ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ಮಹನೀಯರ ತ್ಯಾಗ, ಬಲಿದಾನಗಳನ್ನು ಗೌರವಿಸುವ ದೃಷ್ಟಿಯಿಂದ ಈ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು. ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಹಲವಾರು ವಿದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರ ಸಹಕಾರ ಇದೇ ರೀತಿ ಇರಲಿ ಎಂದು ಅವರು ಕೋರಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ನಾಗೇಶ ದೇಸಾಯಿ, ಈರಪ್ಪ ಸುಳೇಭಾವಿ, ಸದು ಪಾಟೀಲ, ಲಕ್ಷ್ಮಣ ಕೊಳ್ಳಪ್ಪಗೋಳ, ಮಹೇಶ ಕುಲಕರ್ಣಿ, ರಂಜನಾ ಅಪ್ಪಯಾಚೆ, ಸಂತೋಷ ದೇಸಾಯಿ, ಗ್ರಾಮ ಪಂಚಾಯತಿಯ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More