Subscribe to Updates
Get the latest creative news from FooBar about art, design and business.
- ಬಳ್ಳಾರಿ: SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ
- ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ
- ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ
- ‘ಸೆರಗ ಸರ್ಸೆ’ ಹಾಡಿನ ವಿವಾದ: ಫಿಲ್ಮ್ ಚೇಂಬರ್ ಗೆ ಮಹಿಳಾ ಆಯೋಗದಿಂದ ಪತ್ರ
- ತಿಪಟೂರಿನಲ್ಲಿ ಅಡುಗೆ ಅನಿಲ ಅಭಾವ: ಸಿಲಿಂಡರ್ ಗಾಗಿ ಗ್ರಾಹಕರ ಹೈರಾಣು
- ತುಮಕೂರು: ರಂಜಾನ್ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್ ಕೊರತೆ; ದುಬಾರಿಯಾದ ಸಮೋಸ!
- ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.
- ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ
Author: admin
ಬೆಂಗಳೂರು: ದೇವೇಗೌಡರು ಈ ರಾಜ್ಯದ ಪಿತಾಮಹ. ಕರ್ನಾಟಕದ ಆರೂವರೆ ಕೋಟಿ ಜನರ ತಂದೆ. ಆದರೆ, ದೇವೇಗೌಡರ ಹುಟ್ಟು, ಸಾವಿನ ಬಗ್ಗೆ ಮಾತನ್ನಾಡುತ್ತಾರೆ ರಾಜಣ್ಣ ನಿಮಗೆ ಅಪ್ಪ ಇಲ್ಲವಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ. ದೇವೇಗೌಡರು ಈಗ ಇಬ್ಬರ ಮೇಲೆ ಕೈಹಾಕಿಕೊಂಡು ಹೋಗುತ್ತಿದ್ದಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ ಎಂಬ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಇಬ್ರಾಹಿಂ, ದೇವೇಗೌಡರು ಅಜರಾಮರರು. ದೇವೇಗೌಡರಿಗೆ ಸಾವಿಲ್ಲ ಸೂರ್ಯ, ಚಂದ್ರ ಇರುವವರೆಗೂ ಅವರ ಹೆಸರು ಶಾಶ್ವತವಾಗಿರುತ್ತದೆ ಎಂದು ತಿರುಗೇಟು ನೀಡಿದ್ದಾರೆ. ದೇವೇಗೌಡರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದವರು. ಕೆ.ಎನ್.ರಾಜಣ್ಣ ತನ್ನ ಹೇಳಿಕೆಗೆ ದೇವೇಗೌಡರ ಮನೆಗೆ ಬಂದು ಕ್ಷಮೆಯಾಚಿಸಬೇಕು ಎಂದು ಸಿಎಂ ಇಬ್ರಾಹಿಂ ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಪಾವಗಡ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಹತ್ಯೆಯನ್ನು ಖಂಡಿಸಿ ಬಜರಂಗದಳ ಪ್ರತಿಭಟನೆ ನಡೆಸಿದ್ದು, ಆರೋಪಿಗಳನ್ನುಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದೆ. ಕೃತ್ಯ ಎಸಗಿದ ಆರೋಪಿಗಳನ್ನು ಗಲ್ಲಿಗೇರಿಸುವ ಮೂಲಕ ನೊಂದ ಹಿಂದೂ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹ ಸಂಯೋಜಕರಾದ ಸುಮನ್ ಪಾವಗಡ, ತಾಲೂಕು ಸಂಚಾಲಕರಾದ ಮಂಜುನಾಥ್, ವಾಸು ನಗರ ಸಂಚಾಲಕ ಕಾರ್ತಿಕ್ ಗುಪ್ತಾ ಹಾಗೂ ಶ್ರೀರಾಮ ಸೇನೆ ತಾಲೂಕು ಅಧ್ಯಕ್ಷರಾದ ಕಾವಲಗೆರೆ ರಾಮಾಂಜಿ, ಶೇಖರ್ ಬಾಬು, ಅಲಕುಂದಿ ,ರಘು ಹಾಗೂ ಕಾರ್ಯಕರ್ತರು ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ’ ಎಂದು ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿಕೆ ವಿವಾದಕ್ಕೆ ಸಿಲುಕಿದೆ. ಮಧುಗಿರಿ ತಾಲ್ಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಗುರುವಾರ ಸಾರ್ವಜನಿಕರೊಂದಿಗೆ ಮಾತನಾಡುತ್ತಿದ್ದರು. ರಾಜಣ್ಣ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದೆ. ರಾಜಣ್ಣ ಹೇಳಿಕೆಯ ವಿಡಿಯೊವನ್ನು ನೆಟ್ಟಿಗರು ಹಂಚಿಕೊಂಡಿದ್ದು, ಕಿಡಿಕಾರಿದ್ದಾರೆ. ಇಂತಹ ಹೇಳಿಕೆ ನೀಡುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. ‘ಇದು ನನ್ನ ಕಡೆಯ ಚುನಾವಣೆಯಾಗಿದ್ದು, ಪ್ರತಿ ಮನೆ ಬಾಗಿಲಿಗೆ ಬಂದು ಮತ ಕೇಳುತ್ತೇನೆ. ನಾನು ಶಾಸಕನಾದರೆ ನೀವು ಶಾಸಕರಾದಂತೆ. ಸರ್ಕಾರದ ಸೇವೆ ಒದಗಿಸದ ಎಲ್ಲ ಅಧಿಕಾರಿಗಳನ್ನು ಪ್ರಶ್ನೆ ಮಾಡಬಹುದು. ಶೋಕಿಗೆ ರಾಜಕಾರಣ ಮಾಡಬೇಡಿ’ ಎಂದು ರಾಜಣ್ಣ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಚಿತ್ರದುರ್ಗ: ಚಿಕ್ಕಜಾಜೂರುನಿಂದ ಕಡೂರುಗೆ ಹೋಗುವ ಮಾರ್ಗಮದ್ಯೆ ಎರಡು ಕಿರಿದಾದ ಸೇತುವೆ ಇದ್ದು ಅಪಘಾತಗಳು ಹೆಚ್ಚಿನದಾಗಿ ಸಂಭವಿಸುತಿದ್ದು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ ಈ ಕೂಡಲೇ ರಸ್ತೆ ಅಗಲೀಕರಣ ಮಾಡಬೇಕೆಂದು ಅಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಹಶೀಲ್ದಾರ್ ಗೆ ಮನವಿ ಸಲ್ಲಿಸಿತು. ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಆರ್.ಕೋದಂಡರಾಮ್ ಅವರ ಮಾರ್ಗದರ್ಶನದಲ್ಲಿ ಪ್ರತಿಭಟನೆ ನಡೆಸಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆ, ಹೊಳಲ್ಕೆರೆ ತಾಲ್ಲೂಕು ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಈ ಸಂರ್ಭದಲ್ಲಿ ರಾಜ್ಯಕಾರ್ಯದರ್ಶಿಗಳು ಹಾಗೂ ಜಿಲ್ಲಾಧ್ಯಕ್ಷರಾದ ರಾಮಚಂದ್ರ ಕೆ., ಹೊಳಲ್ಕೆರೆ ತಾಲೂಕು ಅಧ್ಯಕ್ಷರಾದ ಕೆ.ಎನ್.ತಿಪ್ಪೇಶ್, ಹಿರಿಯೂರು ತಾಲೂಕು ಕಾರ್ಯಧ್ಯಕ್ಷರಾದ ರಾಘವೇಂದ್ರ ಆರ್. ಹಾಗೂ ಪದಾಧಿಕಾರಿಗಳಾದ ಶ್ರೀಧರ್, ಸುನೀಲ್, ಮಂಜುನಾಥ್, ರಂಗಸ್ವಾಮಿ, ಆಕಾಶ್, ಸ್ವಾಮಿ, ರಘು, ಲಿಂಗರಾಜು, ಸ್ವಾಮಿ ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ, ಐಟಿಐ, ಮೆಡಿಕಲ್ ಹಾಗೂ ಇನ್ನಿತರ ವಿದ್ಯಾರ್ಥಿಗಳ ಬಸ್ ಪಾಸಿನ ಅವಧಿಯನ್ನು ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುವವರೆಗೂ ವಿಸ್ತರಿಸಲು ಆಗ್ರಹಿಸಿ AIDSO ತುಮಕೂರು ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡರು, ರಾಜ್ಯದ ಎರಡನೇ ಮತ್ತು ಮೂರನೇ ವರ್ಷದ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪಾಸ್ ಅನ್ನು ಸೆಪ್ಟಂಬರ್ 2021ರಲ್ಲಿ ನೀಡಲಾಗಿತ್ತು. ಆದರೆ ಅವರ ತರಗತಿಗಳು ನವೆಂಬರ್ ನಲ್ಲಿ ಆರಂಭವಾಗಿತ್ತು. ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಡಿಸೆಂಬರ್ 2021ರಲ್ಲಿ ನೀಡಲಾಗಿತ್ತು. ವಿದ್ಯಾರ್ಥಿ ಬಸ್ ಪಾಸಿಗೆ ಅವರ ಶೈಕ್ಷಣಿಕ ವರ್ಷದ ಕೊನೆಯವರೆಗೂ ಮಾನ್ಯತೆ ಇರುತ್ತದೆ. ಇದು ಇಷ್ಟು ವರ್ಷಗಳವರೆಗೂ ನಡೆದುಕೊಂಡು ಬಂದಿರುವ ಪ್ರಕ್ರಿಯೆ. ಅಂದರೆ, ನವೆಂಬರ್ ನಲ್ಲಿ ತರಗತಿ ಆರಂಭದ ನಂತರ ಪಾಸ್ ಪಡೆದ ವಿದ್ಯಾರ್ಥಿಗಳು ಆಗಸ್ಟ್ ನವರೆಗೂ, ಡಿಸೆಂಬರ್ ನಲ್ಲಿ ಪಾಸ್ ಪಡೆದ ವಿದ್ಯಾರ್ಥಿಗಳು ಸೆಪ್ಟಂಬರ್ ವರೆಗೂ ಉಚಿತವಾಗಿ ಓಡಾಡಬಹುದು. ಜೂನ್ ತಿಂಗಳಿಗೆ ವಿದ್ಯಾರ್ಥಿ ಬಸ್ ಪಾಸಿನ ಅವಧಿಯು ಕೊನೆಗೊಳ್ಳಲಿರುವುದರಿಂದ ಮುಂದಿನ ತಿಂಗಳಿನಿಂದ…
ಮಧುಗಿರಿ: ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಜುಲೈ 6ರ ಬುಧವಾರ ಸ್ವಯಂ ಉದ್ಯೋಗ ಮೇಳ ಮತ್ತು ಸಾಧನಾ ಸಮಾವೇಶ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗಡೆಯವರು ಆಗಮಿಸುತ್ತಿದ್ದಾರೆ. ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಜಿಲ್ಲಾ ನಿರ್ದೇಶಕರಾದ ದಿನೇಶ ಡಿ. ತಿಳಿಸಿದರು. ಜುಲೈ 6ನೇ ತಾರೀಕು ನಡೆಯುವ ಕಾರ್ಯಕ್ರಮಕ್ಕೆ ವೇದಿಕೆಯ ಸಿದ್ಧತೆಗೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಇದೇ ವೇಳೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿದರ ಹಾಲಪ್ಪ, ತುಂಗೋಟಿ ರಾಮಣ್ಣ, ಲಾಲಪೇಟೆ ಮಂಜುನಾಥ್, ದಿನೇಶ್ ಕುಮಾರ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿಗಳು, ಬಿ.ಸಿ. ಟ್ರಸ್ಟ್ ಮಧುಗಿರಿ ಮತ್ತು ಕಲ್ಪನಾ ಗೋವಿಂದರಾಜು, ವೆಂಕಟೇಶ್, ನರಸಿಂಹಮೂರ್ತಿ.ಯತೀಶ್ ಬಾಬು, ಮಂಜುನಾಥ್, ಮತ್ತಿತರು ಹಾಜರಿದ್ದರು. ವರದಿ: ದೊಡ್ಡೇರಿ ಮಹಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ತುರುವೇಕೆರೆ ತಾಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಚಲವಾದಿ ಮಹಾಸಭಾ ವತಿಯಿಂದ ಜಂಟಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಗದೀಶ್, ತುರುವೇಕೆರೆ ತಾಲೂಕಿನಲ್ಲಿ ಕುಣಿಗಲ್ ಡಿವೈಎಸ್ಪಿ ರಮೇಶ್ ಬಂದ ಮೇಲೆ ಸುಮಾರು ಏಳು ಪ್ರಕರಣಗಳು ದಾಖಲಾಗಿವೆ. ಆದರೆ ಎಸ್ಪಿ ರಮೇಶ್ ರವರು ದಲಿತ ದೌರ್ಜನ್ಯ ಕಾಯ್ದೆ ಪ್ರಕರಣಗಳಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಆರೋಪಿಸಿದರು. ದಲಿತ ದೌರ್ಜನ್ಯ ಪ್ರಕರಣಗಳು ದಾಖಲಾಗುವ ಮುಂಚೆಯೇ, ಸ್ಥಳ ಪರೀಕ್ಷೆ ಮಾಡುತ್ತೇವೆ, ಪ್ರಕರಣ ತನಿಖೆ ಮಾಡುತ್ತೇವೆ ಎಂದು ದೂರುದಾರರನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಪ್ರಕರಣ ದಾಖಲಿಸಲು ವಿಳಂಬ ಮಾಡುತ್ತಿದ್ದಾರೆ. ಈ ವಿಳಂಬದಿಂದಾಗಿ ತುರುವೇಕೆರೆ ತಾಲೂಕಿನಲ್ಲಿ ದೌರ್ಜನ್ಯ ಪ್ರಕರಣಗಳು ಮಿತಿಮೀರಿ ಹೋಗಿವೆ. ಸ್ಥಳೀಯ ಪೊಲೀಸರಿಗೆ ದೂರು ಬಂದ ತಕ್ಷಣ ಕೇಸು ದಾಖಲಿಸುವಲ್ಲಿ ಸರಿಯಾದ ನಿರ್ದೇಶನ ನೀಡುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ದೂರಿದರು. ಚಲವಾದಿ ಮಹಾಸಭಾದ ಪದಾಧಿಕಾರಿಗಳು ಖುದ್ದು ಭೇಟಿ ಮಾಡಿ ಕೇಸು ದಾಖಲು ಮಾಡುವಂತೆ ಒತ್ತಾಯಿಸಿದಾಗ ಅನಿವಾರ್ಯವಾಗಿ ಕೇಸು…
ಬಳ್ಳಾರಿ: ಲಾರಿಯ ಚಕ್ರಕ್ಕೆ ಸಿಲುಕಿದ ವೃದ್ಧೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಡೆದಿದ್ದು, ಬಳ್ಳಾರಿಯ ಜಿಂದಾಲ್ ಕಾರ್ಖಾನೆ ಎದುರು ಈ ಘಟನೆ ನಡೆದಿದೆ. ಕಾರ್ಖಾನೆ ಎದುರು ನಡೆದು ಹೋಗುತ್ತಿದ್ದ ವೃದ್ಧೆಯ ಮೇಲೆ ಲಾರಿಯೊಂದು ಹರಿದಿದೆ. ಲಾರಿಯಡಿಗೆ ಸಿಲುಕಿದ ವೃದ್ಧೆಯ ದೇಹ ಛಿದ್ರಛಿದ್ರವಾಗಿದೆ. ವೃದ್ಧೆಯ ಮೇಲೆ ಲಾರಿ ಹತ್ತಿದರೂ ಲಾರಿ ಚಾಲಕ ಲಾರಿ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್ ಎನಿಸುವಂತಿದೆ. ಜಿಂದಾಲ್ ಕಾರ್ಖಾನೆ ಓಲ್ಡ್ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು, ತೋರಣಗಲ್ ಪೊಲೀಸರು ಲಾರಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹುಳಿಯಾರು ರಸ್ತೆಯ ಅಗಲಿಕರಣದ ಕಾಮಗಾರಿ ನಡೆಸುತ್ತಿದ್ದು, ಕಾಮಗಾರಿಗಾಗಿ ಇಲ್ಲಿ ವಾಸವಿದ್ದ ನಾಗರಿಕರ ಮನೆಗಳನ್ನು ಧ್ವಂಸ ಮಾಡಲಾಗಿದ್ದು, ಆದರೆ ಯಾವುದೇ ಪರಿಹಾರ ನೀಡದೇ, ಮೂಲಭೂತ ಸೌಕರ್ಯವನ್ನೂ ಕಲ್ಪಿಸದ ಹಿನ್ನೆಲೆಯಲ್ಲಿ ಜನರು ಬೀದಿಪಾಲಾಗಿದ್ದಾರೆ. ನಮ್ಮ ಮನೆಗಳನ್ನು ಧ್ವಂಸ ಮಾಡಲಾಗಿದೆ. ಆದರೆ, ನಮಗೆ ಯಾವುದೇ ಪರಿಹಾರ ನೀಡಲಾಗಿಲ್ಲ. ದಿನನಿತ್ಯ ಕೂಲಿಯನ್ನು ನಂಬಿಕೊಂಡು ಜೀವನ ಮಾಡುತ್ತಿದ್ದೇವೆ. ಆದರೆ ಇದೀಗ ಇರುವ ಮನೆಯನ್ನೂ ಕಳೆದುಕೊಂಡು ಬೀದಿ ಪಾಲಾಗಿದ್ದೇವೆ ಎಂದು ನಮ್ಮತುಮಕೂರು ಜೊತೆಗೆ ನಾಗರಿಕರು ಅಳಲು ತೋಡಿಕೊಂಡಿದ್ದಾರೆ. ಸರ್ಕಾರದ ಆದೇಶದಂತೆ ಅಳತೆ ಮಾಡದೇ, ಸಂಬಂಧಪಟ್ಟ ಅಧಿಕಾರಿಗಳು ತಮಗೆ ತೋಚಿದಂತೆ ಅಳತೆ ಮಾಡುವ ಮೂಲಕ ಜನರಿಗೆ ಮೋಸ ಮಾಡಿದ್ದಾರೆ. ವಾರ್ಡ್ ನಂ 28ರಲ್ಲಿನ ವಾರ್ಡ್ ನಗರಸಭೆ ಸದಸ್ಯರು ಸಹ ಇತ್ತ ಕಡೆ ಗಮನಹರಿಸುವುದಿಲ್ಲ ಹಾಗೂ ನಮಗೆ ವಾರ್ಡ್ ನಗರಸಭೆ ಸದಸ್ಯರು ಯಾರು ಅನ್ನೋದು ಸಹ ನಮಗೆ ಗೊತ್ತಿಲ್ಲ ಎಂದು ಜನರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ಸರ್ಕಾರಿ ಶಾಲೆಯೂ ಇದ್ದು, ಶಾಲೆಯ ಮುಂಭಾಗವನ್ನು…
ಮುಂಬೈ: ಯಾರಾದರೂ ಒಬ್ಬರ ಅದೃಷ್ಟವನ್ನು ಒಬ್ಬ ವೈಯಕ್ತಿಕ ಸಾಧನೆ ಎಂದು ತಪ್ಪಾಗಿ ಅರ್ಥೈಸಿಕೊಂಡಾಗ, ಅವನ ಅವನತಿಯ ಕಡೆಗೆ ಪ್ರಯಾಣ ಪ್ರಾರಂಭವಾಗುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಉದ್ಧವ್ ಠಾಕ್ರೆ ಸಹೋದರ ಸಂಬಂಧಿ ರಾಜ್ ಠಾಕ್ರೆ ಕಾಲೆಳೆದಿದ್ದಾರೆ. ರಾಜ್ ಠಾಕ್ರೆ ಅವರು ಶಿವಸೇನೆ ವಿರುದ್ಧ ಬಂಡಾಯವೆದ್ದು , ಸುಮಾರು ಎರಡು ದಶಕಗಳ ಹಿಂದೆ ತಮ್ಮದೇ ಮಹಾರಾಷ್ಟ್ರ ನವನಿರ್ಮಾಣ ಸೇನೆಯನ್ನು ಸ್ಥಾಪಿಸಿದರು. ಇದೀಗ ತಮ್ಮ ಕಣ್ಣಮುಂದೆ ಉದ್ದವ್ ಠಾಕ್ರೆ ನೇತೃತ್ವದ ಸರ್ಕಾರ ತನ್ನದೇ ಶಾಸಕರ ಬಂಡಾಯದಿಂದ ಪತನವಾಗಿರುವುದಕ್ಕೆ ಸಂಭ್ರಮಿಸಿರುವ ಅವರು, ಉದ್ದವ್ ಠಾಕ್ರೆಯನ್ನು ಕೆಣಕಿದ್ದಾರೆ. ರಾಜ್ ಠಾಕ್ರೆಯವರ ತಂದೆ ಶ್ರೀಕಾಂತ್ ಠಾಕ್ರೆ, ಉದ್ಧವ್ ಠಾಕ್ರೆಯವರ ತಂದೆ ಶಿವಸೇನಾ ಸಂಸ್ಥಾಪಕ ಬಾಳ್ ಠಾಕ್ರೆಯವರ ಕಿರಿಯ ಸಹೋದರ. ಕಿಡಿ ಭಾಷಣಗಳು ಮತ್ತು ಆಕ್ರಮಣಕಾರಿ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾದ ರಾಜ್ ಠಾಕ್ರೆ ಸೌಮ್ಯ ಸ್ವಭಾವದ ಉದ್ಧವ್ ಠಾಕ್ರೆಗೆ ವಿರುದ್ಧವಾಗಿ ನಿಂತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…