Subscribe to Updates
Get the latest creative news from FooBar about art, design and business.
- ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
- ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
- ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
- ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
- ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
- ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
- ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್ ಐಆರ್ ದಾಖಲು
- ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
Author: admin
ತುಮಕೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉಕ್ಕಿ ಹರಿಯುವ ನೀರಿನಲ್ಲಿ ಯುವಕರ ಮೋಜು ಮಸ್ತಿ ಮಾಡುತ್ತಿದ್ದ ವೇಳೆ ದುರಂತವೊಂದು ಸಂಭವಿಸಿದ್ದು, ನೋಡ ನೋಡುತ್ತಲೇ ತಂದೆ ಮಗ ನೀರಲ್ಲಿ ಕೊಚ್ಚಿ ಹೋದ ವಿಡಿಯೋ ವೈರಲ್ ಆಗಿದೆ. ನೀರಿನಲ್ಲಿ ಆಟವಾಡಲು ಹೋದ ಯುವಕ ಮತ್ತು ಬಾಲಕ ಇಬ್ಬರು ರಭಸದಿಂದ ಹರಿಯುತ್ತಿರುವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ತುಮಕೂರು ಗ್ರಾಮಾಂತರದ ಗೂಳೂರು ಕೆರೆಯಲ್ಲಿ ನಡೆದಿದೆ. ಸ್ಥಳದಲ್ಲೇ ಇದ್ದ ಸ್ಥಳೀಯರು ಮತ್ತು ಸಾರ್ವಜನಿಕರು ಸೇರಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ತುಮಕೂರು ಗ್ರಾಮಾಂತರ ತಾಲೂಕಿನ ಗೂಳೂರು ಕೆರೆಯಲ್ಲಿ ನಡೆದಿದೆ. ಇನ್ನಾದರೂ ಸ್ಥಳೀಯ ಜಿಲ್ಲಾಡಳಿತ ಎಚ್ಚೆತ್ತು ಕೊಂಡು ತುಂಬಿ ಹರಿಯುತ್ತಿರುವ ಕೆರೆಗಳಿಗೆ ಭದ್ರತೆ ನಿಯೋಜನೆ ಮಾಡುತ್ತದೆಯಾ ನೋಡಬೇಕಿದೆ. ಜೊತೆಗೆ ಸಾರ್ವಜನಿಕರು ಕೂಡ ಜವಾಬ್ದಾರಿಯುತವಾಗಿ ವರ್ತಿಸಬೇಕಿದೆ. ಹರಿಯುವ ನೀರಿನಲ್ಲಿ ಆಟವಾಡುವುದು, ಹುಚ್ಚಾಟ ಆಡುವುದು ಪ್ರಾಣಕ್ಕೆ ಅಪಾಯ ತಂದೊಡ್ಡಬಹುದು. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಮಧುಗಿರಿ: ಬಳ್ಳಿ ಮತ್ತು ಮುಳ್ಳುಗಳು ರೆಕ್ಕೆಗೆ ಚುಚ್ಚಿ ಸಿಲುಕಿದ್ದ ರಾಷ್ಟ್ರೀಯ ಪಕ್ಷಿ ನವಿಲನ್ನು ಅರಣ್ಯ ಇಲಾಖೆ ರಕ್ಷಿಸಿದ ಘಟನೆ ನಡೆದಿದೆ. ದೊಡ್ಡೇರಿ ಗ್ರಾಮ ನಿವಾಸಿ ದೊಡ್ಡೇರಿ ಮಹಲಿಂಗಯ್ಯನವರು ಹೆಣ್ಣು ನವಿಲೊಂದು ಪೊದೆಯಲ್ಲಿ ಸಿಲುಕಿಕೊಂಡಿರುವುದನ್ನು ನೋಡಿ ತಕ್ಷಣವೇ ಅರಣ್ಯ ಇಲಾಖೆಅಧಿಕಾರಿಯಾದ ಮುತ್ತುರಾಜ್ ರವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಬಡವನಹಳ್ಳಿ ಮತ್ತು ತಿಮ್ಮಲಾಪುರ ಅರಣ್ಯ ರಕ್ಷಕರಾದ ಎಲ್ಲಪ್ಪ ಹಂಚಿನಾಳ್, ಚಿದಾನಂದ ಚೆನ್ನಾಗಿರಿ ಅಧಿಕಾರಿಯವರಿಗೆ ತಿಳಿಸಿದ್ದು, ತಕ್ಷಣ ನವಿಲು ಸಿಲುಕುಕೊಂಡಿರುವ ಸ್ಥಳಕ್ಕೆ ಆಗಮಿಸಿ ಸುಮಾರು ಒಂದು ವರ್ಷ ವಯಸ್ಸಿನ ಹೆಣ್ಣು ನವಿಲನ್ನು ರಕ್ಷಣೆ ಮಾಡಿದ್ದಾರೆ. ಪಕ್ಷಿಯು ಆಹಾರವಿಲ್ಲದೆ ಸುಸ್ತಾಗಿದ್ದು, ಇದೀಗ ನವಿಲನ್ನು ರಕ್ಷಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ ನವಿಲಿಗೆ ಚಿಕಿತ್ಸೆ ನೀಡಿ, ಆರೈಕೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರಾದ ಡಿ.ಬಿ.ಮಂಜುನಾಥ್, ಕಾರ್ತಿಕ್, ಜಗದೀಶ್, ರವಿಚಂದ್ರ ಮುಂತಾದವರು ನವಿಲನ್ನು ರಕ್ಷಣೆ ಮಾಡಲು ಸಹಕರಿಸಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ ಬಂದಿದೆ. ನಕಲಿ ಛಾಪಾ ಕಾಗದದ ಮೂಲಕ ಡೀಲ್ ನಡೆಸುತ್ತಿದ್ದ ಹನ್ನೊಂದು ಆರೋಪಿಗಳ ಗ್ಯಾಂಗ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಬಂಧಿತರಿಂದ ಒಟ್ಟು 1.33 ಕೋಟಿ ರೂ. ಮೌಲ್ಯದ 2664 ನಕಲಿ ಛಾಪಾ ಕಾಗದಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಒಡೆಯರ ಕಾಲದಿಂದ ಈವರೆಗಿನ ಛಾಪಾ ಕಾಗದಗಳು ಪತ್ತೆಯಾಗಿವೆ. ಈ ಗ್ಯಾಂಗ್ ಛಾಪಾ ಕಾಗದಗಳ ಮೂಲಕ ಪ್ರಾಪರ್ಟಿಗಳ ಜಿಪಿಎ ಮಾಡುತ್ತಿದ್ದರು. ನಾಲ್ಕು ಕಡೆ ನಕಲಿ ಛಾಪಾ ಕಾಗದ ಬಳಸಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. 1990,1995, 2002, 2009 ರಲ್ಲಿ ರಿಜಿಸ್ಟರ್ ಆಗಿರುವಂತೆ ದಾಖಲಾತಿ ಸೃಷ್ಟಿ ಮಾಡಿದ್ದಾರೆ. ನಾಲ್ಕು ಕೇಸ್ ನಲ್ಲಿ ಕೋಟ್ಯಂತರ ರೂಪಾಯಿಗಳ ಬೆಲೆ ಬಾಳುವ ಆಸ್ತಿಗಳ ಜಿಪಿಎ ಮಾಡಿದ್ದು ಬಯಲಿಗೆ ಬಂದಿದೆ. ಈ ಗ್ಯಾಂಗ್ ಒಂದು ಛಾಪಾ ಕಾಗದವನ್ನು ಐದರಿಂದ ಎಂಟು ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಸಧ್ಯ ಆರೋಪಿಗಳಿಂದ 118 ನಕಲಿ ಸೀಲ್ ಗಳು ವಶಪಡಿಸಿಕೊಂಡಿದ್ದಾರೆ. ನಕಲಿ ಛಾಪಾ…
ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಮತ್ತು ಮೆರವಣಿಗೆ ನಡೆಸುತ್ತಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಸಂಸತ್ ಭವನ ಮತ್ತು ರಾಷ್ಟ್ರಪತಿ ಭವನದ ಕಡೆಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ಜಾಥಾ ಹೊರಟಿದ್ದರು. ಈ ವೇಳೆ ದೆಹಲಿ ಪೊಲೀಸರು ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೆಹಲಿ ಪೊಲೀಸರ ಮೇಲೆ ಹಲ್ಲೆ ಆರೋಪ: ಕಸ್ಟಡಿಗೆ ತೆಗೆದುಕೊಳ್ಳುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಪಕ್ಷದ ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ನಾವು ದನಿ ಎತ್ತುತ್ತಿದ್ದೇವೆ. ಆದರೆ ಪೊಲೀಸರು ನಮಗೆ ಮುಂದುವರೆಯಲು ಅವಕಾಶ ನೀಡಲಿಲ್ಲ” ಎಂದು ಹೇಳಿದ್ದಾರೆ. “ಈ ಶಕ್ತಿಗಳನ್ನು ವಿರೋಧಿಸುವುದು ನಮ್ಮ ಕೆಲಸ. ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನಮ್ಮ ಕೆಲಸ. ಹಣದುಬ್ಬರ ಮತ್ತು ನಿರುದ್ಯೋಗದಂತಹ ಜನರ ಸಮಸ್ಯೆಗಳನ್ನು ತೊಡೆದುಹಾಕುವುದು ನಮ್ಮ ಕೆಲಸ…
ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ 2022 ಅಮೆಜಾನ್ ಪ್ರೈಮ್ ಬಳಕೆದಾರರಿಗೆ ಲೈವ್ ಆಗಿದೆ. ಸಾಮಾನ್ಯ ಬಳಕೆದಾರರಿಗೆ, ಈ ಸೇಲ್ ಇಂದು ರಾತ್ರಿ ಮಧ್ಯರಾತ್ರಿಯಿಂದ ಪ್ರಾರಂಭವಾಗುತ್ತದೆ. ಪ್ರತಿ ವರ್ಷ ನಡೆಯುವ ಈ ಫ್ರೀಡಂ ಸೇಲ್ ನಲ್ಲಿ ಬಳಕೆದಾರರು ಸ್ಮಾರ್ಟ್ಫೋನ್ ಗಳು, ಎಲೆಕ್ಟ್ರಾನಿಕ್ ವಸ್ತುಗಳು, ಗೃಹೋಪಯೋಗಿ ವಸ್ತುಗಳು ಇತ್ಯಾದಿಗಳ ಮೇಲೆ ಭಾರೀ ರಿಯಾಯಿತಿ ಪಡೆಯಬಹುದು. ಕೆಲವು ದಿನಗಳ ಹಿಂದೆ, ಅಮೆಜಾನ್ ಈ ಮಾರಾಟದಲ್ಲಿ ಲಭ್ಯವಿರುವ ಪ್ರಮುಖ ಕೊಡುಗೆಗಳನ್ನು ಬಹಿರಂಗಪಡಿಸಿದೆ. ಈ ಸೇಲ್ ಆಗಸ್ಟ್ 10 ರ ಮಧ್ಯರಾತ್ರಿಯವರೆಗೆ ಇರುತ್ತದೆ. ಈ ಫ್ರೀಡಂ ಸೇಲ್ ನಲ್ಲಿ ಹೊಸದಾಗಿ ಬಿಡುಗಡೆಯಾದ OnePlus 10T , iQOO 9T ಫ್ಲ್ಯಾಗ್ಶಿಪ್ ಸ್ಮಾರ್ಟ್ಫೋನ್ಗಳ ಜೊತೆಗೆ ಈ ವರ್ಷ ಪರಿಚಯಿಸಲಾದ ಬಜೆಟ್, ಮಿಡ್ ಬಜೆಟ್ ಮತ್ತು ಪ್ರೀಮಿಯಂ ಫೋನ್ಗಳ ಮೇಲೆ ಕೂಡಾ ರಿಯಾಯಿತಿ ಸಿಗಲಿದೆ. ಇದಲ್ಲದೆ, ಬಳಕೆದಾರರು ಸ್ಮಾರ್ಟ್ ಟಿವಿಗಳು, ಲ್ಯಾಪ್ಟಾಪ್ಗಳು, ಗೃಹೋಪಯೋಗಿ ವಸ್ತುಗಳು, ಇತ್ಯಾದಿಗಳ ಮೇಲೆ ರಿಯಾಯಿತಿ ಪಡೆಯಲಿದ್ದಾರೆ. ಅಮೆಜಾನ್ ಹೊರತುಪಡಿಸಿ, ಇ-ಕಾಮರ್ಸ್ ವೆಬ್ಸೈಟ್ ಫ್ಲಿಪ್ಕಾರ್ಟ್ನಲ್ಲಿ ಬಿಗ್ ಸೇವಿಂಗ್ ಡೇಸ್…
ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಭಂದಿಸಿದಂತೆ ನಗರದಲ್ಲಿ ಸಿಐಡಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಪರೀಕ್ಷೆ ಬರೆದಿದ್ದ ಎಂಟು ಅಭ್ಯರ್ಥಿಗಳನ್ನ ಬಂಧಿಸಿದ್ದಾರೆ. ಬಂಧಿತರು ಕಲಬುರಗಿ ಜಿಲ್ಲೆಯ ಅಫಜಲಪುರ, ಜೇವರ್ಗಿ ತಾಲೂಕಿನ ನಿವಾಸಿಗಳು ಎಂದು ಹೇಳಲಾಗಿದೆ. ಇವರು ಬ್ಲೂಟೂತ್ ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಅಕ್ರಮವಾಗಿ ಪಿಎಸ್ಐ ಪರೀಕ್ಷೆ ಬರೆದಿದ್ದರು. ಎಂಟು ಜನ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಆಯ್ಕೆಯಾಗಿದ್ದರು. ಎಂಟು ಅಭ್ಯರ್ಥಿಗಳ ಹೆಸರು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿತ್ತು. ಇವರು ನಗರದ ಎಸ್.ಬಿ.ಆರ್. ಮತ್ತು ಸರ್ಕಾರಿ ಪದವಿ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದರು. 1) ರವಿರಾಜ್ ಅಖಂಡೆ 2) ಪೀರಪ್ಪ ಹಾಸ್ಟೆಲ್ನಲ್ಲಿ ಕುಕ್ಕರ್ 3) ಶ್ರೀಶೈಲ್ 4) ಭಗವಂತರಾಯ್ 5) ಸಿದ್ದುಗೌಡ ಪಾಟೀಲ್ ಎಫ್ಡಿಎ 6) ಸೋಮನಾಥ್ 7) ಕಲ್ಲಪ್ಪ ಅಲ್ಲಾಪುರ ಕಾನ್ಸ್ಟೆಬಲ್ 8) ವಿಜಯಕುಮಾರ್ ಈ ಬಂಧಿತ ಅಭ್ಯರ್ಥಿಗಳು ಕಿಂಗ್ಪಿನ್ ಆರ್ಡಿ ಪಾಟೀಲ್ ಕ್ಯಾಂಡಿಡೆಟ್ಗಳು ಎಂದು ಹೇಳಲಾಗಿದೆ. ಇವರು ತಲಾ 40 ಲಕ್ಷಕ್ಕೂ ಅಧಿಕ ಹಣವನ್ನ ಕಿಂಗ್ ಪಿನ್ ಆರ್.ಡಿ. ಪಾಟೀಲ್…
ಸ್ಯಾಂಡಲ್ ವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಅದ್ಬುತ ಸಿನಿಮಾಗಳು ತೆರೆ ಮೇಲೆ ಅಬ್ಬರಿಸಲು ಸಿದ್ಧವಾಗಿದೆ. ಆಗಸ್ಟ್ ತಿಂಗಳಿನಲ್ಲಿ ಸಿನಿಮಾಭಿಮಾನಿಗಳಿಗೆ ಭರಪೂರ ಮನರಂಜನೆ ಸಿಕ್ಕಿದೆ. ಯಾಕಂದ್ರೆ ಸಾಲು ಸಾಲು ಒಳ್ಳೊಳ್ಳೆ ಸಿನಿಮಾಗಳು ತೆರೆಕಂಡಿದೆ ಜೊತೆ ರಿಲೀಸ್ ಆಗಲು ಬಾಕಿಯಿದೆ. ಡಾಲಿ ಧನಂಜಯ, ಡಿಂಪಲ್ ಕ್ವೀನ್ ರಚಿತಾ ರಾಮ್ ಮತ್ತು ಯಶ ಶಿವಕುಮಾರ್ ನಟನೆಯ “ಮಾನ್ಸೂನ್ ರಾಗ” ಸಿನಿಮಾ ಇದೇ ಆಗಸ್ಟ್ 19ರಂದು ತೆರೆಯ ಮೇಲೆ ರಂಗೇರಿಸಲು ಸಿದ್ಧವಾಗಿದೆ.”ಮಾನ್ಸೂನ್ ರಾಗ”ಸಿನಿಮಾದ ಟ್ರೀಲರ್ ಮತ್ತು ಹಾಡುಗಳಿಂದಲೇ ಜನಮನ ಗೆದ್ದಿದೆ. ‘ಸೆಕ್ಸ್ ವರ್ಕರ್’ ಪಾತ್ರದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಕಾಣಿಸಿಕೊಳ್ಳೋದ್ರ ಮೂಲಕ ವಿಭಿನ್ನ ಕಥೆಯನ್ನ ತೆರೆಯ ಮೇಲೆ ಹೇಳಲು ಹೊರಟಿದ್ದಾರೆ. ಈ ಸಿನಿಮಾದಲ್ಲಿ ಸೆಕ್ಸ್ ವರ್ಕರ್ ಪಾತ್ರದಲ್ಲಿ ಕಾಣಿಸಿಕೊಳ್ಳೋ ರಚಿತಾ ರಾಮ್ ಮೇಲೆ ಡಾಲಿಗೆ ಲವ್ ಆಗೋ ಸೂಚನೆ ಟ್ರೇಲರ್ ಮೂಲಕ ಸಿಕ್ಕಿದೆ. ಟ್ರೇಲರ್ ನೋಡಿದ್ರೆ ಅದ್ಬುತ ಸ್ಟೋರಿ ಈ ಚಿತ್ರದಲ್ಲಿ ಇರೋದು ಪಕ್ಕಾ ಆಗಿದೆ.ಸಿನಿಮಾದ ಟೈಟಲ್ ಹೇಳುವಂತೆ ಆಲ್ ಮೋಸ್ಟ್ ಸಿನಿಮಾ ಮಳೆಯಲ್ಲೇ…
ತುಮಕೂರು: ಕಳೆದ ಹಲವು ದಿನಗಳಿಂದ ತುಮಕೂರು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಸಾಕಷ್ಟು ಪ್ರದೇಶಗಳಲ್ಲಿ ಮನೆಗಳು ಕುಸಿದಿವೆ. ಹಲವಾರು ಮನೆಗಳು ಕುಸಿಯುವ ಹಂತದಲ್ಲಿದ್ದರೂ ಇನ್ನೂ ಅಧಿಕಾರಿಗಳು ಚಳಿ ಬಿಟ್ಟು ಕೆಲಸ ಮಾಡಲು ಮುಂದಾಗುತ್ತಿಲ್ಲ ಎಂದು ಮಳೆಯಿಂದ ಸಂಕಷ್ಟದಲ್ಲಿರುವ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ತಾಲ್ಲೂಕು ಮತ್ತು ಜಿಲ್ಲೆಯ ಹೆತ್ತೆನಹಳ್ಳಿ, ಗೂಳೂರು ಹೋಬಳಿಯಲ್ಲಿ ತೀವ್ರ ಮಳೆಯಿಂದಾಗಿ ಸುಮಾರು 10 ಮನೆಗಳು ಬೀಳುವ ಹಂತದಲ್ಲಿತ್ತು. ಈ ಬಗ್ಗೆ ಇಲ್ಲಿನ ನಿವಾಸಿಗಳು ಅಧಿಕಾರಿಗಳಿ ಸಾಕಷ್ಟು ಬಾರಿ ಹೇಳಿದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯರು ನಮ್ಮ ತುಮಕೂರು ಪ್ರತಿನಿಧಿಯೊಂದಿಗೆ ದೂರಿದ್ದಾರೆ. ಸಾರ್ವಜನಿಕರ ಹೇಳಿಕೆಯನ್ನು ದಾಖಲಿಸಿದ ನಮ್ಮ ಪ್ರತಿನಿಧಿ ಪಿಡಿಓ ಅವರನ್ನು ಸಂಪರ್ಕಿಸಿದ್ದು, ತಕ್ಷಣವೇ ಕಾರ್ಯಪ್ರವೃತರಾದ ಪಿಡಿಓ, ಸಂಕಷ್ಟದಲ್ಲಿದ್ದ ಜನರಿಗೆ ತಾತ್ಕಾಲಿಕವಾಗಿ ಉಳಿದುಕೊಳ್ಳಲು ಪಂಚಾಯತ್ ನ ಹಳೆಯ ಕಟ್ಟಡದಲ್ಲಿ ವ್ಯವಸ್ಥೆ ಮಾಡಿಸಿಕೊಟ್ಟಿದ್ದಾರೆ. ಪಿಡಿಓ ಅವರು ಕ್ಷಿಪ್ರವಾಗಿ ಕೈಗೊಂಡ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಏರಿಯಾದಲ್ಲಿ 10 ಮನೆಗಳಿಗೆ ಹಾನಿಯಾಗಿದ್ದು, ಇಲ್ಲಿ ವಾಸಿಸುತ್ತಿರುವ ಜನರು ಮುಂದಿನ ಜೀವನ ಹೇಗೆ…
ಕೊರಟಗೆರೆ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಮೂಡಲಪಣ್ಣೆಯ ಮಲ್ಲಮ್ಮ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ನವೀನ್ ಕುಮಾರ್(27) ಆತ್ಮಹತ್ಯೆ ಮಾಡಿಕೊಂಡ ಯುವಕ. ಟೀ ಅಂಗಡಿ ವ್ಯಾಪಾರಿ ಆಗಿರುವ ನವೀನ್ ರಾತ್ರಿ 8 ಗಂಟೆಯ ವೇಳೆ ಮನೆಯಿಂದ, ಅವರ ಅಕ್ಕಳನ್ನು ಬಸ್ ನಿಲ್ದಾಣದಿಂದ ಕರೆದುಕೊಂಡು ಬರುತ್ತೇನೆಂದು ಹೇಳಿ ಹೋಗಿದ್ದು, ಅಂಗಡಿಯ ಮೇಲಿರುವ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದ್ದು, ಪಿಎಸ್ ಐ ನಾಗರಾಜು. ಬಿ ಮುಖ್ಯಪೇದೆ ಪುರುಷೋತ್ತಮ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹಿರಿಯೂರು: ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಹಿರಿಯೂರು ನಗರ ಹಬ್ಬಕ್ಕೆ ಸಿದ್ಧವಾಗುತ್ತಿದ್ದು, ಖರೀದಿ ಭರಾಟೆಯೂ ಜೋರಾಗಿದೆ. ಇದರ ಜೊತೆಗೆ ಜನರ ಜೇಬಿಗೆ ಸಹ ಕತ್ತರಿ ಬೀಳುವಂತಿದೆ. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಖರೀದಿ ಜನರಿಗೆ ಕಗ್ಗಂಟಾಗಿದೆ. ವರಮಹಾಲಕ್ಷ್ಮೀ ಹಬ್ಬದಲ್ಲಿ ಲಕ್ಷ್ಮೀ ದೇವಿ ಪೂಜಿಸಿದರೆ ವರ ದೇವಿ ಕರುಣಿಸುತ್ತಾಳೆ ಎಂಬ ನಂಬಿಕೆ ಜನರಲ್ಲಿದೆ. ಈ ಹಬ್ಬ, ವ್ರತ ಆಚರಿಸಲು ಜನ ಸಡಗರದಿಂದ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹಬ್ಬದಲ್ಲಿ ಲಕ್ಷ್ಮೀಯ ಅನುಗ್ರಹಕ್ಕೆ ಜನರು ಸಂಭ್ರಮದಿಂದ ತಯಾರಿ ಮಾಡಿಕೊಳ್ಳುತ್ತಾರೆ. ಹೀಗಾಗಿ ಅಗತ್ಯ ವಸ್ತುಗಳ ಖರೀದಿ ಜೋರಾಗಿಯೇ ನಡೆಯುತ್ತದೆ. ರಸ್ತೆಗಳಲ್ಲಿ ವಾಹನ ದಟ್ಟಣೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಹಿರಿಯೂರು ನಗರದ ಗಾಂಧಿ ಸರ್ಕಲ್ ಬಳಿ ಇರುವಂತಹ ನೆಹರು ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಜೋರಾಗಿಯೇ ನಡೆದಿದೆ. ಮಾರುಕಟ್ಟೆಯಲ್ಲಿ ಜನಜಾತ್ರೆಯಂತೆ ಕಂಡು ಬಂತು. ಹಬ್ಬಕ್ಕಾಗಿ ವಸ್ತುಗಳನ್ನು ಕೊಳ್ಳಲು ಜನ ತರಾತುರಿಯಲ್ಲಿ ಹಳ್ಳಿಗಳಿಂದ ಹಿರಿಯೂರು ನಗರಕ್ಕೆ ಬೆಳ್ಳಂ ಬೆಳ್ಳಗೆ ಬರತೊಡಗಿದ್ದರು. ಇದೇ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಸ್ಥರು ನಮ್ಮ ತುಮಕೂರು ಮಾಧ್ಯಮದ…