Subscribe to Updates
Get the latest creative news from FooBar about art, design and business.
- ಕಾರವಾರ: ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ
- ಕಾರವಾರ: ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ
- ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
- ಬಳ್ಳಾರಿ: ಮಾ.1 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ
- ಬಳ್ಳಾರಿ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್
- ಬಳ್ಳಾರಿ: ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಜನರ ಅಭಿವೃದ್ಧಿ ಸಾಧ್ಯ: ಸಂಸದ ಈ.ತುಕಾರಾಮ್
- ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ
- ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
Author: admin
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಟಿ.ಟಿ.ರಸ್ತೆಯಲ್ಲಿರುವ ಎಸ್ ಜಿ ಕೆ ಮೊಬೈಲ್ ಅಂಗಡಿಯ ಬೀಗವನ್ನು ಮುರಿದು ಮೊಬೈಲ್ ಕಳುವು ಮಾಡಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಹಿರಿಯೂರು ನಗರ ಪೋಲಿಸರು ಯಶಸ್ವಿಯಾಗಿದ್ದಾರೆ. ಹಿರಿಯೂರು ಉಪವಿಭಾಗದ ಪೋಲಿಸ್ ಉಪಾಧೀಕ್ಷರಾದ ಸೈಯದ್ ರೋಷನ್ ಜಮೀರ್ ರವರ ಉಸ್ತುವಾರಿಯಲ್ಲಿ ಹಿರಿಯೂರು ನಗರ ಪೋಲಿಸ್ ಠಾಣೆಯ ಪೋಲಿಸ್ ನಿರೀಕ್ಷಕರಾದ ವಿ ಎಸ್ ಶಿವಕುಮಾರ್ ರವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿ ಕಳವಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಿರಿಯೂರು ನಗರದ ಪ್ರಧಾನ ರಸ್ತೆಯಲ್ಲಿರುವ ರಂಜಿತ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ. ನೀಲಿ ಮತ್ತು ಕಪ್ಪು ಬಣ್ಣದ ಸ್ಪ್ಲೇಂಡರ್ ಪ್ಲಸ್ ಬೈಕ್ ನಲ್ಲಿ ಬಂದ ಆರೋಪಿಗಳನ್ನು ಹಿಡಿದು ವಿಚಾರ ಮಾಡಿದಾಗ ಕಳವು ಮಾಡಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಬಂದಮ್ಮ ದೇವಸ್ಥಾನದ ಸಮೀಪದ ಮಿರ್ಜಾ ಬಡಾವಣೆಯ ಸಲೀಂಬೇಗ್ (20), ಗೋಪಾಲಪುರದ ಜಾಫರ್ ಸಾಧಿಕ್(19), ಸಿಗ್ಬತ್ ಹೋಟೆಲ್ ಬಳಿಯ ನಿವಾಸಿ ನವಾಜ್(19) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ರೂ. 1,22,000 ಮೌಲ್ಯದ ಹನ್ನೊಂದು ಮೊಬೈಲ್ ಗಳನ್ನು ಹಾಗೂ…
ಪಾವಗಡ: ತಾಲ್ಲೂಕಿನ ರೈತರ ಜಮೀನಿನಲ್ಲಿ ಕೆಲಸ ಮಾಡುವ ರೈತರಿಗೆ ನರೇಗಾ ಯೋಜನೆಯಡಿಯಲ್ಲಿ ಅವಕಾಶ ಕಲ್ಪಸುವಂತೆ ಕಿಸಾನ್ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೃಷ್ಣ ನಾಯ್ಕ ಆಗ್ರಹಿಸಿದರು. ತಹಸೀಲ್ದಾರ್ ಕಚೇರಿ ಮುಂದೆ ಕಿಸಾನ್ ಸಂಘದ ರಾಜ್ಯಾಧ್ಯಕ್ಷರಾದ ವಿ.ನಾಗಭೂಷಣರೆಡಿ ಹಮ್ಮಿಕೊಂಡಿದ್ದ ಮೌನಪ್ರತಿಭಟನೆಯಲ್ಲಿ ಮಾತನಾಡುತ್ತಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಜಮೀನಿನಲ್ಲಿ ಕೆಲಸ ಮಾಡುವ ರೈತರಿಗೆ ನರೇಗಾ ಯೋಜನೆಯಡಿಯಲ್ಲಿ ಅವಕಾಶ ಕಲ್ಪಿಸಿದರೆ ನಿರುದ್ಯೋಗ ಸಮಸ್ಯೆ ಹಾಗೂ ವಲಸೆ ಹೋಗುವುದು ತಪ್ಪುಲಿದೆ ಎಂದ ಅವರು, ಶೇಂಗಾ, ಬತ್ತ, ಗೋಧಿ, ಅಡಿಕೆ, ಗುಣಿಗಳ ಕಾರ್ಯ ಮಾಡುವ ರೈತರಿಗೆ ಸರ್ಕಾರಗಳು ನೇರವಾಗಬೇಕೆಂದು ಒತ್ತಾಯಿಸಿದ್ದರು. ಮೌನ ಪ್ರತಿಭಟನೆ ಮನವಿಯನ್ನು ಉಪತಹಸೀಲ್ದಾರ್ ಸುಮತಿಯವರಿಗೆ ನೀಡಿದರು. ಇದೇ ಪ್ರತಿಭಟನೆಯಲ್ಲಿಗೆ ಕೊಂಚೆ ಶಿವರುದ್ರಪ್ಪ, ಚಂದ್ರಕಲಾ, ಮಂಜುಳ, ರಮೇಶ್ ಬಾಬು ರಾಠೋಡ್, ಸಿ.ಕೆ. ಪುರ ನಾಗರಾಜ ಸ್ವಾಮಿ, ಮಲ್ಲಿಕಾರ್ಜುನ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಪಾವಗಡ: ದಲಿತ ಮುಖಂಡ ನರಸಿಂಹಮೂರ್ತಿ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಗುರುವಾರ ದಲಿತಪರ ಸಂಘಟನೆ ಒಕ್ಕೂಟ ಸಹಯೋಗದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ಮುಖಂಡ ಡಿ.ಜೆ.ಎಸ್. ನಾರಾಯಣಪ್ಪ, ಜಿಲ್ಲೆಯಲ್ಲಿ ದಲಿತರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರ್ಕಾರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡದೆ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದರು. ಪ್ರಗತಿ ಪರ ಸಂಘಟನೆಯ ಮುಖಂಡ ಪಾಳೇಗಾರ್ ಲೋಕೇಶ್ ಮಾತನಾಡಿ, ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ ಪಂಗಡದ ಯುವಕರ ಕೊಲೆ ಪ್ರಕರಣ ಮಾಸುವ ಮುನ್ನವೇ ಗುಬ್ಬಿ ಪಟ್ಟಣದಲ್ಲಿ ಡಿ.ಎಸ್ .ಎಸ್. ಸಂಚಾಲಕ ನರಸಿಂಹಮೂರ್ತಿ ಹತ್ಯೆ ಖಂಡನೀಯ. ದಲಿತರಿಗೆ ರಕ್ಷಣೆ ನೀಡಿದ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ದಲಿತ ಮುಖಂಡ ಸಿ.ಕೆ.ತಿಪ್ಪೇಸ್ವಾಮಿ ರಾಜ್ಯ ಸರ್ಕಾರ ದಲಿತರ ಮೇಲಿನ ದೌರ್ಜನ್ಯ ಮತ್ತು ಹತ್ಯೆಗಳನ್ನು ನಿರ್ಲಕ್ಷ್ಯ ತನದಿಂದ ನೋಡುತ್ತಿದ್ದು, ತಳ ವರ್ಗದವರಿಗೆ ನೆಲೆಯಿಲ್ಲದಂತಾಗುತ್ತಿದೆ. ಇದು ತುಂಬಾ ಬೇಸರ ತರಿಸುತ್ತಿದೆ ಹಾಗಾಗಿ ಸರ್ಕಾರ ಎಚ್ಚೆತ್ತು ಕೊಲೆಗೈದವರಿಗೆ ತಕ್ಕ…
ಬೆಂಗಳೂರು: ಬಿಜೆಪಿಯವರೇ ನೀವು ಅಧಿಕಾರದಲ್ಲಿ ಗೂಟ ಹೊಡೆದುಕೊಂಡು ಇರಲು ಸಾಧ್ಯವಿಲ್ಲ. ನಿಮ್ಮ ಕೇಡುಗಾಲ ಸಮೀಪಿಸುತ್ತಿದೆ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರಲಿದೆ. ಬಿಜೆಪಿ ನಿರ್ಣಾಮವಾಗಲಿದೆ. 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನ ಚಲೋ ಪ್ರತಿಭಟನೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯ ಗೋಸುಂಬೆ ನಾಟಕ ರಾಜ್ಯದಲ್ಲಿ ನಡೆಯುವುದಿಲ್ಲ. ಜನರಿಗೆ ಅರ್ಥವಾಗಿದೆ. ನಾವು ಬಂಧನವಾದರೂ, ಜೈಲಿಗೆ ಹೋಗಲು ತಯಾರಾಗೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಬೇಕು. ಪೊಲೀಸರು ತಡೆಯಬಹುದು. ಯಾರೂ ಎದೆಗುಂದುವ ಅಗತ್ಯವಿಲ್ಲ. ಪೊಲೀಸರು ಬಂಧಿಸಲಿ, ಜೈಲಿಗೆ ಹಾಕಲಿ ನೀವೆಲ್ಲರೂ ಗಟ್ಟಿಯಾಗಿ ನಿಲ್ಲಿ. ನೀವು ಧೈರ್ಯವಾಗಿರಿ ಎಂದರು. ನಾಳೆ ಜಿಲ್ಲಾ ಮಟ್ಟದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಎಲ್ಲ ಶಾಸಕರು, ಪದಾಧಿಕಾರಿಗಳು, ಸಂಸದರು ನಿಮ್ಮ ಜಿಲ್ಲೆಗೆ ಹೋಗಿ ಅಲ್ಲಿ ಪ್ರತಿಭಟನೆ ಮಾಡಿ. ಕಾಂಗ್ರೆಸ್ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಗುಬ್ಬಿ: ದಲಿತ ಮುಖಂಡ ನರಸಿಂಹಮೂರ್ತಿ ಅವರ ಹತ್ಯೆಯನ್ನು ಖಂಡಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಕಾರಿಗೆ ದಲಿತ ಪರ ಸಂಘಟನೆಗಳು ಮುತ್ತಿಗೆ ಹಾಕಿದ ಘಟನೆ ಬುಧವಾರ ಸಂಜೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಹೊರ ಬರುತ್ತಿದ್ದಂತೆಯೇ ಗೃಹ ಸಚಿವರಿಗೆ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಡಿ.ಸಿ.ಕಚೇರಿ ಮುಂಭಾಗವೇ ಸಚಿವರ ಬೆಂಗಾವಲು ವಾಹನವನ್ನು ತಡೆದು ಪ್ರತಿಭಟನೆ ನಡೆಸಿದರು. ಅರಗಜ್ಞಾನೇಂದ್ರ ದಲಿತ ವಿರೋಧಿ ಗೃಹ ಸಚಿವ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳ ಬಳಿ ಪ್ರತಿಭಟನಾಕಾರರು ನ್ಯಾಯಕ್ಕಾಗಿ ಆಗ್ರಹಿಸಿದರು. ಪ್ರತಿಭಟನೆ ವೇಳೆ, ಕೆಲ ಕಾಲ ಅರಗಜ್ಞಾನೇಂದ್ರ ಅವರ ಕಾರು ಸ್ಥಳದಲ್ಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಕೊನೆಗೆ ಪ್ರತಿಭಟನಾಕಾರರ ತೀವ್ರ ಆಕ್ರೋಶದ ನಡುವೆಯೇ ಜನ ಸಂದಣಿ ದಾಟಿಕೊಂಡು ಸಚಿವರ ಕಾರು ತೆರಳಿತು. ಈ ವೇಳೆ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು. ನಮ್ಮತುಮಕೂರು.ಕಾಂನ ಕ್ಷಣ…
ತುಮಕೂರು: ತುಮಕೂರು- ತಿಪಟೂರು- ಅರಸೀಕೆರೆ ಹಾಗೂ ತುಮಕೂರು- ಯಶವಂತಪುರ- ಬಾಣಸವಾಡಿ ನಡುವೆ ಹೊಸದಾಗಿ ಪ್ಯಾಸೆಂಜರ್ ರೈಲು ಸಂಚಾರ ಜೂನ್ 20ರಿಂದ ಆರಂಭವಾಗಲಿದೆ. ನವದೆಹಲಿಯಲ್ಲಿ ರೈಲ್ವೆ ಮಂಡಳಿ ಅಧ್ಯಕ್ಷ ತ್ರಿಪಾಠಿ ಅವರನ್ನು ಸಂಸದ ಜಿ.ಎಸ್.ಬಸವರಾಜು ಭೇಟಿಮಾಡಿ ಈ ಬಗ್ಗೆ ಚರ್ಚಿಸಿದ್ದಾರೆ. ಹೊಸದಾಗಿ ಎರಡು ರೈಲುಗಳ ಸಂಚಾರ ಆರಂಭಿಸುವ ಭರವಸೆಯನ್ನು ರೈಲ್ವೆ ಮಂಡಳಿ ಅಧಿಕಾರಿಗಳು ನೀಡಿದ್ದಾರೆ. ಜೂನ್ 20ರಂದು ನಗರದ ರೈಲು ನಿಲ್ದಾಣದಲ್ಲಿ ನೂತನ ರೈಲುಗಳ ಸಂಚಾರಕ್ಕೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಗುಬ್ಬಿ ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ, , ಪ.ಪಂ. ಮಾಜಿ ಉಪಾಧ್ಯಕ್ಷ ಜಿ.ಸಿ.ನರಸಿಂಹಮೂರ್ತಿ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 50 ವರ್ಷ ವಯಸ್ಸಿನ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಅವರರು ಟೀ ಅಂಗಡಿ ಬಳಿಯಲ್ಲಿ ಕುಳಿತು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿತ್ತು. ನರಸಿಂಹಮೂರ್ತಿ ಅವರ ಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಆದರೆ, ಈ ಘಟನೆ ಗುಬ್ಬಿ ಜನತೆಯನ್ನು ಬೆಚ್ಚಿಬೀಳಿಸಿದೆ. ನರಸಿಂಹ ಮೂರ್ತಿ ಅವರ ಮೇಲೆ ದುಷ್ಕರ್ಮಿಗಳು ಮನಬಂದಂತೆ ಮಾರಕಾಸ್ತ್ರಗಳಿಂದ ಚುಚ್ಚಿದ್ದರು. ಮುಖದ ಗುರುತೇ ಸಿಗದಂತೆ ಕೊಚ್ಚಿದ್ದು, ಅಂಗೈಯನ್ನು ಕತ್ತರಿಸಿದ್ದಾರೆ. ಇದೊಂದು ಅತ್ಯಂತ ಭಯಾನಕ ಕೊಲೆಯಾಗಿದ್ದು, ಸಾರ್ವಜನಿಕರು ಈ ಕೊಲೆಯಿಂದಾಗಿ ತೀವ್ರ ಆತಂಕಕ್ಕೊಳಗಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಿರಣ್, ಧೀರಜ್, ಬಸವರಾಜ್, ಫಯಾಜ್ ಸೇರಿದಂತೆ ಐವರನ್ನು ಬುಧವಾರ ರಾತ್ರಿಯೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಗಳಿಂದ…
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸಿದ್ದ ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ನ ೪೦ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 29 ಕಾಂಗ್ರೆಸ್ ನಾಯಕರಿಗೆ ನ್ಯಾಯಾಲಯಕ್ಕೆ ಖುದ್ಧು ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಅದರಂತೆ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆ ವರಣದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು. ಇದೇ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, ರೈತರು ಮತ್ತು ನಮ್ಮ ನೀರಿನ ಹಕ್ಕಿಗಾಗಿ ನಾವು ಹೋರಾಟ ಮಾಡಿದ್ದೇವು. ಕಾಂಗ್ರೆಸ್ನ ೪೦ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ನ್ಯಾಯಾಲಯ ವಿಚಾರಣೆಗೆ ಆದೇಶಿಸಿತ್ತು .ಅದರಂತೆ ವಿಚಾರಣೆಗೆ ಹಾಜರಾಗಿದ್ದೇನೆ ಎಂದರು. ಬಿಜೆಪಿ ನಾಯಕರುಗಳು ವಿಧಾನಸೌಧದಲ್ಲಿ, ಹೊರಗಡೆ ಕೋವಿಡ್ ಮಾರ್ಗಸೂಚಿಗಳನ್ನು…
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ಲಷ್ಕರ್- ಎ- ತಯಬಾ (ಎಲ್ಇಟಿ) ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ ಇತ್ತೀಚೆಗಷ್ಟೇ ಕುಲ್ಗಾಮ್ನಲ್ಲಿ ನಡೆದಿದ್ದ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರ ಜಾನ್ ಮೊಹಮ್ಮದ್ ಲೋನ್ ನನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ. ಭದ್ರತಾ ಪಡೆಗಳು ಇಂದು ಮುಂಜಾನೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ. ಕಾಶ್ಮೀರಿ ಪಂಡಿತರು, ಹಿಂದೂ ಸಮುದಾಯದ ವಲಸಿಗರು ಹಾಗೂ ಸರ್ಕಾರಿ ಉದ್ಯೋಗಿಗಳನ್ನು ಗುರಿಯಾಗಿಸಿ ಉಗ್ರರು ಹತ್ಯೆ ನಡೆಸುತ್ತಿದ್ದಾರೆ. ಹತ್ಯೆಯಾಗಿರುವ ಉಗ್ರ ಶೋಪಿಯಾನ್ನ ಜಾನ್ ಮೊಹಮ್ಮದ್ ಲೋನ್ ಭಯೋತ್ಪಾದನಾ ಚಟುವಟಿಕೆಗಳ ಜೊತೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಕಳೆದ ಜೂ.೨ ರಂದು ನಡೆದ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ’ ಎಂದು ಕಾಶ್ಮೀರ ಪೊಲೀಸ್ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದೆ. ಅಮರನಾಥ ಯಾತ್ರೆ ವೇಳೆ ದಾಳಿಗೆ ಸಂಚು ರೂಪಿಸಿದ್ದ…
ದೇಶೀಯವಾಗಿ ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಹೋರಾಟ ಮಾಡುವ ಲಸಿಕೆಯನ್ನು ಭಾರತೀಯ ಸೆರಂ ಸಂಸ್ಥೆ ಅಭಿವೃದ್ದಿ ಪಡಿಸಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಿದ ಮೊದಲ ಕ್ವಾಡ್ರಿವೇಲೆಂಟ್ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆಯ ಸಾಧಕ-ಬಾಧಕಗಳ ಕುರಿತು ನಿರ್ಧಾರ ಕೈಗೊಳ್ಳಲು ತಜ್ಞರ ಸಮಿತಿ ಮುಂದಾಗಿದೆ. ಕ್ಯೂಎಚ್ಪಿವಿ ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಅನುಮತಿ ಕೋರಿ ಜೂನ್ ೮ ರಂದು ಭಾರತೀಯ ಔಷಧ ಮಹಾ ನಿಯಂತ್ರಕ ಸಂಸ್ಥೆಗೆ ಅರ್ಜಿ ಸಲ್ಲಿಸಲಾಗಿದ್ದು ಅನುಮತಿ ನೀಡಲಾಗುತ್ತಿದೆ. ಡಿಜಿಸಿಐನ ಸರ್ಕಾರ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅನುಮತಿಗೆ ಅರ್ಜಿ ಸಲ್ಲಿಸಿದ್ದು ಈ ಲಸಿಕೆ ಎಲ್ಲಾ ವಯೋಮಾನದವರಲ್ಲಿ ದೇಹದಲ್ಲಿ ಪ್ರತಿಕಾಯ ಶಕ್ತಿ ಹೆಚ್ಚು ಹೊಂದಿದೆ ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಲಸಿಕೆಯನ್ನು 2022ರ ವರ್ಷದ ಅಂತ್ಯದ ಮೊದಲು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ದೇಶದಲ್ಲಿ ಲಸಿಕೆ ಆರಂಭಿಕ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು, ಪುಣೆ ಮೂಲದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಜೈವಿಕ ತಂತ್ರಜ್ಞಾನ ಇಲಾಖೆಯ ಬೆಂಬಲದೊಂದಿಗೆ ಹಂತದ ಎರಡು ಮೂರು…