Subscribe to Updates
Get the latest creative news from FooBar about art, design and business.
- ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್
- ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಜಮೀನು ಖರೀದಿ: ಸ್ಮಶಾನ ಭೂಮಿ ಕೊರತೆ ನೀಗಿಸಲು ಸರ್ಕಾರ ಪ್ಲಾನ್
- ಸರ್ಕಾರಿ ಶಾಲೆಗಳ ವಿಲೀನ: 2022ರಿಂದ ಈವರೆಗೆ 31 ಹೊಸ ಕೆಪಿಎಸ್ ಶಾಲೆಗಳ ಆರಂಭ: ಸಚಿವ ಮಧು ಬಂಗಾರಪ್ಪ
- ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ
- ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್ಗಳ ಸಂಖ್ಯೆ
- ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು
- ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
- ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
Author: admin
ಮುಂಬೈ: ಶಿವಸೇನಾ ನಾಯಕ ಏಕನಾಥ ಶಿಂಧೆ ಅವರು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಗುರುವಾರ ಸಂಜೆ 7.30ಕ್ಕೆ ಶಿಂಧೆ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಶಿಂಧೆ ಅವರು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದು ತಮ್ಮದೇ ಗುಂಪು ರಚಿಸಿಕೊಂಡಿದ್ದರು. ತಮ್ಮದೇ ನಿಜವಾದ ಶಿವಸೇನಾ ಎಂದು ಘೋಷಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಆಯುಷ್ ಇಲಾಖೆ, ಬೆಂಗಳೂರು ಜಿಲ್ಲಾ ಪಂಚಾಯಿತಿ, ತುಮಕೂರು ಮತ್ತು ಜಿಲ್ಲಾ ಆಯುಷ್ ಕಚೇರಿ ಇವರ ವತಿಯಿಂದ ನುರಿತ ವೈದ್ಯರ ತಂಡದಿಂದ ಉಚಿತ ಆಯುಷ್ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಆರೋಗ್ಯ ಸಮಸ್ಯೆಗಳಾದ ರಕ್ತದೊತ್ತಡ, ಮಧುಮೇಹ, ಅಸ್ತಮಾ, ಕಿಡ್ನಿ ಸಮಸ್ಯೆ, ಥೈರಾಯ್ಡ್, ಶ್ವಾಸ ಸಂಬಂಧಿ ಹಾಗೂ ಹೃದಯ ಸಂಬಂಧಿ ಸಮಸ್ಯೆ ಇನ್ನು ಮುಂತಾದ ಕಾಯಿಲೆಗಳಿಗೆ ಉಚಿತವಾಗಿ ಔಷಧಿ ವಿತರಣೆ ಮಾಡಿ ಸೂಕ್ತ ಚಿಕಿತ್ಸೆ ನೀಡುವುದರ ಮೂಲಕ ಹಾಗೂ ಸಲಹೆಗಳನ್ನು ತಿಳಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಯುಷ್ ಅಧಿಕಾರಿ ಡಾ. ಗುರುಪ್ರಸಾದ್, ಡಾ. ಜಯಶ್ರೀ, ಸಿ ಆರ್ ಪಿ ಮೋಹನ್ ಚಾರ್, ಪಿಡಿಓ ವಿಜಯ ಕುಮಾರಿ, ಮುಖ್ಯ ಶಿಕ್ಷಕಿ ಸರೋಜಾ ಬಾಯಿ, ಶಿಕ್ಷಕರಾದ ನರಸಿಂಹಮೂರ್ತಿ,ಎಸ್ ಡಿ ಎಂ ಸಿ ಅಧ್ಯಕ್ಷ ನಂಜಪ್ಪ,ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರೇಮ ಕುಮಾರ್, ಶ್ರೀನಿವಾಸ್,ಕಾಂಗ್ರೆಸ್ ಮುಖಂಡ ಅರವಿಂದ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹುಲಿರಾಮಯ್ಯ, ಮುದ್ದರಂಗಪ್ಪ.…
ತುಮಕೂರು: ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಕಾರ್ಯಕರ್ತ ಕನ್ನಯ್ಯ ಲಾಲ್ ನನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ನೂರಾರು ಮಂದಿ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ರಾಜಸ್ಥಾನದ ಉದಯಪುರ್ ನಲ್ಲಿ ಅಮಾನುಷವಾಗಿ ಕನ್ನಯ್ಯ ಲಾಲ್ ನನ್ನು ಹತ್ಯೆ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅವರನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಅವರ ಪ್ರತಿಕೃತಿಗಳನ್ನು ದಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಭಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ನೂಪುರ್ ಶರ್ಮ ಅವರನ್ನು ಬೆಂಬಲಿಸಿ ಪೋಸ್ಟ್ ಒಂದನ್ನು ರಾಜಸ್ಥಾನದ ದರ್ಜಿಗ ಕನ್ನಯ್ಯ ಲಾಲ್ ತನ್ನ ಸ್ಟೇಟಸ್ ನಲ್ಲಿ ಹಾಕಿದ್ದೇ ದೊಡ್ಡ ಅಪರಾಧವೆಂದು ಭಾವಿಸಿದ ದುಷ್ಕರ್ಮಿಗಳು ಅವರ ಕುತ್ತಿಗೆಯನ್ನು ಸೀಳಿ ಹತ್ಯೆಗೈದು ವಿಕೃತಿ ಮೆರೆದಿದ್ದಾರೆ. ಜೊತೆಗೆ ತಾವೇ ಕೊಲೆ ಮಾಡಿರುವ ವಿಡಿಯೋ ಸಹ…
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರದ ಹಿಂದೂ ಮುಸ್ಲಿಂ ಹಾಗೂ ಜೈನ ಧರ್ಮಗಳ ಸೌಹಾರ್ದತೆ, ಸೋದರತೆಯ ಸಮಾನಮನಸ್ಕರ ಹಾಗೂ ಸುತ್ತಮುತ್ತಲ ಗ್ರಾಮಸ್ಥರುಗಳ ವತಿಯಿಂದ ಜಾಮಿಯಾ ಸಮುದಾಯ ಭವನದಲ್ಲಿ ಅಲ್ಪಸಂಖ್ಯಾತರ ಇಲಾಖೆಯಲ್ಲಿ ಉಪಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸಿ, ವಿಶ್ರಾಂತ ಜೀವನ ಸಾಗಿಸಿ ಇಹಲೋಕ ತ್ಯಜಿಸಿದ ಸ್ನೇಹಜೀವಿ ದಿವಂಗತ ಅಕ್ರಂ ಭಾಷಾ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಕ್ರಂ ಭಾಷಾ ಅಗಲಿಕೆಗೆ ಕಂಬನಿ ಮಿಡಿದ ಮಿತ್ರರು, ತಮ್ಮ ಅಧಿಕಾರವಧಿಯಲ್ಲಿ ಮಾಯಸಂದ್ರದ ಬಸದಿ ಯಾತ್ರೆ ನಿವಾಸ ಜಾಮಿಯಾ ಸಮುದಾಯ ಭವನ ಹಾಗೂ ಊರಿನ ತುಂಬಾ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಅನುದಾನ ನೀಡಿದ್ದರು ಹಾಗೂ ಅನೇಕ ಜನರಿಗೆ ಸಹಾಯ ಸಹಕಾರ ನೀಡಿದ್ದರು ಎಂದು ನೆನಪಿಸಿಕೊಂಡರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಮಂಗಳ ಗೌರಮ್ಮ ಹೊನ್ನಪ್ಪ, ಗ್ರಾಮ ಪಂಚಾಯತಿ ಸದಸ್ಯರಾದ ಅಜಿತ್ ಪ್ರಸಾದ್ ಜೈನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್. ಆರ್ .ಜಯರಾಮ್ , ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಮದನ್ ಕುಮಾರ್ ಜೈನ್ ,…
ತಿಪಟೂರು: ವಾಹನಗಳನ್ನು ಕಳವು ಮಾಡಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ತಿಪಟೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ವಾಹನಗಳನ್ನು ಬೆಂಗಳೂರು, ಹೊಸದುರ್ಗ, ಶಿವಮೊಗ್ಗ ,ತರೀಕೆರೆ, ದಾವಣಗೆರೆ ಸೇರಿದಂತೆ ಹಲವು ಕಡೆ ಕಳ್ಳತನ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಆರೋಪಿಗಳು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳಿಂದ 10 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದೆ ಓಡಿಸುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದು, ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಬೈಕ್ ಕಳವು ಜಾಲದ ಬಗ್ಗೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಭದ್ರಾವತಿ, ಸಂಜಯ್, ಕಾರ್ತಿಕ್, ಉಮೇಶ್ ಎಂಬವರು ಬಂಧಿತ ಆರೋಪಿಗಳಾಗಿದ್ದು, ಇವರ ಬಳಿಯಿಂದ 10 ಬೈಕ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಡಿವೈಎಸ್ಪಿ ಸಿದ್ದಾರ್ಥ ಗೋಯಲ್ , ನಗರ ಠಾಣೆ ಇನ್ಸ್ಪೆಕ್ಟರ್ ಶ್ರೀಶೈಲಮೂರ್ತಿ, ಸಬ್ ಇನ್ಸ್ಪೆಕ್ಟರ್ ದ್ರಾಕ್ಷಾಯಿಣಿ ಕೆ., ಎಸ್ ಐ ನಿಶಾ, ಅಹ್ಮದ್ ಎ., ಶ್ರೀರಾಮಣ್ ಪೇದೆಗಳಾದ…
ಬೆಂಗಳೂರು: ಬೇಡಜಂಗಮ ಜಾತಿಯನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಸಲುವಾಗಿ ಹೋರಾಟ ಹಿನ್ನೆಲೆ ಬೆಂಗಳೂರಿಗೆ ಹೊರಟಿದ್ದ ಪ್ರತಿಭಟನಾಕಾರರನ್ನು ಶಿರಾ ಟೋಲ್ ಗೇಟ್ ಬಳಿ ಪೊಲೀಸರು ತಡೆದಿದ್ದಾರೆ. ಇಂದು ಬೆಂಗಳೂರು ಚಲೋ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಗೆಂದು ತೆರಳುತ್ತಿದ್ದವರನ್ನು ಪೊಲೀಸರು ಶಿರಾ ಟೋಲ್ ಗೇಟ್ ಬಳಿ ತಡೆದಿದ್ದಾರೆ. ಪ್ರತಿಭಟನಾಕಾರರ ಪೈಕಿ ಮಠಾಧೀಶರು ಕೂಡ ಇದ್ದು, ಮಠಾಧೀಶರನ್ನೂ ಪೊಲೀಸರು ತಡೆದು ನಿಲ್ಲಿಸಿದ್ದಾರೆ. ನೂರಾರು ವಾಹನಗಳ ಮೂಲಕ ಪ್ರತಿಭಟನಾಕಾರರು ಬೆಂಗಳೂರಿಗೆ ಹೊರಟಿದ್ದರು. ಪ್ರತಿಭಟನಾಕಾರರನ್ನು ತಡೆದಿದ್ದರಿಂದ ಆಕ್ರೋಶಗೊಂಡ ಸಾವಿರಾರು ಪ್ರತಿಭಟನಾಕಾರರು ಸ್ಥಳದಲ್ಲೇ ಧರಣಿ ನಡೆಸುವ ಮೂಲಕ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಹೋರಾಟವನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಗುಬ್ಬಿ: ವಿದ್ಯುತ್ ಲೈನ್ ಗೆ ತೊಂದರೆಯಾಗುತ್ತಿದೆ ಎಂಬ ನೆಪವೊಡ್ಡಿ ಬೆಳೆದು ನಿಂತ ಅಡಿಕೆ ಹಾಗೂ ಎಲೆ ಅಂಬುಗಳನ್ನು ಬೆಸ್ಕಾಂ ಅಧಿಕಾರಿಗಳು ಕತ್ತರಿಸಿ ಹಾಕಿರುವ ಘಟನೆ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ಗುಬ್ಬಿ ತಾಲೂಕು ಕಸಬಾ ಹೋಬಳಿಯ ಹಳೇಗುಬ್ಬಿ ಗ್ರಾಮದ ಗಂಗ ರೇವಣ್ಣ ರವರಿಗೆ ಸೇರಿದ ಸರ್ವೆ ನಂಬರ್ 101/4 ರಲ್ಲಿ ಬೆಸ್ಕಾಂನ ವಿದ್ಯುತ್ ತಂತಿಗಳು ತೋಟದ ಮಧ್ಯೆ ಭಾಗದಲ್ಲಿ ಸುಮಾರು ವರ್ಷಗಳಿಂದ ಇದ್ದರು ಸಹ ಅದನ್ನು ಪರ್ಯಾಯವಾಗಿ ಸ್ಥಳಾಂತರ ಮಾಡದೇ ಇಂದು ಬೆಸ್ಕಾಂ ಸಿಬ್ಬಂದಿ ತೋಟದಲ್ಲಿ ಕಾಡು ತೆರವುಗೊಳಿಸುವ ನೆಪದಲ್ಲಿ ಲೈನ್ ಮ್ಯಾನ್ ಗಳು ಹಾಗೂ ಎಸ್. ಓ ಜಮೀನಿನ ಮಾಲೀಕರಿಗೆ ಯಾವುದೇ ಯಾವುದೇ ಮಾಹಿತಿ ನೀಡದೆ ಏಕಾಏಕಿ ಸುಮಾರು ಎಂಟರಿಂದ 10 ಫಲ ಬಿಡುವ ಅಡಿಕೆ ಮರಗಳನ್ನು ಹಾಗೂ ಅಡಿಕೆ ಮರಕ್ಕೆ ಎಬ್ಬಿಸಿರುವ ಎಲೆ ಅಂಬು ಗಳನ್ನು ಸಹ ಮಾನವೀಯತೆ ಇಲ್ಲದೆ ನಿರ್ದಾಕ್ಷಿಣ್ಯವಾಗಿ ಕಡಿದು ಹಾಕಿ ದುರ್ವತನೆ ತೋರಿದ್ದಾರೆ ಎಂದು ರೈತ ಗಂಗ ರೇವಣ್ಣ ಮತ್ತು ಕುಟುಂಬದವರು ಅಳಲಲು ತೊಂಡಿಕೊಂಡಿದ್ದಾರೆ. ಸುಮಾರು…
ಗುಬ್ಬಿ: ತಾಲೂಕಿನ ಬೋಚಿಹಳ್ಳಿ ಗ್ರಾಮದಲ್ಲಿ ಸುಮಾರು 35 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಬಾಯಿಗೆ ಬಟ್ಟೆಯನ್ನು ತುರುಕಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ. ಮಹಿಳೆಯ ಬಾಯಿಗೆ ಬಟ್ಟೆ ತುರುಕಿಸಿ ಹತ್ಯೆ ಮಾಡಲಾಗಿರುವ ಸ್ಥಿತಿ ಕಂಡು ಬಂದಿದ್ದು, ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಿದ್ದಾರೆ. ಮಹಿಳೆಯ ಗುರುತು ಪತ್ತೆಯಾಗಿಲ್ಲ. ಯಾರಿಗಾದರೂ ಚಹರೆ ತಿಳಿದು ಬಂದಲ್ಲಿ ಗುಬ್ಬಿ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸುವಂತೆ ಪೊಲೀಸ್ ವೃತ್ತ ನಿರೀಕ್ಷಕ ನದಾಫ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ. ಜಿ ಪರಮೇಶ್ವರ್ ರವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯು ನಡೆಯಿತು. ತಾಲ್ಲೂಕು ದಂಡಾಧಿಕಾರಿ ನಹೀದಾ ಜಮ್ ಜಮ್, ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಜಿ ದೀಪಶ್ರೀ, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಸಿ ಪಿ ಐ ಸಿದ್ದರಾಮೇಶ್ವರ್ ಮತ್ತು ಎಲ್ಲ ಇಲಾಖೆಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಶಾಸಕರ ಡಾ.ಜಿ.ಪರಮೇಶ್ವರ್ ಆದೇಶ ನೀಡಿದರು. ಮೊದಲಿಗೆ ಕೃಷಿ ಇಲಾಖೆಯ ಎಡಿಎ ನಾಗರಾಜು ತಮ್ಮ ಇಲಾಖೆಯಲ್ಲಿ ಬರುವಂತಹ ಅನುದಾನಗಳನ್ನು ಮತ್ತು ಪೂರ್ಣಗೊಂಡಿರುವ ಅಭಿವೃದ್ಧಿ ಸಭೆಯಲ್ಲಿ ತಿಳಿಸಿದರು. ಕೃಷಿ ಹೊಂಡಗಳನ್ನು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಆದೇಶದ ಮೇರೆಗೆ ಸದ್ಯಕ್ಕೆ ಬಂದ್ ಮಾಡಲಾಗಿದೆ, ಕೃಷಿ ಹೊಂಡಗಳ ಅಭಿವೃದ್ಧಿಗೆ ಕಾರ್ಯ ಆಗುತ್ತಿಲ್ಲವೆಂದು ಅಸಮಾಧಾನವನ್ನು ವ್ಯಕ್ತಪಡಿಸಿದಾಗ, ಪರಮೇಶ್ವರ್ ಅವರು ಪ್ರತಿಕ್ರಿಯಿಸಿ ಕೂಡಲೇ ನನಗೆ ಪತ್ರವನ್ನು ಬರೆಯಿರಿ, ನಾನು ಸರ್ಕಾರದ ಗಮನಕ್ಕೆ ತಂದು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ…
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಸಾರ್ಥವಳ್ಳಿಯಲ್ಲಿ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ನಡೆದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಮೋಹನ್, ಸಮಾಜ ಸೇವಕ ಬಿ.ಆರ್.ಶಶಿಧರ್ ಮತ್ತು ಸೋಮಶೇಖರ್ (ಕೆಇಬಿ) ಮಾತನಾಡಿದರು. ಆಯೋಜಕ ಮತ್ತು ಅಧ್ಯಕ್ಷ ಬಿ.ಟಿ.ಕುಮಾರ್, ಗ್ರಾ.ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರಯ್ಯ, ಸದಸ್ಯ ರಮೇಶ್, ಸಂಘಟನೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ನಗರ ಕಾರ್ಯದರ್ಶಿ ಲೋಕೇಶ್, ಅಲ್ಪಸಂಖ್ಯಾತರ ಘಟಕದ ಅನ್ವರ್, ಎಪಿಎಂಸಿ ಮಾಜಿ ಸದಸ್ಯ ಶಿವಕುಮಾರ್ ಮುಖಂಡರಾದ ಲಿಂಗರಾಜ್, ಗಂಗಾಧರ್,ಸಂಗೀತ ರಮೇಶ್,ಈಶ್ವರಪ್ಪ, ಜಯಣ್ಣ, ರೋಟರಿ ನಿರ್ದೇಶಕ ಗವಿಯಣ್ಣ, ಲಕ್ಷ್ಮಿ ಕ್ರಿಕೆಟರ್ಸ್ ನ ಚಿರಂಜೀವಿ ಮತ್ತು ರವಿ ಸೇರಿದಂತೆ ಸಂಘಟನೆ ಪದಾಧಿಕಾರಿಗಳು, ಗ್ರಾಮದ ಮುಖಂಡರುಗಳು ಹಾಗೂ ಕ್ರೀಡಾಭಿಮಾನಿಗಳು ಭಾಗವಹಿಸಿದ್ದರು. ಈ ಪಂದ್ಯಾವಳಿಗೆ ಸುಮಾರು ಇಪ್ಪತ್ತಾರು ತಂಡಗಳು ಭಾಗವಹಿಸಿದ್ದು, ಮೊದಲನೇ ಬಹುಮಾನ 10.000/- ರೂಗಳನ್ನು ಸಾರ್ಥವಳ್ಳಿಯ ಲಕ್ಷ್ಮಿ ಕ್ರಿಕೆಟರ್ಸ್ ತಂಡ, ದ್ವಿತೀಯ ಬಹುಮಾನ 7,000/-ರೂಗಳನ್ನು ತಿಪಟೂರು…