Author: admin

ನಾಗಮಂಗಲ: ಬೆಳ್ಳೂರು ಪೊಲೀಸ್ ಠಾಣೆಯ ಜನ ವಿರೋಧಿ, ಕಾನೂನು ಬಾಹಿರ ನಡುವಳಿಕೆಯನ್ನು ಖಂಡಿಸಿ ಅಖಿಲ ಭಾರತೀಯ ಪರಿಶಿಷ್ಟ ಜಾತಿ ಯುವ ಜನ ಸಮಾಜ ಮತ್ತು ಪ್ರಗತಿಪರ ಎಲ್ಲಾ ಸಂಘಟನೆಗಳ ಒಕ್ಕೂಟ ವತಿಯಿಂದ ಸಾಂಕೇತಿಕ ಕಪ್ಪು ಪಟ್ಟಿ ಧರಿಸಿ ಬೆಳ್ಳೂರು ಕ್ರಾಸ್ ನಿಂದ ಬೆಳ್ಳೂರು ಪೊಲೀಸ್ ಠಾಣೆಯ ತನಕವೂ ಕಾಲುನಡಿಗೆಯಲ್ಲಿ ಜಾಥಾ ನಡೆಯಿತು. ಪ್ರತಿಭಟನೆ ನೇತೃತ್ವ ವಹಿಸಿದ್ದ  ಅಖಿಲ ಭಾರತೀಯ ಪರಿಶಿಷ್ಟ ಜಾತಿ ಯುವ ಜನ ಸಮಾಜ ಮಂಡ್ಯ ಜಿಲ್ಲಾಧ್ಯಕ್ಷ ಡಿ. ವೆಂಕಟೇಶ್ ಮಾತನಾಡಿ,  ಬೆಳ್ಳೂರು ಪೊಲೀಸ್ ಠಾಣೆಗೆ ದೌರ್ಜನ್ಯಕ್ಕೆ ತುತ್ತಾದ ಸಾರ್ವಜನಿಕ ರು  ದೂರು ನೀಡಲು ಹೋದಾಗ ದೂರುದಾರರ ಮೇಲೆ ಪೊಲೀಸ್ ದರ್ಪ ತೋರಿಸಿ  ದೌರ್ಜನ್ಯಕೋರರ ಪರ ವಕಾಲತ್ತು ವಹಿಸಿ ಸುಳ್ಳು ಪ್ರಕರಣ ದಾಖಲಿಸಿ  ದೌರ್ಜನ್ಯ ಎಸಗುತ್ತಿರುವ ಬೆಳ್ಳೂರು ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಲೋಕೇಶ್,  ನಾಗರಾಜ್  ಕರ್ತವ್ಯ ಲೋಪ ಎಸಗುತ್ತೀದ್ದಾರೆ. ಆದ್ದರಿಂದ ಈ ಕೊಡಲೇ ಈ ಮೂವರನ್ನು ಅಮಾನತುಗೊಳಿಸ ಬೇಕೆಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಒತ್ತಾಯಿಸಿದ್ದರು. ಬೆಳ್ಳೂರು ಪೊಲೀಸ್ ಠಾಣೆಯ ಮುಂದೆ…

Read More

ತಿಪಟೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಮಾಜಿ ಶಾಸಕ ಕೆ.ಷಡಕ್ಷರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು ಮೊಟ್ಟೆ ಎಸೆದವ ಕಾಂಗ್ರೆಸ್ ಕಾರ್ಯಕರ್ತ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯವರಂತೆ ಸುಳ್ಳು ಹೇಳುವ ಜಾಯಮಾನದವರು ನಾವಲ್ಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಯಾವ ರೀತಿ ಭದ್ರತೆ ಕೊಡಬೇಕೆಂಬುದನ್ನು ಗೃಹ ಸಚಿವ ಅರ್ಧಂಬರ್ಧ ಜ್ಞಾನೇಂದ್ರ ಮೊದಲು ತಿಳಿದುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಂತರಾಜು, ನಗರಸಭಾ ಸದಸ್ಯ ವಿ.ಯೋಗೀಶ್ ಮೇಘಶ್ರೀ , ಲೋಕನಾಥ್ ಸಿಂಗ್, ಸುನಿಲ್ ಮೇಗಲಮನೆ, ಹಿರಿಯ ಕಾಂಗ್ರೆಸ್ ಮುಖಂಡ ಅಣ್ಣಯ್ಯ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಧುಗಿರಿ : ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಡಗು ಜಿಲ್ಲೆಯ ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಯ ಪ್ರವಾಸದ ಸಮಯದಲ್ಲಿ ಕಾರಿನ ಮೇಲೆ ಬಿಜೆಪಿ ಮತ್ತು ಆರ್ ಎಸ್ ಎಸ್ ಕಾರ್ಯಕರ್ತರು ಮೊಟ್ಟೆ ಎಸೆದಿರುವ ಘಟನೆಯನ್ನು ಖಂಡಿಸಿ ಮಧುಗಿರಿ ಕಾಂಗ್ರೆಸ್ ಸಮಿತಿ ಪ್ರತಿಭಟನೆ ನಡೆಸಿತು. ಮಧುಗಿರಿಯ ಪಾವಗಡ ವೃತ್ತದ ಸಂವಿಧಾನದ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಇರುವ ಕಾಂಗ್ರೆಸ್ ಕಛೇರಿಯ ಬಳಿ ಸೇರಿದ ಪ್ರತಿಭಟನಾಕಾರರು, ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದು ದುರ್ವರ್ತನೆ ತೋರಿರುವುದನ್ನು ಖಂಡಿಸಿದರು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಮಲ್ಲಿಕಾರ್ಜುನಯ್ಯ, ಹಿರಿಯ ಮುಖಂಡರುಗಳಾದ ಎನ್.ಗಂಗಣ್ಣ, ಬಿ.ವಿ.ನಾಗೇಶಬಾಬು, ಅಂಜಿನಪ್ಪ ಎಂ.ಕೆ.ನಂಜುಂಡಯ್ಯ, ಪಿ.ಟಿ.ಗೋವಿಂದಯ್ಯ, ಸಿದ್ದಾಪುರ ಈರಣ್ಣ ಆದಿನಾರಾಯಣರೆಡ್ಡಿ ಸಂಜೀವಗೌಡ, ರಂಗಧಾಮಯ್ಯ, ಪುರಸಭಾ ಉಪಾಧ್ಯಕ್ಷರಾದ ರಾಧಿಕಾ ಆನಂದ್, ಸದಸ್ಯರಾದ ಉಮೇಶ್, ಅಲೀಂ,ಎಂ.ಎಸ್. ಸಾಧಿಕ್ ಸೇರಿದಂತೆ ತಾಲೂಕಿನ ಪ್ರಮುಖ ಹಿರಿಯ ಮುಖಂಡರು ಯುವಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಬೆಳಗಾವಿ : ಡಾ. ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕಾರ್ಯಕರ್ತರು ,ಬೆಂಬಲರೊಂದಿಗೆ ಕೇಕ್ ಕತ್ತರಿಸಿ ತಮ್ಮ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡರು. ಕ್ಷೇತ್ರದ ಜನರು ಶುಭ ಹಾರೈಸಿದರು. ಖಾನಾಪುರ ಕ್ಷೇತ್ರದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರ ಜನಮಂದಿ ದಿನದ ನಿಮಿತ್ತ ಡಾ. ಅಂಜಲಿತಾಯಿ ನಿಂಬಾಳ್ಕರ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ, ಆರೋಗ್ಯ ತಪಾಸನೆ ಶಿಬಿರ, ಮತ್ತು ರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು. ಅಲ್ಲದೇ ಸ್ವತಹ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ರಕ್ತದಾನ ಮಾಡಿ ರಕ್ತದಾನಕ್ಕೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಬೇರೆ ಬೇರೆ ಗ್ರಾಮಗಳಿಂದ ಬಂದ ನೂರಾರು ಜನರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು. ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿದರು. ಈ ಸಂದರ್ಭದಲ್ಲಿ ಹೇಮಂತ ನಿಂಬಾಳ್ಕರ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯನವಲಗಟ್ಟಿ, ಬಿಜೆಪಿ ಮುಖಂಡ ಬಾಬುರಾವ್ ದೇಸಾಯಿ, ಮಾಜಿ ಶಾಸಕರಾದ ದಿಗಂಬರ್ ಪಾಟೀಲ್, ಶಾಸಕ ಆಪ್ತರ ಸಹಾಯಕ ಪ್ರಸನ್ನಕುಮಾರ್…

Read More

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ ಮೂರು ಬಾರಿ ಭೂಮಿ ಕಂಪಿಸಿದ್ದು, ಜನರು ಆತಂಕಗೊಂಡಿದ್ದಾರೆ. ನಿನ್ನೆ ಸಾಯಂಕಾಲ 4:26, ರಾತ್ರಿ 9.22 ಮತ್ತು 11.04 ಗಂಟೆಯ ಸುಮಾರಿಗೆ ಭೂಮಿ ನಡುಗಿರುವ ಅನುಭವವಾಗಿದೆ. ನಗರದ ರೈಲ್ವೆ ನಿಲ್ದಾಣ, ಗೋಳಗುಮ್ಮಟ ಸೇರಿದಂತೆ ಬಹುತೇಕ ಕಡೆಗಳಲ್ಲಿ ಭೂಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆ ದಾಖಲಾಗಿತ್ತು. ಮೇಲಿಂದ ಮೇಲೆ ಜಿಲ್ಲೆಯಲ್ಲಿ ಭೂಕಂಪನವಾಗುತ್ತಿದ್ದು, ಈ ಕುರಿತು ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು. ಇತ್ತೀಚೆಗೆ ಜಿಲ್ಲೆಯಲ್ಲಿ ಶನಿವಾರ, ಭಾನುವಾರದಂದು ಕೂಡ ಭೂಮಿ ನಡುಗಿದ್ದು, ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆ ದಾಖಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿಆರ್‍ಸೆಟಿ) ಬೆಳಗಾವಿಯಲ್ಲಿ, ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಪುರುಷ, ಮಹಿಳೆಯರಿಗೆ ಮತ್ತು ನಿರುದ್ಯೋಗಿಗಳಿಗೆ ಸುವರ್ಣಾವಕಾಶ. ಸೆಪ್ಟೆಂಬರ್ ಮೊದಲನೇ ವಾರದಲ್ಲಿ 10 ದಿನಗಳ ಉಪ್ಪಿನಕಾಯಿ, ಹಪ್ಪಳ ಮತ್ತು ಮಸಾಲೆ ಪೌಡರ ತಯಾರಿಕೆ ತರಬೇತಿ, ಪೇಪರ ಬ್ಯಾಗ್, ಏನವೇಲಪ್ ಮತ್ತು ಪೈಲ್ ತಯಾರಿಕೆ ತರಬೇತಿಗಳನ್ನು ಹಮ್ಮಿಕೊಂಡಿದ್ದೇವೆ. 13 ದಿನಗಳ ತರಬೇತಿಗಳಾದ ಸಾಪ್ಟ ಟಾಯ್ಸ್ ಮೇಕಿಂಗ್, (ಚಿಕ್ಕ ಮಕ್ಕಳ ಆಟಿಕೆಗಳ ತಯಾರಿಕೆ) ಜೂಟ್ ಬ್ಯಾಗ್  ತಯಾರಿಕೆ ತರಬೇತಿ, ಕೊಸ್ಟೂಮ್ ಜ್ವೇಲರಿ ತಯಾರಿಕೆ ತರಬೇತಿ(ಕೃತಕ ಆಭರಣಗಳ ತಯಾರಿಕೆ ತರಬೇತಿ)ಗಳನ್ನು ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುವುದು. ಭಾಗವಹಿಸಲಿರುವ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿದ್ದು, 18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು. ತರಬೇತಿ ಪಡೆದ ನಂತರ ಸ್ವ ಉದ್ಯೋಗ ಕೈಗೊಳ್ಳಲು ಸಿದ್ಧರಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯವಿದೆ. ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು, ಬಿಳಿ ಹಾಳೆಯ ಮೇಲೆ ಅಥವಾ ನಮ್ಮ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ನಮೂನೆಯಲ್ಲಿ ತಮ್ಮ ಹೆಸರು, ವಿಳಾಸ, ವಿದ್ಯಾಭ್ಯಾಸ,…

Read More

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ನಗರ ಪೊಲೀಸರು 9 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಬೆಳಗಾವಿ ಎಸ್‌ಪಿ‌ ಡಾ.ಸಂಜೀವ್ ಪಾಟೀಲ್ ಮಾತನಾಡಿ ಗೋಕಾಕ್‌, ಗದಗದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದರು. ಆ.7ರಂದು ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಗೋಕಾಕ್‌ನಲ್ಲಿ ಸ್ಮಾರ್ಟ್​ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರು. ಈ ಸಂಬಂಧ ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಪರೀಕ್ಷಾರ್ಥಿ ಸಿದ್ದಪ್ಪ ಮದೀಹಳ್ಳಿ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಸಿದ್ದಪ್ಪ ನೀಡಿದ ಮಾಹಿತಿ ಆಧರಿಸಿ ಉಳಿದ ಆರೋಪಿಗಳ ಬಂಧನ ಮಾಡಲಾಗಿದೆ ಎಂದು ಎಸ್‌ಪಿ‌ ಡಾ.ಸಂಜೀವ್ ಪಾಟೀಲ್ ಹೇಳಿದ್ದಾರೆ. ಮೂವರು ಕಿಂಗ್‌ಪಿನ್‌ಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಲ್ಲ ಎಂಬುದಾಗಿ ಚುನಾವಣಾ ಆಯೋಗವು ಸ್ಪಷ್ಟ ಪಡಿಸಿದೆ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗವು ಮಾಹಿತಿ ಬಿಡುಗಡೆ ಮಾಡಿದ್ದು, ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯನ್ನು ಗುರುತಿಸಿ, ದೃಢೀಕರಿಸಿ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಿರುವುದಾಗಿ ಹಾಗೂ ಆಧಾರ್ ಲಿಂಕ್ ಮಾಡಿಕೊಳ್ಳದಿದ್ದಲ್ಲಿ, ಮತದಾರರ ಗುರುತಿನ ಚೀಟಿ ರದ್ದಾಗುವ ಸಾಧ್ಯತೆಗಳಿರುತ್ತದೆಂದು ಕೆಲವು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಮತ್ತು ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಸದರಿ ಪ್ರಕಟಣೆಗಳಲ್ಲಿನ ಅಂಶಗಳು ಭಾರತ ಚುನಾವಣಾ ಆಯೋಗದ ನಿರ್ದೇಶನಕ್ಕೆ ವ್ಯತಿರಿಕ್ತವಾಗಿರುತ್ತದೆ ಎಂದು ಹೇಳಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯ ಜೋಡಣೆಯು ಕಡ್ಡಾಯವಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.ಮತದಾರರು ಸ್ವಯಂಪ್ರೇರಿತರಾಗಿ ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯನ್ನು ಬಳಸಿ ಅಥವಾ ಇತರೆ ನಿಗಧಿತ ದಾಖಲೆಗಳ ಮೂಲಕವೂ ಸಹ ಗುರುತಿಸಿ, ದೃಢೀಕರಿಸಿ ಜೋಡಣೆ ಮಾಡಬಹುದು ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಳಗಾವಿ : ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಚಿರತೆ ಹಾವಳಿ ಕಂಡುಬಂದಿವೆ. ಈಗಾಗಲೇ ಅಧಿಕಾರಿಗಳು 24*7 ಚಿರತೆ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, 3 ರಿಂದ 4 ದಿನಗಳಲ್ಲಿ ಚಿರತೆ ಕಾರ್ಯಾಚರಣೆ ಯಶಸ್ವಿಗೊಳಿಸಲಾಗುವುದು. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ ಕತ್ತಿ ಅವರು ತಿಳಿಸಿದರು. ನಗರದ ಅರಣ್ಯ ಇಲಾಖೆಯ ಸಭಾಂಗಣದಲ್ಲಿ ಸೋಮವಾರ (ಆ.21) ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯಲ್ಲಿ ಚಿರತೆ ಹಾವಳಿ ಕಾರ್ಯಾಚರಣೆಯ ಕುರಿತು ಅವರು ಮಾಹಿತಿ ನೀಡಿದರು. ಕಳೆದ 20 ದಿನಗಳಿಂದ ಜಿಲ್ಲೆಯಲ್ಲಿ 4 ಚಿರತೆಗಳು ಕಾಣಸಿಕೊಂಡಿವೆ. ಅಥಣಿ ಭಾಗದಲ್ಲಿ ಕಂಡಿರುವ ಚಿರತೆ ಮಹಾರಾಷ್ಟ್ರದ ಗಡಿಯ ಕಾಡಿನತ್ತ ಹೋಗಿರುತ್ತದೆ ಎಂದು ಮಾಹಿತಿ ಸಿಕ್ಕಿದೆ. ಸವದತ್ತಿ ಹಾಗೂ ಮೂಡಲಗಿ ಭಾಗದಲ್ಲಿ ಕಂಡುಬಂದಿರುವ ಚಿರತೆಗಳು ಈ ವರೆಗೆ ಮತ್ತೆ ಕಾಣಸಿಕೊಂಡಿಲ್ಲ ಎಂದು ತಿಳಿಸಿದರು. ನಗರದಲ್ಲಿ ಕಂಡುಬಂದಿರುವ ಚಿರತೆ ಹಿಡಿಯಲು ಈಗಾಗಲೇ 24*7 ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. 22 ಬೋನು ಗಳನ್ನು ಇರಿಸಲಾಗಿದೆ. ಇನ್ನೂ ಹೆಚ್ಚಿನ…

Read More

ಪ್ರತಿವರ್ಷ ಕಿತ್ತೂರು ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅನುಕೂಲವಾಗುವಂತೆ ಕನಿಷ್ಠ ಐದು ಕೋಟಿ ರೂಪಾಯಿ ಶಾಶ್ವತ ಅನುದಾನವನ್ನು ಪ್ರತ್ಯೇಕವಾಗಿ ತೆಗೆದಿರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರದ ಗಮನಸೆಳೆದು ಶಾಶ್ವತ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ್ರ ಹೇಳಿದರು. ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸುವುದಕ್ಕೆ ಸಂಬಂಧಿಸಿದಂತೆ ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ(ಆ.22) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಬರುವ ದಿನಗಳಲ್ಲಿ ಶಾಸಕರು ಹಾಗೂ ಸರಕಾರಗಳು ಬದಲಾದಾಗ ಅನುದಾನಕ್ಕಾಗಿ ಅಲೆದಾಡುವ ಪರದಾಟ ತಪ್ಪಲಿದೆ ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ್ರ ಹೇಳಿದರು. ಕನಿಷ್ಠ ಐದು ಕೋಟಿ ರೂಪಾಯಿ ತೆಗೆದಿರಿಸಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಲಾಗುವುದು ಎಂದು ಭರವಸೆಯನ್ನು ನೀಡಿದರು. ವೀರಜ್ಯೋತಿಯನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲು ಅನುಕೂಲವಾಗುವಂತೆ ಯೋಜನೆ ರೂಪಿಸಲಾಗುವುದು. ಹಂಪಿ ಉತ್ಸವ, ದಸರಾ ಮಾದರಿಯಲ್ಲಿ ವಿಜೃಂಭಣೆಯಿಂದ ಕಿತ್ತೂರು ಉತ್ಸವ ಆಚರಿಸುವ ನಿಟ್ಟಿನಲ್ಲಿ ಸಲಹೆ ನೀಡಲಾಗಿದೆ. ಉತ್ಸವದ ಅವಧಿಯನ್ನು ಹೆಚ್ಚಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಹೇಳಿದರು. ಮಹಿಳೆಯರಿಗಾಗಿ…

Read More